Author: kannadanewsnow09

ಮುಧೋಳ: ಕಬ್ಬಿನ ಬಾಕಿ ಬಿಲ್ ಪಾವತಿಗೆ ರೈತರ ಪ್ರತಿಭಟನೆ ಕಿಚ್ಚು ಸ್ಪೋಟಗೊಂಡಿದೆ. ಟ್ರ್ಯಾಕ್ಟರ್, ಬೈಕ್ ಸೇರಿದಂತೆ 20ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರ ಹಾಕಲಾಗಿದೆ. ಮುಧೋಳದಲ್ಲಿ ಸಕ್ಕರೆ ಕಾರ್ಖಾನೆ ಮುಂದೆ ನಿಲ್ಲಿಸಿದ್ದಂತ 20ಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳಿಗೆ ರೈತರು ಬೆಂಕಿ ಇಟ್ಟು ಆಕ್ರೋಶವನ್ನು ಹೊರ ಹಾಕಿದ್ದಾರೆ. ಮುಧೋಳದ ಸೈದಾಪುರ ಗೋದಾವರಿ ಸಕ್ಕರೆ ಕಾರ್ಖಾನೆಯ ಮುಂದೆ ಈ ಘಟನೆ ನಡೆದಿದೆ.

Read More

ನವದೆಹಲಿ: ದೆಹಲಿ ಸ್ಫೋಟದ ತನಿಖೆ ಗುರುವಾರ ಹೊಸ ತಿರುವು ಪಡೆದುಕೊಂಡಿದ್ದು, ದಾಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಮೂರನೇ ಕಾರನ್ನು ವಶಪಡಿಸಿಕೊಂಡಿದ್ದಾರೆ. ಇತ್ತೀಚಿನ ದಾಳಿಗಳಲ್ಲಿ ಸಾವಿರಾರು ಕಿಲೋಗ್ರಾಂಗಳಷ್ಟು ಸ್ಫೋಟಕಗಳು, ಡಿಟೋನೇಟರ್‌ಗಳು, ಟೈಮರ್‌ಗಳು ಮತ್ತು ಇತರ ಬಾಂಬ್ ತಯಾರಿಸುವ ಉಪಕರಣಗಳನ್ನು ವಶಪಡಿಸಿಕೊಂಡ ವೈದ್ಯರು, ಧರ್ಮಗುರುಗಳು ಮತ್ತು ಉದ್ಯಮಿಗಳನ್ನು ಒಳಗೊಂಡ “ರಾಷ್ಟ್ರೀಯ, ಬಿಳಿ ಕಾಲರ್ ಭಯೋತ್ಪಾದಕ ಮಾಡ್ಯೂಲ್” ಅನ್ನು ಭದ್ರತಾ ಪಡೆಗಳು ಪತ್ತೆಹಚ್ಚಿವೆ. ಪ್ರಾಥಮಿಕ ತನಿಖೆಯ ಪ್ರಕಾರ, ಭಯೋತ್ಪಾದಕರು ಬಹು ನಗರಗಳಲ್ಲಿ ಸಂಘಟಿತ ಸ್ಫೋಟಗಳ ಸರಣಿಯನ್ನು ನಡೆಸಲು 32 ವಾಹನಗಳಲ್ಲಿ ಸ್ಫೋಟಕಗಳನ್ನು ತುಂಬಲು ಯೋಜಿಸಿದ್ದರು. https://twitter.com/ANI/status/1988667025250832539 ವರದಿಗಳ ಪ್ರಕಾರ, ಅಧಿಕಾರಿಗಳು ಈಗ ಫರಿದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯದ ಕ್ಯಾಂಪಸ್‌ನಿಂದ ಮಾರುತಿ ಸುಜುಕಿ ಬ್ರೆಝಾವನ್ನು ವಶಪಡಿಸಿಕೊಂಡಿದ್ದಾರೆ. ಈ ವಾಹನವನ್ನು ಪ್ರಮುಖ ಆರೋಪಿ ಮತ್ತು ವಿಶ್ವವಿದ್ಯಾಲಯದ ಅಧ್ಯಾಪಕ ಡಾ. ಶಾಹೀನ್ ಶಾಹಿದ್ ಹೆಸರಿನಲ್ಲಿ ನೋಂದಾಯಿಸಲಾಗಿದೆ. ಉಮರ್ ನಬಿ ಮತ್ತು ಅವರ ಸಹಚರರು ಸ್ಫೋಟಕಗಳನ್ನು ಅಳವಡಿಸಿದ ಬಹು ವಾಹನಗಳು ಮತ್ತು ಅಸಾಲ್ಟ್ ರೈಫಲ್ ಗುಂಡಿನ ದಾಳಿಯನ್ನು ಒಳಗೊಂಡ “ಅದ್ಭುತ ಭಯೋತ್ಪಾದಕ ದಾಳಿ”ಯನ್ನು ಯೋಜಿಸಿದ್ದಾರೆ ಎಂದು…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬೆಳಗಾವಿ ಚಳಿಗಾಲದ ಅಧಿವೇಶನ ಸೇರಿದಂತೆ ಮಹತ್ವದ ವಿಚಾರಗಳನ್ನು ಚರ್ಚಿಸಲಾಯಿತು. ಆ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದಿನ ರಾಜ್ಯ ಸಂಪುಟ ಸಭೆ ಬಳಿಕ ಕಾನೂನು ಸಚಿವ ಎಚ್ ಕೆ ಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಇಂದಿನ ಸಂಪುಟ ಸಭೆಯಲ್ಲಿ 18 ವಿಚಾರಗಳ ಬಗ್ಗೆ ಚರ್ಚೆಯಾಯ್ತು. ಒಟ್ಟಾರೆ 20 ವಿಚಾರಗಳ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಯ್ತು. ಮೇಕೆದಾಟು ಯೋಜನೆ ಅನುಷ್ಠಾನದ ವಿಚಾರಕ್ಕೆ ತಮಿಳು ನಾಡು ಸಲ್ಲಿಸಿದ್ದ ತಕರಾರು ಅರ್ಜಿ ವಜಾಗೊಂಡಿದೆ. ಇದು ಈ ಯೋಜನೆ ವಿಚಾರ ದಲ್ಲಿ ನಮ್ಮ ಮುಂದಿನ ಹೆಜ್ಜೆ ಇಡಲು ಹಸಿರು ನಿಶಾನೆ ಸಿಕ್ಕಂತಾಗಿದೆ. ಈ ಸಂತೋಷಕ್ಕೆ ಸಂಪುಟ ಸಿಎಂ ಹಾಗೂ ಡಿಸಿಎಂ ಅವರನ್ನ ಅಭಿನಂದಿಸಿತು. ಬೆಳಗಾವಿ ಚಳಿಗಾಲದ ಅಧಿವೇಶನ ಡಿಸೆಂಬರ್ 8 ರಿಂದ 19 ರವರೆಗೆ ನಡೆಯಲಿದೆ ಎಂದರು. ಸಚಿವ ಸಂಪುಟದ ಮೂರು ಉಪಸಮಿತಿಗಳು ( 1.ಕುನ್ಹಾ ಸಮಿತಿ,ಕೋವಿಡ್ , 2. ರಾಜ್ಯದ ವಿವಿಗಳ ಆರ್ಥಿಕ ಪರಿಸ್ಥಿತಿ ಪರಾಮರ್ಶೆ…

