Author: kannadanewsnow09

ಬಳ್ಳಾರಿ : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀರ್ಘಾವಧಿ ಮುಖ್ಯಮಂತ್ರಿಯಾಗಿ ನಾಡಿಗೆ ಸೇವೆ ಸಲ್ಲಿಸುತ್ತಿರುವ ಸಂದರ್ಭದಲ್ಲಿ ಅವರ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರೆಡ್ಡಿ ಪತ್ರ ಬರೆದು, ಕರ್ನಾಟಕದ ಸಾಮಾಜಿಕ ನ್ಯಾಯ ಹಾಗೂ ಜನಪರ ಸರ್ವಾಂಗೀಣ ಅಭಿವೃದ್ಧಿ ಪರಂಪರೆಯನ್ನು ಸಮರ್ಥವಾಗಿ ಮುಂದುವರೆಸುತ್ತಿರುವ ದೂರದೃಷ್ಟಿಯ ನಾಯಕತ್ವಕ್ಕೆ ಅಭಿನಂದನೆಯನ್ನು ಮುಖ್ಯಮಂತ್ರಿಗಳ ಅರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ. ಬಸವರಾಜ ರಾಯರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿ ಬರೆದ ಪತ್ರದ ಸಾರಾಂಶ ಇಂತಿದೆ. ಕರ್ನಾಟಕದ ರಾಜಕೀಯ ಇತಿಹಾಸವು ಜನಪರ ಆಡಳಿತ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನಾತ್ಮಕ ಸಮಾನತೆಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ನಾಯಕರ ದಿಟ್ಟ ಹೋರಾಟಗಳಿಂದ ರೂಪುಗೊಂಡ ಸುವರ್ಣ ಪರಂಪರೆ ಹೊಂದಿದೆ. ಶೋಷಿತರು, ಹಿಂದುಳಿದವರು ಮತ್ತು ಸಮಾಜದ ಅಂಚಿನಲ್ಲಿರುವ ಸಮುದಾಯಗಳ ಪರವಾಗಿ ಧೈರ್ಯವಾಗಿ ನಿಂತ ನಾಯಕರಿಂದಲೇ ಈ ನಾಡಿನ ಪ್ರಗತಿಪರ ರಾಜಕೀಯ ಸಂಸ್ಕೃತಿ ಬೆಳೆದಿದೆ. ಆ ಪರಂಪರೆಯಲ್ಲಿ ಅಚ್ಚಳಿಯದ ಗುರುತು ಮೂಡಿಸಿದ ಮಹಾನ್ ನಾಯಕರಲ್ಲಿ ದಿವಂಗತ ದೇವರಾಜ…

Read More

ಚಿತ್ರದುರ್ಗ: ಜಿಲ್ಲೆಯಲ್ಲಿ ಮರಕ್ಕೆ ಬೊಲೆರೋ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದಂತ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಅಂದನೂರು ಗ್ರಾಮದ ಬಳಿಯಲ್ಲಿ ಬೊಲೆರೋ ವಾಹನ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರನ್ನು ನಾಗತಿಹಳ್ಳಿಯ ಅರುಣ್(32), ಹನುಮಂತ(32) ಎಂಬುದಾಗಿ ಗುರುತಿಸಲಾಗಿದೆ. ದಾವಣಗೆರೆ ತಾಲ್ಲೂಕಿನ ಅಣಜಿ ಗ್ರಾಮದಲ್ಲಿ ಅಡಿಕೆ ಲೋಡ್ ಇಳಿಸಿ ವಾಪಾಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಅಂದನೂರು ಗ್ರಾಮದ ಬಳಿಯಲ್ಲಿ ಬೊಲೆರೋ ವಾಹನ ಮರಕ್ಕೆ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಬೊಲೆರೋ ವಾಹನದಲ್ಲಿದ್ದಂತ ಆರು ಕಾರ್ಮಿಕರಿಗೆ ಗಾಯವಾಗಿದ್ದರೇ, ಇಬ್ಬರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿಕ್ಕಜಾಜೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. https://kannadanewsnow.com/kannada/karnataka-janapada-academy-invites-applications-for-fellowship/ https://kannadanewsnow.com/kannada/do-you-know-what-a-woman-desires-from-her-husband/

