Author: kannadanewsnow09

ಜಾಜ್‌ಪುರ: ಗುರುವಾರ ಇಲ್ಲಿನ ಪಾಣಿಕೊಯಿಲಿ ಪೊಲೀಸ್ ವ್ಯಾಪ್ತಿಯ ಖಂಡಾರಾಪುರ-ಸಿಂಗಡ ಗ್ರಾಮದಲ್ಲಿ ಆಸ್ತಿ ವಿವಾದಕ್ಕಾಗಿ 23 ವರ್ಷದ ಯುವಕನೊಬ್ಬ ತನ್ನ ವೃದ್ಧ ಅಜ್ಜಿಯನ್ನು ಮಿನಿ ಟ್ರಕ್‌ ಹರಿಸಿ ಕೊಂದಿರುವಂತ ಶಾಕಿಂಗ್ ಘಟನೆ ನಡೆದಿದೆ. ಮೃತನನ್ನು 70 ವರ್ಷದ ಕುಲಿ ಸಾಹೂ ಎಂದು ಗುರುತಿಸಲಾಗಿದೆ. ಕುಲಿ ಅವರ ಮೊಮ್ಮಗ ಮತ್ತು ಆರೋಪಿ ಕಾರ್ತಿಕ್ ಸಾಹೂ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವರದಿಗಳ ಪ್ರಕಾರ, ವೃತ್ತಿಯಲ್ಲಿ ರೈತರಾಗಿದ್ದ ಕುಲಿ ಮತ್ತು ಅವರ ಪತಿ ಫೋಯಿನಾ ಸಾಹೂ, ಖಂಡಾರಾಪುರ-ಸಿಂಗಡ ಗ್ರಾಮದ ತಮ್ಮ ಮನೆಯಲ್ಲಿ ವಾಸಿಸುತ್ತಿದ್ದರು. ವೃದ್ಧಾಪ್ಯದ ಕಾರಣ ಅವರ ಆರೋಗ್ಯ ಹದಗೆಟ್ಟಾಗ, ಅವರ ಏಕೈಕ ಪುತ್ರ ನಾರಾಯಣ್ ಅವರನ್ನು ನೋಡಿಕೊಳ್ಳಲಿಲ್ಲ ಎಂದು ವರದಿಯಾಗಿದೆ. ನಂತರ, ವೃದ್ಧ ದಂಪತಿಗಳ ವಿವಾಹಿತ ಮಗಳು ಅನಿತಾ ಸಾಹೂ ಅವರನ್ನು ನೋಡಿಕೊಂಡರು. ಕೆಲವು ವರ್ಷಗಳ ಹಿಂದೆ, ಫೋಯಿನಾ ತನ್ನ ಜಮೀನಿನ ಒಂದು ಭಾಗವನ್ನು ಅನಿತಾಗೆ ಉಡುಗೊರೆಯಾಗಿ ನೀಡಿ ಅವಳ ಹೆಸರಿಗೆ ನೋಂದಾಯಿಸಿದ್ದರು. ಈ ಘಟನೆಯಿಂದ ನಾರಾಯಣ್, ಅವರ ಪತ್ನಿ ಮತ್ತು ಮಕ್ಕಳು ಕೋಪಗೊಂಡಿದ್ದರು.…

Read More

ಬೆಂಗಳೂರು: ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಕರಾರಸಾ ನಿಗಮದಿಂದ 1000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಆ ಮೂಲಕ ಕ್ರಿಸ್ ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಕೆ ಎಸ್ ಆರ್ ಟಿ ಸಿ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿ ಸಿ ಮಾಹಿತಿ ನೀಡಿದ್ದು, ದಿನಾಂಕ:25.12.2025 ರಂದು ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:19.12.2025, 20.12.2025 ಹಾಗೂ 24.12.2025 ರಂದು ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 1000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ: 26.12.2025 ಹಾಗೂ 28.12.2025 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ,…

