Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿ ತೀವ್ರಗೊಂಡಿರುವ ಬೆನ್ನಲ್ಲೇ, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿದ್ದ ಭಾರತೀಯರನ್ನು ತಾಯ್ನಾಡಿಗೆ ಕರೆತರುವ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. ಈವರೆಗೆ ಒಟ್ಟು 52,000ಕ್ಕೂ ಹೆಚ್ಚು ಭಾರತೀಯರು ವಿವಿಧ ವಿಮಾನಯಾನ ಸಂಸ್ಥೆಗಳ ಮೂಲಕ ಸುರಕ್ಷಿತವಾಗಿ ಸ್ವದೇಶಕ್ಕೆ ಮರಳಿದ್ದಾರೆ. ನಿಲ್ಲದ ದಾಳಿ – ಹೆಚ್ಚಿದ ಆತಂಕ: ಇರಾನ್ ಪ್ರಮುಖ ನಗರಗಳ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ಪಡೆಗಳು ನಿರಂತರವಾಗಿ ವಾಯುದಾಳಿ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಇಡೀ ಪಶ್ಚಿಮ ಏಷ್ಯಾದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದ್ದು, ಅಲ್ಲಿ ನೆಲೆಸಿರುವ ಭಾರತೀಯರ ರಕ್ಷಣೆಗೆ ಭಾರತ ಸರ್ಕಾರ ಯುದ್ಧೋಪಾದಿಯಲ್ಲಿ ಕ್ರಮ ಕೈಗೊಂಡಿದೆ. ವಿಮಾನಯಾನ ಸಂಸ್ಥೆಗಳ ರಕ್ಷಣಾ ಕಾರ್ಯಾಚರಣೆ: ಭಾರತೀಯರನ್ನು ಕರೆತರಲು ಖಾಸಗಿ ಮತ್ತು ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆಗಳು ಹಗಲಿರುಳು ಶ್ರಮಿಸುತ್ತಿವೆ. ಸ್ವದೇಶಕ್ಕೆ ಮರಳಿದವರ ಅಂಕಿ-ಅಂಶಗಳು ಹೀಗಿವೆ: ಇಂಡಿಗೋ (IndiGo): ಅತಿ ಹೆಚ್ಚು ಅಂದರೆ 1,63,000* ಭಾರತೀಯರನ್ನು ಕರೆತರುವಲ್ಲಿ ಯಶಸ್ವಿಯಾಗಿದೆ. ಸ್ಪೈಸ್ ಜೆಟ್ (SpiceJet): 6,597 ಭಾರತೀಯರ ಸುರಕ್ಷಿತ ವಾಪಸಾತಿ. ಏರ್ ಇಂಡಿಯಾ (Air…
ಟೆಹ್ರಾನ್/ಜೆರುಸಲೆಂ: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ಮತ್ತಷ್ಟು ಕವಿದಿದ್ದು, ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಭೀಕರ ಜಂಟಿ ದಾಳಿಯಲ್ಲಿ ಮೃತರ ಸಂಖ್ಯೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಈ ಸಂಘರ್ಷದ ಕಿಚ್ಚು ಇಡೀ ಗಲ್ಫ್ ರಾಷ್ಟ್ರಗಳಿಗೆ ಹರಡುತ್ತಿದ್ದು, ಜಾಗತಿಕ ಮಟ್ಟದಲ್ಲಿ ಆತಂಕ ಸೃಷ್ಟಿಸಿದೆ. ದಾಳಿಯ ಭೀಕರತೆ: ಇರಾನ್ನ ಆಯಕಟ್ಟಿನ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ಮತ್ತು ಇಸ್ರೇಲ್ ಪಡೆಗಳು ನಡೆಸಿದ ವಾಯುದಾಳಿ ಮತ್ತು ಕ್ಷಿಪಣಿ ದಾಳಿಯಲ್ಲಿ ಈವರೆಗೆ 1,332 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇರಾನ್ನ ಪ್ರಮುಖ ಸೇನಾ ನೆಲೆಗಳು ಹಾಗೂ ಪರಮಾಣು ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶಗಳು ಈ ದಾಳಿಯಿಂದ ತತ್ತರಿಸಿವೆ. ಇರಾನ್ ಪ್ರತಿದಾಳಿ ಮತ್ತು ಸಾವು-ನೋವು: ಈ ಜಂಟಿ ದಾಳಿಗೆ ಪ್ರತಿಯಾಗಿ ಇರಾನ್ ಕೂಡ ಇಸ್ರೇಲ್ ಮೇಲೆ ಕ್ಷಿಪಣಿಗಳ ಮಳೆಗರೆದಿದೆ. ಇರಾನ್ ನಡೆಸಿದ ಪ್ರತಿದಾಳಿಯಿಂದ ಇಸ್ರೇಲ್ನಲ್ಲಿ ಈವರೆಗೆ 11 ಜನರು ಸಾವನ್ನಪ್ಪಿದ್ದಾರೆ. ಗಲ್ಫ್ ರಾಷ್ಟ್ರಗಳ ಮೇಲೆ ಪರಿಣಾಮ: ಸಂಘರ್ಷವು ಕೇವಲ ಇರಾನ್-ಇಸ್ರೇಲ್ ನಡುವೆ ಸೀಮಿತವಾಗಿಲ್ಲ. ಇಡೀ ಗಲ್ಫ್ ವಲಯದಲ್ಲಿ ಉದ್ವಿಗ್ನತೆ…
ಹಾಸನ: ಜಿಲ್ಲೆಯ ಕೆರೆಯೊಂದಕ್ಕೆ ಈಜಲು ತೆರಳಿದ್ದಂತ ಇಬ್ಬರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವಂತ ಘಟನೆ ಓಂನಗರ ಗ್ರಾಮದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಓಂನಗರ ಗ್ರಾಮದಲ್ಲಿನ ಪ್ರಕಾಶ್ ಎಂಬುವರ ಕಾಫಿ ತೋಟದ ಕೆರೆಯಲ್ಲಿ ಈಜಾಡಲು ತೆರಳಿದ್ದರು. ಆದರೇ ನಾಲ್ವರ ಪೈಕಿ ಕೆಸರಲ್ಲಿ ಸಿಲುಕಿ ವಿದ್ಯಾರ್ಥಿಗಳಾದಂತ ಭರತ್(18), ಮಿಥುನ್(19) ಎಂಬುವರು ಸಾವನ್ನಪ್ಪಿದ್ದಾರೆ. ಮೃತ ಭರತ್ ಹಾಗೂ ಮಿಥುನ್ ಪಾಳ್ಯ ಸರ್ಕಾರಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ನಾಲ್ವರ ಸ್ನೇಹಿತರು ಕೆರೆಗೆ ಈಜಾಡೋದಕ್ಕೆ ತೆರಳಿದ್ದರು. ಆದರೇ ಕೆಸರಲ್ಲಿ ಸಿಲುಕಿ ಭರತ್, ಮಿಥುನ್ ಸಾವನ್ನಪ್ಪಿದರೇ ಮತ್ತಿಬ್ಬರು ದಡ ಸೇರಿದ್ದಾರೆ. ಮೃತರಿಬ್ಬರ ಶವಗಳನ್ನು ಸ್ಥಳೀಯರು ಕೆರೆಯಿಂದ ಹೊರ ತಂದಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಭರತ್, ಮಿಥುನ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. https://kannadanewsnow.com/kannada/siddaramaiah-out-of-the-chief-ministers-post/ https://kannadanewsnow.com/kannada/breaking-if-the-high-command-allows-two-more-budgets-will-be-presented-siddaramaiah-indirectly-says-i-am-the-cm/
ಮೈಸೂರು: ಸತತ 17ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸಿ ಸಿಎಂ ಸಿದ್ಧರಾಮಯ್ಯ ದಾಖಲೆ ಬರೆದಿದ್ದಾರೆ. ಇದರ ಬೆನ್ನಲ್ಲೇ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಯೋ ಅನುಮಾನಕ್ಕೂ ಕಾರಣವಾಗಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಅವರ ಹೇಳಿಕೆಯಾಗಿದೆ. ಇಂದು ಮೈಸೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಕಾಂಗ್ರೆಸ್ ಹೈಕಮಾಂಡ್ ಅವಕಾಶ ಕೊಟ್ಟರೇ ಮತ್ತೆ ಎರಡು ಬಜೆಟ್ ಮಂಡನೆ ಮಾಡಲಿದ್ದೇನೆ. ಅವರು ಮುಂದುವರೆಯಿರಿ ಅಂತ ಹೇಳಿದ್ರೆ ಮುಂದುವರೆಯುತ್ತೇನೆ. ಇದೆಲ್ಲವೂ ಕಾಂಗ್ರೆಸ್ ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ ಎಂದು ಹೇಳುವ ಮೂಲಕ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲಿದ್ದಾರಾ ಸಿದ್ಧರಾಮಯ್ಯ ಎನ್ನುವ ಅನುಮಾನವನ್ನು ಹುಟ್ಟು ಹಾಕಿದ್ದಾರೆ. ನನಗೆ ಯಾರು ಏನು ಹೇಳುತ್ತಾರೆ ಎಂಬುದು ಮುಖ್ಯವಲ್ಲ. ನನಗೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವಷ್ಟೇ ಮುಖ್ಯವಾಗಿದೆ. ನನಗೆ ಹೈಕಮಾಂಡ್ ಬಗ್ಗೆ ಸಂಪೂರ್ಣ ವಿಶ್ವಾಸವಿದೆ. ಮೈಸೂರು ಜನತೆಯಲ್ಲ, ಇಡೀ ನಾಡಿನ ಜನ ನಾನು ಇರಬೇಕೆಂದು ಬಯಸಿದ್ದಾರೆ ಎಂದರು. ನಾನು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ನನಗೆ ಬಜೆಟ್ ದಾಖಲೆಗಳ ಮೇಲೆ ನಂಬಿಕೆಯಿಲ್ಲ. ಆದರೇ ಇನ್ನೂ ಎರಡು ಬಜೆಟ್…
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವಂತವರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ಅತಿಥಿ ಉಪನ್ಯಾಸಕರಿಗೆ ಇನ್ಮುಂದೆ 90 ದಿನಗಳ ಮಾತೃತ್ವ ರಜೆಯನ್ನು ನೀಡುವುದಾಗಿ ಘೋಷಿಸಿದ್ದಾರೆ. ಶುಕ್ರವಾರದಂದು ರಾಜ್ಯ ಬಜೆಟ್ ಮಂಡಿಸಿ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ರಾಜ್ಯದ ಸರ್ಕಾರಿ ಶಆಲಾ ಕಾಲೇಜುಗಳಲ್ಲಿ 10, 12ನೇ ತರಗತಿ ವ್ಯಾಸಂಗ ಮಾಡಿ 2025-26ನೇ ಸಾಲಿನಿಂದ ಉನ್ನತ ಶಿಕ್ಷಣವನ್ನು ಮುಂದುವರೆಸುತ್ತಿರೋ 37,000 ವಿದ್ಯಾರ್ಥಿನಿಯರಿಗೆ ವಾರ್ಷಿಕ 30,000 ವಿದ್ಯಾರ್ಥಿ ವೇತನವನ್ನು ಅಜೀಂ ಪ್ರೇಮ್ ಫೌಂಡೇಶನ್ ವತಿಯಿಂದ ನೀಡಲಾಗುತ್ತದೆ ಎಂದರು. ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂದ್ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗಒಳಿಸುವುದಾಗಿ ಘೋಷಿಸಿದ್ದಾರೆ. https://kannadanewsnow.com/kannada/gang-of-interstate-thieves-arrested-in-belgaum-21-vehicles-worth-rs-95-lakh-seized/ https://kannadanewsnow.com/kannada/breaking-if-the-high-command-allows-two-more-budgets-will-be-presented-siddaramaiah-indirectly-says-i-am-the-cm/
