Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ನವದೆಹಲಿ: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತನ್ನ ಸದಸ್ಯತ್ವದ ನಿಯಮಗಳು ಮತ್ತು ಜವಾಬ್ದಾರಿಗಳನ್ನು ಗಂಭೀರವಾಗಿ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ‘ಕ್ರಿಕೆಟ್ ಕೆನಡಾ’ ಮಂಡಳಿಯ ಸದಸ್ಯತ್ವವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಭಾರತದ ಅಹಮದಾಬಾದ್ನಲ್ಲಿ ನಡೆದ ಐಸಿಸಿ ಬೋರ್ಡ್ ಸಭೆಯ ಬಳಿಕ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಲಾಗಿದೆ. ಆದಾಗ್ಯೂ, ಕೆನಡಾ ದೇಶದ ಕ್ರಿಕೆಟ್ ಆಟಗಾರರ ಹಿತಾಸಕ್ತಿಯನ್ನು ಕಾಯುವ ನಿಟ್ಟಿನಲ್ಲಿ ಐಸಿಸಿ ಒಂದು ಸಕಾರಾತ್ಮಕ ನಿರ್ಧಾರ ಕೈಗೊಂಡಿದೆ. ಅಮಾನತು ಅವಧಿಯಲ್ಲೂ ಕೆನಡಾ ರಾಷ್ಟ್ರೀಯ ಕ್ರಿಕೆಟ್ ತಂಡಗಳು ಐಸಿಸಿ ಆಯೋಜಿಸುವ ಅಂತರರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ ಎಂದು ಐಸಿಸಿ ಸ್ಪಷ್ಟಪಡಿಸಿದೆ. ಭ್ರಷ್ಟಾಚಾರದ ಆರೋಪ ಹಾಗೂ ತನಿಖೆ: ಕೆಲವು ವಾರಗಳ ಹಿಂದೆ ಕೆನಡಾದ ಬ್ರಾಡ್ಕಾಸ್ಟಿಂಗ್ ಕಾರ್ಪೊರೇಷನ್ (CBC) ಪ್ರಸಾರ ಮಾಡಿದ್ದ ಸಾಕ್ಷ್ಯಚಿತ್ರವೊಂದರಲ್ಲಿ, ಕ್ರಿಕೆಟ್ ಕೆನಡಾ ಮಂಡಳಿಯ ಆಡಳಿತದಲ್ಲಿ ಪಂದ್ಯದ ಮೇಲೆ ಪ್ರಭಾವ ಬೀರುವುದು (ಮ್ಯಾಚ್ ಮ್ಯಾನಿಪ್ಯುಲೇಷನ್), ಭ್ರಷ್ಟಾಚಾರ ಮತ್ತು ಆಟಗಾರರಿಗೆ ಹಿಂಸೆಯ ಬೆದರಿಕೆ ಹಾಕಿರುವ ಬಗ್ಗೆ ಗಂಭೀರ ಆರೋಪಗಳನ್ನು ಮಾಡಲಾಗಿತ್ತು. ಇದರ ಬೆನ್ನಲ್ಲೇ ಐಸಿಸಿಯ ಭ್ರಷ್ಟಾಚಾರ ನಿರೋಧಕ ಘಟಕವು…
ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಮತ್ತೊಂದು ಸುತ್ತಿನ ಚುನಾವಣಾ ಹಬ್ಬಕ್ಕೆ ವೇದಿಕೆ ಸಿದ್ಧವಾಗಿದೆ. ರಾಜ್ಯದ 4 ರಾಜ್ಯಸಭಾ ಕ್ಷೇತ್ರಗಳು ಹಾಗೂ ವಿಧಾನಸಭಾ ಸದಸ್ಯರಿಂದ ಆಯ್ಕೆಯಾಗುವ ವಿಧಾನ ಪರಿಷತ್ತಿನ (Council) 7 ಸ್ಥಾನಗಳ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಧಿಕೃತವಾಗಿ ಆರಂಭಗೊಂಡಿದೆ. ಚುನಾವಣಾ ಆಯೋಗವು ಇತ್ತೀಚೆಗಷ್ಟೇ ಈ ಮಹತ್ವದ ಚುನಾವಣೆಗಳಿಗೆ ವೇಳಾಪಟ್ಟಿ ಪ್ರಕಟಿಸಿದ್ದು, ಇಂದಿನಿಂದ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ವಿಧಾನಸೌಧದಲ್ಲಿ ಸಿದ್ಧತೆ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗಾಗಿ ವಿಧಾನಸೌಧದಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಿಗದಿಪಡಿಸಿದ ಕೊಠಡಿಯಲ್ಲಿ ಚುನಾವಣಾಧಿಕಾರಿಗಳು ನಾಮಪತ್ರಗಳನ್ನು ಸ್ವೀಕರಿಸಲಿದ್ದಾರೆ. ನಾಮಪತ್ರ ಸಲ್ಲಿಸುವ ವೇಳೆ ಅಭ್ಯರ್ಥಿಗಳ ಜೊತೆ ಎಷ್ಟು ಜನರಿಗೆ ಅವಕಾಶ ನೀಡಬೇಕು ಎಂಬುದು ಸೇರಿದಂತೆ ಭದ್ರತೆಯ ದೃಷ್ಟಿಯಿಂದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪಕ್ಷಗಳಲ್ಲಿ ಗರಿಗೆದರಿದ ಚಟುವಟಿಕೆ: ವಿಧಾನಸಭೆಯಲ್ಲಿನ ಸಂಖ್ಯಾಬಲದ ಆಧಾರದ ಮೇಲೆ ಆಯಾ ರಾಜಕೀಯ ಪಕ್ಷಗಳಿಗೆ ಈ ಸ್ಥಾನಗಳು ಲಭಿಸಲಿವೆ. ಹೀಗಾಗಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಾಳಯದಲ್ಲಿ ಟಿಕೆಟ್ಗಾಗಿ ಭಾರೀ ಪೈಪೋಟಿ ಶುರುವಾಗಿದೆ. ಹೈಕಮಾಂಡ್ ಮಟ್ಟದಲ್ಲಿ ಯಾರಿಗೆ ಟಿಕೆಟ್…
ಬೆಂಗಳೂರು: ದಾವಣಗೆರೆ ಉಪಚುನಾವಣೆ ವೇಳೆ ಸ್ವಪಕ್ಷದ (ಕಾಂಗ್ರೆಸ್) ವಿರುದ್ಧವೇ ಒಳಸಂಚು ನಡೆಸಲಾಗಿದೆ ಎಂಬ ಆರೋಪಕ್ಕೆ ಕಾರಣವಾಗಿದ್ದ ‘ಲೀಕ್ಡ್ ಆಡಿಯೋ ಕ್ಲಿಪ್’ ವಿವಾದಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಕೊನೆಗೂ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ವಿರುದ್ಧ ಕೇಳಿಬಂದಿರುವ ಎಲ್ಲಾ ಆರೋಪಗಳನ್ನು ತಳ್ಳಿಹಾಕಿರುವ ಅವರು, ಇದೊಂದು ರಾಜಕೀಯ ಪಿತೂರಿ ಎಂದು ಆಕ್ರೋಶ ಹೊರಹಾಕಿದ್ದಾರೆ. ವೈರಲ್ ಆಡಿಯೋದಲ್ಲೇನಿದೆ? ದಾವಣಗೆರೆ ಉಪಚುನಾವಣೆಯ ಸಂದರ್ಭದಲ್ಲಿ ಜಮೀರ್ ಅಹ್ಮದ್ ಹಾಗೂ ಅವರ ಆಪ್ತ ಸಿರಾಜ್ ಎಂಬುವರ ನಡುವೆ ನಡೆದಿದೆ ಎನ್ನಲಾದ ಸಂಭಾಷಣೆಯ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಸಂಚಲನ ಮೂಡಿಸಿತ್ತು. ಆಡಿಯೋದಲ್ಲಿ, “ಇದು ನನ್ನ ಇಜ್ಜತ್ (ಗೌರವ) ಸವಾಲು” ಎಂದು ಜಮೀರ್ ಹೇಳಿರುವುದು ಮತ್ತು ಮುಸ್ಲಿಂ ಮತದಾರರು ಕಾಂಗ್ರೆಸ್ ಬದಲಿಗೆ ಎಸ್ಡಿಪಿಐ (SDPI) ಅಭ್ಯರ್ಥಿಯ ‘ಕುಕ್ಕರ್’ ಗುರುತಿಗೆ ಮತ ಚಲಾಯಿಸುವಂತೆ ಪ್ರೇರೇಪಿಸಿರುವ ಕುರಿತು ಚರ್ಚೆಯಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಇದು ಕಾಂಗ್ರೆಸ್ ಒಳಗಿನ ಬಂಡಾಯ ಹಾಗೂ ಒಳಸಂಚಿನ ಮುಖವನ್ನು ಬಹಿರಂಗಪಡಿಸಿದೆ ಎಂದು ಪ್ರತಿಪಕ್ಷಗಳು ಟೀಕಿಸಿದ್ದವು. ಇದು ಎಐ…
