Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಫೆಬ್ರವರಿ ತಿಂಗಳ ವೇತನ ಇನ್ನೂ ಪಾವತಿಯಾಗದ ಹಿನ್ನೆಲೆಯಲ್ಲಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ – ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘವು ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಆಯುಕ್ತರಿಗೆ ಮಂಗಳವಾರ ಮನವಿ ಸಲ್ಲಿಸಿದ್ದು, ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಕೆಲಸ ಸ್ಥಗಿತಗೊಳಿಸುವುದಾಗಿ ಎಚ್ಚರಿಸಿದೆ. ಮಾರ್ಚ್ 10 ಕಳೆದರೂ ನೌಕರರ ಕೈಗೆ ವೇತನ ಸಿಕ್ಕಿಲ್ಲದಿರುವುದು ಸಿಬ್ಬಂದಿ ವರ್ಗದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಸಂಘದ ಅಧ್ಯಕ್ಷರಾದ ಎ. ಅಮೃತ್ ರಾಜ್ ಅವರು ಅಧಿಕೃತವಾಗಿ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ನೌಕರರ ಸಂಕಷ್ಟ ಮತ್ತು ಆಗ್ರಹಗಳು: ವೇತನ ವಿಳಂಬ: ಫೆಬ್ರವರಿ-2026ರ ಮಾಹೆಯ ವೇತನವು ಇಂದಿನವರೆಗೂ ಪಾವತಿಯಾಗಿಲ್ಲ. ಇದರಿಂದಾಗಿ ನೌಕರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬುದಾಗಿ ಸಂಘ ಹೇಳಿದೆ. ದೈನಂದಿನ ಜೀವನಕ್ಕೆ ಹೊಡೆತ: ವೇತನ ಬಾರದೆ ಇರುವುದರಿಂದ ಮನೆ ಬಾಡಿಗೆ ಪಾವತಿಸಲು, ಮಕ್ಕಳ ಶಾಲಾ ಶುಲ್ಕ ಕಟ್ಟಲು ಮತ್ತು ದಿನನಿತ್ಯದ ಆಹಾರ ಪದಾರ್ಥಗಳನ್ನು ಖರೀದಿಸಲು ನೌಕರರು ಪರದಾಡುತ್ತಿದ್ದಾರೆ ಎಂದು ಸಂಘ ತಿಳಿಸಿದೆ. 24 ಗಂಟೆಗಳ ಗಡುವು:…
ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ (ಬುಧವಾರ) ಆರಂಭವಾಗಬೇಕಿದ್ದ ಸರ್ಕಾರಿ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಯ ಅನಿರ್ದಿಷ್ಟಾವಧಿ ಮುಷ್ಕರವನ್ನು ಹಿಂಪಡೆಯಲಾಗಿದೆ. ಸರ್ಕಾರದೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೈದ್ಯಾಧಿಕಾರಿಗಳ ಸಂಘ ಮುಷ್ಕರಕ್ಕೆ ಕರೆ ನೀಡಿತ್ತು. ಇದರಿಂದ ರಾಜ್ಯದಾದ್ಯಂತ ಸರ್ಕಾರಿ ಆಸ್ಪತ್ರೆಗಳ ಹೊರರೋಗಿ ವಿಭಾಗ (OPD) ಸೇವೆ ಸ್ಥಗಿತಗೊಳ್ಳುವ ಭೀತಿ ಎದುರಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದರಿಂದ ಮುಷ್ಕರ ಕೈಬಿಡಲಾಗಿದೆ. ಸರ್ಕಾರ ನೀಡಿದ ಭರವಸೆಗಳೇನು? ವೈದ್ಯರ ಸಂಘ ಮಂಡಿಸಿದ್ದ ಒಟ್ಟು 14 ಬೇಡಿಕೆಗಳ ಪೈಕಿ 13 ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಪ್ರಮುಖವಾಗಿ: ವೇತನ ಶ್ರೇಣಿ: ವೈದ್ಯಕೀಯ ಶಿಕ್ಷಣ ಇಲಾಖೆಯ ಮಾದರಿಯಲ್ಲೇ ಆರೋಗ್ಯ ಇಲಾಖೆಯ ವೈದ್ಯರಿಗೂ ವೇತನ ನೀಡುವ ಭರವಸೆ. ಹುದ್ದೆಗಳ ಭರ್ತಿ: ಇಲಾಖೆಯಲ್ಲಿ ಖಾಲಿ ಇರುವ ಸುಮಾರು 39,000 ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡುವ ಪ್ರಕ್ರಿಯೆ. ಗುತ್ತಿಗೆ ನೌಕರರ ಹಿತರಕ್ಷಣೆ: ಎನ್.ಹೆಚ್.ಎಂ (NHM) ಅಡಿಯಲ್ಲಿ ಕೆಲಸ…
ಮುಂಬೈ: ಇತ್ತೀಚೆಗಷ್ಟೇ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡ ಸಂಭ್ರಮದಲ್ಲಿರುವ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಈಗ ಮತ್ತೊಂದು ಹಬ್ಬದ ಸುದ್ದಿ ಬಂದಿದೆ. ಬಹುನಿರೀಕ್ಷಿತ ಐಪಿಎಲ್ 2026 ರ ಮೊದಲ 20 ದಿನಗಳ ವೇಳಾಪಟ್ಟಿಯನ್ನು ಮಾರ್ಚ್ 13ರೊಳಗೆ ಬಿಡುಗಡೆ ಮಾಡಲಾಗುವುದು ಎಂದು ಬಿಸಿಸಿಐ (BCCI) ಕಾರ್ಯದರ್ಶಿ ದೇವಜಿತ್ ಸೈಕಿಯಾ ಮಂಗಳವಾರ ಖಚಿತಪಡಿಸಿದ್ದಾರೆ. ಮಾರ್ಚ್ 28 ರಿಂದ ಟೂರ್ನಿ ಆರಂಭವಾಗಲಿದೆ ಎಂದು ಈಗಾಗಲೇ ಸ್ಟಾರ್ ಸ್ಪೋರ್ಟ್ಸ್ ತಿಳಿಸಿದೆ. ಆದರೆ, ಪೂರ್ಣ ಪ್ರಮಾಣದ ವೇಳಾಪಟ್ಟಿಯ ಬದಲಿಗೆ ಹಂತ ಹಂತವಾಗಿ ಪಂದ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಬಿಸಿಸಿಐ ನಿರ್ಧರಿಸಿದೆ. ಪೂರ್ಣ ವೇಳಾಪಟ್ಟಿ ಬಿಡುಗಡೆ ಮಾಡದಿರಲು ಕಾರಣವೇನು? ಭಾರತದ ಕೆಲವು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳೇ ಇದಕ್ಕೆ ಪ್ರಮುಖ ಕಾರಣ. ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳ ರಾಜ್ಯಗಳಲ್ಲಿ ಐಪಿಎಲ್ ನಡೆಯುವ ಸಮಯದಲ್ಲಿಯೇ ಚುನಾವಣೆಗಳು ಎದುರಾಗಲಿವೆ. ಇದರಿಂದಾಗಿ ಭದ್ರತೆ ಮತ್ತು ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದೆ. “ಚುನಾವಣಾ ದಿನಾಂಕಗಳನ್ನು ಗಮನದಲ್ಲಿಟ್ಟುಕೊಂಡು…