Read More

ನವದೆಹಲಿ: ಮೇಕೆದಾಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕದ ಪರವಾಗಿ ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು ಬಂದಿದೆ. ಯೋಜನೆ ವಿರೋಧಿಸಿ ನೆರೆಯ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಇದರೊಂದಿಗೆ, ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ದೊಡ್ಡ ಗೆಲುವು ಲಭಿಸಿದಂತಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಕರ್ನಾಟಕ ರಾಜ್ಯ ಸರ್ಕಾರದ ಅಡ್ವೋಕೇಟ್ ಜನೆರಲ್ ಕೆ ಶಶಿಕಿರಣ್ ಶೆಟ್ಟಿ, ರಾಜ್ಯದ ಪಾಲಿಗೆ ಇದೊಂದು ಅಭೂತಪೂರ್ವ ಗೆಲುವಾಗಿದೆ. ಸರ್ಕಾರದ ದಿಟ್ಟ ನಿಲುವು, ಕಾನೂನು ತಜ್ಞರ ನಿರಂತರ ಪರಿಶ್ರಮದಿಂದಾಗಿ ಈ ಗೆಲುವು ಲಭಿಸಿದೆ ಎಂದಿದ್ದಾರೆ. ಕಳೆದ ಏಳು ವರ್ಷಗಳಿಂದ ತಮಿಳುನಾಡು ಈ ಯೋಜನೆಗೆ ಅಡ್ಡಗಾಲು ಹಾಕುತ್ತಾ ಬಂದಿತ್ತಲ್ಲದೆ, ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಆ ಅರ್ಜಿಯನ್ನು ವಜಾಗೊಳಿಸಿದ ಹಿನ್ನಲೆಯಲ್ಲಿ ಕರ್ನಾಟಕದ ಮಹತ್ವಾಕಾಂಕ್ಷೆಯ ಯೋಜನೆ ಮುಂದುವರೆಯಲು ಹಾದಿ ಸುಲಭವಾದಂತಾಗಿದೆ ಎಂದು ಕೆ ಶಶಿ ಕಿರಣ್ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ. ಮೇಕೆದಾಟು ಯೋಜನೆಯು ಪರಿಸರಸ್ನೇಹಿ ಯೋಜನೆಯಾಗಿದ್ದು, ಇದರಿಂದ ನೆರೆ ರಾಜ್ಯಕ್ಕೆ ತೊಂದರೆ ಆಗದು. ಅಷ್ಟೇ…

Read More

ಬೆಂಗಳೂರು: ನಗರದಲ್ಲಿ ಭೀಕರ ಕೃತ್ಯವೊಂದು ಬೆಳಕಿಗೆ ಬಂದಿದೆ. ಬೈಕ್ ಒಂದಕ್ಕೆ ಕಾರು ಗುದ್ದಿಸಿ ಕೊಲೆಗೆ ಯತ್ನಿಸಿದಂತ ಘಟನೆ ನಡೆದಿದೆ. ಈ ಇಡೀ ಕೃತ್ಯವು ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಲ್ಲಿ ಕಾರೊಂದು ಬೈಕಿಗೆ ಗುದ್ದಿಸಿ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರನ್ನು ಕೊಲೆಗೆ ಯತ್ನಿಸಿದಂತ ಭೀಕರ ಕೃತ್ಯ ನಡೆದಿದೆ. ಬೈಕ್ ಸವಾರ ಹಾರನ್ ಮಾಡಿದ್ದಕ್ಕೆ ಸಿಟ್ಟಾದಂತ ಕಾರು ಚಾಲಕ, ಆತನನ್ನು ಹತ್ಯೆಗೆ ಯತ್ನಿಸಲಾಗಿದೆ. ಸಾಫ್ಟ್ ವೇರ್ ಇಂಜಿನಿಯರ್ ಸುಕ್ರುತ್ ಕೇಶವ್ ಎಂಬಾತನಿಂದ ಈ ಕೃತ್ಯವನ್ನು ಎಸಗಲಾಗಿದೆ. ಹಾರ್ನ್ ಮಾಡಿದ್ದಕ್ಕೆ ಬೈಕಿಗೆ ಕಾರು ಗುದ್ದಿಸಿ ಹತ್ಯೆಯನ್ನು ಮಾಡೋದಕ್ಕೆ ಯತ್ನಿಸಿರುವಂತ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಕ್ಟೋಬರ್ 26ರಂದು ನಡೆದಿದ್ದಂತ ಘಟನೆ, ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಕಾರು ಚಾಲಕ ಸುಕ್ರುತ್ ಕೇಶವ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/railway-works-two-memu-trains-on-mysore-division-cancelled/ https://kannadanewsnow.com/kannada/good-news-good-news-for-employees-epfos-important-decision-now-automatic-transfer-of-pf-money-to-new-account/

