Subscribe to Updates
Get the latest creative news from FooBar about art, design and business.
Author: kannadanewsnow09
ಚಾಮರಾಜನಗರ: ಜಿಲ್ಲೆಯಲ್ಲಿ ಚಿರತೆ ದಾಳಿಯಿಂದ ಯುವಕನೊಬ್ಬ ಸಾವನ್ನಪ್ಪಿದ ಹಿನ್ನಲೆಯಲ್ಲಿ, ನರ ಭಕ್ಷಕ ಚಿರತೆ ಸೆರೆ ಕಾರ್ಯಾಚರಣೆಗೆ ಅರಣ್ಯಾಧಿಕಾರಿಗಳು ಇಳಿದಿದ್ದಾರೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಅರಣ್ಯ ಇಲಾಖೆ ಆದೇಶಿಸಿದೆ. ಮಲೆ ಮಹದೇಶ್ವರ ಬೆಟ್ಟದ ತಾಳಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದಂತ ಭಕ್ತರ ಮೇಲೆ ಚಿರತೆ ದಾಳಿ ನಡೆಸಿತ್ತು. ಈ ದಾಳಿಯಿಂದಾಗಿ ಯುವಕ ಪ್ರವೀಣ್ ಎಂಬಾತ ಸಾವನ್ನಪ್ಪಿದ್ದನು. ಚಿರತೆ ಹೊತ್ತೊಯ್ದು ಯುವಕ ಪ್ರವೀಣ್ ಕುತ್ತಿಗೆ ಭಾಗವನ್ನೇ ತಿಂದಿತ್ತು ಎನ್ನಲಾಗಿದೆ. ಈ ಎಲ್ಲ ಕಾರಣದಿಂದಾಗಿ ಚಿರತೆ ಸೆರೆಗೆ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮುನ್ನೆಚ್ಚರಿಕೆಯ ಕ್ರಮವಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರು ಪಾದಯಾತ್ರೆಯನ್ನು ಹೋಗುವುದನ್ನು ನಿಷೇಧಿಸಲಾಗಿದೆ. https://kannadanewsnow.com/kannada/a-calf-dies-within-a-minute-of-being-born-in-the-state-hundreds-of-doubts-behind-the-death/ https://kannadanewsnow.com/kannada/a-sinful-doctor-who-gave-his-grandfather-and-grandmother-a-hypodermic-injection-for-money/
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಹುಟ್ಟಿದ ಒಂದೇ ನಿಮಿಷಕ್ಕೆ ಹಸುಗೂಸು ಸಾವನ್ನಪ್ಪಿದೆ. ಈ ಸಾವಿನ ಹಿಂದೆ ಹಲವು ಅನುಮಾನಗಳು ಕಾರಣವಾಗಿವೆ. ಕಣ್ಣು ಬಿಡುವ ಮೊದಲೇ ಗಂಡು ಮಗುವಿನ ಉಸಿರನ್ನೇ ನಿಲ್ಲಿಸಿರುವಂತ ಹೀನ ಕೃತ್ಯವೊಂದು ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆಯಲ್ಲಿ ಈ ಘಟನೆ ನಡೆದಿದೆ. ಮದುವೆಗೆ ಮುಂಚೆ ಸ್ಟಾಫ್ ನರ್ಸ್ ಒಬ್ಬರು ಗರ್ಭಿಣಿಯಾಗಿದ್ದಳು ಎನ್ನಲಾಗಿದೆ. ನರ್ಸ್ ಆಗಿದ್ದ ಕಾರಣಕ್ಕಾಗಿ ತಾನೇ ಡೆಲಿವರಿಯನ್ನು ಯುವತಿ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ. ಇದಾದ ಬಳಿಕ ಹುಟ್ಟಿದ ಒಂದೇ ನಿಮಿಷಕ್ಕೆ ಹಸುಗೂಸನ್ನೇ ಕೊಂದಿರೋದಾಗಿ ಹೇಳಲಾಗುತ್ತಿದೆ. ಬಾವಿಕೆರೆಯಲ್ಲಿ 15 ದಿನಗಳ ಹಿಂದೆ ನಡೆದಿದ್ದಂತ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಹಿಳೆಯ ಸಹಾಯದಿಂದ ಸ್ಟಾಫ್ ನರ್ಸ್ ತಾನೇ ಹೆರಿಗೆ ಮಾಡಿಸಿಕೊಂಡು ಈ ಕೃತ್ಯ ಎಸಗಿರೋದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ. https://kannadanewsnow.com/kannada/mp-b-y-raghavendra-was-traveling-in-a-car-accident/ https://kannadanewsnow.com/kannada/a-sinful-doctor-who-gave-his-grandfather-and-grandmother-a-hypodermic-injection-for-money/
ಶಿವಮೊಗ್ಗ : ಜಿಲ್ಲೆಯ ಸಂಸದರಾದಂತ ಬಿವೈ ರಾಘವೇಂದ್ರ ಪ್ರಯಾಣಿಸುತ್ತಿದ್ದಂತ ಕಾರು ಅಪಘಾತಗೊಂಡಿದೆ. ಈ ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಸಂಸದ ಬಿವೈ ರಾಘವೇಂದ್ರ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ. ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಪ್ರಯಾಣಿಸುತ್ತಿದ್ದಂತ ಕಾರು ಕುಂಚೇನಹಳ್ಳಿ ಗ್ರಾಮದ ಸಮೀಪದಲ್ಲಿ ಹಿಂದಿನಿಂದ ಬೊಲೆರೋ ಕಾರೊಂದು ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ. ಈ ಪರಿಣಾಮ ಕಾರು ಹಾನಿಯಾಗಿದ್ದು, ಅದರಲ್ಲಿದ್ದಂತ ಸಂಸದ ಬಿವೈ ರಾಘವೇಂದ್ರ ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿಗೆ ಹಾನಿಯಾಗಿದ್ದರಿಂದ ಸಂಸದ ಬಿವೈ ರಾಘವೇಂದ್ರ, ಇತರೆ ಸಿಬ್ಬಂದಿಗಳು ಮತ್ತೊಂದು ಕಾರಿನಲ್ಲಿ ತಮ್ಮ ಪ್ರಯಾಣ ಮುಂದುವರೆಸಿದರು ಎನ್ನಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/nirman-2-software-of-the-state-urban-development-authority-has-been-discontinued/ https://kannadanewsnow.com/kannada/a-sinful-doctor-who-gave-his-grandfather-and-grandmother-a-hypodermic-injection-for-money/
