Subscribe to Updates
Get the latest creative news from FooBar about art, design and business.
Author: kannadanewsnow09
ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ವಿವರ: ಮೃತರನ್ನು ಹಾವೇರಿ ನಗರದ ನಿವಾಸಿಗಳಾದ ಕಾರ್ತಿಕ್ ಹೂಗಾರ (34) ಮತ್ತು ಅವರ ಪತ್ನಿ ಐಶ್ವರ್ಯ (30) ಎಂದು ಗುರುತಿಸಲಾಗಿದೆ. ಈ ದಂಪತಿಗೆ ವಿವಾಹವಾಗಿ ಕೇವಲ 15 ದಿನಗಳಷ್ಟೇ ಆಗಿತ್ತು. ಕುಟುಂಬದವರೊಂದಿಗೆ ದೇವರ ದರ್ಶನ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಇಬ್ಬರ ಸ್ಥಿತಿ ಗಂಭೀರ: ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ. ಪೊಲೀಸ್ ಭೇಟಿ: ಘಟನಾ ಸ್ಥಳಕ್ಕೆ ತಡಸ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.…
ಧಾರವಾಡ : ಸರ್ಕಾರಿ ಅಧಿಕಾರಿ, ನೌಕರರಿಗೆ 2026ನೇ ಸಾಲಿನ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಆಯ್ಕೆ, ನಾಮನಿರ್ದೇಶನ ಪ್ರಕ್ರಿಯೆಯನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಆದೇಶಿಸಿದ್ದು, ಮಾರ್ಚ 4, 2026ರ ಸಂಜೆ 5 ಗಂಟೆಯೊಳಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಆಸಕ್ತರು ಅರ್ಜಿ ಸಲ್ಲಿಸಲು ಜಿಲ್ಲಾಧಿಕಾರಿ ಸ್ನೇಹಲ್ .ಆರ್ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರಸಕ್ತ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಸಲ್ಲಿಕೆ ಆಗುವ ಅರ್ಜಿಗಳ ಪರಿಶೀಲನೆ ಮತ್ತು ನಿರ್ವಹಣೆಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರನ್ನು ಜಿಲ್ಲಾ ನೋಡಲ್ ಅಧಿಕಾರಿಯಾಗಿ ನೇಮಿಸಿ ಅವರು ಆದೇಶಿಸಿದ್ದಾರೆ. ಧಾರವಾಡ ಜಿಲ್ಲೆಯ ವಿವಿಧ ಇಲಾಖೆಗಳ ಅರ್ಹ ಅಧಿಕಾರಿ, ನೌಕರರಿಂದ ಅರ್ಜಿಯನ್ನು ಅಹ್ವಾನಿಸಲಾಗಿದೆ. ಮಾರ್ಚ 4, 2026 ಒಳಗಾಗಿ ತಮ್ಮ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ, ದ್ವಿಪ್ರತಿಯಲ್ಲಿ ಜಿಲ್ಲಾ ನೋಡಲ್ ಅಧಿಕಾರಿಗಳಿಗೆ ಸಲ್ಲಿಸಿ, ಸ್ವೀಕೃತಿ ಪಡೆದುಕೊಳ್ಳಬೇಕು. ನಿಗದಿಪಡಿಸಿದ ದಿನಾಂಕದ ನಂತರದಲ್ಲಿ ಅರ್ಜಿಗಳನ್ನು ಸ್ವೀಕರಿಸಲು ಅವಕಾಶವಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ…
