Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಫೋನ್ ಕದ್ದಾಲಿಕೆ ಬಗ್ಗೆ ತಮ್ಮ ಹೇಳಿಕೆಯನ್ನು ಗ್ರಹಿಸದೆ ತಮ್ಮ ಮೇಲೆ ವಿನಾಕಾರಣ ಆರೋಪ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು ನೇರವಾಗಿ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಾನು ಎರಡು ಸಲವೂ ಅಧಿಕಾರ ಕಳೆದುಕೊಂಡವನು. ಇತಿಹಾಸ ಎಂದಿಗೂ ಮೌನವಾಗಿರುವುದಿಲ್ಲ ಎಂಬುದು ನಿಮಗೂ ಗೊತ್ತಿರಲಿ. ನೀವೂ ಚರಿತ್ರೆಯಿಂದ ಪಾರಾಗಲು ಆಗದು ಸಿದ್ದರಾಮಯ್ಯನವರೇ? ನಾನು ಪೋನ್ ಕದ್ದಾಲಿಕೆ ಮಾಡಿದ್ದಿದ್ದರೆ ಹೇಗಾದರೂ ಸರಿ, ಅಧಿಕಾರ ಉಳಿಸಿಕೊಳ್ಳುತ್ತಿದ್ದೆ. ಹಾಗೆ ಮಾಡಿದ್ದಿದ್ದರೆ ಸಿದ್ದವನದಲ್ಲಿ ಕೂತು ಯಾವ ಕಬ್ಬೆಕ್ಕು ಕರಾಮತ್ತು ನಡೆಸಿತು ಎನ್ನುವುದನ್ನು ಪತ್ತೆ ಹಚ್ಚುತ್ತಿದ್ದೆ. ಅದು ನನಗೆ ಬೇಕಿರಲಿಲ್ಲ, ಕಳೆದುಕೊಂಡಿದ್ದರ ಬಗ್ಗೆಯೂ ನನಗೆ ಚಿಂತೆ ಇಲ್ಲ. ಆದರೆ, ಆ ಪಾಪಪ್ರಜ್ಞೆ ನಿಮ್ಮನ್ನು ಕಾಡುತ್ತಿದೆ, ಸದಾ ನೆರಳಿನಂತೆ! ಕದ್ದಾಲಿಕೆ ನನ್ನ ಗುಣವಲ್ಲ, ಅದೇನಿದ್ದರೂ ಕಾಂಗ್ರೆಸ್ ಪಕ್ಷದ್ದೇ ಆವಿಷ್ಕಾರ! ಅದೇ ನಿಮಗೆ ಬಂದಿರುವ ಸಂಸ್ಕಾರ!! ಎಂದು ಕೇಂದ್ರ ಸಚಿವರು ಮುಖ್ಯಮಂತ್ರಿ…
ಬೆಂಗಳೂರು: ವಿದ್ಯುತ್ ಪೂರೈಕೆ ಸೇರಿದಂತೆ ವಿದ್ಯುತ್ ಸಂಬಂಧಿತ ದೂರುಗಳ ಶೀಘ್ರ ಪರಿಹಾರಕ್ಕಾಗಿ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ ಸಂಬಂಧಿಸಿದಂತೆ 11 ವಾಟ್ಸ್ ಆಪ್ ಸಹಾಯವಾಣಿ ಸಂಖ್ಯೆಗಳು ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆಯಲು ಬೆಸ್ಕಾಂ ಮನವಿಮಾಡಿದೆ. ಬೆಸ್ಕಾಂನ 1912 ಸಹಾಯವಾಣಿ ಸಂಖ್ಯೆಯು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತಿದೆ. ಕರೆಗಳ ಒತ್ತಡದಿಂದಾಗಿ ಕೆಲವೊಮ್ಮೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ. ಹೀಗಾಗಿ ಗ್ರಾಹಕರು ಬೆಸ್ಕಾಂನ 11 ವಾಟ್ಸ್ ಆಪ್ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶ ಕಳುಹಿಸುವ ಮೂಲಕ ವಿದ್ಯುತ್ ಸಂಬಂಧಿತ ದೂರುಗಳಿಗೆ ಪರಿಹಾರ ಪಡೆಯಬಹುದಾಗಿದೆ ಎಂದು ಬೆಸ್ಕಾಂ ತಿಳಿಸಿದೆ. ವಾಟ್ಸ್ ಪ್ ಸಹಾಯವಾಣಿ ವಿವರ ಬೆಂಗಳೂರು ನಗರ ಜಿಲ್ಲೆ: ದಕ್ಷಿಣ ವೃತ್ತ : 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ-:8277884013 , ಉತ್ತರ ವೃತ್ತ :8277884014, ಕೋಲಾರ ಜಿಲ್ಲೆ : 8277884015, ಚಿಕ್ಕಬಳ್ಳಾಪುರ ಜಿಲ್ಲೆ : 8277884016, ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017, ರಾಮನಗರ ಜಿಲ್ಲೆ : 8277884018, ತುಮಕೂರು ಜಿಲ್ಲೆ…
ಬೆಂಗಳೂರು: ನಾನು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಮುಗಿಸಿದ್ದೇನೆ. ನಾನೀಗ ಹಿರಿಯನಾಗಿದ್ದು. ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಾಕು. ಹೊಸ ಬ್ಲಡ್ ಬರಬೇಕು. ಹೊಸ ಆಲೋಚನೆಗಳು ಬರಬೇಕು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದಂತ ಅವರು, ಇಲ್ಲ ಇಲ್ಲ ನನಗೆ ಬೇಡ. ಹೊಸ ರಕ್ತ ಬರಬೇಕು. ಹೊಸ ಬ್ಲಡ್ ಬರಬೇಕು. ಹೊಸ ಆಲೋಚನೆಗಳು ಬರಬೇಕು ಎಂದರು. ನಾವು ಮೊದಲ ಬಾರಿಯಲ್ಲೇ ಮಂತ್ರಿ ಆದವರು. ನಾನು ಪರಮೇಶ್ವರ್, ರಾಮಲಿಂಗಾರೆಡ್ಡಿ, ಹೆಚ್.ಕೆ ಪಾಟೀಲ್, ನಮ್ಮದೆಲ್ಲ ಆಯ್ತು. ಮುಗೀತು. ನಾವೆಲ್ಲಾ ಹಿರಿಯರಾಗಿದ್ದೇವೆ ಎಂದರು. ಸಾಕು ನನಗೆ, ಕೆಪಿಸಿಸಿ ಅಧ್ಯಕ್ಷನಾಗಿ 6 ವರ್ಷ ಮುಗಿಸಿದ್ದೇನೆ ಎಂಬುದಾಗಿ ಬೆಂಗಳೂರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. https://kannadanewsnow.com/kannada/any-sexual-assault-on-a-childs-body-is-rape-kerala-high-courts-landmark-verdict/
ದೋಹಾ: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ಜಂಟಿ ದಾಳಿಯು ಈಗ ಪಶ್ಚಿಮ ಏಷ್ಯಾದಾದ್ಯಂತ ವ್ಯಾಪಕ ಯುದ್ಧವಾಗಿ ಮಾರ್ಪಟ್ಟಿದೆ. ಈ ಮಹಾ ಸಂಘರ್ಷದಲ್ಲಿ ಕೇವಲ ಜೀವಹಾನಿ ಮಾತ್ರವಲ್ಲದೆ, ಶತಕೋಟಿ ಡಾಲರ್ ಮೌಲ್ಯದ ಅತ್ಯಾಧುನಿಕ ಯುದ್ಧೋಪಕರಣಗಳು ನಾಶವಾಗುತ್ತಿವೆ. ಈ ಬೆಳವಣಿಗೆಯ ಮಧ್ಯೆ, ಗಲ್ಫ್ ಪ್ರದೇಶದಲ್ಲಿದ್ದ ಅಮೆರಿಕದ ಅತ್ಯಂತ ದೊಡ್ಡ ರೇಡಾರ್ ವ್ಯವಸ್ಥೆಯನ್ನು ಕ್ಷಿಪಣಿ ದಾಳಿಯ ಮೂಲಕ ಧ್ವಂಸಗೊಳಿಸಿರುವುದಾಗಿ ಇರಾನ್ ಮಾಧ್ಯಮಗಳು ವರದಿ ಮಾಡಿವೆ. https://twitter.com/TehranTimes79/status/2027720625834381563 ಅಮೆರಿಕದ ‘ಕಣ್ಣು’ ಕಿತ್ತಾಕಿದ ಇರಾನ್? ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಮೂಲಗಳನ್ನು ಉಲ್ಲೇಖಿಸಿ ‘ಟೆಹ್ರಾನ್ ಟೈಮ್ಸ್’ ವರದಿ ಮಾಡಿರುವಂತೆ, ಕತಾರ್ನ ಅಲ್ ಉದೈದ್ ವಾಯುನೆಲೆಯಲ್ಲಿ ಸ್ಥಾಪಿಸಲಾಗಿದ್ದ AN/FPS-132 ರೇಡಾರ್ ಅನ್ನು ಸಂಪೂರ್ಣವಾಗಿ ನಾಶಪಡಿಸಲಾಗಿದೆ. ಸಾಮರ್ಥ್ಯ: ಇದು ಸುಮಾರು 5,000 ಕಿಲೋಮೀಟರ್ ದೂರದವರೆಗೆ ಕ್ಷಿಪಣಿಗಳನ್ನು ಪತ್ತೆಹಚ್ಚುವ ಸಾಮರ್ಥ್ಯ ಹೊಂದಿತ್ತು. ವೆಚ್ಚ: 2013 ರಲ್ಲಿ ಅಮೆರಿಕ ಇದನ್ನು ಅಂದಾಜು 1.1 ಬಿಲಿಯನ್ ಡಾಲರ್ (ಸುಮಾರು 9,000 ಕೋಟಿ ರೂ.) ವೆಚ್ಚದಲ್ಲಿ ನಿರ್ಮಿಸಿತ್ತು. ಪರಿಣಾಮ: ಈ ರೇಡಾರ್…
ಈ ವರ್ಷದ ಮೊದಲ ಚಂದ್ರಗ್ರಹಣವು ಫಾಲ್ಗುಣ ಮಾಸದ ಹುಣ್ಣಿಮೆಯಂದು ಅಂದರೆ ಮಾರ್ಚ್ 03 ರಂದು ಸಂಭವಿಸಲಿದೆ. ಈ ಚಂದ್ರಗ್ರಹಣವು ಭಾರತದಲ್ಲಿ ಗೋಚರಿಸಲಿದ್ದು, 12 ರಾಶಿಗಳ ಮೇಲೆ ಪರಿಣಾಮ ಬೀರಲಿದೆ. 12 ರಾಶಿಗಳ ಪೈಕಿ ಈ ಒಂದು ಈ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ ಎಂದು ಖ್ಯಾತ ಜ್ಯೋತಿಷಿ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಚಂದ್ರ ಗ್ರಹಣದ ಪ್ರಭಾವದಿಂದ ಅದೃಷ್ಟ ಪಡೆಯುವ ರಾಶಿಗಳು ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ…
