Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ತುಮಕೂರು: ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಕಟಿಬದ್ಧವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ರಾಜ್ಯ ಸರ್ಕಾರಕ್ಕೆ ಮೂರು ವರ್ಷಗಳು ಪೂರೈಸಿರುವ ಸಂಭ್ರಮದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ “ಪ್ರಗತಿಯತ್ತ ಕರ್ನಾಟಕ” ಮೂರು ವರ್ಷಗಳ ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶವನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ತುಮಕೂರು ಜಿಲ್ಲೆಯಲ್ಲಿ ನಡೆದಿರುವ 682 ಕೋಟಿ ಮೊತ್ತದ ಬೃಹತ್ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಕಂದಾಯ ಇಲಾಖೆಯ ಹಕ್ಕು ಪತ್ರಗಳನ್ನು ವಿತರಿಸಿದ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು ಬಡವರು, ರೈತರು, ಕಾರ್ಮಿಕರು ಮತ್ತು ಶೋಷಿತರ ಸ್ವಾಭಿಮಾನದ ಬದುಕಿಗಾಗಿ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದಕ್ಕಾಗಿ ಈ ನಾಲ್ಕು ವರ್ಷಗಳಲ್ಲಿ ಬರೋಬ್ಬರಿ 2 ಲಕ್ಷ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗುತ್ತಿದೆ ಎಂದರು. ಹಲವು ದಶಕಗಳಿಂದ ರಾಜ್ಯದ ಹಟ್ಟಿ, ತಾಂಡ,…

Read More

ಬೆಂಗಳೂರು: ತಾತ್ಕಾಲಿಕವಾಗಿ ವಿದ್ಯುತ್ ಮೀಟರ್‌ಗೆ ಸಂಪರ್ಕ ಕಲ್ಪಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಬೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತ (AEE) ಹಾಗೂ ವಿದ್ಯುತ್ ಗುತ್ತಿಗೆದಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಗರದ ಜೆ.ಪಿ. ನಗರದ ಬಳಿಯ ಗೌರವ್ ನಗರದಲ್ಲಿರುವ ಬೆಸ್ಕಾಂ ಕಚೇರಿಯಲ್ಲಿ ಈ ದಾಳಿ ನಡೆದಿದ್ದು, ಬೆಸ್ಕಾಂ ಎಇಇ ಮನೋಜ್ ಕುಮಾರ್ ಮತ್ತು ವಿದ್ಯುತ್ ಗುತ್ತಿಗೆದಾರ ಕಾಂತರಾಜು ಬಂಧಿತ ಆರೋಪಿಗಳಾಗಿದ್ದಾರೆ. ಘಟನೆಯ ವಿವರ: ರಘುರಾಜ್ ಎಂಬುವವರು ತಮ್ಮ ಕಟ್ಟಡದ ತಾತ್ಕಾಲಿಕ ಮೀಟರ್‌ಗೆ ವಿದ್ಯುತ್ ಪೂರೈಕೆ ಕಲ್ಪಿಸುವಂತೆ ಬೆಸ್ಕಾಂ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಈ ಕೆಲಸ ಮಾಡಿಕೊಡಲು ಎಇಇ ಮನೋಜ್ ಕುಮಾರ್ 50,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಲ್ಲದೆ, ಲಂಚದ ಹಣವನ್ನು ವಿದ್ಯುತ್ ಗುತ್ತಿಗೆದಾರ ಕಾಂತರಾಜು ಕೈಗೆ ನೀಡುವಂತೆ ಅರ್ಜಿದಾರ ರಘುರಾಜ್ ಅವರಿಗೆ ಸೂಚಿಸಿದ್ದರು. ಲಂಚ ನೀಡಲು ಇಷ್ಟವಿಲ್ಲದ ರಘುರಾಜ್ ಅವರು ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ, ಇಂದು ರಘುರಾಜ್ ಅವರಿಂದ ಗುತ್ತಿಗೆದಾರ ಕಾಂತರಾಜು 50,000 ರೂಪಾಯಿ ಲಂಚದ ಹಣವನ್ನು…

Read More

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್. ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ ಸೇರಿದಂತೆ ಇತರ ಸರ್ಕಾರಿ ಹಾಸ್ಟೆಲ್ ಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಈ ಸೀಟು ಹಂಚಿಕೆಗೆ ಏನಾದರೂ ಆಕ್ಷೇಪಣೆಗಳು ಅಥವಾ ಬದಲಾವಣೆಗಳು ಇದ್ದಲ್ಲಿ ಮೇ‌ 21ರೊಳಗೆ ಆಯಾ ಶಾಲೆಗಳಲ್ಲಿಯೇ ಲಿಖಿತವಾಗಿ ಸಲ್ಲಿಸಲು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಸೂಚಿಸಿದ್ದಾರೆ.

