Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಶಿವಮೊಗ್ಗ: ಕೃಷಿ ವಲಯದಲ್ಲಿ ಯಂತ್ರೋಪಕರಣಗಳ ಬಳಕೆ ಹೆಚ್ಚಾಗುತ್ತಿದ್ದರೂ, ಇಂದಿಗೂ ಎತ್ತುಗಳನ್ನು ಕಟ್ಟಿ ಸಾಂಪ್ರದಾಯಿಕ ಶೈಲಿಯಲ್ಲಿ ನೇಗಿಲು ಹೊಡೆಯುತ್ತಾ, ಒಕ್ಕಲುತನದ ಪ್ರತಿಯೊಂದು ಕೆಲಸವನ್ನೂ ತಾವೇ ಮಾಡುವ ಮೂಲಕ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರ ಸ್ವಗ್ರಾಮದ ಶಾರದಮ್ಮ ಎಂಬ ಮಹಿಳೆ ಎಲ್ಲರಿಗೂ ಮಾದರಿಯಾಗಿದ್ದಾರೆ. ಆದರೇ ಮಳೆಯಾಶ್ರಿತ ಜಮೀನಿಗೆ ಸರ್ಕಾರದ ಬೋರ್ ವೆಲ್ ಸೌಲಭ್ಯ ಸಿಗದೇ ಇರೋದು ದುರಂತವೇ ಸರಿ. ಹೀಗಾಗಿ ನಮಗೊಂದು ಗಂಗಾ ಕಲ್ಯಾಣ ಬೋರ್ ವೆಲ್ ಕೊಡಿಸಿ ಎಂಬುದಾಗಿ ಕ್ಷೇತ್ರದ ಜನಪ್ರತಿನಿಧಿಯನ್ನು ಭಾವುಕವಾಗಿ ಮನವಿ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಾಗೋಡು ಗ್ರಾಮದ ರೈತ ಮಹಿಳೆ ಶಾರದಮ್ಮ ಪ್ರತಿದಿನ ಎರಡು ಕಿಲೋಮೀಟರ್ ನಡೆದುಕೊಂಡೇ ಬಂದು ಕೃಷಿ ಕಾಯಕದಲ್ಲಿ ತೊಡಗಿಕೊಳ್ಳುವ ಅವರು, ನೀರಾವರಿ ಸೌಲಭ್ಯವಿಲ್ಲದೆ ಎದುರಿಸುತ್ತಿರುವ ಕಷ್ಟಗಳನ್ನು ಈ ವಿಡಿಯೋದಲ್ಲಿ ಬಿಚ್ಚಿಟ್ಟಿದ್ದಾರೆ. 2 ಎಕರೆ ಜಮೀನಿಗೆ ಇಲ್ಲ ನೀರಾವರಿ ಸೌಲಭ್ಯ: ಶಾರದಮ್ಮ ಅವರಿಗೆ ಒಟ್ಟು ಎರಡು ಎಕರೆ ಕೃಷಿ ಭೂಮಿ ಇದೆ. ಆದರೆ, ಈ ಜಮೀನಿಗೆ ಯಾವುದೇ…
ಬೆಂಗಳೂರು: ಈ ವರ್ಷ ಮಾರುಕಟ್ಟೆಯಲ್ಲಿ ಕಾಣುತ್ತಿರುವಷ್ಟು ನೇರಳೆ ಹಣ್ಣುಗಳನ್ನು ನಾನು ಕಳೆದ ಮೂರು ದಶಕಗಳಲ್ಲಿ ಎಂದೂ ನೋಡಿಲ್ಲ ಎಂಬುದು ಎಲ್ಲರ ಮಾತು. ಹಾಗಾದರೆ ಹಿರಿಯರು ಹೇಳುವ ಆಘಾತಕಾರಿ ಮಾಹಿತಿ ಮುಂದೆ ಓದಿ.. ನೇರಳೆ ಹಣ್ಣುಗಳು ಅಕ್ಷರಶಃ ರಾಶಿ ರಾಶಿಯಾಗಿ ಬಿದ್ದಿವೆ. ಕಳೆದ ವರ್ಷ ತೀರಾ ಕಡಿಮೆ ಫಲ ಬಿಟ್ಟಿದ್ದ ಮರಗಳೂ ಈಗ ನೇರಳೆ ಹಣ್ಣಿನಿಂದ ತುಂಬಿ ನೆಲದ ಮೇಲೆ ಸುರಿಯುತ್ತಿವೆ. ಫಲ ಬಿಟ್ಟಿದ್ದ ಮರಗಳಲ್ಲಂತೂ ಹಣ್ಣಿನ ಸುರಿಮಳೆಯೇ ಆಗಿದೆ. ಇದು