Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಘಟನೆ ಸಂಬಂಧ ಪೋಸ್ಟ್ ಮಾಡಿದ್ದು, ಈಗಾಗಲೇ ಪ್ರಕರಣದ ಸಂಬಂಧ ಕೆಲವು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತ. ನಾಡಿನ ಜನರಿಗೆ ಭಯಮುಕ್ತ ನೆಮ್ಮದಿಯ ಬದುಕು ನೀಡುವುದು ನಮ್ಮ ಮೊದಲ ಆದ್ಯತೆ. ಜನರ ಶಾಂತಿ – ನೆಮ್ಮದಿಗೆ ಭಂಗ ತರುವ ಯಾವುದೇ ವ್ಯಕ್ತಿ – ಶಕ್ತಿಗಳನ್ನು ನಾವು ಸಹಿಸುವುದಿಲ್ಲ ಎಂದಿದ್ದಾರೆ. ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೂ ಕಿವಿಗೊಡದೆ, ಸಂಯಮದಿಂದ ವರ್ತಿಸಿ. ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ಮಾಡಲಿದೆ ಎಂಬುದಾಗಿ ಹೇಳಿದ್ದಾರೆ. https://twitter.com/siddaramaiah/status/2024749254309564589 https://kannadanewsnow.com/kannada/joint-team-formed-to-inspect-paying-guest-establishments-in-bengaluru-gba-commissioner-d-s-ramesh/
ಬೆಂಗಳೂರು: ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾಮಗಾರಿ ಇಲಾಖೆ ಪ್ರಗತಿ ಪರಿಶೀಲನೆ, ಪಿಜಿಗಳ ತಪಾಸಣೆಗೆ ಜಂಟಿ ತಂಡ ರಚನೆ, ರಾಷ್ಟ್ರೀಯ ಜನಗಣತಿಗೆ ಪೂರ್ವಸಿದ್ಧತೆ ಹಾಗೂ ನ್ಯಾಯಾಲಯ ಪ್ರಕರಣಗಳ ತ್ವರಿತ ಕ್ರಮದ ಕುರಿತು ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್. ರಮೇಶ್ ರವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆಯನ್ನು ನಡೆಸಲಾಯಿತು. ಕಾಮಗಾರಿ ಪ್ರಗತಿ ಪರಿಶೀಲನೆ * ಮಹದೇವಪುರ ಮತ್ತು ಕೆ.ಆರ್.ಪುರ ವಲಯಗಳ ವ್ಯಾಪ್ತಿಯಲ್ಲಿನ ವಿವಿಧ ಅನುದಾನಗಳಡಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿಯನ್ನು ಆಯುಕ್ತರು ಪರಿಶೀಲಿಸಿದರು. ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. * ಗುತ್ತಿಗೆ ಪಡೆದು ಅಭಿವೃದ್ಧಿ ಕಾರ್ಯ ಕೈಗೊಳ್ಳದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ. * ಸಿವಿಲ್ ಹಾಗೂ ಒಳಚರಂಡಿ ಕಾಮಗಾರಿ ಪೂರ್ಣಗೊಳಿಸಿದ ನಂತರವೇ ಡಾಂಬರೀಕರಣ ಕೈಗೊಳ್ಳಲು ಹಾಗೂ ರಸ್ತೆಗಳು ಸಮತಟ್ಟಾಗಿರುವಂತೆ ಡಾಂಬರೀಕರಣ ಮಾಡಲು ಸೂಚನೆ. * ಪೂರ್ವ ನಗರ ಪಾಲಿಕೆ ಗಡಿ ಗುರುತುಪಡಿಸಲು ಎಲ್ಲಾ ಪ್ರವೇಶ ರಸ್ತೆಗಳಲ್ಲಿ ಸೈನ್ಬೋರ್ಡ್ ಅಳವಡಿಸಲು ಹಾಗೂ ಪ್ರವೇಶದ್ವಾರ ಸುಧಾರಣೆಗೆ…
