Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕೆ.ಸಿ. ವೇಣುಗೋಪಾಲ್ ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ನಮಗೆ ಅನೇಕ ವಿಚಾರಗಳ ಬಗ್ಗೆ ಸಲಹೆ ನೀಡಿದ್ದಾರೆ. ಆದರೆ ಅವರು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಮಾತನಾಡಿದರು. ವೇಣುಗೋಪಾಲ್ ಅವರು ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಟೀಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ, “ಅವರು ನಮ್ಮ ನಾಯಕರು, ನಮಗೆ ಸಲಹೆ ನೀಡುವ ಎಲ್ಲಾ ಅಧಿಕಾರ ಅವರಿಗಿದೆ. ನಮ್ಮದು ರಾಷ್ಟ್ರೀಯ ಪಕ್ಷ. ನಮ್ಮಲ್ಲಿ ರಾಷ್ಟ್ರೀಯ ನಾಯಕರು ಸಲಹೆ ನೀಡುತ್ತಾರೆ. ಈ ಹಿಂದೆಯೂ ಅನೇಕ ಸಲಹೆ ನೀಡಿದ್ದಾರೆ, ಈಗಲೂ ನೀಡಿದ್ದಾರೆ, ಮುಂದೆಯೂ ನೀಡುತ್ತಾರೆ” ಎಂದು ತಿಳಿಸಿದರು. ಇನ್ನು ಸಂತ್ರಸ್ತರ ಪುನರ್ವಸತಿ ಬಗ್ಗೆ ಮಾತನಾಡಿ, “ಅನೇಕರು ತಮಗೆ ಬೇರೆ ಕಡೆ ಮನೆಗಳಿದ್ದರೂ ಇಲ್ಲಿ ಗುಡಿಸಲು ಹಾಕಿಕೊಂಡಿದ್ದರು. ಉದ್ಯೋಗ ಅರಸಿ ಬಂದು ಇಲ್ಲಿ ವಾಸವಾಗಿದ್ದಾರೆ. ಯಾರಿಗೆ ನಿಜವಾಗಿಯೂ ವಾಸಕ್ಕೆ ಮನೆ ಇಲ್ಲವೊ ಅವರಿಗೆ ಮುಖ್ಯಮಂತ್ರಿಗಳ…
ಬಳ್ಳಾರಿ : ಬಾಲ್ಯ ವಿವಾಹವು ಹದಿಹರೆಯದ ಗರ್ಭಧಾರಣೆ ಮತ್ತು ಹೆರಿಗೆ ಸಮಯದಲ್ಲಿ ಅಪಾಯ ಹೆಚ್ಚಿಸುತ್ತದೆ. ಇದು ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಹಾನಿಕಾರಕವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು. ಸಂಡೂರು ತಾಲ್ಲೂಕಿನ ಬಂಡ್ರಿ ಮತ್ತು ಚೋರನೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಗ್ರಾಮಗಳಿಗೆ ಭೇಟಿ ನೀಡಿ ಗರ್ಭೀಣಿ ತಾಯಂದಿರಿಗೆ 18 ವರ್ಷದೊಳಗೆ ಗರ್ಭ ಧರಿಸಿದರೆ ಆರೋಗ್ಯದ ಮೇಲೆ ಆಗುವ ಪರಿಣಾಮಗಳ ಕುರಿತು ಮಾಹಿತಿ ನೀಡಿದ ಅವರು, ಬಾಲ್ಯವಿವಾಹದಿಂದ ಹೆಚ್ಐವಿ/ಏಡ್ಸ್ ನಂತಹ ಲೈಂಗಿಕವಾಗಿ ಹರಡುವ ರೋಗಗಳ ಅಪಾಯ ಸಹ ಹೆಚ್ಚಿಸುತ್ತದೆ ಎಂದು ತಿಳಿಸಿದರು. ಶಿಕ್ಷಣದ ಮೇಲೆ ಪರಿಣಾಮ ಬಾಲ್ಯ ವಿವಾಹದಿಂದಾಗಿ ಶಾಲೆ ಬಿಡುವವರ ಸಂಖ್ಯೆ ಹೆಚ್ಚಾಗುತ್ತದೆ, ಇದರಿಂದ ಹುಡುಗಿಯರು ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ. ಇದು ಅವರ ಭವಿಷ್ಯದ ಉದ್ಯೋಗ ಮತ್ತು ಆರ್ಥಿಕ ಅವಕಾಶಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ತಿಳಿಸಿದರು. ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬಾಲ್ಯ ವಿವಾಹವು ಖಿನ್ನತೆ, ಆತಂಕ ಮತ್ತು ಆಘಾತದ…
ಬೆಂಗಳೂರು: ಕೆ.ಸಿ. ವೇಣುಗೋಪಾಲ್ ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ನಮಗೆ ಅನೇಕ ವಿಚಾರಗಳ ಬಗ್ಗೆ ಸಲಹೆ ನೀಡಿದ್ದಾರೆ, ಆದರೆ ಅವರು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಮಾತನಾಡಿದರು. ವೇಣುಗೋಪಾಲ್ ಅವರು ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಟೀಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ, ಅವರು ನಮ್ಮ ನಾಯಕರು, ನಮಗೆ ಸಲಹೆ ನೀಡುವ ಎಲ್ಲಾ ಅಧಿಕಾರ ಅವರಿಗಿದೆ. ನಮ್ಮದು ರಾಷ್ಟ್ರೀಯ ಪಕ್ಷ. ನಮ್ಮಲ್ಲಿ ರಾಷ್ಟ್ರೀಯ ನಾಯಕರು ಸಲಹೆ ನೀಡುತ್ತಾರೆ. ಈ ಹಿಂದೆಯೂ ಅನೇಕ ಸಲಹೆ ನೀಡಿದ್ದಾರೆ, ಈಗಲೂ ನೀಡಿದ್ದಾರೆ, ಮುಂದೆಯೂ ನೀಡುತ್ತಾರೆ ಎಂದು ತಿಳಿಸಿದರು. ಇನ್ನು ಸಂತ್ರಸ್ತರ ಪುನರ್ವಸತಿ ಬಗ್ಗೆ ಮಾತನಾಡಿ, ಅನೇಕರು ತಮಗೆ ಬೇರೆ ಕಡೆ ಮನೆಗಳಿದ್ದರೂ ಇಲ್ಲಿ ಗುಡಿಸಲು ಹಾಕಿಕೊಂಡಿದ್ದರು. ಉದ್ಯೋಗ ಅರಸಿ ಬಂದು ಇಲ್ಲಿ ವಾಸವಾಗಿದ್ದಾರೆ. ಯಾರಿಗೆ ನಿಜವಾಗಿಯೂ ವಾಸಕ್ಕೆ ಮನೆ ಇಲ್ಲವೊ ಅವರಿಗೆ ಮುಖ್ಯಮಂತ್ರಿಗಳ…
ಶಿವಮೊಗ್ಗ: ನಗರದಲ್ಲಿ ಕೊಲೆ ಪ್ರಕರಣಗಳು ಮುಂದುವರೆದಿವೆ. ಕೌಟುಂಬಿಕ ಕಲಹದಿಂದಾಗಿ ಯುವಕನೊಬ್ಬನನ್ನು ಸಂಬಂಧಿಕರೇ ಹತ್ಯೆ ಮಾಡಿರುವಂತ ಘಟನೆ ವಿನೋಬನಗರದಲ್ಲಿ ನಡೆದಿದೆ. ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ತರಕಾರಿ ಮಾರುಕಟ್ಟೆ ಬಳಿಯಲ್ಲಿ ಇಂದು ಸಂಜೆ ಕ್ಷುಲ್ಲಕ ಕಾರಣಕ್ಕಾಗಿ ಯುವನೊಬ್ಬನನ್ನು ಸಂಬಂಧಿಕರೇ ಹತ್ಯೆ ಮಾಡಿರೋ ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ಅರುಣ್(26) ಎಂಬುದಾಗಿ ಗುರುತಿಸಲಾಗಿದೆ. ವೈವಾಹಿಕ ವಿಚಾರವಾಗಿ ಈ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ. ಈ ಗಲಾಟೆ ತಾರಕಕ್ಕೆ ಏರಿದಂತ ಸಂದರ್ಭದಲ್ಲಿ ಸಂಬಂಧಿಕರೇ ಹತ್ಯೆ ಮಾಡಿರೋದಾಗಿ ಹೇಳಲಾಗುತ್ತಿದೆ. ವಿಷಯ ತಿಳಿದು ಕೂಡಲೇ ಅಲರ್ಟ್ ಆದಂತ ಶಿವಮೊಗ್ಗ ಪೊಲೀಸರು, ಇಬ್ಬರನ್ನು ಪ್ರಕರಣ ಸಂಬಂಧ ಬಂಧಿಸಿರೋದಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ. https://kannadanewsnow.com/kannada/harihar-power-outage-in-these-areas-of-honnali-tomorrow/ https://kannadanewsnow.com/kannada/good-news-for-those-preparing-for-new-year-celebrations-in-bengaluru/
ಶಿವಮೊಗ್ಗ: ಮಲೆನಾಡಲ್ಲಿ ಹೊಸ ವರ್ಷಾಚರಣೆ ಮಾಡಬೇಕು ಅನ್ನೋದು ಹಲವರ ಪ್ಲಾನ್ ಆಗಿರುತ್ತೆ. ಆ ಪ್ಲಾನ್ ಗೆ ಅವಕಾಶವನ್ನು ಸಾಗರದ ಗ್ರೀನ್ ಎಂಬಾಸ್ಸಿ ಹೋಟೆಲ್ ಒದಗಿಸಿಕೊಡುತ್ತಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಹೃದಯ ಭಾಗದಲ್ಲಿರುವಂತ ಗ್ರೀನ್ ಎಂಬಾಸ್ಸಿ ಹೋಟೆಲ್. ಸಾಗರದಲ್ಲೇ ತುಂಬಾ ಪ್ರಸಿದ್ಧವಾಗಿರೋ ಈ ಹೋಟೆಲ್ ಬಿಹೆಚ್ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಪಕ್ಕದಲ್ಲೇ ಇದೆ. ಈ ಹೋಟೆಲ್ ನಲ್ಲಿ ನೂತನ ವರ್ಷದ ಆಚರಣೆಗೆ ಅವಕಾಶ ನೀಡುತ್ತಿದೆ. 2026ರ ಹೊಸ ವರ್ಷಾಚರಣೆಗೆ ಸಕಲ ಸಿದ್ಧತೆ ಕೈಗೊಂಡಿದ್ದು, ನೂತನ ವರ್ಷವನ್ನು ಸಡಗರ ಸಂಭ್ರಮದಿಂದ ಸ್ವಾಗತಿಸೋದಕ್ಕೆ ಜನರನ್ನು ಸೆಳೆಯುತ್ತಿದೆ. ಫ್ಲಾನ್ ಮಾಡಿ, ತಪ್ಪದೇ ಎಂಬಾಸ್ಸಿಯಲ್ಲೇ ಹೊಸ ವರ್ಷ ಆಚರಿಸಿ ಫ್ಯಾಮಿಲಿ, ಸ್ನೇಹಿತರ ಜೊತೆಗೆ ಹೊಸ ವರ್ಷಾಚರಣೆ ಮಾಡೋದಕ್ಕೂ ಗ್ರೀನ್ ಎಂಬಾಸ್ಸಿಯಲ್ಲಿ ಅವಕಾಶವಿದೆ. ವೆಜ್, ನಾನ್ ವೆಜ್ ತರಾವರಿ ಊಟವು ನಿಮ್ಮ ಸಂಭ್ರಮಾಚರಣೆಗೆ ಮತ್ತಷ್ಟು ಇಂಬು ನೀಡುತ್ತದೆ. ಜೊತೆಗೆ ಲೈವ್ ಡಿಜೆ ಕೂಡ ಇದ್ದು, ಕುಣಿದು ಕುಪ್ಪಳಿಸಿ, ಹೊಸ ವರ್ಷವನ್ನು ಸಂಭ್ರಮದಿಂದ ಬರ ಮಾಡಿಕೊಳ್ಳಬಹುದಾಗಿದೆ. ತಂಪು ಪಾನೀಯ…