ಬೆಂಗಳೂರು : ರಾಜ್ಯದಲ್ಲಿನ Land and Building Plan Approval System (LBPAS) – ನಿರ್ಮಾಣ್-2 ತಂತ್ರಾಂಶವನ್ನು ಸಾರ್ವಜನಿಕರ ಉಪಯೋಗಕ್ಕೆ ಸ್ಥಗಿತಗೊಳಿಸಿ ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ಈ ಕುರಿತಂತೆ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಆದೇಶ ಹೊರಡಿಸಿದ್ದು, Land and Building Plan Approval System(LBPAS) -ನಿರ್ಮಾಣ್-2 ತಂತ್ರಾಂಶದಲ್ಲಿ ವಿವಿಧ ನಾಗರಿಕ ಸೇವೆಗಳನ್ನು ಆನ್ ಲೈನ್ ಮೂಲಕ ನಾಗರಿಕರಿಗೆ ಒದಗಿಸಲು ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಬಳಸಲಾಗುತ್ತಿದೆ. ಸದರಿ ತಂತ್ರಾಂಶದಲ್ಲಿ ಇತ್ತೀಚೆಗೆ ಸೈಬರ್ ಭದ್ರತೆಗೆ ಸಂಬಂಧಿಸಿದಂತೆ ತೊಂದರೆ ಉಂಟಾಗಿರುವ ಕಾರಣ, ತಂತ್ರಾಂಶವನ್ನು ಸಾರ್ವಜನಿಕ ಉಪಯೋಗಕ್ಕೆ Karnataka State Data Centre(KSDC) ರವರಿಂದ ನಿರ್ಬಂಧಿಸಲಾಗಿರುತ್ತದೆ ಹಾಗೂ ಸದರಿ ತಂತ್ರಾಂಶವನ್ನು ಮರುಸ್ಥಾಪಿಸುವ ಕುರಿತು KSDC ರವರು ಸೂಚಿಸಿರುವಂತೆ Internal ಮತ್ತು External ಆಡಿಟ್ ಪ್ರಕ್ರಿಯೆಗಳು ಚಾಲ್ತಿಯಲ್ಲಿರುತ್ತವೆ. ಸದರಿ ಕಾರ್ಯಗಳು ಪೂರ್ಣಗೊಂಡು ತಂತ್ರಾಂಶವನ್ನು ಸಾರ್ವಜನಿಕ ಉಪಯೋಗಕ್ಕೆ ಮರುಸ್ಥಾಪಿಸಲು 02 ರಿಂದ 03 ವಾರಗಳ ಕಾಲಾವಕಾಶ ಅವಶ್ಯವಿರುವುದಾಗಿ ತಿಳಿದುಬಂದಿರುತ್ತದೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ನಿರ್ಮಾಣಿ-2 ತಂತ್ರಾಂಶದಲ್ಲಿ ಆಡಿಟ್…
ಬೆಂಗಳೂರು: ರಾಜ್ಯದ ಯಾವುದೇ ಕಛೇರಿಯಲ್ಲಿ ಸಾರಿಗೆ ವಾಹನಗಳ ಅರ್ಹತಾ ಪತ್ರ ನವೀಕರಿಸುವ ಹಾಗೂ ಸಾರಿಗೇತರ ವಾಹನಗಳ ನೋಂದಣಿ ನವೀಕರಿಸುವ ಕುರಿತು ಪುಮಾಣಿತ ಕಾರ್ಯಾಚರಣೆಯ ಕಾರ್ಯವಿಧಾನಗಳ (ಎಸ್.ಓ.ಪಿ)ಯನ್ನು ಜಾರಿಗೊಳಿಸಿದೆ. ಇನ್ಮುಂದೆ ವಾಹನಗಳ ಅರ್ಹತಾ ಪತ್ರ ನವೀಕರಣ, ಸಾರಿಗೇತರ ವಾಹನಗಳ ನೋಂದಣಿ ನವೀಕರಣಕ್ಕೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯಗೊಳಿಸಲಾಗಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ ಆಯುಕ್ತರಿಂದ ಸುತ್ತೋಲೆ ಹೊರಡಿಸಲಾಗಿದ್ದು, ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ನಾಗರೀಕರಿಗೆ ಸೇವೆಯ ಬಳಕೆಯನ್ನು ಸುಲಭಗೊಳಿಸುವ ಕ್ರಮಗಳ ಶಿಫಾರಸ್ಸು ಹಾಗೂ ಮೋಟಾರು ವಾಹನಗಳ ಕಾಯ್ದೆ 1988ರ ಕಲಂ 56 ರಡಿಯಲ್ಲಿ ಹಾಗೂ ಕೇಂದ್ರ ಮೋಟಾರು ವಾಹನ ನಿಯಮಗಳು 1989 ರ ನಿಯಮ 52 ಹಾಗೂ ನಿಯಮ 62 ರನ್ವಯ ಸಾರಿಗೆ ವಾಹನಗಳ ಅರ್ಹತಾ ಪತ್ರ ನವೀಕರಣಕ್ಕಾಗಿ ವಾಹನ ಮಾಲೀಕರು ಮೂಲ ನೋಂದಣಿ ಪ್ರಾಧಿಕಾರ ಸೇರಿದಂತೆ ಇತರೆ ನೋಂದಣಿ ಪ್ರಾಧಿಕಾರಗಳಲ್ಲಿ ಅರ್ಜಿ ಸಲ್ಲಿಸಿದ ಪ್ರಕರಣಗಳಲ್ಲಿ ರಾಜ್ಯದ ಯಾವುದೇ ನೋಂದಣಿ ಪ್ರಾಧಿಕಾರಿಗಳಲ್ಲಿ ಅರ್ಹತಾ ಪತ್ರ ನವೀಕರಣ ಮಾಡಲು ಕ್ರಮ…