ಬೆಂಗಳೂರು: ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸುವ ಅಭಿಯಾನವನ್ನು ಸರ್ಕಾರ ಆರಂಭಿಸಿದೆ. ಇದರ ಪರಿಣಾಮಕಾರಿ ಅನುಷ್ಟಾನಕ್ಕಾಗಿ ಉನ್ನುತ ಮಟ್ಟದ ಸಮಿತಿಯನ್ನು ರಚನೆ ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2025-26ನೇ ಸಾಲಿನ ಆಯವ್ಯಯ ಕಂಡಿಕೆ- 136ರಲ್ಲಿ ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸುವ ಅಭಿಯಾನದ ಘೋಷಣೆಯನ್ವಯ ತಾಯಂದಿರ ಮರಣ ಅನುಪಾತ (MMR) ಕಡಿತಗೊಳಿಸಲು ರೂ. ಕೋಟಿಗಳ ವೆಚ್ಚದಲ್ಲಿ KTPP ಕಾಯ್ದೆ ಮತ್ತು ನಿಯಮಗಳನ್ನು ಅನುಸರಿಸಿ ಅನುಷ್ಠಾನಗೊಳಿಸಲು ಸಮಗ್ರ ಕ್ರಿಯಾಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿರುತ್ತದೆ ಎಂದಿದೆ. ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ರವರ ಏಕಕಡತದಲ್ಲಿ 2025-26ನೇ ಸಾಲಿನ ಆಯವ್ಯಯ ಕಂಡಿಕೆ-136ರ ಘೋಷಣೆಯನ್ವಯ ಆಡಳಿತಾತ್ಮಕ ಅನುಮೋದನೆ ನೀಡಲಾಗಿರುವ ಆಕುಕ 172 ಎಫ್.ಪಿ.ಎಸ್ 2025, ದಿನಾಂಕ:13.10.2025 ಆದೇಶದಲ್ಲಿ ತಾಯಂದಿರ ಮರಣ ಅನುಪಾತ (ಎಮ್.ಎಮ್.ಆರ್.) ಶೂನ್ಯಕ್ಕೆ ಇಳಿಸುವ ಗುರಿಯನ್ನು ಸಾಧಿಸಲು ಪುಸ್ತಾಪಿಸಲಾಗಿರುವ ಕ್ರಿಯಾಯೋಜನೆಯಲ್ಲಿ ಕ್ರಸಂ.4 ರಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದು, ಕಿಡ್ನಿ ಕಸಿ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ ಮಂಗಳೂರಿನ ಟಾಟಾ ಆಸ್ಪತ್ರೆಯಲ್ಲಿ ಕಿಡ್ನಿ ಕಸಿ ನೋಂದಣಿಗೆ ಅನುಮತಿ ನೀಡಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದ್ದು, ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಇವರಿಂದ ಸ್ವೀಕೃತವಾದ -ಕಡತ ಸಂಖ್ಯೆ: HFWS-17013/15/2025 (Computer No. 1768885) ರಲ್ಲಿ Tara Hospital, a unit of Ramesh Bharathi Healthcare Private Limited, Door No.13-08-1025/3, G.H.S Road, Opposite ICICI Bank, Hampanakatta, Mangalore-575001 es (Kidney Transplant) ನೋಂದಣಿಗೆ ಅನುಮೋದನೆ ನೀಡುವಂತೆ ಕೋರಿರುತ್ತಾರೆ. ಆಸ್ಪತ್ರೆಗೆ ಸಂಬಂಧಿತ ದಾಖಲೆಗಳು ಮತ್ತು ಶುಲ್ಕದೊಂದಿಗೆ ಮೂತ್ರಪಿಂಡ ಕಸಿ (Kidney Transplant)ನೋಂದಣಿಗೆ ದಿನಾಂಕ: 16.01.2025 ರಂದು ಅರ್ಜಿ ಸಲ್ಲಿಸಲಾಗಿದ್ದು, ಆಸ್ಪತ್ರೆಯ ಕೋರಿಕೆಯಂತೆ ಉಪ ನಿರ್ದೇಶಕರು (ಆರೋಗ್ಯ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಇವರು ಎಲ್ಲಾ ಶಾಸನಬದ್ದ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಡಾ.ಸದಾನಂದ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ( AB-Ark) ಯೋಜನೆಯಡಿ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಲಭ್ಯವಾಗುವ ಕ್ಲೈಮ್ ರೆವಿನ್ಯೂ ಉಪಯೋಗಕ್ಕೆ ಮಾನದಂಡ ನಿಗದಿ ಪಡಿಸಿ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಕರ್ನಾಟಕ ಯೋಜನೆಯನ್ನು ರಾಜ್ಯಾದಾದ್ಯಂತ ಹಂತ ಹಂತವಾಗಿ ಜಾರಿಗೆ ತರಲಾಗಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ (2) ರಲ್ಲಿ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯೊಂದಿಗೆ ಈ ಯೋಜನೆಯನ್ನು ವಿಲೀನಗೊಳಿಸಿ ಸಂಯೋಜಿತ ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆಯನ್ನು ಅನುಷ್ಠಾನಗೊಳಿಸಿ ಸಾರ್ವಜನಿಕರಿಗೆ ವಿಸ್ತ್ರತ ಸೇವೆ ನೀಡುವುದು ಮತ್ತು ಸಾಂಸ್ಥಿಕ ಚಿಕಿತ್ಸಾ ಸೌಲಭ್ಯಗಳನ್ನು ಉತ್ತಮಪಡಿಸುವುದು ಈ ಯೋಜನೆಯ ಪ್ರಮುಖ ಆಶಯಗಳಲ್ಲಿ ಒಂದಾಗಿದೆ. ಈ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನವನ್ನು ಮೂಲ ಧನವಾಗಿಟ್ಟುಕೊಂಡು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ವತಿಯಿಂದ ಈ ಯೋಜನೆಯಲ್ಲಿ ಚಿಕಿತ್ಸೆ ಪಡೆಯುವ ಫಲಾನುಭವಿಗಳ ಪ್ರಕರಣವಾರು ಪ್ಯಾಕೇಜ್ ದರದನ್ವಯ ಸರ್ಕಾರಿ ಮತ್ತು…
ಬೆಂಗಳೂರು: ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಮಾಡಲಾಗಿತ್ತು. ಹೀಗೆ ಅಪಪ್ರಚಾರ ಮಾಡಿದವರ ವಿರುದ್ಧ ಕೆಎಂಎಫ್ ದೂರು ನೀಡಿತ್ತು. ಈ ದೂರು ಆಧರಿಸಿ ಇದೀಗ ಎಫ್ಐಆರ್ ದಾಖಲಾಗಿದೆ. ಈ ಕುರಿತಂತೆ ಕೆಎಂಎಫ್ ನ ಪದ್ಮಾವತಿ.ಆರ್ ಎಂಬುವರು ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಡಾ.ಶರಣ್ಯ ಎಂಬುವರ ವಿರುದ್ಧ ಬಿಎನ್ ಎಸ್ ಕಾಯ್ದೆಯ 353(1)(ಬಿ) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ 66(ಡಿ) ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ ನಂದಿನಿ ಉತ್ಪನ್ನಗಳನ್ನು ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರದ ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಪಾಲಿಸಿ ತಯಾರಿಸಲಾಗುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಮಾಡಿದಂತ ಆರೋಪಗಳು ಸುಳ್ಳು ಎಂಬುದಾಗಿ ಕರ್ನಾಟಕ ಹಾಲು ಮಹಾಮಂಡಳಿ(KMF) ಸ್ಪಷ್ಟಪಡಿಸಿತ್ತು. ಈ ಕುರಿತಂತೆ ಸಾರ್ವಜನಿಕ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ನಂದಿನಿ ಬ್ರಾಂಡ್ನ ಕೆಲವು ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ ಆಧಾರರಹಿತ ಆರೋಪಗಳನ್ನು…
