Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ದಿಢೀರ್ ಹೃದಯಾಘಾತದಿಂದ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ಅವರು ನಿಧನರಾಗಿದ್ದಾರೆ. ಆ ಮೂಲಕ ಕಾರ್ಮಿಕ ನೌಕರರ ಮುಖಂಡ ಅನಂತ ಸುಬ್ಬರಾವ್ ಇನ್ನಿಲ್ಲವಾಗಿದ್ದಾರೆ. ಇಂದು ಸಂಜೆ 5.30ಕ್ಕೆ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ಅವರಿಗೆ ಹೃದಯಾಘಾತ ಉಂಟಾಗಿತ್ತು. ಅವರನ್ನು ವಿಜಯನಗರದ ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಅನಂತ ಸುಬ್ಬರಾವ್ ನಿಧನದ ಹಿನ್ನಲೆಯಲ್ಲಿ ನಾಳೆ ಕರೆದಿದ್ದಂತ ಬೆಂಗಳೂರು ಚಲೋ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂಬುದಾಗಿ ಸಾರಿಗೆ ನೌಕರರ ಮುಖಂಡ ಜಗದೀಶ್ ಮಾಹಿತಿ ನೀಡಿದ್ದಾರೆ. https://kannadanewsnow.com/kannada/will-it-be-mandatory-for-karnataka-government-employees-to-wear-khadi-clothes-from-now-on/ https://kannadanewsnow.com/kannada/dgca-revealed-the-reason-behind-ajit-pawars-plane-crash-do-you-know-that/
ಬೆಂಗಳೂರು; ಸಾರಿಗೆ ಸಂಘಟನೆಗಳ ಬೇಡಿಕೆ ಈಡೇರಿಕೆಯಲ್ಲಿ ಮುಂಚೂಣಿಯಲ್ಲಿ ಇರುತ್ತಿದ್ದಂತ ಕಾರ್ಮಿಕ ಕಣ್ಮಣಿ ಎಂಬುದಾಗಿಯೇ ಕರೆಸಿಕೊಂಡಿದ್ದಂತ ಅನಂತ ಸುಬ್ಬರಾವ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಕೆಎಸ್ಆರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ಅಧ್ಯಕ್ಷರಾಗಿದ್ದಂತ ಹೆಚ್.ವಿ ಅನಂತಸುಬ್ಬರಾವ್ ಅವರು, ಸಾರಿಗೆ ನೌಕರರ ಹಲವು ಬೇಡಿಕೆ ಈಡೇರಿಸುವಲ್ಲಿ ಹೋರಾಡಿದ್ದರು. ಹೋರಾಟವನ್ನೇ ತಮ್ಮ ಜೀವನದ ವೃತ್ತಿಯನ್ನಾಗಿಸಿಕೊಂಡಿದ್ದರು. ನಾಳೆಯಿಂದ ವಿವಿಧ ಬೇಡಿಕೆ ಈಡೇರಿಕೆಗೂ ಕೆ ಎಸ್ ಆರ್ ಟಿಸಿ ನೌಕರರು ಮುಂದಾಗಿದ್ದರು. ಈ ಮುಷ್ಕರದ್ಲೂ ಪಾಲ್ಗೊಳ್ಳುವ ನಿರೀಕ್ಷೆಯಿತ್ತು. ಆದರೇ ಅವರು ಇದೀಗ ಹೃದಯಾಘಾತದಿಂದ ನಿಧನರಾಗಿರುವುದಾಗಿ ತಿಳಿದು ಬಂದಿದೆ. ಆ ಮೂಲಕ ಕಾರ್ಮಿಕ ಕಣ್ಮಣಿ ಹೆಚ್.