Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರವು ಸೂಪರಿಡೆಂಟ್ ಆಫ್ ಪೊಲೀಸ್ ಹಾಗೂ ಮೇಲ್ಪಟ್ಟ ಶ್ರೇಣಿಯ ಅಧಿಕಾರಿಗಳಿಗೆ ಮ್ಯಾಜಿಸ್ಟ್ರೇಟ್ ಅಧಿಕಾರವನ್ನು ನೀಡಿ ಆದೇಶ ಹೊರಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಎಸ್ ಪಿ ಹಾಗೂ ಮೇಲ್ಪಟ್ಟ ಶ್ರೇಣಿಯ ಅಧಿಕಾರಿಗಳಿಗೆ ಕಾರ್ಯ ನಿರ್ವಾಹಕ ಮ್ಯಾಜಿಸ್ಟ್ರೇಟ್ ಅಧಿಕಾರ ನೀಡಿರುವುದಾಗಿ ತಿಳಿಸಿದೆ. ವಿಶೇಷ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಅಧಿಕಾರವನ್ನು ಬಳಕೆ ಮಾಡುವಂತೆಯೂ ಆದೇಶದಲ್ಲಿ ರಾಜ್ಯ ಸರ್ಕಾರ ಸೂಚಿಸಿದೆ. ನಿಷೇಧಾಜ್ಞೆ, ಆರೋಪಿಗಳಿಗೆ ಬಾಂಡ್ ಸೇರಿ ವಿಶೇಷ ಸಂದರ್ಭದಲ್ಲಿ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಅಧಿಕಾರವನ್ನು ಬಳಸಿಕೊಳ್ಳುವುದಕ್ಕೆ ಅನುಕೂಲವಾಗಲಿದೆ. https://kannadanewsnow.com/kannada/kuwj-state-level-office-bearers-to-take-charge-on-nov-24/ https://kannadanewsnow.com/kannada/new-labor-codes-to-be-implemented-across-the-country-from-today-what-are-the-benefits-heres-the-information/
ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (Karnataka Union of Working Journalists -KUWJ) ನೂತನ ಸಾಲಿನ ಪದಾಧಿಕಾರಿಗಳ ರಾಜ್ಯ ಮಟ್ಟದ ಅಧಿಕಾರ ಸ್ವೀಕಾರ ಸಮಾರಂಭ ನ.24ರಂದು ಬೆಳಿಗ್ಗೆ 11 ಗಂಟೆಗೆ ಗಾಂಧಿ ಭವನದಲ್ಲಿ ಆಯೋಜಿಸಲಾಗಿದೆ. ಕಾನೂನು ಮತ್ತು ಸಂಸದೀಯ ಸಚಿವರಾದ ಎಚ್.ಕೆ.ಪಾಟೀಲ್ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು, ಪ್ರಮಾಣ ವಚನ ಬೋಧನೆ ಮಾಡುವರು. ಹಿರಿಯ ಪತ್ರಕರ್ತೆ ನಾಗಮಣಿ ಎಸ್ ರಾವ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಮತ್ತು ಗಾಂಧಿ ಭವನದ ಅಧ್ಯಕ್ಷರಾದ ವೂಡೆ ಪಿ ಕೃಷ್ಣ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ. ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಎಲ್ಲಾ ಜಿಲ್ಲಾ ಘಟಕಗಳ ನೂತನ ಸಾಲಿನ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/priority-given-to-those-with-a-cooperative-degree-in-cooperative-society-recruitments-cm-siddaramaiah/ https://kannadanewsnow.com/kannada/railway-safety-work-behind-the-scenes-the-movement-of-these-trains-in-mysore-division-has-been-cancelled-and-restricted/
