Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮೈದುಂಬಿ ಹರಿಯುತ್ತಿರುವ ಕೃಷ್ಣರಾಜಸಾಗರ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜೂನ್ 30 ರಂದು ಬಾಗಿನ ಅರ್ಪಿಸಲಿದ್ದಾರೆ. 1940ರ ಬಳಿಕ ಇದೇ ಮೊದಲ ಬಾರಿಗೆ ಜೂನ್ ತಿಂಗಳಿಗೆ ನೀರಿನ ಮಟ್ಟ 124 ಅಡಿ ತಲುಪಿರುವುದು ವಿಶೇಷ. https://twitter.com/KarnatakaVarthe/status/1938930458689184215 ಕೆಆರ್ ಎಸ್ ಡ್ಯಾಂ ಭರ್ತಿಯಾಗಿದ್ದು, ಜೂನ್ 30 ರಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಾಗಿನ ಅರ್ಪಿಸಲಿದ್ದಾರೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಕಾವೇರಿ ಅಚ್ಚುಕಟ್ಟಿನಲ್ಲಿ ತುಂಬಿ ತುಳುಕುತಿದೆ. ಸಿಎಂ ಸಿದ್ದರಾಮಯ್ಯ, ಡಿಕೆಶಿ ಅವರು ಸೋಮವಾರ 30 ರಂದು KRS ಡ್ಯಾಂ ಗೆ ಭಾಗಿನ ಅರ್ಪಿಸಲಿದ್ದಾರೆ ಎಂದಿದ್ದಾರೆ. ಸ್ವತಂತ್ರ ಪೂರ್ವ ಕೆಂಪೇಗೌಡರು ಬೆಂಗಳೂರು ಕಟ್ಟಿದ್ದಾರೆ. ಮುಂದಿನ ಉದ್ದೇಶ ಇಟ್ಟುಕೊಂಡು ಈ ಬೃಹತ್ ಬೆಂಗಳೂರು ಕಟ್ಟಿದ್ದಾರೆ. ಅವರನ್ನು ನಾವು ಪೂಜಿಸುವ ಕೆಲಸ ಮಾಡಬೇಕು. ಬೆಂಗಳೂರು ನಗರ ಇಲ್ಲದಿದ್ದರೆ ಕರ್ನಾಟಕಕ್ಕೆ ಮಹತ್ವ ಸಿಲ್ತಿರಲಿಲ್ಲ. ದೊಡ್ಡ ಮಟ್ಟದಲ್ಲಿ ಬೆಂಗಳೂರು ಬೆಳೆದಿರುವುದಕ್ಕೆ ಕೆಂಪೇಗೌಡರು ಕಾರಣ ಎಂದು ಹೇಳಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಹಳೆ ಮೈಸೂರು…
ಬೆಂಗಳೂರು: ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ಸುಗಮಗೊಳಿಸುವ ಉದ್ದೇಶದಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ವತಿಯಿಂದ ಶನಿವಾರ ರಾಜ್ಯದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಯುಜಿಸಿಟಿಇ 25- ಸೀಟು ಹಂಚಿಕೆ ಮಂಥನ’ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾಯಿತು. ರಾಜ್ಯದ 16 ಸರ್ಕಾರಿ ಎಂಜಿನಿಯರಿಂಗ್, 8 ಅನುದಾನಿತ, 6 ವಿಟಿಯು ಸಂಯೋಜಿತ ಎಂಜಿನಿಯರಿಂಗ್ ಕಾಲೇಜುಗಳು ಹಾಗೂ 9 ಜಿಲ್ಲೆಗಳ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ನಡೆದ ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಚಿಂತಾಮಣಿಯ ವಿಟಿಯು ಸಂಯೋಜಿತ ಎಂಜಿನಿಯರಿಂಗ್ ಕಾಲೇಜಿನಲ್ಲಿ ಚಾಲನೆ ನೀಡಿದರು. ಸ್ವತಃ ಸಚಿವರು ಈ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಸಂವಾದ ನಡೆಸಿ, ಅವರಿಂದ ಕೇಳಿಬಂದ ಪ್ರಶ್ನೆಗಳಿಗೆ ಉತ್ತರಿಸಿದರು. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಹಾಸನದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೇಳಿಬಂದ ಪ್ರಶ್ನೆಗಳಿಗೆ ಉತ್ತರಿಸಿದರು. ಕಾರ್ಯಕ್ರಮ ನಡೆದ ಪ್ರತಿಯೊಂದು ಕಾಲೇಜಿಗೂ ತಲಾ ಒಬ್ಬ ಕೆಇಎ ಪ್ರತಿನಿಧಿಯನ್ನು ಹಾಗೂ ಅಗತ್ಯ ತಾಂತ್ರಿಕ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ನಿರೀಕ್ಷೆಗೂ ಮೀರಿ…
ಕೊಪ್ಪಳ: ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕೊಡಲಿಯಿಂದ ಯುವಕನನ್ನು ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವಂತ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ವೆಂಕಟಗಿರಿ ಎನ್ನುವಲ್ಲಿ ಈ ಘಟನೆ ನಡೆದಿದೆ. ನಾಗರಾಜ್ ಈರಪ್ಪ ಬೂದನೂರು(32) ಎಂಬ ಯುವಕನನ್ನು ಜಮೀನಿನಲ್ಲಿ ಬರ್ಬರವಾಗಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ನಾಗರಾಜ್ ಈರಪ್ಪ ಬೂದನೂರುನನ್ನು ಅನೈಚಿತ ಸಂಬಂಧದ ಹಿನ್ನಲೆಯಲ್ಲಿ ನಾಗರಾಜ್ ನನ್ನು ಕೊಡಲಿಯಿಂದ ಕೊಚ್ಚಿ ದುರ್ಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/another-person-falls-victim-to-a-heart-attack-in-hassan-the-death-toll-rises-to-19-in-the-district/ https://kannadanewsnow.com/kannada/doctor-demands-bribe-for-the-renewal-of-contract-staff-nurses-audio-goes-viral/
ಹಾಸನ: ಜಿಲ್ಲೆಯಲ್ಲಿ ದಿನೇ ದಿನೇ ಹೃದಯಾಘಾತದಂತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇಂದು ಮತ್ತೋರ್ವ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಈವರೆಗೆ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಕಂಡಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಂತ ಗಿರೀಶ್(41) ಎಂಬುವರು ರಜೆಗೆಂದು