Author: kannadanewsnow09

ಧಾರವಾಡ : ಮಾಹಿತಿ ಹಕ್ಕು ಅಧಿನಿಯಮ 2005 ರ ಅನುಷ್ಠಾನದಿಂದ ಆಡಳಿತದಲ್ಲಿ ಹಾಗೂ ಸಾರ್ವಜನಿಕ ಸೇವೆಯಲ್ಲಿ ಬದಲಾವಣೆಯನ್ನು ಕಾಣುತ್ತಿದ್ದೇವೆ. ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವಲ್ಲಿ ಮತ್ತು ಜನಸ್ನೇಹಿ ಆಡಳಿತ ನೀಡುವಲ್ಲಿ ಆರ್.ಟಿ.ಐ ಕಾಯ್ದೆ ಪರಿಣಾಮಕಾರಿಯಾಗಿದೆ. ಕಾಯ್ದೆಯ ಸದುಪಯೋಗ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅರ್ಜಿಗಳ ವಿಲೇವಾರಿಗೆ ಆಧ್ಯತೆ ನೀಡಿ, ನಿರ್ಲಕ್ಷ್ಯ ಬೇಡ. ಇದೊಂದು ಜನರಿಗೆ ಸರ್ಕಾರ ಕೊಟ್ಟಿರುವ ಪ್ರಮುಖ ಹಾಗೂ ಪ್ರಬಲ ಕಾಯ್ದೆಯಾಗಿದೆ. ಬ್ಲಾಕ್ ಮೇಲರ್‍ಗಳ ಸೃಷ್ಟಿಗೆ ಅವಕಾಶ ಕೊಡದೇ ಮಾಹಿತಿ ನೀಡಿ ಎಂದು ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ, ರಾಜಶೇಖರ ಎಸ್., ಪ್ರಕಾಶ ನಾರಾಯಣ ಚನ್ನಾಳ್ ಅವರು ಅಭಿಪ್ರಾಯಪಟ್ಟರು. ಅವರು ಇಂದು (ಜ.31) ಬೆಳಿಗ್ಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಾಹಿತಿ ಆಯೋಗವು ಧಾರವಾಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಸಹಯೋಗದಲ್ಲಿ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಹಾಗೂ ಪ್ರಥಮ ಮೇಲ್ಮನವಿ ಅಧಿಕಾರಿಗಳಿಗೆ ಆಯೋಜಿಸಿದ್ದ ಮಾಹಿತಿ ಹಕ್ಕು ಅಧಿನಿಯಮ-2005 ರ ಕಾರ್ಯಾಗಾರ ಮತ್ತು ಅಧಿಕಾರಿಗಳೊಂದಿಗೆ ಸಂವಾದ…

