Author: kannadanewsnow09

ಬೆಂಗಳೂರು: ಕೆ ಎಸ್ ಡಿ ಎಲ್ ಮತ್ತು ಕೃಷಿ ಮಾರಾಟ ಇಲಾಖೆಯ ವಿವಿಧ ಹುದ್ದೆಗಳಿಗೆ ಜನವರಿ 10 ಮತ್ತು 12ರ ಬದಲಿಗೆ ಜನವರಿ 18ರಂದು ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಕೃಷಿ‌ ಮಾರಾಟ ಇಲಾಖೆಯ ಮಾರುಕಟ್ಟೆ ಮೇಲ್ವಿಚಾರಕ ಹುದ್ದೆಗೆ ಜನವರಿ 10ರಂದು ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಲಿಮಿಟೆಡ್‌ ನ ಕಿರಿಯ ಅಧಿಕಾರಿ (ಉತ್ಪಾದನೆ ಮತ್ತು ನಿರ್ವಹಣೆ), ಕಿರಿಯ ಅಧಿಕಾರಿ (ಸಾಮಗ್ರಿ ಮತ್ತು ಉಗ್ರಾಣ) ಹುದ್ದೆಗಳಿಗೆ ಜನವರಿ 12ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಈ ದಿನಾಂಕಗಳ ಬದಲಿಗೆ ಜನವರಿ 18 ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಉಳಿದಂತೆ ಜನವರಿ 19ರ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಹೆಚ್ಚಿನ ವಿವರಗಳಿಗೆ ಕೆಇಎ ವೆಬ್ ಸೈಟ್ ನೋಡಲು ಅವರು ಕೋರಿದ್ದಾರೆ. https://kannadanewsnow.com/kannada/good-news-for-primary-school-teachers-in-the-state-schedule-announced-for-promotion-to-the-post-of-head-teacher-through-counseling/ https://kannadanewsnow.com/kannada/anti-hindu-policy-injustice-to-the-state-in-the-name-of-guarantee-bjp-state-president-b-y-vijayendra/

Read More

ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ ಎನ್ನುವಂತೆ 2025-26ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಿಗೆ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಕೌನ್ಸಿಲಿಂಗ್‌ ಮೂಲಕ ಬಡ್ತಿಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಅಧಿಸೂಚನೆ ಹೊರಡಿಸಿದ್ದು,  ಕರ್ನಾಟಕ ಸರ್ಕಾರಿ ನೌಕರರ(ಜೇಷ್ಟತಾ) ನಿಯಮಗಳು-1957ರ ನಿಯಮಗಳ ಪ್ರಕಾರ 2025-26ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ (HM) ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಹಿರಿಯ ಮುಖ್ಯ ಶಿಕ್ಷಕರ (SHM) ವೃಂದಕ್ಕೆ ಸ್ಥಾನಪನ್ನ ಬಡ್ತಿ ನೀಡಲು ಉದ್ದೇಶಿಸಿದೆ. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರುಗಳಿಗೆ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆ-2020ರ ಸೆಕ್ಷನ್ 3ರ ಪ್ರಕಾರೆ ‘ಸಿ’ ವೃಂದದ ಹುದ್ದೆಗಳಿಗೆ ಬಡ್ತಿ ನೀಡಲು ಕ್ರಮವಹಿಸಬೇಕಾಗುತ್ತದೆ ಎಂದಿದ್ದಾರೆ. ಪ್ರಯುಕ್ತ, ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರುಗಳಿಗೆ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು ಜೇಷ್ಟತಾ ನಿಯಮಾನುಸಾರ ಆಯಾ ವೃಂದವಾರು ಪ್ರಕಟಿಸಲಾಗಿರುವ ಜಿಲ್ಲಾ ಅಂತಿಮ ಜೇಷ್ಟತಾ…

