Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಗ್ರಾಮೀಣ ನಾವೀನ್ಯತೆ ಮತ್ತು ಉದ್ಯಮಶೀಲತೆ ಬಲಪಡಿಸಲು ಕಲಬುರಗಿಯಲ್ಲಿ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳ ನಾವೀನ್ಯತೆಗೆ ಸಂಬಂಧಿಸಿದಂತೆ ಶ್ರೇಷ್ಠತೆಯ ಕೇಂದ್ರ (ಸಿಒಇ) ಸ್ಥಾಪಿಸಲು ರಾಜ್ಯ ಸರ್ಕಾರವು ಕೃಷಿ ಕಲ್ಪ ಫೌಂಡೇಷನ್ ಜೊತೆಗೆ ತಿಳಿವಳಿಕೆ ಒಪ್ಪಂದ (ಎಂಒಯು) ಪತ್ರಕ್ಕೆ ಸಹಿ ಹಾಕಿದೆ. ರಾಜ್ಯ ಸರ್ಕಾರದ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕೆಐಟಿಎಸ್) ಮೂಲಕ ಈ ಒಪ್ಪಂದಕ್ಕೆ ಸಹಿ ಹಾಕಿದೆ. ರಾಜ್ಯ ಸರ್ಕಾರದ ಪರವಾಗಿ ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕೆಐಟಿಎಸ್) ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಶರಣಪ್ಪ ಸಂಕನೂರ ಮತ್ತು ಈ ಉಪಕ್ರಮದ ಅನುಷ್ಠಾನ ಪಾಲುದಾರಿಕೆ ಸಂಸ್ಥೆಯಾಗಿ ಕಾರ್ಯನಿರ್ವಹಿಸಲಿರುವ ಕೃಷಿ ಕಲ್ಪ ಫೌಂಡೇಷನ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಎಂ. ಪಾಟೀಲ ಅವರು ಈ ಒಪ್ಪಂದಕ್ಕೆ ಸಹಿ ಹಾಕಿದರು. ಬೆಂಗಳೂರಿನ ಕೆಐಟಿಎಸ್ ಕಚೇರಿಯಲ್ಲಿ ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ, ಜೈವಿಕ ತಂತ್ರಜ್ಞಾನ ಮತ್ತು…
ಬೆಂಗಳೂರು: ಪೂರ್ಣ ಪ್ರಮಾಣ ಪತ್ರ ಅಥವಾ ಕಟ್ಟಡಗಳ ವಾಸಯೋಗ್ಯ ಪ್ರಮಾಣಪತ್ರ (OC) ನೀಡಿಕೆಯಲ್ಲಿನ ಗೊಂದಲ ನಿವಾರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘವು ಇದೇ ಮಾರ್ಚ್ 11ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಸೋಮವಾರ ಬೆಂಗಳೂರಿನ ಸಂಘದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಸಿ. ರಮೇಶ್ ಅವರು ಈ ವಿಷಯವನ್ನು ಪ್ರಕಟಿಸಿದರು. ಸಂಘದ ಪ್ರಮುಖ ಬೇಡಿಕೆಗಳೇನು?: ವಾಸಯೋಗ್ಯ ಪ್ರಮಾಣಪತ್ರದ (OC) ಗೊಂದಲ: ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಏಪ್ರಿಲ್ 2025 ರಿಂದ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ ಮತ್ತು ನಿರ್ಮಾಣ ಹಂತದಲ್ಲಿರುವ ಕಟ್ಟಡಗಳಿಗೆ ಪೂರ್ಣ ಪ್ರಮಾಣ ಪತ್ರ ಅಥವಾ ವಾಸಯೋಗ್ಯ ಪ್ರಮಾಣಪತ್ರ ನೀಡುವ ಕುರಿತು ಸರ್ಕಾರ ಸ್ಪಷ್ಟ ಮಾರ್ಗಸೂಚಿ ಹೊರಡಿಸಬೇಕು. ಗ್ರಾಹಕರಿಗೆ ವಿನಾಯಿತಿ ನೀಡಲು ಆಗ್ರಹ: ರಾಜ್ಯದಲ್ಲಿ ಲಕ್ಷಾಂತರ ಜನರು ಬ್ಯಾಂಕ್ ಸಾಲ ಪಡೆದು ಭೂ ಪರಿವರ್ತಿತ ಮತ್ತು ಪರಿವರ್ತನೆಯಾಗದ ಜಾಗಗಳಲ್ಲಿ ಮನೆ ನಿರ್ಮಿಸಿಕೊಳ್ಳುತ್ತಿದ್ದಾರೆ. ಸುಪ್ರೀಂ ಕೋರ್ಟ್…
ಟೋಕಿಯೋ: ನಾವು ಪ್ರತಿದಿನ ಬಳಸುವ ಸಾಮಾನ್ಯ ದಿಂಬುಗಳು ನಮ್ಮ ಆರೋಗ್ಯವನ್ನು ಸದ್ದಿಲ್ಲದೆ ಹಾಳುಮಾಡುತ್ತಿವೆಯೇ? ಜಪಾನ್ನ ಪ್ರಖ್ಯಾತ ನೋವು ನಿವಾರಕ ತಜ್ಞ ಡಾ. ಹಿರೋಷಿ ತನಕಾ ಅವರ ಇತ್ತೀಚಿನ ಸಂಶೋಧನೆ ಹೌದು ಎನ್ನುತ್ತಿದೆ. ಟೋಕಿಯೋ ಸ್ಪೈನ್ ಇನ್ಸ್ಟಿಟ್ಯೂಟ್ನಲ್ಲಿ ನಡೆದ ಈ ಸಂಶೋಧನೆಯ ವರದಿ ಈಗ ವೈದ್ಯಕೀಯ ಲೋಕವನ್ನೇ ಬೆಚ್ಚಿಬೀಳಿಸಿದೆ. ಡಾ. ತನಕಾ ಅವರ ಪ್ರಕಾರ, ನಾವು ಮಲಗುವ ಸಾಮಾನ್ಯ ದಿಂಬುಗಳು ನಮ್ಮ ಕುತ್ತಿಗೆ ಮತ್ತು ಹೆಗಲನ್ನು ಜೋಡಿಸುವ ‘ಟ್ರಾಪೆಜಿಯಸ್’ (Trapezius) ಸ್ನಾಯುಗಳಿಗೆ ವಿಶ್ರಾಂತಿಯನ್ನೇ ನೀಡುವುದಿಲ್ಲ. ಸುಧಾರಿತ ಮಸಲ್ ಮಾನಿಟರಿಂಗ್ ತಂತ್ರಜ್ಞಾನವನ್ನು ಬಳಸಿ ನಡೆಸಿದ ಪರೀಕ್ಷೆಯಲ್ಲಿ, ರಾತ್ರಿಯಿಡೀ ಈ ಸ್ನಾಯುಗಳು ತೀವ್ರವಾದ ಒತ್ತಡಕ್ಕೆ (Tension) ಒಳಗಾಗಿರುವುದು ಕಂಡುಬಂದಿದೆ. “ಇದು ನಿಮ್ಮ ದೇಹಕ್ಕೆ ನೀಡುವ ಒಂದು ರೀತಿಯ ಶಿಕ್ಷೆ” ಎನ್ನುತ್ತಾರೆ ಡಾ. ತನಕಾ. “ಹಗಲಿನಲ್ಲಿ ನೀವು ಸತತ 8 ಗಂಟೆಗಳ ಕಾಲ ಕುತ್ತಿಗೆಯನ್ನು ತಿರುಗಿಸಿಕೊಂಡು ನಿಲ್ಲಲು ಸಾಧ್ಯವೇ? ಆದರೆ ನೀವು ಬಳಸುವ ಸಾಮಾನ್ಯ ದಿಂಬುಗಳು ರಾತ್ರಿಯಿಡೀ ನಿಮ್ಮ ಕುತ್ತಿಗೆಯನ್ನು ಅಂತಹದ್ದೇ ಸ್ಥಿತಿಯಲ್ಲಿ ಇರಿಸುತ್ತವೆ.” ‘ಪೇನ್ ಕ್ಯಾಸ್ಕೇಡ್’…