Read More

ಮೈಸೂರು: ಇಲ್ಲಿನ ನ್ಯೂ ಗುಡ್ಸ್ ಟರ್ಮಿನಲ್ ಮತ್ತು ನಾಗನಹಳ್ಳಿ ನಡುವೆ ರಸ್ತೆ ಕೆಳಸೇತುವೆ ಕಾಮಗಾರಿ ನಡೆಯುವುದರಿಂದ ಕೆಳಕಂಡ ರೈಲುಗಳು 7 ದಿನಗಳ ಕಾಲ ಭಾಗಶಃ ರದ್ದುಪಡಿಲಾಗಿದೆ. ವಿವರಗಳು ಕೆಳಗಿನಂತಿವೆ: ರೈಲು ಸಂಖ್ಯೆ 66553 ಕೆಎಸ್‌ಆರ್ ಬೆಂಗಳೂರು – ಅಶೋಕಪುರಂ ಮೆಮು ದಿನಾಂಕ 13 ನವೆಂಬರ್, 2, 4, 9, 11, 30 ಡಿಸೆಂಬರ್ 2025 ಹಾಗೂ 1 ಜನವರಿ 2026 ರಂದು ಪ್ರಯಾಣ ಆರಂಭಿಸುವ ರೈಲು ಪಾಂಡವಪುರ ಮತ್ತು ಅಶೋಕಪುರಂ ನಡುವೆ ಭಾಗಶಃ ರದ್ದುಪಡಿಸಲ್ಪಡುತ್ತದೆ. ಈ ರೈಲು ಪಾಂಡವಪುರದಲ್ಲೇ ಪ್ರಯಾಣ ಕೊನೆಗೊಳ್ಳಲಿದೆ. ರೈಲು ಸಂಖ್ಯೆ 66580 ಅಶೋಕಪುರಂ – ಕೆಎಸ್‌ಆರ್ ಬೆಂಗಳೂರು ಮೆಮು ದಿನಾಂಕ 13 ನವೆಂಬರ್, 2, 4, 9, 11, 30 ಡಿಸೆಂಬರ್ 2025 ಹಾಗೂ 1 ಜನವರಿ 2026 ರಂದು ಪ್ರಯಾಣ ಆರಂಭಿಸುವ ರೈಲು ಅಶೋಕಪುರಂ ಮತ್ತು ಪಾಂಡವಪುರ ನಡುವೆ ಭಾಗಶಃ ರದ್ದುಪಡಿಸಲಾಗುತ್ತದೆ. ಈ ರೈಲು ಅಶೋಕಪುರಂ ಬದಲು ಪಾಂಡವಪುರದಿಂದಲೇ ತನ್ನ ಪ್ರಯಾಣ ಆರಂಭಿಸಲಿದೆ. https://kannadanewsnow.com/kannada/customs-officials-seize-hydroponic-cannabis-worth-rs-6-97-crore-at-bengaluru-airport/ https://kannadanewsnow.com/kannada/good-news-good-news-for-employees-epfos-important-decision-now-automatic-transfer-of-pf-money-to-new-account/

Read More

ಬೆಂಗಳೂರು: ನಗರದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಈ ಕಾರ್ಯಾಚರಣೆಯ ವೇಳೆಯಲ್ಲಿ ಬರೋಬ್ಬರಿ 6.97 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಸೀಜ್ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು, ದಿನಾಂಕ 11-11-2025ರಂದು, ಬೆಂಗಳೂರಿನ ಕೆಐಎಯಲ್ಲಿರುವ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬ್ಯಾಂಕಾಕ್‌ನಿಂದ ಆಗಮಿಸುತ್ತಿದ್ದ ಪ್ರಯಾಣಿಕನನ್ನು ತಡೆದು ₹69.60 ಲಕ್ಷ ಮೌಲ್ಯದ 2.760 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡರು. ಪ್ರಯಾಣಿಕನನ್ನು ಎನ್‌ಡಿಪಿಎಸ್ ಕಾಯ್ದೆ, 1985ರ ಅಡಿಯಲ್ಲಿ ಬಂಧಿಸಲಾಗಿದೆ ಎಂದಿದೆ. https://twitter.com/blrcustoms/status/1988910162858385714 ಇನ್ನೂ ನಿನ್ನೆಯ ದಿನಾಂಕ 12-11-2025ರಂದು ಬೆಂಗಳೂರಿನ ಕೆಐಎಯಲ್ಲಿರುವ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ₹5.53 ಕೋಟಿ ಮೌಲ್ಯದ 15.79 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಪತ್ತೆ ಹಚ್ಚಿದ್ದಾರೆ.  ಈ ವ್ಯಕ್ತಿಗಳನ್ನು ಎನ್‌ಡಿಪಿಎಸ್ ಕಾಯ್ದೆ, 1985ರ ಅಡಿಯಲ್ಲಿ ಬಂಧಿಸಲಾಯಿತು ಎಂಬುದಾಗಿ ತಿಳಿಸಿದೆ. https://twitter.com/blrcustoms/status/1988910906550419956 https://kannadanewsnow.com/kannada/good-news-for-those-looking-to-start-a-chicken-farm-applications-invited-for-free-training/ https://kannadanewsnow.com/kannada/big-shock-for-former-cm-bs-yediyurappa-high-court-refuses-to-cancel-summons-in-pocso-case/ https://kannadanewsnow.com/kannada/good-news-for-those-who-applied-for-bed-studies-another-opportunity-for-document-verification/