ಮೈಸೂರು: ದಕ್ಷಿಣ ರೈಲ್ವೆಯು ತಿರುನಿನ್ರವೂರ್ ಯಾರ್ಡ್ನಲ್ಲಿ ನಡೆಯುತ್ತಿರುವ ಸಿಗ್ನಲ್ ಮತ್ತು ಸುರಕ್ಷತಾ ಸಂಬಂಧಿತ ಕೆಲಸದ ಹಿನ್ನೆಲೆಯಲ್ಲಿ 23.11.2025ರಂದು ಕೆಳಗಿನ ರೈಲು ಸೇವೆಗಳು ಭಾಗಶಃ ರದ್ದುಗೊಳ್ಳುವುದು ಹಾಗೂ ನಿಯಂತ್ರಿಸಲ್ಪಡುವುದು ಎಂದು ತಿಳಿಸಿದೆ. 23.11.2025ರಂದು ರೈಲುಗಳ ಭಾಗಶಃ ರದ್ದು ಹಾಗೂ ನಿಯಂತ್ರಣ ರೈಲು ಸಂಖ್ಯೆ 16551 — ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ – ಅಶೋಕಪುರಂ ಎಕ್ಸ್ಪ್ರೆಸ್ ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ಮತ್ತು ಕಟ್ಪಾಡಿ ಜಂಕ್ಷನ್ ನಡುವೆ ಭಾಗಶಃ ರದ್ದಾಗಿದ್ದು, ಈ ರೈಲು ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ನ ಬದಲಿಗೆ ಕಟ್ಪಾಡಿ ಜಂಕ್ಷನ್ನಿಂದ ಪ್ರಾರಂಭವಾಗುತ್ತದೆ. ರೈಲು ಸಂಖ್ಯೆ 12607 — ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ – ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ಮತ್ತು ಕಟ್ಪಾಡಿ ಜಂಕ್ಷನ್ ನಡುವೆ ಭಾಗಶಃ ರದ್ದಾಗಿದ್ದು, ಈ ರೈಲು ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ನ ಬದಲಿಗೆ ಕಟ್ಪಾಡಿ ಜಂಕ್ಷನ್ನಿಂದ ಪ್ರಾರಂಭವಾಗುತ್ತದೆ. ರೈಲು ಸಂಖ್ಯೆ 12608 — ಕೆಎಸ್ಆರ್ ಬೆಂಗಳೂರು – ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ಎಕ್ಸ್ಪ್ರೆಸ್ ಕಟ್ಪಾಡಿ ಜಂಕ್ಷನ್ ಮತ್ತು ಎಂ.ಜಿ.ಆರ್.…
ಬೆಂಗಳೂರು: ವಾರಾಂತ್ಯಗಳಲ್ಲಿ ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು, ನೈಋತ್ಯ ರೈಲ್ವೆಯು ಬೆಂಗಳೂರು ಕಂಟೋನ್ಮೆಂಟ್ ಮತ್ತು ಕಲಬುರಗಿ ನಡುವೆ ಆರು ಟ್ರಿಪ್ಗಳ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ನಿರ್ವಹಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 06207 ಬೆಂಗಳೂರು ಕಂಟೋನ್ಮೆಂಟ್ – ಕಲಬುರಗಿ ವಿಶೇಷ ಎಕ್ಸ್ಪ್ರೆಸ್ ರೈಲು ನವೆಂಬರ್ 22, 2025 ರಿಂದ ಡಿಸೆಂಬರ್ 27, 2025 ರವರೆಗೆ ಪ್ರತಿ ಶನಿವಾರದಂದು ರಾತ್ರಿ 07:20 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ನಿಂದ ಹೊರಡಲಿದೆ ಮತ್ತು ಮರುದಿನ ಬೆಳಿಗ್ಗೆ 07:30 ಗಂಟೆಗೆ ಕಲಬುರಗಿಯನ್ನು ತಲುಪಲಿದೆ. ಮತ್ತೆ, ರೈಲು ಸಂಖ್ಯೆ 06208 ಕಲಬುರಗಿ – ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ಪ್ರೆಸ್ ರೈಲು ನವೆಂಬರ್ 23, 2025 ರಿಂದ ಡಿಸೆಂಬರ್ 28, 2025 ರವರೆಗೆ ಪ್ರತಿ ಭಾನುವಾರದಂದು ಬೆಳಿಗ್ಗೆ 09:35 ಗಂಟೆಗೆ ಕಲಬುರಗಿಯಿಂದ ಹೊರಟು, ಅದೇ ದಿನ ರಾತ್ರಿ 08:30 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ಮಾರ್ಗದಲ್ಲಿ, ಈ ರೈಲು ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣ,…
