Author: kannadanewsnow09

ಚಿಕ್ಕಬಳ್ಳಾಪುರ: ಖಜಾನೆ ಖಾಲಿ ಎನ್ನುವ ಬಿಜೆಪಿ ಸುಳ್ಳಿನ‌ ಆರೋಪಕ್ಕೆ ಒಂದು ಲಕ್ಷ ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಮೂಲಕವೇ ಉತ್ತರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಜಿಲ್ಲೆಯ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ, ಹೆಚ್.ಎನ್.ವ್ಯಾಲಿ 3ನೇ ಹಂತದ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಉದ್ಘಾಟನೆಯಾದ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಯಿಂದಾಗಿ ಇಡೀ ರಾಜ್ಯದ ರೇಷ್ಮೆ ಬೆಳೆಗಾರರಿಗೆ ಅನುಕೂಲ‌ ಆಗಲಿದೆ ಎಂದರು. ಶಿಡ್ಲಘಟ್ಟ ಕ್ಷೇತ್ರದಲ್ಲಿ ಇಷ್ಟು ದೊಡ್ಡ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸುತ್ತಿರುವುದು ನಮ್ಮ ಸರ್ಕಾರದ ಅಭಿವೃದ್ಧಿ ಪರ್ವದ ವೇಗವನ್ನು ತೋರಿಸುತ್ತಿದೆ. ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದೇವೆ. ಗ್ಯಾರಂಟಿ ಕಾರ್ಯಕ್ರಮಗಳಿಗೆ ಒಂದು ಲಕ್ಷ ಕೋಟಿಗೂ ಅಧಿಕ ಮೊತ್ತದ ಹಣ ಇದುವರೆಗೂ ತೆಗೆದಿಟ್ಟಿರುವುದು ಮಾತ್ರವಲ್ಲದೆ ಇಷ್ಟೇ ಮೊತ್ತದ ಅಭಿವೃದ್ಧಿ ಕಾರ್ಯಗಳನ್ನೂ ನಾವು ನಡೆಸುತ್ತಿದ್ದೇವೆ. ಇದಕ್ಕೆ ಇಂದು ಇಲ್ಲಿ ಉದ್ಘಾಟನೆಗೊಂಡ…

Read More

ಮಂಡ್ಯ: ಜಲ ಶಕ್ತಿ ಅಭಿಯಾನದ ಅಂಗವಾಗಿ “ಜಲ ಸಂಚಾಯಿ ಜನ ಭಾಗಿದಾರಿ ( ಜೆಎಸ್ ಜೆ ಬಿ) ” ಅಭಿಯಾನದಡಿ ಮಂಡ್ಯ ಜಿಲ್ಲೆಯು ಜಲ ಸಂರಕ್ಷಣೆ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಟಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ರಾಷ್ರ್ಟೀಯ ಪ್ರಶಸ್ತಿ ದೊರೆತಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ನ. 18 ರಂದು ನಡೆದ ‘ರಾಷ್ಟ್ರೀಯ ಜಲ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಸಿ.ಆರ್.ಪಾಟೀಲ ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್ ನಂದಿನಿ ರವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಜಲಮೂಲಗಳ ಸಂರಕ್ಷಣೆ, ಅಂತರ್ಜಲ ವೃದ್ಧಿ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯ ಪ್ರಮಾಣದ ನೀರು ಒದಗಿಸುವ ಹಾಗೂ ನೀರಿನ ಸಮಸ್ಯೆ ನಿವಾರಿಸಲು ಕೈಗೊಂಡ ಜಲಶಕ್ತಿ ಅಭಿಯಾನದ ಚಟುವಟಿಕೆಗಳನ್ನು ಯಶಸ್ವಿಯಾಗಿ ಹಾಗೂ ಪರಿಣಾಮಕಾರಿ ಅನುಷ್ಟಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ಪ್ರಶಸ್ತಿಯ ಜೊತೆಗೆ 25 ಲಕ್ಷ ರೂ ನಗದು ಬಹುಮಾನ ನೀಡಲಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ಇತರೆ ಯೋಜನೆಗಳಡಿ ಜಿಲ್ಲೆಯು 2024ರ ಏಪ್ರಿಲ್…