ನಿಖರವಾಗಿ ಏನಾಗುತ್ತಿದೆ? ನಮ್ಮ ಹಿರಿಯರು ಯಾವಾಗಲೂ ಹೇಳುತ್ತಿದ್ದರು:”ಯಾವ ಬೇಸಿಗೆಯಲ್ಲಿ ನೇರಳೆ ಹಣ್ಣು ಹೀಗೆ ರಾಶಿ ರಾಶಿಯಾಗಿ ಬೀಳುತ್ತದೆಯೋ, ಆ ವರ್ಷ ಬರಗಾಲ ಇರುತ್ತದೆ” ಹಿರಿಯರ ಪಾರಂಪರಿಕ ಜ್ಞಾನವು ಸಸ್ಯಶಾಸ್ತ್ರದ ವೈಜ್ಞಾನಿಕ ವಿಶ್ಲೇಷಣೆಯ ಪ್ರಕಾರ ಸಂಪೂರ್ಣ ಸರಿ ಮತ್ತು ನಿಖರವಾಗಿದೆ. ವಿಜ್ಞಾನದಲ್ಲಿ ಈ ರೋಚಕ ಮತ್ತು ಅಷ್ಟೇ ಆಘಾತಕಾರಿ ಪ್ರಕ್ರಿಯೆಗೆ “ಮಾಸ್ಟಿಂಗ್” (Masting) ಅಥವಾ “ಸ್ಟ್ರೆಸ್ ಫ್ರೂಟಿಂಗ್” (Stress Fruiting) ಎಂದು ಕರೆಯುತ್ತಾರೆ. ಮರಗಳು ತಮ್ಮನ್ನು ತಾವು ಮುಗಿಸಿಕೊಂಡು ಗರಿಷ್ಠ ಹಣ್ಣು…
ಬೆಂಗಳೂರು: ಸಿಲಿಕಾನ್ ಸಿಟಿ ಜನತೆಗೆ ದಿನಸಿ ಪದಾರ್ಥಗಳ ಬೆಲೆ ಏರಿಕೆಯ ಮತ್ತೊಂದು ಶಾಕ್ ಎದುರಾಗಿದೆ. ನಗರದಲ್ಲಿ ದೈನಂದಿನ ಬಳಕೆಯ ಪ್ರಮುಖ ಅಕ್ಕಿ ತಳಿಗಳಾದ ಸೋನಾ ಸ್ಟೀಮ್ ಮತ್ತು ಬಾಸುಮತಿ ಸೇರಿದಂತೆ ವಿವಿಧ ತರಹದ ಅಕ್ಕಿಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದೆ. ಯಶವಂತಪುರ ಎಪಿಎಂಸಿ ಮಾರುಕಟ್ಟೆಯ ಸಗಟು ದರಗಳಲ್ಲೇ ಈ ಬದಲಾವಣೆ ಕಂಡುಬಂದಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ಗ್ರಾಹಕರು ಮತ್ತಷ್ಟು ಹೆಚ್ಚಿನ ಹಣ ತೆರಬೇಕಾಗಿದೆ. ಅಕ್ಕಿ ತಳಿಗಳ ಹಳೆಯ ಮತ್ತು ಪ್ರಸ್ತುತ ದರಗಳ ವಿವರ (ಪ್ರತಿ ಕೆ.ಜಿ.ಗೆ): ಮಾರುಕಟ್ಟೆಯಲ್ಲಿ ಪ್ರಮುಖ ಅಕ್ಕಿ ತಳಿಗಳ ಹಿಂದಿನ ಹಾಗೂ ಪ್ರಸ್ತುತ ದರಗಳ ಹೋಲಿಕೆ ಪಟ್ಟಿ ಈ ಕೆಳಗಿನಂತಿದೆ: ಅಕ್ಕಿ ತಳಿಗಳು ಹಿಂದಿನ ದರ (₹) ಪ್ರಸ್ತುತ ದರ (₹) ಸೋನಾ ಸ್ಟೀಮ್ ರೈಸ್ ₹44 ₹53 ಸೋನಾ ರಾ ರೈಸ್ ₹48 – ₹58 ₹58 – ₹62 ದೋಸಾ ಅಕ್ಕಿ ₹38 ₹40 ಸೇಲಂ ಅಕ್ಕಿ (ಮಲ್ಲಿಗೆ ಇಡ್ಲಿ ಅಕ್ಕಿ) ₹40 ₹43 ಬಾಸುಮತಿ ಅಕ್ಕಿ ₹80…
ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿ, ಮಧುಮೇಹ (Diabetes) ಮತ್ತು ರಕ್ತದೊತ್ತಡದ (High Blood Pressure) ಕಾರಣದಿಂದಾಗಿ ಮೂತ್ರಪಿಂಡದ ಕಾಯಿಲೆಗಳು (Chronic Kidney Disease – CKD) ತೀವ್ರವಾಗಿ ಹೆಚ್ಚುತ್ತಿವೆ. ಕಿಡ್ನಿ ಕಾಯಿಲೆಯನ್ನು ವೈದ್ಯಕೀಯ ಜಗತ್ತಿನಲ್ಲಿ ‘ಸೈಲೆಂಟ್ ಕಿಲ್ಲರ್’ (Silent Killer) ಎಂದು ಕರೆಯಲಾಗುತ್ತದೆ. ಏಕೆಂದರೆ, ಇದು ಆರಂಭಿಕ ಹಂತದಲ್ಲಿ ಯಾವುದೇ ಪ್ರಮುಖ ರೋಗಲಕ್ಷಣಗಳನ್ನು ತೋರಿಸದೆ, ಕಿಡ್ನಿಯು ಶೇಕಡಾ 60 ರಿಂದ 70 ರಷ್ಟು ಹಾನಿಗೊಳಗಾದ ನಂತರವೇ ಲಕ್ಷಣಗಳು ಹೊರಬೀಳುತ್ತವೆ. ಆದರೆ, ಕಿಡ್ನಿ ಸಂಪೂರ್ಣವಾಗಿ ಹದಗೆಟ್ಟು ಲಕ್ಷಾಂತರ ರೂಪಾಯಿ ವೆಚ್ಚದ ಡಯಾಲಿಸಿಸ್ ಅಥವಾ ಕಿಡ್ನಿ ಕಸಿ (Transplant) ಹಂತ ತಲುಪುವ ಮುನ್ನವೇ, ಕೇವಲ ₹300 ರಿಂದ ₹700 ವೆಚ್ಚದ ಒಂದು ಸರಳ ಪರೀಕ್ಷೆಯ ಮೂಲಕ ಇದನ್ನು 5 ವರ್ಷಗಳ ಮುಂಚಿತವಾಗಿಯೇ ಪತ್ತೆಹಚ್ಚಬಹುದು! ಈ ಕುರಿತು ವೈದ್ಯರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದು, ಲೇಖನದಲ್ಲಿ ಅದರ ಸಂಪೂರ್ಣ ವಿವರ ಇಲ್ಲಿದೆ. ಸಾಂಪ್ರದಾಯಿಕ ‘ಕಿಡ್ನಿ ಫಂಕ್ಷನ್ ಟೆಸ್ಟ್’ (KFT) ಗಿಂತ ಈ ಪರೀಕ್ಷೆ ಹೇಗೆ ಭಿನ್ನ? ಸಾಮಾನ್ಯವಾಗಿ…
ವರ್ಷದ 365 ದಿನಗಳೂ ಸುಲಭವಾಗಿ ಮತ್ತು ಕೈಗೆಟುಕುವ ಬೆಲೆಯಲ್ಲಿ ಸಿಗುವ ಏಕೈಕ ಹಣ್ಣು ಎಂದರೆ ಅದು ಬಾಳೆಹಣ್ಣು. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಇಷ್ಟಪಟ್ಟು ತಿನ್ನುವ ಈ ಹಣ್ಣು ಕೇವಲ ರುಚಿಕರವಷ್ಟೇ ಅಲ್ಲ, ಪೋಷಕಾಂಶಗಳ ಗಣಿಯಾಗಿದೆ. ಆದರೆ, ನೀವು ಎಂದಾದರೂ ಯೋಚಿಸಿದ್ದೀರಾ? ನಿರಂತರವಾಗಿ 45 ದಿನಗಳ ಕಾಲ ಪ್ರತಿದಿನ ಒಂದು ಬಾಳೆಹಣ್ಣನ್ನು ನಿಯಮಿತವಾಗಿ ಸೇವಿಸಿದರೆ ನಮ್ಮ ದೇಹದಲ್ಲಿ ಯಾವ ರೀತಿಯ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ ಎನ್ನುವ ಬಗ್ಗೆ ಮುಂದೆ ಓದಿ… ಆರೋಗ್ಯ ತಜ್ಞರು ಮತ್ತು ಪೌಷ್ಟಿಕಾಂಶ ತಜ್ಞರ ಪ್ರಕಾರ, ಬಾಳೆಹಣ್ಣನ್ನು ದಿನನಿತ್ಯದ ಆಹಾರದ ಭಾಗವಾಗಿಸಿಕೊಳ್ಳುವುದರಿಂದ ದೇಹಕ್ಕೆ ಅದ್ಭುತ ಶಕ್ತಿ ಮತ್ತು ರೋಗನಿರೋಧಕ ಶಕ್ತಿ ದೊರೆಯುತ್ತದೆ. 