Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೊಳಗೇರಿ ನಿವಾಸಿಗಳಿಗೆ ಸರ್ಕಾರದ ವತಿಯಿಂದ ಕಡಿಮ ವೆಚ್ಚದಲ್ಲಿ ವಸತಿ ಸೌಕರ್ಯ ಕಲ್ಪಿಸುವ ಕುರಿತು ಪರಿಶೀಲಿಸಲು ಕ್ಷೇತ್ರದ ಶಾಸಕರೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ವಸತಿ ಸಚಿವ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ಕ್ಷೇತ್ರ ಪರ್ಯಟನೆ ನಡೆಸಿದರು. ಸರ್ವಜ್ಞ ನಗರದ ವಸತಿ ಸಂಕೀರ್ಣ ಹಾಗೂ ಕೊಳಗೇರಿಗೆ ವಸತಿ ಸಚಿರೊಂದಿಗೆ ಗುರುವಾರ ಭೇಟಿ ನೀಡಿದ ಸಚಿವ ಕೆ.ಜೆ.ಜಾರ್ಜ್ ಅವರು ವಸ್ತುಸ್ಥಿತಿ ಪರಿಶೀಲಿಸದರಲ್ಲದೆ, ಕೊಳೇರಿ ನಿವಾಸಿಗಳಿಗೆ ತುರ್ತಾಗಿ ಆಗಬೇಕಿರುವ ವಸತಿ ಸೌಕರ್ಯಗಳು ಹಾಗೂ ಅದಕ್ಕೆ ಅಗತ್ಯವಿರುವ ಹಣಕಾಸಿನ ಕುರಿತು ಚರ್ಚೆ ನಡೆಸಿದರು. ಕರ್ನಾಟಕ ಗೃಹ ಮಂಡಳಿ (ಕೆಎಚ್ಬಿ) ಕಾಲೋನಿ ಜಾನಕಿರಾಮ ಬಡಾವಣೆಯಲ್ಲಿನ 684 ಮನೆಗಳಿರುವ ವಸತಿ ಸಂಕೀರ್ಣದ ಬಳಿ ಶುರುವಾದ ಪರಿಶೀಲನಾ ಕಾರ್ಯ, ಕಾಚರಕನಹಳ್ಳಿ ಕೆರೆಯ ಅಂಗಳದ ಕೊಳಗೇರಿ ಪ್ರದೇಶದ 457 ಗುಡಿಸಲುಗಳ ಪರಿಶೀಲನೆಯೊಂದಿಗೆ ಮುಕ್ತಾಯವಾಯಿತು. ಈ ವೇಳೆ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, ವಸತಿ ಇಲಾಖೆಯು ಕರ್ನಾಟಕ ಗೃಹಮಂಡಳಿ ಮೂಲಕ ನಿರ್ಮಿಸಿದ ವಸತಿ ಸಂಕೀರ್ಣದಲ್ಲಿರುವ…
ಬೆಂಗಳೂರು: ನಗರದ ಬಸವನಗುಡಿಯ ಕಡಲೆಕಾಯಿ ಪರಿಷೆ’ ಈ ವರ್ಷ ಅಭೂತಪೂರ್ವ ಯಶಸ್ಸು ದಾಖಲಿಸಿದೆ. ಮೂರು ದಿನಗಳಲ್ಲಿಯೇ 6 ಲಕ್ಷ ಜನ ಭಾಗವಹಿಸಿದ್ದು, ಪರಿಷೆ ಮುಕ್ತಾಯವಾಗುವುದರೊಳಗೆ 12 ಲಕ್ಷಕ್ಕೂ ಮೀರಿ ಜನ ಭಾಗವಹಿಸುವ ನಿರೀಕ್ಷೆಯಿದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಕಾರ್ತಿಕ ಮಾಸದ ಕೊನೆಯ ಸೋಮವಾರ ಆರಂಭವಾದ ಐತಿಹಾಸಿಕ ಬೆಂಗಳೂರು ಕಡಲೆಕಾಯಿ ಪರಿಷೆಯು ಈ ವರ್ಷ ಹಲವು ವಿಶೇಷತೆಗಳಿಗೆ ಕಾರಣವಾಗಿದೆ. ಬಸವನಗುಡಿಯ ಸುತ್ತಮುತ್ತಲಿನ ರಸ್ತೆಗಳು ಜನಜಾತ್ರೆಯಿಂದ ಸಂಭ್ರಮದಲ್ಲಿ ಮುಳುಗಿ ಹೋಗಿದೆ ಎಂದರೆ ತಪ್ಪಾಗಲಾರದು. ಮೂರು ದಿನಗಳಲ್ಲಿ ಅರು ಲಕ್ಷಕ್ಕೂ ಹೆಚ್ಚು ಜನ ಭೇಟಿ ನೀಡಿದ್ದಾರೆ ಎಂದು ಹೇಳಿದ್ದಾರೆ. ಮುಜರಾಯಿ ಇಲಾಖೆಯು ಈ ವರ್ಷ ಅಧಿಕೃತವಾಗಿಯೇ ಐದು ದಿನಗಳ ಕಾಲಕ್ಕೆ ಪರಿಷೆಯನ್ನು ವಿಸ್ತರಿಸಿ ಅಚ್ಚುಕಟ್ಟಾಗಿ ಆಯೋಜಿಸಿದೆ. ಸೋಮವಾರ ಪರಿಷೆ ಆರಂಭವಾಗಿದ್ದರೂ, ಶನಿವಾರದಿಂದಲೇ ಜಾತ್ರೆ ಸಡಗರ ಆರಂಭವಾಗಿತ್ತು. ಶುಕ್ರವಾರಕ್ಕೆ ಮುಗಿದರೂ ವಾರಾಂತ್ಯವಿರುವುದರಿಂದ ಭಾನುವಾರದವರೆಗೂ ಜನಸಂದಣಿ ಇರಲಿದೆ ಎಂದು ಪೊಲೀಸ್ ಇಲಾಖೆ ಅಂದಾಜಿಸಿದೆ ಎಂದು ತಿಳಿಸಿದ್ದಾರೆ.…
BREAKING: ದೆಹಲಿ ಕಾರು ಸ್ಫೋಟ ಕೇಸ್: ಮತ್ತೆ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದ NIA | Delhi Red Fort Blast