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಎಲ್.ಕೆ.ಜಿ ಇಂದ ದ್ವಿತೀಯ ಪಿಯುಸಿವರೆಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ, ಮುಂದಿನ ಮೂರು ವರ್ಷಗಳಲ್ಲಿ 800 ಸರ್ಕಾರಿ ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ಗಳಾಗಿ (KPS) ಮೇಲ್ದರ್ಜೆಗೇರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಯೋಜನೆಯ ಪ್ರಮುಖಾಂಶಗಳನ್ನು ಹಂಚಿಕೊಂಡಿದ್ದಾರೆ: ಏನಿದು ಕರ್ನಾಟಕ ಪಬ್ಲಿಕ್ ಶಾಲೆ (KPS)? ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣದಿಂದ (Pre-Primary) ಆರಂಭವಾಗಿ ದ್ವಿತೀಯ ಪಿಯುಸಿವರೆಗೂ ಒಂದೇ ಆವರಣದಲ್ಲಿ ಶಿಕ್ಷಣವನ್ನು ಖಾತ್ರಿಗೊಳಿಸುವುದು ಈ ಶಾಲೆಗಳ ಮುಖ್ಯ ಗುರಿಯಾಗಿದೆ. ಇದರಿಂದ ಗ್ರಾಮೀಣ ಭಾಗದ ಮಕ್ಕಳು ಪದೇ ಪದೇ ಶಾಲೆ ಬದಲಾಯಿಸುವ ತೊಂದರೆ ತಪ್ಪಲಿದ್ದು, ಸುಸಜ್ಜಿತ ಮೂಲಸೌಕರ್ಯದೊಂದಿಗೆ ಶಿಕ್ಷಣ ಲಭ್ಯವಾಗಲಿದೆ. ಪ್ರಸ್ತುತ ಸ್ಥಿತಿಗತಿ: ರಾಜ್ಯದಲ್ಲಿ ಸದ್ಯ 309 ಕರ್ನಾಟಕ ಪಬ್ಲಿಕ್ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಈ ಶಾಲೆಗಳಲ್ಲಿ ಒಟ್ಟು 2,72,464 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು, ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರಲ್ಲಿ ವಿಶ್ವಾಸ…
ಈ ಒಂದು ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಸಾಕ್ಷಾತ್ ಗುರು ರಾಯರು ನಿಮ್ಮ ಕನಸಿನಲ್ಲಿ ಬಂದು ನಿಮ್ಮ ಕಷ್ಟಗಳನ್ನು ಬಗೆಹರಿಸುತ್ತಾರೆ. ಇದು ಸತ್ಯ ..!ರಾಯರ ಮಹಿಮೆ ಇದು ನೇರವಾಗಿ ನೋಡಿ..! ಮಹಾ ಮಹಿಮ ಗುರುಗಳು ಮತ್ತು ಜೀವಂತ ದೇವರು.ಗುರುರಾಘವೇಂದ್ರರ ಆರಾಧ್ಯ ದೈವ ಮೂಲರಾಮ ಅಂದರೆ ಮಹಾವಿಷ್ಣು ಜೀವನದಲ್ಲಿ ಎಂತಹ ಕಷ್ಟಗಳೇ ಬಂದರು ಶ್ರೀ ಗುರುರಾಯರ ಸ್ಮರಣೆ ಮಾಡಿದ ತಕ್ಷಣವೇ ಕಷ್ಟವು ಮಂಜಿನಂತೆ ಕರಗುವುದು. ಗುರುರಾಯರನ್ನು ನೆನೆಯಲು ಹಲವಾರು ಮಂತ್ರಗಳಿವೆ ಅದರಲ್ಲಿ ರಾಘವೇಂದ್ರ ಗಾಯತ್ರಿ ಮಂತ್ರವು ತುಂಬಾ ಶ್ರೇಷ್ಠವಾದ ಮಂತ್ರವಾಗಿದೆ.ರಾಘವೇಂದ್ರ ಗಾಯತ್ರಿ ಮಂತ್ರವನ್ನು ದಿನಕ್ಕೆ ಒಂದು ಬಾರಿ ಮೂರು ಬಾರಿ,ಐದು ಬಾರಿ,ಒಂಭತ್ತು ಬಾರಿ,ಇಪ್ಪತೊಂದು ಬಾರಿ,ಸಾವಿರದ ಎಂಟು ಬಾರಿ ಜಪಿಸಬಹುದು. ರಾಘವೇಂದ್ರ ಗಾಯತ್ರಿ ಮಂತ್ರವನ್ನು ಪಠಿಸಲು ಕೆಲವು ನಿಯಮಗಳಿವೆ ಅವುಗಳನ್ನು ನೀವು ಪಾಲಿಸಿದರೆ ಶ್ರೀ ಗುರುರಾಯರು ನಿಮ್ಮ ಕನಸಿನಲ್ಲಿ ಬಂದು ನಿಮಗೆ ಅನುಗ್ರಹಿಸಿ ನಿಮ್ಮ ಸಕಲ ಸಂಕಷ್ಟಗಳನ್ನು ಕಳೆಯುತ್ತಾರೆ.ಆ ನಿಯಮಗಳು ಯಾವುವೆಂದರೆ ಶ್ರೀ ಗುರು ರಾಘವೇಂದ್ರ ಗಾಯತ್ರಿ ಮಂತ್ರವನ್ನು ಪಠಿಸಲು ದಿನವೂ ಆಗಲಿಲ್ಲವಾದರು ಗುರುರಾಯರ ವಿಶೇಷ ದಿನವಾದ…
