Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರವು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಸ್ತಾಂತರ ಮತ್ತು ಸ್ಥಳಾಂತರಕ್ಕೆ ಅನುಮತಿ ನೀಡಿ ಆದೇಶ ಹೊರಡಿಸಿದೆ. ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ದಿನಾಂಕ: 10.06.2005ರ ಸರ್ಕಾರದ ಸುತ್ತೋಲೆಯನ್ವಯ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಹಸ್ತಾಂತರ ಮತ್ತು ಸ್ಥಳಾಂತರಕ್ಕೆ ಅನುಮತಿ ನೀಡುವ ಅಧಿಕಾರವನ್ನು ಅವರವರ ಕಾರ್ಯವ್ಯಾಪ್ತಿಗೆ ಅನುಗುಣವಾಗಿ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು, ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಗುಲ್ಬರ್ಗಾ ಮತ್ತು ಅವರ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಧಾರವಾಡರವರಿಗೆ ಪ್ರತ್ಯಾಯೋಜಿಸಲಾಗಿತ್ತು. ತದನಂತರ, ಖಾಸಗಿ ಪೂರ್ವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಸ್ಥಳಾಂತರಿಸಲು/ಹಸ್ತಾಂತರಿಸಲು ಅನುಮತಿ ನೀಡುವ ಅಧಿಕಾರವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯಾಯ ಆಯುಕ್ತರುಗಳಿಗೆ ಪ್ರತ್ಯಾಯೋಜಿಸಿ ಉಲ್ಲೇಖ(3)ರ ದಿನಾಂಕ:03.12.2007ರ ಅಧಿಸೂಚನೆಯನ್ನು ಹೊರಡಿಸಲಾಗಿತ್ತು ಎಂದಿದ್ದಾರೆ. ದಿನಾಂಕ:20.10.2010ರ ಸರ್ಕಾರದ ಸುತ್ತೋಲೆಯಲ್ಲಿ ವಿನಾಕಾರಣ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹಾಗೂ ಜಿಲ್ಲೆಯಿಂದ ಜಿಲ್ಲೆಗೆ ಸ್ಥಳಾಂತರ ಮಾಡುತ್ತಿರುವ ಪ್ರಕರಣಗಳು…
ಶಿವಮೊಗ್ಗ: ಸಾಗರ ತಾಲ್ಲೂಕಿನ ತಾಳಗುಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಾಣಿಜ್ಯ ಮಳಿಗೆಗಳ ಟೆಂಡರ್ ಪ್ರಕ್ರಿಯೆ ತರಾತುರಿಯಲ್ಲಿ ಮುಕ್ತಾಯಗೊಳಿಸಿರೋದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಇಓ, ಸಿಇಓಗೂ ದೂರು ನೀಡಲಾಗಿದೆ. ಆ ವೇಳೆಯಲ್ಲಿ ಟೆಂಡರ್ ಪ್ರಕ್ರಿಯೆ ತಾತ್ಕಾಲಿಕವಾಗಿ ಮುಂದೂಡುವಂತೆ ಸೂಚಿಸಿದ್ದರೂ, ಡೋಂಟ್ ಕೇರ್ ಎಂಬುದಾಗಿ ಪಿಡಿಓ ವರ್ತಿಸಿದಂತ ಆರೋಪ ಕೇಳಿ ಬಂದಿದೆ. ಹೀಗಾಗಿ ಅವರ ಅಮಾನತು ಕೂಡ ಆಗಲಿದೆ ಎನ್ನಲಾಗುತ್ತಿದೆ. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಿಇಓ, ಇಓಗೆ ದೂರು ದಿನಾಂಕ 23-01-2026ರಂದು ಮಧುಸೂಧನ ಹಾಗೂ ತಾಳಗುಪ್ಪ ಗ್ರಾಮಸ್ಥರು ಸೇರಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ತಾಳಗುಪ್ಪ ಗ್ರಾಮ ಪಂಚಾಯ್ತಿಯಲ್ಲಿ ಅವಧಿ ಪೂರ್ಣ ಹರಾಜು ಪ್ರಕ್ರಿಯೆ ಕರೆದಿರುವ ಬಗ್ಗೆ, ಜಮಾಬಂಧಿ ಮಾಡದಿರುವ ಬಗ್ಗೆ ದೂರು ನೀಡಿದ್ದರು. ಇದೇ ದೂರಿನ ಪ್ರತಿಯನ್ನು ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸಾಗರ ತಾಲ್ಲೂಕು ಪಂಚಾಯ್ತಿ ಇಓಗೂ ಇ-ಮೇಲ್ ಮೂಲಕ…