Read More

ಉಜಿರೆ : ನಿರುದ್ಯೋಗಿ ಯುವ-ಯುವತಿಯರಿಗೆ, ಉದ್ಯೋಗವನ್ನು ಅರಸುತ್ತಿರುವವರಿಗೆ ಹಾಗೂ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಆಶಾಕಿರಣವಾಗಿರುವ ಮತ್ತು ಕೇಂದ್ರ ಸರಕಾರದಿಂದ ಸ್ವ ಉದ್ಯೋಗಕ್ಕಾಗಿ ಅನುಕರಣೀಯ ಮಾದರಿ ಎಂದು ಗುರುತಿಸಲ್ಪಟ್ಟು ದೇಶದ ಪ್ರತಿ ಜಿಲ್ಲೆಯಲ್ಲೂ ಬೇರೆ ಬೇರೆ ಬ್ಯಾಂಕುಗಳಿಂದ ರುಡ್ ಸೆಟ್ ಮಾದರಿ ಸಂಸ್ಥೆಗಳನ್ನು ಸ್ಥಾಪಿಸಿ ಇಂದು ಅನೇಕ ಯುವ ಜನರಿಗೆ ಸ್ವ ಉದ್ಯೋಗ /ಉದ್ಯೋಗಗಳನ್ನು ಕಲ್ಪಿಸಿರುವ ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಹೊಸ ತರಬೇತಿ ಕಲ್ಲು ಮತ್ತು ಕಾಂಕ್ರೀಟ್ ಕೆಲಸಗಳು (Masonry and Concrete Works) 30 ದಿನದ ಉಚಿತ ತರಬೇತಿ ಊಟ-ವಸತಿಯೊಂದಿಗೆ ನಡೆಯಲಿದೆ. ಆಸಕ್ತಿರುವ ಕರ್ನಾಟಕ ರಾಜ್ಯದ ಅಭ್ಯರ್ಥಿಗಳು 18 ರಿಂದ 50 ವರ್ಷಗಳ ವಯೋಮಿತಿಯ ಪುರುಷ ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಸಂಸ್ಥೆಯ ವೆಬ್ ಸೈಟ್ ನಲ್ಲಿ (www.rudsetujire.com) ನೇರವಾಗಿ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಬಿಳಿ ಹಾಳೆಯಲ್ಲಿ ಬರೆದು ಅರ್ಜಿಯನ್ನು : ನಿರ್ದೇಶಕರು, ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ-574240, ಬೆಳ್ತಂಗಡಿ ದ.ಕ ಇವರಿಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ…