Read More

ಚಿತ್ರದುರ್ಗ: ವಿದ್ಯಾಭ್ಯಾಸ ಮುಗಿಸಿ, ವಿದ್ಯಾರ್ಹತೆಗೆ ತಕ್ಕಂತೆ ಕೆಲಸ ಹುಡುಕಿ ದುಡಿಮೆಯ ಜೀವನ ಪ್ರಾರಂಭಿಸುವ ನಿರೀಕ್ಷೆಯಲ್ಲಿರುವ ಉದ್ಯೋಗಾಕಾಂಕ್ಷಿಗಳಿಗೆ ಸೂಕ್ತ ವೇದಿಕೆ ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ಇದೇ ಫೆಬ್ರವರಿ 01 ರಂದು ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳಕ್ಕೆ ವೇದಿಕೆ ಸಜ್ಜುಗೊಂಡಿದೆ. ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಬೃಹತ್ ಉದ್ಯೋಗ ಮೇಳವು ಯುವ ಜನತೆಗೆ ಸುವರ್ಣಾವಕಾಶವಾಗಿದೆ. ನಗರದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಸಕಲ ಸಿದ್ಧತೆಗಳು ಅಂತಿಮ ಹಂತ ತಲುಪಿದ್ದು, ವಿವಿಧ ಕಂಪನಿಗಳು ಅಭ್ಯರ್ಥಿಗಳ ಸಂದರ್ಶನ ಇತ್ಯಾದಿ ನಡೆಸಲು ಅನುಕೂಲವಾಗುವಂತೆ ಕೊಠಡಿಗಳನ್ನು ಸಜ್ಜುಗೊಳಿಸಲಾಗಿದೆ. ಅಭ್ಯರ್ಥಿಗಳಿಗೆ ಗೊಂದಲವಾಗದಂತೆ ಮಾಹಿತಿ ನೀಡುವ ಸಲುವಾಗಿ ಕೌಂಟರ್‍ಗಳನ್ನು ಸ್ಥಾಪಿಸಲಾಗಿದೆ. 100ಕ್ಕೂ ಹೆಚ್ಚು ಕಂಪನಿಗಳು ಭಾಗಿ: ಐಟಿ, ಬಿಟಿ, ಮೆಕ್ಯಾನಿಕಲ್, ಆಟೋಮೊಬೈಲ್ ಸೇರಿದಂತೆ ವಿವಿಧ ಕ್ಷೇತ್ರಗಳ ಸುಮಾರು 100ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ…

Read More

ಬೆಂಗಳೂರು: ನಗರದ ಗರ್ಭಿಣಿ ಮಹಿಳೆಯರು ಸೇರಿದಂತೆ ಸಾರ್ವಜನಿಕರಿಗೆ ನಿಯಮಿತ ಆರೋಗ್ಯ ತಪಾಸಣೆ ಸಂಬಂಧ ಜಿಬಿಎ ವ್ಯಾಪ್ತಿಗೂ ಗೃಹ ಆರೋಗ್ಯ ಯೋಜನೆ ವಿಸ್ತರಣೆ ಮಾಡಲಾಗಿದೆ. ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ಮನೆ ಬಾಗಿಲಲ್ಲಿಯೇ ವಿವಿಧ ಅನಾರೋಗ್ಯ ಸಮಸ್ಯೆಗಳನ್ನು ಪತ್ತೆ ಮಾಡಿ, ಔಷಧ ವಿತರಿಸುವ ಗೃಹ ಆರೋಗ್ಯ ಯೋಜನೆಯನ್ನು ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೂ ವಿಸ್ತರಿಸಲು ಮುಂದಾಗಿದ್ದೇವೆ. ಈ ಸಂಬಂಧ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಗಿದ್ದು, ಯೋಜನೆಯಡಿ ತಪಾಸಣೆ ಜೊತೆಗೆ ಔಷಧವನ್ನೂ ನೀಡಲಾಗುವುದು ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/2017591287302758703 ಸರ್ಕಾರಿ ವೈದ್ಯರಿಗೆ ಖಾಸಗಿ ಆಸ್ಪತ್ರೆ ಒಪಿಡಿಯಲ್ಲಿ ಕೆಲಸ ಮಾಡಲು ಅವಕಾಶ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ (ಒಪಿಡಿ) ವಿಭಾಗದಲ್ಲಿ ಕೆಲಸ ಮಾಡಬಹುದು. ಖಾಸಗಿ ಸೇವೆಯಲ್ಲಿ ಒಳರೋಗಿಗಳಿಗೆ (IPD)ಸೇವೆ ನೀಡುವಂತಿಲ್ಲ ಎಂಬುದಾಗಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. https://twitter.com/KarnatakaVarthe/status/2017109631315976390 https://kannadanewsnow.com/kannada/b-khata-properties-in-the-state-will-get-a-khata-status-here-are-the-things-people-need-to-know/ https://kannadanewsnow.com/kannada/bmrcl-launches-special-awareness-campaign-to-ensure-compliance-with-rules-among-passengers/