45 ದಿನಗಳ ಕಾಲ ಈ ಅಭ್ಯಾಸವನ್ನು ಮುಂದುವರಿಸುವುದರಿಂದ ದೇಹದಲ್ಲಿ ಆಗುವ ಪ್ರಮುಖ ಬದಲಾವಣೆಗಳು ಇಲ್ಲಿವೆ: 1. ಬಾಳೆಹಣ್ಣಿನಲ್ಲಿರುವ ಪೌಷ್ಟಿಕಾಂಶದ ಮಟ್ಟ (ಪ್ರತಿ 100 ಗ್ರಾಂಗೆ): ಯುಎಸ್ಡಿಎ (USDA) ವರದಿಯ ಪ್ರಕಾರ, 100 ಗ್ರಾಂ ಮಾಗಿದ ಬಾಳೆಹಣ್ಣಿನಲ್ಲಿ ಈ ಕೆಳಗಿನ ಪೋಷಕಾಂಶಗಳಿರುತ್ತವೆ: ಕ್ಯಾಲೋರಿಗಳು: 89 ಕೆಸಿಎಲ್ (kcal)…
ಭಾರತೀಯ ಅಡುಗೆ ಮನೆಯ ಮಸಾಲೆ ಪದಾರ್ಥಗಳಲ್ಲಿ ಲವಂಗಕ್ಕೆ (Clove) ಅತ್ಯಂತ ಪ್ರಮುಖ ಸ್ಥಾನವಿದೆ. ಕೇವಲ ಆಹಾರದ ರುಚಿ ಮತ್ತು ಸುವಾಸನೆಯನ್ನು ಹೆಚ್ಚಿಸುವುದಷ್ಟೇ ಅಲ್ಲದೆ, ಲವಂಗವು ಔಷಧೀಯ ಗುಣಗಳ ಗಣಿಯಾಗಿದೆ. ಆರೋಗ್ಯ ತಜ್ಞರ ಪ್ರಕಾರ, ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಅಥವಾ ದಿನನಿತ್ಯ ಕೇವಲ ಒಂದು ಲವಂಗವನ್ನು ಅಗಿದು ತಿನ್ನುವ ಸರಳ ಅಭ್ಯಾಸವು ನಮ್ಮ ಒಟ್ಟಾರೆ ಆರೋಗ್ಯವನ್ನು ಆಶ್ಚರ್ಯಕರ ರೀತಿಯಲ್ಲಿ ಸುಧಾರಿಸುತ್ತದೆ. ಲವಂಗದಲ್ಲಿರುವ ‘ಯೂಜಿನಾಲ್’ (Eugenol) ಎಂಬ ಪ್ರಬಲ ಆಂಟಿ-ಆಕ್ಸಿಡೆಂಟ್ ಮತ್ತು ಉರಿಯೂತ ನಿವಾರಕ (Anti-inflammatory) ಗುಣಗಳು ದೇಹಕ್ಕೆ ದಿವ್ಯೌಷಧದಂತೆ ಕೆಲಸ ಮಾಡುತ್ತವೆ. ಪ್ರತಿದಿನ ಒಂದು ಲವಂಗ ಸೇವನೆಯಿಂದ ಸಿಗುವ ಪ್ರಮುಖ 6 ಆರೋಗ್ಯ ಪ್ರಯೋಜನಗಳು ಇಲ್ಲಿವೆ: 1. ಜೀರ್ಣಕ್ರಿಯೆ ಸುಧಾರಿಸುತ್ತದೆ (Improves Digestion) ಬೆಳಗ್ಗಿನ ಸಮಯದಲ್ಲಿ ಲವಂಗವನ್ನು ಅಗಿಯುವುದರಿಂದ ಬಾಯಿಯಲ್ಲಿ ಮತ್ತು ಕರುಳಿನಲ್ಲಿ ಜೀರ್ಣಕಾರಿ ಕಿಣ್ವಗಳ (Digestive enzymes) ಉತ್ಪಾದನೆ ಹೆಚ್ಚುತ್ತದೆ. ಇದು ನಾವು ತಿನ್ನುವ ಆಹಾರ ಸುಲಭವಾಗಿ ಜೀರ್ಣವಾಗಲು ಸಹಾಯ ಮಾಡುತ್ತದೆ. ನಿರಂತರವಾಗಿ ಕಾಡುವ ಹೊಟ್ಟೆ ಉಬ್ಬರ, ಗ್ಯಾಸ್ಟ್ರಿಕ್, ಆಮ್ಲೀಯತೆ…
