Author: kannadanewsnow09

ಶಿವಮೊಗ್ಗ : ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ದೇವರಿ ಜಾತ್ರಾ ಮಹೋತ್ಸವವು ಫೆ.24 ರಿಂದ 28 ರವರೆಗೆ ಜರುಗಲಿದ್ದು, ಈ ಸಂದರ್ಭದಲ್ಲಿ ರಾಜಬೀದಿ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು, ಪೂಜೆ/ಹರಕೆ/ಪ್ರಸಾದ ವಿನಿಯೋಗ, ರಾಜ್ಯ ಮಟ್ಟದ ಬಯಲು ಕುಸ್ತಿ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆಯುವುದರಿಂದ ಜಾತ್ರಾ ಉತ್ಸವದಲ್ಲಿ ಸಾವಿರಾರು ಭಕ್ತಾದಿಗಳು ದೇವಸ್ಥಾನಕ್ಕೆ ಕಾರು, ದ್ವಿಚಕ್ರ, ಬಸ್ ಹಾಗೂ ಇತರೆ ವಾಹನಗಳಲ್ಲಿ ಬರುವುದರಿಂದ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಕಾರಣ ನಗರದ ಗಾಂಧಿಬಜಾರ್ ಮತ್ತು ಮಾರಿಕಾಂಬ ದೇವಸ್ಥಾನದ ಸುತ್ತಮುತ್ತಲಿನ ಹಾಗೂ ಹೊಳಬಸ್ ಸ್ಟಾö್ಯಪ್, ಶಂಕರಮಠ ರಸ್ತೆ, ಬಿ.ಹೆಚ್.ರಸ್ತೆ, ಕೋಟೆ ರಸ್ತೆ, ಎಸ್.ಪಿ.ಎಂ.ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಶಿವಪ್ಪ ನಾಯಕ ಸರ್ಕಲ್ ಹಾಗೂ ಸುತ್ತಮುತ್ತ ಸುಗುಮ ಸಂಚಾರದ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಮಾರ್ಗಗಳನ್ನು ಈ ಕೆಳಗಿನಂತೆ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅದೇಶ ಹೊರಡಿಸಿದ್ದಾರೆ. ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರಸ್ತೆಗಳಲ್ಲಿ ಎಲ್ಲಾ ವಾಹನಗಳ ಸಂಚಾರ ನಿಷೇಧ ಮಾಡುವುದು.…

Read More

ಬೆಂಗಳೂರು: ಬಾಗಲಕೋಟೆಯಲ್ಲಿ ಆಗಿರುವುದು ಹಿಂದೂಗಳ ಮೇಲಿನ ದಬ್ಬಾಳಿಕೆ. ಇದನ್ನು ಸಹಿಸಲಾಗದು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಈಗ ಶಾಂತಿ ಸಭೆಗೆ ಕರೆದರೂ ಕೆಲವರು ಬರುತ್ತಿಲ್ಲ. ಇದಕ್ಕೆ ಈಗಿನ ಸರಕಾರವೇ ಕಾರಣ ಎಂದು ದೂರಿದರು. ಚಿತ್ತಾಪುರದಲ್ಲಿ ನಡೆದಿದೆ ಎಂದರೆ ಚಿತಾವಣೆ ಯಾರು ಎಂದು ಕೇಳಿದರು. ಇದಕ್ಕೆಲ್ಲ ಚಿತ್ತಾಪುರದ ಶಾಸಕರಾದ ಪ್ರಿಯಾಂಕ್ ಖರ್ಗೆಯವರೇ ಏನೋ ಮಾಡಿಸುತ್ತಿದ್ದಾರೆ ಎಂಬ ಅನುಮಾನವಿದೆ ಎಂದು ಸ್ಥಳೀಯ ಕೆಲವರು ತಿಳಿಸಿದ್ದಾಗಿ ಹೇಳಿದರು. ಇಂಥ ಚಿತಾವಣೆ ಮಾಡುವವರಿಗೆ ಪ್ರತಿಯೊಬ್ಬರಿಗೂ ಶಿಕ್ಷೆ ಆಗಬೇಕು. ಜನರು ಹೇಳುತ್ತಿರುವುದು ಸರಿಯೇ? ನೀವು ಹಿಂದೂಗಳನ್ನು ಯಾಕೆ ಟಾರ್ಗೆಟ್ ಮಾಡುತ್ತೀರಿ ಎಂಬುದಕ್ಕೆ ಪ್ರಿಯಾಂಕ್ ಖರ್ಗೆಯವರು ಉತ್ತರ ಕೊಡಬೇಕು ಎಂದು ಆಗ್ರಹಿಸಿದರು. ಈ ಸರಕಾರವು ಇಂಥವುಗಳಿಗೆ ಪ್ರೋತ್ಸಾಹ ಕೊಡುವ ರೀತಿಯಲ್ಲಿ ಅಲ್ಪಸಂಖ್ಯಾತರ ಹೆಸರಿನಲ್ಲಿ, ನಮ್ಮ ಮತಬ್ಯಾಂಕ್ ಎಂಬ ಕಾರಣಕ್ಕೆ ಓಲೈಕೆ ಮಾಡುತ್ತ ಹೋದರೆ ಈ ರಾಜ್ಯಕ್ಕೆ ಮತ್ತು ದೇಶಕ್ಕೆ ಗಂಡಾಂತರ ಇದೆ ಎಂದು ವಿಶ್ಲೇಷಿಸಿದರು. ನಾನು ಎಲ್ಲ…