Read More

ಬೆಂಗಳೂರು: ಕರ್ನಾಟಕ ಜಾನಪದ ಅಕಾಡೆಮಿಯು ಫೆಲೋಶಿಪ್ (ಅಧ್ಯಯನ ವೇತನ) ಲೇಖನಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಅಕಾಡೆಮಿಯ ವೆಬ್‍ಸೈಟ್‍ನಲ್ಲಿ ತಿಳಿಸಿರುವ ಶೀರ್ಷಿಕೆಗಳನ್ನು ಆಧರಿಸಿ ಕ್ಷೇತ್ರಕಾರ್ಯ ನಡೆಸಿ ಅಧ್ಯಯನ ಕೃತಿಗಳನ್ನು ಸಿದ್ಧಪಡಿಸಿಕೊಡಲು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿಪಡಿಸಿರುವ ಒಂದು ಶೀರ್ಷಿಕೆಯನ್ನು ಆಯ್ಕೆ ಮಾಡಿ 5 ಪುಟಗಳ ಸಾರಲೇಖ ಬರೆದು ಜನವರಿ 23 ರೊಳಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, ಎರಡನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – 560002 ಇವರಿಗೆ ಕಳುಹಿಸಿಕೊಡಬೇಕು. ಆಯ್ಕೆಯಾದ 15 ಅಭ್ಯರ್ಥಿಗಳಿಗೆ ಫೆಲೋಶಿಪ್ ಕಾರ್ಯ ನಡೆಸಲು ಆದೇಶ ನೀಡಲಾಗುವುದು. ಅರ್ಜಿ ನಮೂನೆ, ಫೆಲೋಶಿಪ್ ಶೀರ್ಷಿಕೆಗಳು ಮತ್ತು ಇತರೆ ವಿವರಗಳಿಗಾಗಿ ಅಕಾಡೆಮಿಯ ವೆಬ್‍ಸೈಟ್ https://janapada.karnataka.gov.in ನಿಂದ ಮಾಹಿತಿ ಪಡೆಯಬಹುದಾಗಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟಾರ್ ತಿಳಿಸಿದ್ದಾರೆ. https://kannadanewsnow.com/kannada/high-priority-given-to-education-sector-maddur-mla-k-m-uday/ https://kannadanewsnow.com/kannada/do-you-know-what-a-woman-desires-from-her-husband/

Read More

ನವದೆಹಲಿ: ಬೆಂಗಳೂರಿನ ನಾಯಂಡನಹಳ್ಳೀ ರೇಲ್ವೆ ನಿಲ್ದಾಣದಲ್ಲಿ ಈ ಕೆಳಕಂಡ ನಾಲ್ಕು ರೈಲುಗಳನ್ನು ನಿಲುಗಡೆಗೊಳಿಸಲು ಅನುಮತಿ ನೀಡಿರುವುದಾಗಿ ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ೧) ರೈಲು ಸಂಖ್ಯೆ : 16215/16216 ; ಮೈಸೂರು – ಕೆ.ಎಸ್. ಆರ್. ಸಿಟಿ ೨) ರೈಲು ಸಂಖ್ಯೆ : 17307 /17308 – ಮೈಸೂರು –ಬಾಗಲಕೋಟೆ –ಬಸವ ಎಕ್ಸಪ್ರೆಸ್ ೩) ರೈಲು ಸಂಖ್ಯೆ 16235/16236 : ಟುಟಿಕೋರಿನ್ – ಮೈಸೂರು ಎಕ್ಸಪ್ರೆಸ್ ೪) ರೈಲು ಸಂಖ್ಯೆ 16535/16536 ; ಮೈಸೂರು – ಪಂಡಾರಪುರ ಗೊಲ್ಗುಂಬಜ್ ಎಕ್ಸಪ್ರೆಸ್ ಈ ರೈಲುಗಳನ್ನು ನಾಯಂಡನಹಳ್ಳಿ ರೇಲ್ವೆ ನಿಲ್ದಾಣದಲ್ಲಿ ನಿಲುಗಡೆಗೊಳಿಸುವಂತೆ ಸಾರ್ವಜನಿಕರ ಒತ್ತಡವಿತ್ತು. ಹಲವು ಭಾರಿ ಸಾರ್ವಜನಿಕರ ನನ್ನಲ್ಲಿ ಮನವಿ ಮಾಡಿದ್ದರು. ಸಾರ್ವಜನಿಕರ ಮನವಿಯನ್ನು ಪರಿಗಣಿಸಲು ರೇಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರೈಲು ನಿಲುಗಡೆಗೆ ಕ್ರಮ ಜರುಗಿಸಲಾಗಿತ್ತು. ರೇಲ್ವೆ ಇಲಾಖೆ ಪ್ರಯಾಣಿಕರ ಹಿತದೃಷ್ಟಿಯಿಂದ ಮೇಲ್ಕಂಡ ನಾಲ್ಕು ರೈಲುಗಳಿಗೆ ನಾಯಂಡನಹಳ್ಳಿ ರೇಲ್ವೆ ನಿಲ್ದಾಣದಲ್ಲಿ ನಿಲುಗಡೆ…