Read More

ನವದೆಹಲಿ: 2025ನೇ ಸಾಲಿನ ವರ್ಷವು ಭಾರತದ ಅಭಿವೃದ್ಧಿ ಪಯಣದಲ್ಲಿ ನಿರ್ಣಾಯಕ ಅಧ್ಯಾಯವಾಗಿ ನಿಂತಿದೆ. ರೈಲು, ರಸ್ತೆ, ವಾಯುಯಾನ, ಸಮುದ್ರ ಮತ್ತು ಡಿಜಿಟಲ್ ಸೇರಿದಂತೆ ಮೂಲಸೌಕರ್ಯದ ಪ್ರತಿಯೊಂದು ಆಯಾಮದಲ್ಲೂ ಭಾರತದ ಅಭಿವೃದ್ಧಿ ಮಹತ್ವಾಕಾಂಕ್ಷೆಗಳನ್ನು ಲಕ್ಷಾಂತರ ನಾಗರಿಕರ ಪಾಲಿಗೆ ಮೂರ್ತರೂಪದ ವಾಸ್ತವವಾಗಿ ಈ ವರ್ಷವು ಸಾಕಾರಗೊಳಿಸಿದೆ. ದೂರದ ಗಡಿಗಳಿಂದ ದೇಶದ ಅತಿದೊಡ್ಡ ನಗರ ಕೇಂದ್ರಗಳವರೆಗೆ, ಸಂಪರ್ಕವು ವ್ಯಾಪಿಸಿದೆ, ದೂರಗಳು ಕುಗ್ಗಿವೆ ಮತ್ತು ಆಕಾಂಕ್ಷೆಗಳ ಅಡಿಪಾಯವು ಉಕ್ಕು, ಕಾಂಕ್ರೀಟ್‌ನಿಂದ ಮತ್ತಷ್ಟು ಗಟ್ಟಿಗೊಂಡಿದೆ. ಮೂಲಸೌಕರ್ಯಕ್ಕಾಗಿ ಸರ್ಕಾರದ ಬಂಡವಾಳ ಹೂಡಿಕೆ ವೆಚ್ಚವು 2025-26ರ ಹಣಕಾಸು ವರ್ಷದಲ್ಲಿ 11.21 ಲಕ್ಷ ಕೋಟಿ ರೂ.ಗೆ (ಸುಮಾರು 128.64 ಬಿಲಿಯನ್ ಡಾಲರ್) ಏರಿದೆ. ಇದು ಜಿಡಿಪಿಯ ಶೇ.3.1 ರಷ್ಟಿದೆ. ಭಾರತವು 2047ರ ವೇಳೆಗೆ ಪ್ರತಿ 12-18 ತಿಂಗಳಿಗೊಮ್ಮೆ ತನ್ನ ಜಿಡಿಪಿಗೆ 1 ಟ್ರಿಲಿಯನ್ ಡಾಲರ್ ಸೇರಿಸುವ ನಿರೀಕ್ಷೆಯಿದೆ. ಮೂಲಸೌಕರ್ಯವು ಆರ್ಥಿಕ ಬೆಳವಣಿಗೆಯ ಗುಣಕವಾಗಿದೆ, ಮತ್ತು 2025ನೇ ಸಾಲಿನ ವರ್ಷವು ಈ ಗುಣಕವು ದೃಗ್ಗೋಚರ ಆದಾಯವನ್ನು ನೀಡಲು ಪ್ರಾರಂಭಿಸಿದ ವರ್ಷವಾಗಿದೆ ಭಾರತದ ರಾಷ್ಟ್ರೀಯ ರೈಲ್ವೆ ಜಾಲಕ್ಕೆ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರಕಾರವು ಗೊಂದಲದ ಹಾಗೂ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಗ್ಯಾರಂಟಿ ಹೆಸರು ಹೇಳಿಕೊಂಡು ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಹತ್ವದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳದ ಬುರುಡೆ ಗ್ಯಾಂಗ್ ವಿಚಾರ- ಹಿಂದೂ ಭಾವನೆಗಳಿಗೆ ಧಕ್ಕೆ ತರುವ ಷಡ್ಯಂತ್ರ ಕುರಿತು ರಾಜ್ಯ, ದೇಶ, ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ನಡೆದಿದೆ. ಅಪಪ್ರಚಾರದಿಂದ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರನ ಭಕ್ತಾದಿಗಳಿಗೆ ಆದ ಮಾನಸಿಕ ಕಿರುಕುಳದ ಚರ್ಚೆಯೂ ಆಗಿದೆ ಎಂದರು. ಅರ್ಬನ್ ನಕ್ಸಲರ ಕೋರಿಕೆ ಮೇರೆಗೆ ಮುಖ್ಯಮಂತ್ರಿ ರಾತ್ರೋರಾತ್ರಿ ಎಸ್.ಐ.ಟಿ. ರಚಿಸಿದ್ದರು. ನಾವು ಕೂಡ ಧರ್ಮಸ್ಥಳ ಚಲೋ ಮೂಲಕ ಜಾಗೃತಿ, ಸರಕಾರದ ಬೇಜವಾಬ್ದಾರಿತನದ ರಾಜ್ಯದ ಜನರ ಗಮನಕ್ಕೆ ತರುವ ಕೆಲಸ ಮಾಡಿದ್ದೇವೆ ಎಂದು ಹೇಳಿದರು. ಹಾದಿಬೀದಿಯಲ್ಲಿ ಹೋಗುವವರ ಮಾತು ಕೇಳಿ ಮುಖ್ಯಮಂತ್ರಿಗಳು ಕೋಟ್ಯಂತರ ಭಕ್ತರ ಭಾವನೆಗೆ ಧಕ್ಕೆ ತರುವ ತೀರ್ಮಾನ ಮಾಡಿದ್ದಾರಲ್ಲವೇ?…