Read More

ನವದೆಹಲಿ: ಭಾರತದಲ್ಲಿ ತಂತ್ರಜ್ಞಾನದ ಭವಿಷ್ಯವು ಒಂದು ಸರಳ ಹಾಗೂ ಶಕ್ತಿಯುತವಾದ ಆಲೋಚನೆಯಿಂದ ಮಾರ್ಗದರ್ಶಿಸಲ್ಪಡುತ್ತಿದೆ: ಅದುವೇ ‘ಕೃತಕ ಬುದ್ಧಿಮತ್ತೆಯ (ಎಐ) ಪ್ರಜಾಪ್ರಭುತ್ವೀಕರಣ’. ಕೃತಕ ಬುದ್ಧಿಮತ್ತೆಯು ಕೇವಲ ಕೆಲವು ಕಂಪನಿಗಳು, ಸಂಸ್ಥೆಗಳು ಅಥವಾ ದೇಶಗಳಿಗೆ ಮಾತ್ರ ಸೀಮಿತವಾಗಬಾರದು. ಬದಲಾಗಿ, ಪ್ರತಿಯೊಬ್ಬ ನಾಗರಿಕನಿಗೂ ಪ್ರಯೋಜನವಾಗುವಂತೆ, ಸಾರ್ವಜನಿಕ ಕಲ್ಯಾಣ ಮತ್ತು ಸಾಮೂಹಿಕ ಹಿತಾಸಕ್ತಿಯನ್ನು ಬೆಂಬಲಿಸುವ ರೀತಿಯಲ್ಲಿ ಅದನ್ನು ಅಭಿವೃದ್ಧಿಪಡಿಸಬೇಕು ಮತ್ತು ಬಳಸಬೇಕು. ‘ಮಾನವಕುಲಕ್ಕಾಗಿ ಎಐ’ ಎಂಬ ಈ ದೃಷ್ಟಿಕೋನವು ತಾಂತ್ರಿಕ ಪ್ರಗತಿಯ ಕೇಂದ್ರಬಿಂದುವಾಗಿ ಜನರನ್ನು ಇರಿಸುತ್ತದೆ, ಮತ್ತು ನಾವೀನ್ಯತೆಯು ಸಮಾಜಕ್ಕೆ ಸೇವೆಯನ್ನು ಒದಗಿಸಬೇಕೇ ಹೊರತು ಸಮಾಜವು ತಂತ್ರಜ್ಞಾನಕ್ಕೆ ಪೂರಕವಾಗಬಾರದು ಎಂಬುದನ್ನು ಖಚಿತಪಡಿಸುತ್ತದೆ. ಈ ದೃಷ್ಟಿಕೋನವನ್ನು ಸಾಕಾರಗೊಳಿಸಲು, ಎಐ ಬೃಹತ್ ಪ್ರಮಾಣದಲ್ಲಿ ವಿಶ್ವಾಸಾರ್ಹವಾಗಿ ಕಾರ್ಯನಿರ್ವಹಿಸುವುದು ಮತ್ತು ಆರೋಗ್ಯ, ಶಿಕ್ಷಣ, ಕೃಷಿ, ಹಣಕಾಸು ಮತ್ತು ಸಾರ್ವಜನಿಕ ಸೇವೆಗಳಂತಹ ದೈನಂದಿನ ಜೀವನದ ಕ್ಷೇತ್ರಗಳಲ್ಲಿ ಸಡೆರಹಿತವಾಗಿ ಬೆರೆಯುವುದು ಅತ್ಯಗತ್ಯ. ಇಂತಹ ಜನಸಂಖ್ಯಾ-ಪ್ರಮಾಣದ ಪ್ರಭಾವವು ಬಲವಾದ ಮತ್ತು ಸಂಯೋಜಿತ ‘ಎಐ ಸ್ಟ್ಯಾಕ್’ ಮೂಲಕ ಮಾತ್ರ ಸಾಧ್ಯವಾಗುತ್ತದೆ. ಈ ಸ್ಟ್ಯಾಕ್ ಎಐ ಅಪ್ಲಿಕೇಶನ್‌ಗಳನ್ನು ಪರಿಣಾಮಕಾರಿಯಾಗಿ ನಿರ್ಮಿಸಲು, ನಿಯೋಜಿಸಲು ಮತ್ತು ನಿರ್ವಹಿಸಲು ಅಗತ್ಯವಿರುವ ಪರಿಕರಗಳು, ವ್ಯವಸ್ಥೆಗಳು…

