Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ಶಿಕ್ಷಕರು, ಮುಖ್ಯ ಶಿಕ್ಷಕರು, ಉಪನ್ಯಾಸಕರು, ಪ್ರಾಂಶುಪಾಲರು, ಅಧಿಕಾರಿಗಳು ಬೋಧಕೇತರ ಸಿಬ್ಬಂದಿ, ಅಧಿಕಾರಿಗಳು ಕೆಎಎಎಂಎಸ್ ಮೊಬೈಲ್ ಅಪ್ಲಿಕೇಷನ್ ಮೂಲಕ ಹಾಜರಾತಿ ದಾಖಲಿಸುವುದು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ ಸಂಖ್ಯೆ 451ರಲ್ಲಿ “ಕೃತಕ ಬುದ್ಧಿಮತ್ತೆ (ಎಐ) ಮತ್ತು ಭೌಗೋಳಿಕ ಮಾಹಿತಿ ವ್ಯವಸ್ಥೆ (ಜಿಐಎಸ್) ಹಾಗೂ ಮುಖ ಚಹರೆ ಗುರುತಿಸುವ ಅಪ್ಲಿಕೇಶನ್ಗಳಂತಹ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಎಲ್ಲಾ ಇಲಾಖೆಗಳಲ್ಲಿ ಕರ್ನಾಟಕ ಅಡ್ವಾನ್ಸ್ ಅಟೆಂಡೆನ್ಸ್ ಮ್ಯಾನೇಜೆಂಟ್ ಸಿಸ್ಟಮ್ (ಕರ್ತವ್ಯ ಕೆ.ಎ.ಎ.ಎಂ.ಎಸ್) ಅನ್ನು ಜಾರಿಗೆ ತರಲಾಗುವುದು” ಎಂದು ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿರುತ್ತಾರೆ ಎಂದಿದ್ದಾರೆ. ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಎಲ್ಲಾ ಸಿಬ್ಬಂದಿಗೆ ಕರ್ತವ್ಯ (KAAMS) ಮೊಬೈಲ್ ಅಪ್ಲಿಕೇಶನ್ ಮೂಲಕ ಹಾಜರಾತಿಯನ್ನು ನಿರ್ವಹಿಸಲು ಪ್ರಸ್ತಾಪಿಸಲಾಗಿದ್ದು, ರಾಜ್ಯ ಸರ್ಕಾರಿ ನೌಕರರು ಮೊಬೈಲ್ ಅಪ್ಲಿಕೇಶನ್ ಅನ್ನು ಡೌನೋಡ್ ಮಾಡಿಕೊಳ್ಳಬಹುದು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಸಾರಿಗೆ ನೌಕರರ ಹಿಂಬಾಕಿ ವೇತನ, ವೇತನ ಪರಿಷ್ಕರಣೆಯನ್ನು ಮಾಡಿ ಅಧಿಕೃತ ಆದೇಶ ಮಾಡಿದೆ. ಇದರ ನಡುವೆಯೂ ನಾಳೆ ಬೆಂಗಳೂರು ಚಲೋ ಫಿಕ್ಸ್ ಆಗಿದೆ. ಇಂದು ನಿಗದಿಯಂತೆ ಬೆಂಗಳೂರು ಚಲೋ ನಡೆಯಲಿದೆ ಎಂಬುದಾಗಿ ಸಾರಿಗೆ ನೌಕರರ ಮುಖಂಡ ಜಗದೀಶ್ ತಿಳಿಸಿದ್ದಾರೆ. ಬೆಂಗಳೂರಲ್ಲಿ ಸಾರಿಗೆ ನೌಕರರ ಮುಖಂಡ ಜಗದೀಶ್ ಮಾಹಿತಿ ನೀಡಿದ್ದು, ನಮಗೆ ಇನ್ನೂ ಸರ್ಕಾರದಿಂದ ಯಾವುದೇ ಅಧಿಕೃತ ಆದೇಶ ಬಂದಿಲ್ಲ. ಇಂದು 5ರಿಂದ 10 ಸಾವಿರ ನೌಕರರು ಫ್ರೀಡಂ ಪಾರ್ಕ್ ನಲ್ಲಿ ಸೇರಲಿದ್ದಾರೆ. ರಾಜ್ಯ ಸರ್ಕಾರವು 38 ತಿಂಗಳ ಹಿಂಬಾಕಿ ಕೊಡಲೇಬೇಕು ಎಂದು ಆಗ್ರಹಿಸಿದರು. 