Author: kannadanewsnow09

ಬೆಂಗಳೂರು: ಕನ್ನಡದ ಅಪ್ಪಟ ಬ್ರ್ಯಾಂಡ್‌ ನಂದಿನಿಯ ಘಮಲು ಜಗದಗಲ ವ್ಯಾಪಿಸುತ್ತಿದೆ. ಈಗಾಗಲೇ ಕೆಲ ವಿದೇಶಗಳಲ್ಲಿ ಮಾರಾಟವಾಗುತ್ತಿರುವಂತ ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನ, ಈಗ ಮತ್ತಷ್ಟು ದೇಶಗಳಿಗೂ ರಪ್ತುಗೊಳ್ಳಲಿದೆ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ರಸ್ತುತ ದುಬೈ, ಕತಾರ್‌, ಬ್ರುನೈ, ಮಾಲ್ಡೀವ್ಸ್‌ ಹಾಗೂ ಸಿಂಗಾಪುರ್‌ ದೇಶಗಳು ಸೇರಿದಂತೆ ಭಾರತೀಯರು, ವಿಶೇಷವಾಗಿ ಕನ್ನಡಿಗರು ಹೆಚ್ಚಾಗಿ ನೆಲೆಸಿರುವ ನೆರೆಯ ರಾಷ್ಟ್ರಗಳಲ್ಲಿ ನಂದಿನಿ ಬ್ರ್ಯಾಂಡ್‌ಗೆ ಡಿಮ್ಯಾಂಡ್‌ ಹೆಚ್ಚಿದೆ. ಹೀಗಾಗಿಯೇ ನಂದಿನಿ ಯುಹೆಚ್‌ಟಿ ಟೆಟ್ರಾಪ್ಯಾಕ್‌ ಹಾಲು, ತುಪ್ಪ, ಚೀಸ್‌, ಬೆಣ್ಣೆ, ಐಸ್‌ಕ್ರೀಂ, ಸುವಾಸಿತ ಹಾಲು, ಸಿಹಿ ಉತ್ಪನ್ನ, ಸೇವರಿಸ್‌ ಅನ್ನು ವಿದೇಶಕ್ಕೆ ರಫ್ತು ಮಾಡಲಾಗುತ್ತಿದೆ. ಇದೀಗ ವಿದೇಶದಲ್ಲೂ ಮಾರುಕಟ್ಟೆ ವಿಸ್ತರಣೆ ಮಾಡಲು ಕೆಎಂಎಫ್‌ ಕ್ರಮ ವಹಿಸಿದೆ ಎಂದಿದ್ದಾರೆ. 2023ರ ಸೆಪ್ಟೆಂಬರ್‌ 9ರಂದು ಯುನೈಟೆಡ್‌ ಅರಬ್‌ ಎಮಿರೇಟ್ಸ್‌ (ದುಬೈ)ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಮೊದಲ ʼನಂದಿನಿ ಕೆಫೆ ಮೂʼ ಅನ್ನು ಆರಂಭಿಸಿ, ತುಪ್ಪ, ಬೆಣ್ಣೆ, ಚೀಸ್‌, ಯುಹೆಚ್‌ಟಿ ಹಾಲು, ಐಸ್‌ಕ್ರೀಂ, ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಲಾಯಿತು. ಅಲ್ಲಿ…

Read More

ಕಲಬುರಗಿ: ವಿಜಯಪುರದಿಂದ ಕಲಬುರಗಿಗೆ ಆಗಮಿಸುತ್ತಿದ್ದ ವೇಳೆ ನಡೆದ ಭೀಕರ ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಮೂಲಕ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಇನ್ನಿಲ್ಲವಾಗಿದ್ದಾರೆ. ಕಲಬುರಗಿಯ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ. ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಮಹಾಂತೇಶ್ ಬೀಳಗಿ ಸೇರಿ ಒಟ್ಟು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 2012ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದ ಬೀಳಗಿ, ಪ್ರಾಮಾಣಿಕ ಮತ್ತು ಬಡತನದ ಹಿನ್ನೆಲೆಯಿಂದ ಬಂದವರು. ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಶನ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ, ಬೆಸ್ಕಾಂನ (BESCOM) ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ದಾವಣಗೆರೆ ಜಿಲ್ಲಾಧಿಕಾರಿಯಾಗಿಯೂ (DC Davanagere) ಕೆಲಸ ಮಾಡಿದ್ದಾರೆ. ಈ ಘಟನೆಯ ಕುರಿತು ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆ ಬಳಿಕ ಖಚಿತ ಮಾಹಿತಿ ತಿಳಿದು ಬರಬೇಕಿದೆ.