ಬಳ್ಳಾರಿ: ಜಿಲ್ಲೆಯ ರೈತರು ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ರೈತರು ತಮ್ಮ ಫ್ರೂಟ್ಸ್ ಐಡಿ ಗೆ ಇ-ಕೆವೈಸಿ, ಮೊಬೈಲ್ ಸಂಖ್ಯೆ, ತಮ್ಮ ಹೆಸರಿನಲ್ಲಿರುವ ಎಲ್ಲಾ ಭೂಹಿಡುವಳಿಗಳನ್ನು ಕಡ್ಡಾಯವಾಗಿ ತಮ್ಮ ಎಫ್ಐಡಿಯಲ್ಲಿ ಸೇರ್ಪಡಿಸಿಕೊಳ್ಳುವ ಮೂಲಕ ಕೇಂದ್ರ ನೋಂದಾಯಿತ ರೈತರ ಸಂಖ್ಯೆ ಸೃಜನೆ ಮಾಡಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿಯ ಪ್ರಕಾರ ಫ್ರೂಟ್ಸ್ ಹಾಗೂ ಭೂಮಿ ದತ್ತಾಂಶಗಳನ್ನು ನಿಯತವಾಗಿ ಜೋಡಣೆ ಮಾಡುವುದು ಅತಿ ಮುಖ್ಯವಾಗಿದೆ. ಹಾಗಾಗಿ ರೈತರು ಫ್ರೂಟ್ಸ್ ತಂತ್ರಾAಶದಲ್ಲಿ ಇ-ಕೆವೈಸಿ, ಮೊಬೈಲ್ ನಂಬರ್ಗಳನ್ನು ಅಪ್ಡೇಟ್ ಮಾಡಿಕೊಳ್ಳುವುದು, ರೈತರ ಹೆಸರಿನಲ್ಲಿರುವ ಎಲ್ಲಾ ಭೂಹಿಡುವಳಿಗಳನ್ನು ಕಡ್ಡಾಯವಾಗಿ ತಮ್ಮ ಎಫ್.ಐ.ಡಿಯಲ್ಲಿ ಸೇರ್ಪಡಿಸಿಕೊಳ್ಳುವುದು ಮತ್ತು ರೈತರ ಸಹಮತಿ ಪತ್ರವನ್ನು ವಿದ್ಯುನ್ಮಾನ ರೀತಿಯಲ್ಲಿ ನೀಡುವುದು ಕಡ್ಡಾಯವಾಗಿದೆ. ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದಿಂದ ಒಂದು ಕೇಂದ್ರ ನೋಂದಾಯಿತ ರೈತರ ಸಂಖ್ಯೆಯನ್ನು (ಸೆಂಟ್ರಲ್ ಫಾರ್ಮರ್ ಐಡಿ) ಸೃಜಿಸಲಾಗುತ್ತದೆ. ಈ ರೀತಿಯಾಗಿ ಸೃಜಿಸಲಾದ ಕೇಂದ್ರ ನೋಂದಾಯಿತ ರೈತ ಸಂಖ್ಯೆಯನ್ನು ಕೇಂದ್ರ ಸರ್ಕಾರದಿಂದ ಅನುಷ್ಠಾನಗೊಳಿಸುವ…
ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾರ್ಚ್.1ರ ಇಂದು ಲಿಖಿತ ಪರೀಕ್ಷೆ ನಡೆಸಲಿದ್ದು ಸಕಲ ತಯಾರಿ ಮಾಡಿಕೊಂಡಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರು ರಾಣಿ ಚನ್ನಮ್ಮ, ಏಕಲವ್ಯ ಮಾದರಿ ಶಾಲೆ, ಅಟಲ್ ಬಿಹಾರಿ ವಾಜಪೇಯಿ ಶಾಲೆ, ಇಂದಿರಾಗಾಂಧಿ, ಅಂಬೇಡ್ಕರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್ ಇತ್ಯಾದಿ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ನೂರು ಅಂಕಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ತಿಳಿಸಿದ್ದಾರೆ. ಒಟ್ಟು 2.31 ಲಕ್ಷ ಮಂದಿ ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಿದ್ದು, 629 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬಹುತೇಕ ಎಲ್ಲ ತಾಲೂಕು ಕೇಂದ್ರಗಳಲ್ಲಿ ಕೂಡ ಪರೀಕ್ಷೆ ನಡೆಯಲಿದೆ. ಐದನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲು ಅರ್ಹತೆ ಪಡೆದಿದ್ದಾರೆ ಎಂದು ಅವರು ವಿವರಿಸಿದರು.