ಇಂದು ಊರಿಗೆ ತೆರಳಿದ್ದರು. ಹಾಸನ ತಾಲ್ಲೂಕಿನ ಕಟ್ಟಾಯದ ಹ್ಯಾರಾನೆ ಗ್ರಾಮಕ್ಕೆ ಇಂದು ರಜೆಯಿದ್ದ ಕಾರಣ ತೆರಳಿದ್ದಂತ ಗಿರೀಶ್ ಅವರು ಹೊಲದಲ್ಲಿ ಜೋಳದ ಬೆಳೆಗೆ ಗೊಬ್ಬರ ಹಾಕಿ ಮನೆಗೆ ವಾಪಾಸ್ ಆಗುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ಗಿರೀಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಂತ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಹೀಗಾಗಿ ಇಂದು ಹೃದಯಾಘಾತಕ್ಕೆ ಒಂದೇ ದಿನ ಇಬ್ಬರು ಹಾಸನ ಜಿಲ್ಲೆಯಲ್ಲಿ ಬಲಿಯಾದಂತೆ ಆಗಿದೆ. ಅಲ್ಲದೇ ಈವರೆಗೆ 19 ಮಂದಿ ಹೃದಯಾಘಾತದಿಂದ ಹಾಸನ ಜಿಲ್ಲೆಯಲ್ಲಿ ಸಾವನ್ನಪ್ಪಿದ್ದಾರೆ. https://kannadanewsnow.com/kannada/employees-future-fund-minister-shobha-karandlaje-assures-quick-solution-to-the-higher-pension-issue/ https://kannadanewsnow.com/kannada/breaking-the-world-famous-dasara-festival-will-be-inaugurated-at-mysore-hill-on-the-22nd-of-september-cm-siddaramaiah/
ಬೆಂಗಳೂರು : ನೌಕರರ ಭವಿಷ್ಯ ನಿಧಿ ಯೋಜನೆ ಅಡಿ ಬರುವ “ಹೈಯರ್ ಪೆನ್ಷನ್ ಸ್ಕೀಮ್” ನಲ್ಲಿ ಉಂಟಾಗಿರುವ ಸಮಸ್ಯೆಯನ್ನು ಅತಿ ಶೀಘ್ರವಾಗಿ ಪರಿಹಾರ ಮಾಡುವುದಾಗಿ ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಶನಿವಾರ ತಮ್ಮನ್ನು ಭೇಟಿ ಮಾಡಿದ ಹಿರಿಯ ಪತ್ರಕರ್ತರ ನಿಯೋಗಕ್ಕೆ ಭರವಸೆ ನೀಡಿದರು. ಕರ್ನಾಟಕದ ಅನೇಕ ಪತ್ರಕರ್ತರು ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಹೈಯರ್ ಪೆನ್ಷನ್ ಪಡೆಯುವ ಬಗ್ಗೆ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಗೆ ಅರ್ಜಿ ಸಲ್ಲಿಸಿದ್ದಾರೆ. ಅವು ಅನೇಕ ತಿಂಗಳಿನಿಂದ ಇತ್ಯರ್ಥ ಕಾಣದೆ ಪತ್ರಕರ್ತರು ಅದರಲ್ಲೂ ನಿವೃತ್ತ ನೌಕರರು ತೀವ್ರ ಆರ್ಥಿಕ ಸಮಸ್ಯೆಗೆ ತುತ್ತಾಗಿರುವ ಸಂಗತಿಯನ್ನು ನಿಯೋಗ ಸಚಿವರ ಗಮನಕ್ಕೆ ತಂದಿತು. ಅನೇಕ ಪತ್ರಕರ್ತರು ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಯಿಂದ ಬಂದ ಡಿಮ್ಯಾಂಡ್ ನೋಟ್ ಅನುಸಾರ ಹೆಚ್ಚುವರಿ ಮೊತ್ತವನ್ನು ಜನವರಿ ತಿಂಗಳಲ್ಲೇ ಪಾವತಿ ಮಾಡಿದ್ದಾರೆ, ಇದುವರೆವಿಗೂ ಇದು ಇತ್ಯರ್ಥವಾಗಿಲ್ಲ. ಆರು ತಿಂಗಳಿನಿಂದ ಕಟ್ಟಿದ ದುಡ್ಡಿಗೆ ಬಡ್ಡಿಯೂ ಇಲ್ಲ ಹೆಚ್ಚಿನ ಪೆನ್ಷನ್ನೂ ಇಲ್ಲ ಎಂಬ ಸ್ಥಿತಿ…
