Author: kannadanewsnow09

ಶಿವಮೊಗ್ಗ : ಮನರೇಗಾ ಹೆಸರನ್ನು ತೆಗೆದು ವಿಜಿ ರಾಮ್ ಜಿ ಹೆಸರನ್ನು ಉದ್ಯೋಗಖಾತ್ರಿಗೆ ಇರಿಸಲು ಮುಂದಾಗಿರುವ ಕೇಂದ್ರದ ಕ್ರಮ ಖಂಡನೀಯ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಕಿಡಿಕಾರಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನಗರಸಭೆ ಆವರಣದ ಗಾಂಧಿ ಪ್ರತಿಮೆ ಎದುರು ಸೋಮವಾರ ಬ್ಲಾಕ್ ಕಾಂಗ್ರೇಸ್ ವತಿಯಿಂದ ಕೇಂದ್ರ ಸರ್ಕಾರ ಮನರೇಗಾ ಹೆಸರು ಬದಲಾಯಿಸಿರುವ ಕ್ರಮ ಖಂಡಿಸಿ ಹಮ್ಮಿಕೊಳ್ಳಲಾಗಿದ್ದ ಧರಣಿ ಕಾರ್ಯಕ್ರಮವನ್ನು ಮಹಾತ್ಮಾ ಗಾಂಧಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಹೂವಿನ ಹಾರ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದಂತ ಅವರು, ಗ್ರಾಮೀಣ ಜನರ ಕೈಗೆ ಉದ್ಯೋಗ ಮತ್ತು ಗ್ರಾಮಾಂತರ ಪ್ರದೇಶಗಳ ಅಭಿವೃದ್ದಿಗಾಗಿ ಡಾ. ಮನಮೋಹನ್ ಸಿಂಗ್ ಅವರು ಉದ್ಯೋಗ ಖಾತ್ರಿ ಯೋಜನೆಯನ್ನು ಮಹಾತ್ಮಾ ಗಾಂಧಿಜಿಯವರ ಹೆಸರಿನಲ್ಲಿ ಅನುಷ್ಟಾನಕ್ಕೆ ತಂದರು. ಆದರೆ ಕೇಂದ್ರದ ಬಿಜೆಪಿ ನೇತೃತ್ವದ ಎನ್.ಡಿ.ಎ. ಸರ್ಕಾರ ಮಹಾತ್ಮಾ ಗಾಂಧಿ ಅವರ ಹೆಸರನ್ನು ತೆಗೆದು ಅವರಿಗೆ ಅವಮಾನ ಮಾಡುತ್ತಿದೆ. ಹಿಂದಿನಿಂದಲೂ ಬಿಜೆಪಿಯವರು…

Read More

ಮಂಗಳೂರು: ಪ್ರದೇಶ ಕಾಂಗ್ರೆಸ್ ಪಕ್ಷ ಇದೀಗ ಹೊಸ ಮನ್ವಂತರಕ್ಕೆ ಮುನ್ನುಡಿ ಬರೆದಿದೆ. ಕೇಂದ್ರದ ವಿರುದ್ಧ ‘ಓಟ್ ಚೋರಿ’ ಅಭಿಯಾನವನ್ನು ಬಿರುಸುಗೊಳಿಸಿರುವ ಕಾಂಗ್ರೆಸ್ ಪಕ್ಷ ಇದೀಗ ತನ್ನ ಈ ಹೋರಾಟವನ್ನು ಚುರುಕುಗೊಳಿಸಲು ‘ಲೀಗಲ್ ಬ್ಯಾಂಕ್’ ಅಸ್ತಿತ್ವಕ್ಕೆ ತಂದಿದೆ. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಪರಿಕಲ್ಪನೆಯಂತೆ ಕರ್ನಾಟಕದಲ್ಲಿ ‘ಲೀಗಲ್ ಬ್ಯಾಂಕ್’ ಅಸ್ತಿತ್ವಕ್ಕೆ ಬಂದಿದೆ. ಪಕ್ಷ ಸಂಘಟನೆಗೆ ಕಾನೂನು ಶಕ್ತಿ ತುಂಬುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಆರಂಭಿಸಲಾಗಿದ್ದು, ದಕ್ಷಿಣ ಭಾರತದಲ್ಲೇ ಮೊದಲೆಂಬಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಘಟಕ ಈ ‘ಲೀಗಲ್ ಬ್ಯಾಂಕ್’ ಸ್ಥಾಪಿಸಿ ಗಮನಸೆಳೆದಿದೆ. ಸುಮಾರು 250 ವಕೀಲರ ತಂಡ ಈ ‘ಲೀಗಲ್ ಬ್ಯಾಂಕ್’ ನಲ್ಲಿ ಕೈಜೋಡಿಸಿರುವುದು ವಿಶೇಷ. ಕೇಂದ್ರದ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸಲು ಅನುಕೂಲವಾಗುವಂತೆ ಎಲ್ಲಾ ಪ್ರಾದೇಶಿಕ ಸಮಿತಿಗಳು (PCC) ಹಾಗೂ ಜಿಲ್ಲಾ ಸಮಿತಿ (PCC), ಪ್ರತೀ ವಿಧಾನಸಭಾ ಕ್ಷೇತ್ರಗಳಲ್ಲಿ ‘ಲೀಗಲ್ ಬ್ಯಾಂಕ್’ ಸ್ಥಾಪಿಸಬೇಕೆಂಬುದು ರಾಹುಲ್ ಗಾಂಧಿಯವರ ಪರಿಕಲ್ಪನೆ. ಅವರ ಈ ಸೂತ್ರವನ್ನು ಅನುಷ್ಠಾನಗೊಳಿಸುವ ಸಂಬಂಧ ಎಐಸಿಸಿ ಕಾನೂನು…

Read More

ಬೆಂಗಳೂರು: ನಟಿ ರನ್ಯಾ ರಾವ್ ಅವರ ತಂದೆ, ಡಿಜಿಪಿ ಡಾ.ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲೇ ರಾಸಲೀಲೆಯಾಡಿದಂತ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಾಕಿಂಗ್ ಎನ್ನುವಂತೆ ಡಿಜಿಪಿ ಡಾ.ರಾಮಚಂದ್ರ ರಾವ್ ಅವರು ತಮ್ಮ ಡಿಜಿಪಿ ಕಚೇರಿಯಲ್ಲೇ ಸಮವಸ್ತ್ರದಲ್ಲಿ ಮಹಿಳೆಯರೊಂದಿಗೆ ರಾಸಲೀಲೆ ಆಡಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ವೈರಲ್ ಆಗಿರುವಂತ ವೀಡಿಯೋಗಳಲ್ಲಿ ಡಿಜಿಪಿ ಡಾ.ರಾಮಚಂದ್ರರಾವ್ ಅವರು ತಮ್ಮ ಕಚೇರಿಯಲ್ಲೇ ಕುಳಿತು, ಸಮವಸ್ತ್ರದಲ್ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರೋದನ್ನು ಕಾಣಬಹುದಾಗಿದೆ. ಹೀಗೆ ಪ್ರಸಿದ್ಧ ಮಾಡೆಲ್ ಒಬ್ಬರ ಜೊತೆಗೆ ಡಿಜಿಪಿ ಡಾ.ರಾಮಚಂದ್ರರಾವ್ ಸರಸ ಆಡುವಂತ ವೀಡಿಯೋ ಮಾಡಿಕೊಂಡಿದ್ದಾರೆ. ಡಿಜಿಪಿ ಕಚೇರಿಯಲ್ಲೇ ರಾಸಲೀಲೆಯನ್ನು ಡಾ.ರಾಮಚಂದ್ರ ರಾವ್ ಆಡಿರುವ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸೂಕ್ತ ಕ್ರಮಕ್ಕೂ ಸಾರ್ವಜನಿಕರು ಆಗ್ರಹಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Read More

