Author: kannadanewsnow09

ಶಿವಮೊಗ್ಗ: ಟಿ20 ಅಂಧರ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಭಾರತದ ಮಹಿಳಾ ಅಂದರ ತಂಡವು ಗೆಲುವು ಸಾಧಿಸಿತ್ತು. ಈ ಗೆಲುವಿಗೆ ಹರ್ಷವನ್ನು ರಿಪ್ಪನ್ ಪೇಟೆಯ ಕಾವ್ಯಾ.ವಿ ಕೂಡ ಕಾರಣ ಎಂಬ ವಿಷಯ ತಿಳಿದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಅವರಿಗೆ ಅಭಿನಂದನೆ ತಿಳಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವಂತ ಅವರು, ಭಾರತದ ಅಂಧರ ಮಹಿಳಾ ಕ್ರಿಕೆಟ್ ತಂಡ ಮೊದಲ ಬಾರಿಗೆ ನಡೆದ ಮಹಿಳಾ ಬ್ಲೈಂಡ್ ಟಿ20 ಪಂದ್ಯಾವಳಿಯಲ್ಲಿ ಜಯ ಸಾಧಿಸಿದೆ. ಈ ಜಯವು ಹೆಮ್ಮೆಯ ವಿಷಯವಾಗಿದೆ ಎಂದಿದ್ದಾರೆ. ಈ ಜಯಶೀಲ ವಿಶ್ವ ಕಪ್ ತಂಡದಲ್ಲಿ ಕರ್ನಾಟಕದಿಂದ ಮೂವರು ಆಟಗಾರ್ತಿಯರು ಇದ್ದಾರೆ. ಅವರಲ್ಲಿ ರಿಪ್ಪನ್ ಪೇಟೆಯ ಪ್ರತಿಭೆ ಕಾವ್ಯ.ವಿ ತನ್ನ ಆಲ್ ರೌಂಡರ್ ಮೂಲಕ ತಂಡದ ಗೆಲುವಿಗೆ ಸಖತ್ ಸಾಥ್ ನೀಡಿದ್ದಾರೆ. ಟಿ20 ಅಂಧರ ವಿಶ್ವಕಪ್ ಗೆಲುವಿಗೆ ಕಾರಣವಾದಂತ ನನ್ನ ಸ್ವ ಕ್ಷೇತ್ರದ ಕಾವ್ಯಾ.ವಿ ಕೃತಜ್ಞತಾ ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ. https://kannadanewsnow.com/kannada/guest-lecturer-attempts-suicide-by-pouring-petrol-on-himself-in-gadag-demanding-fulfillment-of-demands/ https://kannadanewsnow.com/kannada/a-shocking-act-in-the-state-a-sinful-mother-killed-a-cow-because-she-thought-it-was-a-girl-child/

