Subscribe to Updates
Get the latest creative news from FooBar about art, design and business.
Author: kannadanewsnow09
ಬಳ್ಳಾರಿ: ಜಿಲ್ಲೆಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕಾಗಿ ಫೈರಿಂಗ್ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಬಹಿರಂಗವಾಗಿಯೇ ಫೈರಿಂಗ್ ಮಾಡಿದಂತ ಇಬ್ಬರು ಗನ್ ಮ್ಯಾನ್ ಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸತೀಶ್ ರೆಡ್ಡಿಯ ಇಬ್ಬರು ಖಾಸಗಿ ಗನ್ ಮ್ಯಾನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ಆಪ್ತನಾಗಿರುವ ಸತೀಶ್ ರೆಡ್ಡಿ ಗನ್ ಮ್ಯಾನ್ ವಶಕ್ಕೆ ಪಡೆಯಲಾಗಿದೆ. ಬಹಿರಂಗವಾಗಿ ಫೈರಿಂಗ್ ಮಾಡಿದ್ದ ಇಬ್ಬರು ಗನ್ ಮ್ಯಾನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗನ್ ಮ್ಯಾನ್ ಗಳು ಸೇರಿ 40 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು 40 ಜನರನ್ನು ಬ್ರೂಸ್ ಪೇಟೆ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. https://kannadanewsnow.com/kannada/one-day-cancellation-of-shimoga-town-talaguppa-passenger-train-on-january-04-2026/
ಬೆಂಗಳೂರು : “ಬಿಜೆಪಿ ನಾಯಕರು ಗಾಂಧೀಜಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ತಮ್ಮ ಕಚೇರಿಗಳಲ್ಲಿ ಗಾಂಧೀಜಿ ಅವರ ಫೋಟೋ ಇಟ್ಟುಕೊಳ್ಳುವ ಯೋಗ್ಯತೆ ಕೂಡ ಅವರು ಉಳಿಸಿಕೊಂಡಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹರಿಹಾಯ್ದರು. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜತೆ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಶನಿವಾರ ಮಾತನಾಡಿದರು. “ಬಿಜೆಪಿ ನಾಯಕರು ಇನ್ನು ಮುಂದೆ ಮಹಾತ್ಮಾ ಗಾಂಧಿ ಅವರ ಪ್ರತಿಮೆ ಮುಂದೆ ಕೂತು ಹೋರಾಟ ಮಾಡುವ ಹಕ್ಕನ್ನು ಕಳೆದುಕೊಂಡಿದ್ದಾರೆ. ಮಹಾತ್ಮಾ ಗಾಂಧಿ ಅವರ ಫೋಟೋಗಳನ್ನು ತಮ್ಮ ಕಚೇರಿಗಳಲ್ಲಿ ಹಾಕಿಕೊಳ್ಳುವ ಅರ್ಹತೆಯನ್ನು ಕಳೆದುಕೊಂಡಿದ್ದಾರೆ. ಅವರ ಫೋಟೋ ಹಾಕಿಕೊಳ್ಳುವ ಯೋಗ್ಯತೆ ನಿಮಗಿಲ್ಲ. ಅವರ ಹೆಸರನ್ನು ಯೋಜನೆಯಿಂದ ತೆಗೆದ ಮೇಲೆ ನಿಮಗೆ ಯಾವ ನೈತಿಕತೆ ಇದೆ? ನೀವು ಮಹಾತ್ಮಾ ಗಾಂಧಿ ಬಗ್ಗೆ ಮಾತನಾಡುವ ಹಾಗೂ ಅವರ ಪ್ರತಿಮೆಗೆ ಹೂವಿನ ಹಾರ ಹಾಕುವ ಹಕ್ಕೂ ಇಲ್ಲ. ನಿಮ್ಮ ಬಳಿ ಇರುವ ಮಹಾತ್ಮಾ ಗಾಂಧೀಜಿ ಅವರ ಫೋಟೋಗಳನ್ನು ನಮಗೆ ಕೊಟ್ಟುಬಿಡಿ, ನಾವು ಅವುಗಳನ್ನು ನಮ್ಮ…