ಬೆಂಗಳೂರು: ನಟಿ ರನ್ಯಾ ರಾವ್ ಅವರ ತಂದೆ, ಡಿಜಿಪಿ ಡಾ.ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲೇ ರಾಸಲೀಲೆಯಾಡಿದಂತ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಾಕಿಂಗ್ ಎನ್ನುವಂತೆ ಡಿಜಿಪಿ ಡಾ.ರಾಮಚಂದ್ರ ರಾವ್ ಅವರು ತಮ್ಮ ಡಿಜಿಪಿ ಕಚೇರಿಯಲ್ಲೇ ಸಮವಸ್ತ್ರದಲ್ಲಿ ಮಹಿಳೆಯರೊಂದಿಗೆ ರಾಸಲೀಲೆ ಆಡಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ವೈರಲ್ ಆಗಿರುವಂತ ವೀಡಿಯೋಗಳಲ್ಲಿ ಡಿಜಿಪಿ ಡಾ.ರಾಮಚಂದ್ರರಾವ್ ಅವರು ತಮ್ಮ ಕಚೇರಿಯಲ್ಲೇ ಕುಳಿತು, ಸಮವಸ್ತ್ರದಲ್ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರೋದನ್ನು ಕಾಣಬಹುದಾಗಿದೆ. ಹೀಗೆ ಪ್ರಸಿದ್ಧ ಮಾಡೆಲ್ ಒಬ್ಬರ ಜೊತೆಗೆ ಡಿಜಿಪಿ ಡಾ.ರಾಮಚಂದ್ರರಾವ್ ಸರಸ ಆಡುವಂತ ವೀಡಿಯೋ ಮಾಡಿಕೊಂಡಿದ್ದಾರೆ.

Read More

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದಾವೋಸ್ ವಿಶ್ವ ಆರ್ಥಿಕ ಶೃಂಗಸಭೆಯನ್ನು ದಿಢೀರ್ ರದ್ದು ಮಾಡಿದ್ದರು. ಅದರ ಹಿಂದಿನ ಕಾರಣವನ್ನು ವೀಡಿಯೋ ಸಹಿತ ಜೆಡಿಎಸ್ ರಿವೀಲ್ ಮಾಡಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್ ಪಕ್ಷವು, ಸಿಎಂ ಕುರ್ಚಿ ಹಿಂದೆ ಬಿದ್ದಿರುವ ಡಿಕೆ ಶಿವಕುಮಾರ್‌, ಸ್ವಾರ್ಥಕ್ಕಾಗಿ ಮೊದಲೇ ನಿಗದಿಯಾಗಿದ್ದ ದಾವೋಸ್‌ ವಿಶ್ವ ಆರ್ಥಿಕ ಶೃಂಗಸಭೆ ಪ್ರವಾಸವನ್ನೇ ರದ್ದು ಮಾಡಿದ್ದಾರೆ ಎಂದಿದೆ. ಹೂಡಿಕೆ, ಉದ್ಯೋಗ ಮತ್ತು ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವಹಿಸುವ ಜಾಗತಿಕ ಆರ್ಥಿಕ ಶೃಂಗಸಭೆಯನ್ನು ನೆರೆಯ ರಾಜ್ಯಗಳ ನಾಯಕರು ವೇದಿಕೆಯನ್ನಾಗಿಸಿಕೊಂಡಿದ್ದಾರೆ ಎಂದು ಹೇಳಿದೆ. ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಕುರ್ಚಿ ಆಸೆಗಾಗಿ ರಾಜ್ಯದ ಅಭಿವೃದ್ಧಿ ಹಾಗೂ ಜನರ ಹಿತಾಸಕ್ತಿಯನ್ನು ಬಲಿಕೊಡುತ್ತಿದ್ದಾರೆ ಎಂಬುದಾಗಿ ಆಕ್ರೋಶ ಹೊರ ಹಾಕಿದೆ. https://twitter.com/JanataDal_S/status/2013158992072343682

