Author: kannadanewsnow09

ದಾವಣಗೆರೆ : ರಾಜ್ಯ ಸರ್ಕಾರವು ಗ್ಯಾರಂಟಿಗಳಿಗೆ ಹಣ ಹೊಂದಿಸಿಕೊಳ್ಳಲು, ಖಾಲಿ ಆಗಿರುವ ಖಜಾನೆಯನ್ನು ಭರ್ತಿ ಮಾಡಿಕೊಳ್ಳಲು ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡುವ ನೆಪದಲ್ಲಿ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪಿಸಿದರು. ದಾವಣಗೆರೆಯಲ್ಲಿ ಗುರುವಾರ ದಿವಂಗತ ಶಾಮನೂರು ಶಿವಶಂಕರಪ್ಪ ಅವರ ಸ್ಮೃತಿ ಸ್ಥಳಕ್ಕೆ ತೆರಳಿ ನಮನ ಸಲ್ಲಿಸಿದ ನಂತರ ಕೇಂದ್ರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು. ಮದ್ಯದಂಗಡಿ ಪರವಾನಗಿ ಒಂದಕ್ಕೆ ₹ 1.95 ಕೋಟಿ ದರವನ್ನು ರಾಜ್ಯ ಸರ್ಕಾರ ನಿಗದಿ ಮಾಡಿದೆ. ಇದು ಲೂಟಿನಲ್ಲೇ ಮತ್ತೇನು? ಜನರಿಗೆ ಇನ್ನು ದೊಡ್ಡ ಪ್ರಮಾಣದಲ್ಲಿ ಕುಡಿತದ ಚಟ ಹತ್ತಿಸಲು ಸರ್ಕಾರವೇ ಉತ್ತೇಜನ ನೀಡುತ್ತಿದೆ. ಇದೇ ರೀತಿ ಪ್ರತಿಯೊಂದು ಇಲಾಖೆಯನ್ನು ಲೂಟಿ ಮಾಡುತ್ತಿದೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು. ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ (ಟಿಎಸ್‌ಪಿ) ಸೇರಿದಂತೆ ವಿವಿಧ ಯೋಜನೆಗಳ ಹಣ, ಅನುದಾನವನ್ನು ರಾಜ್ಯ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ಎಷ್ಟು ಸಾಧ್ಯವೋ…

Read More

ಇದು ದತ್ತಾತ್ರೇಯನ ಕಥೆ; ಓದಿದ್ರೆ ನಿಮ್ಮ ಕಷ್ಟಗಳೆಲ್ಲ ಪರಿಹಾರ ಹಿಂದೂ ಸಂಪ್ರದಾಯದ ಪ್ರಕಾರ, ದತ್ತಾತ್ರೇಯ ಋಷಿ ಅತ್ರಿ ಮತ್ತು ಅವರ ಪತ್ನಿ ಅನಸೂಯಾ ಅವರ ಮಗ. ಅನಸೂಯಾ ಬಹಳ ಪರಿಶುದ್ಧ ಮತ್ತು ಸದ್ಗುಣಶೀಲ ಹೆಂಡತಿ. ಬ್ರಹ್ಮ, ವಿಷ್ಣು ಮತ್ತು ಶಿವನ ತ್ರಿಮೂರ್ತಿಗಳಿಗೆ ಸಮಾನವಾದ ಮಗನನ್ನು ಪಡೆಯಲು ಅವಳು ಕಠಿಣ ತಪಸ್ಸನ್ನು (ತಪಸ್ಸನ್ನು) ಮಾಡಿದ್ದಳು. ಪುರುಷ ತ್ರಿಮೂರ್ತಿಗಳ ಪತ್ನಿಯರಾದ ತ್ರಿಮೂರ್ತಿಗಳಾದ ಸರಸ್ವತಿ, ಲಕ್ಷ್ಮಿ ಮತ್ತು ಪಾರ್ವತಿ ದೇವಿಯು ಅನ್ಸೂಯಾ ಬಗ್ಗೆ ಅಸೂಯೆಪಟ್ಟರು ಮತ್ತು ಅವರ ಸದ್ಗುಣವನ್ನು ಪರೀಕ್ಷಿಸಲು ತಮ್ಮ ಗಂಡಂದಿರನ್ನು ಕೇಳಿದರು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ…