Read More

ಕಲಬುರ್ಗಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಸಾವನ್ನಪ್ಪಿದ್ದಾರೆ. ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ದುರ್ಮರಣ ಹೊಂದಿದ್ದಾರೆ. ಜೇವರ್ಗಿ ಬಳಿಯಲ್ಲಿ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಂತ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕಾರು ಅಪಘಾತದಲ್ಲಿ ಜೇವರ್ಗಿ ಬಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಂತ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರನ್ನು ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಅಂದಹಾಗೇ ಮೃತ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಪ್ರಸ್ತುತ ಬೆಸ್ಕಾಂ ಎಂಡಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದರು. ಉತ್ತಮ ಅಧಿಕಾರಿಯೆಂದೇ ಗುರ್ತಿಸಿಕೊಂಡಿದ್ದಂತ ಮಹಾಂತೇಶ್ ಬೀಳಗಿ ಇಂದು ಅಪಘಾತದಲ್ಲಿ ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ.., ಸಂಪಾದಕರು https://kannadanewsnow.com/kannada/mens-t20-world-cup-schedule-announced-india-pakistan-clash-on-feb-15/ https://kannadanewsnow.com/kannada/100-crore-grant-for-providing-infrastructure-to-mandya-agricultural-university-minister-n-chaluvarayaswamy/

Read More

ನವದೆಹಲಿ: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಇಂದು ಐಸಿಸಿ ಪುರುಷರ ಟಿ20 ವಿಶ್ವಕಪ್ 2026 ರ ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಕೊಲಂಬೊದಲ್ಲಿ ನಡೆಯಲಿರುವ ಪಂದ್ಯಾವಳಿಯ ಉದ್ಘಾಟನಾ ಪಂದ್ಯದಲ್ಲಿ ಪಾಕಿಸ್ತಾನ ನೆದರ್ಲ್ಯಾಂಡ್ಸ್ ತಂಡವನ್ನು ಎದುರಿಸಲಿದೆ. ಭಾರತ ಫೆಬ್ರವರಿ 7 ರಂದು ಯುಎಸ್ಎ ವಿರುದ್ಧ ತನ್ನ ಅಭಿಯಾನವನ್ನು ಆರಂಭಿಸಲಿದೆ. ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ಯುಎಇ, ಓಮನ್, ವೆಸ್ಟ್ ಇಂಡೀಸ್, ಯುಎಸ್ಎ, ಕೆನಡಾ, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ನಮೀಬಿಯಾ, ಜಿಂಬಾಬ್ವೆ, ಐರ್ಲೆಂಡ್, ಇಂಗ್ಲೆಂಡ್, ನೆದರ್ಲ್ಯಾಂಡ್ಸ್, ಇಟಲಿ ಮತ್ತು ನೇಪಾಳ ಸೇರಿದಂತೆ ಒಟ್ಟು 20 ತಂಡಗಳು ಮುಂದಿನ ವರ್ಷ ನಡೆಯುವ ಕಡಿಮೆ ಸ್ವರೂಪದ ಮೆಗಾ-ಈವೆಂಟ್‌ನಲ್ಲಿ ಭಾಗವಹಿಸಲಿದ್ದು, ಈ ಪಂದ್ಯಗಳು ಭಾರತದ ಐದು ಸ್ಥಳಗಳಲ್ಲಿ ಮತ್ತು ಶ್ರೀಲಂಕಾದಲ್ಲಿ ಮೂರು ಸ್ಥಳಗಳಲ್ಲಿ ನಡೆಯುವ ಸಾಧ್ಯತೆಯಿದೆ. ವರದಿಗಳ ಪ್ರಕಾರ, ಪಂದ್ಯಾವಳಿ ಫೆಬ್ರವರಿ 7 ರಿಂದ ಮಾರ್ಚ್ 8 ರವರೆಗೆ ನಡೆಯಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣವು ಪಂದ್ಯಾವಳಿಯ ಉದ್ಘಾಟನಾ ಪಂದ್ಯ ಮತ್ತು ಫೈನಲ್ ಪಂದ್ಯವನ್ನು ಆಯೋಜಿಸುವ ನಿರೀಕ್ಷೆಯಿದೆ,…