Read More

ಮೈಸೂರು: ಜಿಲ್ಲೆಯ ಟಿ.ನರಸೀಪುರದ ವಲಯ ಅರಣ್ಯಾಧಿಕಾರಿಯಾಗಿದ್ದಂತ ಕಾಂತರಾಜ್ ಚೌಹಾಣ್ ಅವರು ಶವವಾಗಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಟಿ.ನರಸೀಪುರ ವಲಯ ಅರಣ್ಯಾಧಿಕಾರಿ(RFO) ಕಾಂತರಾಜ್ ಚೌಹಾಣ್ ಅವರು ಶವವಾಗಿ ಪತ್ತೆಯಾಗಿದ್ದಾರೆ. ಮೈಸೂರು ಕೇಂದ್ರ ಬಸ್ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್ ನಲ್ಲಿ ಅವರ ಶವಪತ್ತೆಯಾಗಿದೆ. ನಿನ್ನೆ ಮಧ್ಯಾಹ್ನ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ರೂಮ್ ಬುಕ್ ಮಾಡಿಕೊಂಡು ಆರ್ ಎಫ್ ಓ ಕಾಂತರಾಜ್ ಶವ ಪತ್ತೆಯಾಗಿದೆ. ಸ್ನೇಹಿತ ಮಲ್ಲನಗೌಡ ಜೊತೆಗೆ ರೂಮ್ ಬುಕ್ ಮಾಡಿಕೊಂಡಿದ್ದರು. 15 ದಿನಗಳ ಹಿಂದಷ್ಟೇ ನರಸೀಪುರಕ್ಕೆ ಆರ್ ಎಫ್ ಓ ಆಗಿ ಕಾಂತರಾಜ್ ವರ್ಗಾವಣೆಗೊಂಡಿದ್ದರು. ಈ ಬೆನ್ನಲ್ಲೇ ಅವರು ಖಾಸಗಿ ಹೋಟೆಲ್ ನಲ್ಲಿ ಶವವಾಗಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಶ್ರೀನಗರ: ಸೋಮವಾರ ಲಡಾಖ್ ಪ್ರದೇಶದ ಲೇಹ್ ಪ್ರದೇಶದಲ್ಲಿ ಭೂಕಂಪದ ಕೇಂದ್ರಬಿಂದು ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ವಿವಿಧ ತೀವ್ರತೆಯ ಕಂಪನಗಳು ಕಂಡುಬಂದಿವೆ. ಸ್ಥಳೀಯ ಹವಾಮಾನ ಇಲಾಖೆಯ ನಿರ್ದೇಶಕ ಮುಖ್ತಾರ್ ಅಹ್ಮದ್ ಐಎಎನ್‌ಎಸ್‌ಗೆ ತಿಳಿಸಿದ್ದು, “ಇಂದು ಬೆಳಿಗ್ಗೆ 11.51 ಕ್ಕೆ ಲಡಾಖ್ ಪ್ರದೇಶದ ಲೇಹ್ ಪ್ರದೇಶದಲ್ಲಿ ಭೂಕಂಪದ ಕೇಂದ್ರಬಿಂದು ಸಂಭವಿಸಿದೆ. “ಭೂಕಂಪದ ನಿರ್ದೇಶಾಂಕಗಳು ಉತ್ತರಕ್ಕೆ 36.71 ಅಕ್ಷಾಂಶ ಮತ್ತು ಪೂರ್ವಕ್ಕೆ 74.32 ರೇಖಾಂಶದಲ್ಲಿವೆ. ಇದು ಭೂಮಿಯ ಹೊರಪದರದೊಳಗೆ 171 ಕಿ.ಮೀ ದೂರದಲ್ಲಿ ಸಂಭವಿಸಿದೆ.” ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪದ ತೀವ್ರತೆಯು ವಿವಿಧ ಹಂತಗಳಲ್ಲಿ ಅನುಭವಿಸಿದೆ. ಇಲ್ಲಿಯವರೆಗೆ, ಯಾವುದೇ ಸಾವುನೋವುಗಳು ಅಥವಾ ಆಸ್ತಿಪಾಸ್ತಿ ಹಾನಿಯ ವರದಿಗಳು ಎಲ್ಲಿಂದಲೂ ಬಂದಿಲ್ಲ.

Read More

ಬೆಂಗಳೂರು: ಫೋಕ್ಸೋ ಕಾಯ್ದೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ವಿರುದ್ಧ ಎಫ್​​​​​​ಐಆರ್ ದಾಖಲಾಗಿದೆ.  ಬಳ್ಳಾರಿಯ ಎಪಿಎಂಸಿ ಠಾಣೆ ಸಿಪಿಐ ಮೊಹಮ್ಮದ್ ರಫಿಕ್  ಎಂಬುವರು,ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೊಟ್ಟಿದ್ದ ದೂರಿನ ಮೇರೆಗೆ ಶ್ರೀರಾಮುಲು ಮೇಲೆ ಎಫ್​​​​ಐಆರ್ ದಾಖಲಿಸಲಾಗಿದೆ. ಬ್ಯಾನರ್ ಗಲಾಟೆ ಖಂಡಿಸಿ ಬಿಜೆಪಿ, ಜ.17ರಂದು ಬಳ್ಳಾರಿಯ ಎಪಿಎಂಸಿ ಆವರಣದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಆಯೋಜಿಸಿತ್ತು. ಈ ಸಮಾವೇಶದಲ್ಲಿ ಬಳ್ಳಾರಿ ಗಾಂಜಾ, ಡ್ರಗ್ಸ್ ಹಬ್ ಆಗಿದೆ ಎಂದು ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಶ್ರೀರಾಮುಲು, ಫೋಕ್ಸೋ ಪ್ರಕರಣದಲ್ಲಿ ಬಾಲಕಿಯ ಹೆಸರು, ಶಾಲೆ ಮತ್ತು ವಿವರ ಬಹಿರಂಗಪಡಿಸಿದ್ದರು. ಫೋಕ್ಸೋ ಆ್ಯಕ್ಟ್ ಪ್ರಕಾರ ಯಾವುದೇ ಕಾರಣಕ್ಕೂ ನೊಂದ ಬಾಲಕಿ ಹೆಸರು, ವಿವರ ಬಹಿರಂಗಪಡಿಸುವಂತಿಲ್ಲ. ಹಾಗಾಗಿ, ಒಂದು ವೇಳೆ ಸಂತ್ರಸ್ತೆ  ಹೆಸರು ಬಹಿರಂಗಪಡಿಸಿದರೆ ಇಂತಹ  ಪ್ರಕರಣದಲ್ಲಿ 6 ತಿಂಗಳು ಜೈಲುವಾಸ ಮತ್ತು 2 ಲಕ್ಷ ರೂ.ವರೆಗೆ ದಂಡ ಹಾಕುವ ಸಾಧ್ಯತೆ ಇರುತ್ತದೆ.