Read More

ದನುರ್ಮಾಸ ದ ಮುಂಜಾನೆ ಈ ಸ್ತೋತ್ರ ಪಠಿಸಿರಿ ಮಹಾಲಕ್ಷ್ಮಿ ಸ್ಥಿರ ವಾಗಿ ನಿಲ್ಲುತ್ತಾಳೆ. ಶ್ರೀಭದ್ರಲಕ್ಷ್ಮೀ ಸ್ತೋತ್ರಂ ಶ್ರೀದೇವೀ ಪ್ರಥಮಂ ನಾಮ ದ್ವಿತೀಯಮಮೃತೋದ್ಭವಾ | ತೃತೀಯಂ ಕಮಲಾ ಪ್ರೋಕ್ತಾ ಚತುರ್ಥಂ ಲೋಕಸುಂದರೀ || ೧ || ಪಂಚಮಂ ವಿಷ್ಣುಪತ್ನೀತಿ ಷಷ್ಠಂ ಶ್ರೀವೈಷ್ಣವೀತಿ ಚ | ಸಪ್ತಮಂ ತು ವರಾರೋಹಾ ಅಷ್ಟಮಂ ಹರಿವಲ್ಲಭಾ || ೨ || ನವಮಂ ಶಾರ್ಙ್ಗಣೀ ಪ್ರೋಕ್ತಾ ದಶಮಂ ದೇವದೇವಿಕಾ | ಏಕಾದಶಂ ಮಹಾಲಕ್ಷ್ಮೀಃ ದ್ವಾದಶಂ ಲೋಕಸುಂದರೀ || ೩ || ಶ್ರೀಃ ಪದ್ಮಾ ಕಮಲಾ ಮುಕುಂದಮಹಿಷೀ ಲಕ್ಷ್ಮೀಸ್ತ್ರಿಲೋಕೇಶ್ವರೀ | ಮಾ ಕ್ಷೀರಾಬ್ಧಿ ಸುತಾಽರವಿಂದಜನನೀ ವಿದ್ಯಾ ಸರೋಜಾತ್ಮಿಕಾ || ೪ || ಸರ್ವಾಭೀಷ್ಟಫಲಪ್ರದೇತಿ ಸತತಂ ನಾಮಾನಿ ಯೇ ದ್ವಾದಶ | ಪ್ರಾತಃ ಶುದ್ಧತರಾಃ ಪಠಂತಿ ಸತತಂ ಸರ್ವಾನ್ ಲಭಂತೇ ಶುಭಾನ್ || ೫ || ಭದ್ರಲಕ್ಷ್ಮೀ ಸ್ತವಂ ನಿತ್ಯಂ ಪುಣ್ಯಮೇತಚ್ಛುಭಾವಹಂ | ಕಾಲೇ ಸ್ನಾತ್ವಾಪಿ ಕಾವೇರ್ಯಾಂ ಜಪ ಶ್ರೀವೃಕ್ಷಸನ್ನಿಧೌ || ೬ || || ಇತಿ ಶ್ರೀಭದ್ರಲಕ್ಷ್ಮೀ ಸ್ತೋತ್ರಂ ಸಂಪೂರ್ಣಂ…

Read More

ದಾವಣಗೆರೆ : ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕೇಂದ್ರ ಸರ್ಕಾರ ರೈಲು ಪ್ರಯಾಣ ದರ ಏರಿಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಹಿರಿಯೂರು ಬಸ್ ಅಪಘಾತ: ತನಿಖೆ ನಡೆಸಲಾಗುವುದು ಚಿತ್ರದುರ್ಗದ ಹಿರಿಯೂರು ಬಳಿ ನಡೆದ ಬಸ್ ಮತ್ತು ಟ್ರಕ್ ಅಪಘಾತದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಈ ಅಪಘಾತದಲ್ಲಿ ಟ್ರಕ್ ಚಾಲನ ತಪ್ಪಿರುವುದಾಗಿ ಮೇಲ್ನೋಟಕ್ಕೆ ಕಂಡು ಬರುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟ್ರಕ್ ವಿಭಜಕವನ್ನು ದಾಟಿ ಬಸ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 4 ಮಹಿಳೆಯರು ಹಾಗೂ ಒಂದು ಮಗು ಹಾಗೂ ಟ್ರಕ್ ಚಾಲಕ ಸಾವಿಗೀಡಾಗಿದ್ದಾರೆ. ಬಸ್ಸುಗಳು ಎಲ್ಲಾ ಸುರಕ್ಷತೆಯ ಕ್ರಮಗಳನ್ನು ಅನುಸರಿಸುವುದು ಅವಶ್ಯಕ. ಅಪಘಾತದ ಬಗ್ಗೆ ತನಿಖೆ ನಡೆಸಲಾಗುವುದು ಎಂದರು. ಕಾಂಗ್ರೆಸ್ ನ ಕಾರ್ಯಕಾರಣಿ ಸಭೆಯಲ್ಲಿ…

Read More

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿ:05/01/2026 ರಿಂದ 10 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರವನ್ನು ಏರ್ಪಡಿಸಿದ್ದು, ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರಿಂದ ಅರ್ಜಿ ಆಹ್ವಾನಿಸಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ಡಿ. 30ರಂದು ಬೆಳಿಗ್ಗೆ 10.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ…