Read More

ನವದೆಹಲಿ : ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು  ವಿಬಿ ಜಿ  ರಾಮ್ ಜಿ ಎಂದು ಬದಲಾಯಿಸಲಾಗಿದ್ದು ಜನವರಿ ಐದರಿಂದ ದೇಶಾದ್ಯಂತ  ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು  ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಬೆಂಗಳೂರಿನ ಯಲಹಂಕದ ಫಕೀರ್  ಕಾಲೋನಿ ಮತ್ತು ವಸೀಮ್ ಲೇಔಟ್ ನ ವಸತಿಗಳನ್ನು ನೆಲಸಮಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಆ ಪ್ರದೇಶ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಪ್ರದೇಶವಾಗಿದ್ದು, ಅದು ಜನವಸತಿಗೆ ಸೂಕ್ತವಾದ ಪ್ರದೇಶವಲ್ಲ. ಆದ್ದರಿಂದ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನೆಲೆಸಿದ್ದವರಿಗೆ ನೋಟೀಸ್ ನೀಡಿ ತೆರವುಗೊಳಿಸಲು ಸೂಚನೆ ನೀಡಲಾಗಿತ್ತು. ಆದರೆ ಸರ್ಕಾರದ ಸೂಚನೆಗೆ ಮಣಿಯದೇ ಇದ್ದ ಕಾರಣ, ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಬಹುತೇಕ ಜನರು ವಲಸಿಗರಾಗಿದ್ದು, ಮಾನವೀಯತೆಯ ದೃಷ್ಟಿಯಿಂದ ನಿರಾಶ್ರಿತರಿಗೆ  ಉಳಿದುಕೊಳ್ಳಲು ಪರ್ಯಾಯ ವ್ಯವಸ್ಥೆ ಇಲಾಖೆಯ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ  ಸೂಚಿಸಲಾಗಿದೆ ಎಂದರು. https://kannadanewsnow.com/kannada/minister-priyank-kharge-launches-a-scathing-attack-on-the-central-government/ https://kannadanewsnow.com/kannada/7-8-of-the-world-will-sink-in-2026-kodimaths-shocking-prediction-on-new-years-eve/

Read More

ಬೆಂಗಳೂರು: ಮೋದಿ ಸರ್ಕಾರ ಸಂಸತ್ತಿನಲ್ಲಿ ಯಾವುದೇ ಚರ್ಚೆ ಮಾಡದೇ ವಿಬಿ ಜಿ ರಾಮ್ ಜಿ ಮಸೂದೆ ಅಂಗೀಕರಿಸಿದ್ದಾರೆ. ಮನರೇಗಾ ಯೋಜನೆ ಕಾಯ್ದೆ ಸುಧಾರಿಸಿದ್ದೇವೆ ಎಂದು ಹೇಳುತ್ತಿದ್ದಾರೆ. ಇವರು ಸುಧಾರಿಸಿಯೂ ಇಲ್ಲ, ಸಬಲೀಕರಣ ಮಾಡಿಲ್ಲ. ಮನರೇಗಾ ಕಾಯ್ದೆಯನ್ನು ತೆಗೆದು ಹಾಕಿದ್ದಾರೆ ಎಂಬುದಾಗಿ ಕೇಂದ್ರ ಸರ್ಕಾರದ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು,  ಕಳೆದ 19-20 ವರ್ಷಗಳಿಂದ ಉದ್ಯೋಗ ಖಾತರಿ ಯೋಜನೆಯು ಗ್ರಾಮೀಣ ಪ್ರದೇಶದಲ್ಲಿ ಜೀವನೋಪಾಯದ ಗ್ಯಾರಂಟಿ ನೀಡಿತ್ತು. ಮೋದಿ ಸರ್ಕಾರ ಈ ಗ್ಯಾರಂಟಿ ಕಸಿದುಕೊಂಡಿದೆ. ಬೇಡಿಕೆ ಆಧಾರಿತ ಯೋಜನೆ, ವಿತರಣೆ ಆಧಾರಿತ ಯೋಜನೆಯಾಗಿದೆ. ಈ ಹಿಂದೆ ಕೇಂದ್ರ ಸರ್ಕಾರ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡಿತ್ತು. ಈಗ ಇದು ಕಾಯ್ದೆಯಾಗಿ ಉಳಿದಿಲ್ಲ. ಇತರೆ ಸರ್ಕಾರಿ ಯೋಜನೆಗಳಲ್ಲಿ ಒಂದಾಗಿದೆ ಎಂದಿದ್ದಾರೆ. ಮೋದಿ ಸರ್ಕಾರ ವಿಬಿ ಜಿ ರಾಮ್ ಜಿ ಬಿಲ್ ತಂರುವ ಮೂಲಕ 3 ಪ್ರಮುಖ ಸಂವಿಧಾನಿಕ ಹಕ್ಕು ಮೊಟಕುಗೊಳಿಸಿದೆ.ಜೀವನೋಪಾಯದ ಹಕ್ಕು ಕಸಿದಿರುವುದು, ಪಂಚಾಯಿತಿಗಳ ಹಕ್ಕು ಕಸಿದಿದೆ. ರಾಜ್ಯ…