Read More

ಮಂಡ್ಯ : ಶಿಕ್ಷಣದಿಂದ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂಬುವುದನ್ನು ವಿದ್ಯಾರ್ಥಿಗಳು ಅರಿತು ಕಠಿಣ ಪರಿಶ್ರಮ ಪಟ್ಟು ವ್ಯಾಸಂಗ ಮಾಡಿ ಸಮಾಜದಲ್ಲಿ ಉನ್ನತ ಸ್ಥಾನ ಮಾನಗಳಿಸಬೇಕೆಂದು ಮದ್ದೂರು ಶಾಸಕ ಕೆ.ಎಂ.ಉದಯ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಮದ್ದೂರು ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25 ಯೋಜನೆಯಡಿ 70.53 ಲಕ್ಷ ರೂ.ವೆಚ್ಚದ ಕಟ್ಟಡದ ನವೀಕರಣ ಕಾಮಗಾರಿ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು, ಇದನ್ನು ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಉತ್ತಮ ಬದುಕು ಕಟ್ಟಿಕೊಂಡು ಪಾಲಕರಿಗೆ ಹಾಗೂ ಶಿಕ್ಷಕರಿಗೆ ಕೀರ್ತಿ ತರಬೇಕೆಂದರು. ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ಸರ್ಕಾರದಿಂದ ನೂತನ ಕೊಠಡಿಗಳ ನಿರ್ಮಾಣ, ಪ್ರಯೋಗಾಲಯ, ಶೌಚಗೃಹ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ ಜತೆಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ವಿಶೇಷ ಅನುದಾನ ತಂದು ಉನ್ನತ ಶಿಕ್ಷಣಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದು…

Read More

ನವದೆಹಲಿ: ದೆಹಲಿಯಲ್ಲಿ ನಡೆದ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (ಎಐಎಫ್‌ಎಫ್) ಮತ್ತು ಭಾರತದ ಟಾಪ್-ಡಿವಿಷನ್ ಲೀಗ್‌ನ ಎಲ್ಲಾ 14 ಕ್ಲಬ್‌ಗಳ ಪ್ರತಿನಿಧಿಗಳೊಂದಿಗೆ ಕ್ರೀಡಾ ಸಚಿವಾಲಯ ನಡೆಸಿದ ಸಭೆಯ ನಂತರ ತಿಂಗಳುಗಳ ಬಿಕ್ಕಟ್ಟಿನ ನಂತರ 2025-26 ರ ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್) ಸೀಸನ್ ಅಂತಿಮವಾಗಿ ಪ್ರಾರಂಭದ ದಿನಾಂಕವನ್ನು ಹೊಂದಿದೆ. ನ್ಯಾಯಾಲಯದ ವಿವಾದದಿಂದಾಗಿ ಇಂಡಿಯನ್ ಸೂಪರ್ ಲೀಗ್ ಬಗ್ಗೆ ಸಾಕಷ್ಟು ಅನಿಶ್ಚಿತತೆ ಇತ್ತು ಆದರೆ ಇಂದು ಸರ್ಕಾರ ಮತ್ತು ಎಐಎಫ್‌ಎಫ್ ಮತ್ತು ಎಲ್ಲಾ 14 ಕ್ಲಬ್‌ಗಳ ಕ್ಲಬ್ ಪ್ರತಿನಿಧಿಗಳು ಲೀಗ್ ಅನ್ನು ಮತ್ತೆ ಪ್ರಾರಂಭಿಸಲು ನಿರ್ಧರಿಸಿದ್ದಾರೆ ಎಂದು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಮಂಗಳವಾರ ವರದಿಗಾರರಿಗೆ ಮಾಹಿತಿ ನೀಡಿದರು. ಮೋಹನ್ ಬಗಾನ್, ಪೂರ್ವ ಬಂಗಾಳ, ಮೊಹಮ್ಮಡೆನ್ ಎಫ್‌ಸಿ, ಇಂಟರ್ ಕಾಶಿ ಎಫ್‌ಸಿ, ಮುಂಬೈ ಸಿಟಿ ಎಫ್‌ಸಿ, ಚೆನ್ನೈಯಿನ್ ಎಫ್‌ಸಿ, ಎಸ್‌ಸಿ ದೆಹಲಿ, ಬೆಂಗಳೂರು ಎಫ್‌ಸಿ, ನಾರ್ತ್‌ಈಸ್ಟ್ ಯುನೈಟೆಡ್ ಎಫ್‌ಸಿ, ಜಮ್ಶೆಡ್‌ಪುರ ಎಫ್‌ಸಿ, ಒಡಿಶಾ ಎಫ್‌ಸಿ, ಕೇರಳ ಬ್ಲಾಸ್ಟರ್ಸ್ ಮತ್ತು ಎಫ್‌ಸಿ ಗೋವಾ ಎಂಬ…