ಶಿವಮೊಗ್ಗ: ಸಾರಿಗೆ ಸಂಪರ್ಕ ದುಸ್ತರವಾಗಿರುವ ಮಲೆನಾಡಿನ ಗುಡ್ಡಗಾಡು ಪ್ರದೇಶಗಳ ಜನರಿಗೆ ಸಂಚಾರಿ ಆರೋಗ್ಯ ಘಟಕವು ಸಂಜೀವಿನಿಯಾಗಿ ಪರಿಣಮಿಸಿದೆ. ಸಾಗರ ಮತ್ತು ಹೊಸನಗರ ತಾಲ್ಲೂಕುಗಳ ವ್ಯಾಪ್ತಿಯ ನೂರಾರು ಹಳ್ಳಿಗಳಲ್ಲಿ ಈ ಘಟಕವು ಮನೆಬಾಗಿಲಿಗೆ ಆರೋಗ್ಯ ಸೇವೆಯನ್ನು ತಲುಪಿಸುತ್ತಿದೆ. ಈ ಸಂಚಾರಿ ಆರೋಗ್ಯ ಘಟಕ ವಾಹನಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದಂತ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸಾಗರ ತಾಲ್ಲೂಕಿನ ಕಾರ್ಗಲ್ ಸಮೀಪದ ಚೆನ್ನಗೊಂಡ, ಭಾನುಕುಳಿ ಪಂಚಾಯಿತಿ ವ್ಯಾಪ್ತಿಯ ಸುಮಾರು 66 ಹಳ್ಳಿಗಳಿಗೆ ಹಾಗೂ ತುಮರಿ ಭಾಗದ ಕಟ್ಟಿನಕಾರು, ಬ್ಯಾಕೋಡು ಭಾಗದ ಹೊಸಕೊಪ್ಪ, ಕುದರೂರು, ಶಂಕನಶಾನುಭೋಗ ಪಂಚಾಯಿತಿಗಳಿಗೆ ಸಂಬಂಧಿಸಿದ 49 ಹಳ್ಳಿಗಳಿಗೆ ಈ ಘಟಕವು ನಿರಂತರ ಸೇವೆ ನೀಡುತ್ತಿದೆ ಎಂದರು. ಅದೇ ರೀತಿ, ಹೊಸನಗರ ತಾಲ್ಲೂಕಿನ ಯಡೂರು, ಸಂಪೆಕಟ್ಟೆ ಮತ್ತು ನಿಟ್ಟೂರು ಭಾಗದ 46 ಹಳ್ಳಿಗಳ ಜನರು ಈ ಯೋಜನೆಯ ಸದುಪಯೋಗ ಪಡೆಯುತ್ತಿದ್ದಾರೆ. ಸಾರಿಗೆ ವ್ಯವಸ್ಥೆ ಸಮರ್ಪಕವಾಗಿಲ್ಲದ ಮತ್ತು ದುರ್ಗಮ ಹಾದಿಯ ಹಳ್ಳಿಗಳೇ ಈ ಘಟಕದ ಉದ್ದೇಶ…
ಬೆಂಗಳೂರು: ಕರ್ನಾಟಕ ರಾಜ್ಯದ ಸಾರಿಗೆ ಕ್ಷೇತ್ರದಲ್ಲಿ ಪಾರದರ್ಶಕತೆ ಮತ್ತು ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ರಾಜ್ಯದ ಎಲ್ಲಾ 66 ಆರ್ಟಿಒ (RTO) ಕಚೇರಿಗಳಲ್ಲಿ Geo-fencing ಆಧಾರಿತ ‘mVahan Fitness’ ಮೊಬೈಲ್ ಅಪ್ಲಿಕೇಶನ್ ಅನ್ನು ಅನುಷ್ಠಾನಗೊಳಿಸಿದ್ದಾರೆ. ಏನಿದು ಹೊಸ ವ್ಯವಸ್ಥೆ? ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಸುಮಾರು 30 ಲಕ್ಷಕ್ಕೂ ಹೆಚ್ಚು ವಾಣಿಜ್ಯ (ಸಾರಿಗೆ) ವಾಹನಗಳ ಅರ್ಹತಾ (ಫಿಟ್ನೆಸ್) ಪ್ರಮಾಣಪತ್ರ ನೀಡುವಿಕೆಯಲ್ಲಿ ಈವರೆಗೆ ಕೇಳಿಬರುತ್ತಿದ್ದ ದೋಷಪೂರಿತ ಕ್ರಮಗಳು ಮತ್ತು ಪಾರದರ್ಶಕತೆಯ ಕೊರತೆಯನ್ನು ನೀಗಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಈ ವ್ಯವಸ್ಥೆಯನ್ನು ಎನ್.ಐ.ಸಿ (NIC) ಅಭಿವೃದ್ಧಿಪಡಿಸಿದೆ. ಪ್ರಮುಖ ವೈಶಿಷ್ಟ್ಯಗಳು: Geo-fencing ವ್ಯವಸ್ಥೆ: ಪ್ರತಿಯೊಂದು ಆರ್ಟಿಒ ಕಚೇರಿಯ ವ್ಯಾಪ್ತಿಯಲ್ಲಿ ವಾಹನಗಳನ್ನು ಭೌತಿಕವಾಗಿ ಪರಿಶೀಲಿಸುವ ನಿರ್ದಿಷ್ಟ ಪ್ರದೇಶಗಳನ್ನು ನಿಗದಿಪಡಿಸಲಾಗಿದೆ. ಭೌತಿಕ ಹಾಜರಾತಿ ಕಡ್ಡಾಯ: ವಾಹನಗಳು ನಿಗದಿತ ಪ್ರದೇಶಕ್ಕೆ ಭೌತಿಕವಾಗಿ ಹಾಜರಾದ ನಂತರವೇ ಪರಿಶೀಲನೆ ಪ್ರಕ್ರಿಯೆ ಆರಂಭವಾಗುತ್ತದೆ. ಭಾವಚಿತ್ರಗಳ ದಾಖಲೆ: ಪರಿಶೀಲನೆಯ ವೇಳೆ ವಾಹನದ ವಿವಿಧ ಆರು (6) ಭಾವಚಿತ್ರಗಳನ್ನು ಕಡ್ಡಾಯವಾಗಿ ತೆಗೆದು…
ದುಬೈ/ವಾಷಿಂಗ್ಟನ್: ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಯುದ್ಧವು ಮಧ್ಯಪ್ರಾಚ್ಯದ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ, ಸಂಯುಕ್ತ ಅರಬ್ ಎಮಿರೇಟ್ಸ್ (UAE), ಕುವೈತ್ ಮತ್ತು ಕತಾರ್ ಸೇರಿದಂತೆ ಪ್ರಮುಖ ಗಲ್ಫ್ ರಾಷ್ಟ್ರಗಳು ಅಮೆರಿಕದೊಂದಿಗಿನ ತಮ್ಮ ಶತಕೋಟಿ ಡಾಲರ್ ಮೌಲ್ಯದ ಹೂಡಿಕೆ ಮತ್ತು ವ್ಯಾಪಾರ ಒಪ್ಪಂದಗಳನ್ನು ಮರುಪರಿಶೀಲಿಸಲು ಮುಂದಾಗಿವೆ ಎಂದು ‘ಫೈನಾನ್ಶಿಯಲ್ ಟೈಮ್ಸ್’ ವರದಿ ಮಾಡಿದೆ. ಒಪ್ಪಂದಗಳ ರದ್ದತಿಗೆ ‘ಫೋರ್ಸ್ ಮಜೂರ್’ ಅಸ್ತ್ರ? ಯುದ್ಧದಿಂದಾಗಿ ಉಂಟಾಗಿರುವ ಆರ್ಥಿಕ ಸಂಕಷ್ಟವನ್ನು ಎದುರಿಸಲು ಈ ದೇಶಗಳು ಆಂತರಿಕವಾಗಿ ಚರ್ಚೆ ಆರಂಭಿಸಿವೆ. ಅಸ್ತಿತ್ವದಲ್ಲಿರುವ ಒಪ್ಪಂದಗಳನ್ನು ರದ್ದುಗೊಳಿಸಲು ಅಥವಾ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ‘ಫೋರ್ಸ್ ಮಜೂರ್’ (Force Majeure – ಅನಿವಾರ್ಯ ಪರಿಸ್ಥಿತಿ) ನಿಯಮವನ್ನು ಬಳಸಿಕೊಳ್ಳುವ ಬಗ್ಗೆ ಗಲ್ಫ್ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಯುದ್ಧದಂತಹ ಅನಿರೀಕ್ಷಿತ ಸಂಕಷ್ಟದ ಸಮಯದಲ್ಲಿ ಕಾನೂನುಬದ್ಧವಾಗಿ ಒಪ್ಪಂದದಿಂದ ಹೊರಬರಲು ಈ ನಿಯಮ ಅವಕಾಶ ನೀಡುತ್ತದೆ. ಯಾವೆಲ್ಲಾ ವಲಯಗಳ ಮೇಲೆ ಪರಿಣಾಮ? ಈ ಮರುಪರಿಶೀಲನೆಯು ಕೇವಲ ಸರ್ಕಾರಿ ಒಪ್ಪಂದಗಳಿಗೆ…
ಹಾಸನ: ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರರೊಬ್ಬರು ಹೃದಯಾಘಾತದಿಂದ ಅಕಾಲಿಕ ಮರಣ ಹೊಂದಿರುವ ಘಟನೆ ಹಾಸನ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯ ವಿವರ ಮೃತಪಟ್ಟವರನ್ನು ದೇವಾನಂದ್ (42) ಎಂದು ಗುರುತಿಸಲಾಗಿದೆ. ಇವರು ಕಳೆದ 15 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ವಾಹನ ಚಾಲಕರಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಮುಂಜಾನೆ ಮಲಗಿದ್ದ ವೇಳೆಯೇ ಇವರಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ. ವೃತ್ತಿ ಬದುಕು ದೇವಾನಂದ್ ಕೇವಲ ಒಬ್ಬ ಕರ್ತವ್ಯನಿಷ್ಠ ನೌಕರರಷ್ಟೇ ಅಲ್ಲದೆ, ಉತ್ತಮ ಕಲಾವಿದರೂ ಆಗಿದ್ದರು. ಪೌರಾಣಿಕ ನಾಟಕ: ಹಲವು ಬಾರಿ ಪೌರಾಣಿಕ ನಾಟಕಗಳಲ್ಲಿ ವಿವಿಧ ಪಾತ್ರಗಳನ್ನು ನಿರ್ವಹಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಕುಟುಂಬ: ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಮನೆಯ ಆಧಾರಸ್ತಂಭವಾಗಿದ್ದ ದೇವಾನಂದ್ ಅವರ ಸಾವು ಗವೇನಹಳ್ಳಿ ಗ್ರಾಮಸ್ಥರನ್ನು ಹಾಗೂ ಆರೋಗ್ಯ ಇಲಾಖೆಯ ಸಹೋದ್ಯೋಗಿಗಳನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಕುಟುಂಬಸ್ಥರ ಆಕ್ರಂದನ…
ಬೆಂಗಳೂರು : ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಈ ಬಾರಿಯ ಆಯವ್ಯಯದಲ್ಲಿ ಕ್ವಾಂಟಮ್ ರೋಡ್ಮ್ಯಾಪ್ನ ಅನುಷ್ಠಾನಕ್ಕೆ 10 ಕೋಟಿ ರೂಪಾಯಿಗಳನ್ನು ಘೋಷಿಸಿರುವುದು, ಕರ್ನಾಟಕ ರಾಜ್ಯವನ್ನು ಕ್ವಾಂಟಮ್ ಕ್ಷೇತ್ರದ ಕೇಂದ್ರಬಿಂದುವನ್ನಾಗಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆಯನ್ನು ನೀಡಿರುವ ಅವರು, ಕ್ವಾಂಟಮ್ ವಲಯದಲ್ಲಿ ಕರ್ನಾಟಕವು ಜಾಗತಿಕ ಶಕ್ತಿಯಾಗಿ ಹೊರಹೊಮ್ಮಲು ಸಜ್ಜಾಗಿದೆ ಎಂದು ತಿಳಿಸಿದ್ದಾರೆ. ಬೆಂಗಳೂರು ‘ಕ್ವಾಂಟಮ್ ಶೃಂಗಸಭೆ’ಯಲ್ಲಿ ಕ್ವಾಂಟಮ್ ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿಗೆ 1,000 ಕೋಟಿ ರೂ. ಹೂಡಿಕೆ ಮಾಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು. “ಈ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ, ‘ಕರ್ನಾಟಕ ಕ್ವಾಂಟಮ್ ರೋಡ್ಮ್ಯಾಪ್’ನ ಮೊದಲ ಹಂತದ ಅನುಷ್ಠಾನಕ್ಕೆ ಸರ್ಕಾರವು 10 ಕೋಟಿ ರೂ. ಅನುದಾನ ಒದಗಿಸಿದೆ,” ಮುಂದಿನ ಐದು ವರ್ಷಗಳಲ್ಲಿ, ಈ ಭವಿಷ್ಯದ ವಲಯವನ್ನು ಮುನ್ನಡೆಸಲು ಅಗತ್ಯವಿರುವ ಅತ್ಯುತ್ತಮ ಮಾನವ ಸಂಪನ್ಮೂಲವನ್ನು ಅಭಿವೃದ್ಧಿಪಡಿಸುವತ್ತ ಈ ರೋಡ್ಮ್ಯಾಪ್ ಗಮನ ಹರಿಸಲಿದೆ ಎಂದಿದ್ದಾರೆ. “ಬೆಂಗಳೂರು ನಗರವು ಈಗಾಗಲೇ…
ಬೆಂಗಳೂರು: ಒಳ ಮೀಸಲಾತಿ ಸಂಬಂಧಿತ ಕಾಯ್ದೆಗೆ ಕೋರ್ಟ್ ಒಪ್ಪಿಗೆ ಇಲ್ಲದ ಕಾರಣ ಮಾನ್ಯ ರಾಜ್ಯಪಾಲರಿಂದ ಅಂಕಿತ ಪಡೆಯಬಾರದಿತ್ತು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಅವರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಒಳ ಮೀಸಲಾತಿ ಶೇ 15ರಿಂದ 17ಕ್ಕೆ ಏರಿಸಲಾಗಿತ್ತು. ನ್ಯಾ.