ಬೆಂಗಳೂರು : ಪೋಡಿ ದುರಸ್ಥಿ, ಫೌತಿಖಾತೆ, ಭೂ ಸುರಕ್ಷಾ ಅಭಿಯಾನ ಸೇರಿದಂತೆ ಎಲ್ಲಾ ಕಂದಾಯ ಸೇವೆಗಳನ್ನೂ ಆನ್ಲೈನ್ ಡಿಜಿಟಲೀಕರಣ ಮಾಡಿದ್ದು ಆ ಮೂಲಕ ಇಲಾಖೆಯ ಹತ್ತಾರು ಪ್ರಮುಖ ಸೇವೆಗಳನ್ನು ಜನ ಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸಿದ್ದು ನಮ್ಮ ಸಾವಿರ ದಿನಗಳ ಆಡಳಿತದ ಸಾಧನೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು. ಮಂಗಳವಾರ ವಿಕಾಸಸೌಧದಲ್ಲಿ ನಡೆದ ಎಲ್ಲಾ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, “ಕಳೆದ ಹತ್ತಾರು ವರ್ಷಗಳಿಂದ ಆಗದ ಕೆಲಸಗಳು ಕೇವಲ ಕಳೆದ ಸಾವಿರ ದಿನಗಳಲ್ಲಿ ಆಗಿದೆ. ಈ ಮಾತು ಜನರ ಬಾಯಿಂದಲೇ ಬರುತ್ತಿರುವುದು ವಿಶೇಷ. ನಾವು ಮಾಡುತ್ತಿರುವ ಕೆಲಸ ಜನರಿಗೆ ಅನುಕೂಲವಾಗುತ್ತಿದೆ. ಈ ಹಿಂದೆ ಇಲಾಖೆಯ ಬಗ್ಗೆ ಜನರ ಮನಸ್ಸಲ್ಲಿದ್ದ ಭಾವನೆ ಈಗ ಬದಲಾಗಿದೆ. ಸಾವಿರ ದಿನಗಳ ನಮ್ಮೆಲ್ಲರ ಒಗ್ಗಟ್ಟಿನ ಕೆಲಸದ ಪರಿಣಾಮ ಇಲಾಖೆಯನ್ನು ಗೌರವದಿಂದ ನೋಡುತ್ತಿದ್ದಾರೆ. ಕಂದಾಯ ಸೇವೆಗಳನ್ನು ಆನ್ಲೈನ್ ಮಾಡಿದ್ದು, ಜನರ ಮನೆ ಬಾಗಿಲಿಗೆ ತಲುಪಿಸಿದ್ದು ನಮ್ಮ ಸಾವಿರ ದಿನದ ಸಾಧನೆ” ಎಂದು ಮೆಚ್ಚುಗೆ…
ಬೆಂಗಳೂರು: ರಾಜ್ಯದಲ್ಲಿ ಎಸ್ಸಿ, ಎಸ್ಟಿ ಸಮುದಾಯಗಳಿಗೆ ಒಳ ಮೀಸಲಾತಿ ಜಾರಿಗಾಗಿ ಒತ್ತಾಯ ಹೆಚ್ಚಾಗಿದೆ. ಈ ಮಸೂದೆಗೂ ಕೆಲ ದಿನಗಳ ಹಿಂದಷ್ಟೇ ರಾಜ್ಯಪಾಲರು ಅಂಕಿತ ಸೂಚಿಸಿದ್ದರು. ಈ ಬೆನ್ನಲ್ಲೇ ಮಾರ್ಚ್.15 ಒಳಗಾಗಿ ಒಳಮೀಸಲಾತಿ ಜಾರಿಗೊಳಿಸದೇ ಇದ್ದರೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಘೋಷಿಸಿದ್ದಾರೆ. ಇಂದು ಬೆಂಗಳೂರಿನ ರಾಜ್ಯಮಟ್ಟದ ಹೋರಾಟಗಾರರ ಸಭೆಯಲ್ಲಿ ಪಾಲ್ಗೊಂಡ ಅವರು, ರಾಜ್ಯ ಸರ್ಕಾರದಿಂದ ಎಸ್ಸಿ ಎಸ್ಟಿ ಸಮುದಾಯದವರಿಗೆ ಒಳಮೀಸಲಾತಿ ಜಾರಿಗೊಳಿಸೋ ಸಂಬಂಧ ಅಂತಿಮ ಹಂತದ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ ರಾಜ್ಯಪಾಲರು ಮಸೂದೆಗೆ ಅಂಕಿತ ಹಾಕಿರೋದನ್ನು ಸಭೆಯಲ್ಲಿದ್ದವರ ಗಮನಕ್ಕೆ ತಂದರು. ಇದೇ ವೇಳೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಒಳಮೀಸಲಾತಿಯನ್ನು ಶೀಘ್ರವೇ ಜಾರಿಗೊಳಿಸಬೇಕು ಎಂಬುದು ಎಲ್ಲರ ಒತ್ತಾಯವಾಗಿದೆ. ನಾನು ಕೂಡ ಒಳಮೀಸಲಾತಿಗಾಗಿ ಒತ್ತಾಯಿಸುತ್ತೇನೆ. ಮಾರ್ಚ್.15ರ ಒಳಗಾಗಿ ರಾಜ್ಯದಲ್ಲಿ ಎಸ್ಸಿ, ಎಸ್ಟಿ ಸಮುದಾಯಗಳಿಗೆ ಒಳ ಮೀಸಲಾತಿ ಜಾರಿಗೊಳಿಸದೇ ಇದ್ದರೇ ನನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಇದೇ ಸಂದರ್ಭದಲ್ಲಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಘೋಷಣೆ ಮಾಡಿದರು.…
ನವದೆಹಲಿ: ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷದಿಂದಾಗಿ ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಓಮನ್, ಕುವೈತ್ ಮತ್ತು ಕತಾರ್ ದೇಶಗಳ ನಾಯಕರೊಂದಿಗೆ ದೂರವಾಣಿ ಮೂಲಕ ಮಹತ್ವದ ಚರ್ಚೆ ನಡೆಸಿದರು. ಸೋಮವಾರವಷ್ಟೇ ಸೌದಿ ಅರೇಬಿಯಾ, ಬಹ್ರೇನ್ ಮತ್ತು ಜೋರ್ಡಾನ್ ನಾಯಕರೊಂದಿಗೆ ಮಾತನಾಡಿದ್ದ ಪ್ರಧಾನಿ, ಇಂದು ಓಮನ್ ಸುಲ್ತಾನ್ ಹೈತಮ್ ಬಿನ್ ತಾರಿಕ್, ಕುವೈತ್ ಕ್ರೌನ್ ಪ್ರಿನ್ಸ್ ಶೇಖ್ ಸಬಾ ಅಲ್-ಖಲೀದ್ ಮತ್ತು ಕತಾರ್ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಮಾತುಕತೆ ನಡೆಸಿದರು. ಭಾರತೀಯರ ಸುರಕ್ಷತೆ: ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಸುಮಾರು ಒಂದು ಕೋಟಿ ಭಾರತೀಯರ ಸುರಕ್ಷತೆ ಮತ್ತು ಯೋಗಕ್ಷೇಮದ ಬಗ್ಗೆ ಪ್ರಧಾನಿ ಮೋದಿ ತೀವ್ರ ಕಳಕಳಿ ವ್ಯಕ್ತಪಡಿಸಿದರು. ಪ್ರಸ್ತುತ ಕಠಿಣ ಸಂದರ್ಭದಲ್ಲಿ ಭಾರತೀಯ ಸಮುದಾಯವನ್ನು ರಕ್ಷಿಸುತ್ತಿರುವುದಕ್ಕೆ ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರಿಗೆ ಪ್ರಧಾನಿ ಧನ್ಯವಾದ ಅರ್ಪಿಸಿದರು. ದಾಳಿಗಳಿಗೆ ಖಂಡನೆ: ಕುವೈತ್ ಮತ್ತು ಓಮನ್…
ಬೆಂಗಳೂರು: ನಗರದ ಸಿಟಿ ಸಿವಿಲ್ ಕೋರ್ಟ್ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಈ ವಿಷಯವನ್ನು ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಪೊಲೀಸರು ಪರಿಶೀಲನೆ ನಡೆಸಿದರು. ಬೆಂಗಳೂರಿನ ಹೃದಯ ಭಾಗದ ಮೈಸೂರು ಬ್ಯಾಂಕ್ ಸರ್ಕಲ್ ಬಳಿಯಲ್ಲಿನ ಸಿಟಿ ಸಿವಿಲ್ ಕೋರ್ಟ್ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ತಮಿಳು ಭಾಷೆಯಲ್ಲಿ ಇ-ಮೇಲ್ ನಲ್ಲಿ ಬಾಂಬ್ ಬೆದರಿಕೆಯನ್ನು ಹಾಕಿರುವುದಾಗಿ ಹೇಳಲಾಗುತ್ತಿದೆ. ಈ ವಿಷಯವನ್ನು ಪೊಲೀಸರಿಗೆ ಕೋರ್ಟ್ ಸಿಬ್ಬಂದಿ ತಿಳಿಸಿದ್ದರು. ಹೀಗಾಗಿ ಸ್ಥಳಕ್ಕೆ ಹಲಸೂರು ಗೇಟ್ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕೋರ್ಟ್ ನಲ್ಲಿ ಬಾಂಬ್ ನಿಷ್ಟ್ರೀಯ ದಳ, ಶ್ವಾನದಳ ತಪಾಸಣೆ ನಡೆಸುತ್ತಿದ್ದಾರೆ.
ಬೆಳಗಾವಿ: ಕರ್ನಾಟಕದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು (Visvesvaraya Technological University (VTU)) 2025ರ ಡಿಸೆಂಬರ್ ಮತ್ತು 2026ರ ಜನವರಿ ತಿಂಗಳಿನಲ್ಲಿ ನಡೆಸಲಾದ ವಿವಿಧ ಪದವಿ (UG) ಹಾಗೂ ಸ್ನಾತಕೋತ್ತರ ಪದವಿ (PG) ಕೋರ್ಸ್ಗಳ ಪರೀಕ್ಷಾ ಫಲಿತಾಂಶವನ್ನು ಇಂದು (ಮಾರ್ಚ್ 3, 2026) ಅಧಿಕೃತವಾಗಿ ಬಿಡುಗಡೆ ಮಾಡಿದೆ. ಸಿಬಿಸಿಎಸ್ (CBCS) ಪದ್ಧತಿಯಡಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈಗ ತಮ್ಮ ಫಲಿತಾಂಶವನ್ನು ವಿಶ್ವವಿದ್ಯಾಲಯದ ಅಧಿಕೃತ ಪೋರ್ಟಲ್ನಲ್ಲಿ ವೀಕ್ಷಿಸಬಹುದಾಗಿದೆ. ರಿಸಲ್ಟ್ ಈ ರೀತಿ ಚೆಕ್ ಮಾಡಿ ವಿದ್ಯಾರ್ಥಿಗಳು ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ತಮ್ಮ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು: ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ: ಮೊದಲು https://results.vtu.ac.in ಪೋರ್ಟಲ್ಗೆ ಲಾಗಿನ್ ಆಗಿ. ಕೋರ್ಸ್ ಆಯ್ಕೆ ಮಾಡಿ: ನಿಮ್ಮ ಕೋರ್ಸ್ಗೆ (B.E., B.Plan, B.Arch ಇತ್ಯಾದಿ) ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ. ಯುಎಸ್ಎನ್ ನಮೂದಿಸಿ: ನಿಮ್ಮ ವಿಶ್ವವಿದ್ಯಾಲಯದ ಆಸನ ಸಂಖ್ಯೆಯನ್ನು (USN) ನಿಖರವಾಗಿ ನಮೂದಿಸಿ. ಫಲಿತಾಂಶ ವೀಕ್ಷಿಸಿ: ‘Submit’ ಅಥವಾ ‘View Result’ ಬಟನ್ ಒತ್ತಿದಾಗ…














