Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮಿಕ್ಕುಳಿದ (ಉಳಿದ ಮೂಲ) ವೃಂದದಲ್ಲಿನ ವಿವಿಧ ಜಿಲ್ಲಾ, ನಗರ ಹಾಗೂ ಘಟಕಗಳಲ್ಲಿ ಖಾಲಿ ಇರುವ ಒಟ್ಟು 3,395 ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ರಾಜ್ಯದ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ನೇಮಕಾತಿಯ ಪ್ರಮುಖ ಪ್ರಕ್ರಿಯೆಯಾದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನಡೆಸಲಿದ್ದು, ಆಫ್ಲೈನ್-ಒಎಂಆರ್ (Offline-OMR) ಮಾದರಿಯಲ್ಲಿ ಪರೀಕ್ಷೆಗಳು ಜರುಗಲಿವೆ ಎಂದಿದ್ದಾರೆ. ಒಟ್ಟು 3,395 ಹುದ್ದೆಗಳಲ್ಲಿ ಪುರುಷ ಅಭ್ಯರ್ಥಿಗಳಿಗೆ 2266, ಮಹಿಳಾ ಅಭ್ಯರ್ಥಿಗಳಿಗೆ 755, ಸೇವಾನಿರತ ಪುರುಷರಿಗೆ 257, ಸೇವಾನಿರತ ಮಹಿಳೆಯರಿಗೆ 82 ಹಾಗೂ ತೃತೀಯ ಲಿಂಗಿ ಅಭ್ಯರ್ಥಿಗಳಿಗೆ 35 ಹುದ್ದೆಗಳನ್ನು ಕಾಯ್ದಿರಿಸಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ₹37,500 ರಿಂದ ₹76,100 ರವರೆಗಿನ ವೇತನ ಶ್ರೇಣಿ ಅನ್ವಯವಾಗಲಿದ್ದು, ರಾಷ್ಟ್ರೀಯ ಪಿಂಚಣಿ ಯೋಜನೆ (NPS) ಸೌಲಭ್ಯ ದೊರೆಯಲಿದೆ ಎಂಬ ವಿವರಗಳನ್ನು ಸಚಿವ ಪ್ರಿಯಾಂಕ್…
ಕನಕಪುರ :”ಕ್ಷೇತ್ರದ ಬಡವರಿಗೆ ತಲೆ ಮೇಲೆ ಸೂರು, ಸ್ಥಳೀಯರಿಗೆ ಕೈಗಾರಿಕೆಗಳಲ್ಲಿ ಉದ್ಯೋಗ ಕಡ್ಡಾಯ. ಮೆಡಿಕಲ್ ಕಾಲೇಜು ಶೀಘ್ರ ಪ್ರಾರಂಭ. ಸಮಸ್ಯೆಗಳನ್ನು ಆಲಿಸಲು ಅಧಿಕಾರಿ ನೇಮಕ” – ಹೀಗೆ ಕ್ಷೇತ್ರದ ಜನರಿಗೆ ಪಂಚ ವಚನಗಳನ್ನು ಸಿಎಂ ಡಿ.ಕೆ.ಶಿವಕುಮಾರ್ ಅವರು ನೀಡಿದರು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ತವರು ಕ್ಷೇತ್ರ ಕನಕಪುರದ ವಿವಿಧ ಭಾಗಗಳಿಗೆ ಭಾನುವಾರ ಭೇಟಿ ನೀಡಿ ಜನರಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದರು. “ನನ್ನ ಕ್ಷೇತ್ರದ ಜನರಿಗೆ ನನ್ನ ಮನೆ ಬಾಗಿಲು ಸದಾ ತೆರೆದಿರುತ್ತದೆ. ನಾನು ನಿಮ್ಮ ಸೇವೆಗೆ ಇರುವವನು. ನಿಮ್ಮ ಆಶೀರ್ವಾದದಿಂದ ಮುಖ್ಯಮಂತ್ರಿ ಸ್ಥಾನಕ್ಕೇರಿದ್ದೇನೆ. ನನ್ನ ಕ್ಷೇತ್ರಕ್ಕೆ ಕಾಲಿಟ್ಟ ಕ್ಷಣದಿಂದ ನಾನು ಜನರ ಸೇವಕ. ಜಿಲ್ಲಾ ಪಂಚಾಯತಿ, ಟಿಎಪಿಸಿಎಂಎಸ್ ಮೂಲಕ ನನ್ನ ರಾಜಕೀಯ ಪ್ರಾರಂಭ ಮಾಡಿದೆ. ಪಕ್ಷಬೇಧ ಮರೆತು ನನ್ನನ್ನು ಬೆಳೆಸಿದ್ದೀರಿ” ಎಂದರು. ಮೆಡಿಕಲ್ ಕಾಲೇಜು ನನ್ನ ಕನಸಾಗಿತ್ತು ತುಂಗಣಿ ಗ್ರಾಮದಲ್ಲಿ ಮಾತನಾಡಿದ ಅವರು, “ಅಕ್ಷರ, ಆಶ್ರಯ, ಆರೋಗ್ಯ ಹುಡುಕಿಕೊಂಡು ವಲಸೆ ಹೋಗಬೇಡಿ. ಅದೆಲ್ಲವೂ…
ಕನಕಪುರ : “ಈ ಜಿಲ್ಲೆಯಲ್ಲಿ (ಬೆಂಗಳೂರು ದಕ್ಷಿಣ) ಮತ್ತೊಬ್ಬ ಡಿ.ಕೆ. ಶಿವಕುಮಾರ್ ನನ್ನು ಹುಟ್ಟುಹಾಕಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಸಾಧ್ಯವೇ? ಖಂಡಿತಾ ಇಲ್ಲ. ಇದನ್ನು ಬಿಜೆಪಿ ಹಾಗೂ ದಳದ ಕಾರ್ಯಕರ್ತರು ಮನದಟ್ಟು ಮಾಡಿಕೊಳ್ಳಬೇಕು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ಭಾನುವಾರ ತವರು ಕ್ಷೇತ್ರ ಕನಕಪುರದ ವಿವಿಧ ಭಾಗಗಳಿಗೆ ಭೇಟಿ ನೀಡಿ ಜನರಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದರು. “ನೀವು ಯಾರನ್ನು ಒಪ್ಪಿಸದಿದ್ದರೂ ನಿಮ್ಮ ಆತ್ಮಸಾಕ್ಷಿ ಒಪ್ಪಬೇಕು. ಪಿಜಿಆರ್ ಸಿಂಧ್ಯಾ, ವಿಶ್ವನಾಥ್, ನಾರಾಯಣ ಗೌಡರು, ಯು.ಕೆ. ಸ್ವಾಮಿ ಅವರು ನನ್ನ ವಿರುದ್ಧ ಚುನಾವಣೆಯಲ್ಲಿ ನಿಂತಿದ್ದರು. ಅವರು ಈಗ ನನ್ನ ಪರವಾಗಿ ನನ್ನ ಜತೆ ನಿಂತಿದ್ದಾರೆ. ಅವರೇನೂ ದಡ್ಡರಾ? ಮತ್ತೊಬ್ಬ ಶಿವಕುಮಾರ್ ಬರುವುದಿಲ್ಲ, ಜನರಿಗೆ ಒಳ್ಳೆಯದಾಗಲಿ ಎಂದು ಅವರು ನನ್ನ ಜತೆ ಕೈ ಜೋಡಿಸಿದ್ದಾರೆ” ಎಂದು ತಿಳಿಸಿದರು. ವೈಷಮ್ಯ ಮರೆತು ಕ್ಷೇತ್ರದ ಒಳಿತಿಗೆ ಒಟ್ಟಾಗಿ ಕೆಲಸ ಮಾಡೋಣ “ನಿಮ್ಮಲ್ಲಿ…
ಬೆಂಗಳೂರು: ರಾಜ್ಯದಲ್ಲಿ ರೌಡಿಸಂ ಮತ್ತು ಅಸಾಮಾಜಿಕ ಚಟುವಟಿಕೆಗಳನ್ನು ಸಂಪೂರ್ಣವಾಗಿ ಮಟ್ಟಹಾಕಲು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಮುಖ್ಯಮಂತ್ರಿಯವರ ನಿರ್ದೇಶನದ ಬೆನ್ನಲ್ಲೇ, ರಾಜ್ಯಾದ್ಯಂತ ಪ್ರತಿ ಪೊಲೀಸ್ ವಲಯ ಹಾಗೂ ಠಾಣಾ ಮಟ್ಟದಲ್ಲಿ ಕಡ್ಡಾಯವಾಗಿ ‘ಆಂಟಿ ರೌಡಿ ಸ್ಕ್ವಾಡ್’ (Anti-Rowdy Squads) ರಚಿಸುವಂತೆ ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾ ಪರಿಶೋಧಕ (DG & IGP) ಡಾ. ಎಂ.