Read More

ಮೈಸೂರು: ಮೈಸೂರಿನಲ್ಲಿ ಸುಸಜ್ಜಿತವಾದ ಕರ್ನಾಟಕ ಪೊಲೀಸ್ ವಸ್ತು ಸಂಗ್ರಹಾಲಯ (ಮ್ಯೂಸಿಯಂ) ಮಾಡಲಾಗುವುದು ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ತಿಳಿಸಿದರು. ಮೈಸೂರು ಜಿಲ್ಲಾ ಪ್ರವಾಸದ ವೇಳೆ ಕೆಎಸ್‌ಆರ್‌ಪಿ ಆಶ್ವಾರೋಹಿ ದಳ ಕಂಪನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ಮಾಹಿತಿ ಪಡೆದರು. ಆರಕ್ಷಕ ಅಶ್ವದಳದ ವಸ್ತು ಸಂಗ್ರಹಾಲಯವನ್ನು ವೀಕ್ಷಿಸಿದರು. ನಜರ್‌ಬಾದ್ ಪೊಲೀಸ್ ಠಾಣೆಗೆ ದೀಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಆರಂಭದಿಂದ ಇಲ್ಲಿಯವರೆಗೆ ಬೆಳೆದುಬಂದ ರೀತಿ ಹಾಗೂ ಇಲಾಖೆಗೆ ಸಂಬಂಧಿಸಿದ ನೆನಪಿನಲ್ಲಿ ಉಳಿಯುವಂತಹ ವಸ್ತುಗಳನ್ನು ಕಾಪಾಡಬೇಕಿದೆ. ಈ ನಿಟ್ಟಿನಲ್ಲಿ ಪ್ರಸಿದ್ಧವಾದ ಸುಸಜ್ಜಿತ ಪೊಲೀಸ್ ಮ್ಯೂಸಿಯಂ ಮಾಡಲಾಗುವುದು ಎಂದು ವಿವರಿಸಿದರು. ನಜರ್‌ಬಾದ್ ಪೊಲೀಸ್ ಠಾಣೆ ಮೈಸೂರಿನಲ್ಲಿ ಅತ್ಯಂತ ಹಳೆಯ ಪೊಲೀಸ್ ಠಾಣೆ. ಬಹಳ ದಿನದಿಂದ ಭೇಟಿ ನೀಡಬೇಕು ಎಂದುಕೊಂಡಿದೆ. ಪೊಲೀಸ್ ಠಾಣೆಯ ಕಾರ್ಯವೈಖರಿಯನ್ನು ಪರಿಶೀಲಿಸಲು ದಿಢೀರ್ ಭೇಟಿ ನೀಡಿದ್ದೇನೆ. ರೆಕಾರ್ಡ್‌, ಸಶಸ್ತ್ರಗಳನ್ನು ಇಟ್ಟುಕೊಳ್ಳುವುದು ಸೇರಿದಂತೆ ಪರಿಶೀಲನೆ ನಡೆಸಿದ್ದೇನೆ. ನ್ಯೂನತೆಗಳನ್ನು…

Read More

ಮಂಡ್ಯ: ಮಂಡ್ಯ ಕೃಷಿ ವಿಶ್ವವಿದ್ಯಾನಿಲಯ ಸ್ಥಾಪನೆಯಾದ ಮೊದಲು ವರ್ಷದಲ್ಲೇ ಮೂಲಸೌಕರ್ಯ ಕಲ್ಪಿಸಲು ಸುಮಾರು 100 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಈಗಾಗಲೇ ಕ್ಯಾಬಿನೆಟ್ ನಲ್ಲಿ ಮಾಡಿ ಚರ್ಚೆ 23 ಕೋಟಿ ಮಂಜೂರು ಮಾಡಲಾಗಿದೆ ಶೀಘ್ರವೇ ಕಾಮಗಾರಿ ಪ್ರಾರಂಭವಾಗುತ್ತದೆ ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಇಂದು ಮಂಡ್ಯ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ 4 ಕೃಷಿ ವಿಶ್ವವಿದ್ಯಾಲಯಗಳು ಇವೆ 5 ನೇ ಯದಾಗಿ ಮಂಡ್ಯ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಯಾಗಿದೆ. ಮಂಡ್ಯ ಜಿಲ್ಲೆಗೆ ಕೃಷಿ ವಿಶ್ವವಿದ್ಯಾಲಯ ತಂದಿದ್ದು ಒಳ್ಳೆಯದು ಎಂಬ ಭಾವನೆ ಉಳಿದವರಿಗಿಲ್ಲ ಎಂದು ಹೇಳಿದರು. ನಾನೊಬ್ಬ ಸಾಮಾನ್ಯ ವ್ಯಕ್ತಿಯೆ ಆದರೆ ನಾನು ಮಂತ್ರಿಯಾಗಿ ಮಾಡಿರುವ ಅಭಿವೃದ್ಧಿ ಕೆಲಸಗಳು ಸಾಮಾನ್ಯ ಅಲ್ಲ. ಜಿಲ್ಲೆಗೆ ಅನೇಕ ಉಪಯುಕ್ತವಾಗುವ ಕೆಲಸವನ್ನು ಮಾಡಿದ್ದೇನೆ. ಕೃಷಿ ವಿಶ್ವವಿದ್ಯಾನಿಲಯ ಸ್ಥಾಪನೆಯಾದ ಮೊದಲನೇ ವರ್ಷದಲ್ಲೇ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿಗೆ ಆರ್ಥಿಕ ನೆರವು ನೀಡಿರುವ…