Read More

ಬೆಂಗಳೂರು: 2025-26ನೇ ಸಾಲಿನ ಎನ್ ಎಂ ಎಂ ಎಸ್ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು ಆದೇಶಿಸಿದೆ. ಈ ಕುರಿತಂತೆ ಕೆ ಎಸ್ ಕ್ಯೂ ಎ ಎ ಸಿಯ ಕಾರ್ಯನಿರ್ವಾಹಕ ನಿರ್ದೇಶಕರು ಆದೇಶ ಹೊರಡಿಸಿದ್ದು, 2025-26ನೇ ಸಾಲಿನಲ್ಲಿ ನ್ಯಾಷನಲ್ ಮೀನ್ಸ್ -ಕಮ್ ಮೆರಿಟ್‌ ವಿದ್ಯಾರ್ಥಿ ವೇತನ (NMMS) ಪರೀಕ್ಷೆಯನ್ನು ದಿನಾಂಕ:18.01.2026 (ಭಾನುವಾರ)ರಂದು ನಡೆಸುವುದಾಗಿ ಉಲ್ಲೇಖ(2)ರ ಈ ಕಛೇರಿ ಜ್ಞಾಪನದಲ್ಲಿ ತಿಳಿಸಲಾಗಿತ್ತು. ಕಾರಣಾಂತರಗಳಿಂದ ಸದರಿ ಪರೀಕ್ಷೆಯನ್ನು ಮುಂದೂಡಿ ದಿನಾಂಕ:01.02.2026 (ಭಾನುವಾರ)ರಂದು ನಿಗದಿಪಡಿಸಲಾಗಿದೆ ಎಂದಿದ್ದಾರೆ. ಈ ಬಗ್ಗೆ ಜಿಲ್ಲೆ, ತಾಲ್ಲೂಕು, ಶಾಲಾ ಹಂತದಲ್ಲಿ ವ್ಯಾಪಕ ಪ್ರಚಾರ ನೀಡಿ, ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧತೆ ನಡೆಸಲು ಅಗತ್ಯ ಕ್ರಮವಹಿಸಲು ತಿಳಿಸಿದೆ. ಹಾಗೂ ಈಗಾಗಲೇ NMMS ಪರೀಕ್ಷೆಗೆ ನಿಗದಿಯಾಗಿರುವ ಪರೀಕ್ಷಾ ಕೇಂದ್ರಗಳನ್ನು ಬೇರೆ ಯಾವುದೇ ಪರೀಕ್ಷೆಗಳಿಗೆ ನೀಡದಂತೆ ಕ್ರಮವಹಿಸಲು ತಿಳಿಸಿದ್ದಾರೆ. https://kannadanewsnow.com/kannada/cm-tenure-should-be-discussed-about-quality-rather-than-quantity-mp-basavaraj-bommai/

Read More

ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರ ಅವಧಿಯ ಕುರಿತು ಕ್ವಾಂಟಿಟಿಗಿಂತ ಕ್ವಾಲಿಟಿ ಬಗ್ಗೆ ಚರ್ಚೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಅತ್ಯಂತ ಸುದೀರ್ಘ ಅವಧಿಗೆ ಸಿಎಂ ಆಗಿ ಕೆಲಸ ಮಾಡಿದ್ದಾರೆ ಎಂದು ಕೆಲವರು ಮಾಡುತ್ತಿದ್ದಾರೆ. ಎಷ್ಟು ದಿನ ಮುಖ್ಯಮಂತ್ರಿ ಆಗಿದ್ದೀರಿ ಎನ್ನುವುದಕ್ಕಿಂತ ಅಷ್ಟು ದಿನಗಳಲ್ಲಿ ಏನು ಸಾಧನೆ ಮಾಡಿದ್ದೀರಿ, ರಾಜ್ಯವನ್ನು ಯಾವ ಪ್ರಗತಿಯಲ್ಲಿ ತೆಗೆದುಕೊಂಡು ಹೋಗಿದ್ದೀರಿ, ನಿಮ್ಮ ಆಡಳಿತ ಅವಧಿಯಲ್ಲಿ ಎಷ್ಟು ಜನ ಬಡವರು, ಹಿಂದುಳಿದವರಿಗೆ ಒಳ್ಳೆಯದಾಗಿದೆ. ಒಟ್ಟಾರೆ ರಾಜ್ಯದ ಆರ್ಥಿಕತೆ ಏನು ಸುಧಾರಣೆ ಆಗಿದೆ ಎನ್ನುವುದು ಬಹಳ ಮುಖ್ಯ ಅದು ಚರ್ಚೆ ಆಗಬೇಕಿದೆ. ಕ್ವಾಂಟಿಟಿಗಿಂತ ಕ್ವಾಲಿಟಿ ಬಗ್ಗೆ ಚರ್ಚೆಯಾಗಬೇಕು ಎಂದು ಹೇಳಿದರು. ಕಪ್ಪು ಚುಕ್ಕೆ ಬಳ್ಳಾರಿಯಲ್ಲಿನ ಗಲಾಟೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ಬೀದರ್, ಬಳ್ಳಾರಿಯಲ್ಲಿ ಆಗುತ್ತಿರುವ ಬೆಳವಣಿಗೆ ಸರಿಯಾದ್ದಲ್ಲ, ಜನಪ್ರತಿನಿಧಿಗಳಿಗೆ ಶೋಭೆ ತರುವಂಥದ್ದಲ್ಲಾ, ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯ ಇರುವುದು ಸಾಮಾನ್ಯ ಅದನ್ನು ಗೌರವಯುತ…