Read More

ದಕ್ಷಿಣ ಕನ್ನಡ : ನಿರುದ್ಯೋಗಿ ಯುವ-ಯುವತಿಯರಿಗೆ, ಉದ್ಯೋಗವನ್ನು ಅರಸುತ್ತಿರುವವರಿಗೆ ಹಾಗೂ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಆಶಾಕಿರಣವಾಗಿರುವ ಮತ್ತು ಕೇಂದ್ರ ಸರಕಾರದಿಂದ ಸ್ವ ಉದ್ಯೋಗಕ್ಕಾಗಿ ಅನುಕರಣೀಯ ಮಾದರಿ ಎಂದು ಗುರುತಿಸಲ್ಪಟ್ಟು ದೇಶದ ಪ್ರತಿ ಜಿಲ್ಲೆಯಲ್ಲೂ ಬೇರೆ ಬೇರೆ ಬ್ಯಾಂಕುಗಳಿಂದ ರುಡ್ ಸೆಟ್ ಮಾದರಿ ಸಂಸ್ಥೆಗಳನ್ನು ಸ್ಥಾಪಿಸಿ ಇಂದು ಅನೇಕ ಯುವ ಜನರಿಗೆ ಸ್ವ ಉದ್ಯೋಗ /ಉದ್ಯೋಗಗಳನ್ನು ಕಲ್ಪಿಸಿರುವ ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 17.11.2025 ರಿಂದ 29.11.2025ರ ವರೆಗೆ 13 ದಿನದ ಉಚಿತ ತರಬೇತಿ ಊಟ-ವಸತಿಯೊಂದಿಗೆ ಕೃಷಿ ಉದ್ಯಮಿ-ಕೋಳಿ ಸಾಕಾಣಿಕೆ ತರಬೇತಿ ನಡೆಯಲಿದೆ. ಆಸಕ್ತಿರುವ ಕರ್ನಾಟಕ ರಾಜ್ಯದ ಅಭ್ಯರ್ಥಿಗಳು 18 ರಿಂದ 50 ವರ್ಷಗಳ ವಯೋಮಿತಿಯ ಪುರುಷ ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಸಂಸ್ಥೆಯ ವೆಬ್ ಸೈಟ್ ನಲ್ಲಿ (www.rudsetujire.com) ನೇರವಾಗಿ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಬಿಳಿ ಹಾಳೆಯಲ್ಲಿ ಬರೆದು ಅರ್ಜಿಯನ್ನು : ನಿರ್ದೇಶಕರು, ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ-574240, ಬೆಳ್ತಂಗಡಿ ದ.ಕ ಇವರಿಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ…

Read More

ಬೆಂಗಳೂರು: ನಗರದಲ್ಲಿ ಸಫಾರಿ ವೇಳೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ ಮಾಡಿರುವಂತ ಘಟನೆ ನಡೆದಿದೆ. ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ನಲ್ಲಿ ಈ ದಾಳಿ ನಡೆದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ನಲ್ಲಿ ಸಫಾರಿ ವೇಳೆಯಲ್ಲಿ ಮಹಿಳೆಯ ಮೇಲೆ ಚಿರತೆ ದಾಳಿ ನಡೆಸಿದೆ. ಚಿರತೆ ದಾಳಿಯ ಭೀಕರ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. 50 ವರ್ಷದ ವಹಿತ ಬಾನು ಎಂಬ ಮಹಿಳೆಯ ಮೇಲೆ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ನಲ್ಲಿ ಚಿರತೆ ದಾಳಿ ನಡೆಸಿದೆ. ಪತಿ, ಮಗನ ಜೊತೆಗೆ ಸಫಾರಿಗೆ ವಹಿತ ಬಾನು ತೆರಳಿದ್ದರು. ಕೆ ಎಸ್ ಟಿ ಡಿ ಸಿ ವಾಹನದಲ್ಲಿ ಸಫಾರಿಗೆ ತೆರಳಿದ್ದಾಗ ಈ ಘಟನೆ ನಡೆದಿದೆ. ಸಫಾರಿ ವಾಹನದ ಗ್ಲಾಸ್ ಓಪನ್ ಮಾಡಿ ಚಿರತೆ ನೋಡುತ್ತಿದ್ದಾಗ ಮಹಿಳೆಯ ಮೇಲೆ ದಾಳಿ ನಡೆಸಲಾಗಿದೆ. ಚಿರತೆ ದಾಳಿಯಿಂದಾಗಿ ಮಹಿಳೆಯ ಕೈಗೆ ಗಾಯವಾಗಿದೆ. https://kannadanewsnow.com/kannada/1-day-of-paid-menstrual-leave-per-month-for-employed-women-labor-department-orders/ https://kannadanewsnow.com/kannada/good-news-for-those-who-applied-for-bed-studies-another-opportunity-for-document-verification/

Read More