Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೀಜಿಂಗ್: ಚೀನಾದ ಶಾಂಕ್ಸಿ ಪ್ರಾಂತ್ಯದ ಚಾಂಗ್ಝಿ ನಗರದ ‘ಲಿಯುಶೆನ್ಯು’ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 90 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಗಣಿಯೊಳಗೆ ಇನ್ನೂ ಹಲವಾರು ಕಾರ್ಮಿಕರು ಸಿಲುಕಿಕೊಂಡಿರುವ ಭೀತಿ ಎದುರಾಗಿದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗತಿಯಲ್ಲಿ ಸಾಗಿದೆ. ಸುರಂಗದೊಳಗೆ ಸಿಲುಕಿದ ನೂರಾರು ಕಾರ್ಮಿಕರು ಕಳೆದ ಶುಕ್ರವಾರ ಸಂಜೆ ಗಣಿಯೊಳಗೆ ಸುಮಾರು 247 ಕಾರ್ಮಿಕರು ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಈ ಭೀಕರ ಸ್ಫೋಟ ಸಂಭವಿಸಿದೆ. ಶನಿವಾರ ಮುಂಜಾನೆಯ ವೇಳೆಗೆ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿ 201 ಗಣಿಗಾರರನ್ನು ಸುರಕ್ಷಿತವಾಗಿ ಮೇಲಕ್ಕೆ ತರುವಲ್ಲಿ ಯಶಸ್ವಿಯಾಗಿವೆ. ಗಣಿಯ ಆಳವಾದ ಸುರಂಗಗಳಲ್ಲಿ ಸಿಲುಕಿರುವ ಉಳಿದ ಕಾರ್ಮಿಕರನ್ನು ಪತ್ತೆಹಚ್ಚಲು ತುರ್ತು ಸಿಬ್ಬಂದಿ ಶನಿವಾರವೂ ಹುಡುಕಾಟ ಮುಂದುವರಿಸಿದ್ದಾರೆ. ದುರಂತದ ತೀವ್ರತೆಯನ್ನು ಪರಿಗಣಿಸಿ ಸ್ಥಳಕ್ಕೆ ಹೆಚ್ಚುವರಿ ರಕ್ಷಣಾ ಸಿಬ್ಬಂದಿ ಮತ್ತು ವೈದ್ಯಕೀಯ ತಂಡಗಳನ್ನು ನಿಯೋಜಿಸಲಾಗಿದೆ. ಈ ಮಧ್ಯೆ, ಲಿಯುಶೆನ್ಯು ಗಣಿಗೆ ಸಂಬಂಧಿಸಿದ ಕಂಪನಿಯ ಉನ್ನತ ಅಧಿಕಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಲ್ಲಿನ ಸರ್ಕಾರಿ ಮಾಧ್ಯಮಗಳು ವರದಿ ಮಾಡಿದ್ದರೂ, ಅವರ ಮೇಲಿನ…
ನವದೆಹಲಿ: ಭಾರತದ ಪ್ರಮುಖ ಭಾಗಗಳಲ್ಲಿ ಈ ತಿಂಗಳ ಕೊನೆಯವರೆಗೂ ತೀವ್ರ ಬಿಸಿಗಾಳಿ (Severe Heat Wave) ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆಯ ಸಲಹೆಯ ಪ್ರಕಾರ, ಮೇ 24 ರಿಂದ 29 ರ ಅವಧಿಯಲ್ಲಿ ವಾಯುವ್ಯ ಭಾರತದಲ್ಲಿ ಮತ್ತು ಮೇ 23 ರಿಂದ 26 ರ ಅವಧಿಯಲ್ಲಿ ಪೂರ್ವ ಪೆನಿನ್ಸುಲರ್ ಭಾರತದಲ್ಲಿ ಬಿಸಿಗಾಳಿಯ ತೀವ್ರ ಪ್ರಭಾವ ಕಂಡುಬರಲಿದೆ. ಇದೇ ಸಮಯದಲ್ಲಿ, ಕೇರಳ, ಲಕ್ಷದ್ವೀಪ, ತಮಿಳುನಾಡು ಹಾಗೂ ಈಶಾನ್ಯ ಭಾರತದ ಭಾಗಗಳಲ್ಲಿ ಮುಂದಿನ ನಾಲ್ಕೈದು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಮೇ 26 ಕ್ಕೆ ಮುಂಗಾರು ಆಗಮನದ ಮುನ್ಸೂಚನೆ ದೇಶದಾದ್ಯಂತ ತೀವ್ರ ತಾಪಮಾನ ಇರುವ ಬೆನ್ನಲ್ಲೇ ಸಮಾಧಾನಕರ ಸುದ್ದಿಯೊಂದನ್ನು ಹವಾಮಾನ ಇಲಾಖೆ ನೀಡಿದೆ. ನೈಋತ್ಯ ಮುಂಗಾರು ಶನಿವಾರದಂದು ಅರೇಬಿಯನ್ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಇನ್ನು ಕೆಲವು ಭಾಗಗಳಿಗೆ ಹಾಗೂ ಅಂಡಮಾನ್ ಸಮುದ್ರದ ಬಹುತೇಕ ಭಾಗಗಳಿಗೆ ಮತ್ತಷ್ಟು ವ್ಯಾಪಿಸಿದೆ. ಮುಂದಿನ…
ಇಸ್ಲಾಮಾಬಾದ್: 2019ರಲ್ಲಿ ನಡೆದ ಭೀಕರ ಪುಲ್ವಾಮಾ ಭಯೋತ್ಪಾದನಾ ದಾಳಿಯ ಪ್ರಮುಖ ಸಂಚುಗಾರರಲ್ಲಿ ಒಬ್ಬನೆನ್ನಲಾದ ಹಮ್ಜಾ ಬುರ್ಹಾನ್ ಅಂತ್ಯಕ್ರಿಯೆಯು ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನಲ್ಲಿ ನಡೆದಿದ್ದು, ಈ ವೇಳೆ ಪಾಕಿಸ್ತಾನದ ಮೋಸ್ಟ್ ವಾಂಟೆಡ್ ಉಗ್ರರು, ಹಿರಿಯ ಜಿಹಾದಿ ನಾಯಕರು ಹಾಗೂ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ (ISI) ಜೊತೆ ನಂಟು ಹೊಂದಿರುವ ವ್ಯಕ್ತಿಗಳು ಭಾರಿ ಸಂಖ್ಯೆಯಲ್ಲಿ ಜಮಾಯಿಸಿರುವುದು ಬೆಳಕಿಗೆ ಬಂದಿದೆ. ಕಾಲೇಜು ಪ್ರಾಂಶುಪಾಲನಾಗಿ ಅಡಗಿದ್ದ ಉಗ್ರನಿಗೆ ಗುಂಡಿನೇಟು ‘ಅರ್ಜುಮಂಡ್ ಗುಲ್ಜಾರ್ ದಾರ್’ ಮತ್ತು ‘ಡಾಕ್ಟರ್’ ಎಂಬ ಕೋಡ್ ನೇಮ್ಗಳಿಂದ ಗುರುತಿಸಿಕೊಳ್ಳುತ್ತಿದ್ದ ಹಮ್ಜಾ ಬುರ್ಹಾನ್, ಇತ್ತೀಚಿನ ವರ್ಷಗಳಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ (PoK) ಮುಜಾಫರಾಬಾದ್ನಲ್ಲಿ ನಾಗರಿಕ ಸೋಗಿನಲ್ಲಿ ಅಡಗಿಕೊಂಡಿದ್ದನು. ಅಲ್ಲಿನ ಖಾಸಗಿ ಕಾಲೇಜೊಂದರಲ್ಲಿ ಪ್ರಾಂಶುಪಾಲನಾಗಿ ಕೆಲಸ ಮಾಡುತ್ತಿದ್ದ ಈತನನ್ನು ಗುರುವಾರ ಮುಂಜಾನೆ ಕಾಲೇಜಿನಿಂದ ಹೊರಬರುತ್ತಿದ್ದಂತೆ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ. ಅತ್ಯಂತ ಹತ್ತಿರದಿಂದ ಆತನ ತಲೆಗೆ ಹಲವು ಬಾರಿ ಗುಂಡು ಹಾರಿಸಲಾಗಿದ್ದು, ತೀವ್ರ ಗಾಯಗೊಂಡಿದ್ದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ನಡೆದ ಮರುದಿನವೇ ಇಸ್ಲಾಮಾಬಾದ್ನಲ್ಲಿ ಆತನ…
ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರಿನ ಕಣ್ಣಂಪಾಳಯಂ ಕೆರೆಯ ಬಳಿ 10 ವರ್ಷದ ಬಾಲಕಿಯೊಬ್ಬಳ ಶವ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಕಳೆದ ಗುರುವಾರ (ಮೇ 21) ಸಂಜೆಯಿಂದ ನಾಪತ್ತೆಯಾಗಿದ್ದ ಬಾಲಕಿಯನ್ನು ಅಪಹರಿಸಿ ಭೀಕರವಾಗಿ ಕೊಲೆ ಮಾಡಲಾಗಿದೆ ಎಂದು ವರದಿಯಾಗಿದೆ. ಆಟವಾಡುತ್ತಿದ್ದ ಬಾಲಕಿಯ ಅಪಹರಣ ಮತ್ತು ಕೊಲೆ ವರದಿಗಳ ಪ್ರಕಾರ, ಬಾಲಕಿಯು ತನ್ನ ಮನೆಯ ಸಮೀಪ ಆಟವಾಡುತ್ತಿದ್ದಾಗ ಇಬ್ಬರು ಆರೋಪಿಗಳು ಆಕೆಯನ್ನು ಅಪಹರಿಸಿದ್ದರು. ಬಾಲಕಿಯ ತಂದೆಯ ಸೋದರ ಪಳನಿಸಾಮಿ ನೀಡಿರುವ ಮಾಹಿತಿ ಪ್ರಕಾರ, ಗುರುವಾರ ಸಂಜೆ ಹತ್ತಿರದ ಅಂಗಡಿಯಿಂದ ಹಿಂದಿರುಗಿದ ನಂತರ ಬಾಲಕಿ ನಾಪತ್ತೆಯಾಗಿದ್ದಾಡು ಎಂಬ ವಿಷಯ ಕುಟುಂಬಸ್ಥರಿಗೆ ತಿಳಿದುಬಂದಿತ್ತು. ತಕ್ಷಣವೇ ಹುಡುಕಾಟ ಆರಂಭಿಸಿದ ಕುಟುಂಬಕ್ಕೆ, ಬಾಲಕಿಯನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿರುವ ಆಘಾತಕಾರಿ ಸುದ್ದಿ ಸಿಕ್ಕಿದೆ. ಪೊಲೀಸರು ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಹನ್ ಮತ್ತು ಕಾರ್ತಿಕ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಾಲಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ…
ಬೆಂಗಳೂರು : ಕಾರ್ಮಿಕರ ಕನಿಷ್ಠ ವೇತನವನ್ನು ಸರಾಸರಿ ಶೇ 60 ರಷ್ಟು ಏರಿಕೆ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ರಾಜ್ಯದ ಕೋಟ್ಯಂತರ ಕಾರ್ಮಿಕರಿಗೆ ಸರ್ಕಾರ, ಕಾರ್ಮಿಕ ಇಲಾಖೆಯ ಮೂಲಕ ಭರ್ಜರಿ ಕೊಡುಗೆ ನೀಡಿದೆ. ಈ ಅಧಿಸೂಚನೆಯು ರಾಜ್ಯದ ಅಸಂಘಟಿತ ಮತ್ತು ನಿರ್ದಿಷ್ಟ ವಲಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಆರ್ಥಿಕ ಸೌಲಭ್ಯವನ್ನು ಒದಗಿಸಲಿದೆ. ಸುಪ್ರೀಂಕೋರ್ಟ್ ನಿರ್ದೇಶನದ ಅನ್ವಯ ಈ ವೇತನ ಪರಿಷ್ಕರಣೆಯನ್ನು ಮಾಡಲಾಗಿದೆ. ಒಂದೇ ಅಧಿಸೂಚನೆಯಡಿ ತರಲಾಗಿದೆ ಈ ಬಾರಿಯ ಅಧಿಸೂಚನೆಯ ವಿಶೇಷವೆಂದರೆ ಇದೇ ಮೊದಲ ಬಾರಿಗೆ ಎಲ್ಲಾ ನಿಗದಿತ ಉದ್ಯೋಗಗಳನ್ನು ಒಂದೇ ಅಧಿಸೂಚನೆಯಡಿ ತಂದಿರುವುದು. ಈ ಹಿಂದೆ ಇದ್ದ ನಾಲ್ಕು ವಲಯಗಳ ವರ್ಗೀಕರಣವನ್ನು ಮೂರು ವಲಯಗಳಿಗೆ ಪರಿಷ್ಕರಿಸಲಾಗಿದೆ. ಯಾರಿಗೆ ಲಾಭವಾಗಲಿ ನೂತನ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳ ಅಧಿಸೂಚನೆಯು ಖಾಸಗಿ ಶಾಲೆ- ಕಾಲೇಜು ಬೋಧಕೇತನ ಸಿಬ್ಬಂದಿ, ಇ-ಕಾಮರ್ಸ್ ವಲಯದ ನೌಕರರು ಮತ್ತು ಕೋರಿಯರ್ ಸಂಸ್ಥೆಗಳ ನೌಕರರು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ದುಡಿಯುವ ಸಿಬ್ಬಂದಿಗೂ ಲಾಭ ಮಾಡಿಕೊಟ್ಟಿದೆ. ಒಟ್ಟಾರೆಯಾಗಿ ಕರ್ನಾಟಕದಲ್ಲಿನ…
ಬೆಂಗಳೂರು: ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ವಸತಿ ಇಲಾಖೆ, ಕರ್ನಾಟಕ ಗೃಹ ಮಂಡಳಿ ಜಂಟಿಯಾಗಿ ಸೂರ್ಯಗ್ರಾಮದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಶಂಕುಸ್ಥಾಪನೆ, ಮುಖ್ಯಮಂತ್ರಿಗಳ “ನಮ್ಮ ಮನೆ” ಯೋಜನೆಗೆ ಚಾಲನೆ, ಸೂರ್ಯಶೈನ್, ಸೂರ್ಯ ಡಿವೈನ್ ವಸತಿ ಸಮುಚ್ಚಯ ಕಾಮಗಾರಿಗಳ ಶಂಕುಸ್ಥಾಪನೆ, ವಸತಿ ಯೋಜನೆಗೆ ಭೂಮಿ ನೀಡಿದ ಭೂ ಮಾಲೀಕರಿಗೆ ಸಾಂಕೇತಿಕ ನಿವೇಶನ ಹಂಚಿಕೆ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು. ಇಲ್ಲಿಯವರೆಗೂ ಕೇವಲ ವಸತಿ ನಿರ್ಮಾಣ ಮಾಡುತ್ತಿದ್ದ ವಸತಿ ಇಲಾಖೆ ಮತ್ತು KHB ಈಗ 80 ಸಾವಿರ ಆಸನ ವ್ಯವಸ್ಥೆಯ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವುದು ಪ್ರಗತಿಯ ದೂರದೃಷ್ಟಿಯಾಗಿದೆ . ಇದಕ್ಕಾಗಿ ಶಿವಲಿಂಗೇಗೌಡರು ಮತ್ತು ಜಮೀರ್ ಅಹಮದ್ ಅವರು ಅಭಿನಂದನಾರ್ಹರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಗುಜರಾತ್ ನಲ್ಲಿರುವ ಕ್ರೀಡಾಂಗಣ 90 ಸಾವಿರ…
ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನಶೈಲಿ, ತಪ್ಪು ಆಹಾರ ಪದ್ಧತಿ ಮತ್ತು ಅತಿಯಾದ ಒತ್ತಡದಿಂದಾಗಿ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿವೆ. ಹೃದಯವು ದೇಹದ ಪ್ರಮುಖ ಅಂಗವಾಗಿದ್ದು, ಅದು ದುರ್ಬಲಗೊಳ್ಳಲು ಪ್ರಾರಂಭಿಸಿದಾಗ ದೇಹವು ಕೆಲವು ಆರಂಭಿಕ ಮುನ್ಸೂಚನೆಗಳನ್ನು ನೀಡುತ್ತದೆ. ಇವುಗಳನ್ನು ಕಡೆಗಣಿಸದೆ ಸೂಕ್ತ ಸಮಯದಲ್ಲಿ ವೈದ್ಯರ ಬಳಿ ತಪಾಸಣೆ ಮಾಡಿಸಿಕೊಳ್ಳುವುದು ಜೀವ ರಕ್ಷಕವಾಗಬಲ್ಲದು. ಹೃದಯವು