Read More

ಬೆಂಗಳೂರು: ಒಬ್ಬ ಐಎಎಸ್ ಅಧಿಕಾರಿ ಮನಸ್ಸು ಮಾಡಿದರೇ ಏನೆಲ್ಲ ಮಾಡಬಹುದು ಎಂಬುದಕ್ಕೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರೇ ಸಾಕ್ಷಿಯಾಗಿದ್ದಾರೆ. ಅಷ್ಟಕ್ಕೂ ಅವರು ಮಾಡಿದ್ದೇನು ಅಂತ ಮುಂದೆ ಓದಿ. 2017 ನೆ ಬ್ಯಾಚ್ ನ IAS ಅಧಿಕಾರಿ ಪ್ರಸನ್ನ .ಹೆಚ್ ಅವರು ಪ್ರಸ್ತುತ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ. ಅವರು ಕಳೆದ ಒಂದೆರೆಡು ವರ್ಷಗಳಲ್ಲಿ KEA ಅನ್ನು ವಿದ್ಯಾರ್ಥಿಗಳ ಪರವಾಗಿ ಇರುವಂತೆ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ ಎಂಬುದು ಸಾರ್ವಜನಿಕರ ಮಾತಾಗಿದೆ. UGCET, PGCET ಸೇರಿದಂತೆ ಹಲವು ಪ್ರಮುಖ ಪರೀಕ್ಷೆಗಳನ್ನು ನಡೆಸುವ KEA ಕಳೆದ ವರ್ಷ ಡಿಸೆಂಬರ್ 27 ರಂದು 1000 ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳಿಗೆ ಪರೀಕ್ಷೆಯನ್ನು ಕೂಡ ನಡೆಸಿತ್ತು. ಅದರ ಫಲಿತಾಂಶವನ್ನು 45 ದಿನಗಳಲ್ಲಿ ನೀಡಲಾಗಿದೆ. ಈಗ ಒಂದು ಹೆಜ್ಜೆ ಮುಂದೆ ಹೋಗಿ ಇದೇ ತಿಂಗಳ ನವೆಂಬರ್.2ರಂದು ಕರ್ನಾಟಕ ರಾಜ್ಯ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು (KSET) ನಡೆಸಿದ್ದ KEA ಕೇವಲ 20 ದಿನಗಳಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ. ಒಬ್ಬ IAS ಅಧಿಕಾರಿ…

Read More

ಬೆಂಗಳೂರು: ಶಾಸಕರುಗಳಿಗೆ ಆಪ್ತ ಸಹಾಯಕರನ್ನು ನಿಯೋಜನೆ, ಒಪ್ಪಂದ ಇಲ್ಲವೇ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಬಹುದಾಗಿದೆ. ಹಾಗಾದ್ರೆ ಶಾಸಕರ ಪಿಎ ನೇಮಕ ಮಾಡಿಕೊಳ್ಳೋದಕ್ಕೆ ಇರುವಂತ ನಿಯಮಗಳು ಏನು ಎನ್ನುವ ಬಗ್ಗೆ ಮಾಹಿತಿ ಮುಂದಿದೆ ಓದಿ. ವಿಧಾನಸಭೆಯ ಸದಸ್ಯರುಗಳ ಆಪ್ತ ಸಹಾಯಕರುಗಳ ವೇತನವನ್ನು ಸೆಳೆಯುವ ಮತ್ತು ಬಟವಾಡೆ ಮಾಡುವ ಅಧಿಕಾರವನ್ನು ವಿಧಾನಸಭೆ ಕಾರ್ಯದರ್ಶಿಗಳಿಗೆ ಹಂಚಿಕೆ ಮಾಡಿ ಸದರಿಯವರನ್ನು ನಿಯಂತ್ರಣ ಪ್ರಾಧಿಕಾರಿಯನ್ನಾಗಿ ನೇಮಕ ಮಾಡಲಾಗಿರುತ್ತದೆ. ಶಾಸಕರುಗಳ ಆಪ್ತ ಸಹಾಯಕರುಗಳನ್ನು ನಿಯೋಜನೆ/ಒಪ್ಪಂದ/ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸರ್ಕಾರವು ಅನೇಕ ಮಾರ್ಗಸೂಚಿಗಳನ್ನು ಆಗಿಂದ್ದಾಗ್ಗೆ ಹೊರಡಿಸಿದ್ದು, ಈ ಬಗ್ಗೆ ಮೇಲೆ ಉಲ್ಲೇಖಿಸಿರುವ ಆದೇಶಗಳು ಪ್ರಮುಖವಾಗಿವೆ. ಸದರಿ ಆದೇಶಗಳನ್ನು ಕ್ರೂಢೀಕರಿಸಿ ನಿಯೋಜನೆ/ಒಪ್ಪಂದ/ಗುತ್ತಿಗೆ ಆಧಾರದ ಮೇಲೆ ಮಾನ್ಯ ಶಾಸಕರುಗಳು ಇಬ್ಬರು ಆಪ್ತ ಸಹಾಯಕರುಗಳನ್ನು ಮಾತ್ರ ನೇಮಿಸಿಕೊಳ್ಳುವುದಕ್ಕೆ ಅವಕಾಶವಿದ್ದು, ಆ ಸಂಬಂಧ ಪ್ರಸ್ತಾವನೆಗಳನ್ನು ತ್ವರಿತವಾಗಿ ಪರಿಶೀಲಿಸಿ ಸೂಕ್ತ ಆದೇಶ ಹೊರಡಿಸಲು ಅನುವಾಗುವಂತೆ ಕೆಳಕಂಡ ಮಾರ್ಗಸೂಚಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹೊರಡಿಸಲಾಗಿದೆ. ನಿಯೋಜನೆ/ಒಪ್ಪಂದದ ಸಿಬ್ಬಂದಿಗೆ ಸಂಬಂಧಿಸಿದಂತೆ: 1. ಉಲ್ಲೇಖಿತ…