2024ರಿಂದ ವೇತನ ಪರಿಷ್ಕರಣೆ ಆಗಬೇಕೆನ್ನುವುದು ನಮ್ಮ ಕನಸಾಗಿತ್ತು. ಕಾರ್ಮಿಕ ಮುಖಂಡ ದಿವಂಗತ ಅನಂತ ಸುಬ್ಬರಾವ್ ಅವರ ಕನಸು ಕೂಡ ಇದೇ ಆಗಿತ್ತು. ಸರ್ಕಾರದ ನಿರ್ಧಾರದಿಂದ ಸಿಬ್ಬಂದಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಲಿದೆ. ಮುಷ್ಕರದ ಬಗ್ಗೆ ಇಂದು ಸಂಜೆ 4 ಗಂಟೆಗೆ ಫ್ರೀಡಂ ಪಾರ್ಕ್ ನಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು. ರಾಜ್ಯ ಸರ್ಕಾರದಿಂದ ಸಾರಿಗೆ ನೌಕರರ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಎನ್ನುವಂತೆ 2026ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆ ಹೊರಡಿಸಿದ್ದು, 2026ರ ಪ್ರಥಮ ಅಧಿವೇಶನ ಇಲಾಖಾ ಪರೀಕ್ಷೆಗೆ ದಿನಾಂಕ 21-02-2026ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದೆ ಎಂದಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21-03-2026 ಆಗಿದೆ. ಅರ್ಜಿ ಶುಲ್ಕ ಪಾವಲತಿಸಲು ಕೊನೆಯ ದಿನಾಂಕ 23-03-2026 ಆಗಿದೆ. ಇಲಾಖಾ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗದ ವೆಬ್ ಸೈಟ್ http://www.kpsc.kar.nic.in ಭೇಟಿ ನೀಡುವಂತೆ ತಿಳಿಸಿದೆ. ಸರ್ಕಾರಿ ನೌಕರರು, ಸರ್ಕಾರಿ ಸ್ವಾಮ್ಯಕ್ಕೊಳಪಟ್ಟ ನಿಗಮ, ಮಂಡಳಿ, ಸ್ಥಳೀಯ ಸಂಸ್ಥೆಗಳು, ವಿವಿ, ಪ್ರಾಧಿಕಾರಗಳ ಖಾಯಂ ನೌಕರರು ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಗ್ರೂಪ್-ಡಿ ನೌಕರರು ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದಿದೆ. https://kannadanewsnow.com/kannada/there-are-no-rules-for-marriage-hall-authorities-to-verify-the-age-records-of-the-bride-and-groom-high-court/
ಬೆಂಗಳೂರು : ರಾಜ್ಯ ಸಿವಿಲ್ ಸೇವೆ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಟ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (As a one time messure) 5 ವರ್ಷಗಳ ಸಡಿಲಿಕೆ ನೀಡಿ ಸರ್ಕಾರವು 2026 ನೇ ಜನವರಿ 29 ರಂದು ಆದೇಶ ಹೊರಡಿಸಿದೆ. ಹಲವಾರು ಉದ್ಯೋಗಾಕಾಂಕ್ಷಿಗಳು, ಜನಪ್ರತಿನಿಧಿಗಳು ಮತ್ತು ಸಂಘಸಂಸ್ಥೆಗಳು ಮನವಿ ಸಲ್ಲಿಸಿ, ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡುವಂತೆ ಕೋರಿರುತ್ತಾರೆ. ಸದರಿ ಮನವಿಗಳನ್ನು ಸರ್ಕಾರವು ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಕೆ ನೀಡಲು ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಸೇವಾ ನಿಯಮಗಳು-1) ಸರ್ಕಾರದ ಅಧೀನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/there-are-no-rules-for-marriage-hall-authorities-to-verify-the-age-records-of-the-bride-and-groom-high-court/
ಬೆಂಗಳೂರು: ರಾಜ್ಯ ಸರ್ಕಾರವು ಸಾರಿಗೆ ನೌಕರರ ಒತ್ತಾಯಕ್ಕೆ ಮಣಿದಿದೆ. ಇಂದು 26 ತಿಂಗಳ ಹಿಂಬಾಗಿ ನೀಡಲು ನಿರ್ಧರಿಸಿದೆ. ಅಲ್ಲದೇ ಮಾರ್ಚ್.1, 2025ರಿಂದ ವೇತನ ಹೆಚ್ಚಿಸಲು ನಿರ್ಧರಾವನ್ನು ಕೈಗೊಂಡು ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಿದ್ದು, ರಸ್ತೆ ಸಾರಿಗೆ ನಿಗಮಗಳ ಅಧಿನಿಯಮ 1950ರ ಸೆಕ್ಷನ್ 34(1)ರನ್ವಯ ದಿನಾಂಕ:01.03.2023ರಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮತ್ತು ಕಿಂಕೋ ಅಧಿಕಾರಿಗಳ/ ನೌಕರರು ದಿನಾಂಕ:31.12.2019ರಂದು ಪಡೆಯುತ್ತಿದ್ದ ಮೂಲ ವೇತನವನ್ನು ಶೇಕಡ 15 ರಷ್ಟು ಹೆಚ್ಚಿಸಿ ದಿನಾಂಕ:01.03.2023ರಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಿಸಿ ಆದೇಶಿಸಲಾಗಿತ್ತು ಎಂದಿದೆ. ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಇವರು ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ಅಧಿಕಾರಿಗಳು ಮತ್ತು ನೌಕರರ ಮೂಲವೇತನವನ್ನು ಪರಿಷ್ಕರಿಸಲು ಹಾಗೂ ಉನ್ನತ ವೇತನ ಶ್ರೇಣಿ,…
ಬೆಂಗಳೂರು: ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ಕ್ಕೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಇದೇ ಹೊತ್ತಿನಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ಗೊಂದಲ ನಿವಾರಣೆಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆ ಸಂಬಂಧ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಲು ಶಿಕ್ಷಣ ಇಲಾಖೆಯಿಂದ 