ಬೆಳಗಾವಿ: ಅಂತರರಾಜ್ಯ ಹಾಗೂ ಅಂತರ ಜಿಲ್ಲಾ ಮಟ್ಟದಲ್ಲಿ ಸಂಘಟಿತವಾಗಿ ವಾಹನಗಳ ಕಳ್ಳತನ ನಡೆಸುತ್ತಿದ್ದ ಕುಖ್ಯಾತ ಗ್ಯಾಂಗ್ ಒಂದನ್ನು ಬೆಳಗಾವಿಯ ಮಾರಿಹಾಳ ಠಾಣೆ ಪೊಲೀಸರು ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಬಂಧಿತರಿಂದ ಸುಮಾರು 95.50 ಲಕ್ಷ ರೂಪಾಯಿ ಮೌಲ್ಯದ ಒಟ್ಟು 21 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. 2025ರ ನವೆಂಬರ್ ತಿಂಗಳಲ್ಲಿ ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ನೀಲಜಿ ಗ್ರಾಮದ ಮನೆಯೊಂದರ ಮುಂದೆ ನಿಲ್ಲಿಸಿದ್ದ ಅಶೋಕ್ ಲೇಲ್ಯಾಂಡ್ ಮಿನಿ ಗೂಡ್ಸ್ ಟ್ರಕ್ ಕಳ್ಳತನವಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದರು. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ತಂಡಕ್ಕೆ ಈ ಬೃಹತ್ ಕಳ್ಳತನದ ಜಾಲದ ಸುಳಿವು ಲಭಿಸಿದೆ. ಕಳ್ಳತನದ ವಿಶಿಷ್ಟ ಶೈಲಿ (Modus Operandi): ಶಿವಮೊಗ್ಗ, ಭದ್ರಾವತಿ ಹಾಗೂ ಮಹಾರಾಷ್ಟ್ರದ ಸಾಂಗ್ಲಿ ಮೂಲದ ಮೂವರು ಆರೋಪಿಗಳು ಈ ಜಾಲದ ಮುಖ್ಯಸ್ಥರಾಗಿದ್ದರು. ಇವರ ಕಾರ್ಯವೈಖರಿ ಹೀಗಿತ್ತು: ಮೊದಲು ವಿವಿಧ ನಗರಗಳಿಗೆ ರಾತ್ರಿ ವೇಳೆ ತೆರಳಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದರು. ನಂತರ ಅದೇ ಕದ್ದ ಬೈಕ್ಗಳನ್ನು…
ಬೆಂಗಳೂರು: ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿಗಳ ಸ್ಥಳಗಳಲ್ಲಿ ಅಪಘಾತದಿಂದ ಮೃತಪಟ್ಟರೆ ಅವರ ಇಬ್ಬರು ಮಕ್ಕಳಿಗೆ ಸ್ನಾತಕೋತ್ತರ ಪದವಿವರೆಗೆ ಶೈಕ್ಷಣಿಕ ಸಹಾಯಧನ ನೀಡಲು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಅನುಮೋದನೆ ನೀಡಿದೆ. ಈ ಹಿಂದೆ ನೋಂದಾಯಿತ ಫಲಾನುಭವಿಗಳು ಮರಣ ಹೊಂದಿದರೆ ಅರ್ಹತಾ ಮಾನದಂಡಗಳಿಗೆ ಅನುಗುಣವಾಗಿ ಅವರ ಅವಲಂಬಿತರಿಗೆ ಪಿಂಚಣಿ ಸೌಲಭ್ಯ ಬಿಟ್ಟು ಬೇರಾವುದೇ ಸೌಲಭ್ಯಗಳನ್ನು ನೀಡುತ್ತಿರಲಿಲ್ಲ. ಇದೀಗ ಮಂಡಳಿಯು ಮೃತ ಫಲಾನುಭವಿಯ ಮಕ್ಕಳಿಗೆ ಶೈಕ್ಷಣಿಕ ಸಹಾಯ ಸಹಾಯಧನ ನೀಡಲಿದೆ. ನೋಂದಾಯಿತ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ತಡೆಯಲು