Read More

ಮಂಡ್ಯ: ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆಯ ಧಾರ್ಮಿಕ ಪವಿತ್ರ ಆಚರಣೆಯ ಯಶಸ್ಸಿಗೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಲಿದ್ದು, ಈ ವೇಳೆ ಇತರೆ ಧರ್ಮಗಳ ಧಾರ್ಮಿಕ ಭಾವನೆಗೆ ಧಕ್ಕೆ ಬಾರದಂತೆ ನಡೆದುಕೊಳ್ಳುವುದು ಎಲ್ಲರ ಆದ್ಯ ಕರ್ತವ್ಯ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು. ಪಟ್ಟಣದ ಶ್ರೀರಂಗನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಹನುಮಮಾಲಾಧಾರಿಗಳ ಸಂರ್ಕಿತನಾ ಯಾತ್ರೆ ಹಿನ್ನಲೆ ಪೂರ್ವಭಾವಿಯಾಗಿ ಜಿಲ್ಲಾಡಳಿತದ ವತಿಯಿಂದ ಕರೆಯಲಾಗಿದ್ದ ಕೋಮುಸೌರ್ಹದ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಧಾರ್ಮಿಕ ಆಚರಣೆಗಳನ್ನು ಶಾಂತಿಯುತವಾಗಿ ಆಚರಿಸಲು ಸಂಪೂರ್ಣ ಅನುಮತಿಯಿದ್ದು, ಸಮಾಜದಲ್ಲಿನ ಶಾಂತಿ-ಸುವ್ಯವಸ್ಥೆ ಧಕ್ಕೆ ತರುವಂತೆ ನಡೆದುಕೊಳ್ಳದಿರಿ. ಜಿಲ್ಲೆಯಲ್ಲಿ ಈ ಹಿಂದೆ ನಡೆದ ಎರಡು ಘಟನೆಗಳು ಹೊರತುಪಡಿಸಿ ಇನ್ಯಾವುದು ನಡೆಯದಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಾಕಷ್ಟು ಎಚ್ಚರಿಕೆ ವಹಿಸಿದ್ದು, ಈ ಆಚರಣೆಯ ವೇಳೆ ಕಾನೂನಿನ ಹಲವು ಕ್ರಮಗಳನ್ನು ಸಮಾಜ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು. ಧಾರ್ಮಿಕ ಆಚರಣೆ ಕಾರ್ಯಕ್ರಮ ಆಯೋಜಕರು ಹಾಗೂ ಆಚರಣೆಯಲ್ಲಿ ಭಾಗಿಯಾಗುವವರು ಕಾನೂನು ಉಲ್ಲಂಘಿಸಿದಂತೆ ಜಾಗೃತಿ ಮೂಡಿಸುವುದು ಹಾಗೂ ವಹಿಸುವುದು…

Read More

ಬೆಂಗಳೂರು: ಬಿ.ಡಿ.ಎ.ದಿಂದ ಮೇಜರ್ ಆರ್ಟೀರಿಯಲ್ ರಸ್ತೆಯ ತ್ರಿಪಥ ಯೋಜನೆ(3-ಲೇನಿಂಗ್‌) ಕಾಮಗಾರಿಗೆ ಸಂಬಂಧಿಸಿದಂತೆ ಹೆಜ್ಜಾಲ ಮತ್ತು ಕೆಂಗೇರಿ ನಿಲ್ದಾಣಗಳ ನಡುವೆ ಲೈನ್ ಬ್ಲಾಕ್‌ ಮತ್ತು ಪವರ್‌ ಬ್ಲಾಕ್‌ ಗೆ ಅನುಮತಿ ನೀಡಿರುವುದರಿಂದ ಈ ಕೆಳಕಂಡ ರೈಲು ಸೇವೆಗಳನ್ನು ಅವುಗಳ ಮುಂದೆ ನೀಡಲಾಗಿರುವ ವಿವರದಂತೆ ರದ್ದುಗೊಳಿಸಲಾಗುವುದು/ಭಾಗಶಃ ರದ್ದುಗೊಳಿಸಲಾಗುವುದು/ನಿಯಂತ್ರಿಸಲಾಗುವುದು ಎಂಬುದಾಗಿ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರನೀಶ್ ಕೆ.ಎನ್ ತಿಳಿಸಿದ್ದಾರೆ. ರೈಲುಗಳ ರದ್ದತಿ: 1. ರೈಲು ಸಂಖ್ಯೆ 56265 ಅರಸೀಕೆರೆ-ಮೈಸೂರು ಪ್ಯಾಸೆಂಜರ್ ಸೇವೆಯನ್ನು ದಿನಾಂಕ 27.11.2025, ದಿನಾಂಕ 04.12.2025, ದಿನಾಂಕ 22.01.2026, ದಿನಾಂಕ 29.01.2026, ದಿನಾಂಕ 05.02.2026 ಹಾಗೂ ದಿನಾಂಕ 26.03.2026 ರಂದು ರದ್ದುಗೊಳಿಸಲಾಗುವುದು. 2. ರೈಲು ಸಂಖ್ಯೆ 56266 ಮೈಸೂರು-ಅರಸೀಕೆರೆ ಪ್ಯಾಸೆಂಜರ್ ಸೇವೆಯನ್ನು ದಿನಾಂಕ 28.11.2025, ದಿನಾಂಕ 05.12.2025, ದಿನಾಂಕ 23.01.2026, ದಿನಾಂಕ 30.01.2026, ದಿನಾಂಕ 06.02.2026 ಮತ್ತು ದಿನಾಂಕ 27.03.2026 ರಂದು ರದ್ದುಗೊಳಿಸಲಾಗುವುದು 3. ರೈಲು ಸಂಖ್ಯೆ 06269 ಮೈಸೂರು–ಎಸ್‌.ಎಂ.ವಿ.ಟಿ. ಬೆಂಗಳೂರು ಪ್ಯಾಸೆಂಜರ್ ಸೇವೆಯನ್ನು ದಿನಾಂಕ 27.11.2025, ದಿನಾಂಕ…

Read More

ನವದೆಹಲಿ: ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸುಧಾರಣೆಗಳ ಅನುಷ್ಠಾನವು ಮಧ್ಯಮ ಅವಧಿಯಲ್ಲಿ ಭಾರತದ ಕಾರ್ಮಿಕ ಮಾರುಕಟ್ಟೆಯಲ್ಲಿ ಉದ್ಯೋಗ ಮತ್ತು ಔಪಚಾರಿಕೀಕರಣವನ್ನು ಗಮನಾರ್ಹವಾಗಿ ಹೆಚ್ಚಿಸಬಹುದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ವರದಿಯನ್ನು ಎತ್ತಿ ತೋರಿಸಿದೆ. ಹೊಸ ಕಾರ್ಮಿಕ ಸಂಹಿತೆಗಳು ನಿರುದ್ಯೋಗವನ್ನು ಶೇಕಡಾ 1.3 ರಷ್ಟು ಕಡಿಮೆ ಮಾಡಬಹುದು. ಇದು 77 ಲಕ್ಷ ಜನರಿಗೆ ಹೆಚ್ಚುವರಿ ಉದ್ಯೋಗ ಸೃಷ್ಟಿಗೆ ಕಾರಣವಾಗುತ್ತದೆ ಎಂದು ವರದಿ ಹೇಳಿದೆ. ಭಾರತದ ಹೊಸ ಕಾರ್ಮಿಕ ಸಂಹಿತೆಗಳು ಮಧ್ಯಮ ಅವಧಿಯಲ್ಲಿ ನಿರುದ್ಯೋಗವನ್ನು ಶೇಕಡಾ 1.3 ರಷ್ಟು ಕಡಿಮೆ ಮಾಡಬಹುದು. ಇದು 77 ಲಕ್ಷ ಜನರ ಹೆಚ್ಚುವರಿ ಉದ್ಯೋಗ ಸೃಷ್ಟಿಯನ್ನು ಸೂಚಿಸುತ್ತದೆ ಎಂದು ಅದು ಹೇಳಿದೆ. ಈ ಮೌಲ್ಯಮಾಪನವು 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವ್ಯಕ್ತಿಗಳ ಪ್ರಸ್ತುತ ಕಾರ್ಮಿಕ ಬಲ ಭಾಗವಹಿಸುವಿಕೆಯ ದರವು ಶೇಕಡಾ 60.1 ರಷ್ಟಿದೆ ಮತ್ತು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸರಾಸರಿ ದುಡಿಯುವ ವಯಸ್ಸಿನ ಜನಸಂಖ್ಯೆಯು ಶೇಕಡಾ 70.7 ರಷ್ಟಿದೆ. ವರದಿಯ ಪ್ರಕಾರ,…