Read More

ನವದೆಹಲಿ: ಕೇಂದ್ರ ಸರ್ಕಾರವು ಭಾರತದ ಕಾರ್ಮಿಕ ಕಾನೂನುಗಳಲ್ಲಿ ಬದಲಾವಣೆಗಳನ್ನು ಘೋಷಿಸಿದ್ದು, ಸ್ಥಿರ-ಅವಧಿಯ ಉದ್ಯೋಗಿಗಳಿಗೆ ಗ್ರಾಚ್ಯುಟಿ ಪಡೆಯಲು ಕನಿಷ್ಠ ಸೇವಾ ಅಗತ್ಯವನ್ನು ಐದು ವರ್ಷದಿಂದ ಒಂದು ವರ್ಷಕ್ಕೆ ಇಳಿಸಿದೆ. ಹೀಗಾಗಿ ಕೇಂದ್ರ ಸರ್ಕಾರದಿಂದ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ಒಂದೇ ವರ್ಷಕ್ಕೆ ಗ್ರ್ಯಾಚುಟಿ ಸಿಗುವಂತೆ ಆಗಲಿದೆ. ಈ ಕ್ರಮವು ನವೆಂಬರ್ 21, ಶುಕ್ರವಾರ ಅನಾವರಣಗೊಂಡ ವ್ಯಾಪಕವಾದ ಪರಿಷ್ಕರಣೆಯ ಭಾಗವಾಗಿದೆಯ ಇದು ಅಸ್ತಿತ್ವದಲ್ಲಿರುವ 29 ಕಾರ್ಮಿಕ ಕಾನೂನುಗಳನ್ನು ನಾಲ್ಕು ಕಾರ್ಮಿಕ ಸಂಹಿತೆಗಳಾಗಿ ತರ್ಕಬದ್ಧಗೊಳಿಸುತ್ತದೆ. ಗ್ರಾಚ್ಯುಟಿ ಮಾನದಂಡಗಳು ಸಡಿಲ ಗ್ರಾಚ್ಯುಟಿ ಅರ್ಹತೆಯನ್ನು ಸಡಿಲಗೊಳಿಸುವುದು ಅತ್ಯಂತ ಮಹತ್ವದ ಬದಲಾವಣೆಗಳಲ್ಲಿ ಒಂದಾಗಿದೆ. ಇದು ದೊಡ್ಡ ಮತ್ತು ವೈವಿಧ್ಯಮಯ ಕಾರ್ಯಪಡೆಯನ್ನು ತಲುಪುವ ನಿರೀಕ್ಷೆಯಿದೆ. ಗ್ರಾಚ್ಯುಟಿ ಪಾವತಿ ಕಾಯ್ದೆಯಿಂದ ನಿಗದಿಪಡಿಸಲಾದ ಹಿಂದಿನ ನಿಯಮಗಳ ಅಡಿಯಲ್ಲಿ, ಸ್ಥಿರ-ಅವಧಿಯ ಉದ್ಯೋಗಿಗಳು ಐದು ವರ್ಷಗಳ ನಿರಂತರ ಉದ್ಯೋಗದ ನಂತರವೇ ಪ್ರಯೋಜನಕ್ಕೆ ಅರ್ಹರಾಗಿರುತ್ತಾರೆ. ಹೊಸ ಕೋಡ್‌ಗಳು ಈ ಅವಶ್ಯಕತೆಯನ್ನು ಸಡಿಲಗೊಳಿಸುತ್ತವೆ. ಸ್ಥಿರ-ಅವಧಿಯ ಉದ್ಯೋಗಿಗಳು (FTEs) ಒಂದು ವರ್ಷದ ಸೇವೆಯನ್ನು ಪೂರ್ಣಗೊಳಿಸಿದ ನಂತರ ಗ್ರಾಚ್ಯುಟಿಯನ್ನು ಪಡೆಯಲು…