ಶಿವಮೊಗ್ಗ: ಶಿವಮೊಗ್ಗ ಟೌನ್ ಮತ್ತು ಕುಂಸಿ ನಿಲ್ದಾಣಗಳ ಮಧ್ಯೆ ಇರುವ ಕೋಟೆಗಂಗೂರು ನಿಲ್ದಾಣದಲ್ಲಿ ಮುಖ್ಯ ಮಾರ್ಗದ ಪುನರ್ ನಿರ್ಮಾಣ ಕೆಲಸದ ನಿಮಿತ್ತ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಕೈಗೊಳ್ಳಲಾಗಿರುವುದು ಇದರಿಂದಾಗಿ ಕೆಳಕಂಡ ರೈಲು ಸೇವೆಗಳನ್ನು ಒಂದು ದಿನ ರದ್ದುಪಡಿಸಲಾಗಿದೆ, ವಿವರಗಳು ಈ ಕೆಳಗಿನಂತಿವೆ. ರೈಲು ಸಂಖ್ಯೆ 56217 ತಾಳಗುಪ್ಪ–ಶಿವಮೊಗ್ಗ ಟೌನ್ ಪ್ಯಾಸೆಂಜರ್ ಹಾಗೂ ರೈಲು ಸಂಖ್ಯೆ 56218 ಶಿವಮೊಗ್ಗ ಟೌನ್–ತಾಳಗುಪ್ಪ ಪ್ಯಾಸೆಂಜರ್ ರೈಲುಗಳು ನಾಳೆ ಒಂದು ದಿನ ರದ್ದುಗೊಳಿಸಲಾಗಿದೆ.
ಮಂಡ್ಯ: ಜಿಲ್ಲೆಯ ಅಗಸರಹಳ್ಳಿ ಬಳಿ ಎಣ್ಣೆ ಕೊಡದಿದ್ದಕ್ಕೆ ಬಾರ್ ಹಾಗೂ ಮಾಲೀಕರ ಕಾರಿಗೆ ಬೆಂಕಿ ಇಟ್ಟು ಪುಂಡರು ದಾಂಧಲೆ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲ್ಲೂಕಿನ ಅಗಸರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಪರಮೇಶ್ ಎಂಬುವರಿಗೆ ಸೇರಿದಂತ ಈಗಲ್ ಬಾರ್ ಮತ್ತು ರೆಸ್ಟೋರೆಂಟ್ ನಲ್ಲಿ ಈ ಘಟನೆ ನಡೆದಿದೆ. ಮುರುಕನಹಳ್ಳಿಯ ರಕ್ಷಿತ್ ಹಾಗೂ ಆತನ ಸ್ನೇಹಿತರಿಂದ ದಾಂಧಲೆಯನ್ನು ನಡೆಸಲಾಗಿದೆ. ಉಚಿತವಾಗಿ ಮದ್ಯಕ್ಕೆ ಬೇಡಿಕೆಯನ್ನು ರಕ್ಷಿತ್ ಮತ್ತು ಆತನ ಸ್ನೇಹಿತರು ಇಟ್ಟಿದ್ದರಂತೆ. ಮದ್ಯ ಕೊಡದಿದ್ದಕ್ಕೆ ಪೆಟ್ರೋಲ್ ಸುರಿದು ಬಾರ್ ಹಾಗೂ ಮಾಲೀಕ ಪರಮೇಶ್ ಕಾರಿಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದಾರೆ. ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಕೆ ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/big-pendal-fell-due-to-heavy-cyclone-minister-satish-jarakiholi-bachao/
