Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಪ್ರಮುಖ ಕ್ಲೌಡ್ಫ್ಲೇರ್ ನಿಲುಗಡೆಯು ಜಾಗತಿಕ ಇಂಟರ್ನೆಟ್ನ ಹೆಚ್ಚಿನ ಭಾಗಗಳನ್ನು ಅಡ್ಡಿಪಡಿಸಿತು, ಇದು ಪ್ರಪಂಚದಾದ್ಯಂತದ ಬಳಕೆದಾರರಿಗೆ ಹಲವಾರು ಜನಪ್ರಿಯ ಅಪ್ಲಿಕೇಶನ್ಗಳು ಮತ್ತು ವೆಬ್ಸೈಟ್ಗಳನ್ನು ಆಫ್ಲೈನ್ನಲ್ಲಿ ಇರಿಸಿತು. ಕ್ಲೌಡ್ಫ್ಲೇರ್ ನಿರ್ಣಾಯಕ ಆಂತರಿಕ ಸೇವಾ ವೈಫಲ್ಯವನ್ನು ದೃಢಪಡಿಸಿದ್ದರಿಂದ ಈ ಸಮಸ್ಯೆಯು ವ್ಯಾಪಕವಾದ ‘500 ಆಂತರಿಕ ಸರ್ವರ್ ದೋಷ’ ಸಂದೇಶಗಳನ್ನು ಹುಟ್ಟುಹಾಕಿತು. ಆರಂಭಿಕ ವರದಿಗಳ ಪ್ರಕಾರ, ನಿಲುಗಡೆಯು ChatGPT, X (ಟ್ವಿಟರ್), ಕ್ಯಾನ್ವಾ, ಉಬರ್, ಕಾಯಿನ್ಬೇಸ್, ಶಾಪಿಫೈ, ಡ್ರಾಪ್ಬಾಕ್ಸ್ ಮತ್ತು ಹಲವಾರು ಗೇಮಿಂಗ್ ಮತ್ತು ಸಾರಿಗೆ ಸೇವೆಗಳನ್ನು ಒಳಗೊಂಡಂತೆ ಬಹು ಹೈ-ಟ್ರಾಫಿಕ್ ಪ್ಲಾಟ್ಫಾರ್ಮ್ಗಳ ಮೇಲೆ ಪರಿಣಾಮ ಬೀರಿತು. ನೂರಾರು ವೆಬ್ಸೈಟ್ಗಳು ಭಾಗಶಃ ಅಥವಾ ಸಂಪೂರ್ಣ ಡೌನ್ಟೈಮ್ ಅನ್ನು ಅನುಭವಿಸಿದವು. ಕ್ಲೌಡ್ಫ್ಲೇರ್ 11:20 UTC ಸುಮಾರಿಗೆ ‘ಸೇವಾ ಅವನತಿ’ಯನ್ನು ಎದುರಿಸಿದೆ ಮತ್ತು ಪರಿಹಾರವನ್ನು ಹೊರತರುವಾಗ ಕೆಲವು ವ್ಯವಸ್ಥೆಗಳನ್ನು ತಾತ್ಕಾಲಿಕವಾಗಿ ನಿಷ್ಕ್ರಿಯಗೊಳಿಸಬೇಕಾಯಿತು ಎಂದು ಹೇಳಿದೆ. ಚೇತರಿಕೆ ಮುಂದುವರೆದಿದೆ, ಆದರೆ ಕೆಲವು ಬಳಕೆದಾರರಿಗೆ ದೋಷ ದರಗಳು ಹೆಚ್ಚಿವೆ. ಕ್ಲೌಟ್ ಕೈಕೊಟ್ಟಿದ್ದರಿಂದ ಯಾವೆಲ್ಲ ಆಪ್, ವೆಬ್ ಸೈಟ್ ಮೇಲೆ ಎಫೆಕ್ಟ್ ಗೊತ್ತಾ?…
ಬೆಂಗಳೂರು: ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ 28665/2025, 28668/2025 ಮತ್ತು 28675/2025ಕ್ಕೆ ಸಂಬಂಧಿಸಿದಂತೆ ಮಾನ್ಯ ಉಚ್ಚ ನ್ಯಾಯಾಲಯದ 2025ನೇ ಸೆಪ್ಟೆಂಬರ್ 25 ಆದೇಶದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿ ಮತ್ತು ದತ್ತಾಂಶಗಳು ಸೋರಿಕೆಯಾಗದಂತೆ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಸೂಚಿಸಿದೆ. ಅದರಂತೆ ಆಯೋಗದಿಂದ ಮಾನ್ಯ ಉಚ್ಚ ನ್ಯಾಯಾಲಯಕ್ಕೆ ಅಫಿಡೆವಿಟ್ ನ್ನು (Affidavit) ಅ ಸಲ್ಲಿಸಲಾಗಿರುತ್ತದೆ. ಸಮೀಕ್ಷೆಯ ಮಾಹಿತಿ ಹಾಗೂ ದತ್ತಾಂಶಗಳ ಗೌಪ್ಯತೆಯನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಮತ್ತು ಬದ್ಧತೆಯನ್ನು ಆಯೋಗ ಹೊಂದಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ. 