Read More

ಚಿತ್ರದುರ್ಗ: ಜಿಲ್ಲೆಯ ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿಯೊಂದಕ್ಕೆ ಹಿಂಬದಿಯಿಂದ ಕಾರೊಂದು ಡಿಕ್ಕಿಯಾದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಬಳಿಯ ಉಪಾಧ್ಯಾ ಹೋಟೆಲ್ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರೊಂದು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಮುಂದೆ ಸಾಗುತ್ತಿದ್ದಂತ ಲಾರಿಯೊಂದಕ್ಕೆ ಹಿಂಬದಿಯಾಗಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ತಮಿಳುನಾಡು ನೋಂದಣಿ ಸಂಖ್ಯೆ ಹೊಂದಿರುವಂತ ಕಾರಿನಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಕಾರಿನಲ್ಲಿ ಇದ್ದಂತ ಮತ್ತೋರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಐಮಂಗಳ ಠಾಣೆಯ ಪೊಲೀಸ್ ಸಬ್ ಇನ್ಸ್ ಸ್ಪೆಕ್ಟರ್ ದೀಪು, ಭೀಮನಗೌಡ ಪಾಟೀಲ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಲ್ಲದೇ ನಜ್ಜು ಗುಜ್ಜಾಗಿದ್ದಂತ ಕಾರಿನಲ್ಲಿ ಸಿಲುಕಿದ್ದಂತ ಮಹಿಳೆಯ ಮೃತದೇಹವನ್ನು ಹೊರ…

Read More

ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಮೂಲಕ ಸಚಿವ ಜಮೀರ್ ಅಹ್ಮದ್ ಗೆ ಶಾಕ್ ನೀಡಲಾಗಿದೆ. ಇಂದು ಆದಾಯ ತೆರಿಗೆ ಇಲಾಖೆಗೆ ತೆರಳಿದಂತ ಹಿಂದೂಪರ ಕಾರ್ಯಕರ್ತ ತೇಜಸ್ ಗೌಡ ಅವರು, ಸಚಿವ ಜಮೀರ್ ಅಹ್ಮದ್ ಖಾನ್ ಅವರು ಭಾರತೀಯ ರಿಸರ್ವ್ ಬ್ಯಾಂಕ್ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂಬುದಾಗಿ ದೂರು ನೀಡಲಾಗಿದೆ. ಅಂದಹಾಗೇ ತೇಜಸ್ ಗೌಡ ಎಂಬುವರು ನೀಡಿರುವಂತ ದೂರಿನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಬಳ್ಳಾರಿಯಲ್ಲಿ ಮೃತಪಟ್ಟಂತ ರಾಜಶೇಖರ್ ಅವರ ಕುಟುಂಬಕ್ಕೆ ಪರಿಹಾರವಾಗಿ 25 ಲಕ್ಷ ಹಣವನ್ನು ನಗದು ರೂಪದಲ್ಲಿ ನೀಡಿದ್ದಾರೆ. ಇದು ಆರ್ ಬಿ ಐ ನಿಯಮವಾಳಿಗೆ ವಿರುದ್ಧವಾಗಿದೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. https://kannadanewsnow.com/kannada/nita-m-ambani-felicitates-men-women-and-blind-womens-cricket-world-cup-winners/ https://kannadanewsnow.com/kannada/do-you-know-what-a-woman-desires-from-her-husband/

Read More