ಹಾವೇರಿ: ಜಿಲ್ಲೆಯಲ್ಲಿ ಭಾರಿ ಸುಂಟರಗಾಳಿಗೆ ಬೃಹತ್ ಗಾತ್ರದ ಪೆಂಡಾಲ್ ಒಂದು ಹಾರಿ ಬಿದ್ದಿದೆ. ಇದರ ಸಮೀಪದಲ್ಲೇ ಇದ್ದಂತ ಸಚಿವ ಸತೀಶ್ ಜಾರಕಿಹೊಳಿ ಅವರು ಕೂದಲೆಳೆಯ ಅಂತರದಿಂದ ಬಜಾವ್ ಆಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರಲ್ಲಿ ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆಯನ್ನು ಸಚಿವ ಸತೀಶ್ ಜಾರಕಿಹೊಳಿ ನೀಡುತ್ತಿದ್ದರು. ಈ ಸಂದರ್ಭದಲ್ಲೇ ಭಾರಿ ಸುಂಟರಗಾಳಿ ಉಂಟಾಗಿ ಬೃಹತ್ ಗಾತ್ರದ ಪೆಂಡಾಲ್ ಹಾರಿ ಬಿದ್ದಿದೆ. ಅನಾಹುತವೊಂದು ತಪ್ಪಿ, ಸಚಿವ ಸತೀಶ್ ಜಾರಕಿಹೊಳಿ ಬಚಾವ್ ಆಗಿದ್ದಾರೆ. https://kannadanewsnow.com/kannada/there-was-not-a-single-commotion-until-janardhana-reddy-set-foot-in-ballari-dcm-d-k-shivakumar/
ಬೆಂಗಳೂರು : “ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ. ಸಣ್ಣ ಅಹಿತಕರ ಘಟನೆ ಆಗಿರಲಿಲ್ಲ. ಸಣ್ಣ ಎಫ್ಐಆರ್ ಇರಲಿಲ್ಲ. ಅವರು ಬಂದಮೇಲೆ ಗಲಭೆ ಆಗಿದೆ. ಹೀಗಾಗಿ ಅವರಿಗೆ ಮಾತನಾಡುವ ಹಕ್ಕಿಲ್ಲ. ಪಕ್ಷ ನಮ್ಮ ಶಾಸಕ ಭರತ್ ರೆಡ್ಡಿ ಬೆನ್ನಿಗೆ ನಿಲ್ಲಲಿದೆ. ನಾವು ನಮ್ಮ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಇದಕ್ಕೆ ಕಾರಣ ಯಾರು ಎಂಬುದು ತನಿಖೆಯಿಂದ ಹೊರಬರಲಿದ್ದು, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಶನಿವಾರ ಮಾತನಾಡಿದರು. “ಮೊದಲ ಬಾರಿಗೆ ಬಳ್ಳಾರಿಯಲ್ಲಿ ನಮ್ಮ ಸರ್ಕಾರ ವಾಲ್ಮೀಕಿ ಮಹರ್ಷಿಯವರ ಪುತ್ಥಳಿ ನಿರ್ಮಿಸುತ್ತಿದೆ. ನಮ್ಮ ಶಾಸಕರು ಅದರ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ನಗರದ ಎಲ್ಲೆಡೆ ಅದರ ಪೋಸ್ಟರ್ ಗಳನ್ನು ಹಾಕಿದ್ದಾರೆ. ಅದರಲ್ಲಿ ತಪ್ಪೇನಿದೆ? ನಮ್ಮ ಮನೆ ಮುಂದೆಯೂ ಬಿಜೆಪಿಯವರು ಪೋಸ್ಟರ್ ಹಾಕುತ್ತಿರುತ್ತಾರೆ. ಅದನ್ನು ನಾನು ಬೇಡ ಎನ್ನಲು ಸಾಧ್ಯವೇ? ಈ ಪೋಸ್ಟರ್…
ಬೆಂಗಳೂರು: ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ಧತಿ ಕುರಿತು ಪತ್ರಿಕಾಗೋಷ್ಠಿಯಲ್ಲಿಮಾತನಾಡಿದರು. ಮೋದಿ ಸರ್ಕಾರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಹಿಂಪಡೆಯುವ ಮೂಲಕ ವಿಬಿ ಜಿ ರಾಮ್ ಜಿ ಹೆಸರಿನಲ್ಲಿ ಹೊಸ ಕಾಯ್ದೆ ಜಾರಿಗೆ ತರುವಾಗ, ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಿಲ್ಲ. ಭಾರತೀಯರ ಅಭಿಪ್ರಾಯ ಪಡೆಯದೆ ನೇರವಾಗಿ ಹೊಸ ಕಾಯ್ದೆ ಜಾರಿಗೊಳಿಸುವ ಮೂಲಕ ಸರ್ವಾಧಿಕಾರಿ ಧೋರಣೆಯನ್ನು ಪ್ರದರ್ಶಿಸಿದೆ ಎಂದರು. ಮನಮೋಹನ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರ ಉದ್ಯೋಗದ ಹಕ್ಕು, ಮಾಹಿತಿ ಹಕ್ಕು, ಶೈಕ್ಷಣಿಕ ಹಕ್ಕು ಮೊದಲಾದ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನರಿಗೆ ಹೆಚ್ಚಿನ ಅಧಿಕಾರವನ್ನು ನೀಡುವ ಕಾರ್ಯವನ್ನು ಮಾಡಿತ್ತು. ಮೋದಿ ಸರ್ಕಾರ ಡಿಸೆಂಬರ್ 17ರಂದು ಕಾಯ್ದೆಯನ್ನು ಸಂಸತ್ತಿನಲ್ಲಿ ಮಂಡಿಸಿ ಡಿ.18ರಂದು ಅಂಗೀಕಾರ ಪಡೆದಿದೆ.…
ಬೆಂಗಳೂರು: ಮತದಾರರ ಪಟ್ಟಿ ಮ್ಯಾಪಿಂಗ್ ಮಾಡುವ ಕೆಲಸಕ್ಕೆ ಪ್ರೌಢಶಾಲಾ ಶಿಕ್ಷಕರ ಬದಲಿಗೆ ಅಧಿಕಾರಿಗಳನ್ನೇ ನಿಯೋಜಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಅವರು ರಾಜ್ಯ ಸರಕಾರಕ್ಕೆ ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಅವರು ಶಾಲಾ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಮತ್ತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಮಾನ್ಯತೆ ನವೀಕರಣದ ಪ್ರತಿಯನ್ನು ಕಡ್ಡಾಯಗೊಳಿಸದೆ ಎಲ್ಲಾ ವಿದ್ಯಾರ್ಥಿಗಳಿಗೆ ಅದೇ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾಗಲು ಕ್ರಮ ವಹಿಸಬೇಕು ಹಾಗೂ ಮಕ್ಕಳ ಪರೀಕ್ಷೆಗಳು ಸಮೀಪಿಸುತ್ತಿರುವುದರಿಂದ 2002ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವ ಕಾರ್ಯಗಳಿಂದ ಪ್ರೌಢಶಾಲಾ ಶಿಕ್ಷಕರನ್ನು ಕೈಬಿಟ್ಟು ಬೇರೆ ಇಲಾಖೆಯ ಅಧಿಕಾರಿಗಳಿಂದ ಈ ಕಾರ್ಯವನ್ನು ಮಾಡಿಸಬೇಕೆಂದು ಕೋರಿ ಮನವಿ ಪತ್ರಗಳನ್ನು ನೀಡಿದರು.…
ಶಿವಮೊಗ್ಗ: ಕಳೆದ ಕೆಲ ವರ್ಷಗಳಿಂದ ಸಾಗರದ ಡಿಎಫ್ಓ ಆಗಿ ಕಾರ್ಯ ನಿರ್ವಹಿಸುತ್ತಿದ್ದಂತ ಮೋಹನ್ ಕುಮಾರ್ ಅವರನ್ನು ಸಿಎಫ್ ಆಗಿ ಪ್ರಮೋಷನ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸಾಗರದ ನೂತನ ಡಿಎಫ್ಓ ಆಗಿ ಮೊಹಮ್ಮದ್ ಫಯಾಜುದ್ದೀನ್ ನೇಮಕ ಮಾಡಲಾಗಿದೆ. 2012ನೇ ಸಾಲಿನ ಕರ್ನಾಟಕ ಕೇಡರ್ ಐಎಫ್ಎಸ್ ಅಧಿಕಾರಿ ಮೋಹನ್ ಕುಮಾರ್. ಡಿ ಅವರಿಗೆ ಸರ್ಕಾರ ಪದೋನ್ನತಿ ನೀಡಿದೆ. ದಿನಾಂಕ 01-01-2026ರಿಂದ ಜಾರಿಗೆ ಬರುವಂತೆ ಅರಣ್ಯ ಸಂರಕ್ಷಣಾಧಿಕಾರಿಯಾಗಿ ( Conservator of Forests-CF) ಆಗಿ ಪ್ರಮೋಷನ್ ನೀಡಲಾಗಿದೆ. ಸಾಗರದ ಡಿಎಫ್ಓ ಆಗಿದ್ದಂತ ಮೋಹನ್ ಕುಮಾರ್.