Read More

ಗದಗ: ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಧರಣಿ, ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆಯಲ್ಲಿ ಅತಿಥಿ ಉಪನ್ಯಾಸಕರೊಬ್ಬರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೂ ಯತ್ನಿಸಿರುವ ಘಟನೆ ನಡೆದಿದೆ. ಗದಗದ ಡಿಸಿ ಕಚೇರಿ ಎದುರು ಅತಿಥಿ ಉಪನ್ಯಾಸಕರು ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಪ್ರತಿಭಟನೆ ತೀವ್ರಗೊಂಡಿದ್ದು, ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಉಪನ್ಯಾಸಕ ಆತ್ಮಹತ್ಯೆಗೂ ಯತ್ನಿಸಿದರು. ಆದರೇ ಸ್ಥಳದಲ್ಲಿದ್ದಂತ ಪೊಲೀಸರು ತಕ್ಷಣವೇ ಬಾಟಲಿ ವಶಕ್ಕೆ ಪಡೆದು, ರಕ್ಷಣೆ ಮಾಡಿದ್ದಾರೆ. ಮತ್ತೊಂದೆಡೆ ಪ್ರತಿಭಟನೆ ವೇಳೆಯಲ್ಲೇ ಚಾಕು ಪ್ರದರ್ಶಿಸಿ ಅತಿಥಿ ಉಪನ್ಯಾಸಕಿ ಆಕ್ರೋಶ ಹೊರ ಹಾಕಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿ ನಡೆಯುತ್ತಿರೋ ಕೌನ್ಸೆಲಿಂಗ್ ಸ್ಥಗಿತಗೊಳಿಸುವಂತೆ ಒತ್ತಾಯಿಸಿದ್ದಾರೆ. ಅತಿಥಿ ಉಪನ್ಯಾಸಕರ ನೇಮಕಾತಿಗೆ ಅವೈಜ್ಞಾನಿಕ ನಿಯಮ ಜಾರಿಗೊಳಿಸಲಾಗಿದೆ. 20 ರಿಂದ 30 ವರ್ಷ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದವರು ಅತಂತ್ರರಾಗಿದ್ದಾರೆ ಎಂಬುದಾಗಿ ಆಕ್ರೋಶವನ್ನು ಅತಿಥಿ ಉಪನ್ಯಾಸಕರು ಹೊರಹಾಕಿದ್ದಾರೆ. ಬೆಂಗಳೂರು, ಮೈಸೂರು, ಮಂಡ್ಯ, ಚಿತ್ರದುರ್ಗ, ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಗದಗಕ್ಕೆ ಆಗಮಿಸಿದಂತ…

Read More

ಬೆಂಗಳೂರು: ಡಿಸೆಂಬರ್.25ರಂದು ಘಾಟಿ ಸುಬ್ರಹ್ಮಣ್ಯದಲ್ಲಿ ಬ್ರಹ್ಮ ರಥೋತ್ಸವ ನಡೆಯಲಿದೆ. ಈ ಕ್ಷೇತ್ರವನ್ನು 29 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಕಾಮಗಾರಿ ಕೈಗೊಂಡು ಅಭಿವೃದ್ಧಿಗೊಳಿಸುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಇಂದು ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರೂ. 29.00 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ ಆಡಳಿತಾತ್ಮಕ ಅನುಮೋದನೆ ಶ್ರೀ.ಕೆ.ಹೆಚ್. ಮುನಿಯಪ್ಪ, ಮಾನ್ಯ ಆಹಾರ ಹಾಗೂ ನಾಗರೀಕ ಸರಬರಾಜು ಸಚಿವರು ಅವರ ಘನಉಪಸ್ಥಿತಿಯಲ್ಲಿ ನೀಡಲಾಯಿತು. ಅದರಲ್ಲಿ ಪ್ರಮುಖವಾಗಿ : ರೂ.16 ಕೋಟಿ ವೆಚ್ಚದಲ್ಲಿ ದಾಸೋಹ ಭವನ ರೂ. 1.96 ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ರೂ.3.53 ಕೋಟಿ ವೆಚ್ಚದಲ್ಲಿ ರಥ ಬೀದಿ ರೂ.1.62 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ಮೇಲ್ದರ್ಜೆರಿಗೇರಿಸುವುದು ರೂ. 28 ಲಕ್ಷ ವೆಚ್ಚದಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯವುಳ್ಳ ನೀರಿನ ಟ್ಯಾಂಕ್ ನಿರ್ಮಾಣ ರೂ. 43 ಲಕ್ಷ ವೆಚ್ಚದಲ್ಲಿ ಹೊಸ ಶೌಚಾಲಯಗಳ ನಿರ್ಮಾಣ ಒಳಗೊಂಡಿವೆ. * 2025-26ನೇ ಸಾಲಿನ…