Read More

ನವದೆಹಲಿ : ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದ ‘2025 ಗ್ಲೋಬಲ್ ಎಐ ವೈಬ್ರನ್ಸಿ ಟೂಲ್’ ಪ್ರಕಾರ, ಭಾರತವು ಕೃತಕ ಬುದ್ಧಿಮತ್ತೆ(ಎಐ) ಸಾಮರ್ಥ್ಯದಲ್ಲಿ ವಿಶ್ವದಲ್ಲೇ ಮೂರನೇ ಸ್ಥಾನ ಪಡೆಯುವ ಮೂಲಕ ಜಾಗತಿಕ ನಾಯಕನಾಗಿ ಹೊರಹೊಮ್ಮುತ್ತಿದೆ. 2017 ಮತ್ತು 2024ರ ನಡುವಿನ ಎಐ ಬೆಳವಣಿಗೆ ಮತ್ತು ನಾವೀನ್ಯತೆಯ ಆಧಾರದ ಮೇಲೆ ಅಳೆಯಲಾದ ಈ ಕ್ಷಿಪ್ರ ಏರಿಕೆಯು, ಭಾರತದ ಡಿಜಿಟಲ್ ಸಾಮರ್ಥ್ಯಗಳು, ದತ್ತಾಂಶ ಪರಿಸರ ವ್ಯವಸ್ಥೆ ಮತ್ತು ಎಐ ಪ್ರತಿಭೆ, ಸಂಶೋಧನೆ, ನವೋದ್ಯಮ, ಹೂಡಿಕೆ, ಮೂಲಸೌಕರ್ಯ ಮತ್ತು ಆಡಳಿತದಲ್ಲಿನ ಬಲವನ್ನು ಪ್ರತಿಫಲಿಸುತ್ತದೆ. ಕೃತಕ ಬುದ್ಧಿಮತ್ತೆಯು (ಎಐ) ಕೃಷಿ ಕ್ಷೇತ್ರದಲ್ಲೂ ಒಂದು ಕ್ರಾಂತಿಕಾರಿ ಶಕ್ತಿಯಾಗಿ ಬೆಳೆಯುತ್ತಿದ್ದು, ಕೃಷಿ ವ್ಯವಸ್ಥೆಯಾದ್ಯಂತ ಉತ್ಪಾದಕತೆ, ಸುಸ್ಥಿರತೆ ಮತ್ತು ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸಲು ಹೊಸ ಹಾದಿಗಳನ್ನು ರೂಪಿಸುತ್ತಿದೆ. ಉಪಗ್ರಹಗಳು, ಸಂವೇದಕಗಳು, ಡ್ರೋನ್‌ಗಳು, ಹವಾಮಾನ ಕೇಂದ್ರಗಳು ಮತ್ತು ಕೃಷಿ ಯಂತ್ರೋಪಕರಣಗಳಿಂದ ದೊರೆಯುವ ದತ್ತಾಂಶವನ್ನು ಬಳಸಿಕೊಳ್ಳುವ ಮೂಲಕ, ಎಐ ಆಧಾರಿತ ಸಾಧನಗಳು ಕೃಷಿ ಮೌಲ್ಯ ಸರಪಳಿಯ ಪ್ರತಿ ಹಂತದಲ್ಲೂ ಮಾಹಿತಿ ಆಧಾರಿತ ನಿರ್ಧಾರಗಳನ್ನು ತೆಗೆದುಕೊಳ್ಳಲು ಬೆಂಬಲ ನೀಡುತ್ತವೆ. ಇಂಡಿಯಾ-ಎಐ ಇಂಪ್ಯಾಕ್ಟ್ ಸಮ್ಮಿತ್ 2026 ಕಾರ್ಯಕ್ರಮವು, ಕೃತಕ ಬುದ್ಧಿಮತ್ತೆಯನ್ನು ‘ಒಳಗೊಳ್ಳುವಿಕೆ ಅಭಿವೃದ್ಧಿಯ’ ಸಾಧನವಾಗಿ ಬಳಸುವ ಭಾರತದ ದೂರದೃಷ್ಟಿಯನ್ನು ಎತ್ತಿ ತೋರಿಸುತ್ತದೆ. ಈ…