Read More

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ 2019-20 ರಿಂದ 2024-25 ನೇ ಸಾಲಿನವರೆಗೂ ಎಸ್.ಎಫ್.ಸಿ ಯೋಜನೆಯಡಿ ಬಾಕಿ ಉಳಿದಿರುವ ಅನುದಾನದಲ್ಲಿ ಹೊಲಿಗೆ ಯಂತ್ರ ಪಡೆಯಲು ಅಸಕ್ತರಿಂದ ಅರ್ಜಿ ಅಹ್ವಾನಿಸಿದೆ. ಆಸಕ್ತರು ಅರ್ಜಿಯನ್ನು ಪಟ್ಟಣ ಪಂಚಾಯಿತಿ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ದಿ: 07/01/2026ರೊಳಗಾಗಿ ಸಲ್ಲಿಸುವಂತೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ www.hosanagaratown.mrc.gov.in ವೆಬ್‌ಸೈಟ್‌ನ್ನು ಹಾಗೂ ಕಚೇರಿಯ ವಿಷಯ ನಿರ್ವಾಹಕರನ್ನು ಸಂಪರ್ಕಿಸುವುದು.

Read More

ಶಿವಮೊಗ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ. ಅಧ್ಯಯನ ಮಾಡುತ್ತಿರುವ (ಫೆ.10, 2025 ಮತ್ತು ಅದರ ನಂತರ ಪ್ರಥಮ ವರ್ಷದ ಪಿಹೆಚ್.ಡಿ ಪ್ರಾರಂಭಿಸಿರಬೇಕು) ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಹೊಸ ವಿದ್ಯಾರ್ಥಿಗಳಿಂದ ಮಾತ್ರ ಮಾಸಿಕ ವ್ಯಾಸಂಗ ವೇತನ/ಫೆಲೋಶಿಫ್ ಪಡೆಯಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ದೃಢೀಕೃತ ದಾಖಲಾತಿಗಳನ್ನು ಲಗತ್ತಿಸಿ ದಿ: 09/12/2026 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ.: 8050770004, ವೆಬ್‌ಸೈಟ್ https://bcwd.karnataka.gov.in, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-222129 ನ್ನು ಸಂಪರ್ಕಿಸುವುದು.

Read More

ಬೆಂಗಳೂರು: ರಾಜ್ಯದ ಮಲೆನಾಡಿನ ಭಾಗಗಳಲ್ಲಿ ಮಂಗನ ಕಾಯಿಲೆ ಆರ್ಭಟಿಸುತ್ತಿದೆ. ಈ ಕಾಯಿಲೆಯನ್ನು ನಿಯಂತ್ರಣಕ್ಕಾಗಿ ಸಾರ್ವಜನಿಕರು ಈ ಕ್ರಮಗಳನ್ನು ಅನುಸರಿಸುವಂತೆ ಸರ್ಕಾರ ಸೂಚಿಸಿದೆ. ಮಲೆನಾಡು ಪ್ರದೇಶದಲ್ಲಿ ಹೆಚ್ಚಾಗಿ ಕಂಡು ಬರುವ ಮಂಗನ ಕಾಯಿಲೆ ತಡೆಗಟ್ಟಲು ಸಾರ್ವಜನಿಕರು ಏನು ಮಾಡಬೇಕು ಅಂದ್ರೆ ಕಾಡಿಗೆ ಹೋಗುವಾಗ ಸುರಕ್ಷತೆಗಾಗಿ ಮೈತುಂಬಾ ಬಟ್ಟೆ ಧರಿಸುವಂತೆ ತಿಳಿಸಿದೆ. ಕಾಡು, ತೋಟಕ್ಕೆ ಹೋಗುವಾಗ DEPA ಉಣ್ಣೆ ವಿಕರ್ಷಕ ತೈಲವನ್ನು ಲೇಪಿಸಿಕೊಳ್ಳಿ. ಕಾಡು, ತೋಟದಿಂದ ಬಂದ ನಂತ್ರ ಬಿಸಿ ನೀರಿನಲ್ಲಿ ಸ್ನಾನ ಮಾಡಿ ಹಾಗೂ ಧರಿಸಿದ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ನೆನೆಸಿ, ಸೋಪು ಬಳಸಿ ತೊಳೆಯಿರಿ ಎಂದಿದೆ. ಉಣ್ಣೆ ನಿವಾರಕ ಔಷಧವನ್ನು ದನದ ಕೊಟ್ಟಿಗೆಯ ಒಳಗೆ ಮತ್ತು ಸುತ್ತಮುತ್ತಲೂ ಸಿಂಪಡಿಸಿ. ಮಂಗಗಳು ಸತ್ತಿರುವುದು ಕಂಡು ಬಂದರೇ ಗ್ರಾಮ ಪಂಚಾಯ್ತಿ, ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತೆ ತಿಳಿಸಿದೆ. ಒಣಗಿದ ಎಲೆಗಳು ಸೋಂಕಿತ ಉಣ್ಣೆಗಳನ್ನು ಹೊಂದಿರಬಹುದಾಗಿದ್ದರಿಂದ ಕಾಡಿನಿಂದ ಒಣಗಿದ ಎಲೆಗಳನ್ನು ತಂದು ಮನೆ ಅಥವಾ ಮನೆಯ ಸುತ್ತಮುತ್ತ ರಾಶಿ ಹಾಕಬೇಡಿ. ಕೈ ಗವಸುಗಳನ್ನು ಧರಿಸದೇ ಸತ್ತ…