ಇದರಿಂದ ಸಹಾಯವಾಗಲಿದೆ. ಈ ಸೌಲಭ್ಯವು 2025-26 ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲಾಗುತ್ತಿದೆ. ಆ ಮೂಲಕ ರಾಜ್ಯ ಸರ್ಕಾರವು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. https://kannadanewsnow.com/kannada/cm-siddaramaiah-has-given-an-empty-cup-to-the-people-in-the-budget-r-ashok/ https://kannadanewsnow.com/kannada/emphasis-on-economic-growth-welfare-infrastructure-in-the-state-budget-mp-dr-prabha-mallikarjun/
ದುಬೈ: ಶುಕ್ರವಾರ ಮಂಡನೆಯಾಗಿರುವ ಕರ್ನಾಟಕ ಬಜೆಟ್-2026ರಲ್ಲಿ ಅನಿವಾಸಿ ಕನ್ನಡಿಗರ ಬಹುಕಾಲದ ಅತ್ಯಂತ ಪ್ರಮುಖ ಬೇಡಿಕೆಯಾಗಿರುವ ‘ಪ್ರತ್ಯೇಕ ಸಚಿವಾಲಯ’ ಘೋಷಣೆಯಾಗದಿರುವುದು ಅತೀವ ನಿರಾಸೆಯನ್ನುಂಟು ಮಾಡಿದೆ ಎಂದು ಖ್ಯಾತ ಅನಿವಾಸಿ ಉದ್ಯಮಿ ಡಾ.ರೋನಾಲ್ಡ್ ಕೊಲಾಸೊ ಬೇಸರ ವ್ಯಕ್ತಪಡಿಸಿದ್ದಾರೆ. ಡಿಸೆಂಬರ್ 11ರಂದು ಬೆಳಗಾವಿ ಅಧಿವೇಶನದ ವೇಳೆ ಡಾ.ರೋನಾಲ್ಡ್ ಕೊಲಾಸೊ ನೇತೃತ್ವದಲ್ಲಿ ಸಿಎಂ-ಡಿಸಿಎಂ-ಗೃಹಸಚಿವರು, ಇತರ ಸಚಿವರು ಹಾಗೂ ವಿಪಕ್ಷ ನಾಯಕರನ್ನು ಭೇಟಿಯಾದ ಸುಮಾರು ಮೂವತ್ತಕ್ಕೂ ಹೆಚ್ಚು ದೇಶಗಳ 45 ಮಂದಿ ಕನ್ನಡಿಗ ಪ್ರತಿನಿಧಿಗಳ NRI ನಿಯೋಗವು ‘ಪ್ರತ್ಯೇಕ ಸಚಿವಾಲಯ’ಕ್ಕಾಗಿ ಬೇಡಿಕೆಯ ಮನವಿ ಸಲ್ಲಿಸಿತ್ತು. ಈ ವೇಳೆ ಖುದ್ದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗು ಇತರ ಸಚಿವರು ‘ಪ್ರತ್ಯೇಕ ಸಚಿವಾಲಯ’ವನ್ನು ಶೀಘ್ರವೇ ಮಾಡುವ ಭರವಸೆ ನೀಡಿದ್ದರು. ಹಾಗಾಗಿ ಅನಿವಾಸಿ ಕನ್ನಡಿಗರ ಈ ಬಹುಕಾಲದ ಬೇಡಿಕೆ ಕೊನೆಗೂ ಈಡೇರುವ ನಿರೀಕ್ಷೆ ಇತ್ತು .ಆದರೆ ಈ ಬಾರಿಯ ಕರ್ನಾಟಕ ಬಜೆಟ್-2026ನಲ್ಲಿ ಯಾವುದೇ ರೀತಿಯ ಘೋಷಣೆ ಆಗಲಿ, ಉಲ್ಲೇಖವಾಗಲಿ ಮಾಡದಿರುವುದಕ್ಕೆ ಡಾ.ರೋನಾಲ್ಡ್ ಕೊಲಾಸೊ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ‘ವಾರ್ತಾ ಭಾರತಿ’ಯೊಂದಿಗೆ ಮಾತನಾಡಿರುವ…