Read More

ಗುವಾಹಟಿ: ಮುಂದಿನ ಐದು ವರ್ಷಗಳಲ್ಲಿ ಅಕ್ರಮ ವಲಸಿಗರನ್ನು ಮತದಾರರ ಪಟ್ಟಿಯಿಂದ ಮಾತ್ರವಲ್ಲದೆ ದೇಶದಿಂದಲೇ ತೆಗೆದುಹಾಕಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಪ್ರತಿಪಾದಿಸಿದರು. ಅಸ್ಸಾಂ ಪೊಲೀಸ್ 10 ನೇ ಬೆಟಾಲಿಯನ್‌ನ ಹೊಸ ಕ್ಯಾಂಪಸ್‌ಗೆ ಶಿಲಾನ್ಯಾಸ ನೆರವೇರಿಸಿದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾ, ಭಾರತವು ನಕ್ಸಲರಿಂದ ಮುಕ್ತವಾಗಲು ಸಾಧ್ಯವಾದರೆ, ಅದು ನುಸುಳುಕೋರರಿಂದಲೂ ಮುಕ್ತವಾಗಬಹುದು ಎಂದು ಹೇಳಿದರು. 10 ನೇ ಬೆಟಾಲಿಯನ್‌ನ ಹೊಸ ಕ್ಯಾಂಪಸ್ ಅನ್ನು ನುಸುಳುಕೋರರಿಂದ ಮುಕ್ತವಾದ ಭೂಮಿಯಲ್ಲಿ ನಿರ್ಮಿಸಲಾಗುವುದು ಎಂದು ಅವರು ಹೇಳಿದರು. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮೇಲೆ ವಾಗ್ದಾಳಿ ನಡೆಸಿದ ಶಾ, ಕಾಂಗ್ರೆಸ್ ನಾಯಕರು ಒಮ್ಮೆ ನುಸುಳುಕೋರರನ್ನು ತೆಗೆದುಹಾಕಲಾಗುವುದು ಎಂದು ಹೇಳಿದ್ದರು, ಆದರೆ “ಕಾಂಗ್ರೆಸ್ ತನ್ನ ಮತಬ್ಯಾಂಕ್ ಆಗಿರುವುದರಿಂದ ಅವರು ಹಾಗೆ ಮಾಡಲು ಸಾಧ್ಯವಿಲ್ಲ” ಎಂದು ಹೇಳಿದರು. “ಒಳನುಸುಳುಕೋರರನ್ನು ಅತಿಕ್ರಮಿಸಿದ ಭೂಮಿಯಿಂದ ಹೊರಹಾಕುವುದು ಸಾಕಾಗುವುದಿಲ್ಲ, ಅವರನ್ನು ಭಾರತದಿಂದ ಹೊರಗೆ ಕಳುಹಿಸಬೇಕು” ಎಂದು ಅವರು ಹೇಳಿದರು. ಮುಂದಿನ ಐದು ವರ್ಷಗಳಲ್ಲಿ ಅಸ್ಸಾಂ ಪೂರ್ವ…