ಎ. ಸಲೀಂ, ಐಪಿಎಸ್ ಅವರು ಮಹತ್ವದ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸುವುದು ಹಾಗೂ ರೌಡಿ ಅಂಶಗಳ ವಿರುದ್ಧ ‘ಶೂನ್ಯ ಸಹಿಷ್ಣುತೆ’ (Zero Tolerance) ನೀತಿಯನ್ನು ಅನುಸರಿಸುವುದು ಈ ಹೊಸ ಸ್ಕ್ವಾಡ್ಗಳ ಮುಖ್ಯ ಉದ್ದೇಶವಾಗಿದೆ. ಭಯದ ವಾತಾವರಣಕ್ಕೆ ಬ್ರೇಕ್ ರೌಡಿ ಅಂಶಗಳು ಸಮಾಜದಲ್ಲಿ ಅನಗತ್ಯ ಭಯದ ವಾತಾವರಣ ಸೃಷ್ಟಿಸುತ್ತಿವೆ, ಸಾಮಾಜಿಕ ಸೌಹಾರ್ದತೆಯನ್ನು ಹಾಳುಮಾಡುತ್ತಿವೆ ಮತ್ತು ಸಾರ್ವಜನಿಕ ಶಾಂತಿಗೆ ಧಕ್ಕೆಯುಂಟುಮಾಡುತ್ತಿವೆ ಎಂದು ಸುತ್ತೋಲೆಯಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ. ಕರ್ನಾಟಕ ಪೊಲೀಸ್ ಮ್ಯಾನುಯಲ್ ಪ್ರಕಾರ, ಸಾರ್ವಜನಿಕ ಶಾಂತಿ ಕಾಯ್ದುಕೊಳ್ಳಲು ರೌಡಿಗಳ ಗುರುತಿಸುವಿಕೆ, ನೋಂದಣಿ ಮತ್ತು…
ಸಾಮಾನ್ಯವಾಗಿ ನಾವು ದಿನನಿತ್ಯದ ಓಡಾಟದಲ್ಲಿ ಕಾಲಿನಲ್ಲಿ ಕಾಣಿಸಿಕೊಳ್ಳುವ ಸಣ್ಣಪುಟ್ಟ ನೋವು ಅಥವಾ ಸೆಳೆತಗಳನ್ನು ನಿರ್ಲಕ್ಷಿಸುತ್ತೇವೆ. ಆದರೆ, ಇತ್ತೀಚಿನ ವೈದ್ಯಕೀಯ ವರದಿಗಳ ಪ್ರಕಾರ, ವರ್ಷಕ್ಕೆ ಬರೋಬ್ಬರಿ 10 ಲಕ್ಷಕ್ಕೂ ಹೆಚ್ಚು ಜನರನ್ನು ಕಾಡುವ ಅತ್ಯಂತ ಮಾರಣಾಂತಿಕವಾದ ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ (ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್) ನ ಆರಂಭಿಕ ಲಕ್ಷಣಗಳು ಮೊದಲು ಕಾಲಿನಲ್ಲಿಯೇ ಗೋಚರಿಸುತ್ತವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ಅನ್ನು ವೈದ್ಯಕೀಯ ಲೋಕದಲ್ಲಿ “ಸೈಲೆಂಟ್ ಕಿಲ್ಲರ್” (ಮೌನ ಹಂತಕ) ಎಂದು ಕರೆಯಲಾಗುತ್ತದೆ. ಏಕೆಂದರೆ ಇದು ಆರಂಭಿಕ ಹಂತದಲ್ಲಿ ಯಾವುದೇ ಪ್ರಮುಖ ರೋಗಲಕ್ಷಣಗಳನ್ನು ತೋರಿಸದೆ ವೇಗವಾಗಿ ಹರಡುತ್ತದೆ. ಆದರೆ, ಬ್ರಿಟಿಷ್ ಆರೋಗ್ಯ ತಜ್ಞರು ಮತ್ತು ರಾಷ್ಟ್ರೀಯ ಆರೋಗ್ಯ ಸೇವೆ (NHS) ನೀಡಿರುವ ಮಾಹಿತಿ ಪ್ರಕಾರ, ಕಾಲಿನಲ್ಲಿ ಕಂಡುಬರುವ ಈ ಕೆಳಗಿನ ನಾಲ್ಕು ಪ್ರಮುಖ ಬದಲಾವಣೆಗಳು ಈ ಮಾರಣಾಂತಿಕ ಕಾಯಿಲೆಯ ಮೊದಲ ಮುನ್ಸೂಚನೆಗಳಾಗಿರಬಹುದು. ಕಾಲಿನಲ್ಲಿ ಕಂಡುಬರುವ ಆ 4 ಪ್ರಮುಖ ಲಕ್ಷಣಗಳು: ಕಾಲಿನಲ್ಲಿ ನಿರಂತರ ನೋವು (Pain): ಯಾವುದೇ ಗಾಯವಾಗದಿದ್ದರೂ ಕಾಲಿನಲ್ಲಿ ನಿರಂತರವಾಗಿ ಅಥವಾ ವಿಪರೀತ…