Read More

ನಾವು ನಮ್ಮ ಮಕ್ಕಳನ್ನು ಒಳ್ಳೆಯ ಶಾಲೆಗಳಲ್ಲಿ ಓದುವಂತೆ ಮಾಡುತ್ತೇವೆ, ಇದರಿಂದ ನಾವು ಕಷ್ಟಪಟ್ಟರೂ ಅವರು ಓದಬಹುದು ಮತ್ತು ಉತ್ತಮ ಅಂಕಗಳನ್ನು ಪಡೆಯುತ್ತಾರೆ. ಪ್ರಸ್ತುತ ಸನ್ನಿವೇಶದಲ್ಲಿ ಎಲ್ಲಾ ಮಕ್ಕಳು ಒಳ್ಳೆಯ ಮತ್ತು ಬುದ್ಧಿವಂತ ಮಕ್ಕಳು ಮತ್ತು ಓದುವ ಮಕ್ಕಳು. ಆದರೆ ಕೆಲವು ಮಕ್ಕಳು ಪರೀಕ್ಷೆಯ ಸಮಯದಲ್ಲಿ ಓದುವುದೆಲ್ಲವನ್ನೂ ಮರೆತುಬಿಡುತ್ತಾರೆ. ಕೆಲವು ಮಕ್ಕಳು ಯಾವಾಗಲೂ ಸ್ವಲ್ಪ ಜಡವಾಗಿರುತ್ತಾರೆ. ಇದು ಬದಲಾಗಬೇಕಾದರೆ ಸರಸ್ವತಿ ದೇವಿಯ ಕೃಪೆಗೆ ಪಾತ್ರರಾಗಬೇಕು. ಆ ಕೃಪೆಯನ್ನು ಪರಿಪೂರ್ಣವಾಗಿ ಪಡೆಯಲು ಈ ಒಂದು ಸಾಲಿನ ಮಂತ್ರ ಸಾಕು ಎನ್ನುತ್ತದೆ ಆಧ್ಯಾತ್ಮಿಕತೆ . ಈ ಪೋಸ್ಟ್‌ನಲ್ಲಿ, ಮಂತ್ರ ಯಾವುದು ಮತ್ತು ಅದನ್ನು ಹೇಗೆ ಹೇಳಬೇಕೆಂದು ನೀವು ವಿವರವಾಗಿ ನೋಡಬಹುದು. ತಮ್ಮ ಮಕ್ಕಳು ಚೆನ್ನಾಗಿ ಓದಿ ಉತ್ತಮ ಸ್ಥಾನದಲ್ಲಿರಬೇಕು ಎಂಬುದು ಪೋಷಕರ ದೊಡ್ಡ ಕನಸು. ಇಂದು ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಭವಿಷ್ಯವನ್ನು ಹೊಂದಲು ಬೆಳಿಗ್ಗೆಯಿಂದ ಸಂಜೆಯವರೆಗೆ ದಣಿವರಿಯಿಲ್ಲದೆ ಶ್ರಮಿಸುತ್ತಾರೆ. ಅದಕ್ಕೆ ಆಧಾರವೆಂದರೆ ಅವರು ಉತ್ತಮ ಶಿಕ್ಷಣ ಪಡೆಯಬೇಕು. ಈ ಶಿಕ್ಷಣ ಪಡೆಯಲು ನಮ್ಮ ದೊಡ್ಡ ಶಾಲೆಗಳಿಗೆ…