Read More

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಸ್ತಾಂತರ, ಸಿಎಂ ಪಟ್ಟದ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಇದೇ ಹೊತ್ತಿನಲ್ಲಿ ಕೊನೆಗೂ ಅಧಿಕಾರ ಹಸ್ತಾಂತರದ ಗುಟ್ಟನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಬಿಚ್ಚಿಟ್ಟಿದ್ದಾರೆ. ಹೌದು.. ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನನ್ನನ್ನು ಮುಖ್ಯಮಂತ್ರಿ ಮಾಡಿ ಅಂತ ನಾನು ಕೇಳಿಯೇ ಇಲ್ಲ ಎಂಬುದಾಗಿದೆ. ಅಲ್ಲದೇ ನನಗೆ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತರೋದಕ್ಕೆ ಇಷ್ಟವಿಲ್ಲ. ಪಕ್ಷ ಇದ್ದರೇ ನಾವೆಲ್ಲ. ಪಕ್ಷವನ್ನು ನಾನು ವೀಕ್ ಮಾಡೋದಿಲ್ಲ ಎಂದಿದ್ದಾರೆ. ಸಿಎಂ ಸಿದ್ಧರಾಮಯ್ಯ ಅವರೇ ಬಜೆಟ್ ಮಂಡಿಸುತ್ತೇನೆ ಎಂದಿದ್ದಾರೆ. ಮಂಡಿಸಲಿ. ಅವರು ವಿಪಕ್ಷ ನಾಯಕರಾಗಿ, ಪಕ್ಷಕ್ಕೆ ದುಡಿದು ಕೆಲಸ ಮಾಡಿದ್ದಾರೆ. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/a-shocking-act-in-the-state-a-sinful-mother-killed-a-cow-because-she-thought-it-was-a-girl-child/

Read More

ಬೆಂಗಳೂರು: ಬಿಜೆಪಿ ಒಮ್ಮೆಯಾದರೂ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಿದೆಯೇ? ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಕುದುರೆ ವ್ಯಾಪಾರವಿಲ್ಲದೆ ಬಿಜೆಪಿ ಸರ್ಕಾರ ರಚಿಸಿದ್ದಿದೆಯೇ? ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮೊದಲ ಅವಧಿಯ ಅಧಿಕಾರದಲ್ಲಿ 3 ಮುಖ್ಯಮಂತ್ರಿಗಳನ್ನು ಬದಲಿಸಿ, ಎರಡನೇ ಅಧಿಕಾರಾವಧಿಯಲ್ಲಿ 2 ಮುಖ್ಯಮಂತ್ರಿಗಳನ್ನು ಬದಲಿಸಿದ ಹಾಗೂ ಆಪರೇಷನ್ ಕಮಲವೆಂಬ ಕರ್ನಾಟಕ ರಾಜಕಾರಣದ ಕರಾಳ ಅದ್ಯಾಯವನ್ನು ಆರಂಭಿಸಿದ ಬಿಜೆಪಿ ಪಕ್ಷದವರಿಗೆ ಕಾಂಗ್ರೆಸ್ ಹೆಸರೆತ್ತುವುದಕ್ಕೆ ನೈತಿಕತೆಯೂ ಇಲ್ಲ, ಅರ್ಹತೆಯೂ ಇಲ್ಲ ಎಂದಿದ್ದಾರೆ. “ಹೈಕಮಾಂಡ್ ಕಪ್ಪ“ದ ಬಗ್ಗೆ ಬಹಳ ಆಸಕ್ತಿಯಿಂದ ಮಾತನಾಡುವ ಬಿಜೆಪಿ, ಯಡಿಯೂರಪ್ಪನವರು ಹೈಕಮಾಂಡಿಗೆ ಎಷ್ಟು ಕಪ್ಪ ಕೊಟ್ಟು ನಾಲ್ಕು ಬಾರಿ ಪ್ರಮಾಣ ವಚನ ಸ್ವೀಕರಿಸಿದ್ದರು? ಜಗದೀಶ್ ಶೆಟ್ಟರ್, ಸದಾನಂದಗೌಡರು, ಬಸವರಾಜ್ ಬೊಮ್ಮಯಿಯವರು ಎಷ್ಟೆಷ್ಟು ಬಿಡ್ ಕೂಗಿ ಮುಖ್ಯಮಂತ್ರಿಗಳಾದರು ಎಂಬ ಪ್ರಶ್ನೆಗಳಿಗೆ ಉತ್ತರಿಸುವುದೇ? ಎಂದು ಕೇಳಿದ್ದಾರೆ. ಈ ಪ್ರಶ್ನೆಗಳು ನಮ್ಮದಲ್ಲ, ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆ ಎಂಬುದು “ಪೇಮೆಂಟ್ ಸೀಟ್“ ಎಂದು ಯತ್ನಾಳ್ ಅವರೇ ಹೇಳಿದ್ದರು. ಮಂತ್ರಿಗಿರಿಗೆ…