ಕರಾಚಿ: ಇರಾನ್ ಮೇಲಿನ ಇಸ್ರೇಲ್ ದಾಳಿ ಮತ್ತು ನಂತರದ ಗಲ್ಫ್ ಪ್ರದೇಶದಲ್ಲಿನ ದಾಳಿಗಳ ನಂತರ ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆಗಳ ನಡುವೆ ಪಾಕಿಸ್ತಾನವು ಸೌದಿ ಅರೇಬಿಯಾ ಮತ್ತು ಇತರ ಗಲ್ಫ್ ರಾಷ್ಟ್ರಗಳೊಂದಿಗೆ ಬಲವಾದ ಒಗ್ಗಟ್ಟನ್ನು ವ್ಯಕ್ತಪಡಿಸಿದೆ. ಉಲ್ಬಣಗೊಳ್ಳುತ್ತಿರುವ ಪರಿಸ್ಥಿತಿಯ ಕುರಿತು ಇಸ್ಲಾಮಾಬಾದ್ನ ನಿಲುವನ್ನು ತಿಳಿಸಲು ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ. X ನಲ್ಲಿ ಪೋಸ್ಟ್ ಮಾಡಿದ ಷರೀಫ್, “ಇಂದು ಸಂಜೆ, ನನ್ನ ಪ್ರೀತಿಯ ಸಹೋದರ, ಹಿಸ್ ರಾಯಲ್ ಹೈನೆಸ್ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತನಾಡಿದ್ದೇನೆ, ಇರಾನ್ ಮೇಲಿನ ಇಸ್ರೇಲ್ ದಾಳಿ ಮತ್ತು ನಂತರದ ಗಲ್ಫ್ ಪ್ರದೇಶದಲ್ಲಿನ ದಾಳಿಗಳ ನಂತರದ ಅಪಾಯಕಾರಿ ಪ್ರಾದೇಶಿಕ ಉಲ್ಬಣವನ್ನು ಪಾಕಿಸ್ತಾನ ತೀವ್ರವಾಗಿ ಖಂಡಿಸುತ್ತದೆ” ಎಂದು ಹೇಳಿದರು. “ಈ ಕಷ್ಟದ ಸಮಯದಲ್ಲಿ ಸೌದಿ ಅರೇಬಿಯಾ ಸಾಮ್ರಾಜ್ಯ ಮತ್ತು ಸಹೋದರಿ ಗಲ್ಫ್ ರಾಷ್ಟ್ರಗಳೊಂದಿಗೆ ಪಾಕಿಸ್ತಾನ ಸಂಪೂರ್ಣ ಒಗ್ಗಟ್ಟಿನಿಂದ ನಿಂತಿದೆ” ಎಂದು ಅವರು ಹೇಳಿದರು.…
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಈ ಸುಡುವ ಬಿಸಿಲಿನಲ್ಲಿ ದೇಹವನ್ನು ತಂಪಾಗಿರಿಸಲು ಮತ್ತು ಕಳೆದುಹೋದ ಚೈತನ್ಯವನ್ನು ಮರಳಿ ಪಡೆಯಲು ‘ಕಬ್ಬಿನ ಹಾಲು’ ಅತ್ಯುತ್ತಮ ನೈಸರ್ಗಿಕ ಪಾನೀಯವಾಗಿದೆ. ಕೇವಲ ಬಾಯಾರಿಕೆ ತಣಿಸುವುದು ಮಾತ್ರವಲ್ಲದೆ, ಕಬ್ಬಿನ ಹಾಲಿನಲ್ಲಿರುವ ಪೋಷಕಾಂಶಗಳು ದೇಹದ ಹತ್ತಾರು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತವೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ. ಕಬ್ಬಿನ ಹಾಲಿನ ಪ್ರಮುಖ 5 ಆರೋಗ್ಯ ಪ್ರಯೋಜನಗಳು: ತಕ್ಷಣದ ಶಕ್ತಿ ವರ್ಧಕ: ಕಬ್ಬಿನ ಹಾಲಿನಲ್ಲಿ ನೈಸರ್ಗಿಕ ಸಕ್ಕರೆ ಮತ್ತು ಗ್ಲೂಕೋಸ್ ಹೇರಳವಾಗಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ತಕ್ಷಣವೇ ಹೆಚ್ಚಿಸಿ, ಸುಸ್ತಾದ ದೇಹಕ್ಕೆ ತ್ವರಿತ ಚೈತನ್ಯ ನೀಡುತ್ತದೆ. ಬೇಸಿಗೆಯ ನಿರ್ಜಲೀಕರಣ (Dehydration) ತಡೆಯಲು ಇದು ಅತ್ಯುತ್ತಮ. ಜೀರ್ಣಕ್ರಿಯೆಗೆ ಸಹಕಾರಿ: ಇದರಲ್ಲಿರುವ ಪೊಟ್ಯಾಸಿಯಮ್ ಅಂಶವು ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ. ಹೊಟ್ಟೆಯ ಸೋಂಕುಗಳನ್ನು ತಡೆಯುವ ಜೊತೆಗೆ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಲು ಕಬ್ಬಿನ ಹಾಲು ಸಹಕಾರಿಯಾಗಿದೆ. ಕಿಡ್ನಿ ಆರೋಗ್ಯದ ರಕ್ಷಕ: ಕಬ್ಬಿನ ಹಾಲು ನೈಸರ್ಗಿಕವಾಗಿ ಮೂತ್ರವರ್ಧಕ (Diuretic) ಗುಣವನ್ನು ಹೊಂದಿದೆ.…