ಚಾಮರಾಜನಗರ: ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯ್ತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ ದೇಶದಲ್ಲಿ ಸಹಕಾರ ಚಳವಳಿ ಗಟ್ಟಿಯಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಗುರುವಾರದಂದು 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ, ಸಮಾರೋಪ ಮಾತುಗಳನ್ನಾಡಿದ ಅವರು, ನೆಹರೂ ಅವರ ಈ ದೂರದೃಷ್ಟಿ ಕಾರಣಕ್ಕೆ ಅವರ ಜನ್ಮ ದಿನದಂದೇ ಪ್ರತೀ ವರ್ಷ ಸಹಕಾರ ಸಪ್ತಾಹ ಉದ್ಘಾಟನೆಯಾಗುತ್ತದೆ ಎಂದರು. ಇಂದು ರಾಜ್ಯದಲ್ಲಿ ಕೃಷಿ, ಹೈನುಗಾರಿಕೆ, ಕೈಗಾರಿಕೆ, ಬ್ಯಾಂಕಿಂಗ್ ಸೇರಿ ಹಲವಾರು ಕ್ಷೇತ್ರಗಳಲ್ಲಿ ಸಹಕಾರಿ ಚಳವಳಿ, ಸಹಕಾರಿ ಸಂಘಗಳು ಬೆಳೆಯುತ್ತಲೇ ಇವೆ. ಇದು ಆರೋಗ್ಯಕಾರಿ ಬೆಳವಣಿಗೆ ಎಂದರು. ನಾನು ಪಶು ಸಂಗೋಪನಾ ಸಚಿವನಾಗಿದ್ದಾಗ ಹಾಲು ಉತ್ಪಾದಕರ ಸಹಕಾರ ಸಂಘಗಳ ಸ್ವಾಯತ್ತತೆ ಮತ್ತು ಸ್ವಾವಲಂಭನೆಗೆ ಪೂರ್ಣ ಸಹಕಾರ ನೀಡಿದ್ದೆ. ಈಗ ಒಂದು ದಿನಕ್ಕೆ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ನಾನು ಹಾಲು ಉತ್ಪಾದಕರ…
ಬೆಂಗಳೂರು : ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪರಪ್ಪನ ಅಗ್ರಹಾರ ಜೈಲಿಗೆ ಶುಕ್ರವಾರ ಭೇಟಿ ನೀಡಿ, ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಿ ಧೈರ್ಯ ಹೇಳಿದರು. ಕಾಂಗ್ರೆಸ್ ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರು ವಿಚಾರಣಾಧೀನ ಕೈದಿಗಳಾಗಿ ಜೈಲಲ್ಲಿದ್ದಾರೆ. ಸಂಜೆ 4.30 ಕ್ಕೆ ಜೈಲಿಗೆ ಭೇಟಿ ನೀಡಿದ ಶಿವಕುಮಾರ್ ಅವರು ಮೊದಲಿಗೆ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಿ ಸಮಾಧಾನ ಹೇಳಿದರು. ನಂತರ ಕೋರ್ಟ್ ವಿಚಾರಣೆ ಮುಗಿಸಿ ಬಂದ ವಿನಯ್ ಕುಲಕರ್ಣಿ ಅವರನ್ನು ಭೇಟಿಯಾಗಿ ಸಂತೈಸಿದರು. https://kannadanewsnow.com/kannada/tired-of-harassment-in-cm-siddaramaiahs-own-constituency-varuna-a-female-staff-member-attempts-suicide-in-the-office/ https://kannadanewsnow.com/kannada/new-labor-codes-to-be-implemented-across-the-country-from-today-what-are-the-benefits-heres-the-information/
ಉಡುಪಿ: ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಕಾಮಗಾರಿಗಳಲ್ಲಿ ಸರ್ವಾಧಿಕಾರಿ ಧೋರಣೆ ತೋರುವ ಮೂಲಕ ಗುತ್ತಿಗೆದಾರರ ಮೇಲೆ ದಬ್ಬಾಳಿಕೆ ಹಾಗೂ ಸಾರ್ವಜನಿಕ ಸ್ವತ್ತುಗಳಿಗೆ ಹಾನಿಯುಂಟು ಮಾಡಿರುವ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ವಿರುದ್ಧ ಕಾನೂನು ಕ್ರಮಕ್ಕೆ ಕಾರ್ಕಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಶಿವಪುರ ಒತ್ತಾಯಿಸಿದ್ದಾರೆ. ಲೋಕೋಪಯೋಗಿ ಇಲಾಖೆಯ ಮೂಲಕ ಮುನಿಯಾಲು – ಪಡುಕೂಡುರು ಖಜಾನೆ ರಸ್ತೆ ನಿರ್ಮಾಣದ ಕಾಮಗಾರಿಯು ಪ್ರಶಾಂತ್ ಶೆಟ್ಟಿ ಮೊಳಹಳ್ಳಿ ಎಂಬವರಿಗೆ ಲಭಿಸಿತ್ತು. 