080 23310076, 080 23310075 ಸಹಾಯವಾಣಿ ಸಂಖ್ಯೆಗಳನ್ನು ಆರಂಭಿಸಲಾಗಿದೆ. ಇದಕ್ಕೆ ವಿದ್ಯಾರ್ಥಿಗಳು ಕರೆ ಮಾಡಿ, ಪರೀಕ್ಷೆ ಬಗೆಗಿನ ಗೊಂದಲ, ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂಬುದಾಗಿ ತಿಳಿಸಿದೆ. https://twitter.com/KarnatakaVarthe/status/2024113999554527537 ಕರ್ನಾಟಕ ದ್ವಿತೀಯ PUC ಪರೀಕ್ಷೆ-1ರ ಫಲಿತಾಂಶ ಏ.7ಕ್ಕೆ, SSLC ಪರೀಕ್ಷೆ-1ರದ್ದು ಏ.24ಕ್ಕೆ ಪ್ರಕಟ ದ್ವಿತೀಯ ಪಿಯುಸಿ ಪರೀಕ್ಷೆ-1 ದಿನಾಂಕ 28-02-2026ರಿಂದ ಆರಂಭಗೊಂಡು, 17-03-2026ರವರೆಗೆ ನಡೆಯಲಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ-1ರದ್ದು ದಿನಾಂಕ 18-03-2026ರಿಂದ ಆರಂಭಗೊಂಡು, 02-04-2026ಕ್ಕೆ ಮುಕ್ತಾಯಗೊಳ್ಳಲಿದೆ. ಈ ಪರೀಕ್ಷೆಗಳ ಫಲಿತಾಂಶ ಏಪ್ರಿಲ್ ನಲ್ಲಿ ಪ್ರಕಟಗೊಳ್ಳಲಿದೆ ಎಂಬುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ…
ಬೆಂಗಳೂರು : ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ. ಪರಿಹಾರದ ಚೆಕ್ ವಿತರಿಸಿದರು. ಬೆಸ್ಕಾಂ ಕಾರ್ಪೋರೇಟ್ ಕಚೇರಿಯಲ್ಲಿ ಸಂತ್ರಸ್ತರ ಕುಟುಂಬದವರನ್ನು ಬುಧವಾರ ಭೇಟಿಯಾದ ಸಚಿವರು, ಅವರಿಗೆ ವಿಮಾ ಸಹಾಯವಾಗಿ ಚೆಕ್ ವಿತರಿಸಿದರು. ವಿದ್ಯುದಾಘಾತದಲ್ಲಿ ಮೃತಪಟ್ಟ ಗೌರಿಬಿದನೂರು ಉಪವಿಭಾಗದ ಸಹಾಯಕ ಪವರ್ಮ್ಯಾನ್ ಉದಯ್ ಕುಮಾರ್ ಅವರ ಪತ್ನಿ ವಿ. ಕೀರ್ತನಾ, ರಸ್ತೆ ಅಪಘಾತಗಳಲ್ಲಿ ಮೃತರಾದ ಗುಡಿಬಂಡೆ ಉಪವಿಭಾಗದ ಪವರ್ಮ್ಯಾನ್ ಬಿ.ವಿ. ಮಂಜಪ್ಪ ಅವರ ಪತ್ನಿ ದಾಕ್ಷಾಯಿಣಿ ಹಾಗೂ ಚಿಂತಾಮಣಿ ಉಪವಿಭಾಗದ ಪವರ್ ಮ್ಯಾನ್ ಅಮರನಾಥ್ ಅವರ ಪತ್ನಿ ಮುನಿರತ್ನಮ್ಮ ಅವರು ಸಚಿವರಿಂದ ಪರಿಹಾರದ ಚೆಕ್ ಸ್ವೀಕರಿಸಿದರು. “ನಮ್ಮ ಇಲಾಖೆಯ ಸಿಬ್ಬಂದಿ, ವಿಶೇಷವಾಗಿ ಲೈನ್ಮ್ಯಾನ್ಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಅವರಿಗೆ ಅಗತ್ಯ ವೈಯಕ್ತಿಕ ರಕ್ಷಣಾ ಸಾಧನಗಳನ್ನು ಒದಗಿಸಲಾಗುತ್ತದೆ. ಆದರೂ, ಅನಿರೀಕ್ಷಿತ ಘಟನೆಗಳಲ್ಲಿ ಮೃತಪಟ್ಟ ಸಿಬ್ಬಂದಿಯ ಕುಟುಂಬದವರಿಗೆ ನೆರವಿನ ಹಸ್ತ ಚಾಚಲಾಗುತ್ತದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಸೂಪರ್ ಸ್ಯಾಲರಿ…
