Author: kannadanewsnow09

ನವದೆಹಲಿ: ಮನೆಯನ್ನು ಸಾಕಿ ಸಲಹುವ ಗೃಹಿಣಿಯನ್ನು ‘ನಿರುದ್ಯೋಗಿ’ ಅಥವಾ ‘ಕೆಲಸವಿಲ್ಲದವಳು’ ಎಂದು ಕರೆಯುವುದು ತಪ್ಪು. ಜೀವನಾಂಶವನ್ನು (Maintenance) ನಿರ್ಧರಿಸುವಾಗ ಆಕೆ ಮಾಡುವ ಮನೆಗೆಲಸ ಹಾಗೂ ಕುಟುಂಬಕ್ಕಾಗಿ ನೀಡುವ ಬೆಂಬಲವನ್ನು ಅವಶ್ಯವಾಗಿ ಪರಿಗಣಿಸಬೇಕು ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪತಿ-ಪತ್ನಿ ನಡುವಿನ ವಿವಾದವೊಂದರ ವಿಚಾರಣೆ ನಡೆಸಿದ ನ್ಯಾಯಾಲಯ, ಗೃಹಿಣಿಯರ ಶ್ರಮದ ಕುರಿತು ಅತ್ಯಂತ ಮಾರ್ಮಿಕವಾದ ಮಾತುಗಳನ್ನು ಹೇಳಿದೆ. ತೀರ್ಪಿನ ಪ್ರಮುಖ ಮುಖ್ಯಾಂಶಗಳು: ಮನೆಗೆಲಸವೇ ಪತಿಯ ವೃತ್ತಿಜೀವನದ ಅಡಿಪಾಯ: ಪತ್ನಿ ಮನೆಯ ಜವಾಬ್ದಾರಿ, ಮಕ್ಕಳ ಆರೈಕೆ ಮತ್ತು ಕುಟುಂಬವನ್ನು ನಿಭಾಯಿಸುವುದರಿಂದಲೇ ಪತಿ ಹೊರಗಡೆ ಹೋಗಿ ತನ್ನ ವೃತ್ತಿಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ. ಆದ್ದರಿಂದ, ಜೀವನಾಂಶ ನೀಡುವಾಗ ಆಕೆಯ ಈ ಶ್ರಮವನ್ನು ಕಡೆಗಣಿಸುವುದು ವಾಸ್ತವಕ್ಕೆ ದೂರವಾದುದು ಮತ್ತು ತಪ್ಪು ಎಂದು ಕೋರ್ಟ್ ಹೇಳಿದೆ. ವಿದ್ಯಾವಂತೆಯಾದರೂ ಜೀವನಾಂಶ ಅನ್ವಯ: ಮಹಿಳೆಯು ವಿದ್ಯಾವಂತೆ ಅಥವಾ ದುಡಿಯುವ ಸಾಮರ್ಥ್ಯ ಹೊಂದಿದ್ದಾಳೆ ಎಂಬ ಕಾರಣಕ್ಕೆ ಆಕೆಗೆ ಜೀವನಾಂಶ ನೀಡಲು ನಿರಾಕರಿಸುವಂತಿಲ್ಲ. “ದುಡಿಯುವ ಸಾಮರ್ಥ್ಯವಿರುವುದು” ಮತ್ತು “ನಿಜವಾಗಿಯೂ ದುಡಿಯುತ್ತಿರುವುದು” ಕಾನೂನಿನ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯದ ಅಡಿಪಾಯವೇ ಸಾಮಾಜಿಕ ನ್ಯಾಯ. ಆ ಸಿದ್ಧಾಂತದ ಮೇಲೆ ರಾಜಕೀಯ ಮಾಡಿಕೊಂಡು ಬಂದಿದ್ದಾರೆ. ಇದರಲ್ಲಿ ಹೊಸದೇನು ಇಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಮೇಲೆ ಬದ್ಧರಾಗಿದ್ದಾರೆ. ಹಿಂದಿನಿಂದಲೂ ಕೂಡ ಸಾಮಾಜಿಕ ನ್ಯಾಯದ ಪರವಾಗಿದ್ದಾರೆ. ಅವರ ರಾಜಕೀಯದ ಅಡಿಪಾಯವೇ ಸಾಮಾಜಿಕ ನ್ಯಾಯ. ಹೊಸದಾಗಿ ಇವತ್ತು ಮಾಡುತ್ತಿಲ್ಲ ಎಂದರು. ರಂಜಾನ್ ಹಬ್ಬ ಹಾಗೂ ಹೋಳಿ ಹಬ್ಬ ಆಚರಣೆ ವೇಳೆ ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಕೊಡಬಾರದು. ಸಂತೋಷದಿಂದ ಹಬ್ಬ ಆಚರಿಸಬೇಕು. ಅದನ್ನು ಬಿಟ್ಟು ಬೇರೆ ರೀತಿಯಲ್ಲಿ ನಡೆಸಲು ಆವಕಾಶವಿಲ್ಲ. ಅದಕ್ಕೆ ಅವಕಾಶ ಕೊಡುವುದೂ ಇಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಮೊಬೈಲ್ ಬ್ಯಾನ್ ವಿಚಾರದ ಕುರಿತು ಮಾತನಾಡಿ, ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ಚಿಂತನೆ ನಡೆದಿದೆ. 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಕೊಟ್ಟರೆ…

Read More

ಬೆಂಗಳೂರು: ರಾಜ್ಯದಲ್ಲಿ ಸಂಪುಟ ಪುನಾರಚನೆ ಕೋರಿ ಕಾಂಗ್ರೆಸ್ ಹೈಕಮಾಂಡ್ ಗೆ 31 ಶಾಸಕರು ಪತ್ರ ಬರೆದಿದ್ದಾರೆ. ಮೊದಲ ಬಾರಿಗೆ ಆಯ್ಕೆಯಾದವರು ಸೇರಿದಂತೆ ಯಾರೆಲ್ಲ ಸಹಿ ಮಾಡಿದ್ದಾರೆ ಎನ್ನುವ ಪಟ್ಟಿ ಮುಂದಿದೆ ನೋಡಿ. ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಮಹತ್ವದ ಬೆಳವಣಿಗೆಯೊಂದರಲ್ಲಿ, ಸಚಿವ ಸಂಪುಟವನ್ನು ಕೂಡಲೇ ಪುನಾರಚನೆ ಮಾಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್‌ನ 31 ಶಾಸಕರು ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ. ಈ ನಡೆಯು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿರುವುದನ್ನು ಸಾಬೀತುಪಡಿಸಿದೆ. ಕಳೆದ ಕೆಲವು ದಿನಗಳಿಂದ ತೆರೆಮರೆಯಲ್ಲಿ ನಡೆಯುತ್ತಿದ್ದ ಸಚಿವ ಸ್ಥಾನದ ಆಕಾಂಕ್ಷಿಗಳ ಚಟುವಟಿಕೆ ಈಗ ಬಹಿರಂಗಗೊಂಡಿದೆ. ಪ್ರಸ್ತುತ ಇರುವ ಸಚಿವ ಸಂಪುಟದಲ್ಲಿ ಬದಲಾವಣೆ ತರಬೇಕು ಮತ್ತು ಹೊಸ ಮುಖಗಳಿಗೆ ಅವಕಾಶ ನೀಡಬೇಕು ಎಂಬ ಬೇಡಿಕೆಯೊಂದಿಗೆ 31 ಶಾಸಕರು ಸಹಿ ಮಾಡಿರುವ ಪತ್ರವನ್ನು ಎಐಸಿಸಿ (AICC) ನಾಯಕರಿಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಶಾಸಕರ ಪ್ರಮುಖ ಬೇಡಿಕೆಗಳೇನು? ಹೊಸಬರಿಗೆ ಅವಕಾಶ: ಎರಡೂವರೆ ವರ್ಷಗಳ ನಂತರ ಸಂಪುಟ ಪುನಾರಚನೆ ಮಾಡಲಾಗುವುದು ಎಂಬ ಹಿಂದಿನ ಭರವಸೆಯನ್ನು ಈಡೇರಿಸಬೇಕು.…