2025ರ ಕರ್ನಾಟಕ ರಾಜ್ಯದ ಜಾತಿಗಣತಿ ವರದಿ ಎಂಬ ಶೀರ್ಷಿಕೆಯಡಿ ವಿವಿಧ ಜಾತಿಗಳ ಜನಸಂಖ್ಯೆಯ ತಪ್ಪು ಮಾಹಿತಿಯನ್ನು WhatsApp ನಲ್ಲಿ ಹಂಚಿಕೆ (share) ಮಾಡಿರುವ ಮೊಬೈಲ್ ಸಂಖ್ಯೆ: 8618891657 ಮತ್ತು 9972508500 ರ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ. ಸಮೀಕ್ಷಾ ದತ್ತಾಂಶಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಸೃಜಿಸಿ, ಸಾಮಾಜಿಕ ಜಾಲತಾಣಗಳಾದ WhatsApp,…
ಬೆಂಗಳೂರು : “ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮೇಕೆದಾಟು ಯೋಜನೆ ಅನುಷ್ಠಾನ ಕುರಿತು ಅಧಿಕಾರಿಗಳ ಸಭೆ ಹಾಗೂ ಕಾವೇರಿ ನೀರಾವರಿ ನಿಗಮ ನಿರ್ದೇಶಕರ ಮಂಡಳಿ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. “ಕಾವೇರಿ ನೀರಾವರಿ ನಿಗಮ ಮಂಡಳಿ ಸಭೆ ಮಾಡಲಾಗಿದೆ. ಇದಕ್ಕೆ ಮೊದಲು, ಮೇಕೆದಾಟು ಯೋಜನೆ ಕುರಿತ ಸುಪ್ರೀಂ ಕೋರ್ಟ್ ತೀರ್ಪು ನಂತರ ಈ ಯೋಜನೆಯನ್ನು ಹೇಗೆ ಮುಂದಕ್ಕೆ ತೆಗೆದುಕೊಂಡು ಹೋಗಬೇಕು ಎಂದು ಚರ್ಚೆ ಮಾಡಿದ್ದೇವೆ. ಡಿಪಿಆರ್ ಮರುಸಲ್ಲಿಕೆ ಮಾಡಬೇಕಿದೆ. ಇದರಲ್ಲಿ ಯೋಜನೆ ಸಂಪೂರ್ಣ ವಿವರ, ಎಷ್ಟು ಅರಣ್ಯ ಪ್ರದೇಶ ಮುಳುಗಡೆಯಾಗಲಿದೆ ಎಂದು ಮಾಹಿತಿ ನೀಡಬೇಕು. ಮೇಕೆದಾಟು ಯೋಜನೆ ಕಚೇರಿಯನ್ನು ಹಾರೋಬೆಲೆಯಲ್ಲಿ ಆರಂಭಿಸಿದ್ದೇವೆ. ಮಂಡ್ಯಕ್ಕೆ ಹತ್ತಿರವಾಗುವಂತೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಸಿಇ, ಸಿಸಿಎಫ್ ಅವರನ್ನೊಳಗೊಂಡ ಪ್ರತ್ಯೇಕ ಕಚೇರಿ ಆರಂಭಿಸಲು ತೀರ್ಮಾನಿಸಿದ್ದೇವೆ. ಇದಕ್ಕೆ ಅಗತ್ಯ ಸಿಬ್ಬಂದಿ…
ತುಮಕೂರು: ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಬಂದ ಮೇಲೆ ನಮ್ಮ ಇಲಾಖೆ ಮುಂಚೂಣಿಯಲ್ಲಿದೆ. ಮಹಿಳೆಯರ ಸಬಲೀಕರಣವೇ ನಮ್ಮ ಸರ್ಕಾರದ ಗುರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಬಾಲ ಭವನದಲ್ಲಿ ನಡೆದ ಜಿಲ್ಲಾಮಟ್ಟದ ಪೂರ್ವಭಾವಿ ಸಭೆಯಲ್ಲಿ ಸಚಿವರು ಮಾತನಾಡಿದರು. ಬಹುನಿರೀಕ್ಷಿತ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು. ತುಮಕೂರು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಪರಮೇಶ್ವರ್ ಸಹಕಾರ ಸ್ಮರಿಸಿದ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ತುಮಕೂರಿನವರೇ ಆದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಸಹಕಾರದಿಂದ ಇಂದು ನಾನು ಸಚಿವೆಯಾಗಿರುವೆ. ಪರಮೇಶ್ವರ್ ಅವರು ನನಗೆ ನಾಲ್ಕು ಬಾರಿ ಬಿ ಫಾರ್ಮ್ ಕೊಟ್ಟಿದ್ದಾರೆ. ಅವರ ಸಹಕಾರವನ್ನು ನಾನು ಎಂದಿಗೂ ಮರೆಯುವುದಿಲ್ಲ ಎಂದು ಸಚಿವರು ಸ್ಮರಿಸಿದರು. ಮಂತ್ರಿಯಾದ ಬಳಿಕ…
ಮಂಡ್ಯ : ವಿದ್ಯಾರ್ಥಿಗಳು ಅಂಕಗಳ ಬೆನ್ನು ಹತ್ತದೇ ಕೌಶಲ್ಯಯುತ ಜ್ಞಾನ ಪಡೆದುಕೊಳ್ಳುವ ಮೂಲಕ ಉತ್ತಮ ಸಂಸ್ಕಾರ, ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ರೈತ ಕವಿ ದೊ.ಚಿ.ಗೌಡ ಮಕ್ಕಳಿಗೆ ಕಿವಿಮಾತು ಹೇಳಿದರು. ಮದ್ದೂರು ನಗರದ ಗ್ಲೋಬಲ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಇತ್ತಿಚೆಗೆ ನಡೆದ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಕನ್ನಡಾಂಬೆ ಮತ್ತು ಜವಾಹರಲಾಲ್ ನೆಹರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು. ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು, ಉತ್ತಮ ಸಂಸ್ಕಾರ, ಮಾನವೀಯ ಮೌಲ್ಯಗಳನ್ನು ಬಿತ್ತಿ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳಾಗುವ ರೀತಿ ಅವಕಾಶ ನೀಡಬೇಕು. ಮಕ್ಕಳ ಪ್ರತಿ ಹಂತದ ಬೆಳವಣಿಗೆಯಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಮಹತ್ವವಾದುದು. ನಮ್ಮ ದಿನನಿತ್ಯದ ಜೀವನದಲ್ಲಿ ಕನ್ನಡವನ್ನು ಉಳಿಸಿ, ಬೆಳೆಸುವ ಕಾರ್ಯ ಪ್ರತಿಯೊಬ್ಬರ ಮೇಲಿದೆ. ಕನ್ನಡ ಭಾಷಾಭಿಮಾನವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಅಂಕಗಳ ಬೆನ್ನು ಹತ್ತದೇ ಕೌಶಲ್ಯಯುತ ಜ್ಞಾನ ಪಡೆದುಕೊಳ್ಳಬೇಕಾಗಿದೆ. ಶಿಕ್ಷಣದಿಂದ ಪಡೆದಂತಹ ಜ್ಞಾನದಿಂದ ಜಗತ್ತಿನ ಯಾವ ಮೂಲೆಯಲ್ಲಾದರೂ ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆ…
ಧರ್ಮಸ್ಥಳ: ಮಂಜುನಾಥ ಸ್ವಾಮಿಯ ರೂಪದಲ್ಲಿ ಇರುವ ಶಿವ, ಜೈನರ ಆಡಳಿತ ಮತ್ತು ವೈಷ್ಣವ ಸಂಪ್ರದಾಯದ ಅರ್ಚಕರನ್ನು ಒಳಗೊಂಡಿರುವ ಧರ್ಮಸ್ಥಳ ಕ್ಷೇತ್ರವು ವಸುಧೈವ ಕುಟುಂಬಕಂ ಎನ್ನುವ ಭಾರತೀಯ ತಾತ್ತ್ವಿಕತೆ ಮತ್ತು ನಮ್ಮಲ್ಲಿರುವ ಧಾರ್ಮಿಕ ವೈವಿಧ್ಯಕ್ಕೆ ನಿದರ್ಶನವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರ ಹೇಳಿದ್ದಾರೆ. ಧರ್ಮಸ್ಥಳ ದೇವಸ್ಥಾನದ ವತಿಯಿಂದ ಏರ್ಪಡಿಸಿದ್ದ 92ನೇ ವರ್ಷದ ಸರ್ವಧರ್ಮ ಸಮ್ಮೇಳನ ಹಾಗೂ ಲಕ್ಷ ದೀಪೋತ್ಸವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜೈನ ಧರ್ಮ ಮತ್ತು ಲಿಂಗಾಯತ ಧರ್ಮ ಎರಡೂ ಅಹಿಂಸೆ ಮತ್ತು ದಯೆಯನ್ನು ಪ್ರತಿಪಾದಿಸುತ್ತವೆ. ಜೈನ ಧರ್ಮವು ಭಾರತದ ಸಾಹಿತ್ಯ ಮತ್ತು ಸಂಸ್ಕೃತಿಗೆ ನೀಡಿರುವ ಕೊಡುಗೆಗಳು ಉಜ್ಜ್ವಲವಾಗಿವೆ. ಧಾರ್ಮಿಕ ವೈವಿಧ್ಯವೇ ಭಾರತದ ಶಕ್ತಿಯಾಗಿದೆ ಎಂದು ಅವರು ಬಣ್ಣಿಸಿದ್ದಾರೆ. ರಾಜರ್ಷಿ ವೀರೇಂದ್ರ ಹೆಗ್ಗಡೆಯವರು ಶ್ರೀಕ್ಷೇತ್ರದಿಂದ ಸಮಾಜಸೇವೆ, ಗ್ರಾಮೀಣ ಅಭಿವೃದ್ಧಿ, ಶಿಕ್ಷಣ ಮತ್ತು ಅನ್ನ ದಾಸೋಹ, ಪರಿಸರ ಸಂರಕ್ಷಣೆ, ಜಲಮೂಲಗಳ ಪುನರುಜ್ಜೀವನ ಇತ್ಯಾದಿಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಅವರು ಆರಂಭಿಸಿರುವ ಶಿಕ್ಷಣ ಸಂಸ್ಥೆಗಳು ತಾವಿರುವ…
ಬೆಂಗಳೂರು : ಮೃಗಾಲಯ ಮತ್ತು ಆನೆ ಶಿಬಿರಗಳಲ್ಲಿ ವನ್ಯಜೀವಿ ವೈದ್ಯರ ಕೊರತೆ ಇದ್ದು, ಪ್ರತ್ಯೇಕ ಕೇಡರ್ ಸೃಷ್ಟಿಸಿ, ಶೀಘ್ರವೇ 15 ವನ್ಯಜೀವಿ ವೈದ್ಯರ ನೇಮಕ ಮಾಡಿಕೊಳ್ಳಲು ಮುಖ್ಯಮಂತ್ರಿಗಳು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಳಗಾವಿ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳು ಅಸಹಜವಾಗಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಒಂಬತ್ತೂ ಮೃಗಾಲಯಗಳ ಮುಖ್ಯಸ್ಥರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಅವರು, ವನ್ಯಜೀವಿ ವೈದ್ಯರ ನೇಮಕ ಆಗುವವರೆಗೂ ಇರುವ ಪಶುವೈದ್ಯರಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿಗೆ ಗಳಲೆ (Hemorrhagic Septicemia)ರೋಗ- ಬ್ಯಾಕ್ಟೀರಿಯಾ ಸೋಂಕು ಕಾರಣವಾಗಿದೆ ಎಂದು ವೈದ್ಯರು ದೃಢಪಡಿಸಿದ್ದು, ಈ ಸೋಂಕು ಗಾಳಿಯಿಂದ, ನೀರಿನಿಂದ, ಆಹಾರದಿಂದ ಅಥವಾ ಪ್ರಾಣಿ ಪಾಲಕರಿಂದ ಪಸರಿಸಿದೆಯೇ ಎಂಬ ಬಗ್ಗೆ ಅಧ್ಯಯನ ನಡೆಸುವಂತೆ ಮತ್ತು ಬೇರೆ ಪ್ರಾಣಿಗಳಿಗೆ ಪಸರಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಪ್ರಮಾಣಿತ ಮಾನದಂಡ…