Read More

ಶಿವಮೊಗ್ಗ: ಮೀಸಲು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಜಾಗದಲ್ಲಿ ಅಕ್ರಮವಾಗಿ ಮಣ್ಣಿನಲ್ಲಿ ಮುಚ್ಚಿಡಲಾಗಿದ್ದ ಬೀಟೆ ಜಾತಿಯ ಮರದ ನಾಟಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿ ಪತ್ತೆ ಹಚ್ಚಿ, ಜಪ್ತಿ ಮಾಡಿದ್ದಾರೆ. ಈ ಸಂಬಂಧ ಹೊಸನಗರ ವಲಯ ಅರಣ್ಯ ಕಚೇರಿಯಲ್ಲಿ ಮೊಕದ್ದಮೆ ದಾಖಲಾಗಿದೆ. ಘಟನೆಯ ವಿವರ ಖಚಿತ ಮಾಹಿತಿ ಮೇರೆಗೆ ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿ, ನಂದ್ರಿ ಗ್ರಾಮದ ಸರ್ವೆ ನಂಬರ್ 15ರ ನಂದ್ರಿ ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ವರ್ಗಾವಣೆಗೊಂಡ ಅರಣ್ಯ ಪ್ರದೇಶದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು. ಅಲ್ಲಿನ ಒತ್ತುವರಿ ಜಮೀನಿನಲ್ಲಿರುವ ಕೃಷಿ ಹೊಂಡದ ಪಕ್ಕದಲ್ಲಿ, ಅಂದಾಜು 2 ರಿಂದ 3 ವರ್ಷಗಳ ಹಿಂದೆ ಕಡಿತಲೆ ಮಾಡಲಾಗಿದ್ದ 14 ಬೀಟೆ ಜಾತಿಯ ಮರದ ನಾಟದ ತುಂಡುಗಳನ್ನು ಮಣ್ಣಿನಲ್ಲಿ ಮುಚ್ಚಿ ಅಕ್ರಮವಾಗಿ ದಾಸ್ತಾನು ಮಾಡಿಟ್ಟಿರುವುದು ಪತ್ತೆಯಾಗಿದೆ. ಸದ್ಯ ಈ ಎಲ್ಲಾ ಬೀಟೆ ಮರದ ತುಂಡುಗಳನ್ನು ಅರಣ್ಯ ಇಲಾಖೆಯು ತನ್ನ ವಶಕ್ಕೆ (ಅಮಾನತ್ತು) ಪಡೆದುಕೊಂಡಿದೆ. ಇದರ ಮೌಲ್ಯ 6.50 ಲಕ್ಷಕ್ಕೂ ಹೆಚ್ಚು ಎಂದು ಹೇಳಲಾಗುತ್ತಿದೆ. ಆರೋಪಿ…

Read More

ಮಡಿಕೇರಿ: ಕೊಡಗಿನ ಪ್ರಸಿದ್ಧ ದುಬಾರೆ ಆನೆ ಶಿಬಿರದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಸಾಕಾನೆಗಳ ನಡುವೆ ನಡೆದ ಭೀಕರ ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ‘ಮಾರ್ತಾಂಡ’ ಆನೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದೆ. ಇದೇ ಕಾಳಗದ ವೇಳೆ ಆನೆಗಳ ಕೆಳಗೆ ಸಿಲುಕಿ ಪ್ರವಾಸಿ ಮಹಿಳೆಯೊಬ್ಬರು ಸಹ ಮೃತಪಟ್ಟಿದ್ದಾರೆ. ಈ ಅನಿರೀಕ್ಷಿತ ಮತ್ತು ಊಹಿಸಲೂ ಆಗದ ದುರ್ಘಟನೆಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ದಸರಾ ಆನೆ ‘ಕಂಜನ್’ಗೆ ಶಾಕ್: ಜಂಬೂಸವಾರಿಯಿಂದ ಕೊಕ್! ಮಾರ್ತಾಂಡ ಆನೆಯ ಮೇಲೆ ದಾಳಿ ನಡೆಸಿ, ಸಾವಿಗೆ ಕಾರಣವಾದ ದಸರಾ ಆನೆ ‘ಕಂಜನ್’ ವಿರುದ್ಧ ಅರಣ್ಯ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ಇನ್ಮುಂದೆ ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಗೆ ಕಂಜನ್ ಆನೆಯನ್ನು ಬಳಸದಂತೆ ಸಚಿವ ಈಶ್ವರ ಖಂಡ್ರೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಮೂಲಕ ಕಂಜನ್ ಆನೆಯನ್ನು ದಸರಾ ಮಹೋತ್ಸವದಿಂದ ಸಂಪೂರ್ಣವಾಗಿ ಹೊರಗಿಡಲಾಗಿದೆ.…