Read More

ಬೆಳಗಾವಿ: 2025ಕ್ಕಿಂತ 2026ರಲ್ಲಿ ಕಷ್ಟಗಳು, ಸವಾಲುಗಳು ಹೆಚ್ಚಿರಲಿವೆ. 2026ಕ್ಕೆ ಜಗತ್ತೇ ಮುಳುಗುತ್ತೆ. ಶೇ.7-8% ನಷ್ಟು ಜಗತ್ತೇ 2026ರಲ್ಲಿ ಮುಳುಗಿ ಹೋಗುತ್ತದೆ ಎಂಬುದಾಗಿ ಹೊಸ ವರ್ಷ ಸಮೀಪಿಸುತ್ತಿರುವ ಸಂದರ್ಭದಲ್ಲೇ ಕೋಡಿಮಠ ಶ್ರೀಗಳು ಶಾಕಿಂಗ್ ಭವಿಷ್ಯವನ್ನು ನುಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಂಕ್ರಾಂತಿ ಫಲದಲ್ಲಿ ಸೂರ್ಯನು ಉತ್ತರಾಯಣದ ಕಡೆ ಹೋಗುತ್ತಾನೆ. ಇದು ರಾಜ-ಮಹಾರಾಜರು, ವ್ಯಾಪಾರಸ್ಥರಿಗೆ, ದುಡಿಮೆದಾರರಿಗೆ ಉತ್ತಮ ಲಾಭ ತಂದುಕೊಡಲಿದೆ ಎಂದಿದ್ದಾರೆ. 2025ಕ್ಕಿಂತ 2026ರಲ್ಲಿ ಕಷ್ಟಗಳು, ಸವಾಲುಗಳು ಹೆಚ್ಚಾಗಿ ಇರಲಿದ್ದಾವೆ. ಯುಗಾದಿ ಕಳೆದ ಮೇಲೆ ಮಳೆ, ಬೆಳೆ ಬಗ್ಗೆ ರೈತರು, ಭೂಮಿ ಬಗ್ಗೆ ಹೇಳುತ್ತೇನೆ. ಆದರೇ 2026ರಲ್ಲಿ ಜಗತ್ತಿಗೆ ಕಷ್ಟಗಳ ಸರಮಾಲೆಯನ್ನೇ ತರಲಿದೆ ಎಂಬುದಾಗಿ ಶಾಕಿಂಗ್ ಭವಿಷ್ಯ ನುಡಿದರು. 2026ರಲ್ಲಿ ಭಾರೀ ಪ್ರಮಾಣದಲ್ಲಿ ಮಳೆ, ಪ್ರವಾಹ ಎದುರಾಗಲಿದೆ. ಆಪತ್ತಿನಿಂದಾಗಿ ಏಳೆಂಟು ಪರ್ಸೆಂಟ್ ಈ ಜಗತ್ತೇ ಮುಳುಗುವ ಲಕ್ಷಣ ಗೋಚರಲಾಗುತ್ತಿದೆ ಎಂಬುದಾಗಿ ಹೇಳುವ ಮೂಲಕ, ಜಗತ್ತು ಮುಳುಗೋ ಶಾಕಿಂಗ್ ವಿಷಯವನ್ನು ತಮ್ಮ ಭವಿಷ್ಯದಲ್ಲಿ ತೆರೆದಿಟ್ಟಿದ್ದಾರೆ. ಅಲ್ಲದೇ ಯುಗಾದಿಯ ನಂತ್ರ ನಿಖವಾದ, ವಿಸ್ತೃತ ಮಾಹಿತಿ ನೀಡುವುದಾಗಿ…