Read More

ಬೆಂಗಳೂರು: ಪೀಣ್ಯ ವಿಭಾಗದ “220/66/11ಕೆ.ವಿ ಎಸ್‌ಆರ್‌ಎಸ್ ಪೀಣ್ಯ ಉಪಕೇಂದ್ರ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 22.02.2026 (ಭಾನುವಾರ) ರಂದು ಬೆಳಗ್ಗೆ 09:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೆಚ್, ಎಮ್.ಟಿ ರಸ್ತೆ, ಆರ್‌ಎನ್‌ಎಸ್ ಅಪರ‍್ಟ್‌ಮೆಂಟ್, ಸಿಎಂಟಿಐ, ಬೋರ್ ಲಿಂಗಪ್ಪ ಗಾರ್ಡನ್, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯುನಿಕೇಷನ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಮೆಕ್ ಲೇಔಟ್, ಮಲಯಾಳಿ ಅತಿಥಿ ಗೃಹ ರಸ್ತೆ, ಕೆಎಚ್‌ಬಿ ಲೇಔಟ್, ರಾಜೇಶ್ವರಿನಗರ, ಆಕಾಶ್ ಥೀಟರ್ ರಸ್ತೆಯಲ್ಲಿ ಕರೆಂಟ್ ಇರೋದಿಲ್ಲ. ಫ್ರೆಂಡ್ಸ್ ರ‍್ಕಲ್, ವಿಜ್ಞಾನ ಪಬ್ಲಿಕ್ ಸ್ಕೂಲ್ ರಸ್ತೆ. ಭಿರವೇಶ್ವರ ನಗರ, ಬ್ಯಾಂಕ್ ಕಾಲೋನಿ, 6ನೇ ಮುಖ್ಯ ರಸ್ತೆ, ವಿಭಾಗ ರಸ್ತೆ, 5ನೇ ಮುಖ್ಯ ರಸ್ತೆ, ಯುಕೊ ಬ್ಯಾಂಕ್ ರಸ್ತೆ, ಥರ‍್ಲಾಕ್ ರಸ್ತೆ, 7ನೇ ಮುಖ್ಯ ರಸ್ತೆ,…