ಬಾಳೆಹೊನ್ನೂರು : ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯವಾಸಿಗಳ ಪಾತ್ರ ಮಹತ್ವದ್ದಾಗಿದ್ದು, ಅರಣ್ಯ ಇಲಾಖೆ ಯಾವುದೇ ಜನರ ವಿರುದ್ಧವಿಲ್ಲ. ಆದರೆ, ಸುಪ್ರೀಂಕೋರ್ಟ್ ತೀರ್ಪು ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅರಣ್ಯ ಕಾಯಿದೆ ಕಾನೂನುಗಳ ಪಾಲನೆ ಮಾಡುವ ನಿಟ್ಟಿನಲ್ಲಿ ಕೆಲವು ಅಸಮಾಧಾನಗಳಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬಾಳೆ ಹೊನ್ನೂರಿನ ನಾರಾಯಣ ಗುರು ಸಮುದಾಯ ಭವನದಲ್ಲಿಂದು ಆಯೋಜಿಸಲಾಗಿದ್ದ ಮಲೆನಾಡು ರೈತರ ಸಮಸ್ಯೆಗಳ ಕುರಿತ ಸಂವಾದದಲ್ಲಿ ಮಾತನಾಡಿದ ಅವರು, ಅರಣ್ಯ ಜಮೀನನ್ನು ಯಾರಿಗೂ ಪರಿಭಾರೆ ಮಾಡಲು ಅವಕಾಶವಿಲ್ಲ. ಆ ರೀತಿ ಅನ್ಯ ಉದ್ದೇಶಕ್ಕೆ ಕಾಡನ್ನು ಬಳಸಲು ಸರ್ವೋನ್ನತ ನ್ಯಾಯಾಲಯದ ಅನುಮತಿ ಮತ್ತು ಕೇಂದ್ರ ಸರ್ಕಾರದ ಸಮ್ಮತಿ ಅಗತ್ಯ ಎಂದು ಹೇಳಿದರು. ಸೆಕ್ಷನ್ 4 ಸಮಸ್ಯೆ ಸ್ವಾತಂತ್ರ್ಯಪೂರ್ವದಿಂದಲೂ ಇದೆ. ರಾಜ ಮಹಾರಾಜರ ಕಾಲದಲ್ಲೇ ಅಧಿಸೂಚನೆ ಆದ ಹಲವು ಪ್ರಕರಣ ಸೆಕ್ಷನ್ 17 ಆಗದೆ ಬಾಕಿ ಇದೆ. ಈಗ ಈ ಸಮಸ್ಯೆ ಪರಿಹರಿಸಲು ಸರ್ಕಾರ ಕಾನೂನು ವ್ಯಾಪ್ತಿಯಲ್ಲೇ ಪ್ರಯತ್ನಿಸುತ್ತಿದೆ ಎಂದ…
ಬೆಂಗಳೂರು: ನಗರದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ನೀರಿನ ಸಂಪು ಸ್ವಚ್ಥಗೊಳಿಸೋದಕ್ಕೆ ಇಳಿದಂತ ಸಂದರ್ಭದಲ್ಲಿ ಮೂವರು ಉಸಿರುಗಟ್ಟಿ ಅಸ್ವಸ್ಥಗೊಂಡು, ಆ ಬಳಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿರುವಂತ ಘಟನೆ ವೈಟ್ ಫೀಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನೀರಿನ ಸಂಪು ಸ್ವಚ್ಛಗೊಳಿಸೋದಕ್ಕೆ ಮಾಲೀಕರಾದಂತ ಮುನಿಶಾಮಪ್ಪ(67) ಎಂಬವರು ಇಳಿದಿದ್ದರು. ಅವರು ಸ್ವಚ್ಛಗೊಳಿಸಲು ತಂದಂತ ಕೆಲವು ರಾಸಾಯನಿಕದಿಂದ ಉಸಿರುಗಟ್ಟಿ ಸಂಪಿನೊಳಗೆ ಮೂರ್ಛೆ ಬಿದ್ದಿದ್ದರು. ಇದನ್ನು ಗಮನಿಸಿದಂತ ರುದ್ರ ಕುಮಾರ್(40) ಎಂಬವರು ರಕ್ಷಣೆಗೆ ತೆರಳಿ ಅವರು, ಉಸಿರುಗಟ್ಟಿ ಮೂರ್ಛೆ ಹೋಗಿದ್ದರು. ಆ ಬಳಿಕ ವಿಶ್ವನಾಥ್ ಆಚಾರಿ(24) ಎಂಬುವರು ರಕ್ಷಣೆಗೆ ಹೋಗಿ ಅವರು ಪ್ರಜ್ಞೆ ತಪ್ಪಿದ್ದರು. ಅಸ್ವಸ್ಥಗೊಂಡಿದ್ದಂತ ಮೂವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸಾಗಿಸಲು ಕೊಂಡೊಯ್ಯುವ ವೇಳೆಯಲ್ಲಿ ಮಾರ್ಗಮಧ್ಯದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮೃತರ ಪಾರ್ಥೀವ ಶರೀರವನ್ನು ವೈದೇಹಿ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆಗಾಗಿ ಇರಿಸಲಾಗಿದೆ. ಈ ಸಂಬಂಧ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/state-congress-government-is-cheating-dalits-and-doing-injustice-to-the-youth-chalavadi-narayanaswamy/