ನಾಗಮೋಹನ್ದಾಸ್ ಅವರ ವರದಿಯನ್ನೂ ಪಡೆದರು. ಅದರ ಪ್ರಕಾರವೇ 6, 6, 5 ಎಂದು ಹಂಚಿಕೆ ಮಾಡಿದ್ದರು. ಕಾಯ್ದೆ ಅನುಮೋದಿಸಿ ಮಾನ್ಯ ರಾಜ್ಯಪಾಲರಿಂದ ಅಂಕಿತವನ್ನೂ ಪಡೆದಿದ್ದರು ಎಂದು ಗಮನಕ್ಕೆ ತಂದರು. ನೀವ್ಯಾಕೆ ಗೌರವಾನ್ವಿತ ರಾಜ್ಯಪಾಲರ ಅಂಕಿತ ತೆಗೆದುಕೊಂಡಿರಿ? ನಿಮಗೆ ಪ್ರಜ್ಞೆ, ಬುದ್ಧಿ ಇಲ್ಲವೇ ಎಂದು ಕೇಳಿದರು. ಅಂಕಿತ ಪಡೆದ ಮೇಲೆ ಅದನ್ನೇ ಜಾರಿಗೊಳಿಸಬೇಕಿತ್ತು ಎಂದು ಆಗ್ರಹಿಸಿದರು. ಶೇ 15 ರ ಮೇಲೆ ಹಂಚಿಕೆ ಮಾಡುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದೀರಿ. ಹಾಗಾಗಿ ಈ ಕಾಯ್ದೆ ಅನೂರ್ಜಿತ. ಅದು ತಿಪ್ಪೆಗುಂಡಿಗೆ ಹೋದಂತೆ ಎಂದು ನುಡಿದರು. ನೀವು ಯಾವ ರೀತಿ 56 ಸಾವಿರ ಹುದ್ದೆಗಳನ್ನು ತುಂಬುತ್ತೀರಿ?…
ಶಿವಮೊಗ್ಗ : ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು. ಮಹಿಳೆ ಪ್ರಗತಿ ಹೊಂದಲು ಶಿಕ್ಷಣ ಮತ್ತು ಕುಟುಂಬದ ಬೆಂಬಲ ಅತಿ ಅವಶ್ಯ ಎಂದು ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾನುವಾರ ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆಯಡಿ ಏರ್ಪಡಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ – 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ೧೯೦೮ ರಲ್ಲಿ ತಮ್ಮ ಹಕ್ಕುಗಳಿಗಾಗಿ ಹೋರಾಡಿದ ಮಹಿಳಾ ಕಾರ್ಮಿಕರಿಗೆ ನಮನಗಳು. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಘೋಷಣೆಯಾಗಲು ಈ ಹೋರಾಟವೂ ಕಾರಣವಾಗಿದೆ. ಮನೆಯಿಂದ ಸಮಾಜ ಶುರುವಾಗುತ್ತದೆ.ಅಲ್ಲಿಂದಲೇ ಅವಕಾಶ ಸಿಕ್ಕರೆ ಪ್ರಗತಿ ಸಾಧಿಸಲು ಸಾಧ್ಯವಾಗಿದ್ದು ಶಿಕ್ಷಣ ಪಡೆಯುವುದು ಬಹಳ ಮುಖ್ಯವಾಗಿದೆ. ಭೂಮಿಯಿಂದ ಆಕಾಶದವರೆಗೆ ಇಂದು ಎಲ್ಲ ಕ್ಷೇತ್ರದಲ್ಲಿ ಹೆಣ್ಣು ಮುಂದೆ ಬರುತ್ತದ್ದಾಳೆ. ಇದಕ್ಕೆ ಮುಖ್ಯ ಕಾರಣ ಶಿಕ್ಷಣ. ಹಿಂದೆ ಹೆಣ್ಣುಮಕ್ಕಳಿಗೆ ಹೆಚ್ಚಿನದಾಗಿ ಮೌಲ್ಯಾಧಾರಿತ ಉಪಚಾರ ಹೇಳಲಾಗುತ್ತಿತ್ತು. ಆಕೆಯ ಪ್ರಗತಿಗೆ ಅವಕಾಶ ಇರಲಿಲ್ಲ.…