ಬೆಂಗಳೂರು: ಶಿವನಸಮುದ್ರದ ಕಾಲುವೆಗೆ ಇಳಿದಿದ್ದ ಗಂಡಾನೆಯನ್ನು ಸುರಕ್ಷಿತವಾಗಿ ಮೇಲೆತ್ತಲಾಗಿದ್ದು, ರಕ್ಷಣಾ ಕಾರ್ಯದಲ್ಲಿ ಪಾಲ್ಗೊಂಡ ಎಲ್ಲ ಅಧಿಕಾರಿ ಸಿಬ್ಬಂದಿಯನ್ನು ಅಭಿನಂದಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ನೀರು ಕುಡಿಯಲು ಕಾಲುವೆಗೆ ಇಳಿದ ಆನೆ ಕಳೆದ ಮೂರು ದಿನಗಳಿಂದ ಮೇಲೆ ಬರಲಾರದೆ, ಆಹಾರವೂ ಸಿಗದೆ ನಿತ್ರಾಣವಾಗಿತ್ತು. ಅರಣ್ಯ ಸಿಬ್ಬಂದಿ ಕಠಿಣ ಪರಿಸ್ಥಿತಿಯಲ್ಲಿ ಕಾರ್ಯಾಚರಣೆ ನಡೆಸಿ ಆನೆಯನ್ನು ಸುರಕ್ಷಿತವಾಗಿ ಮೇಲೆತ್ತಿರುವುದಾಗಿ ತಿಳಿಸಿದ್ದಾರೆ ಎಂದು ಸಚಿವರು ತಿಳಿಸಿದರು. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಆನೆಯೊಂದು ಶಿವನಸಮುದ್ರದ ಕಾಲುವೆಯಲ್ಲಿ ಸಿಲುಕಿದೆ ಎಂಬ ಮಾಹಿತಿ ತಮಗೆ ದೊರೆತ ಕೂಡಲೇ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರಿಗೆ ಕರೆ ಮಾಡಿ ತತ್ ಕ್ಷಣ ಕ್ರಮ ಕೈಗೊಂಡು ಆನೆ ರಕ್ಷಿಸಲು ಸೂಚಿಸಿದ್ದಾಗಿಯೂ ಸಚಿವರು ಹೇಳಿದರು. 12 ವರ್ಷದ ಆನೆಯನ್ನು 50 ಅಡಿ ಆಳದಿಂದ ಮೇಲೆತ್ತಲಾಗಿದೆ. ನೀರಿನ ಹರಿವು ಹೆಚ್ಚಿದ್ದ ಕಾರಣ ಕಾರ್ಯಚರಣೆಗೆ ಅಡ್ಡಿಯಾಗಿತ್ತು. ರಕ್ಷಿಸಲಾದ ಆನೆ ಯಶಸ್ವಿಯಾಗಿ ಹತ್ತಿರದ ಅರಣ್ಯದತ್ತ ಹೆಜ್ಜೆ ಹಾಕಿದೆ ಎಂದೂ ತಿಳಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿಯು ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಗಳಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಿಕಾ ಸಂಪಾದಕರಿಗೆ “ನ್ಯೂಸ್ ರೂಂ ನಲ್ಲಿ AI ಹಾಗೂ ಫ್ಯಾಕ್ಟ್ ಚೆಕ್” ಕುರಿತಂತೆ ನವೆಂಬರ್ 29 ರಂದು ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಿದೆ. ಪರಿಶಿಷ್ಟ ಜಾತಿಯ 35 ಮಂದಿ ಹಾಗೂ ಪರಿಶಿಷ್ಟ ಪಂಗಡದ 15 ಮಂದಿ ಒಟ್ಟು 50 ಪತ್ರಿಕಾ ಸಂಪಾದಕರಿಗೆ ತರಬೇತಿ ನೀಡಲಾಗುವುದು. ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನದ ಹಿನ್ನೆಲೆಯಲ್ಲಿ ಪತ್ರಕರ್ತರು ಈ ತಂತ್ರಜ್ಞಾನಗಳ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಈ ತರಬೇತಿ ಸಹಕಾರಿಯಾಗಲಿದೆ ಎಂದು ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ ಅವರು ತಿಳಿಸಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪತ್ರಿಕೆಗಳ ಸಂಪಾದಕರು ಈ ತರಬೇತಿಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಕುರಿತಂತೆ ಇಲಾಖಾ ಮಾಧ್ಯಮ ಪಟ್ಟಿಯಲ್ಲಿರುವ ಕುರಿತ ದಾಖಲೆ, ಜಾತಿ ಪ್ರಮಾಣ ಪತ್ರ ಹಾಗೂ ಆಧಾರ್/…
BREAKING: ಪೋಕ್ಸೋ ಕೇಸಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಸಂಕಷ್ಟ: ಡಿ.2ರಂದು ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿ
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಪೋಕ್ಸೋ ಕೇಸಲ್ಲಿ ಈಗ ಸಂಕಷ್ಟ ಎದುರಾಗಿದೆ. ಡಿಸೆಂಬರ್.2ರಂದು ಖುದ್ದು ಹಾಜರಾಗುವಂತೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಪೋಕ್ಸೋ ಕೇಸಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ ತಡೆಯಾಜ್ಞೆ ತೆರವಾದ ಹಿನ್ನಲೆಯಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಎಸ್ ಪಿ ಪಿ ಅಶೋಕ್ ನಾಯ್ಕ್ ಅವರು ಅರ್ಜಿಯನ್ನು ಒಂದನೇ ತ್ವರಿತ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್ ವೈ.ಎಂ ಅರುಣ, ರುದ್ರೇಶ್ ಮರುಳಸಿದ್ದಯ್ಯ, ಜಿ.ಮರಿಸ್ವಾಮಿಗೂ ಸಮನ್ಸ್ ಜಾರಿಗೊಳಿಸಿದೆ. ಅಲ್ಲದೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ನಾಲ್ವರು ಆರೋಪಿಗಳಿಗೆ ಡಿಸೆಂಬರ್.2ರಂದು ಖುದ್ದು ಕೋರ್ಟ್ ಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ತಿಳಿಸಲಾಗಿದೆ. https://kannadanewsnow.com/kannada/mla-s-suresh-kumar-who-became-a-traffic-policeman-do-you-know-the-reason/ https://kannadanewsnow.com/kannada/priyank-kharge-is-limitless-in-telling-lies-cheater-narayanaswamy/