Read More

ಕುಕನೂರು: ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿರುವ ಅತ್ಯಂತ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಯರೇಹಂಚಿನಾಳ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ ನಿವಾಸಿಗಳಾದ ಲಕ್ಷ್ಮವ್ವ ಹರಣಿಶಿಕಾರಿ ಮತ್ತು ಮುತ್ತವ್ವ ಹರಣಿಶಿಕಾರಿ ಎಂದು ಗುರುತಿಸಲಾಗಿದೆ. ಬಟ್ಟೆ ತೊಳೆಯಲು ಹೋದಾಗ ಸಂಭವಿಸಿದ ದುರಂತ: ಬಾಲಕಿಯರಿಬ್ಬರು ಯರೇಹಂಚಿನಾಳ ಗ್ರಾಮದ ಬಳಿ ಇರುವ ಕೃಷಿ ಹೊಂಡಕ್ಕೆ ಬಟ್ಟೆ ತೊಳೆಯಲೆಂದು ಹೋಗಿದ್ದರು. ಈ ಸಂದರ್ಭದಲ್ಲಿ ಬಟ್ಟೆ ತೊಳೆಯುವಾಗ ಆಕಸ್ಮಿಕವಾಗಿ ಕಾಲುಜಾರಿ ಹೊಂಡದ ನೀರಿಗೆ ಬಿದ್ದಿದ್ದಾರೆ. ನೀರಿನ ಆಳ ಹೆಚ್ಚಾಗಿದ್ದರಿಂದ ಇಬ್ಬರಿಗೂ ಈಜಲು ಬಾರದೆ ಹೊಂಡದಲ್ಲೇ ಮುಳುಗಿ ಉಸಿರುಗಟ್ಟಿ ಕೊನೆಯುಸಿರೆಳೆದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕರು ಬಾಲಕಿಯರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಒಂದೇ ಗ್ರಾಮದ ಇಬ್ಬರು ಹೆಣ್ಣುಮಕ್ಕಳು ಈ ರೀತಿ ದುರ್ಮರಣಕ್ಕೀಡಾಗಿರುವುದು ಹೆತ್ತವರ ಒಡಲು ಸೀಳುವಂತೆ ಮಾಡಿದ್ದು, ತಿಮ್ಮಾಪುರ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು…

Read More

ಕೋಲಾರ: ಬಂಡೆ ಬ್ಲಾಸ್ಟಿಂಗ್ ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಸಿಡಿಮದ್ದು ಸಿಡಿದು ನಾಲ್ವರು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಕದರೇನಹಳ್ಳಿಯಲ್ಲಿ ನಡೆದಿದೆ. ಕದರೇನಹಳ್ಳಿಯ ಟೇಕಲ್ ಬೆಟ್ಟದ ಬಳಿ ಇರುವ ಹನುಮಂತಪ್ಪ ಎಂಬುವವರಿಗೆ ಸೇರಿದ ಬಂಡೆಯಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಬಂಡೆಯನ್ನು ಒಡೆಯಲು ಸಿಡಿಮದ್ದು ಇಡುತ್ತಿದ್ದ ವೇಳೆ ಈ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ನಾಲ್ವರಿಗೆ ಗಾಯ, ಆಸ್ಪತ್ರೆಗೆ ದಾಖಲು: ಸ್ಫೋಟದ ತೀವ್ರತೆಗೆ ಕೊಪ್ಪಳ ಮೂಲದ ಚಿರಂಜೀವಿ, ರಾಮು, ಹೇಮಂತ್ ಹಾಗೂ ರಾಜು ಎಂಬುವವರು ಗಾಯಗೊಂಡಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳೀಯರು ಮತ್ತು ಸಹೋದ್ಯೋಗಿಗಳು ಗಾಯಾಳುಗಳನ್ನು ರಕ್ಷಿಸಿ, ಚಿಕಿತ್ಸೆಗಾಗಿ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳಿಗೆ ಸದ್ಯ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬ್ಲಾಸ್ಟಿಂಗ್ ನಡೆಸಲು ಸೂಕ್ತ ಪರವಾನಗಿ ಇತ್ತೇ ಮತ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತೇ ಎಂಬ ಬಗ್ಗೆ ಪೊಲೀಸರು…

Read More

ತುಮಕೂರು : “2028 ಕ್ಕೆ ಈ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ. ಜನತಾದಳ ಹಾಗೂ ಬಿಜೆಪಿಯವರು ಇದನ್ನು ಬರೆದಿಟ್ಟುಕೊಳ್ಳಿ‌. ಜನರು ಕೂಡ ಇದನ್ನು ನೆನಪಿನಲ್ಲಿಟ್ಟುಕೊಳ್ಳಿ” ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ ಅವರು ಹೇಳಿದರು. ರಾಜ್ಯ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಮಂಗಳವಾರ ನಡೆದ ‘ಸಾರ್ಥಕ ಸೇವೆಯ ಸಮರ್ಪಣೆ’ ಸಮಾವೇಶದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ನಿಮ್ಮ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಬದುಕಿನಲ್ಲಿ ಬದಲಾವಣೆ ತಂದಿದೆ. ಇಡೀ ದೇಶಕ್ಕೆ ಒಂದು ಮಾದರಿ ಸರ್ಕಾರವನ್ನು ಕೊಟ್ಟಿದೆ, ಅದನ್ನು ಉಳಿಸಿಕೊಂಡು ಹೋಗುತ್ತೇವೆ. ನಿಮ್ಮ ಆಶೀರ್ವಾದ ಸದಾ ಇರಲಿ. ಪರಿಶ್ರಮ ಇದ್ದ ಕಡೆ ಇತಿಹಾಸ ಸೃಷ್ಟಿ ಆಗುತ್ತದೆ. ನಂಬಿಕೆ ಇದ್ದ ಕಡೆ ಅದ್ಭುತಗಳು ನಡೆಯುತ್ತವೆ. ಸತ್ಯ ಇದ್ದ ಕಡೆ ಗೆಲುವು ಇದ್ದೇ ಇರುತ್ತದೆ” ಎಂದು ಹೇಳಿದರು. ‌ “ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದವರು ನಡೆಸಿದ ಅಧ್ಯಯನದ ಪ್ರಕಾರ, ಕರ್ನಾಟಕದ ಪಂಚ ಗ್ಯಾರಂಟಿಗಳು ಇಡೀ ವಿಶ್ವದಲ್ಲೇ ಬಡವರ ಬದುಕಿನಲ್ಲಿ ಸಾಮಾಜಿಕ ಬದಲಾವಣೆಯನ್ನು ತಂದಂತಹ ಕಾರ್ಯಕ್ರಮಗಳಾಗಿವೆ. ಇವು…