2 .50 ಕೋಟಿ ರೂಪಾಯಿ ಮೌಲ್ಯದ ಕಾಮಗಾರಿ ಇನ್ನಷ್ಟೇ ಆರಂಭಗೊಳ್ಳಬೇಕಿತ್ತು. ಆದರೆ ಸರ್ಕಾರಿ ಕಾಮಗಾರಿಗಳನ್ನು ಬೇರೆಯವರೆಗೆ ಬಿಟ್ಟುಕೊಡಲು ಇಚ್ಛಿಸದ ಉದಯ್ಕುಮಾರ್ ಶೆಟ್ಟಿ ಅಕ್ರಮವಾದಿ ಸದರಿ ರಸ್ತೆಯನ್ನು ಅಗೆದು ಕಾಮಗಾರಿ ಆರಂಭಿಸಿದ್ದಾರೆ. ಆದರೆ ಸರ್ಕಾರಿ ಇಂಜಿನಿಯರ್ ಈ ರಸ್ತೆಯ ಟೆಂಡರ್ ಪಡೆದ ಪ್ರಶಾಂತ್ಗೆ ನೋಟಿಸ್ ನೀಡಿದ್ದಾರೆ. ಅಸಲಿಗೆ ಈ ರಸ್ತೆ ಅಕ್ರಮವಾಗಿ ಅಗೆದಿರುವುದು ಉದಯ್ ಕುಮಾರ್ ಶೆಟ್ಟಿ ಆಗಿರುವುದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸುರೇಶ್ ಶೆಟ್ಟಿ ಕಿಡಿಕಾರಿದ್ದಾರೆ.…
ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸ್ವಕ್ಷೇತ್ರ ವರುಣಾದಲ್ಲಿ ವರ್ಗಾವಣೆ ಕಿರುಕುಳಕ್ಕೆ ಬೇಸತ್ತು ತಮ್ಮ ಕಚೇರಿಯಲ್ಲೇ ಮಹಿಳಾ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ. ಮೈಸೂರು ತಾಲ್ಲೂಕಿನ ವರುಣಾ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ದಿವ್ಯಾ ಎಂಬುವರೇ ಆತ್ಮಹತ್ಯೆಗೆ ಯತ್ನಿಸಿದಂತವರು ಆಗಿದ್ದಾರೆ. ವರ್ಗಾವಣೆ ವಿಚಾರಕ್ಕೆ ದಿವ್ಯಾ ಮಾನಸಿಕ ಕಿರುಕುಳ ಅನುಭವಿಸುತ್ತಿದ್ದರಂತೆ. ಈ ಕಾರಣದಿಂದಾಗಿ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವರುಣಾ ಗ್ರಾಮ ಪಂಚಾಯ್ತಿಯ ಕಾರ್ಯದರ್ಶಿ ದಿವ್ಯ ವರ್ಗಾವಣೆಯಿಂದಾಗಿ ಮಾನಸಿಕ ಕಿರುಕುಳಕ್ಕೆ ಒಳಗಾಗಿ ಕಚೇರಿಯಲ್ಲೇ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡಿದ್ದಂತ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/3-15-crore-cash-seized-while-trying-to-smuggle-from-karnataka/ https://kannadanewsnow.com/kannada/new-labor-codes-to-be-implemented-across-the-country-from-today-what-are-the-benefits-heres-the-information/
ಬೆಂಗಳೂರು: ಕರ್ನಾಟಕದಿಂದ ಕಳ್ಳಸಾಗಾಣೆ ಮಾಡುತ್ತಿದ್ದಂತ 3.15 ಕೋಟಿ ನಗದನ್ನು ಕೇರಳ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಕೇರಳದ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ಮಾಡಿ, 3.15 ಕೋಟಿ ಕಳ್ಳಸಾಗಾಣಿಕೆ ಮಾಡುತ್ತಿದ್ದಂತ ಹಣವನ್ನು ಜಪ್ತಿ ಮಾಡಿದ್ದಾರೆ. ಕಾರು ಮಾಡಿ ಫೈ ಮಾಡಿಕೊಂಡು ಸಾಗಿಸುತ್ತಿದ್ದಾಗ ಅನುಮಾನಗೊಂಡು ಪರಿಶೀಲನೆ ಮಾಡಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಕಾರಿನ ಸೀಟು ಸೇರಿದಂತೆ ವಿವಿಧೆಡೆಯಲ್ಲಿ ಕಂತೆ ಕಂತೆ ಹಣವನ್ನು ಬಚ್ಚಿಟ್ಟು ಕರ್ನಾಟಕದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದಾಗ ಕಾರು ಸಮೇತ ಕದೀಮರು ಸಿಕ್ಕಿಬಿದ್ದಿದ್ದಾರೆ. ಈ ಸಂಬಂಧ ಮೂವರನ್ನು ವಶಕ್ಕೆ ಪಡೆದಿರುವಂತ ಪೊಲೀಸರು, ದೊರೆತ ಕೋಟಿ ಕೋಟಿ ಹಣದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/new-labor-codes-to-be-implemented-across-the-country-from-today-what-are-the-benefits-heres-the-information/ https://kannadanewsnow.com/kannada/breaking-central-government-takes-important-step-for-workers-welfare-new-labour-codes-to-come-into-effect-from-today/
ಬೆಂಗಳೂರು: ನಗರದ ಶಕ್ತಿ ಕೇಂದ್ರ ವಿಧಾನಸೌಧದ ಮುಂದೆಯೇ ನೇಪಾಳಿ ಗ್ಯಾಂಗ್ ಪುಂಡಾಟ ಮೆರೆದಿತ್ತು. ಈ ಸಂಬಂಧ 11 ಆರೋಪಿಗಳನ್ನು ಎಡೆಮುರಿಕಟ್ಟಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ಭಾನುವಾರದಂದು ಬೆಂಗಳೂರಿನ ಹಲವೆಡೆ ತಿರುಗಾಡಿದ್ದಂತ ನೇಪಾಳಿ ಗ್ಯಾಂಗ್, ವಿಧಾನಸೌಧ, ಮೆಟ್ರೋ ನಿಲ್ದಾಣಕ್ಕೂ ಬಂದಿತ್ತು. ಈ ಗ್ಯಾಂಗ್ ಸದಸ್ಯರ ನಡುವೆಯೇ ಗಲಾಟೆಯಾಗಿ, ವಿಧಾನಸೌಧದ ಮುಂದೆಯೇ ಮಾರಾಮಾರಿ ಮಾಡಿಕೊಂಡಿದ್ದರು. ದಿಢೀರ್ ವಿಧಾನಸೌಧದ ಮುಂದೆ ಮಾರಾಮಾರಿಯಿಂದ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದರು. ಗುಂಪು ಚದುರಿಸೋದಕ್ಕೆ ಸ್ಥಳದಲ್ಲಿದ್ದಂತ ಪೊಲೀಸರು ಲಾಠಿ ಬೀಸಿದ್ದರು. ಆ ಬಳಿಕ ನೇಪಾಳಿ ಗ್ಯಾಂಗ್ 11 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಂದಹಾಗೇ ಓರ್ವ ಯುವತಿಯ ವಿಚಾರವಾಗಿ ಈ ಗಲಾಟೆಯಾಗಿದೆ ಎನ್ನಲಾಗುತ್ತಿದೆ. ಜೊತೆಗೆ ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಈ ವಿಧಾನಸೌಧದ ಮುಂದೆಯೇ ಪುಂಡಾಟ ಮೆರಿದ್ದರು. ಈ ಗಲಾಟೆ ಸಂಬಂಧ ದೂರು ದಾಖಲಾದ ಹಿನ್ನಲೆಯಲ್ಲಿ ವಿಚಾರಣೆಯ ಬಳಿಕ ಇದೀಗ 11 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಲಾಗಿದೆ. https://kannadanewsnow.com/kannada/new-labor-codes-to-be-implemented-across-the-country-from-today-what-are-the-benefits-heres-the-information/ https://kannadanewsnow.com/kannada/shivamogga-hosanagar-taluk-bjp-president-mattimane-subrahmanya-passes-away-due-to-heart-attack/ https://kannadanewsnow.com/kannada/breaking-central-government-takes-important-step-for-workers-welfare-new-labour-codes-to-come-into-effect-from-today/