ಬೆಂಗಳೂರು: ವೈದ್ಯಕೀಯ ಪದವಿ ಕೋರ್ಸ್ ಪ್ರವೇಶಕ್ಕೆ 3ನೇ ಸ್ಟ್ರೇ ವೇಕೆನ್ಸಿ ಸುತ್ತಿನಲ್ಲಿ ಖಾಲಿ ಇದ್ದ ಎಲ್ಲ ಎಂಟು ಸೀಟುಗಳು ಅರ್ಹರಿಗೆ ಮೆರಿಟ್ ಆಧಾರದ ಮೇಲೆ ಹಂಚಿಕೆ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಸೀಟು ಹಂಚಿಕೆಯಾದವರ ಪಟ್ಟಿಯನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಡಿ.30ರಂದು ಸಂಬಂಧಪಟ್ಟ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಈ ಮೂಲಕ ಪ್ರಸಕ್ತ ಸಾಲಿನ ವೈದ್ಯಕೀಯ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು ಎಲ್ಲ ಸೀಟು ಗಳು ಖಾಲಿಯಾದಂತಾಗಿವೆ ಎಂದು ಅವರು ತಿಳಿಸಿದ್ದಾರೆ. ಹೊಸಕೋಟೆಯ ಎಂವಿಜೆ ವೈದ್ಯಕೀಯ ಕಾಲೇಜಿನಲ್ಲಿ 5, ಕಲ್ಬುರ್ಗಿಯ ಎಂಆರ್ ಎಂಸಿ ವೈದ್ಯಕೀಯ ಕಾಲೇಜಿನಲ್ಲಿ 2 ಹಾಗೂ ಧಾರವಾಡದ ಎಸ್ ಡಿ ಎಂ ವೈದ್ಯಕೀಯ ಕಾಲೇಜಿನಲ್ಲಿ ಒಂದು ಸೀಟು ಖಾಲಿ ಇತ್ತು. ಇಷ್ಟೂ ಸೀಟುಗಳು ಹಂಚಿಕೆಯಾಗಿವೆ ಎಂದರು.
ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಗೆ ರೆಡಿಯಾಗಿರೋರಿಗೆ ಗುಡ್ ನ್ಯೂಸ್ ಎನ್ನುವಂತೆ ಬಿಎಂಟಿಸಿ ಬಸ್, ನಮ್ಮ ಮೆಟ್ರೋ ರೈಲು ಸಂಚಾರವನ್ನು ಮುಂಜಾನೆಯವರೆಗೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಆರ್ ಸಿ ಎಲ್ ಮಾಹಿತಿ ನೀಡಿದ್ದು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಹೊಸ ವರ್ಷದ ಸಂಭ್ರಮ–2026ರ ಅಂಗವಾಗಿ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ಉದ್ದೇಶದಿಂದ ನೇರಳೆ, ಹಸಿರು ಹಾಗೂ ಹಳದಿ ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಲಾಗುತ್ತಿದೆ. ಕೊನೆಯ ರೈಲುಗಳು ಹೊರಡುವ ಸಮಯ: 31 ಡಿಸೆಂಬರ್ 2025ರ ಮಧ್ಯರಾತ್ರಿಯ ನಂತರ, ಅಂದರೆ 1ನೇ ಜನವರಿ 2026ರಂದು ಟರ್ಮಿನಲ್ ನಿಲ್ದಾಣಗಳಿಂದ ಹೊರಡುವ ಕೊನೆಯ ಮೆಟ್ರೋ ರೈಲುಗಳ ಸಮಯ ಈ ಕೆಳಕಂಡಂತಿದೆ: ನೇರಳೆ ಮಾರ್ಗ: ವೈಟ್ಫೀಲ್ಡ್ ನಿಂದ ಚಲ್ಲಘಟ್ಟದ ವರೆಗೆ: ಬೆಳಗಿನಜಾವ 1:45ಗಂಟೆಗೆ ಚಲ್ಲಘಟ್ಟ ದಿಂದ ವೈಟ್ಫೀಲ್ಡ್ ವರೆಗೆ: ಬೆಳಗಿನಜಾವ 2:00ಗಂಟೆಗೆ ಹಸಿರು ಮಾರ್ಗ: ಮಾದಾವರ ದಿಂದ ರೇಷ್ಮೆ ಸಂಸ್ಥೆಯ ವರೆಗೆ: ಬೆಳಗಿನಜಾವ 2:00ಗಂಟೆಗೆ ರೇಷ್ಮೆ ಸಂಸ್ಥೆ ಯಿಂದ ಮಾದಾವರದ ವರೆಗೆ:…
ಬೆಂಗಳೂರು: ನಗರದಲ್ಲಿ ಡ್ರಗ್ಸ್ ಫ್ಯಾಕ್ಟರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಇನ್ಸ್ ಪೆಕ್ಟರ್ ಗಳನ್ನು ಪೊಲೀಸ್ ಇಲಾಖೆ ಆದೇಶಿಸಿದೆ. ಬೆಂಗಳೂರಿನ ಕೊತ್ತನೂರು, ಆವಲಹಳ್ಳಿ ಹಾಗೂ ಬಾಗಲೂರು ಠಾಣೆಯ ಇನ್ಸ್ ಪೆಕ್ಟರ್ ಗಳನ್ನು ಅಮಾನತುಗೊಳಿಸಲಾಗಿದೆ. ಕೊತ್ತನೂರು ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಚೇತನ್ ಕುಮಾರ್, ಅವಲಹಳ್ಳಿ ಪೊಲೀಸ್ ಠಾಣೆಯ ಇನ್ ಪೆಕ್ಟರ್ ರಾಮಕೃಷ್ಣಾರೆಡ್ಡಿ ಹಾಗೂ ಬಾಗಲೂರು ಠಾಣೆಯ ಇನ್ಸ್ ಪೆಕ್ಟರ್ ಶಬರೀಶ್ ಅಮಾನತುಗೊಳಿಸಲಾಗಿದೆ. https://kannadanewsnow.com/kannada/gezjalagere-village-panchayat-opposes-joining-maddur-municipal-council-indefinite-sit-in-enters-8th-day/ https://kannadanewsnow.com/kannada/harihar-power-outage-in-these-areas-of-honnali-tomorrow/
ಮಂಡ್ಯ : ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯನ್ನು ಮದ್ದೂರು ನಗರಸಭೆಗೆ ಸೇರಿಸಿರುವುದನ್ನು ವಿರೋಧಿಸಿ ಸ್ಥಳೀಯ ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವು 8 ನೇ ದಿನವನ್ನು ಪೂರೈಸಿದೆ. ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾ.ಪಂ.ಕಚೇರಿ ಮುಂಭಾಗ ನೂರಾರು ಸಂಖ್ಯೆಯ ನಿವಾಸಿಗಳು ಪಂಚಾಯಿತಿಯನ್ನು ನಗರಸಭೆಯನ್ನಾಗಿಸಲು ಮೇಲ್ದರ್ಜೆಗೆರಿಸಿರುವ ಶಾಸಕರ ವಿರುದ್ಧ ಘೋಷಣೆ ಕೂಗಿ ಸೋಮವಾರ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಾ ಅವರು, ಗ್ರಾಮ ಪಂಚಾಯಿತಿಯ ಅಧಿಕಾರಾವಧಿಯು ಇನ್ನು ಒಂದು ತಿಂಗಳು