ಶಿವಮೊಗ್ಗ : ಜಿಲ್ಲೆಯ ಸ್ಥಳೀಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ “ನಿಷ್ಕಾಮ ಸೇವೆ ದ್ಯೇಯದ” ಅಡಿಯಲ್ಲಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಗೃಹರಕ್ಷಕರಾಗಲು ಬೇಕಾದಆರ್ಹತೆ:-ಭಾರತೀಯ ಪ್ರಜೆಯಾಗಿರ ಬೇಕು. 19 ವರ್ಷದ ಮೇಲ್ಪಟ್ಟು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು, 10ನೇ ತರಗತಿ ಉತ್ತೀರ್ಣರಾಗಿರಬೇಕು. ವೈದ್ಯಕೀಯವಾಗಿ ಸಶಕ್ತರಾಗಿರಬೇಕು. ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು / ಆರೋಪ ಅಥವಾ ಅಪರಾಧಿ ಎಂದು ದಾಖಲಾಗಿರದಿದ್ದಲ್ಲಿ ಅಂತಹವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಸಕ್ತರು ನಿಗದಿತ ಅರ್ಜಿಯನ್ನು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಿವಮೊಗ್ಗ. 08182 – 295630 & 255630 ಅಥವ ಜಿಲ್ಲೆಯ ಎಲ್ಲಾ ಗೃಹರಕ್ಷಕ ದಳ ಘಟಕ/ ಉಪ ಘಟಕಗಳ ಕಛೇರಿಗಳಲ್ಲಿ ಪಡೆದು, ಭರ್ತಿಮಾಡಿದ ಅರ್ಜಿಗಳನ್ನು ಫೆ. 03 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಸಮಾದೇಷ್ಟರು ಡಾ. ಚೇತನ ಹೆಚ್.ಪಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಗೃಹರಕ್ಷಕ ದಳ ಘಟಕ ಉಪ ಘಟಕ ಮತ್ತು ಘಟಕಾಧಿಕಾರಿಗಳು…
ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ನಗರದಲ್ಲಿ ವೃದ್ಧ ದಂಪತಿಯನ್ನು ಕೊಲೆ ಮಾಡಲಾಗಿತ್ತು. ಈ ರೀತಿಯಾಗಿ ಕೊಲೆ ಮಾಡಿದ್ದಂತ ಆರೋಪಿಯನ್ನು ಬಂಧಿಸಿರುವುದಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ತಿಳಿಸಿದ್ದಾರೆ. ಹಣಕ್ಕಾಗಿ ವೃದ್ಧ ದಂಪತಿಗಳಿಗೆ ಹೈಡೋಸೇಜ್ ಇಂಜೆಕ್ಷನ್ ನೀಡಿ ದೊಡ್ಡಪ್ಪ, ದೊಡ್ಡಮ್ಮನನ್ನು ಕೊಂದಿರುವುದಾಗಿ ವೃದ್ಧ ದಂಪತಿಗಳ ಕೊಲೆಯ ರಹಸ್ಯವನ್ನು ರಿವೀಲ್ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಭದ್ರಾವತಿ ನಗರದಲ್ಲಿ ವೃದ್ಧ ದಂಪತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಡಾ.ಮಲ್ಲೇಶ್ ನನ್ನು ಬಂಧಿಸಲಾಗಿದೆ. ಚಿಕ್ಕಪ್ಪನ ಮಗ ಡಾ.