ನವದೆಹಲಿ: ನವೆಂಬರ್ 10 ರಂದು ದೆಹಲಿಯ ಕೆಂಪು ಕೋಟೆಯ ಹೊರಗೆ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗುರುವಾರ ನಾಲ್ವರು ಪ್ರಮುಖ ಶಂಕಿತರನ್ನು ಬಂಧಿಸಿದ್ದು, ಪ್ರಕರಣದಲ್ಲಿ ಈವರೆಗೆ ಆರು ಮಂದಿಯನ್ನು ಬಂಧಿಸಿದಂತೆ ಆಗಿದೆ. ಪಟಿಯಾಲ ಹೌಸ್ ನ್ಯಾಯಾಲಯದ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರ ಆದೇಶದ ಮೇರೆಗೆ ನಾಲ್ವರನ್ನು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಎನ್ಐಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಬಂಧಿತ ವ್ಯಕ್ತಿಗಳನ್ನು ಪುಲ್ವಾಮಾ (ಜೆ & ಕೆ) ದ ಡಾ. ಮುಝಮ್ಮಿಲ್ ಶಕೀಲ್ ಗನೈ, ಅನಂತನಾಗ್ (ಜೆ & ಕೆ) ದ ಡಾ. ಅದೀಲ್ ಅಹ್ಮದ್ ರಾಥರ್, ಲಕ್ನೋ (ಯುಪಿ) ದ ಡಾ. ಶಾಹೀನ್ ಸಯೀದ್ ಮತ್ತು ಶೋಪಿಯಾನ್ (ಜೆ & ಕೆ) ದ ಮುಫ್ತಿ ಇರ್ಫಾನ್ ಅಹ್ಮದ್ ವಾಗೆ ಎಂದು ಗುರುತಿಸಲಾಗಿದೆ. ನಾಲ್ವರು ಆರೋಪಿಗಳು “ಹಲವಾರು ಅಮಾಯಕ ಜನರನ್ನು ಕೊಂದು ಇತರರನ್ನು ಗಾಯಗೊಳಿಸಿದ ಭಯೋತ್ಪಾದಕ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ” ಎಂದು ಫೆಡರಲ್ ಸಂಸ್ಥೆ…
ಬೆಂಗಳೂರು: ರಾಜ್ಯದ ವಾಹನ ಸವಾರರಿಗೆ ಮತ್ತೆ ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಸಂಚಾರ ನಿಯಮ ಉಲ್ಲಂಘಿಸಿದಂತ ವಾಹನ ಸವಾರರಿಗೆ ಮತ್ತೆ ಶೇ.50ರಷ್ಟು ದಂಡ ಪಾವತಿಗೆ ಡಿಸೆಂಬರ್.12ರವರೆಗೆ ಕಾಲಾವಕಾಶ ನೀಡಲಾಗಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅವರು ಆದೇಶ ಹೊರಡಿಸಿದ್ದಾರೆ. ವಾಹನ ಸವಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಶೇ.50ರಷ್ಟು ದಂಡ ಪಾವತಿಗೆ ನವೆಂಬರ್.21ರಿಂದ ಡಿಸೆಂಬರ್.12ರವರೆಗೆ ಅವಧಿ ವಿಸ್ತರಿಸಿರುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ. ನಾಳೆಯಿಂದ ಡಿಸೆಂಬರ್ 12ರವರೆಗೆ ಶೇ.50ರಷ್ಟು ದಂಡ ಕಟ್ಟಲು ಅವಕಾಶ ನೀಡಲಾಗಿದೆ. ದಂಡದ ಮೊತ್ತ ಪಾವತಿಯಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿ ಆದೇಶಿಸಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ದಂಡದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿ ಪಾವತಿಸಲು ಅವಧಿ ವಿಸ್ತರಿಸಿ ಆದೇಶಿಸಿದ್ದಾರೆ. https://kannadanewsnow.com/kannada/alert-using-these-passwords-could-lead-to-your-data-leak-be-careful/ https://kannadanewsnow.com/kannada/it-is-a-superstition-that-if-i-come-to-chamarajanagar-i-will-lose-power-my-power-is-secure-now-and-in-the-future-cm/