ಮಂಡ್ಯ : ಮದ್ದೂರು ತಾಲೂಕಿನ ಮನ್ ಮುಲ್ ಮೇಗಾ ಡೈರಿಯ ಉಪ ವ್ಯವಸ್ಥಾಪಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ಸಂಜೆ ಜರುಗಿದೆ. ಮೇಗಾ ಡೈರಿಯ ಹಾಲು ಶೇಖರಣಾ ವಿಭಾಗದ ಉಪ ವ್ಯವಸ್ಥಾಪಕ ಭರತ್ ರಾಜ್ ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿಯಾಗಿದ್ದಾರೆ. ಗುರುವಾರ ಸಂಜೆ 4 ರಿಂದ 5 ಗಂಟೆಯೊಳಗೆ ಮಂಡ್ಯ ನಗರದ ಸಕ್ಕರೆ ಕಾರ್ಖಾನೆ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶವವನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಮಂಡ್ಯ ರೈಲ್ವೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ವರದಿ : ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/separating-twins-from-mother-is-highest-cruelty-supreme-court/ https://kannadanewsnow.com/kannada/breaking-sir-to-be-implemented-across-the-country-in-april-election-commission-announces/
ನವದೆಹಲಿ: ವೈವಾಹಿಕ ವಿವಾದದಲ್ಲಿ ಬೇರ್ಪಟ್ಟ ಪತಿ ಆರು ತಿಂಗಳ ವಯಸ್ಸಿನಲ್ಲಿ ಅವಳಿ ಮಕ್ಕಳನ್ನು ತಾಯಿಯಿಂದ ಬೇರ್ಪಡಿಸುವುದನ್ನು ಸುಪ್ರೀಂ ಕೋರ್ಟ್ ಗುರುವಾರ “ಅತ್ಯುನ್ನತ ಕ್ರಮದ ಕ್ರೌರ್ಯ” ಎಂದು ಬಣ್ಣಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರಿದ್ದ ಪೀಠವು, ತಾಯಿಯಿಂದ ಈಗಾಗಲೇ ಒಂದೂವರೆ ವರ್ಷ ವಯಸ್ಸಿನ ಮಕ್ಕಳನ್ನು ಬೇರ್ಪಡಿಸಿದ್ದಕ್ಕಾಗಿ ಪತಿಯನ್ನು ತರಾಟೆಗೆ ತೆಗೆದುಕೊಂಡಿತು ಮತ್ತು ದೂರವಾದ ಇಬ್ಬರೂ ಸಂಗಾತಿಗಳು ಮುಂದಿನ ವಿಚಾರಣೆಯ ದಿನದಂದು ತಮ್ಮ ಮಕ್ಕಳೊಂದಿಗೆ ನ್ಯಾಯಾಧೀಶರ ಮುಂದೆ ಹಾಜರಾಗುವಂತೆ ಕೇಳಿತು. ಆರು ತಿಂಗಳ ಮಕ್ಕಳನ್ನು ತಾಯಿಯಿಂದ ಬೇರ್ಪಡಿಸುವ ಮೂಲಕ ಪತಿ ತೀವ್ರ ಕ್ರೌರ್ಯ ಎಸಗಿದ್ದಾನೆ. ಮಕ್ಕಳ ಕಲ್ಯಾಣವು ಅತ್ಯಂತ ಮುಖ್ಯ. ಇದು ನ್ಯಾಯದ ಅಣಕ. ಆರು ತಿಂಗಳವರೆಗಿನ ಚಿಕ್ಕ ಮಕ್ಕಳನ್ನು ತಾಯಿಯಿಂದ ವಂಚಿತಗೊಳಿಸಲಾಗುವುದಿಲ್ಲ. ಇದು ಅತ್ಯುನ್ನತ ಆದೇಶದ ಕ್ರೌರ್ಯ ಎಂದು ಪೀಠವು ಗಮನಿಸಿತು. ಪತ್ನಿಯು ಆರಂಭಿಸಿರುವ ವೈವಾಹಿಕ ಪ್ರಕರಣಗಳನ್ನು ಲಕ್ನೋದಿಂದ ಪಂಜಾಬ್ಗೆ ವರ್ಗಾಯಿಸುವಂತೆ ಕೋರಿ ದೂರವಾಗಿರುವ ಪತಿಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿತ್ತು. ಅವಳಿ ಮಕ್ಕಳ…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ 11ನೇ ಆರೋಪಿಯಾಗಿರುವಂತ ನಟ ದರ್ಶನ್ ಬಲಗೈಬಂಟನಂತಿದ್ದ ನಾಗರಾಜ್ ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಕುರಿತಂತೆ ಇಂದು ಕೋರ್ಟ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲುಪಾಲಾಗಿರುವಂತ ನಾಗರಾಜ್ ಪತ್ನಿಯು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಮಧ್ಯಂತರ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್, ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರತಿ ದಿನ ಬೆಳಗ್ಗೆ 8ಕ್ಕೆ, ರಾತ್ರಿ 7ಕ್ಕೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ತೆರಳಿ ಸಹಿ ಹಾಕುವಂತೆಯೂ ಕೋರ್ಷ್ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ. ಅಂದಹಾಗೇ ನಾಗರಾಜ್ ಅವರು ನಟ ದರ್ಶನ್ ಬಲಗೈ ಬಂಟನಂತಿದ್ದನು. ಕಳೆದ 15 ವರ್ಷಗಳಿಂದ ನಟ ದರ್ಶನ್ ಜೊತೆಗೆ ಗುರುತಿಸಿಕೊಂಡಿದ್ದರು. ಮೈಸೂರಿನ ತೊಣಚಿಕೊಪ್ಪಲು ನಿವಾಸಿಯಾಗಿದ್ದಂತ ನಾಗರಾಜ್, ನಟ ದರ್ಶನ್ ಪರಿಚಯಕ್ಕೂ ಮೊದಲು ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದರು. https://kannadanewsnow.com/kannada/fear-of-arrest-by-ed-in-online-betting-case-kc-veerendra-pappis-brother-relative-granted-anticipatory-bail/ https://kannadanewsnow.com/kannada/breaking-sir-to-be-implemented-across-the-country-in-april-election-commission-announces/
ಬೆಂಗಳೂರು : ‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಕ್ಷೇತ್ರದ ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ವ್ಯಾಪ್ತಿಯಲ್ಲಿ ಗುರುವಾರ ಸಂಚರಿಸಿ ಸ್ಥಳೀಯ ಜನರ ಸಮಸ್ಯೆಗಳನ್ನು ಆಲಿಸಿದ ಸಚಿವರು, ಅಭಿವೃದ್ದಿ ಕಾಮಗಾರಿಗಳ ಮಂದಗತಿಗೆ ಕಾರಣರಾದ ಅಧಿಕಾರಿಗಳಿಗೆ ಬೆವರಿಸಿಳಿಸಿದರು. ಕೆ.ಜಿ.ಹಳ್ಳಿಯ ಪಿಳ್ಳಣ್ಣ ಗಾರ್ಡನ್ನಿಂದ ಶುರುವಾದ ಕ್ಷೇತ್ರ ಪರ್ಯಟನೆ ವಿನೋಬಾ ನಗರ, ಭಾರತ್ ಮಾತಾ ಬಡಾವಣೆ, ವೆಂಕಟೇಶಪುರ, ರಷದ್ ನಗರ ಹಾಗೂ ನಾಗವಾರ ಮುಖ್ಯರಸ್ತೆಯ ಮೆಟ್ರೋ ನಿಲ್ದಾಣದ ಬಳಿ ಕೊನೆಗೊಂಡಿತು. ಪಿಳ್ಳಣ್ಣ ಗಾರ್ಡನ್ನ ಐದು ಬ್ಲಾಕ್ಗಳಲ್ಲಿ ಕಾಲ್ನಡಿಗೆಯಲ್ಲೇ ಸಂಚರಿಸಿದ ಸಚಿವ ಕೆ.ಜೆ.ಜಾರ್ಜ್ ಅವರು, ಕೊಳಗೇರಿ ಅಭಿವೃದ್ಧಿ ಮಂಡಳಿ ಮನೆಗಳ ನವೀಕರಣ ಹಾಗೂ ಶುದ್ದ ಕುಡಿಯುವ ನೀರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಆಲಿಸಿದರು. ವಿನೋಬಾ ನಗರ, ಭಾರತ್ ಮಾತಾ ಬಡಾವಣೆಯಲ್ಲೂ ಸ್ಥಳೀಯರು ನೀರಿನ ಸಮಸ್ಯೆ ಬಗೆಹರಿಸುವಂತೆ ಕೋರಿದರು. ಈ ವೇಳೆ ಸ್ಥಳದಲ್ಲೇ ಹಾಜರಿದ್ದ ಬೆಂಗಳೂರು ನೀರು ಸರಬರಾಜು…