ದುರ್ಬಲವಾಗುತ್ತಿರುವುದನ್ನು ತೋರ್ಪಡಿಸುವ 10 ಪ್ರಮುಖ ಆರಂಭಿಕ ಲಕ್ಷಣಗಳು ಇಲ್ಲಿವೆ: 1. ಅತಿಯಾದ ಆಯಾಸ ಮತ್ತು ಸುಸ್ತು (Extreme Fatigue) ಯಾವುದೇ ಕಠಿಣ ಕೆಲಸ ಮಾಡದಿದ್ದರೂ ಸದಾ ಆಯಾಸ ಅಥವಾ ಅತಿಯಾದ ಸುಸ್ತು ಕಾಣಿಸಿಕೊಳ್ಳುವುದು ದುರ್ಬಲ ಹೃದಯದ ಪ್ರಮುಖ ಲಕ್ಷಣವಾಗಿದೆ. ಹೃದಯವು ದೇಹದ ಉಳಿದ ಅಂಗಗಳಿಗೆ ಸರಿಯಾಗಿ ರಕ್ತವನ್ನು ಪಂಪ್ ಮಾಡಲು ವಿಫಲವಾದಾಗ, ಸ್ನಾಯುಗಳು ಮತ್ತು ಅಂಗಾಂಶಗಳಿಗೆ ಅಗತ್ಯವಿರುವ ಆಮ್ಲಜನಕ ಸಿಗುವುದಿಲ್ಲ. ಇದರಿಂದಾಗಿ ಸಣ್ಣಪುಟ್ಟ ಕೆಲಸಗಳಿಗೂ ದೇಹ ಬೇಗನೆ ಸುಸ್ತಾಗುತ್ತದೆ. 2. ಉಸಿರಾಟದ ತೊಂದರೆ (Shortness of Breath) ಮೆಟ್ಟಿಲು ಹತ್ತುವಾಗ, ಸ್ವಲ್ಪ ದೂರ ನಡೆಯುವಾಗ ಅಥವಾ ಸಾಮಾನ್ಯ ಕೆಲಸಗಳನ್ನು…
ಬೆಂಗಳೂರು: ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯು ರಾಜ್ಯದ ವಿವಿಧ ಉದ್ದಿಮೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರ ಕನಿಷ್ಠ ವೇತನವನ್ನು ಪರಿಷ್ಕರಿಸಿ ದಿನಾಂಕ 22.05.2026 ರಂದು ಅಧಿಕೃತ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ. ರಾಜ್ಯದ ಎಲ್ಲಾ ವರ್ಗದ ಕಾರ್ಮಿಕರಿಗೂ ಸಮಾನ ಹಾಗೂ ನ್ಯಾಯಸಮ್ಮತ ವೇತನ ಒದಗಿಸುವ ನಿಟ್ಟಿನಲ್ಲಿ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಹಿನ್ನೆಲೆ ಮತ್ತು ನ್ಯಾಯಾಲಯದ ಆದೇಶಗಳು ರಾಜ್ಯದಲ್ಲಿ ಈ ಹಿಂದೆ 81 ಅನುಸೂಚಿತ ಉದ್ದಿಮೆಗಳಿಗೆ ಪ್ರತ್ಯೇಕವಾಗಿ ವೇತನ ದರಗಳನ್ನು ನಿಗದಿಪಡಿಸಲಾಗುತ್ತಿತ್ತು. 2022-23ನೇ ಸಾಲಿನಲ್ಲಿ 34 ವಿವಿಧ ಉದ್ದಿಮೆಗಳಿಗೆ ಚಾಲ್ತಿಯಲ್ಲಿದ್ದ ಕನಿಷ್ಠ ವೇತನಕ್ಕೆ ಹೆಚ್ಚುವರಿಯಾಗಿ ಶೇ. 5 ರಿಂದ 10 ರಷ್ಟು ಏರಿಕೆ ಮಾಡಿ ಅಧಿಸೂಚನೆ ಹೊರಡಿಸಲಾಗಿತ್ತು. ಇದನ್ನು ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಹೈಕೋರ್ಟ್ನಲ್ಲಿ ಪ್ರಶ್ನಿಸಿತ್ತು. ಮಾನ್ಯ ಉಚ್ಚ ನ್ಯಾಯಾಲಯವು ಹಳೆಯ ಅಧಿಸೂಚನೆಯನ್ನು ರದ್ದುಪಡಿಸಿ, ‘ಮೆ|| ರೆಪ್ಪಕೋಸ್ ಬ್ರೆಟ್ ಅಂಡ್ ಕಂ.’ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಮಾರ್ಗಸೂಚಿಗಳ ಅನ್ವಯ ಹೊಸದಾಗಿ ವೇತನ ಲೆಕ್ಕಾಚಾರ ಮಾಡಲು ನಿರ್ದೇಶಿಸಿತ್ತು. ಬಳಿಕ ವಿವಿಧ ಆಡಳಿತ…