Read More

ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆ ಕೋರಿ ಕಾಂಗ್ರೆಸ್ ಪಕ್ಷದ 31 ಶಾಸಕರು ಪತ್ರವನ್ನು ಹೈಕಮಾಂಡ್ ಗೆ ಬರೆದಿದ್ದಾರೆ. ರಾಹುಲ್ ಗಾಂಧಿ, ಸುರ್ಜೇವಾಲಾಗೆ ಶಾಸಕರು ಮೊದಲ ಬಾರಿಗೆ ಗೆದ್ದ ಶಾಸಕರಿಂದಲೇ ಪತ್ರ ಬರೆಯಲಾಗಿದೆ. ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಮಹತ್ವದ ಬೆಳವಣಿಗೆಯೊಂದರಲ್ಲಿ, ಸಚಿವ ಸಂಪುಟವನ್ನು ಕೂಡಲೇ ಪುನಾರಚನೆ ಮಾಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್‌ನ 31 ಶಾಸಕರು ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ. ಈ ನಡೆಯು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿರುವುದನ್ನು ಸಾಬೀತುಪಡಿಸಿದೆ. ಕಳೆದ ಕೆಲವು ದಿನಗಳಿಂದ ತೆರೆಮರೆಯಲ್ಲಿ ನಡೆಯುತ್ತಿದ್ದ ಸಚಿವ ಸ್ಥಾನದ ಆಕಾಂಕ್ಷಿಗಳ ಚಟುವಟಿಕೆ ಈಗ ಬಹಿರಂಗಗೊಂಡಿದೆ. ಪ್ರಸ್ತುತ ಇರುವ ಸಚಿವ ಸಂಪುಟದಲ್ಲಿ ಬದಲಾವಣೆ ತರಬೇಕು ಮತ್ತು ಹೊಸ ಮುಖಗಳಿಗೆ ಅವಕಾಶ ನೀಡಬೇಕು ಎಂಬ ಬೇಡಿಕೆಯೊಂದಿಗೆ 31 ಶಾಸಕರು ಸಹಿ ಮಾಡಿರುವ ಪತ್ರವನ್ನು ಎಐಸಿಸಿ (AICC) ನಾಯಕರಿಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಶಾಸಕರ ಪ್ರಮುಖ ಬೇಡಿಕೆಗಳೇನು? ಹೊಸಬರಿಗೆ ಅವಕಾಶ: ಎರಡೂವರೆ ವರ್ಷಗಳ ನಂತರ ಸಂಪುಟ ಪುನಾರಚನೆ ಮಾಡಲಾಗುವುದು ಎಂಬ ಹಿಂದಿನ ಭರವಸೆಯನ್ನು…

Read More

ನವದೆಹಲಿ: ವಿಶ್ವಪ್ರಸಿದ್ಧ ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಜನ್ಯ ಕೊಬ್ಬು ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಈ ವಿವಾದದ ತನಿಖೆ ನಡೆಸಲು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡಕ್ಕೆ (SIT) ನ್ಯಾಯಾಲಯ ಹಸಿರು ನಿಶಾನೆ ತೋರಿಸಿದೆ. ಪ್ರಕರಣದ ಹಿನ್ನೆಲೆ: ತಿರುಪತಿ ತಿರುಮಲ ದೇವಸ್ಥಾನದ (TTD) ಲಡ್ಡು ಪ್ರಸಾದ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಕಲಬೆರಕೆಯಾಗಿದೆ ಎಂಬ ಆರೋಪ ಇಡೀ ದೇಶಾದ್ಯಂತ ಸಂಚಲನ ಮೂಡಿಸಿತ್ತು. ಈ ಬಗ್ಗೆ ತನಿಖೆ ನಡೆಸಲು ಆಂಧ್ರಪ್ರದೇಶ ಸರ್ಕಾರ SIT ರಚಿಸಿತ್ತು. ಆದರೆ, ಈ ತನಿಖೆಯ ನಿಷ್ಪಕ್ಷಪಾತದ ಬಗ್ಗೆ ಪ್ರಶ್ನೆ ಎತ್ತಿ ಹಲವು ಅರ್ಜಿಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದವು. ಸುಪ್ರೀಂಕೋರ್ಟ್ ಹೇಳಿದ್ದೇನು? ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ರಾಜ್ಯ ಸರ್ಕಾರದ ತನಿಖಾ ತಂಡವು ಸ್ವತಂತ್ರವಾಗಿ ಕೆಲಸ ಮಾಡಲಿ ಎಂದು ಸೂಚಿಸಿದೆ. ದೇವಸ್ಥಾನದ ಪಾವಿತ್ರ್ಯತೆ ಮತ್ತು ಭಕ್ತರ ನಂಬಿಕೆಯ ದೃಷ್ಟಿಯಿಂದ ಈ ತನಿಖೆ ಅತ್ಯಗತ್ಯ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಆದರೆ, ತನಿಖೆಯ ಮೇಲೆ ಕೇಂದ್ರದ ನಿಗಾ…