Read More

ಶಿವಮೊಗ್ಗ: ದಿನಾಂಕ 03-02-2026 ರಿಂದ 11-02-2026ರವರೆಗೆ ಸಾಗರದಲ್ಲಿ ಶ್ರೀ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಹಿನ್ನಲೆಯಲ್ಲಿ ಸಾಗರದ ಕೆಲ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಅಲ್ಲದೇ ಈ ಮಾರ್ಗ ಬದಲಾವಣೆ ಮಾಡಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕಳವಕಟ್ಟಿ ಆದೇಶಿಸಿದ್ದಾರೆ. ಇಂದು ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ಅವರು, ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ದಿನಾಂಕ:03.02.2026 ರಿಂದ 11.02.2026 ರವರೆಗೆ ಸಾಗರ ಪಟ್ಟಣ ವ್ಯಾಪ್ತಿಯಲ್ಲಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆಯು 9 ದಿನಗಳ ಕಾಲ ನಡೆಯಲಿದ್ದು, ಈ ಜಾತ್ರೆಗೆ ಪ್ರತಿ ದಿನ ಅಂದಾಜು 80 ಸಾವಿರದಷ್ಟು ಭಕ್ತಾದಿಗಳು, ಸಾರ್ವಜನಿಕರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ಸೇರುವ ಸಾಧ್ಯತೆ ಇರುತ್ತದೆ. ಪ್ರತಿನಿತ್ಯ ಪೂಜಾ ಕಾರ್ಯಕ್ರಮಗಳು ಮತ್ತು ವಿವಿಧ ಮನರಂಜನಾ ಕಾರ್ಯಕ್ರಮಗಳು ನಡೆಯಲಿರುತ್ತವೆ. ಹಾಗೂ ಮಾರಿಕಾಂಬಾ ಕಲಾ ಮಂಟಪದಲ್ಲಿ ವಿವಿಧ ಮನರಂಜನಾ ಕಾರ್ಯಕ್ರಮಗಳನ್ನು ಶ್ರೀ ಮಾರಿಕಾಂಬಾ ದೇವಿ ಜಾತ್ರೆಯ ಸಮಿತಿಯವರು ಹಮ್ಮಿಕೊಂಡಿರುತ್ತಾರೆ. ಜಾತ್ರಾ ಸಮಯದಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಗಳು…

Read More

ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸೋದಕ್ಕೆ ವಿಶೇಷ ತನಿಖಾ ತಂಡವನ್ನು ರಚಿಸಿ ಸರ್ಕಾರ ಆದೇಶಿಸಿದೆ.  ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಎಸ್ಐಟಿ ತಂಡವನ್ನು ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗಾಗಿ ರಚಿಸಲಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್, ಹಲಸೂರು ಗೇಟ್ ಎಸಿಪಿ ಸುಧೀರ್, ಸಿಸಿಆರ್ ಬಿ ಎಸಿಪಿ ರಾಮಚಂದ್ರ, ಅಶೋಕ ನಗರ ಠಾಣೆ ಇನ್ಸ್ ಪೆಕ್ಟರ್ ರವಿ ಒಳಗೊಂಡ ಎಸ್ಐಟಿ ತಂಡವನ್ನು ರಚಿಸಲಾಗಿದೆ. ನಿನ್ನೆ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಆತ್ಮಹತ್ಯೆ ವೇಳೆಯಲ್ಲೇ ಐಟಿ ಅಧಿಕಾರಿಗಳ ತಂಡವು ನಿವಾಸದ ಮೇಲೆ ದಾಳಿ ನಡೆಸಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿತ್ತು. ಮನೆಯಲ್ಲಿ ಗುಂಡು ಹಾರಿಸಿಕೊಂಡು ಸಿ.ಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದರ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದರು. ಈ ಎಲ್ಲದರ ಹಿನ್ನಲೆಯಲ್ಲಿ ರಾಜ್ಯ…