ಮಂಡ್ಯ : ಯಾವುದಾದರೂ ಸಭೆ, ಸಮಾರಂಭ ಕಾರ್ಯಕ್ರಮಗಳ ವೇದಿಕೆಗಳಲ್ಲಿ ಗಣ್ಯ, ವ್ಯಕ್ತಿಗಳು, ಅಧಿಕಾರಿಗಳು ಹಾಗೂ ಸಮಾಜದಲ್ಲಿ ಗಣನೀಯ ಸೇವೆ ಸಲ್ಲಿಸಿರುವವರನ್ನು ಗುರುತಿಸಿ ಸನ್ಮಾನ ಮಾಡುವುದು ಸಾಮಾನ್ಯ ಆದರೆ, ತಮ್ಮ ಸಂಸ್ಥೆಯ ಶೌಚಗೃಹ, ಕಾವಲುಗಾರರು, ಚಾಲಕರು ಹಾಗೂ ಸಿಬ್ಬಂದಿಗಳನ್ನು ಅಭಿನಂದಿಸುವ ಮೂಲಕ ವಿಶಿಷ್ಟ ಕಾರ್ಯಕ್ರಮಕ್ಕೆ ಆರ್.ಕೆ.ವಿದ್ಯಾಸಂಸ್ಥೆ ಸಾಕ್ಷಿಯಾಯಿತು. ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆಯ ಆರ್.ಕೆ.ವಿದ್ಯಾಸಂಸ್ಥೆ ವತಿಯಿಂದ ಶನಿವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಇಂತಹ ಕಾರ್ಯಕ್ರಮಕ್ಕೆ ಎಲ್ಲರೂ ಸಾಕ್ಷಿಯಾದರು. ಸಂಸ್ಥೆಯ ಅಧ್ಯಕ್ಷ ಬಿ.ರಾಮಕೃಷ್ಣ ಮಾತನಾಡಿ, ಆರ್.ಕೆ.ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಸುಮಾರು 100 ಕ್ಕೂ ಹೆಚ್ಚು ಬೋಧಕೆತರ ವರ್ಗದವರನ್ನು ಸನ್ಮಾನಿಸುತ್ತಿರುವುದು ಮೆಚ್ಚುಗೆಯ ಸಂಗತಿಯಾಗಿದೆ. ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲರಲ್ಲೂ ಒಂದೇ ಭಾವನೇ ಮೂಡಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಂಸ್ಥೆಯ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರು, ಆಡಳಿತ ಮಂಡಳಿ, ಜೊತೆಗೆ ಬೋಧಕೇತರ ವರ್ಗದವರ ಪಾತ್ರ ಅನನ್ಯವಾಗಿದ್ದು, ಹೀಗಾಗಿ ಅವರಿಗೆ ಗೌರವ ಸಮರ್ಪಣೆ ಮಾಡಲಾಗುತ್ತಿದೆ ಎಂದರು. ಸಂಸ್ಥೆಯು ಈಗಾಗಲೇ ಇಂತಹ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ…