Read More

ಬೆಂಗಳೂರು: ಕಹಾಮವು ಪ್ರಸ್ತುತ ದುಬೈ, ಖತಾರ್, ಬ್ರುನೈ, ಮಾಲ್ಡೀವ್ಸ್ ಹಾಗೂ ಸಿಂಗಾಪೂರ್ ದೇಶಗಳು ಸೇರಿದಂತೆ ಭಾರತೀಯರು, ವಿಶೇಷವಾಗಿ ಕನ್ನಡಿಗರು ಹೆಚ್ಚಾಗಿ ನೆಲೆಸಿರುವ ನೆರೆಯ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡು ನಂದಿನಿ ಯುಹೆಚ್‌ಟಿ ಟೆಟ್ರಾಪ್ಯಾಕ್ ಹಾಲು, ತುಪ್ಪ, ಚೀಸ್, ಡೇರಿ ವೈಟ್ನರ್, ಬೆಣ್ಣೆ, ಐಸ್‌ಕ್ರೀಂ, ಸುವಾಸಿತ ಹಾಲು, ಸಿಹಿ ಉತ್ಪನ್ನ, ಸೇವರೀಸ್ ಅನ್ನು ರಫ್ತು ಮಾಡಲಾಗುತ್ತಿದ್ದು, ಜಾಗತಿಕ ಮಟ್ಟದಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟವನ್ನು ಅಭಿವೃದ್ಧಿಪಡಿಸಲು ಕ್ರಮವಿಡಲಾಗುತ್ತಿದೆ. ಈ ಬಗ್ಗೆ ಕೆಎಂಎಫ್ ಮಾಹಿತಿ ನೀಡಿದ್ದು, ಕಹಾಮವು ದಿನಾಂಕ:09.09.2023 ರಂದು ಫ್ರಾಂಚೈಸಿದಾರರ ಮೂಲಕ ಯುನೈಟೆಡ್ ಅರಬ್ ಎಮಿರೇಟ್ಸ್ (ದುಬೈ)ನಲ್ಲಿ ಅಂತರರಾಷ್ಟ್ರೀಯ ಮಟ್ಟದ ಮೊದಲ ‘ನಂದಿನಿ ಕೆಫೆ ಮೂ’ ಅನ್ನು ಪ್ರಾರಂಭಿಸಿ ತುಪ್ಪ, ಬೆಣ್ಣೆ, ಚೀಸ್, ಯುಹೆಚ್‌ಟಿ ಹಾಲು, ಐಸ್‌ಕ್ರೀಂ, ಸಿಹಿ ಉತ್ಪನ್ನ ಹಾಗೂ ಖಾರದ ಉತ್ಪನ್ನಗಳನ್ನು ರಫ್ತು ಮಾಡಿ ಮಾರಾಟ ವಹಿವಾಟನ್ನು ವಿಸ್ತರಿಸಲಾಗಿದೆ. ಜೊತೆಗೆ, ದಿನಾಂಕ:29.08.2025 ರಿಂದ 31.08.2025 ರವರೆಗೆ ಯುಎಸ್‌ಎಯಲ್ಲಿನ ಲೇಕ್‌ಲ್ಯಾಂಡ್ ಫ್ಲೋರಿಡಾದಲ್ಲಿ ಆಯೋಜಿಸಲಾಗಿದ್ದ ನಾವಿಕ (ನಾವು ವಿಶ್ವ ಕನ್ನಡಿಗರು) ವಿಶ್ವ ಕನ್ನಡ ಸಮಾವೇಶ-2025ದಲ್ಲಿ ಕಹಾಮದ…

Read More