Read More

ಮಂಡ್ಯ : ಮುಂದಿನ ಒಂದು ವರ್ಷದೊಳಗೆ ಕೊಪ್ಪ ಹೋಬಳಿಯ ಪ್ರತಿ ಮನೆಗಳಿಗೂ ಜಲ ಜೀವನ್ ಮಿಷನ್ ಯೋಜನೆಯಡಿ ಕಾವೇರಿ ನೀರನ್ನು ಪೂರೈಸಲಾಗುವುದು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಶನಿವಾರ ಹೇಳಿದರು. ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ಅರಗಿನಮೆಳೆ ಉತ್ಸವ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೊಪ್ಪ ಹೋಬಳಿಯ 8 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಇನ್ನು ಮುಂದೆ ನೀರಿನ ಸಮಸ್ಯೆ ತಲೆದೊರುವುದಿಲ್ಲ. ಈಗಾಗಲೇ 33 ಕೋಟಿ ರೂ ವೆಚ್ಚದಲ್ಲಿ ಕಾವೇರಿ ನೀರನ್ನು ಪ್ರತಿ ಮನೆಗಳಿಗೂ ಪೂರೈಸುವ ಯೋಜನೆಗೆ ಶೀಘ್ರದಲ್ಲೆ ಚಾಲನೆ ನೀಡಲಾಗುವುದು ಎಂದರು. ಇನ್ನು ಮುಂದೆ ಕುಡಿಯುವ ನೀರಿಗಾಗಿ ಯಾವುದೇ ಬೋರ್ ವೆಲ್ ಕೊರೆಯುವುದಿಲ್ಲ. ಕೊಪ್ಪ ಹೋಬಳಿಯ ಕೊನೆ ಭಾಗಕ್ಕೆ ಕೆಆರ್ಎಸ್ ಜಲಾಶಯದಿಂದ ನೀರು ಸರಾಗವಾಗಿ ಹರಿಯಲು 100 ಕೋಟಿ ರೂ ವೆಚ್ಚದಲ್ಲಿ ನಾಲೆಗಳ ಆಧುನಿಕರಣ ಮಾಡಲಾಗುತ್ತಿದ್ದು, ಇದರ ಜೊತೆಗೆ ಈ ಭಾಗದ ಜನತೆಗೆ ಕುಡಿಯಲು…

Read More

ಮಂಡ್ಯ : ಕಳೆದ 20 ವರ್ಷಗಳಿಂದ ತಲೆದೊರಿರುವ ಆತಗೂರು ಹೋಬಳಿಯ ರೀ ಸರ್ವೆ ಸಮಸ್ಯೆಗೆ ಇನ್ನು ಕೆಲ ದಿನಗಳಲ್ಲೇ ಮುಕ್ತಿ ನೀಡಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಶುಕ್ರವಾರ ಭರವಸೆ ನೀಡಿದರು. ಮದ್ದೂರು ತಾಲೂಕಿನ ಈಡಿಗರದೊಡ್ಡಿ, ಚಾಕನಕೆರೆ ಹಾಗೂ ನವಿಲೆ ಗ್ರಾಮಗಳಲ್ಲಿ ಸುಮಾರು 2 ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಸೇತುವೆ ಕಾಮಗಾರಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಆತಗೂರು ಹೋಬಳಿಯನ್ನು ರೀ ಸರ್ವೆ ಮಾಡಲು ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಬದಲಾದ ರಾಜಕೀಯ ಸನ್ನಿವೇಶದಿಂದ ರೀ ಸರ್ವೆ ಪ್ರಕ್ರಿಯೆ ಅರ್ಧಕ್ಕೆ ನಿಂತು ಹೋಯಿತು. ಇದರಿಂದ ಈ ಭಾಗದ ರೈತರಿಗೆ ಸಾಕಷ್ಟು ಸಮಸ್ಯೆ ಉಂಟಾಗಿತ್ತು. ಕಳೆದ 15 ವರ್ಷಗಳಿಂದ ಕ್ಷೇತ್ರದ ಜನಪ್ರತಿನಿಧಿಗಳು ಸಹ ರೈತರ ಸಮಸ್ಯೆಯನ್ನು ಬಗೆಹರಿಸಲು ವಿಫಲರಾಗಿದ್ದಾರೆ. ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಪ್ರತಿ ಗ್ರಾಮಗಳಲ್ಲಿ ಜನ ಸಂಪರ್ಕ ಸಭೆ ನಡೆಸಿದ ಸಂದರ್ಭದಲ್ಲಿ ಎಲ್ಲಾ ಗ್ರಾಮಗಳಲ್ಲೂ ರೀ…