Read More

ಚಿಕ್ಕಮಗಳೂರು: ಸರ್ಕಾರಿ ಕಾರಿಗೆ ಇಲಾಖೆಯ ಹೆಸರು ಹಾಕಿಕೊಳ್ಳುವುದು ಮಾಮೂಲಿ. ಪೊಲೀಸ್ ಆದರೇ ಪೊಲೀಸ್, ಕಂದಾಯ ಇಲಾಖೆ ಆದರೇ ಕಂದಾಯ, ಅಬಕಾರಿ ಇಲಾಖೆ ಆದರೇ ಅಬಕಾರಿ ಅಂತ ಹೀಗೆ. ಆದರೇ ಇಲ್ಲೊಬ್ಬ ಪೊಲೀಸ್ ಅಧಿಕಾರಿ ತನ್ನ ಸ್ವಂತ ಕಾರಿಗೆ ಪೊಲೀಸ್ ಅಂತ ನಾಮಫಲಕ ಹಾಕಿಕೊಂಡು ಫ್ಯಾಮಿಲಿ ಸಹಿತ ಟ್ರಿಪ್ ಗೆ ತೆರಳಿದ್ದಾಗ ಪೊಲೀಸರಿಗೆ ಸಿಕ್ಕಿ ಬಿದ್ದಿರುವಂತ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ. ಇಂತಹ ಅಧಿಕಾರಿಗೆ ಕಾನೂನು ಬಿಸಿ ಮುಟ್ಟಿಸಿದಂತ ಪಿಎಸ್ಐ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ ಹೊಸ ವರ್ಷದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರ ವಾಹನಗಳನ್ನು ಬಣಕಲ್ ಠಾಣೆಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರೇಣುಕಾ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಖಾಸಗಿ ವಾಹನವಾಗಿದ್ದರೂ ಪೊಲೀಸ್ ಎನ್ನುವಂತ ನಾಮಫಲಕವೊಂದನ್ನು ಹಾಕಿದ್ದು ಕಂಡು ಬಂದಿದೆ. ಸ್ವಂತ ವಾಹನಕ್ಕೆ ಪೊಲೀಸ್ ಎಂಬುದಾಗಿ ನಾಮಫಲಕ ಹೊಂದಿದ್ದನ್ನು ಪರಿಶೀಲಿಸಿದಾಗ, ಅವರು ಧಾರವಾಡದಿಂದ ಧರ್ಮಸ್ಥಳಕ್ಕೆ ಕುಟುಂಬ ಸಮೇತ ಫ್ಯಾಮಿಲಿ ಟ್ರಿಪ್ ಬಂದಿರೋದು ತಿಳಿದು ಬಂದಿದೆ. ಕರ್ತವ್ಯದಲ್ಲಿ…

Read More

ಮೈಸೂರು: ನಗರದ ಪ್ರಸಿದ್ಧ ಅರಮನೆಯ ಮುಂಭಾಗದಲ್ಲೇ ಭೀಕರ ಅವಘಡ ಉಂಟಾಗಿದೆ. ಬಲೂನ್ ಗೆ ನೈಟ್ರೋಜನ್ ಗ್ಯಾಸ್ ತುಂಬಿಸುವಾಗ ಸ್ಪೋಟಗೊಂಡಿರುವಂತ ಘಟನೆ ನಡೆದಿದೆ. ಮೈಸೂರಿನ ಅರಮನೆ ಮುಂಭಾಗದಲ್ಲಿ ಬಲೂನುಗಳಿಗೆ ನೈಟ್ರೋಜನ್ ಗ್ಯಾಸ್ ತುಂಬಿಸುತ್ತಿದ್ದಾಗಲೇ ಸ್ಪೋಟ ಸಂಭವಿಸಿದೆ. ಇದರಿಂದಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೇ, ಮಹಿಳೆ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಕೃಷ್ಣರಾಜ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

Read More