Read More

ಬೆಳಗಾವಿ: ರಾಜ್ಯದಲ್ಲಿ ಅಧಿಕಾರ ಗದ್ದುಗೆಯ ಕಿತ್ತಾಟದ ನಡುವೆ, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಕುರಿತು ಕೋಡಿಮಠದ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ರಾಜ್ಯ ರಾಜಕಾರಣದ ಬಗ್ಗೆ ಕೋಡಿಮಠ ಶ್ರೀ ನುಡಿದಂತ ಆ ಸ್ಪೋಟಕ ಭವಿಷ್ಯವನ್ನು ಮುಂದೆ ಓದಿ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಹಾಲು ಮತದ ಸಮಾಜದವರಿಂದ ಅಧಿಕಾರ ಕಿತ್ತುಕೊಳ್ಳೋದು ಅಷ್ಟು ಸುಲಭವಾದುದ್ದಲ್ಲ. ಅದು ಕಷ್ಟವಾಗಿದೆ. ಸಿದ್ಧರಾಮಯ್ಯ ಅವರು ತಾವಾಗಿಯೇ ಅಧಿಕಾರ ಬಿಟ್ಟು ಕೊಟ್ರೆ ಮಾತ್ರವೇ ಬೇರೆಯವರಿಗೆ ಅವಕಾಶ ಸಿಗಬಹುದು ಎಂಬುದಾಗಿ ತಿಳಿಸಿದ್ದಾರೆ. ಇನ್ನೂ ಸಿಎಂ ಆಗೋ ಕನಸಿನಲ್ಲಿದ್ದಂತ ಡಿಕೆ ಶಿವಕುಮಾರ್ ಅವರಿಗೆ, ಸಿದ್ಧರಾಮಯ್ಯ ತಾನಾಗಿಯೇ ಅಧಿಕಾರ ಬಿಟ್ಟುಕೊಟ್ಟರೆ ಮಾತ್ರವೇ ಅದು ಸಾಧ್ಯವಾಗಲಿದೆ. ಇಲ್ಲ ಅಂದರೇ ಡಿಕೆಶಿಗೆ ಅಧಿಕಾರ ಸಿಗೋದಿಲ್ಲ ಎಂಬುದಾಗಿ ಮಾರ್ಮಿಕವಾಗಿ ನುಡಿದಿದ್ದಾರೆ. https://kannadanewsnow.com/kannada/difficulties-and-challenges-will-increase-in-2026-kodimath-sris-shocking-prediction-about-the-new-year/