Read More

ಮಂಡ್ಯ : ಮದ್ದೂರು ತಾಲೂಕಿನ ಸೋಮನಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಬೆಳ್ಳಿ ಹಬ್ಬ ಮಹೋತ್ಸವ ಮತ್ತು ಗುರುವಂದನಾ ಕಾರ್ಯಕ್ರಮವನ್ನು ಡಿ. 20 ರಂದು ಹಮ್ಮಿಕೊಳ್ಳಲಾಗಿದೆ ಎಂದು ತರಬೇತಿ ಸಂಸ್ಥೆಯ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎ.ಎಂ.ಮಹೇಶ್ ಗುರುವಾರ ಹೇಳಿದರು. ಕೈಗಾರಿಕಾ ತರಭೇತಿ ಸಂಸ್ಥೆ ಮತ್ತು ಉದ್ಯೋಗ ಇಲಾಖೆ, ತರಭೇತಿ ಸಂಸ್ಥೆ ಹಾಗೂ ಹಳೇ ವಿದ್ಯಾರ್ಥಿಗಳ ಸಂಘದ ಸಹಯೋಗದಲ್ಲಿ ನಡೆಯುವ ಬೆಳ್ಳಿ ಹಬ್ಬ ಮತ್ತು ಗುರುವಂದನಾ ಕಾರ್ಯಕ್ರಮವನ್ನು ಕ್ಷೇತ್ರದ ಶಾಸಕರಾದ ಕೆ.ಎಂ.ಉದಯ್ ಅವರು ಅಧ್ಯಕ್ಷತೆ ವಹಿಸಲಿದ್ದು, ಇಲಾಖೆಯ ಆಯುಕ್ತರಾದ ಡಾ.ರಾಗಾ ಪ್ರಿಯ ಅವರು ಬೆಳಿಗ್ಗೆ 11 ಗಂಟೆಗೆ ಉದ್ಘಾಟಿಸಲಿದ್ದಾರೆ ಎಂದು ಸುದ್ದಿಗೊಷ್ಠಿಯಲ್ಲಿ ತಿಳಿಸಿದರು. 2002 ರಲ್ಲಿ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕೈಗಾರಿಕಾ ತರಭೇತಿ ಸಂಸ್ಥೆ ಅಸ್ತಿತ್ವಕ್ಕೆ ಬಂದಿತು. ಈಗ ಸಂಸ್ಥೆಗೆ 25 ವಸಂತಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬ ಆಚರಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ 5 ಮಂದಿಗೆ ಸನ್ಮಾನಿಸಲಾಗುವುದು ಎಂದರು. ಇದೇ ಸಂದರ್ಭದಲ್ಲಿ ಬೆಳ್ಳಿ ಹಬ್ಬದ ಅಂಗವಾಗಿ ಹೊರ…

Read More

ಮಂಡ್ಯ.:- 2025-26ನೇ ಸಾಲಿನ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಡಿಸೆಂಬರ್ 21 ರಿಂದ 24 ರವರೆಗೆ (ಗ್ರಾಮೀಣ ಪ್ರದೇಶದಲ್ಲಿ 3 ದಿನಗಳು & ನಗರ ಪ್ರದೇಶದಲ್ಲಿ 4 ದಿನಗಳು) ಹಮ್ಮಿಕೊಳ್ಳಲಾಗಿದೆ. 2025ನೇ ಸಾಲಿನ ಪಲ್ಸ್ ಪೋಲಿಯೋ ಕಾರ್ಯಕ್ರಮದ ಸೂಕ್ಷ್ಮ ಕ್ರಿಯಾ ಯೋಜನೆಯ ಅನುಸಾರ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ 0-5 ವರ್ಷದೊಳಪಟ್ಟ ಒಟ್ಟು 1,16,724 ಮಕ್ಕಳಿಗೆ ಲಸಿಕೆ ನೀಡಬೇಕಾಗಿದ್ದು, ಶೇ. 100 ರಷ್ಟು ಸಾಧನೆ ಮಾಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಒಟ್ಟು 723 ಪೋಲಿಯೋ ಬೂತ್‌ಗಳು, 1446 ತಂಡಗಳು, 2892 ಲಸಿಕಾ ಸಿಬ್ಬಂದಿಗಳು, 120 ವಾಹನಗಳನ್ನು ಹಾಗೂ 146 ಮೇಲ್ವಿಚಾರಕರುಗಳನ್ನು ನಿಯೋಜಿಸಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಸದರಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಉದ್ಘಾಟನೆಯನ್ನು ಡಿಸೆಂಬರ್ 21 ರ ಬೆಳಿಗ್ಗೆ 8.00 ಕ್ಕೆ “ಮಂಡ್ಯ ನಗರದ ಕಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ” ಜಿಲ್ಲಾ ಆಡಳಿತ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಳಗಾವಿ ಸುವರ್ಣ ವಿಧಾನಸೌಧ: 2023-24ನೇ ಸಾಲಿನ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ  ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು ದಿ.3.5.2025  ರಿಂದ ದಿನಾಂಕ: 9.5.2025 ರವರೆಗೆ ಮುಖ್ಯ ಪರೀಕ್ಷೆ ನಡೆಸಿದ್ದು, ಪ್ರಸ್ತುತ ಮುಖ್ಯ ಪರೀಕ್ಷೆಯ  ಪರೀಕ್ಷೋತ್ತರ  ಕಾರ್ಯಗಳ ಪ್ರಕ್ರಿಯೆಯು ಪ್ರಗತಿಯಲ್ಲಿದೆ 20 ದಿನದಲ್ಲಿ ಪೂರ್ಣಗೊಳ್ಳಲಿದೆ ಎಂದು ಮುಖ್ಯ ಮಂತ್ರಿಗಳ ಪರವಾಗಿ ಸಣ್ಣ ನಿರಾವರಿ ಸಚಿವ ಎನ್.ಎಸ್.ಬೋಸರಾಜು ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಶಾಸಕ ನಿರಾಣಿ ಹನುಮಂತ ರುದ್ರಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಕೆಎಎಸ್ ಪೂರ್ವಭಾವಿ ಪರೀಕ್ಷೆ ಬರೆದು ಪಾಸಾದ ಪರೀಕ್ಷೆಯ ಅಭ್ಯರ್ಥಿಗಳ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ) ನಿಯಮಗಳು 1997 ಹಾಗೂ ತಿದ್ದುಪಡಿ ನಿಯಮಗಳನ್ವಯ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.

Read More

ಬೆಳಗಾವಿ ಸುವರ್ಣಸೌಧ : ರಾಜ್ಯ ಸರ್ಕಾರ ಬಿ.ಪಿ.ಎಲ್.ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹಾಗೂ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ.ಸಿ.ಎನ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಬಿ.ಪಿ.ಎಲ್ ಕಾರ್ಡ್‍ದಾರರ ಆದಾಯ ಮಿತಿಯನ್ನು ರೂ.1.20 ಲಕ್ಷಕ್ಕೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ ರೂ.500 ಕೂಲಿ ದೊರೆಯುತ್ತದೆ. ಇದರ ಆಧಾರದಲ್ಲಿ ಕೂಲಿ ಮಾಡುವವರ ಆದಾಯವೂ ವರ್ಷಕ್ಕೆ ರೂ.1.80 ಲಕ್ಷಕ್ಕೂ ಅಧಿಕವಾಗುತ್ತಿದೆ. ಈ ಹಿನ್ನಲೆಯಲ್ಲಿ ಪರಿಷ್ಕರಿಸಲು ಚಿಂತನೆ ನಡೆದಿದೆ ಎಂದರು. ಕೇಂದ್ರ ಸರ್ಕಾರ ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಿದೆ. ರಾಜ್ಯದಲ್ಲಿ 4.53 ಲಕ್ಷ ಬಿ.ಪಿ.ಎಲ್ ಹಾಗೂ 1.25 ಲಕ್ಷ ಎ.ಪಿ.ಎಲ್ ಕಾರ್ಡ್ ಹೊಂದಿರುವ…

Read More

ಬೆಳಗಾವಿ ಸುವರ್ಣ ವಿಧಾನಸೌಧ : ಬರುವ ಶೈಕ್ಷಣಿಕ ವರ್ಷದೊಳಗೆ 11ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ ಪೂಂಜ ಅವರು ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ನೇಮಕಾತಿ ಹಾಗೂ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಕುರಿತು ಮಾಹಿತಿಯನ್ನು ಕೇಳಿದ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ರಾಜ್ಯದಲ್ಲಿ 41,088 ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 178935 ಹುದ್ದೆಗಳು ಮಂಜೂರಾಗಿದ್ದು ಈ ಪೈಕಿ 133345 ಹುದ್ದೆಗಳು ಭರ್ತಿಯಾಗಿದ್ದು, 45590 ಹುದ್ದೆಗಳು ಖಾಲಿ ಇರುತ್ತವೆ. ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಅವರು ವಿವರಿಸಿದರು. ರಾಜ್ಯದಲ್ಲಿ 5024 ಸರ್ಕಾರಿ ಪ್ರೌಢ ಶಾಲೆಗಳಿದ್ದು, ಈ ಪ್ರೌಢಶಾಲೆಗಳಿಗೆ 44,144 ಹುದ್ದೆಗಳು ಮಂಜೂರಾಗಿರುತ್ತವೆ. ಈ ಪೈಕಿ 32010 ಹುದ್ದೆಗಳು…