Read More

ಬೆಂಗಳೂರು: ಆದಾಯ ತೆರಿಗೆ ಪಾವತಿ ಮಾಡುತ್ತಿದ್ದಾರೆ ಎಂಬ ಒಂದೇ ಒಂದು ಕಾರಣಕ್ಕೆ ಇಡೀ ಕುಟುಂಬದ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ ಎಪಿಎಲ್ ಕಾರ್ಡ್ ಮಾಡಿ, ಸರ್ಕಾರ ಬಡವರ ಹೊಡ್ಡೆ ಮೇಲೆ ಹೊಡೆದಿದೆ. ಕೇವಲ ಒಬ್ಬರ ಕಾರಣಕ್ಕಾಗಿ ಇಡೀ ಕುಟುಂಬ ರೇಷನ್ ಕಾರ್ಡಿನ ರೇಷನ್ ಮೇಲೆ ಅವಲಂಬಿತವಾಗಿದ್ದದ್ದನ್ನು, ರದ್ದುಗೊಳಿಸಿದ ಬಳಿಕ ಅಕ್ಕಿಗಾಗಿ ಪರದಾಡುವ ಪರಿಸ್ಥಿತಿಯನ್ನು ತಂದಿಟ್ಟಿದೆ. ಕಾಲ ಬದಲಾದಂತೆ ಆದಾಯವೂ ಹೆಚ್ಚಾಗುತ್ತಿದೆ. ಆದಾಯದಂತೆ ಸರ್ಕಾರದ ನಿಯಮ, ಮಾನದಂಡಗಳು ಬದಲಾವಣೆಯಾಗಬೇಕಿತ್ತು. ಆದರೇ 2017ರಲ್ಲಿ ನಿಗದಿಯಾಗಿದ್ದಂತ ಮಾನದಂಡವನ್ನೇ ಇಟ್ಟುಕೊಂಡು, ಲಕ್ಷಾಂತರ ಕುಟುಂಬಗಳ ಬಿಪಿಎಲ್ ಕಾರ್ಡ್ ಅನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ. ಸಿಎಂ ಸಿದ್ಧರಾಮಯ್ಯ ಮಾತ್ರ ತಾನು ಮಾಡಿದ್ದಲ್ಲ, ಬದಲಾಗಿ ಕೇಂದ್ರ ಸರ್ಕಾರವೆಂದು ಗೂಬೆ ಕೂರಿಸುತ್ತಿದ್ದಾರೆ. ಕೇಂದ್ರ, ರಾಜ್ಯ ಸರ್ಕಾರಗಳ ಕಚ್ಚಾಟದಲ್ಲಿ ಈಗ ಕೂಸು ಬಡವಾದಂತೆ ಬಿಪಿಎಲ್ ಕಾರ್ಡ್ ರದ್ದಾದಂತ ಅನೇಕ ಕುಟುಂಬಗಳು ಕಣ್ಣೀರಲ್ಲಿ ಕೈತೊಳೆಯುವಂತೆ ಆಗಿದೆ. ಒಂದು ಬಾರಿಗೆ ಅವಕಾಶ ಕೊಡಬೇಕಿತ್ತು ಬಿಪಿಎಲ್ ಕಾರ್ಡ್ ಹೊಂದಿರೋರು ಯಾರೆಲ್ಲ ಆದಾಯ ತೆರಿಗೆ ಪಾವತಿ ಮಾಡ್ತಾ ಇದ್ದೀರಿ ಅವರು ನಿಮ್ಮ…