Read More

ಶಿವಮೊಗ್ಗ: ರಾಜ್ಯದ ಹಲವೆಡೆ ಶನೀಶ್ವರ ದೇವಾಲಯಗಳಿರಬಹುದು. ನೀವುಗಳು ಭೇಟಿ ಕೂಡ ನೀಡಿರಬೇಹುದು. ಆದರೇ ಅದಕ್ಕಿಂತಲೂ ಭಾರೀ ಪವರ್ ಪುಲ್ ದೇವಾಲ ಅನ್ನೋದು ಭಕ್ತರ ನಂಬಿಕೆ. ಇಲ್ಲಿಗೆ ಭೇಟಿ ನೀಡಿ ತಮ್ಮ ಕಷ್ಟ ನಿವಾರಣೆಯ ಕೋರಿಕೆ ಮಾಡಿದ್ರೆ ನಿವಾರಣೆ ಗ್ಯಾರಂಟಿ ಅನ್ನೋದು ಹಲವರ ಮಾತು. ಹಾಗಾದ್ರೆ ಅದೆಲ್ಲಿದೆ? ಏನು ಅದರ ಮಹತಾತ್ಮೆ ಅಂತ ಮುಂದೆ ಓದಿ. ಹೌದು.. ಹೀಗೊಂದು ಪವರ್ ಪುಲ್ ಶನೇಶ್ವರ ದೇವಾಲಯ ಇರೋದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಣಪಗಾರು ಗ್ರಾಮದ ಕಂಚಿಗದ್ದೆಯಲ್ಲಿ. ಶ್ರೀ ಕ್ಷೇತ್ರ ಕಂಚಿಗದ್ದೆಯ ಶನೀಶ್ವರ ದೇವಾಲಯ ಮಾತ್ರ ಸಕಲ ಕಷ್ಟಗಳನ್ನು ನಿವಾರಿಸುವ ಶಕ್ತಿ ದೇವರೆಂದೇ ಪ್ರಸಿದ್ಧಿಯಾಗಿದೆ. ಭಕ್ತರ ದಂಡೇ ಆಗಮನ ಇಲ್ಲಿಗೆ ಶಿವಮೊಗ್ಗ, ಸಾಗರ, ಕಾರ್ಗಲ್, ಮಂಗಳೂರು, ಭಟ್ಕಳ ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಭಕ್ತರ ದಂಡೇ ಆಗಮಿಸುತ್ತದೆ. ಶನಿವಾರದಂದು ಇದು ಹೆಚ್ಚೇ ಆಗಿರುತ್ತದೆ. ಭಕ್ತರ ಕಷ್ಟಗಳನ್ನು ಕೇಳುವಂತ ಪೂಜಾರಿ ಬಂಗಾರಪ್ಪನವರು, ಹೇಳಿಕೆಯ ಮೂಲಕ ಪರಿಹಾರವನ್ನು ಸೂಚಿಸೋದು ಮಾತ್ರ ವಿಶಿಷ್ಟದಲ್ಲಿ ವಿಶಿಷ್ಟವಾಗಿದೆ. ಏನೆಲ್ಲ ಸಮಸ್ಯೆಗಳ ನಿವಾರಣೆಗೆ ಹರಕೆ…

Read More

ಬೆಂಗಳೂರು: ಕನ್ನಡದ ಕಿರುತೆರೆಯ ಜನಪ್ರಿಯ ರಿಯಾಲಿಟ ಶೋ ಬಿಗ್ ಬಾಸ್ ಸೀಸನ್ 12 ಗ್ರ್ಯಾಂಡ್ ಫಿನಾಲೆಯಲ್ಲಿ ಗಿಲ್ಲಿ ನಟ ವಿನ್ನರ್ ಆಗಿದ್ದಾರೆ. ಕೋಟ್ಯಂತ ಅಭಿಮಾನಿಗಳ ನಿರೀಕ್ಷೆಯಂತೆ ಕೊನೆಗೊ ಗಿಲ್ಲಿ ನಟ ಟ್ರೋಫಿಯನ್ನ ತನ್ನದಾಗಿಸಿಕೊಂಡಿದ್ದಾನೆ. ತನ್ನ ಜಯವನ್ನು ಅಭಿಮಾನಿಗಳಿಗೆ ಅರ್ಪಿಸಿದ ಗಿಲ್ಲಿ ನಟ ನನ್ನ ಮೇಲೆ ನಂಬಿಕೆ ಇಟ್ಟು ಬೆಂಬಲಿಸಿದ ಎಲ್ಲರಿಗೂ ಈ ಟ್ರೋಫಿ ಅರ್ಪಣೆ ಎಂದಿದ್ದಾರೆ. ಈ ಮೂಲಕ ಬಿಗ್ ಬಾಸ್ ಇತಿಹಾಸದಲ್ಲಿ ತನ್ನ ಹೆಸರನ್ನು ಚಿನ್ನದ ಅಕ್ಷರದಲ್ಲಿ ಬರೆಯಿಸಿಕೊಂಡಿದ್ದಾರೆ.

Read More