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಬಂದಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ಅವರ ಶಸ್ತ್ರಾಸ್ತ್ರ ಪರವಾನಗಿ (Gun License) ಅಮಾನತುಗೊಳಿಸಿ ಪೊಲೀಸರು ಹೊರಡಿಸಿದ್ದ ಆದೇಶಕ್ಕೆ ನ್ಯಾಯಾಲಯ ಈಗ ತಡೆಯಾಜ್ಞೆ ನೀಡಿದೆ. ಪ್ರಕರಣದ ಹಿನ್ನೆಲೆ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎದುರಿಸುತ್ತಿರುವ ಕ್ರಿಮಿನಲ್ ಆರೋಪಗಳ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಅವರ ಗನ್ ಲೈಸೆನ್ಸ್ ಅನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದರು. ಪೊಲೀಸರ ಈ ಕ್ರಮವನ್ನು ಪ್ರಶ್ನಿಸಿ ದರ್ಶನ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ವಿಚಾರಣೆ ಮತ್ತು ತೀರ್ಪು: ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ದರ್ಶನ್ ಪರ ವಕೀಲರು ಮಂಡಿಸಿದ ವಾದದ ಪ್ರಮುಖ ಅಂಶಗಳು ಇಲ್ಲಿವೆ: ದರ್ಶನ್ ಅವರು 2008 ರಿಂದಲೂ ಅಧಿಕೃತವಾಗಿ ಶಸ್ತ್ರಾಸ್ತ್ರ ಪರವಾನಗಿ ಹೊಂದಿದ್ದಾರೆ. ಯಾವುದೇ ಕಾನೂನುಬಾಹಿರ ಚಟುವಟಿಕೆಗೆ ಅವರು ಶಸ್ತ್ರಾಸ್ತ್ರ ಬಳಸಿಲ್ಲ. ಕೇವಲ ಕ್ರಿಮಿನಲ್ ಪ್ರಕರಣ…

Read More

ನವದೆಹಲಿ: ಅಮೆರಿಕದ ಸುಪ್ರೀಂ ಕೋರ್ಟ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜಾಗತಿಕ ಸುಂಕಗಳನ್ನು ರದ್ದುಗೊಳಿಸಿರುವ ಮತ್ತು ಅದರ ಬೆನ್ನಲ್ಲೇ ಟ್ರಂಪ್ ಅವರು ಹೊಸದಾಗಿ 15% ಜಾಗತಿಕ ಸುಂಕ ವಿಧಿಸಿರುವ ಕ್ರಮವು ಭಾರತದ ಆರ್ಥಿಕತೆಯ ಮೇಲೆ ಯಾವ ಪರಿಣಾಮ ಬೀರಲಿದೆ ಎಂದು ಈಗಲೇ ಹೇಳುವುದು ಅಕಾಲಿಕ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬದಲಾಗುತ್ತಿರುವ ಈ ಆರ್ಥಿಕ ಸನ್ನಿವೇಶದ ಬಗ್ಗೆ ಎಚ್ಚರಿಕೆಯ ಪ್ರತಿಕ್ರಿಯೆ ನೀಡಿದರು. ಹಿನ್ನೆಲೆ: ಅಮೆರಿಕದಲ್ಲಿ ಏನಾಗುತ್ತಿದೆ? ಜಾಗತಿಕ ವ್ಯಾಪಾರ ಯುದ್ಧದ ಸಮಯದಲ್ಲಿ ಡೊನಾಲ್ಡ್ ಟ್ರಂಪ್ ಅವರು ವಿಧಿಸಿದ್ದ ಹಲವಾರು ಸುಂಕಗಳನ್ನು ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಗೊಳಿಸುವ ಮೂಲಕ ಟ್ರಂಪ್ ಆಡಳಿತಕ್ಕೆ ದೊಡ್ಡ ಹೊಡೆತ ನೀಡಿದೆ. ಆದರೆ, ಈ ತೀರ್ಪು ಬಂದ ಕೆಲವೇ ಗಂಟೆಗಳಲ್ಲಿ ಟ್ರಂಪ್ ಅವರು ಎಲ್ಲಾ ದೇಶಗಳಿಂದ ಅಮೆರಿಕಕ್ಕೆ ಪ್ರವೇಶಿಸುವ ಆಮದುಗಳ ಮೇಲೆ ಹೊಸ 10% ಸುಂಕವನ್ನು ಘೋಷಿಸಿದರು. ನಂತರ ಶನಿವಾರದ ವೇಳೆಗೆ ಅದನ್ನು 15% ಕ್ಕೆ ಏರಿಸುವ ಮೂಲಕ ಜಾಗತಿಕ…