ಶಿವಮೊಗ್ಗ: ಮೆಸ್ಕಾಂ ಸಂಸ್ಥೆಯ ಘನತೆಗೆ ಕುಂದು ಉಂಟುಮಾಡುವ ರೀತಿಯಲ್ಲಿ ನಡೆದುಕೊಂಡು, ಕರ್ತವ್ಯದಲ್ಲಿ ತೀವ್ರ ನಿರ್ಲಕ್ಷ್ಯ ವಹಿಸಿದ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗದ ಸೊರಬ ಉಪವಿಭಾಗದ ಉಳವಿ ಶಾಖೆಯ ಸಹಾಯಕ ಇಂಜಿನಿಯರ್ (ವಿದ್ಯುತ್) ಇಬ್ರಾಹಿಂ ಎನ್. ಅವರನ್ನು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ ಶಿವಮೊಗ್ಗ ಕಾರ್ಯ ಮತ್ತು ಪಾಲನಾ ವೃತ್ತದ ಅಧೀಕ್ಷಕ ಇಂಜಿನಿಯರ್ ಆದೇಶ ಹೊರಡಿಸಿದ್ದಾರೆ. ಸಚಿವರ ಆಪ್ತ ಕಾರ್ಯದರ್ಶಿಗೆ ಅಪಮಾನ ಮತ್ತು ಕರ್ತವ್ಯ ನಿರಾಕರಣೆ ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳಿಂದ ಉಳವಿ ಶಾಖೆಯ ವಿದ್ಯುತ್ ಸಮಸ್ಯೆಗಳ ಕುರಿತು ಸಾಲು-ಸಾಲು ದೂರುಗಳು ಬಂದ ಹಿನ್ನೆಲೆಯಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಅವರ ಆಪ್ತ ಕಾರ್ಯದರ್ಶಿ ವೀರಭದ್ರಪ್ಪ ಅವರು ಇಬ್ರಾಹಿಂ ಅವರಿಗೆ ಕಾನ್ಫರೆನ್ಸ್ ಕರೆಯಲ್ಲಿ ಸಂಪರ್ಕಿಸಿದ್ದರು. ಈ ವೇಳೆ ಬೇಜವಾಬ್ದಾರಿಯಿಂದ ಮಾತನಾಡಿದ ಇಬ್ರಾಹಿಂ, “ನನಗೆ ಉಳವಿ ಶಾಖೆಯಲ್ಲಿ ಕೆಲಸ ಮಾಡಲು ಇಷ್ಟವಿಲ್ಲ, ನೀವು ಏನು ಬೇಕಾದರೂ ಮಾಡಿ, ವರ್ಗಾವಣೆ…
ಮನೆಗಾಗಿ #ವಾಸ್ತು ವಿನ ಕೆಲವು ಮೂಲ ತತ್ವಗಳು ಕೋಣೆಯ ಆಕಾರ: ಹೊಸ ಮನೆಗೆ ವಾಸ್ತು ಸಲಹೆಗಳಲ್ಲಿ ಒಂದು ಕೋಣೆಗಳ ಆಕಾರವನ್ನು ಪರಿಶೀಲಿಸುವುದು. ಮನೆಗೆ ವಾಸ್ತು ಪ್ರಕಾರ, ಮನೆಯು ಚೌಕ ಅಥವಾ ಆಯತಾಕಾರದ ಆಕಾರದಲ್ಲಿರಬೇಕು. ಕೋಣೆಗೆ ಮೂಲ ವಾಸ್ತು: ಮನೆಯ ಕೋಣೆಗಳು ಚೆನ್ನಾಗಿ ಬೆಳಗಬೇಕು, ಗಾಳಿ ಮತ್ತು ಸ್ವಚ್ಛವಾಗಿರಬೇಕು. ಪೀಠೋಪಕರಣಗಳ ಬಗ್ಗೆ: ಮನೆಗೆ ವಾಸ್ತು ಪ್ರಕಾರ, ಹಾಸಿಗೆ ಮತ್ತು ಬೀರುಗಳಂತಹ ನಿಮ್ಮ ಭಾರವಾದ ಪೀಠೋಪಕರಣಗಳನ್ನು ನೈಋತ್ಯ ದಿಕ್ಕಿನಲ್ಲಿ ಇಡಬೇಕು. ಹೊಸ ಮನೆಗಾಗಿ ತ್ವರಿತ ವಾಸ್ತು ಸಲಹೆಯೆಂದರೆ ನೈಋತ್ಯ ದಿಕ್ಕಿನಲ್ಲಿ ಮೆಟ್ಟಿಲುಗಳನ್ನು ನಿರ್ಮಿಸುವುದು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ…