Read More

ಬೆಳಗಾವಿ ಸುವರ್ಣವಿಧಾನಸೌಧ : ರಾಜ್ಯದಲ್ಲಿ ಕಳೆದ 2.5 ವರ್ಷದಲ್ಲಿ ಪೊಲೀಸರು 61299 ಸ್ವಯಂ ಪ್ರೇರಿತ ದೂರುಗಳನ್ನು ದಾಖಲು ಮಾಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಅವರು ವಿಧಾನ ಪರಿಷತ್ ನಲ್ಲಿ ಶಾಸಕ ಸಿ. ಟಿ. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ದಾಖಲು ಮಾಡಿರುವ ಸ್ವಯಂ ಪ್ರೇರಿತ ದೂರುಗಳಲ್ಲಿ 57646 ದೂರುಗಳಿಗೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದ್ದು, ಯಾವುದೇ ದೂರಗಳನ್ನು ಹಿಂಪಡೆದಿಲ್ಲ ಎಂದು ತಿಳಿಸಿದರು. ಸ್ವಯಂ ಪ್ರೇರಿತ ದೂರುಗಳನ್ನು ದಾಖಲಿಸುವಾಗ, ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಂದರ್ಭ, ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯನ್ನುಂಟು ಮಾಡಿದ ಸಂದರ್ಭ, ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದಲ್ಲಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದಲ್ಲಿ, ವಾರಸುದಾರರು ಯಾರೂ ಇಲ್ಲದೇ ಇರುವ ಪ್ರಕರಣಗಳಲ್ಲಿ, ದ್ವೇಷಭಾಷಣ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗುವ ಸಂದರ್ಭಗಳಲ್ಲಿ, ಕೆಲವು ಪ್ರಕರಣಗಳಲ್ಲಿ ಸಾರ್ವಜನಿಕರು ದೂರು ನೀಡಲು ಬಾರದೇ ಇದ್ದ ಸಂದರ್ಭಗಳಲ್ಲಿ ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗುವುದು ಎಂದರು. ಸಾರ್ವಜನಿಕರ ಪ್ರಾಣ ಮತ್ತು ಮಾನ ಕಾಪಾಡುವ ಸಂದರ್ಭಗಳಲ್ಲಿ…

Read More

ಬೆಳಗಾವಿ ಸುವರ್ಣ ವಿಧಾನಸೌಧ: ರಾಜ್ಯದಲ್ಲಿ ಅಬಕಾರಿ ಆದಾಯದ ಪ್ರಮಾಣ ಏರಿಕೆಯಾಗುತ್ತಿದ್ದು, ಪ್ರಸಕ್ತ 2025-26ನೇ ಹಣಕಾಸು ವರ್ಷದ ನವೆಂಬರ್ ಅಂತ್ಯದ ವೇಳೆಗೆ ಸರ್ಕಾರಕ್ಕೆ 24,287.83 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಲಿಖಿತ ಉತ್ತರ ನೀಡಿದ್ದು, ರಾಜ್ಯದ ಅಬಕಾರಿ ವಹಿವಾಟಿನ ಕಂಪು ಮತ್ತು ಪರವಾನಗಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಆದಾಯದ ಹರಿವು: ಕಳೆದ ವರ್ಷಕ್ಕೆ ಹೋಲಿಸಿದರೆ ಸಾಧನೆ 2024-25ನೇ ಸಾಲಿನಲ್ಲಿ ಒಟ್ಟು ಅಬಕಾರಿ ಆದಾಯ 34,636.11 ಕೋಟಿ ರೂ. ಆಗಿತ್ತು (ಇದರಲ್ಲಿ 28,852.53 ಕೋಟಿ ರೂ. ಮೌಲ್ಯದ ಹಾಟ್‌ ಡ್ರಿಂಕ್ಸ್‌ ಮತ್ತು ಬಿಯರ್‌ನಿಂದ 5,783.58 ಕೋಟಿ ರೂ. ಆದಾಯ ಬಂದಿತ್ತು). ಪ್ರಸಕ್ತ ಸಾಲಿನ ನವೆಂಬರ್ 2025ರ ಅಂತ್ಯಕ್ಕೆ ಹಾಟ್ ಡ್ರಿಂಕ್ಸ್’ನಿಂದ 20,614.08 ಕೋಟಿ ರೂ. ಹಾಗೂ ಬಿಯರ್ ಮಾರಾಟದಿಂದ 3,673.75 ಕೋಟಿ ರೂ. ಸಂಗ್ರಹವಾಗಿದೆ ಎಂದು ಸಚಿವರು ಉತ್ತರಿಸಿದ್ದಾರೆ. ಪರವಾನಗಿಗಳ ವಿವರ: ಸಿಎಲ್-2 ಮತ್ತು ಸಿಎಲ್-9…

Read More