ಬೆಂಗಳೂರು: ಕಾಂಗ್ರೆಸ್ ಸರಕಾರವು ಒಳ ಮೀಸಲಾತಿ ಜಾರಿ ಮಾಡಿಲ್ಲ. ಇಷ್ಟು ದಿನಗಳ ಕಾಲ ನೀವು ದಲಿತರಿಗೂ ವಂಚನೆ ಮಾಡಿದ್ದೀರಿ; ಯುವಜನರಿಗೂ ಅನ್ಯಾಯ ಮಾಡಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಈ ಪರಿಸ್ಥಿತಿಗೆ ಸರಕಾರದ ಲೋಪ ಕಾರಣವೇ ಹೊರತು ಜನರ ಲೋಪ ಅಲ್ಲ. ಈಗ ಯಾವ ರೀತಿ ಮೀಸಲಾತಿ ಕೊಡುತ್ತೀರೆಂದು ಹೇಳಿ ಎಂದು ಸವಾಲು ಹಾಕಿದರು. ಈಗ ಮೀಸಲಾತಿ ಹಳೆ ರೀತಿಯಲ್ಲೇ ಕೊಡುವುದಾದರೆ ಅದು ಒಳ ಮೀಸಲಾತಿ ಆಗುವುದಿಲ್ಲ ಎಂದು ನುಡಿದರು. ಒಳ ಮೀಸಲಾತಿ ಕೊಡುವುದಾದರೆ ಶೇ 17 ರಂತೆ ಕೊಡಬೇಕು. ಅದು ಆಗುವುದಿಲ್ಲ. ಕೋರ್ಟಿನಲ್ಲಿ ಕೇಸಿದೆ. ಜಾರ್ಖಂಡ್, ಹರಿಯಾಣ, ತೆಲಂಗಾಣದಲ್ಲಿ ಕೊಟ್ಟಿದ್ದಾರೆ. ಎಸ್ಸಿ ಮೀಸಲಾತಿಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಜಾಸ್ತಿ ಆಗಿದೆ. ನೀವಿಲ್ಲಿ ಶೇ 50ರ ಮಿತಿ ಇದೆ ಎಂದಿದ್ದೀರಿ. ಆದರೆ, ಎಸ್ಸಿ, ಎಸ್ಟಿ ಮೀಸಲಾತಿಗೆ ಮಿತಿ ಇಲ್ಲ ಎಂದು ಗಮನ ಸೆಳೆದರು. ಅದನ್ನು ಮನವರಿಕೆ ಮಾಡಿಕೊಡದೇ ಸರಕಾರ ವಿಫಲವಾಗಿದೆ.…
ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ (ಮಾ.1) ಲಿಖಿತ ಪರೀಕ್ಷೆ ನಡೆಸಲಿದ್ದು ಸಕಲ ತಯಾರಿ ಮಾಡಿಕೊಂಡಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರು ರಾಣಿ ಚನ್ನಮ್ಮ, ಏಕಲವ್ಯ ಮಾದರಿ ಶಾಲೆ, ಅಟಲ್ ಬಿಹಾರಿ ವಾಜಪೇಯಿ ಶಾಲೆ, ಇಂದಿರಾಗಾಂಧಿ, ಅಂಬೇಡ್ಕರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್ ಇತ್ಯಾದಿ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ನೂರು ಅಂಕಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ತಿಳಿಸಿದ್ದಾರೆ. ಒಟ್ಟು 2.31 ಲಕ್ಷ ಮಂದಿ ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಿದ್ದು, 629 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬಹುತೇಕ ಎಲ್ಲ ತಾಲೂಕು ಕೇಂದ್ರಗಳಲ್ಲಿ ಕೂಡ ಪರೀಕ್ಷೆ ನಡೆಯಲಿದೆ. ಐದನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲು ಅರ್ಹತೆ ಪಡೆದಿದ್ದಾರೆ ಎಂದು ಅವರು ವಿವರಿಸಿದರು. https://kannadanewsnow.com/kannada/iran-israel-conflict-iranian-defense-minister-revolutionary-guard-commander-killed/