Read More

ಶಿವಮೊಗ್ಗ : ಯುವಜನರು ಕಾನೂನು ಸುವ್ಯವಸ್ಥೆ ಪಾಲನೆ ಬಗ್ಗೆ ಅರಿವು ಹೊಂದಿರಬೇಕು. ಕಾನೂನು ಮೀರಿ ನಡೆದರೆ ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದು ಸಾಗರ ಪೊಲೀಸ್ ಉಪಾಧೀಕ್ಷಕ ಡಾ. ಬೆನಕ ಪ್ರಸಾದ್ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಸಂಜಯ ಮೆಮೋರಿಯಲ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶನಿವಾರ ಸಂಜಯ ವಿದ್ಯಾಕೇಂದ್ರ ಮತ್ತು ಪೊಲೀಸ್ ಇಲಾಖೆಯಿಂದ ಆರಕ್ಷಕ ದಿನ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದಂತ ಅವರು, ವಿದ್ಯಾರ್ಥಿ ದೆಸೆಯಲ್ಲಿ ನಿಮಗೆ ಕಾನೂನು ಪಾಲನೆ ಮಾಡುವ ಜೊತೆಗೆ ಬೇರೆಯವರಿಗೆ ಅರಿವು ಮೂಡಿಸಲು ಹಲವು ಅವಕಾಶಗಳು ಇರುತ್ತದೆ. ಮಾದಕ ವ್ಯಸನದಿಂದ ದೂರ ಇರುವ ಜೊತೆಗೆ ನಿಮ್ಮ ಶಾಲಾಕಾಲೇಜು ಪಕ್ಕದಲ್ಲಿ ಮಾದಕ ವಸ್ತುಗಳ ಸಾಗಾಣಿಕೆ, ಮಾರಾಟ ನಡೆಯುತ್ತಿದ್ದರೆ ನಮ್ಮ ಗಮನಕ್ಕೆ ತನ್ನಿ ಎಂದು ಹೇಳಿದರು. ವಾಹನ ಚಲಾವಣೆ ಮಾಡುವಾಗ ಹೆಚ್ಚು ಎಚ್ಚರಿಕೆಯಿಂದ ಇರಬೇಕು. ನಿಮ್ಮನ್ನು ನಂಬಿ ಕುಟುಂಬ ಇರುತ್ತದೆ. ನಿಮಗೆ ವಾಹನ ಕೊಡಿಸಿರುವುದು ನಿಗಧಿತ ಸಮಯಕ್ಕೆ ಕಾಲೇಜು ತಲುಪಿ ಪಾಠ ಪ್ರವಚನಗಳಲ್ಲಿ ಭಾಗವಹಿಸಲಿ ಎಂದು ಪೋಷಕರು ವಾಹನ…

Read More

ಶಿವಮೊಗ್ಗ : ಮಾ. 2ರಂದು ಬೆಳಿಗ್ಗೆ 11ಕ್ಕೆ ಸಿಗಂದೂರು ಸೇತುವೆ ಪ್ರವೇಶದ ರಾಷ್ಟ್ರೀಯ ಹೆದ್ದಾರಿ ತಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಲೆನಾಡು ರೈತ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್ ತಿಳಿಸಿದರು. ಇಂದು ಶಿವಮೊಗ್ಗದ ಸಾಗರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶರಾವತಿ ಮುಳುಗಡೆ ಸಂತ್ರಸ್ತರು ಹಾಗೂ ಅರಣ್ಯಭೂಮಿ ಸಾಗುವಳಿದಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಮ್ಮಿಕೊಂಡಿರುವ ಹಕ್ಕೊತ್ತಾಯದ ಹೋರಾಟ ಇದಾಗಿದೆ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಲೆನಾಡು ರೈತರ ಭೂಹಕ್ಕು ಸಮಸ್ಯೆ ನಿವಾರಣೆ ಮಾಡುವಲ್ಲಿ ಮಾಡಿದ ಸಾಧನೆ ಶೂನ್ಯ. ಮಲೆನಾಡಿನ 65 ವಿಧಾನಸಭಾ ಕ್ಷೇತ್ರದ ಶಾಸಕರು, ಸಚಿವರು ಕಣ್ಣಿದ್ದೂ ಕುರುಡರಾಗಿ, ಕಿವಿಯಿದ್ದೂ ಕಿವುಡರಾಗಿ, ಬಾಯಿದ್ದು ಮೂಖರಾಗಿ ಹೋಗಿದ್ದಾರೆ. ಮಲೆನಾಡಿನ ಜ್ವಲಂತ ಭೂಸಮಸ್ಯೆ ಬಗೆಹರಿಸುವಲ್ಲಿ ಚುನಾಯಿತ ಪ್ರತಿನಿಧಿಗಳಿಗೆ ಅಸಕ್ತಿ ಇಲ್ಲ. ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದಾಗ 3 ಲಕ್ಷ ಅರಣ್ಯಹಕ್ಕು ಅರ್ಜಿ ವಜಾ ಮಾಡಿದ್ದರೇ, ಸಿದ್ದರಾಮಯ್ಯ ಸಹ ಅದೇ ದಾರಿ ತುಳಿದಿದ್ದಾರೆ.. ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗ್ಗೆ ಜಿಲ್ಲಾ ಉಸ್ತುವಾರಿ…