ಬೆಂಗಳೂರು: ಸಿಲಿಕಾನ್ ಸಿಟಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು (Hydroponic Ganja) ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ ಅಂತಾರಾಷ್ಟ್ರೀಯ ಪೆಡ್ಲರ್ಗಳನ್ನು ಬಂಧಿಸಲಾಗಿದೆ. ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ: ಜೂನ್ 11, 2026 ರಂದು ಥೈಲ್ಯಾಂಡ್ನ ಬ್ಯಾಂಕಾಕ್ನಿಂದ ಬೆಂಗಳೂರಿಗೆ ಬಂದಿಳಿದ ಐದು ಮಂದಿ ಪ್ರಯಾಣಿಕರ ಚಲನವಲನದ ಮೇಲೆ ಸಂಶಯಗೊಂಡ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಅವರನ್ನು ತಡೆದು ತಪಾಸಣೆ ನಡೆಸಿದ್ದಾರೆ. ಈ ವೇಳೆ ಅವರ ಲಗೇಜ್ (Checked-in baggage) ಬ್ಯಾಗ್ಗಳನ್ನು ಕೂಲಂಕಷವಾಗಿ ಪರಿಶೀಲಿಸಿದಾಗ, ಬಟ್ಟೆಗಳ ನಡುವೆ ಅತ್ಯಂತ ಚಾಣಾಕ್ಷತನದಿಂದ ಬಾಂಧು ಮುಚ್ಚಿಟ್ಟಿದ್ದ ಬೃಹತ್ ಪ್ರಮಾಣದ ಡ್ರಗ್ಸ್ ಪತ್ತೆಯಾಗಿದೆ. ₹8.68 ಕೋಟಿ ಮೌಲ್ಯದ ಗಾಂಜಾ ಜಪ್ತಿ: ಬಂಧಿತ ಪ್ರಯಾಣಿಕರ ಬ್ಯಾಗ್ಗಳಿಂದ ಒಟ್ಟು 24.8 ಕೆಜಿ ತೂಕದ ಅತ್ಯಂತ ದುಬಾರಿ ತಳಿಯ ಹೈಡ್ರೋಪೋನಿಕ್ ಗಾಂಜಾವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಅಂದಾಜು ಮೌಲ್ಯ…
ರಿಯೊ ಡಿ ಜನೈರೊ: ಬ್ರೆಜಿಲ್ನ ಪ್ರಸಿದ್ಧ ನಗರವಾದ ರಿಯೊ ಡಿ ಜನೈರೊದಲ್ಲಿ ಎರಡು ಹೆಲಿಕಾಪ್ಟರ್ಗಳು ಆಕಾಶದಲ್ಲೇ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಆರು ಜನ ದಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ವಿವರ: ರಿಯೊ ಡಿ ಜನೈರೊ ನಗರದ ಆಕಾಶ ಮಾರ್ಗದಲ್ಲಿ ಹಾರಾಟ ನಡೆಸುತ್ತಿದ್ದ ಎರಡು ಹೆಲಿಕಾಪ್ಟರ್ಗಳು ಅನಿರೀಕ್ಷಿತವಾಗಿ ನಿಯಂತ್ರಣ ತಪ್ಪಿ ಒಂದಕ್ಕೊಂದು ಭೀಕರವಾಗಿ ಡಿಕ್ಕಿ ಹೊಡೆದಿವೆ. ಅಪಘಾತದ ತೀವ್ರತೆಗೆ ಹೆಲಿಕಾಪ್ಟರ್ಗಳು ಸಂಪೂರ್ಣವಾಗಿ ಜಖಂಗೊಂಡಿದ್ದು, ಅದರಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ರಕ್ಷಣಾ ಕಾರ್ಯಾಚರಣೆ: ದುರಂತದ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ತುರ್ತು ರಕ್ಷಣಾ ಪಡೆಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿವೆ. ಸದ್ಯ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಹೆಲಿಕಾಪ್ಟರ್ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಅಪಘಾತಕ್ಕೆ ನಿಖರವಾದ ಕಾರಣವೇನೆಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ದಟ್ಟವಾದ ಮಂಜು, ಹವಾಮಾನ ವೈಪರೀತ್ಯ ಅಥವಾ ತಾಂತ್ರಿಕ ದೋಷದಿಂದ ಈ ದುರಂತ ಸಂಭವಿಸಿದೆಯೇ ಎಂಬ ಕುರಿತು ವಾಯುಯಾನ ಸುರಕ್ಷತಾ ಅಧಿಕಾರಿಗಳು ತನಿಖೆ…
ಮಧ್ಯಪ್ರದೇಶ: ಚಲಿಸುತ್ತಿದ್ದ ರೈಲಿನ ಬೋಗಿಯೊಳಗೆ ಬೆಂಕಿ ಹೊತ್ತಿಕೊಂಡಿದೆ ಎಂಬ ಸಣ್ಣ ವದಂತಿಯು ಮಹಾ ದುರಂತವೊಂದಕ್ಕೆ ಕಾರಣವಾಗಿದೆ. ಗಾಬರಿಗೊಂಡು ರೈಲಿನಿಂದ ಕೆಳಗಿಳಿದು ಪಕ್ಕದ ಹಳಿ ಮೇಲೆ ನಿಂತಿದ್ದ ಒಂದು ಮಗು ಹಾಗೂ ಮೂವರು ಮಹಿಳೆಯರು ಸೇರಿದಂತೆ ಒಂದೇ ಜಾಗದಲ್ಲಿ ನಾಲ್ವರು ಪ್ರಯಾಣಿಕರು ಎದುರಿನಿಂದ ಬಂದ ಮತ್ತೊಂದು ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶದ ಮೊರೇನಾ ಜಿಲ್ಲೆಯ ಹೇತಂಪುರ-ಧೋಲಪುರ ರೈಲ್ವೆ ಸೆಕ್ಷನ್ನಲ್ಲಿ ಭಾನುವಾರ ಸಾಯಂಕಾಲ 4:15 ರ ಸುಮಾರಿಗೆ ಈ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ದುರಂತದ ಹಿನ್ನೆಲೆ ಮತ್ತು ಮೊಬೈಲ್ ವದಂತಿ: ರೈಲ್ವೆ ಆಡಳಿತ ಮಂಡಳಿಯ ಪ್ರಕಾರ, ರೈಲು ಸಂಖ್ಯೆ 19665 ಖಜುರಾಹೊ-ಉದಯ್ಪುರ ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲು ಚಲಿಸುತ್ತಿದ್ದಾಗ, ಜನರಲ್ ಬೋಗಿಯಲ್ಲಿದ್ದ ಪ್ರಯಾಣಿಕರೊಬ್ಬರು ಹಠಾತ್ ಆಗಿ ಅಲಾರಾಂ ಚೈನ್ (ACP) ಎಳೆದಿದ್ದರಿಂದ ರೈಲು ಅರ್ಧದಲ್ಲೇ ಬಂದು ನಿಂತಿತ್ತು. ಪ್ರತ್ಯಕ್ಷದರ್ಶಿಗಳು ನೀಡಿರುವ ಮಾಹಿತಿಯ ಪ್ರಕಾರ, ರೈಲಿನಲ್ಲಿದ್ದ ಪ್ರಯಾಣಿಕರೊಬ್ಬರ ಮೊಬೈಲ್ ಫೋನ್ನಿಂದ ಅತಿಯಾದ ಶಾಖ ಅಥವಾ ಹೊಗೆ ಬರುತ್ತಿರುವುದನ್ನು ಗಮನಿಸಿದ ಮತ್ತೊಬ್ಬ ಪ್ರಯಾಣಿಕ ರೈಲಿನಲ್ಲಿ ಬೆಂಕಿ…
ಶಿವಮೊಗ್ಗ: ಜಿಲ್ಲೆಯ ಸಾಗರ ನಗರಸಭೆಯ ಪೌರಕಾರ್ಮಿಕ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ನಗರಸಭೆಯ ಪೌರಕಾರ್ಮಿಕ ಮೇಸ್ತ್ರಿ ಹಾಗೂ ಪ್ರಭಾರಿ ಪೌರಕಾರ್ಮಿಕ ಆರೋಗ್ಯ ಅಧಿಕಾರಿಯಾಗಿರುವ ನಾಗರಾಜ್ ಎಂಬುವವರ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ಹೀಗಾಗಿ ಆರೋಪಿಯನ್ನು ತಕ್ಷಣವೇ ಬಂಧಿಸುವಂತೆ ಮತ್ತು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ ನಾಳೆ ನಗರದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ಸಾಗರ ತಾಲ್ಲೂಕು ಡಿಎಸ್ಎಸ್ ಸಂಚಾಲಕ ಲಕ್ಷ್ಮಣ್ ಸಾಗರ್ ತಿಳಿಸಿದ್ದಾರೆ. ನಾಳೆ ನಗರಸಭೆ ಎದುರು ಪ್ರತಿಭಟನೆ: ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಸಾಗರ ನಗರಸಭೆ ಮೆಸ್ತ್ರಿ ನಾಗರಾಜ್ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಸದ್ಯಕ್ಕೆ ಯಾವುದೇ ಕಠಿಣ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ, ಸಾಗರ ಡಿಎಸ್ಎಸ್ (DSS) ಸಂಘಟನೆಗಳ ಒಕ್ಕೂಟಗಳ ವತಿಯಿಂದ ನಾಳೆ ಬೆಳಗ್ಗೆ 10:30 ಕ್ಕೆ ಸಾಗರ ನಗರಸಭೆಯ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಎದುರು ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಸಂಘಟನೆಗಳ ಆಗ್ರಹ:…