ಡಿ ಅವರನ್ನು ಚಿಕ್ಕಮಗಳೂರು ಅರಣ್ಯ ಸಂರಕ್ಷಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಆ ಮೂಲಕ ಸಾಗರದ ಡಿಎಫ್ಓ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ. ಇನ್ನೂ ಹುಣಸೂರು ವಿಭಾಗದಲ್ಲಿ ಎಸ್ ಎಫ್ ಎಸ್ ಆಗಿದ್ದಂತ ಮೊಹಮ್ಮದ್ ಫಯಾಜುದ್ದೀನ್ ಅವರನ್ನು ಸಾಗರದ ಡಿಎಫ್ಓ ಆಗಿ ನೇಮಕ ಮಾಡಲಾಗಿದೆ. ಅವರು ಸಾಗರದ ನೂತನ ಡಿಎಫ್ಓ ಆಗಿಯೂ ಅಧಿಕಾರಿ ವಹಿಸಿಕೊಂಡಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು…
ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಯಾವುದೇ ಇಲಾಖೆಯವರು ಅನುಮತಿ ಪಡೆಯದೆ ರಸ್ತೆ ಕತ್ತರಿಸಿದರೆ ದಂಡ ವಿಧಿಸುವುದರ ಜೊತೆಗೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಬೆಸ್ಕಾಂ, ಕೆಪಿಟಿಸಿಎಲ್, ಜಲಮಂಡಳಿ ಹಾಗೂ ಗೇಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಬಿಎ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳು ಕೈಗೊಂಡಿರುವ ಕಾಮಗಾರಿಗಳ ಅನುಷ್ಠಾನದ ಸಂದರ್ಭದಲ್ಲಿ ಎದುರಾಗುವ ಸಮಸ್ಯೆಗಳ ಕುರಿತು ಇಂದು ನಡೆದ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ರಸ್ತೆ ಕತ್ತರಿಸುವ ಅಗತ್ಯವಿದ್ದಲ್ಲಿ “ಮಾರ್ಕ್ಸ್” ತಂತ್ರಾಂಶದ ಮೂಲಕ ಅನುಮತಿ ಪಡೆಯುವುದು ಕಡ್ಡಾಯ. ಈ ಪೈಕಿ ಯಾವುದೇ ಇಲಾಖೆಯಾಗಲಿ ಅನುಮತಿಯಿಲ್ಲದೆ ರಸ್ತೆ ಕತ್ತರಿಸುವಂತಿಲ್ಲ ಎಂದು ಅವರು ಎಚ್ಚರಿಸಿದರು. ಆಯಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಕತ್ತರಿಸಲು ಮಾರ್ಕ್ಸ್ ತಂತ್ರಾಂಶದ ಮೂಲಕ ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ ಕೂಡಲೇ ಅನುಮತಿ ನೀಡಬೇಕು. ಅನುಮತಿ ದೊರಕಿದ ನಂತರ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ, ರಸ್ತೆ ದುರಸ್ತಿ ಕಾರ್ಯವನ್ನು ಸಮರ್ಪಕವಾಗಿ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಯಾವುದೇ ಇಲಾಖೆ ಮುಂದಿನ ದಿನಗಳಲ್ಲಿ…