Read More

ಬೆಂಗಳೂರು: ರಾಜ್ಯದಲ್ಲಿನ ಅನಧಿಕೃತ ಮೆಡಿಕಲ್ ಸ್ಫಾಗಳ ಮೇಲೆ ಸರ್ಕಾರ ಹದ್ದಿನ ಕಣ್ಣು ನೆಟ್ಟಿದೆ. ಒಂದು ವೇಳೆ ಅನಧಿಕೃತವಾಗಿ ನಡೆಸುತ್ತಿದ್ದು, ಸಿಕ್ಕಿ ಬಿದ್ದರೇ ಕಾನೂನು ಕ್ರಮದಡಿ ಶಿಕ್ಷೆ ಫಿಕ್ಸ್ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಅವರು, ನಾಡಿನ ಜನರ ಆರೋಗ್ಯ ಕಾಳಜಿಯನ್ನು ಕಡೆಗಣಿಸಿ ಕೇವಲ ವ್ಯಾಪಾರ ದೃಷ್ಟಿಯಿಂದ ಅನಧಿಕೃತವಾಗಿ ತಲೆಎತ್ತಿದ್ದ ಮೆಡಿಕಲ್ ಸ್ಫಾಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹಲವಾರು ಗಂಭೀರ ದೂರುಗಳು ಬಂದಿದ್ದಲ್ಲದೆ, ಮಾಧ್ಯಮಗಳಲ್ಲೂ ವರದಿ ಬಂದಿದ್ದವು ಎಂದಿದ್ದಾರೆ. ಪರಿಣಿತರಲ್ಲದಿದ್ದರೂ ಕೆಮಿಕಲ್ಸ್ ಬಳಸಿ ಸೌಂದರ್ಯವರ್ಧಕ ಚಿಕಿತ್ಸೆ ಮಾಡುವ, ವೃದ್ಧರ ಮೂಳೆ- ಕೀಳು ಸಮಸ್ಯೆಗಳನ್ನೇ ಬಂಡವಾಳ ಮಾಡಿಕೊಂಡು ಶಾಶ್ವತ ಪರಿಹಾರ ಸಿಗಲಿದೆ ಎಂದು ನಂಬಿಸಿ ರೇಡಿಯೇಷನ್ ಥೆರಫಿ ಮಾಡುತ್ತಿದ್ದ ಜಾಲಗಳನ್ನು ಪತ್ತೆಹಚ್ಚಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾಕಷ್ಟು ಕ್ರಮಗಳನ್ನು ಕೈಗೊಂಡಿತ್ತು, ಅದಾಗ್ಯೂ, ಹೆಚ್ಚಿನ ಕಣ್ಗಾವಲಿರಿಸುವುದು ಅಗತ್ಯಗತ್ಯ ಎಂಬುದನ್ನು ಮನಗಂಡು ಈ ಸರ್ಕಾರಿ ಆದೇಶವನ್ನು ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.…