ವಿ ಅನಂತಸುಬ್ಬರಾವ್ ಇನ್ನಿಲ್ಲವಾಗಿದ್ದಾರೆ. ಈ ಬಗ್ಗೆ ಎಂ.ಸತ್ಯಾನಂದ ಎಂಬುವರು ಮಾಹಿತಿಯೊಂದನ್ನು ಹಂಚಿಕೊಂಡಿದ್ದು, ಆತ್ಮೀಯ ಸಂಗಾತಿಗಳೇ, ಇದೀಗ ಎಐಟಿಯುಸಿ ಮಾಜಿ ರಾಜ್ಯಾಧ್ಯಕ್ಷರು ಕರ್ನಾಟಕ ಕಾರ್ಮಿಕ ವರ್ಗದ ಹಿರಿಯ ನಾಯಕರಾದ ಕಾಂ. ಹೆಚ್. ವಿ. ಅನಂತ ಸುಬ್ಬರಾವ್ ಅವರು ಇದೀಗ ಹೃದಯಾಘಾತದಿಂದ ನಿಧನರಾದ ವಿಷಯ ತಿಳಿಸಲು ತೀವ್ರ ವಿಷಾದ ವ್ಯಕ್ತಪಡಿಸುತ್ತೇವೆ ಎಂದಿದ್ದಾರೆ. ಪಾರ್ಥಿವ ಶರೀರ ದರ್ಶನಕ್ಕೆ ಈಗ ಅವರ…
ಬೆಂಗಳೂರು: ರಾಜ್ಯ ಸರ್ಕಾರದಿಂದ 25 ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ್ದಂತ ಶಾಸಕರನ್ನು ಮುಂದುವರೆಸಿ ಅಧಿಕೃತ ಆದೇಶ ಹೊರಡಿಸಿದೆ. ಆ ಮೂಲಕ ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬಂಫರ್ ಗಿಫ್ಟ್ ನೀಡಿದ್ದಾರೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಚಳ್ಳಕೆರೆ ಶಾಸಕ ಟಿ ರಘುಮೂರ್ತಿಯನ್ನು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದರೇ, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರನ್ನು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ ಮುಂದುವರೆಸಿದ್ದಾರೆ. ಇಲ್ಲಿದೆ ಮುಂದುರಿಕೆಯ ನಿಗಮ ಮಂಡಳಿಯ ಅಧ್ಯಕ್ಷರ ಪಟ್ಟಿ
ಶಿವಮೊಗ್ಗ : ಜನವರಿ.29, 2026ರ ನಾಳೆ ಸಂಜೆ 6.30ಕ್ಕೆ ಶಿವಮೊಗ್ಗ ರಂಗಾಯಣ ವತಿಯಿಂದ ಸಾಗರದ ಎಲ್.ಬಿ.ಕಾಲೇಜಿನ ದೇವರಾಜ ಅರಸು ಕಲಾಭವನದಲ್ಲಿ ‘ನಮ್ಮೊಳಗೊಬ್ಬ ಗಾಂಧಿ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಪ್ರಜ್ಞಾರಂಗ ತಂಡದ ಎಚ್.ಬಿ.ರಾಘವೇಂದ್ರ ತಿಳಿಸಿದ್ದಾರೆ. ನಾಟಕ ಪ್ರಿಯರು ತಪ್ಪದೇ ಆಗಮಿಸಿ, ವೀಕ್ಷಿಸುವಂತೆ ಅವರು ಮನವಿ ಮಾಡಿದ್ದಾರೆ. ಮಂಗಳವಾರದಂದು ಶಿವಮೊಗ್ಗದ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ರಂಗಾಯಣ ನೇತೃತ್ವದಲ್ಲಿ ಪ್ರಜ್ಞಾರಂಗ ತಂಡ, ಮಲೆನಾಡು ಅಭಿವೃದ್ದಿ ಪ್ರತಿಷ್ಟಾನ, ರೈತ ಸಂಘದ ಸಹಯೋಗದಲ್ಲಿ ನಾಳೆ ನಮ್ಮೊಳಗೊಬ್ಬ ಗಾಂಧಿ ಉಚಿತ ನಾಟಕ ಪ್ರದರ್ಶನವಾಗುತ್ತಿದೆ. ಡಾ. ಡಿ.