Read More

ಶಿವಮೊಗ್ಗ: ಒಂದು ವಾರದ ಹಿಂದಷ್ಟೇ ಪತಿ ನಿಧನರಾಗಿದ್ದರು. ಆ ಬಳಿಕ ಪತ್ನಿಗೆ ಫೇಸ್ ಬುಕ್ ಮೂಲಕ ಪೊಲೀಸ್ ಪೇದೆ ಮೋಹನ್ ಎಂಬಾತ ಕಿರುಕುಳ ನೀಡುತ್ತಿದ್ದರು. ಅವರ ಕಿರುಕುಳಕ್ಕೆ ಬೇಸತ್ತು ನಿನ್ನೆ ಮಹಿಳೆ ಸ್ವಾತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಅವರು ವಾಟ್ಸ್ ಆಪ್ ನಲ್ಲಿ ಡೇತ್ ನೋಟ್ ನಲ್ಲಿ ಪಿಸಿ ಮೋಹನ್ ಕಿರುಕುಳ ಉಲ್ಲೇಖಿಸಿದ್ದರು. ಹೀಗಾಗಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ಮೃತ ಸ್ವಾತಿ ತಾಯಿ ನ್ಯೂ ಟೌನ್ ಠಾಣೆಗೆ ತೆರಳಿ ದೂರು ನೀಡಿದ್ದರು. ಈ ದೂರು ಆಧರಿಸಿ ತೀರ್ಥಹಳ್ಳಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಮೋಹನ್ ವಿರುದ್ಧ ಎಫ್ಐಆರ್ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ. ನಿನ್ನೆ ಶಿವಮೊಗ್ಗದ ಭದ್ರಾವತಿಯ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸ್ವಾತಿ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನ ತಾಯಿಗೆ ವಾಟ್ಸ್ ಆಪ್ ಮೂಲಕ ಡೆತ್ ನೋಟ್ ಕಳುಹಿಸಿದ್ದರು. ಅದರಲ್ಲಿ ಪೊಲೀಸ್ ಆಗಿರುವಂತ ಮೋಹನ್ ನನಗೆ ಫೇಸ್ ಬುಕ್ ನಲ್ಲಿ ಮೆಸೇಜ್ ಮಾಡುತ್ತಿದ್ದರು.…

Read More

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲಿದ್ದು, ಇದಕ್ಕೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ಮತ್ತೊಮ್ಮೆ ಫೆಬ್ರುವರಿ 27ರವರೆಗೆ ವಿಸ್ತರಿಸಲಾಗಿದೆ. ಇದು ಕೊನೆಯ ಅವಕಾಶವಾಗಿದ್ದು, ಈ ಅವಧಿ ನಂತರ ಪುನಃ ದಿನಾಂಕ ವಿಸ್ತರಣೆ ಇರುವುದಿಲ್ಲ. ಹೀಗಾಗಿ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದುವರೆಗೂ 3.18 ಲಕ್ಷ ಮಂದಿ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಿದ್ದು, ಇನ್ನೂ ಅನೇಕರು ಫೆ.22ರ ಕೊನೆ ದಿನಾಂಕವನ್ನು ವಿಸ್ತರಿಸುವಂತೆ ಕೋರಿದ್ದಾರೆ, ಆ ಪ್ರಕಾರ ಅರ್ಜಿ ಸಲ್ಲಿಸಲು ಫೆ.27 ಹಾಗೂ ಶುಲ್ಕ ಪಾವತಿಗೆ ಮಾರ್ಚ್ 3ರವರೆಗೆ ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಿರುವವರ ಪೈಕಿ 2.18 ಲಕ್ಷ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ಸ್ಯಾಟ್ಸ್ ಮೂಲಕ ಆನ್‌ಲೈನ್ ನಲ್ಲಿ ಆಗಿದೆ. ಕಾಲೇಜು ಹಂತದಲ್ಲಿ 1.08 ಲಕ್ಷ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಮಾಡಲಾಗಿದೆ ಎಂದು ಅವರು…

Read More