Read More

ಶಿವಮೊಗ್ಗ: ಸಾಗರದ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಹಿನ್ನಲೆಯಲ್ಲಿ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಸಮಿತಿಯಿಂದ ಮಹತ್ವದ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಈ ಬಗ್ಗೆ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಸಮಿತಿಯಿಂದ ಮಾಹಿತಿ ನೀಡಲಾಗಿದ್ದು, ಹೈಕೋರ್ಟ್ ಚುನಾವಣೆಗೆ ತಡೆಯಾಜ್ಞೆ ನೀಡಿರುವ ಕುರಿತಂತೆ ಸಾಗರದ ಜನತೆಗೆ ಮಾಹಿತಿಯನ್ನು ಸುದ್ದಿಗೋಷ್ಠಿಯಲ್ಲಿ ಸಮಿತಿಯ ಸದಸ್ಯರು ನೀಡಲಿದ್ದಾರೆ ಎನ್ನಲಾಗುತ್ತಿದೆ. ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಗಿರಿಧರ್ ಭಟ್ ಸೇರಿದಂತೆ ಇತರೆ ಸಮಿತಿಯ ಸದಸ್ಯರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದು, ಕೋರ್ಟ್ ಆದೇಶ, ಚುನಾವಣೆ ಮುಂದೂಡಿಕೆಯ ಬಗ್ಗೆ, ಮುಂದಿನ ನಡೆಯ ಬಗ್ಗೆಯೂ ಮಾಹಿತಿಯನ್ನು ಹಂಚಿಕೊಳ್ಳುವ ಸಾಧ್ಯತ ಇದೆ. ನ.30ರ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ಸಾಗರದ ಕೊರಚ-ಕೊರಮ ಸಮುದಾಯಕ್ಕೆ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಲ್ಲಿ ಸೂಕ್ತ ಸ್ಥಾನ ಮಾನ ನೀಡಿಲ್ಲ. ಹೀಗಾಗಿ ನವೆಂಬರ್.30ರ ಚುನಾವಣೆಗೆ ತಡೆಯಾಜ್ಞೆ ನೀಡುವಂತೆ…

Read More

ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಪ್ರಸಕ್ತ ವರ್ಷದಿಂದಲೇ ರಾಜ್ಯದಲ್ಲಿರುವ 4,056 ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ತರಗತಿಗಳಾದ ಎಲ್‌.ಕೆ.ಜಿ, ಯು.ಕೆ.ಜಿ ಆರಂಭಿಸಲಾಗುತ್ತಿದೆ ಎಂಬುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ತಿಳಿಸಿದ್ದಾರೆ. ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ 1,105 ಶಾಲೆಗಳು, 126 ಪಿ.ಎಂ.ಶ್ರೀ ಶಾಲೆಗಳು, ಕೆ.ಕೆ.ಆರ್.ಡಿ.ಬಿ. ಯೋಜನೆಯಡಿ 1,126 ಶಾಲೆಗಳು ಮತ್ತು 1,699 ಮ್ಯಾಗ್ನೆಟ್ ಶಾಲೆಗಳು ಸೇರಿ ಒಟ್ಟು 4,056 ಸರಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು ಆರಂಭಿಸಲಾಗುತ್ತಿದ್ದು, ಪೂರ್ವ ಪ್ರಾಥಮಿಕ ತರಗತಿಗಳನ್ನು ತರಗತಿವಾರು ಪ್ರತ್ಯೇಕವಾಗಿ ದ್ವಿಭಾಷಾ ಮಾಧ್ಯಮದಲ್ಲಿ ನಡೆಸಲು ಕ್ರಮವಹಿಸಲಾಗುತ್ತದೆ ಎಂದಿದ್ದಾರೆ. ಜೊತೆಗೆ ವಿದ್ಯಾರ್ಥಿಗಳಿಗೆ ಎಲ್‌.ಕೆ.ಜಿ, ಯು.ಕೆ.ಜಿ ಅಭ್ಯಾಸ ಪುಸ್ತಕಗಳನ್ನು ವಿತರಿಸಲಾಗುವುದು ಹಾಗೂ ಪೂರ್ವ ಪ್ರಾಥಮಿಕ ತರಗತಿಗಳನ್ನು ಬೆಳಗ್ಗೆ 10 ರಿಂದ ಮಧ್ಯಾಹ್ನ 3.30ರವರೆಗೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ. https://kannadanewsnow.com/kannada/dcm-dk-shivakumar-meets-minister-kj-george-secret-talks-on-leadership-change/ https://kannadanewsnow.com/kannada/what-are-the-rules-for-appointing-legislative-pas-here-is-the-information/