BREAKING: ಸಂಚಾರ ನಿಯಮ ಉಲ್ಲಂಘನೆ: ಶೇ.50ರಷ್ಟು ರಿಯಾಯಿತಿಯಲ್ಲಿ ದಂಡ ಪಾವತಿಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯದ ವಾಹನ ಸವಾರರಿಗೆ ಮತ್ತೆ ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಶೇ.50ರಷ್ಟು ದಂಡ ಪಾವತಿಗೆ ಡಿಸೆಂಬರ್.12ರವರೆಗೆ ಕಾಲಾವಕಾಶ ನೀಡಲಾಗಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅವರು ಆದೇಶ ಹೊರಡಿಸಿದ್ದಾರೆ. ವಾಹನ ಸವಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಶೇ.50ರಷ್ಟು ದಂಡ ಪಾವತಿಗೆ ನವೆಂಬರ್.21ರಿಂದ ಡಿಸೆಂಬರ್.12ರವರೆಗೆ ಅವಧಿ ವಿಸ್ತರಿಸಿರುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ. ನಾಳೆಯಿಂದ ಡಿಸೆಂಬರ್ 12ರವರೆಗೆ ಶೇ.50ರಷ್ಟು ದಂಡ ಕಟ್ಟಲು ಅವಕಾಶ ನೀಡಲಾಗಿದೆ. ದಂಡದ ಮೊತ್ತ ಪಾವತಿಯಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿ ಆದೇಶಿಸಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ದಂಡದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿ ಪಾವತಿಸಲು ಅವಧಿ ವಿಸ್ತರಿಸಿ ಆದೇಶಿಸಿದ್ದಾರೆ. https://kannadanewsnow.com/kannada/alert-using-these-passwords-could-lead-to-your-data-leak-be-careful/ https://kannadanewsnow.com/kannada/it-is-a-superstition-that-if-i-come-to-chamarajanagar-i-will-lose-power-my-power-is-secure-now-and-in-the-future-cm/
ದಕ್ಷಿಣ ಕನ್ನಡ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಂತ ವಿಶೇಷ ತನಿಖಾ ದಳದ(ಎಸ್ಐಟಿ) ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದಂತ ಎಸ್ಐಟಿ ಅಧಿಕಾರಿಗಳ ತಂಡವು ಸುಳ್ಳು ಸಾಕ್ಷ್ಯ, ವರದಿಯನ್ನೂ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ. ಚಾರ್ಜ್ ಶೀಟ್ ಹಾಗೂ ಸುಳ್ಳು ಸಾಕ್ಷ್ಯ ವರದಿಯನ್ನು ಎಸ್ಐಟಿ ಅಧಿಕಾರಿಗಳು ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. 7 ಫೈಲ್ ಗಳಲ್ಲಿ ವರದಿ ತಯಾರು ಮಾಡಿದ್ದಂತ ಎಸ್ಐಟಿ ಅಧಿಕಾರಿಗಳು, ಅದನ್ನು ಇಂದು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ. ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ಎಸ್ಐಟಿ ಟೀಂ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ. ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಸುಜಾತ ಭಟ್, ವಿಠಲ್ ಗೌಡ ಸೇರಿದಂತೆ 6 ಮಂದಿ ವಿರುದ್ಧ ಎಸ್ಐಟಿ ಚಾರ್ಜ್ ಶೀಟ್ ಸಲ್ಲಿಸಿಸಿದೆ ಎನ್ನಲಾಗುತ್ತಿದೆ. https://kannadanewsnow.com/kannada/breaking-no-cabinet-reshuffle-in-the-state-for-now-cm-siddaramaiah-clarifies/ https://kannadanewsnow.com/kannada/if-i-had-stayed-in-jds-i-would-not-have-become-the-chief-minister-siddaramaiah/
ಚಾಮರಾಜನಗರ: ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯ್ತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ ದೇಶದಲ್ಲಿ ಸಹಕಾರ ಚಳವಳಿ ಗಟ್ಟಿಯಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ, ಸಮಾರೋಪ ಮಾತುಗಳನ್ನಾಡಿದರು. ನೆಹರೂ ಅವರ ಈ ದೂರದೃಷ್ಟಿ ಕಾರಣಕ್ಕೆ ಅವರ ಜನ್ಮ ದಿನದಂದೇ ಪ್ರತೀ ವರ್ಷ ಸಹಕಾರ ಸಪ್ತಾಹ ಉದ್ಘಾಟನೆಯಾಗುತ್ತದೆ ಎಂದರು. ಇಂದು ರಾಜ್ಯದಲ್ಲಿ ಕೃಷಿ, ಹೈನುಗಾರಿಕೆ, ಕೈಗಾರಿಕೆ, ಬ್ಯಾಂಕಿಂಗ್ ಸೇರಿ ಹಲವಾರು ಕ್ಷೇತ್ರಗಳಲ್ಲಿ ಸಹಕಾರಿ ಚಳವಳಿ, ಸಹಕಾರಿ ಸಂಘಗಳು ಬೆಳೆಯುತ್ತಲೇ ಇವೆ. ಇದು ಆರೋಗ್ಯಕಾರಿ ಬೆಳವಣಿಗೆ ಎಂದರು. ನಾನು ಪಶು ಸಂಗೋಪನಾ ಸಚಿವನಾಗಿದ್ದಾಗ ಹಾಲು ಉತ್ಪಾದಕರ ಸಹಕಾರ ಸಂಘಗಳ ಸ್ವಾಯತ್ತತೆ ಮತ್ತು ಸ್ವಾವಲಂಭನೆಗೆ ಪೂರ್ಣ ಸಹಕಾರ ನೀಡಿದ್ದೆ. ಈಗ ಒಂದು ದಿನಕ್ಕೆ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ನಾನು ಹಾಲು ಉತ್ಪಾದಕರ ಅನುಕೂಲಕ್ಕಾಗಿ…
ಬೆಂಗಳೂರು : ನಮ್ಮ ಸರ್ಕಾರವು ಎರಡೂವರೆ ವರ್ಷದ ಅವಧಿಯಲ್ಲಿ ಜನಸಮುದಾಯಕ್ಕೆ ನಾವು ನೀಡಿದ್ದ ಭರವಸೆಗಳನ್ನು ಆದ್ಯತೆಯ ಮೇಲೆ ಈಡೇರಿಸಿದ್ದೇವೆ ಎಂಬ ಸಮಾದಾನವಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದ್ಯತೆಯ ಮೇಲೆ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ್ದೇವೆ. ಮುಂದೆ ಹೆಚ್ಚಿನ ರೀತಿಯಲ್ಲಿ ಹಣಕಾಸಿನ ವಿಚಾರದಲ್ಲಿ ಅನವಶ್ಯಕ ಖರ್ಚುಗಳನ್ನು ಸರಿಪಡಿಸುವ ಪ್ರಯತ್ನ ಮಾಡಬೇಕು ಎಂದರು. ಕೇಂದ್ರ ಸರ್ಕಾರ ನಮಗೆ ಕೊಡಬೇಕಾದ ಹಣ ಕಡಿಮೆ ಕೊಟ್ಟಿದೆ. ಜಿಎಸ್ಟಿ ಪಾಲಿನಲ್ಲಿ ಕಡಿಮೆ ನೀಡಿದೆ. ಕೇಂದ್ರ ಸರ್ಕಾರದ ಸಹಯೋಗದಲ್ಲಿ ಆಗುವ ಯೋಜನೆಗಳಲ್ಲಿ ಸರಿಯಾದ ಸಮಯದಲ್ಲಿ ಅನುದಾನ ಬಿಡುಗಡೆ ಮಾಡುವುದಿಲ್ಲ. ಜಲ ಜೀವನ್ ಮಿಷನ್ ಯೋಜನೆಯ ಸಾಕಷ್ಟು ಅನುದಾನ ಬಾಕಿ ಇದೆ. ಇಡೀ ದೇಶದಲ್ಲಿ ಮನೆಮನೆಗೆ ಗಂಗೆ, ನೀರು ತಲುಪಿಸುತ್ತೇವೆ ಎಂದು ಹೇಳುತ್ತಾರೆ. ಅದರ ಹಣವನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ. ಮುಖ್ಯಮಂತ್ರಿಗಳು ಅನುಭವಿ ಹಣಕಾಸು ಸಚಿವರು. 17ನೇ ಬಾರಿ ಬಜೆಟ್ ಮಂಡಿಸುವವರಿದ್ದಾರೆ. ಇದನ್ನೆಲ್ಲ ಚರ್ಚೆ ಮಾಡಿ, ಹಣಕಾಸಿನ ವಿಚಾರದಲ್ಲಿ ಒಂದಷ್ಟು ತೀರ್ಮಾನ…
ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೂಢನಂಬಿಕೆ ಮತ್ತು ಕಂದಾಚಾರಗಳಲ್ಲಿ ನಂಬುವುದಿಲ್ಲವಾದ್ದರಿಂದ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುತ್ತೇನೆ. ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಸಮಾನವಾಗಿ ಕಂಡು, ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿರುತ್ತದೆ ಎಂದು ತಿಳಿಸಿದರು. 2028 ರಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗುವ ಬಗ್ಗೆ ಮಾಡಿದ ಹೇಳಿಕೆಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಇಂತಹ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಐದು ವರ್ಷ ಆಡಳಿತ ನಡೆದು ಜನಾದೇಶ ಇದೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯನ್ನು ಈಡೇರಿಸಲು…
ಕಠ್ಮಂಡು: ನೇಪಾಳದಲ್ಲಿ ಪ್ರತಿಭಟನೆಗಳು ಮತ್ತೆ ಭುಗಿಲೆದ್ದಿದ್ದು, ಅಧಿಕಾರಿಗಳು ಹಲವಾರು ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಿದ್ದಾರೆ. ಗುರುವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಿಮಾರಾ ಚೌಕ್ನಲ್ಲಿ ಪ್ರತಿಭಟನಾಕಾರರು ಜಮಾಯಿಸಿದರು, ನಂತರ ಪೊಲೀಸರು ಅವರನ್ನು ಚದುರಿಸಲು ಲಾಠಿ ಪ್ರಹಾರದಂತ ಬಲಪ್ರಯೋಗ ಮಾಡಿದರು ಮತ್ತು ಅಧಿಕಾರಿಗಳು ನಂತರ ಕರ್ಫ್ಯೂ ವಿಧಿಸಿದರು ಎಂದು ದಿ ಕಠ್ಮಂಡು ಪೋಸ್ಟ್ ವರದಿ ಮಾಡಿದೆ. ಸಿಮಾರಾದಲ್ಲಿ ಕರ್ಫ್ಯೂ ಮಧ್ಯಾಹ್ನ 12.45 ರ ಸುಮಾರಿಗೆ ವಿಧಿಸಲಾಯಿತು ಮತ್ತು ರಾತ್ರಿ 8 ಗಂಟೆಯವರೆಗೆ ಇರುತ್ತದೆ ಎಂದು ವರದಿ ತಿಳಿಸಿದೆ. ಬುಧವಾರ ಭುಗಿಲೆದ್ದ ಘರ್ಷಣೆಗಳ ಕುರಿತು ತಮ್ಮ ದೂರುಗಳಲ್ಲಿ ಹೆಸರಿಸಲಾದ ವ್ಯಕ್ತಿಗಳನ್ನು ಬಂಧಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ಜನರಲ್ ಝಡ್ ಪ್ರತಿಭಟನಾಕಾರರು ಆರೋಪಿಸಿದರು. ನವೆಂಬರ್ 19 ರಂದು, ಆರು ಜನರಲ್ ಝಡ್ ಬೆಂಬಲಿಗರು ಗಾಯಗೊಂಡರು. ಸಿಮಾರಾ ವಿಮಾನ ನಿಲ್ದಾಣದ ಬಳಿಯ ಸಿಮಾರಾ ಚೌಕ್ನಲ್ಲಿ ನಡೆದ ಘರ್ಷಣೆಯ ಕುರಿತು ಗುಂಪು ಆರು ಯುಎಂಎಲ್ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಿತು. https://kannadanewsnow.com/kannada/breaking-no-cabinet-reshuffle-in-the-state-for-now-cm-siddaramaiah-clarifies/ https://kannadanewsnow.com/kannada/radiologist-who-sexually-harassed-woman-during-scan-finally-arrested/