ಬೆಂಗಳೂರು: “ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷದ ಹೈಕಮಾಂಡ್ಗೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ ಹೋಗುತ್ತಿಲ್ಲ. ಬದಲಿಗೆ ನನ್ನ ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಲು ಮತ್ತು ಅವುಗಳನ್ನು ಪರಿಹರಿಸಲು ಮಂಗಳೂರಿಗೆ ತೆರಳುತ್ತಿದ್ದೇನೆ” ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನದ ಕುರಿತಾದ ಚರ್ಚೆಗಳಿಗೆ ತೆರೆ ಎಳೆದರು. “ನನಗೆ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷವೇ ನಿರ್ಧಾರ ಮಾಡುತ್ತದೆ. ಹಿಂದೆ ನನಗೆ ಸಚಿವ ಸ್ಥಾನ ಕೊಟ್ಟಾಗ ಉತ್ತಮವಾಗಿ ಕೆಲಸ ಮಾಡಿದ್ದೇನೆ. ಶಾಸಕನಾಗಿದ್ದಾಗ ‘ಸದನ ವೀರ’ ಪ್ರಶಸ್ತಿ ಪಡೆದಿದ್ದೆ, ಸಚಿವನಾಗಿದ್ದಾಗ ನನ್ನ ಕೆಲಸವನ್ನು ಗುರುತಿಸಿ ರಾಷ್ಟ್ರ ಪ್ರಶಸ್ತಿಯೂ ಒಲಿದು ಬಂದಿತ್ತು. ನನ್ನ ಕಾರ್ಯವೈಖರಿಯನ್ನು ನೋಡಿಯೇ ಸಿದ್ದರಾಮಯ್ಯನವರು ಈ ಹಿಂದೆ ನನ್ನನ್ನು ವಿರೋಧ ಪಕ್ಷದ ಉಪನಾಯಕನನ್ನಾಗಿ ಮಾಡಿದ್ದರು. ಈಗ ಸ್ಪೀಕರ್ ಜವಾಬ್ದಾರಿ ನೀಡಿದ್ದಾರೆ, ಅದನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದೇನೆ. ಮುಂದೆ ಪಕ್ಷ ಏನು ಜವಾಬ್ದಾರಿ ಕೊಡುತ್ತದೋ…
ಬೆಂಗಳೂರು: ಭಾರತದ ಯುವಜನರಿಗೆ ಉದ್ಯೋಗ ಆಧಾರಿತ ಕೌಶಲ್ಯ ತರಬೇತಿ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಪಿಎಂ-ಸೇತು’ ಯೋಜನೆಯಡಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ‘ಐಟಿಐ ಕ್ಲಸ್ಟರ್’ ಅನ್ನು ಉನ್ನತೀಕರಿಸಲು ಪ್ರಖ್ಯಾತ ಉಕ್ಕು ಕಂಪನಿ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ’ ಮಂಡಿಸಿದ್ದ ಸ್ಟ್ರಾಟೆಜಿಕ್ ಇನ್ವೆಸ್ಟ್ಮೆಂಟ್ ಪ್ಲ್ಯಾನ್ʼಗೆ ಕೇಂದ್ರದ ಸಮಿತಿ ಅಧಿಕೃತ ಅನುಮೋದನೆ ನೀಡಿದೆ. ಈ ಮೂಲಕ ‘ಪಿಎಂ-ಸೇತು’ ಯೋಜನೆಯಡಿ ಅನುಮೋದನೆ ಪಡೆದ ದೇಶದ ಮೊಟ್ಟಮೊದಲ ಖಾಸಗಿ ಕೈಗಾರಿಕಾ ಸಂಸ್ಥೆಯಾಗಿ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’ ಹೊರಹೊಮ್ಮಿದೆ. ಅಲ್ಲದೆ, ಖಾಸಗಿ ಕೈಗಾರಿಕೆಗಳ ಜೊತೆ ಒಪ್ಪಂದ ಮಾಡಿಕೊಂಡು ಈ ಯೋಜನೆಯನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯವಾಗಿ ಆಂಧ್ರಪ್ರದೇಶ ಇತಿಹಾಸ ಬರೆದಿದೆ. ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ ತನ್ನ ಶೈಕ್ಷಣಿಕ ಪಾಲುದಾರ ಸಂಸ್ಥೆಯಾದ NAMTECH ಜೊತೆಗೂಡಿ ಈ ಐಟಿಐ ಕ್ಲಸ್ಟರ್ ಅನ್ನು ಅಭಿವೃದ್ಧಿಪಡಿಸಲಿದೆ. ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಅನುಮೋದನೆ ನವದೆಹಲಿಯ ಕೌಶಲ್ ಭವನದಲ್ಲಿ ನಡೆದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ…
ಬೀದರ್: ಕಾಂಗ್ರೆಸ್ ಸರಕಾರದ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣದ ಪರಿಣಾಮ ಒಂದು ಕಡೆ ಆಗುತ್ತಿದೆ. ಇನ್ನೊಂದೆಡೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳಿಗೆ ಅಪಮಾನ ಮಾಡುವ ಕೆಲಸ ನಡೆಯುತ್ತಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮಗಳ ಪ್ರಶ್ನೆಗೆ ಇಂದು ಉತ್ತರ ನೀಡಿದ ಅವರು, ಅಧಿಕಾರದ ಮದ ನೆತ್ತಿಗೇರಿದಾಗ ಹೀಗೆಲ್ಲ ಮಾಡಿಸುತ್ತದೆ ಎಂದು ಟೀಕಿಸಿದರು. ಆಳಂದದಲ್ಲಿ ಕೇಸುಗಳನ್ನು ಹಿಂಪಡೆದಿದ್ದಾರೆ. ಇದರ ವಿರುದ್ಧ ಪ್ರತಿಭಟನೆ ಮಾಡಿ ಸರಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತಿದ್ದೇವೆ ಎಂದರು. ಡಿ.ಕೆ.ಶಿವಕುಮಾರ್ ನೇತೃತ್ವದ ಸರಕಾರ ಹೇಗೆ ನಡೆಯಲಿದೆ ಎಂದು ನಾನು ಹೇಳುವ ಅವಶ್ಯಕತೆ ಇಲ್ಲ. ತಮಗೆ ಗೊತ್ತಿರುವ ಹಾಗೆ ಕಳೆದ 3 ವರ್ಷಗಳಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಒಂದೇ ಒಂದು ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗಿಲ್ಲ. ಭ್ರಷ್ಟಾಚಾರ, ಅಲ್ಪಸಂಖ್ಯಾತರ ಓಲೈಕೆ ಬಿಟ್ಟರೆ ಬೇರೇನೂ ಕಳೆದ 3 ವರ್ಷಗಳಲ್ಲಿ ಆಗಿಲ್ಲ; ಇವರ ಗ್ಯಾರಂಟಿಗಳಿಂದ ಇವರ ಕೈಯನ್ನು ಕಟ್ಟಿ ಹಾಕಿಕೊಂಡಿದ್ದಾರೆ. ಅನುದಾನದ ಕೊರತೆಯಿಂದ ಡಿ.ಕೆ.ಶಿವಕುಮಾರ್ ಕೂಡ ಅಭಿವೃದ್ಧಿ…
ವಾಲ್ನಟ್ಸ್ ಅಥವಾ ಅಖ್ರೋಟ್ ಕೇವಲ ರುಚಿಕರವಾದ ಒಣಹಣ್ಣು ಮಾತ್ರವಲ್ಲ, ಇದು ನಮ್ಮ ಆರೋಗ್ಯಕ್ಕೆ ಅಮೂಲ್ಯವಾದ ಪೋಷಕಾಂಶಗಳ ಗಣಿಯಾಗಿದೆ. ಇದರಲ್ಲಿ ಒಮೆಗಾ-೩ ಕೊಬ್ಬಿನಾಮ್ಲಗಳು (Omega-3 fatty acids), ಉತ್ಕರ್ಷಣ ನಿರೋಧಕಗಳು (Antioxidants) ಮತ್ತು ನಾರಿನಂಶ (Fiber) ಹೇರಳವಾಗಿವೆ. ಆದರೆ, ಇದರ ಸಂಪೂರ್ಣ ಲಾಭವನ್ನು ಪಡೆಯಲು ಇದನ್ನು ಹೇಗೆ ಮತ್ತು ಯಾವಾಗ ಸೇವಿಸಬೇಕು ಎಂಬ ಸರಿಯಾದ ವಿಧಾನ ತಿಳಿಯುವುದು ಬಹಳ ಮುಖ್ಯ. ಈ ಕುರಿತು ವಿವರವಾದ ಲೇಖನ ಇಲ್ಲಿದೆ: ೧. ರಾತ್ರಿ ನೆನೆಸಿಟ್ಟು ಬೆಳಿಗ್ಗೆ ಸೇವಿಸುವುದು (ಅತ್ಯುತ್ತಮ ವಿಧಾನ) ವಾಲ್ನಟ್ಸ್ ಸೇವಿಸಲು ಅತ್ಯಂತ ಸೂಕ್ತ ಮತ್ತು ವೈಜ್ಞಾನಿಕ ವಿಧಾನವೆಂದರೆ ಅವುಗಳನ್ನು ನೀರಿನಲ್ಲಿ ನೆನೆಸಿ ತಿನ್ನುವುದು. ರಾತ್ರಿ ೨ ರಿಂದ ೪ ವಾಲ್ನಟ್ಸ್ ತುಂಡುಗಳನ್ನು ಒಂದು ಕಪ್ ನೀರಿನಲ್ಲಿ ನೆನೆಸಿಟ್ಟು, ಮರುದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು. ನೆನೆಸಿಡುವುದರಿಂದ ಆಗುವ ಪ್ರಯೋಜನಗಳು: ಸುಲಭ ಜೀರ್ಣಕ್ರಿಯೆ: ಹಸಿ ವಾಲ್ನಟ್ಸ್ನಲ್ಲಿ ‘ಫೈಟಿಕ್ ಆಸಿಡ್’ (Phytic acid) ಮತ್ತು ಟ್ಯಾನಿನ್ಸ್ಗಳಿರುತ್ತವೆ. ಇವು ಜೀರ್ಣಕ್ರಿಯೆಗೆ ಅಡ್ಡಿಪಡಿಸಬಹುದು. ನೆನೆಸುವುದರಿಂದ ಈ ಅಂಶಗಳು ಕಡಿಮೆಯಾಗಿ,…
ಬೆಂಗಳೂರು : ರಾಜ್ಯದ ಕೆಲವು ಮಾಧ್ಯಮಗಳಲ್ಲಿ ಪ್ರಸಾರ ವಾಗುತ್ತಿರುವ ನನ್ನ ಕುರಿತ ಆಡಿಯೋ ನಕಲಿ, ಎ ಐ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಜಮೀರ್ ಅಹಮದ್ ಖಾನ್ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಇದೊಂದು ರಾಜಕೀಯ ಷಡ್ಯಂತ್ರ. ನಕಲಿ ಆಡಿಯೋ ಮಾಡಿ ವೈರಲ್ ಮಾಡಿರುವವರ ವಿರುದ್ಧ ಸೈಬರ್ ಠಾಣೆಗೆ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಆಡಿಯೋ ಬಗ್ಗೆ ಯಾವ ತನಿಖೆಗೆ ಬೇಕಾದರೂ ಒಳಪಡಿಸಲಿ ಎಂದು ಸವಾಲು ಹಾಕಿದ್ದಾರೆ. ನಾನು ಆ ರೀತಿ ಮಾತನಾಡಿಲ್ಲ. ಗೊಂದಲ ಉಂಟು ಮಾಡಲು ಇದೆಲ್ಲವೂ ಸೃಷ್ಟಿ ಮಾಡಲಾಗಿದೆ. ಇದು ಕಿಡಿಗೇಡಿಗಳ ಕೃತ್ಯ,ಇದನ್ನು ಯಾರೂ ನಂಬಬಾರದು ಎಂದು ತಿಳಿಸಿದ್ದಾರೆ.
ಶಿವಮೊಗ್ಗ: ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಗೋಪಾಲಕೃಷ್ಣ ಬೇಲೂರು ಅವರಿಗೆ ಕಡ್ಡಾಯವಾಗಿ ಸಚಿವ ಸ್ಥಾನ ನೀಡಬೇಕೆಂದು ಸಾಗರದ ಕಾಂಗ್ರೆಸ್ ಮುಖಂಡ ಹಾಗೂ ಸಾಮಾಜಿಕ ಕಾರ್ಯಕರ್ತ ನಾಗರಾಜ್ ಗುಡ್ಡೇಮನೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಶಾಸಕರಿಗೆ ಸಚಿವ ಸ್ಥಾನ ಸಿಗಲೆಂದು ಹಾರೈಸಿ ಇಂದು ಅವರು ಸಾಗರದ ಇತಿಹಾಸ ಪ್ರಸಿದ್ಧ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನಮ್ಮ ಶಾಸಕರು ಮೂರು ಬಾರಿ ಜನಪ್ರಿಯ ಶಾಸಕರಾಗಿ ಆಯ್ಕೆಯಾಗಿದ್ದು, ಸದಾ ಜನರೊಂದಿಗೆ ಇದ್ದು ಕೆಲಸ ಮಾಡಿದ್ದಾರೆ. ಈ ಹಿಂದಿನ ಸಚಿವ ಸಂಪುಟಗಳ ರಚನೆಯಲ್ಲಿ ಬೇರೆಯವರಿಗೆ ಸಚಿವರಾಗಲು ಅವರು ಸಹಕಾರ ನೀಡಿದ್ದಾರೆ. ಅದೇ ರೀತಿ ಈಗ ಶಿವಮೊಗ್ಗ ಜಿಲ್ಲೆಯಿಂದ ಗೆದ್ದಿರುವ ಇತರ ಶಾಸಕರು ಹಾಗೂ ಪಕ್ಷದ ಹಿರಿಯರು ಬೇಲೂರು ಅವರಿಗೆ ಸಚಿವ ಸ್ಥಾನ ನೀಡಲು ಬೆಂಬಲ ಸೂಚಿಸಬೇಕು” ಎಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಒಂದು ವೇಳೆ ನಮ್ಮ ಶಾಸಕರಿಗೆ ಸಚಿವ ಸ್ಥಾನ ನೀಡದಿದ್ದರೆ, ಮುಂಬರುವ ದಿನಗಳಲ್ಲಿ ಸಾಗರ…
ಶಿವಮೊಗ್ಗ: ಕಳೆದ ಫೆಬ್ರವರಿ ತಿಂಗಳಿನಲ್ಲಿ ನಡೆದ ಸಾಗರದ ಪ್ರಸಿದ್ಧ ಮಾರಿಕಾಂಬಾ ಜಾತ್ರೆಯ ಸಂದರ್ಭದಲ್ಲಿ ನಗರದ ರಸ್ತೆಗಳ ಅಭಿವೃದ್ಧಿಗಾಗಿ ಸರ್ಕಾರದಿಂದ 2 ಕೋಟಿ ರೂಪಾಯಿ ವಿಶೇಷ ಅನುದಾನ ತರುವುದಾಗಿ ಗೋಪಾಲಕೃಷ್ಣ ಬೇಳೂರು ಅವರು ಭರವಸೆ ನೀಡಿದ್ದರು. ಅದರಂತೆ ಅಂದಿನ ಸಂದರ್ಭದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ 2 ಕೋಟಿ ರೂ. ಅನುದಾನ ನೀಡುವಂತೆ ಮನವಿ ಪತ್ರವನ್ನೂ ಸಲ್ಲಿಸಲಾಗಿತ್ತು ಎಂದು ಸಾಗರ ಟೌನ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಬಾಬು ತಿಳಿಸಿದರು. ಇಂದು ಶಿವಮೊಗ್ಗದ ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, “ಸಾಮಾನ್ಯವಾಗಿ ರಸ್ತೆ ಅಥವಾ ಚರಂಡಿ ಕಾಮಗಾರಿಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಲಾಗುತ್ತದೆ. ಆದರೆ ಹಣ ಬಿಡುಗಡೆಯಾಗುವ ಮುನ್ನವೇ ಸಾರ್ವಜನಿಕ ಹಿತದೃಷ್ಟಿಯಿಂದ ಇಲ್ಲಿ ಕ್ರಿಯಾಯೋಜನೆ ಸಿದ್ಧಪಡಿಸಿ ಕೆಲಸವನ್ನು ಆರಂಭಿಸಲಾಗುತ್ತದೆ. ಅದೇ ರೀತಿ ಮಾರಿ ಜಾತ್ರೆಯ ಸಂದರ್ಭದಲ್ಲೂ ನಗರಸಭೆಯು 2 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳನ್ನು ನಂಬಿಕೆಯ ಮೇಲೆ ನಡೆಸಿತ್ತು,” ಎಂದರು. ಬಿಜೆಪಿ ವಿರುದ್ಧ ಆಕ್ರೋಶ ಕಾಮಗಾರಿ ನಡೆದ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ, “2…