ಮಳೆಗಾಲ ಅಥವಾ ಬೇಸಿಗೆಯ ಸಮಯದಲ್ಲಿ ಮನೆಗಳ ಸುತ್ತಮುತ್ತ ಹಾವುಗಳ ಕಾಟ ಹೆಚ್ಚಾಗುವುದು ಸಾಮಾನ್ಯ. ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ಗಿಡ-ಗಂಟೆಗಳು ಹೆಚ್ಚಾಗಿರುವ ಜಾಗಗಳಲ್ಲಿ ಹಾವುಗಳು ಯಾವಾಗ ಮನೆಯೊಳಗೆ ನುಗ್ಗುತ್ತವೆಯೋ ಎಂಬ ಭಯ ಎಲ್ಲರನ್ನೂ ಕಾಡುತ್ತಿರುತ್ತದೆ. ಹಾವುಗಳನ್ನು ಮನೆಯಿಂದ ದೂರವಿಡಲು ಮಾರುಕಟ್ಟೆಯಲ್ಲಿ ಹತ್ತಾರು ರಾಸಾಯನಿಕಗಳು ಸಿಗುತ್ತವೆಯಾದರೂ, ಅವುಗಳಿಗಿಂತ ನೈಸರ್ಗಿಕ ಹಾಗೂ ಸುಲಭವಾದ ಉಪಾಯವೊಂದು ಇಲ್ಲಿದೆ. ನಿಮ್ಮ ಮನೆಯ ಮುಖ್ಯ ದ್ವಾರ ಅಥವಾ ಬಾಗಿಲ ಬಳಿ ‘ಸ್ನೇಕ್ ಪ್ಲಾಂಟ್’ (Snake Plant) ಎಂಬ ವಿಶಿಷ್ಟ ಗಿಡವನ್ನು ಬೆಳೆಸುವುದರಿಂದ ಹಾವುಗಳು ನಿಮ್ಮ ಮನೆಯೊಳಗೆ ಪ್ರವೇಶಿಸಲು ಧೈರ್ಯ ಮಾಡುವುದಿಲ್ಲ ಎಂದು ತೋಟಗಾರಿಕಾ ತಜ್ಞರು ಮತ್ತು ಪರಿಸರ ಪ್ರಿಯರು ಹೇಳುತ್ತಾರೆ. ಹಾವುಗಳನ್ನು ದೂರವಿಡಲು ಸ್ನೇಕ್ ಪ್ಲಾಂಟ್ ಹೇಗೆ ಸಹಾಯ ಮಾಡುತ್ತದೆ? ಸ್ನೇಕ್ ಪ್ಲಾಂಟ್ (ಶಾಸ್ತ್ರೀಯ ಹೆಸರು: Sansevieria trifasciata) ಎಲೆಗಳು ಹಾವಿನ ಚರ್ಮದ ವಿನ್ಯಾಸವನ್ನು ಹೋಲುತ್ತವೆ ಮತ್ತು ಅವುಗಳ ಮೇಲ್ಭಾಗವು ಅತ್ಯಂತ ಚೂಪಾಗಿರುತ್ತದೆ. ಹಾವುಗಳು ಅತ್ಯಂತ ಸೂಕ್ಷ್ಮವಾದ ಚರ್ಮವನ್ನು ಹೊಂದಿರುವುದರಿಂದ, ಈ ಚೂಪಾದ ಎಲೆಗಳ ಸ್ಪರ್ಶಕ್ಕೆ ಅವು ಹೆದರುತ್ತವೆ.…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಎಂಟು ದಿನಗಳ ಕಾಲ ಕರ್ನಾಟಕದಾದ್ಯಂತ ಭಾರೀ ಮಳೆ, ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ನೈಋತ್ಯ ಮುಂಗಾರು ತೀವ್ರವಾಗಿರುವುದರಿಂದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್’ ಮತ್ತು ‘ಯೆಲ್ಲೋ’ ಅಲರ್ಟ್! ಮುಂದಿನ ಕೆಲವು ದಿನಗಳ ಕಾಲ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲೂ ಮಳೆಯ ತೀವ್ರತೆ ಕರಾವಳಿ ಮಾತ್ರವಲ್ಲದೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ,…
ನವದೆಹಲಿ: ಸಾಮಾನ್ಯವಾಗಿ ನಮಗೆ ದೃಷ್ಟಿ ದೋಷ ಅಥವಾ ಕಣ್ಣಿನ ತೊಂದರೆ ತೀವ್ರವಾಗುವವರೆಗೂ ನಾವು ಕಣ್ಣುಗಳ ಆರೋಗ್ಯದ ಕಡೆಗೆ ಗಮನ ಕೊಡುವುದಿಲ್ಲ. ಕಣ್ಣುಗಳು ಸುಸ್ತಾಗಿವೆ, ವಯಸ್ಸಾಗುತ್ತಿದೆ ಅಥವಾ ಮೊಬೈಲ್-ಲ್ಯಾಪ್ಟಾಪ್ ಸ್ಕ್ರೀನ್ ಹೆಚ್ಚು ನೋಡುತ್ತಿರುವುದರಿಂದ ಹೀಗಾಗುತ್ತಿದೆ ಎಂದು ನಾವೇ ಸಮರ್ಥನೆ ಮಾಡಿಕೊಳ್ಳುತ್ತೇವೆ. ಆದರೆ, ಕಣ್ಣುಗಳಲ್ಲಿ ದೃಷ್ಟಿ ಮಂಜಾಗುವ ಮುನ್ನವೇ ಅವು ನಮ್ಮ ದೇಹದ ಗಂಭೀರ ಆರೋಗ್ಯ ಸಮಸ್ಯೆಗಳ ಬಗ್ಗೆ ಕೆಲವು ‘ಮೌನ’ ಸೂಚನೆಗಳನ್ನು ನೀಡುತ್ತಿರುತ್ತವೆ. ವಿಶ್ವದಾದ್ಯಂತ ಸುಮಾರು 4.3 ಕೋಟಿಗೂ ಹೆಚ್ಚು ಜನರು ದೃಷ್ಟಿಹೀನತೆಯಿಂದ ಬಳಲುತ್ತಿದ್ದಾರೆ. ಆದರೆ ಶೇ. 90 ಕ್ಕಿಂತ ಹೆಚ್ಚು ಕಣ್ಣಿನ ಸಮಸ್ಯೆಗಳನ್ನು ಮೊದಲೇ ಗುರುತಿಸಿದರೆ ತಡೆಯಬಹುದು ಎನ್ನುತ್ತಾರೆ ತಜ್ಞರು. ಆರ್ಬಿಸ್ (ಇಂಡಿಯಾ) ಸಂಸ್ಥೆಯ ಕಂಟ್ರಿ ಡೈರೆಕ್ಟರ್ ಆದ ಡಾ. ರಿಷಿ ರಾಜ್ ಬೋರಾ ಅವರ ಪ್ರಕಾರ, ಕಣ್ಣುಗಳು ನೀಡುವ ಈ 5 ಲಕ್ಷಣಗಳನ್ನು ನಾವು ಎಂದಿಗೂ ನಿರ್ಲಕ್ಷಿಸಬಾರದು: 1. ನಿರಂತರವಾಗಿ ದೃಷ್ಟಿ ಮಂಜಾಗುವುದು (Persistent Blurred Vision) ದೀರ್ಘಕಾಲ ಸ್ಕ್ರೀನ್ ನೋಡಿದಾಗ ಕಣ್ಣು ಮಂಜಾಗುವುದು ಸಹಜ. ಆದರೆ, ನಿಮ್ಮ ದೃಷ್ಟಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಮೇಜರ್ ಸರ್ಜರಿಯನ್ನು ಮಾಡಲಾಗಿದೆ. ಆರು ಐಎಎಸ್ ಹಾಗೂ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ರಾಜ್ಯ ಸರ್ಕಾರವು ಭಾನುವಾರ ಮಹತ್ವದ ಆಡಳಿತಾತ್ಮಕ ನಿರ್ಧಾರ ಕೈಗೊಂಡಿದ್ದು, ಆರು ಹಿರಿಯ ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಯಾರಿಗೆ ಯಾವ ಜವಾಬ್ದಾರಿ? (ವರ್ಗಾವಣೆ ವಿವರಗಳು): ಆಂಜುಮ್ ಪರ್ವೇಜ್, IAS (1994 ಬ್ಯಾಚ್): ನಿಯೋಜನೆಗಾಗಿ ಕಾಯುತ್ತಿದ್ದ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ (Additional Chief Secretary) ನೇಮಿಸಲಾಗಿದೆ. ಮುನೀಶ್ ಮೌದ್ಗಿಲ್, IAS (1998 ಬ್ಯಾಚ್): ಬೃಹತ್ ಬೆಂಗಳೂರು ಪ್ರಾಧಿಕಾರದ ವಿಶೇಷ ಕಮಿಷನರ್ (ಆಡಳಿತ, ಕಂದಾಯ ಮತ್ತು ಐಟಿ) ಆಗಿರುವ ಇವರಿಗೆ ನೂತನವಾಗಿ ಸೃಷ್ಟಿಸಲಾದ ‘ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ (ಕಾರ್ಯಕ್ರಮ ಮತ್ತು ಯೋಜನೆ ಅನುಷ್ಠಾನ)’ ಹುದ್ದೆಯ ಹೆಚ್ಚುವರಿ ಪ್ರಭಾರ ಜವಾಬ್ದಾರಿಯನ್ನು ನೀಡಲಾಗಿದೆ. ದೀಪಾ ಚೋಲನ್, IAS…