ಎಸ್.ಚೌಗಲೆ ರಚಿಸಿರುವ ನಾಟಕವನ್ನು ಚಿದಂಬರ ರಾವ್ ಜಂಬೆ ವಿನ್ಯಾಸ ಮತ್ತು ನಿರ್ದೇಶನ ಮಾಡಿದ್ದು, ಓಂಕಾರ್ ಮೇಗಳಾಪುರ ಸಹ ನಿರ್ದೇಶನ ಮಾಡಿದ್ದಾರೆ. ಮಹಾತ್ಮಾ ಗಾಂಧೀಜಿಯವರು ಹಿಂಸೆಯನ್ನು ವಿರೋಧಿಸಿ ಅಹಿಂಸೆ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಪ್ರಮುಖಪಾತ್ರ ವಹಿಸಿದವರು ಎಂದರು. ಇತ್ತೀಚಿನ ವರ್ಷಗಳಲ್ಲಿ ಗಾಂಧೀಜಿಯವರ ಬಗ್ಗೆ ಸುಳ್ಳನ್ನು ಸೃಷ್ಟಿ ಮಾಡಿ ಗಾಂಧಿ ಅವರ ಕೊಡುಗೆಯನ್ನು ನೇಪಥ್ಯಕ್ಕೆ ಸರಿಯುವ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಆಡಿಯೋ ಬಾಂಬ್ ಸ್ಪೋಟಗೊಂಡಿದೆ. ವೈರಲ್ ಆಗಿರುವಂತ ಆಡಿಯೋದಲ್ಲಿ ಮಾಜಿ ಎಂಎಲ್ಸಿಯೊಬ್ಬರು ದಿವಂಗತ ನಟ ಅಬರೀಶ್, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿರೋದಾಗಿ ಹೇಳಲಾಗುತ್ತಿದೆ. ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಅವರು ಆಡಿಯೋವೊಂದು ವೈರಲ್ ಆಗಿದೆ. ಆ ಮೂಲಕ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯನ್ನೇ ಹುಟ್ಟು ಹಾಕಿದೆ. ಜೆಡಿಎಸ್ ಕಾರ್ಯಕರ್ತರೊಂದಿಗೆ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಮಾತನಾಡಿರುವಂತ ದೂರವಾಣಿ ಸಂಭಾಷಣೆಯ ಆಡಿಯೋ ಅದಾಗಿ ಎನ್ನಲಾಗಿದೆ. ಅದರಲ್ಲಿ ಅಶ್ಲೀಲ, ಅವಾಚ್ಯ ಪದಗಳನ್ನು ಬಳಸಿ ಮಾತನಾಡಿದ್ದಾರೆ ಎನ್ನಲಾಗಿದೆ. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ದಿವಂಗತ ನಟ ಅಂಬರೀಶ್ ಬಗ್ಗೆಯೂ ತೀವ್ರ ವಾಗ್ಧಾಳಿ ನಡೆಸಿರುವಂತ ಎಲ್ ಆರ್ ಶಿವರಾಮೇಗೌಡ ಅವರು, ಮಾತಿನ ಬರದಲ್ಲಿ ಏಕ ವಚನದಲ್ಲೇ ಕಿಡಿಕಾರಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ ಲೋಕಸಭೆ ಉಪ ಚುನಾವಣೆಯ ಸಂದರ್ಭದಲ್ಲಿ ನನ್ನಿಂದ 36 ಕೋಟಿ ಖರ್ಚಿ ಮಾಡಿಸಿದರು. ಆದರೇ ಟಿಕೆಟ್ ನೀಡದೇ ನನ್ನನ್ನು…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ನಿವೇಶನ ಹಗರಣದಲ್ಲಿ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದಂತ ಬಿ-ರಿಪೋರ್ಟ್ ಅನ್ನು ಕೋರ್ಟ್ ಪುರಸ್ಕರಿಸಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಇತರರಿಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ಅವರಿಗೆ ಬಿಗ್ ರಿಲೀಫ್ ನೀಡಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದಂತ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯವು ಪುರಸ್ಕರಿಸಿದೆ. ಇನ್ನೂ ಉಳಿದವರ ಮೇಲಿನ ತನಿಖೆ ಮುಂದುವರೆಸಲು ಕೋರ್ಟ್ ಆದೇಶಿಸಿದೆ. ಸಿಎಂ ಸಿದ್ಧರಾಮಯ್ಯ, ಪತ್ನಿ ಪಾರ್ವತಿ, ಬಾಮೈದ, ಜಮೀನು ಮಾಲೀಕರಿಗೂ ಜನಪ್ರತಿನಿಧಿಗಳ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಸಿಎಂ ಸಿದ್ಧರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂಮಾಲೀಕ ದೇವರಾಜಗೆ ನ್ಯಾಯಾಲಯದಿಂದ ರಿಲೀಫ್ ನೀಡಲಾಗಿದೆ. ಈ ನಾಲ್ವರ ವಿರುದ್ಧ ಲೋಕಾಯುಕ್ತ ಪೊಲೀಸರು ಬಿ-ರಿಪೋರ್ಟ್ ಸಲ್ಲಿಸಿದ್ದರು. ಈ ಬಿ-ರಿಪೋರ್ಟ್ ಪುರಸ್ಕರಿಸಿರುವಂತ ಕೋರ್ಟ್, ಉಳಿದವರ ಮೇಲಿನ ತನಿಖೆ ಮುಂದುವರೆಸಲು ಆದೇಶಿಸಿದೆ. ಒಟ್ಟಾರೆಯಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ…
BIG BREAKING: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯಗೆ ಬಿಗ್ ರಿಲೀಫ್: ಲೋಕಾಯುಕ್ತ ಪೊಲೀಸರ ಬಿ-ರಿಪೋರ್ಟ್ ಪುರಸ್ಕಾರ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ನಿವೇಶನ ಹಗರಣದಲ್ಲಿ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದಂತ ಬಿ-ರಿಪೋರ್ಟ್ ಅನ್ನು ಪುರಸ್ಕರಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ಅವರಿಗೆ ಬಿಗ್ ರಿಲೀಫ್ ನೀಡಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದಂತ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯವು ಪುರಸ್ಕರಿಸಿದೆ. ಇನ್ನೂ ಉಳಿದವರ ಮೇಲಿನ ತನಿಖೆ ಮುಂದುವರೆಸಲು ಕೋರ್ಟ್ ಆದೇಶಿಸಿದೆ. ಸಿಎಂ ಸಿದ್ಧರಾಮಯ್ಯ, ಪತ್ನಿ ಪಾರ್ವತಿ, ಬಾಮೈದ, ಜಮೀನು ಮಾಲೀಕರಿಗೂ ಜನಪ್ರತಿನಿಧಿಗಳ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಉತ್ತರ ಕನ್ನಡ: ಪ್ರಸಿದ್ಧ ಇಡಗುಂಜಿ ದೇವಸ್ಥಾನದಲ್ಲಿ ತಟ್ಟೆ ಕಾಸಿಗಾಗಿ ಭಕ್ತರ ಮುಂದೆಯೇ ಅರ್ಚಕರು ಕಿತ್ತಾಟ ಮಾಡಿಕೊಂಡ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಇಡಗುಂಜಿ ಕ್ಷೇತ್ರದಲ್ಲಿ ತಟ್ಟೆ ಕಾಸಿಗಾಗಿ ಅರ್ಚಕರು ಭಕ್ತರ ಮುಂದೆಯೇ ಕಿತ್ತಾಡಿಕೊಂಡಿರೋದಾಗಿ ತಿಳಿದು ಬಂದಿದೆ. ಕಳೆದ ಒಂದೂವರೆ ತಿಂಗಳ ಹಿಂದೆ ನಡೆದಿದ್ದ ಗಲಾಟೆ ವೀಡಿಯೋ ಈಗ ವೈರಲ್ ಆಗಿದೆ. ಐತಿಹಾಸಿಕ ಇಡಗುಂಜಿ ಗಣಪತಿ ದೇವಸ್ಥಾನದಲ್ಲೇ ತಟ್ಟೆಕಾಸಿಗಾಗಿ ಭಕ್ತರ ಮುಂದೆ ಅರ್ಚಕರಾದಂತ ನರಸಿಂಹ ಭಟ್ ಹಾಗೂ ರಮಾನಂದ ಭಟ್ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಹಲವು ವರ್ಷಗಳಿಂದ ದೇಗುಲದ ಹಕ್ಕಿಗಾಗಿ ಅರ್ಚಕರ ಕುಟುಂಬದಲ್ಲಿ ಒಳಜಗಳ ಉಂಟಾಗುತ್ತಿರುವುದು ವೀಡಿಯೋದಲ್ಲಿ ಬಟಾ ಬಯಲಾಗಿದೆ. ದೇವಸ್ಥಾನದ ಹಕ್ಕಿಗಾಗಿ ಕೋರ್ಟ್ ನಲ್ಲಿ ದಾವೆಯನ್ನು ಅರ್ಚಕರ ಕುಟುಂಬಗಳು ಹೂಡಿವೆ. ದೇಗುಲದಲ್ಲಿ ಪೂಜೆ ವಿಚಾರವಾಗಿಯೂ 2 ಕುಟುಂಬಗಳ ನಡುವೆ ಕಲಹ ಉಂಟಾಗಿದೆ. ತಟ್ಟೆಕಾಸಿಗಾಗಿ ಭಕ್ತರ ಮುಂದೆ ಹೊಡೆದಾಡಿಕೊಂಡ ವೀಡಿಯೋ ವೈರಲ್ ಆಗುತ್ತಿದ್ದಂತೆ, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ.
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಪೊಲೀಸರು ಆರೋಪಿ ರಾಜೀವ್ ಗೌಡ ಬಂಧಿಸಿದ್ದರು. ಅವರಿಗೆ ನಿನ್ನೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ವಿಧಿಸಿತ್ತು. ಇಂದು ಹೆಚ್ಚಿನ ವಿಚಾರಣೆಗಾಗಿ 2 ದಿಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ ಆರೋಪಿ ರಾಜೀವ್ ಗೌಡನನ್ನು ಕೇರಳ ಗಡಿಯಲ್ಲಿ ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಯನ್ನು ನಿನ್ನೆ ಶಿಡ್ಲಘಟ್ಟ ನ್ಯಾಯಾಲಯಕ್ಕೂ ಹಾಜರುಪಡಿಸಿದ್ದರು. ಅವರಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತ್ತು. ಈ ಬೆನ್ನಲ್ಲೇ ಇಂದು ಅವರನ್ನು ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ಕೋರ್ಟ್ ಗೆ ಮನವಿ ಮಾಡಿದ್ದರು. ಈ ಮನವಿ ಪುರಸ್ಕರಿಸಿರುವಂತ ನ್ಯಾಯಾಲಯವು 2 ದಿನಗಳ ಕಾಲ ಆರೋಪಿ ರಾಜೀವ್ ಗೌಡ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. https://kannadanewsnow.com/kannada/staubli-invests-10-million-to-strengthen-solar-pv-connector-ecosystem-in-bengaluru/ https://kannadanewsnow.com/kannada/dgca-revealed-the-reason-behind-ajit-pawars-plane-crash-do-you-know-that/
ಬೆಂಗಳೂರು: ಜಾಗತಿಕ ಕೈಗಾರಿಕಾ ಮತ್ತು ಮೆಕಾಟ್ರಾನಿಕ್ ಪರಿಹಾರಗಳ ಪೂರೈಕೆದಾರ ಸ್ಟೌಬ್ಲಿ, ಇಂದು ಬೆಂಗಳೂರಿನಲ್ಲಿ ತನ್ನ ಉತ್ಪಾದನಾ ಸೌಲಭ್ಯದ ವಿಸ್ತರಣೆ ಘೋಷಿಸಿತು, ಇದು 10 ಮಿಲಿಯನ್ ಡಾಲರ್ ಕಾರ್ಯತಂತ್ರದ ಹೂಡಿಕೆಯನ್ನು ಪ್ರತಿನಿಧಿಸುತ್ತದೆ. ಈ ಕುರಿತು ಮಾತನಾಡಿದ ಸ್ಟೌಬ್ಲಿ ಗ್ರೂಪ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಜೆರಾಲ್ಡ್ ವೋಗ್ಟ್ , ಈ ವಿಸ್ತರಣೆಯು ಭಾರತದ ವೇಗವಾಗಿ ಬೆಳೆಯುತ್ತಿರುವ ಸೌರ ಫೋಟೊವೋಲ್ಟಾಯಿಕ್ (PV) ವಲಯದಲ್ಲಿ ಸ್ಟೌಬ್ಲಿಯ ಸ್ಥಾನವನ್ನು ಬಲಪಡಿಸುತ್ತದೆ. ದೇಶದ ಕೈಗಾರಿಕಾ ಬೆಳವಣಿಗೆ ಮತ್ತು ‘ಮೇಕ್ ಇನ್ ಇಂಡಿಯಾ’ ಉಪಕ್ರಮಕ್ಕೆ ಕಂಪನಿಯ ದೀರ್ಘಕಾಲೀನ ಬದ್ಧತೆಯನ್ನು ಬಲಪಡಿಸುತ್ತದೆ ಎಂದರು. ವಿಸ್ತೃತ ಸೌಲಭ್ಯವು ಸುಧಾರಿತ ಸ್ವಯಂಚಾಲಿತ ಅಸೆಂಬ್ಲಿ ಲೈನ್ಗಳು ಮತ್ತು MC4-Evo1 ಮತ್ತು MC4-Evo2 ಕನೆಕ್ಟರ್ಗಳ ಉತ್ಪಾದನೆಗೆ ಮೀಸಲಾಗಿರುವ ವರ್ಧಿತ ಗುಣಮಟ್ಟದ ಭರವಸೆ ವ್ಯವಸ್ಥೆಗಳನ್ನು ಹೊಂದಿರುತ್ತದೆ, ಇದು ಸೌರ ಮಾಡ್ಯೂಲ್ಗಳನ್ನು ಇನ್ವರ್ಟರ್ಗಳಿಗೆ ಮತ್ತು ಬ್ಯಾಲೆನ್ಸ್-ಆಫ್-ಸಿಸ್ಟಮ್ ಉಪಕರಣಗಳಿಗೆ ಸಂಪರ್ಕಿಸುವ ನಿರ್ಣಾಯಕ ಘಟಕಗಳಾಗಿವೆ. ಈ ಕ್ರಮವು ಸ್ಟೌಬ್ಲಿಯ ಉತ್ತಮ ಗುಣಮಟ್ಟದ, ಸ್ಥಳೀಯವಾಗಿ ತಯಾರಿಸಿದ ಪಿವಿ ಕನೆಕ್ಟರ್ಗಳಿಗೆ ಹೆಚ್ಚುತ್ತಿರುವ ದೇಶೀಯ ಬೇಡಿಕೆಯನ್ನು ಪೂರೈಸುವ…