ನವದೆಹಲಿ: ಇಸ್ಲಾಮಿಕ್ ಸ್ಟೇಟ್ (ISIS) ನ ಭಾರತದ ಕಾರ್ಯಾಚರಣೆಗಳ ಮುಖ್ಯಸ್ಥ ಮತ್ತು ನಿಷೇಧಿತ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (SIMI) ನ ಮಾಜಿ ಪದಾಧಿಕಾರಿ ಸಕ್ವಿಬ್ ನಾಚನ್ ಶನಿವಾರ ಮಧ್ಯಾಹ್ನ ಮೆದುಳು ರಕ್ತಸ್ರಾವದಿಂದ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 57 ವರ್ಷ. ದೆಹಲಿ ಮತ್ತು ಮಹಾರಾಷ್ಟ್ರದ ಪಡ್ಘಾ ಪ್ರದೇಶವನ್ನು ವ್ಯಾಪಿಸಿರುವ ಐಸಿಸ್ ಭಯೋತ್ಪಾದಕ ಘಟಕಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದ ನಂತರ ನಾಚನ್ 2023 ರಿಂದ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು. ಬಂಧನದಲ್ಲಿದ್ದಾಗ ಅವರ ಆರೋಗ್ಯ ಹದಗೆಟ್ಟ ನಂತರ ಮಂಗಳವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ದಾಖಲಾದ ಸ್ವಲ್ಪ ಸಮಯದ ನಂತರ ವೈದ್ಯರು ಮೆದುಳಿನ ರಕ್ತಸ್ರಾವವನ್ನು ದೃಢಪಡಿಸಿದರು. ಅವರು ನಾಲ್ಕು ದಿನಗಳ ಕಾಲ ವೈದ್ಯಕೀಯ ವೀಕ್ಷಣೆಯಲ್ಲಿದ್ದರು ಮತ್ತು ಇಂದು ಬೆಳಿಗ್ಗೆ ಅವರ ಸ್ಥಿತಿ ಹದಗೆಟ್ಟಿತು. ಆಸ್ಪತ್ರೆ ಅಧಿಕಾರಿಗಳ ಪ್ರಕಾರ, ಮಧ್ಯಾಹ್ನ 12:10 ಕ್ಕೆ ಅವರು ನಿಧನರಾದರು. ಸಕ್ವಿಬ್ ಅಬ್ದುಲ್ ಹಮೀದ್ ನಾಚನ್ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಪಡ್ಘಾ…
ಚಿತ್ರದುರ್ಗ: ಜಿಲ್ಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವಂತ ಸ್ಟಾಫ್ ನರ್ಸ್ ಒಪ್ಪರ ಕಾಂಟ್ರಾಕ್ಟ್ ಮುಂದುವರೆಸೋದಕ್ಕೆ, ರಿನೀವಲ್ ಮಾಡಿಕೊಡೋದಕ್ಕೆ ಸಾವಿರಾರು ರೂಪಾಯಿಯ ಲಂಚ ನೀಡುವಂತೆ ವೈದ್ಯರೊಬ್ಬರು ಒತ್ತಾಯಿಸಿದಂತ ಆಡಿಯೋ ವೈರಲ್ ಆಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯ ಡಾ.ಕೃಷ್ಣ ಎಂಬುವರದ್ದು ಎನ್ನಲಾದಂತ ಆಡಿಯೋ ಈಗ ವೈರಲ್ ಆಗಿದೆ. ಅದರಲ್ಲಿ ಗುತ್ತಿಗೆ ರಿನೀವಲ್ ಮಾಡಿಕೊಡುವುದಕ್ಕೆ ಸ್ಟಾಫ್ ನರ್ಸ್ ಒಬ್ಬರಿಗೆ 5,000 ನೀಡುವಂತೆ ಆಗ್ರಹಿಸಿರೋದು ಕೇಳಿ ಬಂದಿದೆ. ಜವಗೊಂಡನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಸ್ಟಾಫ್ ನರ್ಸ್ ಒಬ್ಬರು ಕಾರ್ಯ ನಿರ್ವಹಿಸುತ್ತಿದ್ದರು. ಇಂತಹ ಅವರ ಗುತ್ತಿಗೆ ಅವಧಿಯನ್ನು ಮುಂದುವರೆಸೋದಕ್ಕೆ 5,000 ಕೊಟ್ಟರೆ ಮಾತ್ರವೇ ಮಾಡಿಕೊಡುವುದಾಗಿ ವೈದ್ಯ ಕೃಷ್ಣ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದಷ್ಟೇ ಅಲ್ಲದೇ ನೀನು ಬೇಗ ಕೊಡದಿದ್ದರೇ ಆ ಬಳಿಕ 10,000 ಆಗುತ್ತದೆ. ಇನ್ನೂ ಲೇಟ್ ಆದರೇ 15,000 ಕೊಟ್ಟರೆ ಮಾತ್ರವೇ ಗುತ್ತಿಗೆ ಅವಧಿಯನ್ನು ರಿನೀವಲ್ ಮಾಡಿಕೊಡೋದಕ್ಕೆ ಸಹಿ ಹಾಕುವುದಾಗಿ…
ಶಿವಮೊಗ್ಗ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಮತ್ತೊಂದು ಮರ್ಯಾದ ಹತ್ಯೆ ಪ್ರಕರಣ ಎನ್ನುವಂತೆ ಘಟನೆಯೊಂದು ನಡೆದಿದೆ. ತಂದೆಯಿಂದಲೇ ಮಗಳ ಕುತ್ತಿಗೆಗೆ ಹಗ್ಗದಿಂದ ಬಿಗಿದು ಹತ್ಯೆ ಮಾಡಲು ಯತ್ನಿಸಿದಂತ ಯತ್ನ ವಿಫಲವಾದ ನಂತ್ರ ಪ್ರಕರಣ ಬೆಳಕಿಗೆ ಬಂದಿದೆ. ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ಬಳಿಯ ಮಳವಳ್ಳಿ ತಾಂಡಾದಲ್ಲಿ ಈ ಘಟನೆ ನಡೆದಿದೆ. ಪುತ್ರಿ ಗರ್ಭವತಿಯಾಗಿರುವಂತ ವಿಚಾರ ತಿಳಿದಂತ ತಂದೆ ಧರ್ಮಪ್ಪ ನಾಯಕ್ ಸಿಟ್ಟುಗೊಂಡಿದ್ದರು. ಹೀಗಾಗಿ ಮರ್ಯಾದೆಗೆ ಅಂಜಿ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತೇನೆ ಬಾ ಎಂಬುದಾಗಿ ತಂದೆ-ತಾಯಿ ಜೊತೆಗೂಡಿ ಸೊರಬದ ಉಳವಿ ಸಮೀಪದ ಕಾನಹಳ್ಳಿ ಬಳಿಯ ಕಣ್ಣೂರಿಗೆ ಕರೆದುಕೊಂಡು ಬಂದಿದ್ದಾರೆ. ಕಣ್ಣೂರಿನ ಕಾಡಿನಲ್ಲಿ ಧರ್ಮಪ್ಪ ನಾಯಕ್ ತನ್ನ ಪುತ್ರಿಯ ಕುತ್ತಿಗೆಗೆ ಹಗ್ಗದಿಂದ ಬಿಗಿದು ನನ್ನ ಮರ್ಯಾದೆ ಹಾಳು ಮಾಡಿದೆ ಎಂಬುದಾಗಿ ಉಸಿರುಗಟ್ಟಿಸಿ ಸಾಯಿಸೋದಕ್ಕೆ ಯತ್ನಿಸುತ್ತಾರೆ. ಮಗಳನ್ನು ಸಾಯಿಸಬೇಡಿ ಅಂತ ಆಕೆಯ ಹೆಂಡತಿ ಕಾಲಿಗೆ ಬಿದ್ದು ಕೇಳಿಕೊಂಡರು ಧರ್ಮಪ್ಪ ನಾಯಕ್ ಬಿಟ್ಟಿಲ್ಲ. ಮರ್ಯಾದೆ ಹಾಳು ಮಾಡಿದಂತ ಪುತ್ರಿಯನ್ನು ಹಗ್ಗದಿಂದ ಬಿಗಿದು ಉಸಿರುಗಟ್ಟಿಸಿ ಸಾಯಿಸೋದಕ್ಕೆ ಯತ್ನಿಸಿದಂತ ಸಂದರ್ಭದಲ್ಲಿ ಯುವತಿ ಪ್ರಜ್ಞೆ…