ಇದೆ. ಆದರೆ, ಗ್ರಾಮ ಪಂಚಾಯಿತಿಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೆರಿಸಿರುವ ಹಿನ್ನೆಲೆಯಲ್ಲಿ ನಮ್ಮ ಅಧಿಕಾರವನ್ನು ಬಲವಂತವಾಗಿ ಮೊಟಕುಗೊಳಿಸುವ ಮೂಲಕ ಸ್ಥಳೀಯ ಜನಪ್ರತಿನಿಧಿಗಳಿಗೆ ಅವಮಾನ ಮಾಡಲಾಗಿದೆ ಎಂದು ದೂರಿದರು. ಪುರಸಭೆಯಿಂದ ನಗರಸಭೆಯಾಗಿ ಮೇಲ್ದರ್ಜೆಗೆರಿಸುವಾಗ ಜನಪ್ರತಿನಿಧಿಗಳಿಗೆ ಯಾವುದೇ ಮಾಹಿತಿಯನ್ನು ಅಧಿಕಾರಿಗಳು ಕೂಲಂಕಷವಾಗಿ ನೀಡಲಿಲ್ಲ. ಕೆಲ ಸದಸ್ಯರು ಅವಿದ್ಯಾವಂತರಾಗಿರುವ ಪರಿಣಾಮ ನಗರಸಭೆಯಿಂದಾಗುವ ಅನಾನುಕೂಲಗಳ ಬಗ್ಗೆ ಅರಿವಿಲ್ಲದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಯ ನಡವಳಿಯಲ್ಲಿ ಸಹಿ ಹಾಕಿದ್ದರಿಂದ ಗ್ರಾಮ ಪಂಚಾಯಿತಿಯಿಂದ ಅನುಮೋದನೆ…
ಮಂಡ್ಯ : ಕುವೆಂಪು ಅವರು ಮಾನವ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದು, ಅವರ ಸ್ಮರಣೆ ಅಗತ್ಯವಾಗಿದೆ ಎಂದು ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಸೋಮವಾರ ಹೇಳಿದರು. ಮದ್ದೂರು ನಗರದ ತಾಲೂಕು ಕಛೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವಮಾನವ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕುವೆಂಪು ಅವರು, ಮನುಜ ಮತ ವಿಶ್ವಪಥ ಎಂದು ಸಾರಿ ಮಾನವ ಸಮಾಜಕ್ಕೆ ಅನೇಕ ಸಂದೇಶ ನೀಡುವ ಮೂಲಕ ಜಾತಿ, ಮತ, ಪಂಥಕ್ಕೆ ಆಧ್ಯತೆ ನೀಡದೇ ಮಾನವೀಯ ಧರ್ಮ ಮೇಲು ಎಂದು ಸಾರಿದರು ಹಾಗಾಗಿ ಅವರನ್ನು ವಿಶ್ವಮಾನವ ಎಂದು ಹೇಳಲಾಗುತ್ತದೆ ಎಂದರು. ಕನ್ನಡಕ್ಕೆ ಮೊಟ್ಟ ಮೊದಲ ಜ್ಞಾನಪೀಠ ಪ್ರಶಸ್ತಿಯನ್ನು ತಂದು ಕೊಟ್ಟ ಕುವೆಂಪು ಅವರು ರವೀಂದ್ರನಾಥ ಟ್ಯಾಗೂರ್ರಂತೆ ರಾಷ್ಟ್ರಗೀತೆ ಮಾದರಿಯಲ್ಲಿ ನಾಡಗೀತೆ ಹಾಗೂ ರೈತಗೀತೆಯಂಥ ಸಾಕಷ್ಟು ಗೀತೆಗಳನ್ನು ನೀಡಿರುವುದು ನಮ್ಮೆಲ್ಲರ ಭಾಗ್ಯವಾಗಿದೆ. ಇಂಥ ಮಹಾನೀಯರ ಆದರ್ಶಗಳನ್ನು ಜೀವಂತವಾಗಿರಿಸುವ ಕೆಲಸವನ್ನು ನಾವೆಲ್ಲರು ಮಾಡಬೇಕಿದೆ. ಕುವೆಂಪು ಅವರು ಅಧ್ಯಾಪಕರಾಗಿ, ಪ್ರಾಚಾರ್ಯ, ಶಿಕ್ಷಣ ತಜ್ಞರಾಗಿಯೂ ಶ್ರೇಷ್ಠ…