ಶಿವಮೊಗ್ಗ: ಕಿರಿಯ ವಯಸ್ಸಿನಲ್ಲಿಯೇ ನ್ಯಾಯಾಧೀಶರಾಗಿ ಆಯ್ಕೆಯಾದಂತ ತಮ್ಮ ವಿಧಾನಸಭಾ ಕ್ಷೇತ್ರದ ಸಂಯುಕ್ತಾ ಎಸ್ ಮುಪ್ಪಾನೆ ಹಾಗೂ ರಕ್ಷಿತಾ ಅವರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ನನ್ನ ಕ್ಷೇತ್ರದ ಸಾಗರ ತಾಲ್ಲೂಕಿನ ಅರಲಗೋಡು ಗ್ರಾಮ ಪಂಚಾಯ್ತಿಯ ಜೇಗಳ ಗ್ರಾಮದ ಸಂಯುಕ್ತಾ ಹಾಗೂ ಹೊಸನಗರ ತಾಲ್ಲೂಕಿನ ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಾಳೇಶ್ವರದ ರಕ್ಷಿತಾ.ಕೆ.ಎಸ್ ಅವರು ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ. ಅವರ ಸಾಧನೆ ಇತರರಿಗೂ ಮಾದರಿಯಾದಂತದ್ದು ಎಂದಿದ್ದಾರೆ. ನ್ಯಾಯಾಧೀಶರಾಗಬೇಕು ಎಂಬುದು ಅನೇಕರ ಆಸೆಯಾಗಿದೆ. ಆ ಆಸೆಯನ್ನು ಜೇಗಳ ಗ್ರಾಮದ ಸಂಯುಕ್ತಾ.ಎಸ್ ಮುಪ್ಪಾನೆ, ಹೊಸನಗರದ ಕಾಳೇಶ್ವರದ ರಕ್ಷಿತಾ ಕೆ.ಎಸ್ ಈಡೇರಿಸಿದ್ದಾರೆ. ಆ ಮೂಲಕ ಕುಟುಂಬಸ್ಥರಿಗೂ ಗೌರವ ಹೆಚ್ಚಿಸಿದ್ದಾರೆ. ಅವರ ಮುಂದಿನ ನ್ಯಾಯಾಧೀಶರ ವೃತ್ತಿ ಬದುಕು ಉತ್ತಮವಾಗಿರಲಿ ಎಂಬುದಾಗಿ ಹಾರೈಸಿ, ಅಭಿನಂದಿಸಿದ್ದಾರೆ. https://kannadanewsnow.com/kannada/bengaluru-chalo-fix-tomorrow-despite-state-governments-backlash-against-transport-employees-salary-revision-order/ https://kannadanewsnow.com/kannada/there-are-no-rules-for-marriage-hall-authorities-to-verify-the-age-records-of-the-bride-and-groom-high-court/
BREAKING: ಸಾರಿಗೆ ನಿಗಮಗಳ ಸಿಬ್ಬಂದಿ ಒತ್ತಾಯಕ್ಕೆ ಮಣಿದ ರಾಜ್ಯ ಸರ್ಕಾರ: ಹಿಂಬಾಕಿ ಬಿಡುಗಡೆ, ವೇತನ ಪರಿಷ್ಕರಿಸಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರವು ಸಾರಿಗೆ ನೌಕರರ ಒತ್ತಾಯಕ್ಕೆ ಮಣಿದಿದೆ. ಇಂದು 26 ತಿಂಗಳ ಹಿಂಬಾಗಿ ನೀಡಲು ನಿರ್ಧರಿಸಿದೆ. ಅಲ್ಲದೇ ಮಾರ್ಚ್.1, 2025ರಿಂದ ವೇತನ ಹೆಚ್ಚಿಸಲು ನಿರ್ಧರಾವನ್ನು ಕೈಗೊಂಡು ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದು, 38 ತಿಂಗಳ ಹಿಂಬಾಕಿ ವೇತನ ಬೇಡಿಕೆಯಲ್ಲಿ 26 ತಿಂಗಳ ಹಿಂಬಾಕಿ ವೇತನ ಬಿಡುಗಡೆ ಮತ್ತು ವೆಚ್ಚಕ್ಕಾಗಿ 1239.47 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದಾಗಿ ತಿಳಿಸಿದ್ದಾರೆ. ಇದಲ್ಲದೇ ದಿನಾಂಕ 01-04-2025ರಿಂದ ಜಾರಿಗೆ ಬರುವಂತೆ ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ಮತ್ತು ಅಧಿಕಾರಿಗಳಿಗೆ ವೇತನ ಹೆಚ್ಚಳ ಪರಿಷ್ಕರಣೆಗೂ ಆದೇಶಿಸಿದ್ದಾರೆ. ಈ ಮೂಲಕ ಸಾರಿಗೆ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯದ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳ ಅಧಿಕಾರಿ/ನೌಕರರ ವೇತನ ಪರಿಷ್ಕರಣೆ ಸಂಬಂಧಪಟ್ಟಂತೆ 1) ಹಿಂಬಾಕಿ ಪಾವತಿ: ಒಟ್ಟು 26 ತಿಂಗಳ ಹಿಂಬಾಕಿ ವೇತನ ಬಿಡುಗಡೆ ಮತ್ತು ವೆಚ್ಚ ರೂ.1239.47 ಕೋಟಿ: ಅ) 38 ತಿಂಗಳ ಹಿಂಬಾಕಿ ವೇತನ…
ಶಿವಮೊಗ್ಗ : ಅಂಗನವಾಡಿ ನೌಕರರ ಕಾರ್ಯ ಶ್ಲಾಘನೀಯವಾದದ್ದು. ನಿಮ್ಮ ನಿಷ್ಕಲ್ಮಶ ಸೇವೆಗೆ ತಕ್ಕ ಪ್ರತಿಫಲ ಸರ್ಕಾರದಿಂದ ಸಿಗಬೇಕು ಎಂದು ಸಾಗರ ನಗರಸಭೆ ನಿಕಟಪೂರ್ವ ಅಧ್ಯಕ್ಷೆ ಮೈತ್ರಿ ವಿ. ಪಾಟೀಲ್ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿರುವಂತ ಸರ್ಕಾರಿ ನೌಕರರ ಭವನದಲ್ಲಿ ಬುಧವಾರ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ವiತ್ತು ಸಹಾಯಕಿಯರ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದಂತ ಅವರು, ಅಂಗನವಾಡಿ ಪುಟ್ಟ ಮಕ್ಕಳಿಗೆ ಶುಚಿರುಚಿಯಾದ ಆಹಾರ ನೀಡುವ ಜೊತೆಗೆ ಅವರಲ್ಲಿ ಅಕ್ಷರಾಭ್ಯಾಸ ಮಾಡಿಸುವ ಉತ್ತಮ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಅಂಗನವಾಡಿ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆ. ಸರ್ಕಾರದ ವಿವಿಧ ಯೋಜನೆಗಳು ನಿಮ್ಮ ಮೂಲಕ ಯಶಸ್ವಿ ಅನುಷ್ಟಾನಗೊಳ್ಳುತ್ತಿದೆ ಎಂದು ಹೇಳಿದರು. ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕಲಸೆ ಚಂದ್ರಪ್ಪ ಮಾತನಾಡಿ, ಮನೆಯಲ್ಲಿ ಮಕ್ಕಳಿಗೆ ತಾಯಿ ಹೇಗೆ ಆರೈಕೆ ಮಾಡುತ್ತಾಳೋ, ಅಂಗನವಾಡಿಗಳಲ್ಲಿ ನೀವು ಮಕ್ಕಳನ್ನು ಜೋಪಾನವಾಗಿ ನೋಡಿ ಕೊಳ್ಳುತ್ತಿದ್ದೀರಿ. ಸರ್ಕಾರ ನಿಮಗೆ ಅನೇಕ ಜವಾಬ್ದಾರಿಯನ್ನು ನೀಡಿದ್ದು…