Read More

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚಿಟ್ಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ಇತ್ತೀಚೆಗೆ ನಾನು ಪತ್ರಿಕೆಯೊಂದರಲ್ಲಿ ಅನ್ನದಾತರ ಆತ್ಮಹತ್ಯೆ ಹೆಚ್ಚಳ ಎನ್ನುವ ವರದಿಯೊಂದನ್ನು ಓದಿದೆ. ಅದನ್ನು ಓದಿ ನನಗೆ ತೀವ್ರ ಆಘಾತ ಉಂಟಾಯಿತು. ಹನ್ನೆರಡು ದಿನಗಳ ಹಿಂದೆ ಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾಗಿದ್ದ ಈ ವರದಿಯನ್ನು ಓದಿ ಈ ಸರ್ಕಾರ ಕಣ್ತೆರೆಯುತ್ತದೆ ಎಂದು ಭಾವಿಸಿದ್ದೆ. ಆದರೆ, ಸಾಧನಾ ಸಮಾವೇಶಗಳನ್ನು ಮಾಡುವುದರಲ್ಲಿ ಸಂಭ್ರಮಿಸುತ್ತಿರುವ ಈ ಸರ್ಕಾರಕ್ಕೆ ರೈತರ ಹಿತಾಸಕ್ತಿ ಬೇಕಾಗಿಲ್ಲ ಎಂದು ಕಿಡಿಕಾರಿದರು. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ವರದಿಯ ಪ್ರಕಾರ ರಾಜ್ಯದಲ್ಲಿ 2023ರಲ್ಲಿ 2,423 ಹಾಗೂ 2024ರಲ್ಲಿ 2,971 ರೈತರು, ಕೃಷಿ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ವರ್ಷಗಳಲ್ಲಿ ಒಟ್ಟು 5,394 ರೈತರು ಜೀವ ಚೆಲ್ಲಿದ್ದಾರೆ. ಕರ್ನಾಟಕ ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಎರಡನೇ ಸ್ಥಾನದಲ್ಲಿದೆ.…

Read More

ಬೆಂಗಳೂರು: ಬೆಂಗಳೂರು ನಗರ ಹಾಗೂ ಹೊರವಲಯದ ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ ಗುಣಮಟ್ಟದ ಸಾರಿಗೆ ಸೌಲಭ್ಯವನ್ನು ಕಲ್ಪಿಸುತ್ತಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (BMTC), ಇದೀಗ ತನ್ನ ಸೇವೆಯನ್ನು ಮತ್ತಷ್ಟು ವಿಸ್ತರಿಸಿದೆ. ಸಾರ್ವಜನಿಕರ ಬೇಡಿಕೆಗೆ ಸ್ಪಂದಿಸುವ ನಿಟ್ಟಿನಲ್ಲಿ ಸಂಸ್ಥೆಯು ಬೆಂಗಳೂರು ಮತ್ತು ತುಮಕೂರು ನಡುವೆ ನೂತನ ವೋಲ್ವೋ ಹವಾನಿಯಂತ್ರಿತ (AC) ಬಸ್ ಸೇವೆಗಳನ್ನು ಪ್ರಾರಂಭಿಸಿದೆ. ಪ್ರತಿದಿನ ಲಕ್ಷಾಂತರ ಪ್ರಯಾಣಿಕರಿಗೆ ಸೇವೆ: ಪ್ರಸ್ತುತ ಬಿಎಂಟಿಸಿ ಸಂಸ್ಥೆಯು 50 ಘಟಕಗಳಿಂದ ವಿವಿಧ ಮಾದರಿಯ ಬಸ್ಸುಗಳ ಮೂಲಕ ಪ್ರತಿದಿನ 6,275 ಅನುಸೂಚಿಗಳಿಂದ 65,952 ಸುತ್ತುವಳಿಗಳನ್ನು ಕಾರ್ಯಾಚರಿಸುತ್ತಿದೆ. ಪ್ರತಿದಿನ ಸುಮಾರು 13.06 ಲಕ್ಷ ಕಿಲೋಮೀಟರ್ ವ್ಯಾಪ್ತಿಯಲ್ಲಿ ಸಾರಿಗೆ ಸೌಲಭ್ಯ ಒದಗಿಸುತ್ತಿದ್ದು, ಸರಾಸರಿ 45 ಲಕ್ಷ ಪ್ರಯಾಣಿಕರು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಇವುಗಳ ಪೈಕಿ 1,741 ಎಲೆಕ್ಟ್ರಿಕ್ ಬಸ್ಸುಗಳನ್ನು ಸಹ ಕಾರ್ಯಾಚರಣೆ ಮಾಡಲಾಗುತ್ತಿದೆ. ಹೊರವಲಯದ ಸಾರಿಗೆ ಸಂಪರ್ಕ: ಸಂಸ್ಥೆಯು ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ 145 ಅನುಸೂಚಿಗಳಿಂದ 1,332 ಸುತ್ತುವಳಿಗಳನ್ನು ಹಾಗೂ ಬಿಡದಿ ವ್ಯಾಪ್ತಿಯಲ್ಲಿ 136 ಅನುಸೂಚಿಗಳಿಂದ…

Read More