Read More

ಬೆಂಗಳೂರು: ಆ ಕುಟುಂಬಕ್ಕೆ ಹೊಟ್ಟೆ ತುಂಬ ಉಣ್ಣೋದಕ್ಕೆ ಇದ್ದದ್ದೇ ಒಂದು ರೇಷನ್ ಕಾರ್ಡ್. ಸಿಟಿ ಸೇರಿದರೂ, ಹೊಟ್ಟೆಗೆ ಬಿಪಿಎಲ್ ಕಾರ್ಡ್ ಅಕ್ಕಿಯೇ ಗಟ್ಟಿಯಾಗಿತ್ತು. ಕಾರಣ ಕಡಿಮೆ ಸಂಬಳದಲ್ಲೂ, ಅನ್ನ ರಾಮಯ್ಯ ಎಂಬ ಕೀರ್ತಿಗಳಿಸಿದ್ದಂತ ಸಿದ್ಧರಾಮಯ್ಯ ಕೊಡುತ್ತಿದ್ದ 10 ಕೆಜಿ ಅಕ್ಕಿ ಹೊಟ್ಟೆ ತುಂಬಿಸುತ್ತಿತ್ತು. ಆದರೇ ಕಂಪನಿಯವರು ಟಿಡಿಎಸ್ ಪಡೆಯೋದಕ್ಕೆ ಐಟಿ ಫೈಲ್ ಮಾಡಬೇಕು ಎಂದಿದ್ದಕ್ಕೆ ಮಾಡಿದ್ದರ ಕಾರಣ, ಬಿಪಿಎಲ್ ಕಾರ್ಡ್ ರದ್ದಗೊಂಡು ವ್ಯಥೆ ಪಡುವಂತಾಗಿದೆ. ಆ ಬಿಪಿಎಲ್ ಕಾರ್ಡ್ ರದ್ದಾದವರ ಕಥೆ ಮುಂದೆ ಓದಿ. ರಾಜ್ಯದ ಹಳ್ಳಿಯೊಂದರಲ್ಲಿ ಅಪ್ಪ-ಮಗ ಇಬ್ಬರಿದ್ದರು. ಉದ್ಯೋಗ ಹರಸಿ ಬಂದಾಗ, ಹೆಚ್ಚು ಓದಿಲ್ಲದ ಅವರಿಗೆ ಜೀವನ ನಿರ್ವಹಣೆಗೆ ಸೇರಿದ್ದು ಸ್ವಿಗ್ಗಿಯಲ್ಲಿ ಪುಡ್ ಡಿಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಕಷ್ಟ ಪಟ್ಟು ದುಡಿದಂತ ದುಡ್ಡಿನಲ್ಲೇ ಕಂಪನಿಯಿಂದ ಟಿಡಿಎಸ್ ಕಡಿತಗೊಳಿಸಿ ಹಣವನ್ನು ನೀಡಲಾಗುತ್ತಿತ್ತು. ಒಂದು ವರ್ಷಗಳ ಹಿಂದೆ ಕೆಲಸ ಬಿಟ್ಟಾಗ, ಕಂಪನಿಯವರು ನಿಮ್ಮ ಕಡಿತದ ಟಿಡಿಎಸ್ ಪಡೆಯೋದಕ್ಕೆ ಐಟಿ ಫೈಲ್ ಮಾಡಿ ಎಂಬುದಾಗಿ ಸೂಚಿಸಿತ್ತು. ಸ್ವಿಗ್ಗಿ ಕಂಪನಿಯವರು ಹೇಳಿದ್ದ…