Read More

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಒಂದೇ ವಾರದಲ್ಲಿ ಎರಡನೇ ಬಲಿಯಾಗಿದೆ. ಇಂದು ಕಾಡಾನೆ ದಾಳಿಯಿಂದ ಮಹಿಳೆ ಬಲಿ ಪ್ರಕರಣ ವಿಕೋಪಕ್ಕೆ ತಿರುಗಿದ್ದು ಪ್ರತಿಭಟನಾ ನಿರತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದಂತ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಕಾಫಿ ತೋಟ ಒಂದರಲ್ಲಿ ಕೆಲಸಕ್ಕೆ ತೆರಳಿದ ಕಾರ್ಮಿಕ ಬೋರಮ್ಮನ ಮೇಲೆ ಕಾಡಾನೆ ದಾಳಿ ಮಾಡಿ ತುಳಿದು ಸಾಯಿಸಿದೆ. ಕಳೆದ ಒಂದು ವಾರದ ಮಧ್ಯದಲ್ಲಿ ಆನೆ ತುಳಿತಕ್ಕೆ ಬಲಿಯಾದ ಎರಡನೇ ಪ್ರಕರಣ ಇದಾಗಿದೆ. ಇದರಿಂದ ಕೆರಳಿದ ಸ್ಥಳೀಯರು ಬಾಳೆಹೊನ್ನೂರಿನಲ್ಲಿ ಪ್ರತಿಭಟನೆ ನಡೆಸಿದರು. ಈ ಹಂತದಲ್ಲಿ ಅಧಿಕಾರಿಗಳು ಮತ್ತು ಪ್ರತಿಭಟನಾ ನಿರತರ ಮಧ್ಯೆ ಮಾತಿನ ಚಿಕಮಕಿ ನಡೆದಿದ್ದು , ಇದು ಒಂದು ಹಂತದಲ್ಲಿ ವಿಕೋಪಕ್ಕೆ ತೆರಳಿ ಕೆಲವರು ಕಲ್ಲು ತೂರಾಟ ನಡೆಸಿದರು ಎನ್ನಲಾಗಿದೆ. ಹೀಗಾಗಿ ಪೊಲೀಸರು ಗಲಭೆ ನಿಯಂತ್ರಿಸಲು ಲಾಠಿ ಪ್ರಹಾರ ನಡೆಸಿದ್ದು, ಪ್ರತಿಭಟನಾ ನಿರತರು ದಿಕ್ಕು ಪಾಲಾಗಿ ಓಡಿದ್ದಾರೆ. ಮಹಿಳೆ ಮೃತದೇಹ ಇಟ್ಟು ಪ್ರತಿಭಟನೆ ಮಾಡಿದ್ದು , 50…