ಬೆಂಗಳೂರು: 2026-27ನೇ ಶೈಕ್ಷಣಿಕ ವರ್ಷಕ್ಕೆ 74 ಆದರ್ಶ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶ ಪರೀಕ್ಷೆ ಹಾಗೂ ದಾಖಲಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ರಾಜ್ಯ ಯೋಜನಾ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಜ್ಯದಲ್ಲಿನ 74 ಆದರ್ಶ ವಿದ್ಯಾಲಯಗಳಲ್ಲಿ 2026-27ನೇ ಶೈಕ್ಷಣಿಕ ವರ್ಷಕ್ಕೆ 6ನೇ ತರಗತಿಗೆ ಪ್ರವೇಶ ನೀಡುವ ಸಂಬಂಧ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದೆ ಎಂದು ತಿಳಿಸಲಾಗಿದೆ ಎಂದಿದ್ದಾರೆ. ಈ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಪೋಷಕರು ದಿನಾಂಕ 23.01.2026 ರಿಂದ 25.02.2026 ರವರೆಗೆ www.schooleducation.karnataka.gov.in ಹಾಗೂ www.vidyavahini.karnataka.gov.in ವೆಬ್ಸೈಟ್ಗಳ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರವೇಶ ಪರೀಕ್ಷೆಯ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಹಾಗೂ ನಿಗದಿತ ಅವಧಿಗೆ ನಿಯಮಾನುಸಾರ ದಾಖಲಾತಿ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಹಾಗೂ ಪೋಷಕರು ಅರ್ಜಿ ಸಲ್ಲಿಸುವ ಮೊದಲು ಅರ್ಹತಾ ಮಾನದಂಡಗಳು ಮತ್ತು ಮಾರ್ಗಸೂಚಿಗಳನ್ನು ಅಧಿಕೃತ ವೆಬ್ಸೈಟ್ನಲ್ಲಿ ಪರಿಶೀಲಿಸುವಂತೆ ಸೂಚಿಸಲಾಗಿದೆ ಎಂಬುದಾಗಿ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ತಿಳಿಸಿದ್ದಾರೆ. https://kannadanewsnow.com/kannada/government-instructs-states-gram-panchayats-to-prepare-for-general-elections-date-to-be-fixed-soon/
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ವೈದ್ಯರು ತಮ್ಮ ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ(IPD) ಚಿಕಿತ್ಸೆ ನೀಡುವುದು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆ, ಸರ್ಕಾರಿ ಆಸ್ಪತ್ರೆಗಳ ಸೇವಾ ಗುಣಮಟ್ಟವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ವಹಿಸಿದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಗುರುವಾರದಂದು ವಿಧಾನಸಭೆಯಲ್ಲಿ ಶಾಸಕ ಶಿವಲಿಂಗೇಗೌಡ ಅವರು ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಸೇವೆಯಲ್ಲಿ ವ್ಯತ್ಯಯದಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರ ಮರುಹೊಂದಾಣಿಕೆ ಮೂಲಕ 24 ಗಂಟೆಯೂ ಸೇವೆ ಸಿಗುವಂತೆ ಮಾಡಲು ಎಲ್ಲ ಸಿದ್ದತೆ ನಡೆಸುತ್ತಿದೆ. ಜೊತೆಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯಲ್ಲಿ ಕೆಲಸ ಮಾಡುವ ಸರ್ಕಾರಿ ವೈದ್ಯರ ಖಾಸಗಿ ಸೇವೆ ಬಗ್ಗೆ ಮಾತನಾಡಿದ ಸಚಿವರು, ಪ್ರಸ್ತುತ ಸರ್ಕಾರಿ ಆದೇಶಗಳ ಪ್ರಕಾರ, ಸರ್ಕಾರಿ ವೈದ್ಯರು ತಮ್ಮ ಕೆಲಸದ ಅವಧಿ ನಂತರ (ಸರ್ಕಾರಿ ಕರ್ತವ್ಯಗಳಿಗೆ ಅಡ್ಡಿಯಾಗದಂತೆ) ಖಾಸಗಿಯಾಗಿಯೂ ಸೇವೆ…
ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಸ್ವಯಂ ಪ್ರೇರಣೆಯಿಂದ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸುವುದು. ಅಲ್ಲದೇ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ಸೇರಿದಂತೆ ಎಲ್ಲಾ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಖಾದಿ ಉಡುಪನ್ನು ಧರಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೂಚಿಸಿದ್ದಾರೆ. ಈ ಕುರಿತಂತೆ ರಾಜ್ಯದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳಿಗೆ ಸುತ್ತೋಲೆ ಹೊರಡಿಸಿರುವಂತ ಅವರು, “ಖಾದಿ” ಕೇವಲ ಒಂದು ಉಡುವು ಮಾತ್ರವಲ್ಲ, ಅದು ರಾಷ್ಟ್ರದ ಗೌರವ ಮತ್ತು ಹೆಮ್ಮೆಯ ಪ್ರತೀಕವಾಗಿದೆ. ಪ್ರಸ್ತುತ ಖಾದಿ ನೇಕಾರರು ನೂತನ ಶೈಲಿಯ ವಿನ್ಯಾಸದಲ್ಲಿ ಉಡುವುಗಳನ್ನು ತಯಾರಿಸಲು ಮುಂದಾಗಿದ್ದಾರೆ. ಅಲ್ಲದೇ, ಖಾದಿ ಉತ್ಪಾದನೆಯು ಗ್ರಾಮೀಣ ಆರ್ಥಿಕತೆಯ ಮೂಲ ಆಧಾರವಾಗಿದ್ದು, ರಾಜ್ಯದ ಸಾವಿರಾರು ಗ್ರಾಮೀಣ ನೂಲುಗಾರರು ಮತ್ತು ನೇಕಾರರಿಗೆ ನೇರ ಹಾಗೂ ಪರೋಕ್ಷವಾಗಿ ಜೀವನೋಪಾಯವನ್ನು ಒದಗಿಸುತ್ತಿದೆ ಎಂದಿದ್ದಾರೆ. ಆದುದರಿಂದ, 77ನೇ ಗಣರಾಜ್ಯೋತ್ಸವದ ಶುಭಸಂದರ್ಭದಲ್ಲಿ, ಸಾರ್ವಜನಿಕ ಸೇವೆಯನ್ನು ದೇಶದ ಸ್ವಾತಂತ್ರ್ಯ ಹೋರಾಟದೊಂದಿಗೆ ಮರುಸಂಪರ್ಕಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಖಾದಿ ಬಳಕೆಯನ್ನು…
ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಸುಳ್ಳು, ಜಾತಿ ಪ್ರಮಾಣ ಪತ್ರಗಳನ್ನು ಪಡೆದುಕೊಂಡವರ ವಿರುದ್ಧ ಕ್ರಮಜರುಗಿಸೋದಕ್ಕೆ ಸರ್ಕಾರ ಆದೇಶಿಸಿದೆ. ಆ ಜಾತಿ ಪ್ರಮಾಣ ಪತ್ರಗಳನ್ನು ರದ್ದುಗೊಳಿಸೋವರೆಗೂ ಸ್ಟೇ ನೀಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದ್ದು, ಲೋಕೋಪಯೋಗಿ ಸಚಿವರ ಅಧ್ಯಕ್ಷತೆಯಲ್ಲಿ ದಿನಾಂಕ:26.11.2025ರಂದು ನಡೆದ ಸಭೆಯಲ್ಲಿ ಹಾಜರಿದ ಸಮುದಾಯದ ಮುಖಂಡರು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಕಾನೂನು ಬಾಹಿರವಾಗಿ ಪರಿಶಿಷ್ಟ ಪಂಗಡದ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಪಡೆಯುತ್ತಿರುವುದಾಗಿ ಪ್ರಸ್ತಾಪಿಸಿ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೋರಿರುತ್ತಾರೆ ಎಂದಿದೆ. ಸುಳ್ಳು, ಜಾತಿ ಪ್ರಮಾಣ ಪತ್ರ ಪಡೆದ ಅಭ್ಯರ್ಥಿಗಳಿಗೆ The Karnataka Scheduled Casts, Scheduled Tribes and Other Backward classes (Reservation of Appointment Etc.) Act 1990ರಲ್ಲಿ ಜಿಲ್ಲಾಧಿಕಾರಿಗಳಿಗೆ ಪುದತ್ತವಾದ ಅಧಿಕಾರದ ಕುರಿತು ಮಾನ್ಯ ಉಚ್ಛ ನ್ಯಾಯಾಲಯದ W.P.13777/20230 (GM CC PIL) dada. “The Deputy Commissioner may, stay the execution of any such…
ಬೆಂಗಳೂರು: 2026-31ನೇ ಸಾಲಿನ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸರ್ಕಾರ ಸೂಚಿಸಿದೆ. ಆ ಮೂಲಕ ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಶೀಘ್ರವೇ ದಿನಾಂಕ ಘೋಷಣೆಯ ಸುಳಿವು ಹೊರಬಿದ್ದಿದೆ. ಈ ಕುರಿತಂತೆ ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಅದರಲ್ಲಿ 2020-25ನೇ ಅವಧಿಯ ಗ್ರಾಮ ಪಂಚಾಯಿತಿಗಳ ಅವಧಿಯು 2026 ರ ಜನವರಿ ಮಾಹೆಯಿಂದ ಪೂರ್ಣಗೊಳ್ಳಲು ಪ್ರಾರಂಭವಾಗಿದ್ದು, ಸದರಿ ಅವಧಿಯು ಮುಕ್ತಾಯಗೊಳ್ಳುವ ಗ್ರಾಮ ಪಂಚಾಯಿತಿಗಳಿಗೆ 2025ರ ಡಿಸೆಂಬರ್ ಮಾಹೆಯಲ್ಲಿ ಸಾರ್ವತ್ರಿಕ ಚುನಾವಣೆಯನ್ನು ನಡೆಸಬೇಕಾಗಿದ್ದು, ಸಾರ್ವತ್ರಿಕ ಚುನಾವಣೆ ನಡೆಸುವ ಆರು ತಿಂಗಳು ಮುಂಚಿತವಾಗಿ ಮತದಾರರ ಪಟ್ಟಿ ಮುದ್ರಣ ಒಳಗೊಂಡಂತೆ, ಇತರ ಎಲ್ಲಾ ಪೂರ್ವಭಾವಿ ಸಿದ್ಧತೆಗಳನ್ನು ಆಯೋಗವು ಮಾಡಿಕೊಳ್ಳಬೇಕಾಗಿರುತ್ತದೆ. ಆದುದರಿಂದ ನಿಗಧಿತ ಕಾಲಮಿತಿಯಲ್ಲಿ ಮೀಸಲಾತಿಯ ಅಧಿಸೂಚನೆಯನ್ನು ಹೊರಡಿಸಿ, ಅದರ ಪ್ರತಿಗಳನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಒದಗಿಸುವಂತೆ ಆಯುಕ್ತರು, ರಾಜ್ಯ ಚುನಾವಣಾ ಆಯೋಗ, ಕರ್ನಾಟಕರವರು ಕೋರಿರುತ್ತಾರೆ ಎಂದಿದ್ದಾರೆ. ಪುಸ್ತುತ ಬಹುತೇಕ ಗ್ರಾಮ ಪಂಚಾಯಿತಿಗಳ ಅವಧಿಯು…
ಬೆಂಗಳೂರು: ರಾಜ್ಯದ ಶಾಲಾ ಶಿಕ್ಷಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ ಮಹಿಳಾ ಸರ್ಕಾರಿ ನೌಕರರಿಗೂ ಋತುಚಕ್ರ ರಜೆ ಸೌಲಭ್ಯ ಕಲ್ಪಿಸಿ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ವಿಕಾಸ್ ಕಿಶೋರ್ ಸುರಳ್ಕರ್ ಅವರು ಜ್ಞಾಪನಾದೇಶ ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ ಅವರ ಮನೋರ್ಯವನ್ನು ಹೆಚ್ಚಿಸಲು ಮಾಸಿಕ ಋತುಚಕ್ರದ ಸಂದರ್ಭದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯನ್ನು ಪಡೆದುಕೊಳ್ಳಲು ಇರುವ ನಿಬಂಧನೆಗಳು ಉಲ್ಲೇಖ (2) ರ ಮತ್ತು ಸರ್ಕಾರದ ಆದೇಶ ದಿನಾಂಕ:12.11.2025ರಲ್ಲಿ ಪ್ರಸ್ತಾಪಿಸಿರುವಂತೆ ಇರುತ್ತದೆ ಎಂದಿದ್ದಾರೆ. ಈ ಷರತ್ತುಗಳು ಅನ್ವಯ 1. ಮಹಿಳಾ ನೌಕರರು ಆಯಾ ತಿಂಗಳ “ಋತುಚಕ್ರ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು, ಹಿಂದಿನ ತಿಂಗಳ “ಋತುಚಕ್ರ ರಜೆಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು (CARRY OVER) ಅವಕಾಶವಿರುವುದಿಲ್ಲ. 2. ಪ್ರತಿ ತಿಂಗಳು ಒಂದು ದಿನದ…
ಬೆಂಗಳೂರು: ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ರಾಜ್ಯ ಸಿವಿಲ್ ಸೇವಾ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಯ ಕ್ರಮವಾಗಿ 5 ವರ್ಷಗಳಿಗೆ ಸಡಿಲಿಕೆ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 29-09-2025ರ ಆದೇಶದಲ್ಲಿ ದಿನಾಂಕ 06-09-2025ರ ಆದೇಶವನ್ನು ಹಿಂಪಡೆದು, ದಿನಾಂಕ 31-12-2027ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳ ಅನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 3 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಿದ್ದಾರೆ. ಆನಂತರದಲ್ಲಿ ಹಲವಾರು ಉದ್ಯೋಗಾಕಾಂಕ್ಷಿಗಳು,…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಬ್ಬದ ಮುಂಗಡ ಪಡೆಯಲು ಅಧಿಸೂಚಿಸಿರುವ ಹಬ್ಬಗಳೊಂದಿಗೆ ಹೆಚ್ಚುವರಿಯಾಗಿ ಕೆಲವು ಹಬ್ಬಗಳನ್ನು ಸೇರ್ಪಡೆಗೊಳಿಸಿ ಸರ್ಕಾರ ಆದೇಶಿಸಿದೆ. ಆ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿಯನ್ನು ನೀಡಿದೆ. ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಸರ್ಕಾರದ ಆದೇಶಗಳ ಅನುಸಾರ ಹಬ್ಬಗಳಿಗಾಗಿ ಮುಂಗಡ ಹಣವನ್ನು ರಾಜ್ಯ ಸರ್ಕಾರಿ ನೌಕರರಿಗೆ ಮಂಜೂರು ಮಾಡಲು ನಿಗದಿಪಡಿಸಿದ ಅರ್ಜಿಯಲ್ಲಿ ಈ ಕೆಳಕಂಡ ಹಬ್ಬಗಳಿಗೆ ಮಾತ್ರ ಹಬ್ಬದ ಮುಂಗಡ ಹಣವನ್ನು ಮಂಜೂರು ಮಾಡಲಾಗುತ್ತಿದೆ ಎಂದಿದ್ದಾರೆ. ಪಟ್ಟಿ-1 1. ಸೌರಮಾನ ಯುಗಾದಿ ಅಥವಾ ಚಾಂದ್ರಮಾನ ಯುಗಾದಿ 2. ಮಕರ ಸಂಕ್ರಾಂತಿ 3. ದೀಪಾವಳಿ 4. ಗಣೇಶ ಚತುರ್ಥಿ 5. ರಂಜಾನ್ 6. ಬಕ್ರೀದ್ 7. ಈದ್-ಎ-ಮಿಲಾದ್ 8. ಈಸ್ಟರ್ 9. ಗಣತಂತ್ರ ದಿನ 10. ಸ್ವಾತಂತ್ರ್ಯ ದಿನ 11. ದಸರಾ ಪ್ರಸ್ತುತ ರಾಜ್ಯ ಸರ್ಕಾರಿ ನೌಕರರು ಹಬ್ಬದ ಮುಂಗಡವನ್ನು ಪಡೆಯಲು ಅಧಿಸೂಚಿಸಿರುವ ಹಬ್ಬಗಳೊಂದಿಗೆ ಈ ಕೆಳಕಂಡ ಹಬ್ಬಗಳನ್ನು ಹೆಚ್ಚುವರಿಯಾಗಿ…