ಮಲ್ಲೇಶ್ ನಿಂದ ದಂಪತಿಗಳನ್ನು ಕೊಲೆ ಮಾಡಲಾಗಿದೆ ಎಂದಿದ್ದಾರೆ. ದೊಡ್ಡಪ್ಪ, ದೊಡ್ಡಮ್ಮನಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಕೊಲೆ ಮಾಡಲಾಗಿದೆ. ದಂಪತಿಗೆ ಇಂಜೆಕ್ಷನ್ ನೀಡಿ ಕೃತ್ಯ ಎಸಗಿರೋದು ಪತ್ತೆಯಾಗಿದೆ. ಹೈಡೋಸೇಜ್ ಇರುವಂತ ಔಷಧ ನೀಡಿ ಕೊಲೆ ಮಾಡಲಾಗಿದೆ. ತಮ್ಮನ ಮಗ ಎಂದು ನಂಬಿ ಇಂಜೆಕ್ಷನ್ ಅನ್ನು ದೊಡ್ಡಪ್ಪ, ದೊಡ್ಡಮ್ಮ ಪಡೆದಿದ್ದಾರೆ ಎಂದು ಹೇಳಿದ್ದಾರೆ. ಆರೋಪಿ ವೈದ್ಯ ಡಾ.ಮಲ್ಲೇಶ್ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು. ಈ ಹಿನ್ನಲೆಯಲ್ಲಿ ದೊಡ್ಡಪ್ಪನ ಬಳಿ…
ಚಿಕ್ಕಮಗಳೂರು: ಜಿಲ್ಲೆಯ ಚಂದ್ರದ್ರೋಣ ಪರ್ವತದ ಅತ್ತಿಗುಂಡಿ ಸಮೀಪದಲ್ಲಿ ಹುಲಿ ಸಂಚಾರ ಮಾಡಿರೋದಾಗಿ ತಿಳಿದು ಬಂದಿದೆ. ಪ್ರವಾಸಿ ತಾಣದಲ್ಲಿ ಹುಲಿ ಸಂಚಾರದಿಂದ ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಚಿಕ್ಕಮಗಳೂರು ತಾಲ್ಲೂಕಿನ ಚಂದ್ರದ್ರೋಣ ಪರ್ವತದ ಸಾಲಿನ ಅತ್ತಿಗುಂಡಿ ಸಮೀಪದಲ್ಲಿ ಹುಲಿ ಸಂಚಾರ ಮಾಡಿರೋದಾಗಿ ಹೇಳಲಾಗುತ್ತಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಸಮೀಪದಲ್ಲಿರುವಂತ ಅತ್ತಿಗುಂಡಿ ಇದಾಗಿದೆ. ಪ್ರವಾಸಿ ತಾಣದಲ್ಲಿ ಹುಲಿ ಸಂಚಾರದಿಂದ ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಮುಳ್ಳಯ್ಯನಗಿರಿ, ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ, ಮಾಣಿಕ್ಯಧಾರಾ ಪ್ರವಾಸಿ ತಾಣಗಳಿರುವ ಚಂದ್ರದ್ರೋಣ ಪರ್ವತದ ಸಾಲು ಇದಾಗಿದೆ. ಸ್ಥಳೀಯರ ಮೊಬೈಲ್ ನಲ್ಲಿ ಹುಲಿ ಸಂಚಾರದ ದೃಶ್ಯಗಳು ಸೆರೆಯಾಗಿದ್ದಾವೆ. ಹುಲಿಯನ್ನು ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳನ್ನು ಸಾರ್ವಜನಿಕರು ಒತ್ತಾಯಿಸಿದ್ದಾರೆ. https://kannadanewsnow.com/kannada/biofuel-policy-for-alternative-fuel-in-rural-parts-of-the-state-to-be-implemented-soon-minister-priyank-kharge/
ಬೆಂಗಳೂರು: ಶೀಘ್ರದಲ್ಲೇ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಪರ್ಯಾಯ ಇಂಧನಕ್ಕಾಗಿ ಜೈವಿಕ ಇಂದನ ನೀತಿ ಜಾರಿಗೆ ತರಲು ಕ್ರಮ ವಹಿಸಲಾಗುತ್ತದೆ ಎಂಬುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಜೈವಿಕ ಇಂಧನಗಳು, ತ್ಯಾಜ್ಯದಿಂದ ಶಕ್ತಿ ಉತ್ಪಾದನೆ, ಹಸಿರು ರಾಸಾಯನಿಕಗಳ ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ನವೋದ್ಯಮ ನೇತೃತ್ವದ ಪರಿಹಾರಗಳನ್ನು ಬೆಂಬಲಿಸಲು ಜೈವಿಕ ಇಂಧನ ಇನ್ನೋವೇಶನ್ ಲ್ಯಾಬ್ಗಳನ್ನು ಸ್ಥಾಪಿಸುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಸದಸ್ಯರು ಮತ್ತು ಇತರ ಪ್ರಮುಖ ಪಾಲುದಾರರೊಂದಿಗೆ ಸಭೆ ನಡೆಸಿದರು. ಕರ್ನಾಟಕದ ಮುಂಬರುವ ಜೈವಿಕ ಇಂಧನ ನೀತಿಯನ್ನು ಪರಿಶೀಲಿಸಿದ ಸಚಿವರು ಸರ್ಕಾರ ಜೈವಿಕ ಇಂಧನ ನೀತಿಯನ್ನು ತರಲು ಬದ್ಧವಾಗಿದೆ ಎಂದು ಪ್ರಕಟಿಸಿದರು. ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಪರ್ಯಾಯ ಇಂಧನ ಬಳಸಿಕೊಳ್ಳಲು ಅನುಕೂಲವಾಗಲಿದೆ ಎಂದೂ ಸಚಿವರು ಹೇಳಿದರು. “ರಾಜ್ಯಾದ್ಯಂತ ಪ್ರಾದೇಶಿಕ ಜೈವಿಕ ಇಂಧನ ವಲಯಗಳನ್ನು ಅಭಿವೃದ್ಧಿಪಡಿಸುವ ಸಂಬಂಧ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಕೆಳದಿ ವ್ಯಾಪ್ತಿಯಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿ ಜನರಲ್ಲಿ ಭೀತಿ ಉಂಟುಮಾಡಿದೆ. ಮುಂಜಾಗ್ರತೆಯ ಕ್ರಮವಾಗಿ ಅರಣ್ಯ ಇಲಾಖೆಯಿಂದ ಸೆರೆಗೆ ಬೋನು ಇರಿಸಲಾಗಿದೆ. ಕಳೆದ ಒಂದು ವಾರಗಳಿಂದ ಶಿವಮೊಗ್ಗ ಜಿಲ್ಲೆಯ ಸಾಗರದ ಕೆಳದಿ ವ್ಯಾಪ್ತಿಯ ಹಳ್ಳಿಗಳಲ್ಲಿ ಚಿರತೆ ಓಡಾಡಿರುವ ಹೆಜ್ಜೆ ಗುರುತುಗಳು ಪತ್ತೆಯಾಗಿವೆ. ರಾತ್ರಿ ಬೈಕ್ ನಲ್ಲಿ ಓಡಾಡುವಾಗ ವ್ಯಕ್ತಿಯೊಬ್ಬರು ಪ್ರತ್ಯಕ್ಷವಾಗಿ ಚಿರತೆ ನೋಡಿರುವುದಾಗಿ ಸುದ್ದಿ ಹರಿದಾಡುತ್ತಿದೆ. ಕೆಳದಿ ಅರಣ್ಯ ವ್ಯಾಪ್ತಿಯ ಮೆಳವರಿಗೆ, ಬಳಿಕಲ್ಲು, ಕಾಗೋಡು, ಕೆಳದಿ, ಮಾಸೂರು, ಯಲಕುದ್ಲಿ ಅನಾನಸ್ ಪ್ಲಾಂಟ್, ಹಾರಗೊಪ್ಪ ವ್ಯಾಪ್ತಿಯಲ್ಲಿ ಚಿರತೆ ಓಡಾಟದ ಗುರುತುಗಳು ಪತ್ತೆಯಾಗಿವೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೇಳವರಿಯಲ್ಲಿ ಅರಣ್ಯ ಇಲಾಖೆಯಿಂದ ಚಿರತೆ ಸೆರೆಗೆ ಬೋನ್ ಇರಿಸಲಾಗಿದೆ. ಶೀಘ್ರವೇ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ ಕೆಳದಿ ವ್ಯಾಪ್ತಿಯಲ್ಲಿ ಚಿರತೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ರಾತ್ರಿ ವೇಳೆಯಲ್ಲಿ ಜನರು ಸಂಚಾರಕ್ಕೆ ಭಯ ಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆಯಿಂದ ಹೊರ ಬರೋದಕ್ಕೂ ಹೆದರುವಂತೆ ಆಗಿದೆ. ಹೀಗಾಗಿ ಶೀಘ್ರವೇ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.…