Read More

ಬೆಂಗಳೂರು: ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಭೂ ಪರಿವರ್ತಿಸುವುದಕ್ಕೆ ಸರ್ಕಾರ ಅವಕಾಶ ನೀಡಿದೆ. ಆದರೇ ಈ ಉದ್ದೇಶಗಳಿಗಾಗಿ ಕೆಲವು ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.  ಈ ಸಂಬಂಧ ಕಂದಾಯ ಇಲಾಖೆಯ ಭೂಮಂಜೂರಾತಿ ವಿಭಾಗದ ಸರ್ಕಾರದ ಅಧೀನ ಕಾರ್ಯದರ್ಶಿಯವರು ದಿನಾಂಕ 20-02-2019ರಲ್ಲೇ ಹೊರಡಿಸಿರುವಂತ ನಡವಳಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95(2) ರಡಿಯಲ್ಲಿ ಕೃಷಿ ಉದ್ದೇಶಕ್ಕಾಗಿ ಹೊಂದಿರುವ ಭೂಮಿಯ ಅಧಿಭೋಗದಾರನು ಅಂತಹ ಜಮೀನನ್ನು ಅಥವಾ ಅದರ ಯಾವುದೇ ಭಾಗವನ್ನು ಕೃಷಿಯೇತರ ಉದ್ದೇಶಕ್ಕಾಗಿ ಪರಿವರ್ತಿಸಲು ಇಚ್ಚಿಸಿದರೆ ಜಿಲ್ಲಾಧಿಕಾರಿಯವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ(1)ರ ಸರ್ಕಾರದ ಸುತ್ತೋಲೆ ದಿನಾಂಕ: 17-10-2008 ರನ್ವಯ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961 (ಕೆಟಿಪಿಪಿ) ಅನ್ವಯ ಕೃಷಿ ಜಮೀನನ್ನು ಭೂ ಪರಿವರ್ತಿಸಲಾದ ಯಾವುದೇ ಕಾನೂನಿನ ಉಪಬಂಧಗಳನ್ನು ಉಲ್ಲಂಘಿಸುತ್ತಿಲ್ಲವೆಂಬುದನ್ನು ಹಾಗೂ ಭೂ ಉಪಯೋಗ ಬದಲಾವಣೆಗೆ ಸಂಬಂಧಿಸಿದ ಓಡಿಪಿ ಮತ್ತು ಸಿಡಿಪಿ ಅನ್ವಯ ಇದೆಯೇ ಎನ್ನುವ ಕುರಿತು ದೃಢೀಕರಿಸಿಕೊಳ್ಳುವ…

Read More

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶ ಸಲುವಾಗಿ ನಡೆದ ಮೂಲ ದಾಖಲೆಗಳ ಪರಿಶೀಲನೆ ವೇಳೆ ಪರಿಶಿಷ್ಟ ಜಾತಿಯ ಒಳ ಮೀಸಲಾತಿ (SCA, SCB, SCC) ಸಂಬಂಧ ದಾಖಲೆ ಸಲ್ಲಿಸದಿರುವ ಅಭ್ಯರ್ಥಿಗಳು ನ.25 ಮತ್ತು 26 ರಂದು ಖುದ್ದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಗೆ ಬಂದು ಸಲ್ಲಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ದಾಖಲೆ ಪರಿಶೀಲನೆ ವೇಳೆಗೆ ಅನೇಕರು ತಹಶೀಲ್ದಾರ್ ಅವರಿಂದ ಒಳ ಮೀಸಲಾತಿ ಕುರಿತ ಪ್ರಮಾಣ ಪತ್ರಗಳನ್ನು ಪಡೆಯಲು ಆಗಿರಲಿಲ್ಲ ಎಂದು ಅನೇಕ ಅಭ್ಯರ್ಥಿಗಳು ಮನವಿ ಸಲ್ಲಿಸಿದ ಕಾರಣಕ್ಕೆ ಈ ಅನುಕೂಲ ಮಾಡಲಾಗಿದೆ. ಯಾರೆಲ್ಲ ದಾಖಲೆಗಳನ್ನು ಪರಿಶೀಲನಾ ಅರ್ಜಿ ಜತೆ ಸಲ್ಲಿಸುತ್ತಾರೊ ಅಂತಹವರನ್ನು ಸದರಿ ಪ್ರವರ್ಗದಡಿ ಸೀಟು ಹಂಚಿಕೆಗೆ ಪರಿಗಣಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. https://kannadanewsnow.com/kannada/whatever-siddaramaiah-says-it-is-the-same-as-the-scriptures-dcm-d-k-shivakumar/ https://kannadanewsnow.com/kannada/nutritionist-clarifies-whether-to-use-freshly-prepared-or-leftover-atta-dough-kept-in-refrigerator-wheat-is-not-the-villain/