ಲೈಂಗಿಕ ಜೀವನವು ದಂಪತಿಗಳ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವ ಒಂದು ಕೊಂಡಿ. ಆದರೆ, ಲೈಂಗಿಕ ತೃಪ್ತಿಯ ಬಗ್ಗೆ ಇರುವ ಅಜ್ಞಾನ ಅಥವಾ ಸಂಕೋಚದ ಕಾರಣದಿಂದ ಅನೇಕರಲ್ಲಿ ಅಸಮಾಧಾನ ಮೂಡುತ್ತದೆ. ಆರೋಗ್ಯಕರ ಮತ್ತು ತೃಪ್ತಿದಾಯಕ ಲೈಂಗಿಕ ಜೀವನಕ್ಕಾಗಿ ತಜ್ಞರು ಈ ಕೆಳಗಿನ ಸಲಹೆಗಳನ್ನು ನೀಡುತ್ತಾರೆ. 1. ಸಂವಹನವೇ ಮೊದಲ ಮೆಟ್ಟಿಲು (Open Communication) ಸಂಗಾತಿಯ ಜೊತೆ ಲೈಂಗಿಕ ಇಚ್ಛೆಗಳ ಬಗ್ಗೆ ಮುಕ್ತವಾಗಿ ಮಾತನಾಡುವುದು ಬಹಳ ಮುಖ್ಯ. ನಿಮಗೆ ಏನು ಇಷ್ಟ ಮತ್ತು ನಿಮ್ಮ ಸಂಗಾತಿಗೆ ಏನು ಇಷ್ಟವಾಗುತ್ತದೆ ಎಂಬುದನ್ನು ಚರ್ಚಿಸುವುದರಿಂದ ಅರ್ಧದಷ್ಟು ಸಮಸ್ಯೆಗಳು ಬಗೆಹರಿಯುತ್ತವೆ. ಸಂಕೋಚ ಬಿಟ್ಟು ಮಾತನಾಡುವುದು ತೃಪ್ತಿಯ ಹಾದಿಯನ್ನು ಸುಗಮಗೊಳಿಸುತ್ತದೆ. 2. ಮುನ್ನೆಚ್ಚರಿಕೆ ಮತ್ತು ಸಿದ್ಧತೆ (Foreplay) ಲೈಂಗಿಕ ಕ್ರಿಯೆಗಿಂತ ಮುಂಚಿನ ‘ಫೋರ್ ಪ್ಲೇ’ ಅಥವಾ ಮುದ್ದಾಟವು ಲೈಂಗಿಕ ತೃಪ್ತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪರಸ್ಪರ ಸ್ಪರ್ಶ, ಚುಂಬನ ಮತ್ತು ಪ್ರೀತಿಯ ಮಾತುಗಳು ಮನಸ್ಸನ್ನು ಸಿದ್ಧಗೊಳಿಸುತ್ತವೆ. ಇದು ವಿಶೇಷವಾಗಿ ಮಹಿಳೆಯರಲ್ಲಿ ಲೈಂಗಿಕ ಆಸಕ್ತಿಯನ್ನು ಹೆಚ್ಚಿಸಲು ಮತ್ತು ತೃಪ್ತಿ ನೀಡಲು ಸಹಕಾರಿ. 3.…
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ನೇರಲಗುಂಟೆ ಗ್ರಾಮದ ಬಳಿ ಶುಕ್ರವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ನಡೆದ ಡಿಕ್ಕಿಯಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಮೃತರನ್ನು ಪ್ರಜ್ವಲ್ (22) ಮತ್ತು ಅಭಿಷೇಕ್ (18) ಎಂದು ಗುರುತಿಸಲಾಗಿದೆ. ಈ ಯುವಕರು ಪ್ರಸಿದ್ಧ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಜಾತ್ರೆ ಮುಗಿಸಿಕೊಂಡು ತಮ್ಮ ಸ್ವಗ್ರಾಮಕ್ಕೆ ಬೈಕ್ನಲ್ಲಿ ಹಿಂತಿರುಗುತ್ತಿದ್ದರು. ಈ ವೇಳೆ ನೇರಲಗುಂಟೆ ಗ್ರಾಮದ ಬಳಿ ವೇಗವಾಗಿ ಬಂದ ಕೆಎಸ್ಆರ್ಟಿಸಿ (KSRTC) ಬಸ್ ಇವರ ಬೈಕ್ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಯುವಕರಿಬ್ಬರು ರಸ್ತೆಗೆ ಎಸೆಯಲ್ಪಟ್ಟು, ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಜಾತ್ರೆ ಸಂಭ್ರಮದ ನಡುವೆ ಕವಿದ ಶೋಕ ನಾಯಕನಹಟ್ಟಿ ಜಾತ್ರೆಗೆ ಹೋಗಿದ್ದ ಯುವಕರು ಅತಿ ಸಂಭ್ರಮದಿಂದಲೇ ಮರಳುತ್ತಿದ್ದರು. ಆದರೆ ವಿಧಿಯಾಟ ಬೇರೆಯೇ ಇತ್ತು. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಾಯಕನಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ…