Read More

ಕಾರವಾರ : ಮುಂದಿನ ಆಯವ್ಯಯದಲ್ಲಿ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಯ ಜನರಿಗೆ ಭರವಸೆ ನೀಡಿದರು. ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಾರವಾರ ಲೋಕೋಪಯೋಗಿ ಇಲಾಖೆ ಆಯೋಜಿಸಲಾಗಿದ್ದ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟಿಸಿ ಮಾತನಾಡಿದರು. ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸುವ ಉದ್ದೇಶದಿಂದ ನಮ್ಮ ಸರ್ಕಾರ 2016 ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಈ ವೈದ್ಯಕೀಯ ಕಾಲೇಜನ್ನು ಪ್ರಾರಂಭಿಸಲಾಗಿದ್ದು, ಇಂದು 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸುಮಾರು 200 ಕೋಟಿ ರೂ. ವೆಚ್ಚದಲ್ಲಿ ಇಂದು ನಿರ್ಮಿಸಲಾಗಿದೆ. ಈ ಮೊದಲು ಇಲ್ಲಿನ ಜನರು ಉನ್ನತ ಮಟ್ಟದ ಚಿಕಿತ್ಸೆಗಾಗಿ ಉಡುಪಿ, ಮಂಗಳೂರು, ಹುಬ್ಬಳ್ಳಿಗೆ ಹೋಗುತ್ತಿದ್ದರು. ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮುಂದಿನ ಆಯವ್ಯಯದಲ್ಲಿ ಮಂಜೂರು ಮಾಡುವುದಾಗಿ ಸಿಎಂ ಭರವಸೆ…

Read More

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಆನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಮಹಿಳೆಯೊಬ್ಬರನ್ನು ತುಳಿದು ಆನೆ ಕೊಂದು ಹಾಕಿದೆ. ಇದರಿಂದ ಆಕ್ರೋಶಗೊಂಡ ಜನರು ಪ್ರತಿಭಟನೆ ನಡೆಸಿದರು. ಇಂತಹ ಪ್ರತಿಭಟನೆಯನ್ನು ಹತೋಟಿಗೆ ತರೋದಕ್ಕೆ ಪೊಲೀಸರು ಠಾಣೆ ಪ್ರಹಾರ ಕೂಡ ನಡೆಸಿದ್ದಾರೆ. ಚಿಕ್ಕಮಗಳೂರಲ್ಲಿ ಆನೆ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ನರ ರಾಕ್ಷಸ ಆನೆಯನ್ನು ಸೆರೆ ಹಿಡಿಯುವಂತೆ ಆಗ್ರಹಿಸಿದ್ದರೂ ಸೂಕ್ತ ಕ್ರಮ ವಹಿಸದೇ ಇರೋದೇ ಇದಕ್ಕೆ ಕಾರಣ ಎಂಬುದಾಗಿ ಜನರು ರೊಚ್ಚಿಗೆದ್ದು ಪ್ರತಿಭಟನೆ ನಡೆಸಿದರು. ಇದಷ್ಟೇ ಅಲ್ಲದೇ ಪ್ರತಿಭಟನಾಕಾರರಿಂದ ಪೊಲೀಸ್ ವಾಹನವನ್ನ ಜಖಂ ಗೊಳಿಸೋದಕ್ಕೂ ಮುಂದಾದರು. ಇದನ್ನು ತಡೆಯೋದಕ್ಕೆ ಪೊಲೀಸರು ಪ್ರತಿಭಟನಾ ನಿರತರ ಮೇಲೆ ಲಾಠಿ ಬೀಸಿದರು. ಉದ್ರಿಕ್ತರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರಿಂದಾಗಿ ಪರಿಸ್ಥಿತಿ ಕೆಲ ಕಾಲ ವಿಕೋಪಕ್ಕೂ ತಿರುಗಿತು. ಪೊಲೀಸರು-ಪ್ರತಿಭಟನಾಕಾರರ ನಡುವೆ ವಾಗ್ವಾದವೂ ನಡೆಯಿತು. https://kannadanewsnow.com/kannada/sagars-avinhalli-villagers-protest-against-inadequate-power-supply-protest-in-front-of-mescom-office-on-feb-24/ https://kannadanewsnow.com/kannada/hdk-hits-back-at-siddaramaiah-saying-that-deve-gowda-and-kumaraswamy-did-not-raise-vokkaligas/

Read More