Read More

ಬೆಂಗಳೂರು: ಮಾಧ್ಯಮಗಳು ಸ್ವಯಂ ನಿಯಂತ್ರಣ ವಿಧಿಸಿಕೊಂಡು ಸತ್ಯ ಮತ್ತು ನಿಖರ ಸುದ್ದಿಗಳನ್ನು ಜನರಿಗೆ ತಲುಪಿಸಲು ಸಂಘಟಿತ ನಡೆಸುವ ಮೂಲಕ ವಿಶ್ವಾಸರ್ಹತೆ ಕಾಪಾಡಿಕೊಳ್ಳಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ನಗರದ ಗಾಂಧೀಭವನದಲ್ಲಿಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ರಾಜ್ಯ ಮಟ್ಟದ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸುದ್ದಿಯನ್ನು ತಲುಪಿಸುವ ನಿಟ್ಟಿನಲ್ಲಿ ಧಾವಂತ ಬೇಡ. ಸರಿಯಾದ ಸುದ್ದಿಯನ್ನು ಜನರಿಗೆ ತಲುಪಿಸುವುದು ಆದ್ಯತೆಯಾಗಬೇಕು ಎಂದು ಸಲಹೆ ನೀಡಿದರು. ಇದು ಕೃತಕ ಬುದ್ಧಿಮತ್ತೆ (ಎ.ಐ.)ಕಾಲವಾಗಿದ್ದು, ಮಾಧ್ಯಮಗಳು ಸುದ್ದಿ ಪ್ರಸಾರಕ್ಕೆ ಮುನ್ನ ಸುದ್ದಿ ಚಿತ್ರಗಳ ನೈಜತೆಯನ್ನು ಖಚಿತ ಪಡಿಸಿಕೊಳ್ಳುವುದು ಅಗತ್ಯ. ಸುಳ್ಳು ಸುದ್ದಿಗಳು, ನಕಲಿ ಚಿತ್ರ, ದೃಶ್ಯಗಳ ಬಗ್ಗೆ ಎಚ್ಚರಿಕೆ ಅಗತ್ಯ. ಒಮ್ಮೆ ಚಾರಿತ್ರ್ಯವಧೆ ಆದರೆ ಮತ್ತೆ ಅದನ್ನು ಸರಿಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಮಾಧ್ಯಮಗಳಿಗೆ ವಿಶ್ವಾಸಾರ್ಹತೆ ಮುಖ್ಯ. ಹೀಗಾಗಿ ಪೂರ್ವಾಗ್ರಹ ಪೀಡಿತವಾಗಿ ಮತ್ತು ರೋಚಕ ಸುದ್ದಿಗಳನ್ನು ಬಿತ್ತಸಿರುವ ಧಾವಂತದಲ್ಲಿ ಸುಳ್ಳೇ ಸತ್ಯ ಎಂಬಂತೆ…

Read More