ಬೆಂಗಳೂರು: ನಗರದಲ್ಲಿ ಆಪ್ ಆಧಾರಿತ ಆಟೋಗಳು ಸಂಚರಿಸುತ್ತಿವೆ. ಈ ಆಪ್ ಆಧಾರಿತ ಆಟೋ ಚಾಲಕರಿಂದ ಪ್ರಯಾಣಿಕರಿಂದ ದುಬಾರಿ ದರವನ್ನು ವಸೂಲಿ ಮಾಡುತ್ತಿರುವುದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಗಮನಕ್ಕೆ ಬಂದಿದೆ. ಹೀಗಾಗಿ ಆಪ್ ಆಧಾರಿತ ಆಟೋಗಳಾಗಲಿ, ಇನ್ನಾವುದೇ ಮಾದರಿಯ ಆಟೋಗಳಾಗಲಿ ದರಕ್ಕಿಂತ ಹೆಚ್ಚು ವಸೂಲಿ ಮಾಡಿದರೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳುವಂತೆ ಖಡಕ್ ಆದೇಶ ಮಾಡಿದ್ದಾರೆ. ಈ ಸಂಬಂಧ ಸಾರಿಗೆ ಮತ್ತು ಸುರಕ್ಷತ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿರುವಂತ ಸಚಿವ ರಾಮಲಿಂಗಾರೆಡ್ಡಿ ಅವರು, ಬೆಂಗಳೂರು ನಗರದಲ್ಲಿ ಸರ್ಕಾರ ನಿಗದಿ ಮಾಡಿರುವ ದರಕ್ಕಿಂತ ಹೆಚ್ಚು ದರ ವಸೂಲಿ ಮಾಡುತ್ತಿರುವ ಆಪ್ (APP) ಆಧಾರಿತ ಆಟೋಗಳಾಗಲಿ ಅಥವಾ ಇನ್ನಾವುದೇ ಮಾದರಿಯ ಆಟೋಗಳಾಗಲಿ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು ಅಂತ ಖಡಕ್ ಸೂಚನೆ ನೀಡಿದ್ದಾರೆ. ಪ್ರಯಾಣಿಕರಿಂದ ನಿಗದಿಕ್ಕಿಂತ ದರಕ್ಕಿಂತ ಹೆಚ್ಚಿನ ದರ ಬೇಡಿಕೆ, ಹೆಚ್ಚಿನ ದರ ನೀಡದಿದ್ದಲ್ಲಿ ಪಯಾಣವನ್ನು ರದ್ದುಗೊಳಿಸುವುದು ಹಾಗೂ ಅತೀ ಹೆಚ್ಚಿನ ದರ ವಸೂಲು ಮಾಡುತ್ತಿರುವ ಪುಕರಣಗಳ ಬಗ್ಗೆ ದೂರು…
ನವದೆಹಲಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಜನರ ಪ್ರಾಣವನ್ನು ಬಲಿ ತೆಗೆದುಕೊಂಡು, ಇತರ ಅನೇಕರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಐಪಿಎಸ್ ಅಧಿಕಾರಿಗಳಾದ ದಯಾನಂದ, ವಿಕಾಸ್ ಕುಮಾರ್ ಮತ್ತು ಶೇಖರ್ ಅವರನ್ನು ಅಮಾನತುಗೊಳಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಜನಸಂದಣಿಯನ್ನು ನಿಯಂತ್ರಿಸುವಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಕರ್ನಾಟಕ ಸರ್ಕಾರ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡ ನಂತರ ಈ ಅನುಮೋದನೆ ಬಂದಿದೆ. ಕರ್ನಾಟಕ ಸರ್ಕಾರವು ಈ ಅಮಾನತು ವರದಿಯನ್ನು ಈ ಹಿಂದೆ ಕೇಂದ್ರಕ್ಕೆ ಸಲ್ಲಿಸಿತ್ತು. ಈಗ ಅದು ಔಪಚಾರಿಕವಾಗಿ ಈ ಕ್ರಮವನ್ನು ಅನುಮೋದಿಸಿದೆ. ಕೇಂದ್ರವು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ (ಡಿಪಿಎಆರ್) ತನ್ನ ಅನುಮೋದನೆಯನ್ನು ತಿಳಿಸಿದೆ. ಇದರಿಂದಾಗಿ ರಾಜ್ಯದ ಕ್ರಮವನ್ನು ಬಲಪಡಿಸಲಾಗಿದೆ. ಮುಖ್ಯಮಂತ್ರಿಗಳ ಕಚೇರಿ (ಸಿಎಂಒ) ಪ್ರಕಾರ, ಶಿಸ್ತು ಪ್ರಕ್ರಿಯೆಯನ್ನು ಮತ್ತಷ್ಟು ಮುಂದುವರಿಸುವ ಮೂಲಕ ಅಧಿಕಾರಿಗಳ ವಿರುದ್ಧ 30 ದಿನಗಳಲ್ಲಿ…