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಈ ಹೊತ್ತಿನಲ್ಲೇ ಸಚಿವ ಕೆ.ಜೆ ಜಾರ್ಜ್ ಅವರನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ಅಲ್ಲದೇ ನಾಯಕತ್ವ ಬದಲಾವಣೆ ಸಂಬಂಧ ರಹಸ್ಯ ಮಾತುಕತೆ ನಡೆಸಲು ಭೇಟಿಯಾಗಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನ ರೇಸ್ ಕೋರ್ಸ್ ಬಳಿಯಲ್ಲಿರುವಂತ ಇಂಧನ ಸಚಿವ ಕೆಜೆ ಜಾರ್ಜ್ ನಿವಾಸಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾಗಿ, ಮಾತುಕತೆ ನಡೆಸಿದರು. ಈ ಭೇಟಿಯು ನಾಯಕತ್ವ ಬದಲಾವಣೆ ಸಂಬಂಧದ ರಹಸ್ಯ ಮಾತುಕತೆ ಎನ್ನಲಾಗುತ್ತಿದೆ. ಈಗಾಗಲೇ ಸಿಎಂ ಸಿದ್ಧರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಕೆಜೆ ಜಾರ್ಜ್ ಭೇಟಿಯಾಗಿ ಬಂದಿದ್ದರು. ಈ ಬೆನ್ನಲ್ಲೇ ಸಚಿವ ಕೆಜೆ ಜಾರ್ಜ್ ಅವರ ನಿವಾಸಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾಗಿರೋದು ತೀವ್ರ ಕುತೂಹಲ ಮೂಡಿಸಿದೆ. ಕಾಂಗ್ರೆಸ್ ವರಿಷ್ಠರ ಜೊತೆಗೆ ಇಂಧನ ಸಚಿವ ಕೆ.ಜೆ ಜಾರ್ಜ್ ಉತ್ತಮ ಸಂಬಂಧ ಹೊಂದಿದ್ದಾರೆ. ಹೀಗೆ ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಆತ್ಮೀಯತೆ ಹೊಂದಿರುವ…

Read More

ನವದೆಹಲಿ; ಸಿಂಧ್ ಇಂದು ಭಾರತದ ಭಾಗವಾಗಿಲ್ಲದಿದ್ದರೂ, ಈ ಪ್ರದೇಶವು ಭಾರತದ ನಾಗರಿಕತೆಯ ಪರಂಪರೆಯೊಂದಿಗೆ ಆಳವಾಗಿ ಸಂಪರ್ಕ ಹೊಂದಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಂಗ್, 1947 ರ ಮೊದಲು ಅವಿಭಜಿತ ಭಾರತದ ಭಾಗವಾಗಿದ್ದ ಮತ್ತು ನಂತರ ಪಾಕಿಸ್ತಾನಕ್ಕೆ ಹೋಗಿದ್ದ ಸಿಂಧ್ ಮತ್ತೆ ಭಾರತಕ್ಕೆ ಮರಳಬಹುದು ಎಂದು ಹೇಳಿದರು. ಮೇ ತಿಂಗಳಲ್ಲಿ ನಡೆದ ಆಪರೇಷನ್ ಸಿಂಧೂರ್ ನಂತರ ಉಭಯ ದೇಶಗಳ ನಡುವಿನ ಸಂಬಂಧಗಳು ಉದ್ವಿಗ್ನವಾಗಿರುವ ಸಮಯದಲ್ಲಿ ಅವರ ಹೇಳಿಕೆಗಳು ಬಂದಿವೆ. ನವದೆಹಲಿಯಲ್ಲಿ ಭಾನುವಾರ ನಡೆದ ಸಿಂಧಿ ಸಮಾಜ ಸಮ್ಮೇಳನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, ನಾಗರಿಕತೆಯ ದೃಷ್ಟಿಯಿಂದ, ಸಿಂಧ್ ಯಾವಾಗಲೂ ಭಾರತದ ಭಾಗವಾಗಿರುತ್ತದೆ ಎಂದು ಹೇಳಿದರು. ಭೌಗೋಳಿಕ ರಾಜಕೀಯ ಗಡಿಗಳು ಶಾಶ್ವತವಲ್ಲ ಎಂದು ಹೇಳಿದರು. ಇಂದು, ಸಿಂಧ್ ಭೂಮಿ ಭಾರತದ ಭಾಗವಾಗಿಲ್ಲದಿರಬಹುದು. ಆದರೆ ನಾಗರಿಕತೆಯ ದೃಷ್ಟಿಯಿಂದ, ಸಿಂಧ್ ಯಾವಾಗಲೂ ಭಾರತದ ಭಾಗವಾಗಿರುತ್ತದೆ. ಭೂಮಿಯ ವಿಷಯದಲ್ಲಿ, ಗಡಿಗಳು ಬದಲಾಗಬಹುದು. ಯಾರಿಗೆ ಗೊತ್ತು, ನಾಳೆ ಸಿಂಧ್ ಮತ್ತೆ ಭಾರತಕ್ಕೆ…

Read More