ಬೆಂಗಳೂರು : ಆ್ಯಸಿಡ್ ದಾಳಿಗೊಳಗಾದವರಿಗೆ ಕಾರ್ಮಿಕ ಇಲಾಖೆ ವತಿಯಿಂದ ರೂ.2 ಲಕ್ಷ ಪರಿಹಾರ ನೀಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ತಿಳಿಸಿದರು. ಕಲಾಪದ ವೇಳೆ ವಿಧಾನ ಪರಿಷತ್ನಲ್ಲಿ ಸದಸ್ಯರಾದ ಕೆ ಶಿವಕುಮಾರ್ ಅವರು ಆ್ಯಸಿಡ್ ದಾಳಿ ಪ್ರಕರಣಗಳು ಹಾಗೂ ಆ್ಯಸಿಡ್ ಸಂತ್ರಸ್ತರ ಕುರಿತು ಪ್ರಸ್ತಾಪಿಸಿದ ವೇಳೆ ಸಚಿವರು ಮಾತನಾಡಿದರು. ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಪರಿಹಾರ ನೀಡುವ ಸಂಬಂಧ ಈಗಾಗಲೇ ಸಮಾಲೋಚನೆ ನಡೆಸಲಾಗಿದೆ. ದಾಳಿ ಪ್ರಮಾಣ, ಸುಟ್ಟಿರುವುದರ ಆಧಾರದ ಮೇಲೆ ಪರಿಹಾರವನ್ನು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ನೀಡಲಾಗುವುದು ಎಂದು ವಿವರಿಸಿದರು. https://kannadanewsnow.com/kannada/jail-time-if-gas-supply-disruptions-central-government-implements-esma-across-the-country/ https://kannadanewsnow.com/kannada/ias-training-absent-mlc-ramesh-babu-draws-governments-attention/
ನವದೆಹಲಿ: ದೇಶದ ಪ್ರಮುಖ ವಿಮಾನಯಾನ ಸಂಸ್ಥೆಯಾದ ಇಂಡಿಗೋ (IndiGo) ಮಂಗಳವಾರ ಮಹತ್ವದ ಬದಲಾವಣೆಗೆ ಸಾಕ್ಷಿಯಾಗಿದೆ. ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಪೀಟರ್ ಎಲ್ಬರ್ಸ್ ಅವರು ಮಾರ್ಚ್ 10, 2026 ರಿಂದ ಜಾರಿಗೆ ಬರುವಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಗೆ ಕಾರಣವೇನು? ಕಳೆದ ಡಿಸೆಂಬರ್ ತಿಂಗಳಲ್ಲಿ ಇಂಡಿಗೋ ಸಂಸ್ಥೆಯು ತನ್ನ ಇತಿಹಾಸದಲ್ಲೇ ಅತ್ಯಂತ ಭೀಕರವಾದ ‘ಕಾರ್ಯಾಚರಣೆಯ ಬಿಕ್ಕಟ್ಟನ್ನು’ (Operational Crisis) ಎದುರಿಸಿತ್ತು. ವಿಮಾನಗಳ ಹಾರಾಟದಲ್ಲಿನ ವಿಳಂಬ ಮತ್ತು ರದ್ದತಿಯಿಂದಾಗಿ ಸಾರ್ವಜನಿಕರು ಹಾಗೂ ಸರ್ಕಾರದ ತೀವ್ರ ಆಕ್ರೋಶಕ್ಕೆ ಸಂಸ್ಥೆ ಗುರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಉಂಟಾದ ಒತ್ತಡ ಮತ್ತು ಪಾರದರ್ಶಕತೆಯ ಕೊರತೆಯ ಆರೋಪಗಳ ಬೆನ್ನಲ್ಲೇ ಎಲ್ಬರ್ಸ್ ಅಧಿಕಾರದಿಂದ ಕೆಳಗಿಳಿದಿದ್ದಾರೆ. ಹೊಸ ಜವಾಬ್ದಾರಿ ಯಾರಿಗೆ? ಪೀಟರ್ ಎಲ್ಬರ್ಸ್ ನಿರ್ಗಮನದ ನಂತರ, ಇಂಡಿಗೋದ ವ್ಯವಸ್ಥಾಪಕ ನಿರ್ದೇಶಕರಾಗಿರುವ ರಾಹುಲ್ ಭಾಟಿಯಾ ಅವರು ಹಂಗಾಮಿ ಆಧಾರದ ಮೇಲೆ ಕಂಪನಿಯ ನಿರ್ವಹಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಮುಂದಿನ ಕಾಯಂ ವ್ಯವಸ್ಥೆ ಮಾಡುವವರೆಗೆ ಭಾಟಿಯಾ ಅವರೇ ಕಂಪನಿಯ ಎಲ್ಲಾ ವ್ಯವಹಾರಗಳನ್ನು ನೋಡಿಕೊಳ್ಳಲಿದ್ದಾರೆ ಎಂದು ಏರ್ಲೈನ್ಸ್…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು. ಶಿವಕುಮಾರ್ ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ದತೆ ಮತ್ತು ಕಠಿಣ ಶ್ರಮ ನಮ್ಮ ಪಕ್ಷದ ಎಲ್ಲ ಯುವನಾಯಕರಿಗೆ ಮಾದರಿಯಾದುದು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ವಿರೋಧ ಪಕ್ಷವಾದ ಬಿಜೆಪಿ ಸುಳ್ಳು ಕೇಸ್ ಗಳನ್ನು ಹಾಕಿ ಬಗೆಬಗೆಯ ಕಿರುಕಳ ನೀಡಿದರೂ ಶಿವಕುಮಾರ್ ಅವರು ಮಣಿಯದೆ ಪಕ್ಷಕ್ಕೆ ನಿಷ್ಠರಾಗಿ ಉಳಿದಿರುವುದು ಕಾಂಗ್ರೆಸ್ ಪಕ್ಷದ ಬಗ್ಗೆ ಅವರಲ್ಲಿರುವ ರಾಜಿಯಿಲ್ಲದ ನಿಷ್ಠೆಗೆ ಸಾಕ್ಷಿಯಾಗಿದೆ.. ಇದು ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ಸ್ಪೂರ್ತಿದಾಯಕ ನಡವಳಿಕೆ ಆಗಿದೆ ಎಂದಿದ್ದಾರೆ. ಕೋಮುವಾದಿ ಶಕ್ತಿಗಳನ್ನು ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಜೊತೆಯಲ್ಲಿ ಡಿ.ಕೆ. ಶಿವಕುಮಾರ್ ಹಗಲಿರುಳು ದುಡಿದಿದ್ದಾರೆ. ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ಮತ್ತೆ ಕಟ್ಟುವಲ್ಲಿ ಶಿವಕುಮಾರ್ ನನ್ನ ಹೆಗಲಿಗೆ ಹೆಗಲಾಗಿ ನಿಂತಿದ್ದಾರೆ ಅಂತ ತಿಳಿಸಿದ್ದಾರೆ. ನನಗಿಂತ ಕಿರಿಯರಾದ ಶಿವಕುಮಾರ್ ಅವರಿಗೆ…
ಬೆಂಗಳೂರು: ರಾಜ್ಯ ವಿಧಾನ ಪರಿಷತ್ತಿನ ಖಾಲಿ ಇರುವ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷವು (ಬಿಜೆಪಿ) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಮುಂಬರುವ ಚುನಾವಣಾ ಕಣಕ್ಕೆ ಭರ್ಜರಿ ಸಿದ್ಧತೆ ನಡೆಸುವುದರ ಜೊತೆಗೆ, ಸಂಭಾವ್ಯ ಅಭ್ಯರ್ಥಿಗಳ ನಡುವಿನ ಕುತೂಹಲಕ್ಕೆ ತೆರೆ ಎಳೆದಿದೆ. ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯು ಒಟ್ಟು ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಪ್ರಮುಖವಾಗಿ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಮಾಜಿ ಸದಸ್ಯ ಸುಶೀಲ್ ನಮೋಶಿ ಅವರಿಗೆ ಮತ್ತೊಮ್ಮೆ ಟಿಕೆಟ್ ನೀಡಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿನ ಅವರ ಸುದೀರ್ಘ ಅನುಭವ ಮತ್ತು ಪ್ರಭಾವವನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇನ್ನುಳಿದಂತೆ, ಪೂರ್ವ ಪದವೀಧರ ಕ್ಷೇತ್ರಕ್ಕೆ ಹಿರಿಯ ನಾಯಕ ಎಸ್.ವಿ. ಸಂಕನೂರ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಸಂಕನೂರ್ ಅವರು ಈ ಹಿಂದೆಯೂ ಪದವೀಧರರ ಸಮಸ್ಯೆಗಳ ಪರವಾಗಿ ಧ್ವನಿ ಎತ್ತಿದ ಹಿನ್ನೆಲೆ ಅವರಿಗೆ ಮಣೆ ಹಾಕಲಾಗಿದೆ. ಹಾಗೆಯೇ, ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿ ಕೆ.ಎಂ. ಸುರೇಶ್ ಅವರಿಗೆ ಟಿಕೆಟ್…
ವಿಧಾನಸಭೆ : ಮರ ಕಡಿತಲೆಯನ್ನು ಒಳಗೊಂಡ ಯಾವುದೇ ರಸ್ತೆ ಯೋಜನೆಯಲ್ಲಿ ಕಡಿಯುವ ಒಂದು ಮರದ ಬದಲಿಗೆ 10 ಪಟ್ಟು ಸಸಿ ನೆಡಲು ವಿಧಿಸುವ ಶುಲ್ಕದ ಮೊದ ಪ್ರತಿ ಸಸಿಗೆ 411.27 ಆಗಿದ್ದು, ಇದನ್ನು ಉಪಯೋಗಿ ಸಂಸ್ಥೆ ಪಾವತಿಸಬೇಕಾಗುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಸಭೆಗಿಂದು ಸ್ಪಷ್ಟಪಡಿಸಿದ್ದಾರೆ. ಸದಸ್ಯ ತಮ್ಮಯ್ಯ ಎಚ್.ಡಿ. ಅವರು ರಾ.ಹೆ.373 ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಶುಲ್ಕ ವಿನಾಯಿತಿ ನೀಡುವ ಕುರಿತಂತೆ ಗಮನ ಸೆಳೆದ ಪ್ರಸ್ತಾಪಕ್ಕೆ, ಉತ್ತರಿಸಿದ ಸಚಿವರು, ಬೆಳೆದ ಮರಗಳನ್ನು ಕಡಿಯುವುದನ್ನು ಒಳಗೊಂಡ ರಸ್ತೆ ಯೋಜನೆಗಳ ವಿಚಾರದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್.ಎಚ್.ಎ.ಐ.)ಗೆ ಪ್ರತಿ ಕಿ.ಮೀ.ಗೆ 9.06 ಲಕ್ಷ ಶುಲ್ಕ ವಿಧಿಸಲಾಗಿರುತ್ತದೆ. ಆದರೆ ಎನ್.ಎಚ್.ಎ.ಐ.ನ ವಿಸ್ತೃತ ಯೋಜನಾ ವರದಿಯಲ್ಲಿ ಈ 9 ಲಕ್ಷ ಸೇರಿಸಿ, ಗುತ್ತಿಗೆದಾರರ ಕಡೆಯಿಂದಲೇ ಸಸಿ ನೆಡಿಸುವ ಕೆಲಸ ಮಾಡುತ್ತಿದ್ದು, ಇದಕ್ಕೆ ಮಾತ್ರ ವಿನಾಯಿತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಎನ್.ಎಚ್.ಎ.ಐ.ಗೆ ಈಗ ನೀಡಿರುವ ಈ ವಿನಾಯಿತಿಯ ಪರಾಮರ್ಶೆ ಮಾಡಲಾಗುತ್ತಿದ್ದು,…














