Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ಕಸ ಸಂಸ್ಕರಣೆ ಮಾಡುವ ನೆಪದಲ್ಲಿ 39,000 ಕೋಟಿ ರೂ. ಹಗರಣ ನಡೆಸಿದೆ. 35 ವರ್ಷಗಳ ಸುದೀರ್ಘ ಅವಧಿಗೆ ಎಂಎಸ್ಡಬ್ಲ್ಯು ಸೊಲ್ಯೂಶನ್ಸ್ ಲಿಮಿಟೆಡ್ಗೆ ನೀಡುತ್ತಿರುವ ಟೆಂಡರ್ನ ಒಟ್ಟು ಮೊತ್ತದಲ್ಲಿ 10,000 ಕೋಟಿ ರೂ. ಕಿಕ್ಬ್ಯಾಕ್ ಪಡೆಯಲಾಗಿದೆ ಎಂದು ಪ್ರತಿಪಕ್ಷ ಆರ್.ಅಶೋಕ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಸ್ವಚ್ಛತೆಯಲ್ಲಿ ಅತ್ಯುತ್ತಮ ನಗರ ಎಂಬ ಹೆಗ್ಗಳಿಕೆ ಬೆಂಗಳೂರಿಗೆ ಸಿಕ್ಕಿತ್ತು. ಈಗ ಬೆಂಗಳೂರು ಬೆಚ್ಚಿಬೀಳುವಂತಹ 39,000 ಕೋಟಿ ರೂ. ಹಗರಣವನ್ನು ಕಾಂಗ್ರೆಸ್ ಸರ್ಕಾರ ಕಸದ ಹೆಸರಲ್ಲಿ ಮಾಡಿದೆ. ದೇಶದ ಇತಿಹಾಸದಲ್ಲಿ ಕಸದಲ್ಲಿ ಲೂಟಿ ಮಾಡಿರುವ ಹಗರಣ ಇದೇ ಮೊದಲು. ಇದು ಹೈಕಮಾಂಡ್ನ ಕಪ್ಪ ಕಾಣಿಕೆ ಟೆಂಡರ್ ಆಗಿದೆ. ಪ್ರತಿ ವರ್ಷ ಬೆಂಗಳೂರಿನಲ್ಲಿ ಕಸ ಸಂಗ್ರಹ ಮತ್ತು ಸಾಗಣೆಗೆ 514 ಕೋಟಿ ರೂ. ಮತ್ತು ಸಂಸ್ಕರಣೆ ಮತ್ತು ವಿಲೇವಾರಿಗೆ 380 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. 11,000 ಪೌರಕಾರ್ಮಿಕರಿಗೆ ವರ್ಷಕ್ಕೆ 444 ಕೋಟಿ ರೂ. ಸಂಬಳ…
ಶಿವಮೊಗ್ಗ: ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ. ಶಾಲೆಯ ವಿದ್ಯಾರ್ಥಿಗಳು ಹೆಚ್ಚು ಅಂಕ ತೆಗೆದವರಿಗೆ ವಿಶೇಷ ಬಹುಮಾನ ನೀಡುವುದಾಗಿ ಸಾಗರ ತಾಲ್ಲೂಕು ಕರವೇ ಅಧ್ಯಕ್ಷ ಮನೋಜ್ ಕುಗ್ವೆ ಘೋಷಣೆ ಮಾಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕುಗ್ವೆ ಸರ್ಕಾರಿ ಶಾಲೆಯಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣ ಗೌಡ ಅವರ ಹುಟ್ಟಿದ ಹಬ್ಬದ ಪ್ರಯುಕ್ತ ಶಾಲಾ ಆವರಣದಲ್ಲಿ ಗಿಡ ನೆಟ್ಟು, ಮಕ್ಕಳಿಗೆ ನೋಟ್ ಬುಕ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.. ನಾರಾಯಣ ಗೌಡರ ಹೋರಾಟದ ಹಾದಿ ಪ್ರೇರಣೆ ಕರವೇ ರಾಜ್ಯ ಅಧ್ಯಕ್ಷರಾದ ನಾರಾಯಣ ಗೌಡರು ಕನ್ನಡ, ನೆಲ, ಜಲ ಮತ್ತು ಭಾಷೆಯ ರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಕನ್ನಡ ನಾಮಫಲಕಗಳ ಕಡ್ಡಾಯ ಅನುಷ್ಠಾನಕ್ಕಾಗಿ ನಡೆದ ಹೋರಾಟ, ಬೆಳಗಾವಿ ಗಡಿ ಸಮಸ್ಯೆ ಹಾಗೂ ಕಾವೇರಿ ಜಲವಿವಾದದಂತಹ ಪ್ರಮುಖ ಹೋರಾಟಗಳಲ್ಲಿ ಅವರು ಹಲವಾರು ಬಾರಿ ಜೈಲು ವಾಸವನ್ನು ಅನುಭವಿಸಿದ್ದಾರೆ. ಅವರ ಈ ಹೋರಾಟದ ಹಾದಿ ನಮ್ಮ ಸಂಘಟನೆಯ ಪ್ರತಿಯೊಬ್ಬ ಕಾರ್ಯಕರ್ತನಿಗೂ ದೊಡ್ಡ ಪ್ರೇರಣೆಯಾಗಿದೆ ಎಂದು…
ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಹುಟ್ಟುಹಬ್ಬಗಳು ಕೇವಲ ಫ್ಲೆಕ್ಸ್ ಬ್ಯಾನರ್ಗಳಿಗೆ ಹಾಗೂ ಫ್ಯಾಷನ್ಗೆ ಸೀಮಿತವಾಗುತ್ತಿರುವು ದರ ನಡುವೆ, ಕರ್ನಾಟಕ ರಕ್ಷಣಾ ವೇದಿಕೆಯು ಜನಪರ ಹಾಗೂ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ನಾಯಕರ ಜನ್ಮದಿನ ಆಚರಿಸುತ್ತಿರುವುದು ಇಡೀ ಸಮಾಜಕ್ಕೆ ಮಾದರಿಯಾಗಿದೆ ಎಂದು ಹಿರಿಯ ವಕೀಲರು ಹಾಗೂ ಚಾರ್ಚಕ ಪತ್ರಿಕೆಯ ಸಂಪಾದಕ, ಡಿಎಂಪಿಸಿ ಅಧ್ಯಕ್ಷರಾದ ಹೆಚ್.ಬಿ. ರಾಘವೇಂದ್ರ ಶ್ಲಾಘಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕುಗ್ವೆಯ ಸರ್ಕಾರಿ ಶಾಲೆಯಲ್ಲಿ ಕರವೇ ರಾಜ್ಯಾಧ್ಯಕ್ಷರಾದಂತ ಟಿ.ಎ ನಾರಾಯಣಗೌಡ ಅವರ 60ನೇ ಹುಟ್ಟಿದ ಹಬ್ಬದ ಪ್ರಯುಕ್ತ ಶಾಲಾ ಆವರಣದಲ್ಲಿ ಗಿಡ ನೆಟ್ಟು, ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡಿ ಮಾತನಾಡಿದರು. ಬದ್ಧತೆಯ ಹೋರಾಟದ ಇತಿಹಾಸ ಜಗತ್ತಿನಲ್ಲಿ ಲಕ್ಷಾಂತರ ಜನರ ಬದುಕಿಗೆ ಬೆಳಕಾದ ಯೇಸು ಕ್ರಿಸ್ತ, ಬುದ್ಧ, ಪೈಗಂಬರ್, ಬಸವಣ್ಣ, ಅಂಬೇಡ್ಕರ್ ಹಾಗೂ ಗಾಂಧೀಜಿಯವರಂತಹ ಮಹಾಪುರುಷರ ಆದರ್ಶಗಳನ್ನು ಸಮಾಜದಲ್ಲಿ ವಿಸ್ತರಿಸುವ ಉದ್ದೇಶದಿಂದ ಹುಟ್ಟುಹಬ್ಬದ ಆಚರಣೆಗಳು ಆರಂಭವಾದವು ಎಂದ ಅವರು, ಕರವೇ ಸಂಘಟನೆಯು ಕೂಡ ತನ್ನ ಬದ್ಧತೆಯ ಹೋರಾಟಗಳ ಮೂಲಕ ಅದೇ ಹಾದಿಯಲ್ಲಿ ಸಾಗುತ್ತಿದೆ…
ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಪ್ರಮುಖ ಐಎಎಸ್ (IAS) ಅಧಿಕಾರಿಗಳನ್ನು ವರ್ಗಾವಣೆ ಹಾಗೂ ವಿವಿಧ ಇಲಾಖೆಗಳ ಹೆಚ್ಚುವರಿ ಉಸ್ತುವಾರಿಯನ್ನು ನೀಡಿ ಬುಧವಾರ (ಜೂನ್ 10, 2026) ಮಹತ್ವದ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಮುಖ ಮುಖ್ಯಾಂಶಗಳು ಈ ಕೆಳಗಿನಂತಿವೆ: ಅಂಜುಮ್ ಪರ್ವೇಜ್ (IAS: 1994): ಪ್ರಸ್ತುತ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿರುವ ಇವರಿಗೆ, ತಕ್ಷಣದಿಂದ ಜಾರಿಗೆ ಬರುವಂತೆ ಸಾರ್ವಜನಿಕ ಲೋಕೋಪಯೋಗಿ ಇಲಾಖೆಯ (PWD) ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ನೀಡಲಾಗಿದೆ. ಈ ಹಿಂದೆ ಈ ಹುದ್ದೆಯಲ್ಲಿದ್ದ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರನ್ನು ವರ್ಗಾಯಿಸಲಾಗಿದೆ. ರಾಜೇಂದರ್ ಕುಮಾರ್ ಕಟಾರಿಯಾ (IAS: 1996): ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿರುವ ಇವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿದೆ. ಮೋಹನ್…
ಶಿವಮೊಗ್ಗ: ಇಂಗ್ಲಿಷ್ ಮಾಧ್ಯಮದಲ್ಲಿ ಓದಿದರೆ ಮಾತ್ರ ಹೆಚ್ಚು ಅಂಕ ಗಳಿಸಲು ಮತ್ತು ಸಾಧನೆ ಮಾಡಲು ಸಾಧ್ಯ ಎಂಬುದು ಕೇವಲ ಭ್ರಮೆ. ಕನ್ನಡ ಮಾಧ್ಯಮದಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಎಷ್ಟೋ ಜನ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ರ್ಯಾಂಕ್ ಪಡೆದು ದೊಡ್ಡ ಪ್ರತಿಭಾವಂತರಾಗಿ ಹೊರಹೊಮ್ಮಿದ್ದಾರೆ ಎಂದು ರೈತ ಮುಖಂಡ ಹಾಗೂ ಸಾಮಾಜಿಕ ಹೋರಾಟಗಾರ ಶಿವಾನಂದ ಕುಗ್ವೆ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕುಗ್ವೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡ ಅವರ ಹುಟ್ಟಿದ ಹಬ್ಬದ ಪ್ರಯುಕ್ತ ಕುಗ್ವೆ ಸರ್ಕಾರಿ ಶಾಲೆಯಲ್ಲಿ ಗಿಡ ನೆಟ್ಟು, ಮಕ್ಕಳಿಗೆ ನೋಟ್ ಬುಕ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದ ಇಂದಿನ ವಾಸ್ತವ ಮತ್ತು ಸರ್ಕಾರಿ ಶಾಲೆಗಳ ಸ್ಥಿತಿಗತಿಗಳ ಬಗ್ಗೆ ಕಳಕಳಿ ವ್ಯಕ್ತಪಡಿಸಿದರು. ಭ್ರಮೆಗಳಿಂದ ಸರ್ಕಾರಿ ಶಾಲೆಗಳು ಬಡವಾಗಿವೆ ಇಂಗ್ಲಿಷ್ ವ್ಯಾಮೋಹದಂತಹ ಹಲವು ಭ್ರಮೆಗಳು ನಮ್ಮ ಸರ್ಕಾರಿ ಶಾಲೆಗಳನ್ನು ಇಂದು ಬಡವಾಗಿಸಿವೆ. ಜನರ ನಿರಾಸಕ್ತಿಯೂ ಇದಕ್ಕೆ ಕಾರಣವಾಗಿದೆ. ಮತ್ತೊಂದೆಡೆ, ಸಾರ್ವಜನಿಕ…
ಬೆಂಗಳೂರು: ಚುನಾವಣೆಗಳಲ್ಲಿ ರಾಜಕೀಯ ಸ್ಪರ್ಧೆಯನ್ನು ಹತ್ತಿಕ್ಕಲು ಹಾಗೂ ಪ್ರಜಾಪ್ರಭುತ್ವದ ತತ್ವಗಳನ್ನು ಗಾಳಿಗೆ ತೂರಲು ಭಾರತೀಯ ಚುನಾವಣಾ ಆಯೋಗ (ECI) ಮತ್ತು ಬಿಜೆಪಿ ಕೈಜೋಡಿಸಿ ಕೆಲಸ ಮಾಡುತ್ತಿವೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂಪರ್ಕ ವಿಭಾಗದ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ (MLC) ರಮೇಶ್ ಬಾಬು ಅವರು ಗಂಭೀರ ಆರೋಪ ಮಾಡಿದ್ದಾರೆ. ಸಂಸ್ಥೆಗಳ ತಟಸ್ಥತೆಗೆ ಧಕ್ಕೆ: ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ (ಜಯಂತಿ ನಟರಾಜನ್) ಅವರ ನಾಮಪತ್ರವನ್ನು ಸಂಶಯಾಸ್ಪದ ಹಾಗೂ ಕ್ಷುಲ್ಲಕ ಕಾರಣಗಳನ್ನು ಮುಂದೊಡ್ಡಿ ತಿರಸ್ಕರಿಸಿರುವುದು ಚುನಾವಣಾ ಆಯೋಗ ಮತ್ತು ಬಿಜೆಪಿಯ ನಡುವಿನ ನೇರ ಒಳಸಂಚನ್ನು ಪ್ರತಿಬಿಂಬಿಸುತ್ತದೆ. ಈ ದುರುದ್ದೇಶಪೂರಿತ ಕ್ರಮದ ಮೂಲಕ ಒಬ್ಬ ಅರ್ಹ ಮತ್ತು ಕಾನೂನುಬದ್ಧ ಅಭ್ಯರ್ಥಿಯನ್ನು ಚುನಾವಣಾ ಪ್ರಕ್ರಿಯೆಯಿಂದ ಹೊರಗಿಡಲಾಗಿದೆ. ಇದು ಸಾಂಸ್ಥಿಕ ತಟಸ್ಥತೆಯನ್ನು ಸಂಪೂರ್ಣವಾಗಿ ಹಳ್ಳ ಹಿಡಿಸಿದೆ ಎಂದು ರಮೇಶ್ ಬಾಬು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚುನಾವಣಾ ವ್ಯವಸ್ಥೆಯ ಮೇಲಿನ ನಂಬಿಕೆಗೆ ಪೆಟ್ಟು: ಚುನಾವಣಾ ಕಣವನ್ನು ತಮಗೆ ಬೇಕಾದಂತೆ ಬಳಸಿಕೊಳ್ಳಲು ಇಸಿಐ ಮತ್ತು ಬಿಜೆಪಿ ಪರಸ್ಪರ ಹೊಂದಾಣಿಕೆಯಿಂದ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಪ್ರಮುಖ ಗ್ರಾಮಗಳಾದ ಉಳ್ಳೂರು, ಕಾಸ್ಪಾಡಿ, ಐಗಿನ್ ಬೈಲು ಮತ್ತು ಹೊಸೂರು ಮುಂತಾದ ಕಡೆಗಳಲ್ಲಿ ಸಾರಿಗೆ ಇಲಾಖೆಯ ಬಸ್ಸುಗಳು ನಿಲ್ಲದೆ ಹಾಗೇ ಸಾಗುತ್ತಿರುವುದನ್ನು ಖಂಡಿಸಿ, ಗ್ರಾಮಸ್ಥರು ಸಾಗರ ಕೆಎಸ್ಆರ್ಟಿಸಿ (KSRTC) ಡಿಪೋಗೆ ಭೇಟಿ ನೀಡಿ ಅಧಿಕಾರಿಗಳಿಗೆ ತೀವ್ರ ಆಕ್ರೋಶದೊಂದಿಗೆ ಮನವಿ ಸಲ್ಲಿಸಿದರು. ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರ ಪರದಾಟ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಈ ಭಾಗದ ಗ್ರಾಮಸ್ಥರಿಗೆ ಹಾಗೂ ದಿನನಿತ್ಯ ಶಾಲೆ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಸಾರಿಗೆ ಸಂಸ್ಥೆಯ ಬಸ್ಸುಗಳೇ ಏಕೈಕ ಆಸರೆಯಾಗಿದೆ. ಆದರೆ, ಚಾಲಕರು ಮತ್ತು ನಿರ್ವಾಹಕರು ನಿಗದಿತ ನಿಲ್ದಾಣಗಳಿದ್ದರೂ ಬಸ್ಗಳನ್ನು ನಿಲ್ಲಿಸದೇ ನಿರ್ಲಕ್ಷ್ಯದಿಂದ ಮುನ್ನಡೆಯುತ್ತಿದ್ದಾರೆ. ಇದರಿಂದಾಗಿ ಶಾಲಾ ಮಕ್ಕಳು ಸಮಯಕ್ಕೆ ಸರಿಯಾಗಿ ಶಾಲೆ ತಲುಪಲಾಗದೆ ಹಾಗೂ ಗ್ರಾಮಸ್ಥರು ತುರ್ತು ಕೆಲಸಗಳಿಗೆ ಹೋಗಲಾಗದೆ ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ಹಲವಾರು ಬಾರಿ ಮನವಿ ನೀಡಿದರೂ ಇಲ್ಲದ ಕ್ರಮ: ಈ ಹಿಂದೆಯೂ ಈ ಕುರಿತು ಅಧಿಕಾರಿಗಳ ಗಮನಕ್ಕೆ ತಂದು ಹಲವಾರು ಬಾರಿ ಲಿಖಿತ ಮನವಿಗಳನ್ನು ನೀಡಲಾಗಿದ್ದರೂ, ಸಾರಿಗೆ ಇಲಾಖೆ…
ಬೆಂಗಳೂರು: ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವ ಮತ್ತು ಜನಪರ ಕೆಲಸಗಳಿಗೆ ವೇಗ ನೀಡುವ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಯವರ ಸಚಿವಾಲಯದ ಅಧಿಕಾರಿಗಳ ಕಾರ್ಯನಿರ್ವಹಣೆಯನ್ನು ಪರಿಷ್ಕರಿಸಿ, ಕರ್ತವ್ಯಗಳನ್ನು ಮರುಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ. ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯವರಾದ ತುಷಾರ್ ಗಿರಿ ನಾಥ್ (IAS) ಅವರ ಮಾರ್ಗದರ್ಶನ ಹಾಗೂ ಮೇಲ್ವಿಚಾರಣೆಯಲ್ಲಿ ಸಚಿವಾಲಯದ ಎಲ್ಲಾ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ. ನಿಯೋಜಿತ ಅಧಿಕಾರಿಗಳು ತಮಗೆ ಹಂಚಿಕೆಯಾದ ಇಲಾಖೆಗಳ ಕಡತಗಳನ್ನು ಮಾನ್ಯ ಮುಖ್ಯಮಂತ್ರಿಗಳ ಆದೇಶಕ್ಕಾಗಿ ಹಾಗೂ ಅಪರ ಮುಖ್ಯ ಕಾರ್ಯದರ್ಶಿಯವರ ಪರಿಶೀಲನೆಗಾಗಿ ಮಂಡಿಸಬೇಕೆಂದು ಸೂಚಿಸಲಾಗಿದೆ. ಯಾವ ಯಾವ ಅಧಿಕಾರಿಗಳಿಗೆ ಯಾವ ಇಲಾಖೆ ಹಾಗೂ ಜವಾಬ್ದಾರಿಗಳನ್ನು ವಹಿಸಲಾಗಿದೆ ಎಂಬ ಸಂಪೂರ್ಣ ಪಟ್ಟಿ ಕೆಳಗಿನಂತಿದೆ: ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆಯ ವಿವರವಾದ ಪಟ್ಟಿ ಕ್ರ.ಸಂ. ಅಧಿಕಾರಿಯ ಹೆಸರು ಮತ್ತು ಹುದ್ದೆ ಹಂಚಿಕೆ ಮಾಡಲಾದ ಇಲಾಖೆಗಳು / ಜವಾಬ್ದಾರಿಗಳು 1 ತುಷಾರ್ ಗಿರಿ ನಾಥ್, IAS ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ * ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಮತ್ತು ಇ-ಆಡಳಿತ…
ಇಂದಿನ ಆಧುನಿಕ ಹಾಗೂ ಜೀವನಶೈಲಿಯಲ್ಲಿ ನಿದ್ದೆಯ ಕೊರತೆ (Sleep Deprivation) ಎಂಬುದು ಸರ್ವೇಸಾಮಾನ್ಯ ಸಮಸ್ಯೆಯಾಗಿದೆ. ಕೆಲಸದ ಒತ್ತಡ, ತಡರಾತ್ರಿಯವರೆಗೂ ಮೊಬೈಲ್ ಬಳಸುವುದು ಅಥವಾ ಬದಲಾದ ಹವ್ಯಾಸಗಳಿಂದಾಗಿ ಅನೇಕರು ದಿನಕ್ಕೆ 5 ರಿಂದ 6 ಗಂಟೆಗಳಿಗಿಂತ ಕಡಿಮೆ ನಿದ್ದೆ ಮಾಡುತ್ತಾರೆ. ಆದರೆ, ಈ ಕಳಪೆ ನಿದ್ದೆಯು ನಿಮ್ಮ ಲೈಂಗಿಕ ಹಾರ್ಮೋನ್ಗಳಾದ ಟೆಸ್ಟೋಸ್ಟೆರಾನ್ (Testosterone) ಮತ್ತು ಈಸ್ಟ್ರೊಜೆನ್ (Estrogen) ಮಟ್ಟವನ್ನು ನೇರವಾಗಿ ಕುಂಠಿತಗೊಳಿಸುತ್ತದೆ ಎಂಬ ಆಘಾತಕಾರಿ ಸತ್ಯವನ್ನು ವೈಜ್ಞಾನಿಕ ಸಂಶೋಧನೆಗಳು ಬಹಿರಂಗಪಡಿಸಿವೆ. ನಿದ್ದೆ ಎನ್ನುವುದು ಕೇವಲ ದೇಹಕ್ಕೆ ಕೊಡುವ ವಿಶ್ರಾಂತಿಯಲ್ಲ; ಅದು ನಮ್ಮ ಹಾರ್ಮೋನ್ಗಳ ಸಮತೋಲನವನ್ನು ಕಾಪಾಡುವ ಮತ್ತು ಜೀವಕೋಶಗಳನ್ನು ಪುನಶ್ಚೇತನಗೊಳಿಸುವ ಅತ್ಯಗತ್ಯ ಪ್ರಕ್ರಿಯೆಯಾಗಿದೆ. ಕಳಪೆ ನಿದ್ದೆಯು ನಮ್ಮ ಲೈಂಗಿಕ ಹಾರ್ಮೋನ್ಗಳ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುದರ ಸಂಪೂರ್ಣ ವಿವರ ಇಲ್ಲಿದೆ: ಪುರುಷರಲ್ಲಿ ಟೆಸ್ಟೋಸ್ಟೆರಾನ್ ಕುಸಿತ: ವಯಸ್ಸು 15 ವರ್ಷ ಹೆಚ್ಚಾದಂತೆ! ಪುರುಷರಲ್ಲಿ ಲೈಂಗಿಕ ಆಸೆ (Libido), ಸ್ನಾಯುಗಳ ಬೆಳವಣಿಗೆ, ಮೂಳೆಗಳ ಸಾಂದ್ರತೆ ಮತ್ತು ಶಕ್ತಿಯನ್ನು ಕಾಪಾಡಲು ಟೆಸ್ಟೋಸ್ಟೆರಾನ್ ಹಾರ್ಮೋನ್ ಅತ್ಯಗತ್ಯ. ಸಂಶೋಧನೆ…
ಬೆಂಗಳೂರು: ಭಾರತದ ಉತ್ಪಾದನೆ ಮತ್ತು ಉಕ್ಕಿನ ತಂತ್ರಜ್ಞಾನವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ದೇಶದ ಎರಡು ಪ್ರಖ್ಯಾತ ಸಂಸ್ಥೆಗಳು ಮಹತ್ವದ ಹೆಜ್ಜೆ ಇಟ್ಟಿವೆ. ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆಯನ್ನು ಅಭಿವೃದ್ಧಿಪಡಿಸಲು ಪ್ರಸಿದ್ಧ ಉಕ್ಕು ಉತ್ಪಾದಕ ಕಂಪನಿ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ’ ಮತ್ತು ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ‘ಐಐಟಿ ರೂರ್ಕಿ’ ಜಂಟಿ ಒಪ್ಪಂದಕ್ಕೆ ಸಹಿ ಹಾಕಿವೆ. ಕೈಗಾರಿಕಾ ವಲಯದ ಬೃಹತ್ ಅನುಭವವನ್ನು ಹೊಂದಿರುವ ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಮತ್ತು ಶೈಕ್ಷಣಿಕ ಸಂಶೋಧನೆಯಲ್ಲಿ ಮುಂಚೂಣಿಯಲ್ಲಿರುವ ಐಐಟಿ ರೂರ್ಕಿ ಜೊತೆಯಾಗಿರುವುದರಿಂದ, ಭಾರತದ ಕೈಗಾರಿಕಾ ಬೆಳವಣಿಗೆಗೆ ಭಾರಿ ಉತ್ತೇಜನ ಸಿಗಲಿದೆ. ಈ ಒಪ್ಪಂದದ ಉದ್ದೇಶಗಳೇನು? ಈ ಪಾಲುದಾರಿಕೆಯ ಅಡಿಯಲ್ಲಿ ಎರಡೂ ಸಂಸ್ಥೆಗಳು ಹಲವು ಪ್ರಮುಖ ಕ್ಷೇತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡಲಿವೆ. ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಜಂಟಿಯಾಗಿ ಶೈಕ್ಷಣಿಕ ಕಾರ್ಯಕ್ರಮಗಳು, ವೃತ್ತಿಪರ ತರಬೇತಿ ಕೋರ್ಸ್ಗಳು ಹಾಗೂ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ನೀಡಲಿವೆ. ಅಲ್ಲದೆ, ಕೈಗಾರಿಕೆಗಳಿಗೆ ಅಗತ್ಯವಿರುವ ತಾಂತ್ರಿಕ ಸಲಹೆಗಳನ್ನು ನೀಡುವುದು, ಸಮಸ್ಯೆಗಳನ್ನು ಬಗೆಹರಿಸುವುದು…