Read More

ಬೆಂಗಳೂರು: ರಾಜ್ಯದ ರಬ್ಬರ್ ಬೆಳೆಗಾರರಿಗೆ ಗುಡ್ ನ್ಯೂಸ್ ಎನ್ನುವಂತೆ ತೋಟಗಾರಿಕಾ ಬೆಳೆಗಳ ವ್ಯಾಪ್ತಿಗೆ ಶಿಫಾರಸ್ಸು ಮಾಡೋದಾಗಿ ಸರ್ಕಾರ ತಿಳಿಸಿದೆ. ರಬ್ಬರ್‌ ಬೆಳೆಗೆ ಬೆಂಬಲ ಬೆಲೆ ನಿಗದಿಪಡಿಸುವ ಮತ್ತು ಕೃಷಿ ಹವಾಮಾನ ಆಧಾರಿತ ವಿಮೆ ಸೌಲಭ್ಯ ಒದಗಿಸಲು ಇರುವ ಸಾಧ್ಯತೆ ಬಗ್ಗೆ ರಬ್ಬರ್ ಮಂಡಳಿಯು ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ಬಗ್ಗೆ ರಬ್ಬರ್ ಬೋರ್ಡ್‌ಗೆ ರಾಜ್ಯ ಸರ್ಕಾರದಿಂದ ಶಿಫಾರಸ್ಸು ಮಾಡಲಾಗುವುದು ಎಂಬುದಾಗಿ ತೋಟಗಾರಿಕೆ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ವಿಶೇಷ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. https://twitter.com/KarnatakaVarthe/status/2017548653637058681 ತೆಂಗು ಬೆಳೆಯಲ್ಲಿ ಕಂಡುಬರುವ ಬಿಳಿನೊಣ ಹಾಗೂ ಕೀಟಗಳ ನಿಯಂತ್ರಣಕ್ಕೆ ಕ್ರಮ “ತೆಂಗು ಬೆಳೆಯಲ್ಲಿ ಕಂಡು ಬರುವ ಕಪ್ಪು ತಲೆಹುಳು ಹಾಗೂ ಬಿಳಿನೊಣ ಕೀಟಗಳ ನಿಯಂತ್ರಣಕ್ಕಾಗಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 23 ಪ್ರಯೋಗ ಶಾಲೆಗಳಲ್ಲಿ ಗೋನಿಯೋಜಸ್ ಎಂಬ ಪರೋಪಜೀವಿಗಳು ಹಾಗೂ ಐಸಿರಿಯಾ ಜೈವಿಕ ಕೀಟನಾಶಕವನ್ನು ಉತ್ಪಾದನೆ ಮಾಡಿ ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ತೋಟಗಾರಿಕೆ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ತಿಳಿಸಿದ್ದಾರೆ. https://kannadanewsnow.com/kannada/sunetra-pawar-takes-oath-as-maharashtras-first-woman-dcm/