Read More

ಬೆಳಗಾವಿ: 2025ಕ್ಕಿಂತ 2026ರಲ್ಲಿ ಕಷ್ಟಗಳು, ಸವಾಲುಗಳು ಹೆಚ್ಚಿರಲಿವೆ. 2026ಕ್ಕೆ ಜಗತ್ತೇ ಮುಳುಗುತ್ತೆ ಎಂಬುದಾಗಿ ಹೊಸ ವರ್ಷ ಸಮೀಪಿಸುತ್ತಿರುವ ಸಂದರ್ಭದಲ್ಲೇ ಕೋಡಿಮಠ ಶ್ರೀಗಳು ಶಾಕಿಂಗ್ ಭವಿಷ್ಯವನ್ನು ನುಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಂಕ್ರಾಂತಿ ಫಲದಲ್ಲಿ ಸೂರ್ಯನು ಉತ್ತರಾಯಣದ ಕಡೆ ಹೋಗುತ್ತಾನೆ. ಇದು ರಾಜ-ಮಹಾರಾಜರು, ವ್ಯಾಪಾರಸ್ಥರಿಗೆ, ದುಡಿಮೆದಾರರಿಗೆ ಉತ್ತಮ ಲಾಭ ತಂದುಕೊಡಲಿದೆ ಎಂದಿದ್ದಾರೆ. 2025ಕ್ಕಿಂತ 2026ರಲ್ಲಿ ಕಷ್ಟಗಳು, ಸವಾಲುಗಳು ಹೆಚ್ಚಾಗಿ ಇರಲಿದ್ದಾವೆ. ಯುಗಾದಿ ಕಳೆದ ಮೇಲೆ ಮಳೆ, ಬೆಳೆ ಬಗ್ಗೆ ರೈತರು, ಭೂಮಿ ಬಗ್ಗೆ ಹೇಳುತ್ತೇನೆ. ಆದರೇ 2026ರಲ್ಲಿ ಜಗತ್ತಿಗೆ ಕಷ್ಟಗಳ ಸರಮಾಲೆಯನ್ನೇ ತರಲಿದೆ ಎಂಬುದಾಗಿ ಶಾಕಿಂಗ್ ಭವಿಷ್ಯ ನುಡಿದರು. 2026ರಲ್ಲಿ ಭಾರೀ ಪ್ರಮಾಣದಲ್ಲಿ ಮಳೆ, ಪ್ರವಾಹ ಎದುರಾಗಲಿದೆ. ಆಪತ್ತಿನಿಂದಾಗಿ ಏಳೆಂಟು ಪರ್ಸೆಂಟ್ ಈ ಜಗತ್ತೇ ಮುಳುಗುವ ಲಕ್ಷಣ ಗೋಚರಲಾಗುತ್ತಿದೆ ಎಂಬುದಾಗಿ ಹೇಳುವ ಮೂಲಕ, ಜಗತ್ತು ಮುಳುಗೋ ಶಾಕಿಂಗ್ ವಿಷಯವನ್ನು ತಮ್ಮ ಭವಿಷ್ಯದಲ್ಲಿ ತೆರೆದಿಟ್ಟಿದ್ದಾರೆ. ಅಲ್ಲದೇ ಯುಗಾದಿಯ ನಂತ್ರ ನಿಖವಾದ, ವಿಸ್ತೃತ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.

Read More

ಶಿವಮೊಗ್ಗ: ಸಾಗರದಲ್ಲಿ ದ್ವೇಷ ಭಾಷಣ ಮಸೂದೆಗೆ ತೀವ್ರ ವಿರೋಧವನ್ನು ಬಿಜೆಪಿ ವ್ಯಕ್ತ ಪಡಿಸಿದೆ. ಯಾವುದೇ ಕಾರಣಕ್ಕೂ ಈ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕದಂತೆ ಮಾಜಿ ಸಚಿವ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ನೇತೃತ್ವದಲ್ಲಿ ಸಾಗರ ತಾಲ್ಲೂಕು ಬಿಜೆಪಿಯಿಂದ ಪ್ರತಿಭಟನೆ ನಡೆಸಿ ಆಗ್ರಹಿಸಲಾಯಿತು. ಇಂದು ಶಿವಮೊಗ್ಗದ ಸಾಗರ ನಗರದ ಸಾಗರ ಹೋಟೆಲ್ ಸರ್ಕಲ್ ನಲ್ಲಿ ಬಿಜೆಪಿ ನಗರ, ಗ್ರಾಮಾಂತರ ಮಂಡಲದಿಂದ ದ್ವೇಷ ಭಾಷಣ ಮಸೂದೆ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಜನರ ವಾಕ್ ಸ್ವಾತಂತ್ರ್ಯದ ಹಕ್ಕನ್ನೇ ಕಸಿದುಕೊಳ್ಳುತ್ತಿರುವಂತ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕದಂತೆ ಒತ್ತಾಯಿಸಿದರು. ಈ ವೇಳೆ ಮಾತನಾಡಿದಂತ ಮಾಜಿ ಸಚಿವ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು, ಈ ಕಾಯಿದೆ ನಾವು ಒಪ್ಪಿಕೊಂಡರೇ ಭಾರತದ ಸಂವಿಧಾನಕ್ಕೆ ವಿರುದ್ಧದ ಕಾನೂನಾಗಲಿದೆ. ರೈತರು ಸರ್ಕಾರದ ವಿರುದ್ಧ ಧ್ವನಿ ಎತ್ತುವಂತಿಲ್ಲ. ಧರ್ಮಕ್ಕೆ ಆದ ಅನ್ಯಾಯ ಪ್ರತಿಭಟಿಸುವಂತಿಲ್ಲ. ಹೋರಾಟಗರರನ್ನು ಹಣೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಇದಕ್ಕೆ ರಾಜ್ಯಪಾಲರು ಅಂಕಿತ ಹಾಕಬಾರದು ಎಂದು ಒತ್ತಾಯಿಸಿದರು. ರಾಜ್ಯ ಕಾಂಗ್ರೆಸ್…

Read More