Read More

ಬೆಂಗಳೂರು: ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಹಾಗೂ ಮುಂಬರುವ 2026–27ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ ಶಿಕ್ಷಣ ಇಲಾಖೆಗೆ ಅಗತ್ಯವಿರುವ ಅನುದಾನ ಬೇಡಿಕೆಗಳನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಇಂದು ಮಹತ್ವದ ಪೂರ್ವಭಾವಿ ಸಭೆ ನಡೆಯಿತು. ಫೆಬ್ರವರಿ ಮೊದಲ ವಾರದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬಜೆಟ್ ಪೂರ್ವಭಾವಿ ಸಭೆಗೆ ಇಲಾಖೆಯ ಪ್ರಸ್ತಾವನೆಗಳ ಕುರಿತು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸುಧೀರ್ಘವಾದ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ರಶ್ಮಿ ಮಹೇಶ್, ಆಯುಕ್ತರಾದ ವಿಕಾಸ್ ಕಿಶೋರ್ ಸುರಳ್ಕರ್, ಯೋಜನಾ ನಿರ್ದೇಶಕಿಯಾದ ವಿದ್ಯಾಕುಮಾರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಭರತ್ ಎಸ್, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ ಜಿ ಟಿ ನಿಟ್ಟಾಲಿ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತರಾದ…

Read More

ಮಹಾರಾಷ್ಟ್ರ: ರಾಜ್ಯಸಭಾ ಸಂಸದೆ ಸುನೇತ್ರಾ ಪವಾರ್ ಶನಿವಾರ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಬುಧವಾರ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಅವರ ಪತಿ ಅಜಿತ್ ಪವಾರ್ ಅವರ ಸ್ಥಾನದಲ್ಲಿ ಅವರು ಅಧಿಕಾರ ವಹಿಸಿಕೊಂಡರು. 62 ವರ್ಷದ ಅವರು ರಾಜ್ಯದ ಮೊದಲ ಮಹಿಳಾ ಉಪಮುಖ್ಯಮಂತ್ರಿ. https://twitter.com/ANI/status/2017564681293206013 ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ನಾಯಕಿ ರಾಜ್ಯದ ವಿಧಾನಸಭೆ ಅಥವಾ ವಿಧಾನ ಪರಿಷತ್ತಿನ ಸದಸ್ಯರಲ್ಲ ಮತ್ತು ಆರು ತಿಂಗಳೊಳಗೆ ಎರಡೂ ಸದನಗಳಿಗೆ ಆಯ್ಕೆಯಾಗಬೇಕಾಗುತ್ತದೆ. ಶನಿವಾರದಂದು, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣದ ಶಾಸಕಾಂಗ ಪಕ್ಷದ ನಾಯಕಿಯಾಗಿ ಸುನೇತ್ರಾ ಪವಾರ್ ಅವರನ್ನು ಆಯ್ಕೆ ಮಾಡಲಾಯಿತು. ಬಾರಾಮತಿ ಪಟ್ಟಣದ ವಾಯುನೆಲೆಯ ಬಳಿ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿ ಅಜಿತ್ ಪವಾರ್ ಸಾವನ್ನಪ್ಪಿದರು. ಘಟನೆಯಲ್ಲಿ ಮೃತಪಟ್ಟ ಇತರರು ಇಬ್ಬರು ಪೈಲಟ್‌ಗಳು, ಒಬ್ಬ ವಿಮಾನ ಸಿಬ್ಬಂದಿ ಮತ್ತು ಅಜಿತ್ ಪವಾರ್ ಅವರ ಭದ್ರತಾ ಅಧಿಕಾರಿ. ಅಪಘಾತದ ಕಾರಣ ಸ್ಪಷ್ಟವಾಗಿಲ್ಲ. ನಾಗರಿಕ ವಿಮಾನಯಾನ ಸಚಿವಾಲಯದ ಒಂದು ಘಟಕವಾದ ವಿಮಾನ ಅಪಘಾತ ತನಿಖಾ ಬ್ಯೂರೋ ಘಟನೆಯ ತನಿಖೆ ನಡೆಸುತ್ತಿದೆ.…

Read More