Author: kannadanewsnow09

ನವದೆಹಲಿ: ಪ್ರವಾಸೋದ್ಯಮವನ್ನು ಉತ್ತೇಜಿಸಲು 15 ಪುರಾತತ್ವ ಸ್ಥಳಗಳನ್ನು ರೋಮಾಂಚಕ, ಅನುಭವ-ಚಾಲಿತ ಸಾಂಸ್ಕೃತಿಕ ತಾಣಗಳಾಗಿ ಅಭಿವೃದ್ಧಿಪಡಿಸುವ ಪ್ರಸ್ತಾಪವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದರು. ಏಪ್ರಿಲ್ 1 ರಿಂದ ನೂತನ ‘IT’ ಕಾಯ್ದೆ ಜಾರಿ : ನಿರ್ಮಲಾ ಸೀತಾರಾಮನ್ | Union Budget 2026 2026 ನೇ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದರು. 9ನೇ ಬಾರಿ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದು ರವಿದಾಸ್ ಅವರ ಜನ್ಮ ದಿನಾಚರಣೆ ಹಾಗೂ ಮಾಘ ಪೂರ್ಣಿಮೆ ದಿನ ಬಜೆಟ್ ಮಂಡಿಸುತ್ತಿದ್ದೇನೆ ಎಂದು ನಿರ್ಮಲ ಸೀತಾರಾಮನ್ ಬಜೆಟ್ ಭಾಷಣದಲ್ಲಿ ತಿಳಿಸಿದರು. ಈ ವೇಳೆ ಏಪ್ರಿಲ್ 1 ರಿಂದ ನೂತನ ಐಟಿ ಕಾಯ್ದೆ ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದರು. ವಿದೇಶಿ ವಿನಿಮಯ ಕಾನೂನು ಪರಿಷ್ಕರಣೆಯ ನಿರ್ಧಾರದಿಂದ ವಿದೇಶಿ ಹೂಡಿಕೆದಾರರಿಗೆ ಅನುಕೂಲವಾಗಲಿದ್ದು ಭಾರತದಲ್ಲಿ ಹೂಡಿಕೆ ಮಾಡಲು ಅನುಕೂಲ ಆಗಲಿದೆ ಇದರಿಂದ ವಿದೇಶಿ ಹೂಡಿಕೆದಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಮಹಿಳಾ ಉದ್ಯಮಿಗಳಿಗೆ ಕೇಂದ್ರ ಸರ್ಕಾರದಿಂದ…

Read More

ನವದೆಹಲಿ: 2026-27ರ ಕೇಂದ್ರ ಬಜೆಟ್‌ನಲ್ಲಿ, ಸಮಗ್ರ ಮತ್ತು ಸಮಗ್ರ ಆರೋಗ್ಯ ಸೇವೆಯನ್ನು ವಿಸ್ತರಿಸುವ ಗುರಿಯನ್ನು ಹೊಂದಿರುವ ಐದು ಪ್ರಾದೇಶಿಕ ವೈದ್ಯಕೀಯ ಕೇಂದ್ರಗಳನ್ನು ಸ್ಥಾಪಿಸುವಲ್ಲಿ ರಾಜ್ಯಗಳಿಗೆ ಬೆಂಬಲ ನೀಡುವ ಹೊಸ ಯೋಜನೆಯ ಮೂಲಕ ಆಯುಷ್ ವಲಯಕ್ಕೆ ಉದ್ದೇಶಿತ ಉತ್ತೇಜನವನ್ನು ಸರ್ಕಾರ ಪ್ರಸ್ತಾಪಿಸಿದೆ ಎಂಬುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಇಂದು ಬಜೆಟ್ ಮಂಡಿಸಿ ಮಾತನಾಡಿದಂತ ವಿತ್ತ ಸಚಿವ ಮೂರು ಹೊಸ ಅಖಿಲ ಭಾರತ ಆಯುರ್ವೇದ ಸಂಸ್ಥೆಯನ್ನು ಸ್ಥಾಪಿಸಲು ಸಹ ಪ್ರಸ್ತಾಪಿಸಿದ್ದಾರೆ. ಈ ಕೇಂದ್ರಗಳು ಆಧುನಿಕ ರೋಗನಿರ್ಣಯ ಮೂಲಸೌಕರ್ಯ ಮತ್ತು ಆರೈಕೆಯ ನಂತರದ ಪುನರ್ವಸತಿ ಸೌಲಭ್ಯಗಳ ಜೊತೆಗೆ ಆಯುಷ್ ಕೇಂದ್ರಗಳನ್ನು ಹೊಂದಿದ್ದು, ಸಮಗ್ರ ರೋಗಿಗಳ ಆರೈಕೆಯನ್ನು ಸಕ್ರಿಯಗೊಳಿಸುತ್ತವೆ. ಈ ಉಪಕ್ರಮವು ವೈದ್ಯಕೀಯ ಮತ್ತು ಸಂಬಂಧಿತ ಆರೋಗ್ಯ ವೃತ್ತಿಪರರಿಗೆ ವೈವಿಧ್ಯಮಯ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ, ಸಾಂಪ್ರದಾಯಿಕ ಔಷಧ ವ್ಯವಸ್ಥೆಗಳನ್ನು ಉತ್ತೇಜಿಸುತ್ತದೆ ಮತ್ತು ಪ್ರಾದೇಶಿಕ ಆರೋಗ್ಯ ಪರಿಸರ ವ್ಯವಸ್ಥೆಗಳನ್ನು ಬಲಪಡಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.

Read More

ಬೆಂಗಳೂರು: ಸಿವಿಲ್ ಮೊಕದ್ದಮೆಗಳು ಬಾಕಿ ಇದ್ದ ಮಾತ್ರಕ್ಕೆ ಗಂಭೀರ ಮತ್ತು ಸಂಜ್ಞೇಯ (ಕಾಗ್ನೈಜಬಲ್) ಅಪರಾಧಗಳ ತನಿಖೆಗೆ ಅಡ್ಡಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಹೈಕೋರ್ಟ್, ಫೋರ್ಜರಿ ಹಾಗೂ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂ. ಮೌಲ್ಯದ ಜಮೀನು ಕಬಳಿಸಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಲು ನಿರಾಕರಿಸಿದೆ. ಬೆಂಗಳೂರಿನ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ವೆಂಕಟ ರಾಮ ನಾಯ್ಡು ಕೋಲ (8ನೇ ಆರೋಪಿ) ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಜಾಗೊಳಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ. ಪ್ರಕರಣದಲ್ಲಿ ಜಮೀನಿನ ನಿಜವಾದ ಮಾಲೀಕರ ಸೋಗಿನಲ್ಲಿ ವಂಚನೆ ಎಸಗಿದವರು ಯಾರು ಎಂಬ ಸತ್ಯ ತಿಳಿಯಲು ತನಿಖೆ ಅತ್ಯಗತ್ಯವಾಗಿದೆ. ಸಿವಿಲ್ ನ್ಯಾಯಾಲಯದಲ್ಲಿ ಬಾಕಿ ಇರುವ ದಾವೆಯು ಅರ್ಜಿದಾರರ ವಿರುದ್ಧದ ತನಿಖೆಯನ್ನು ಅಡ್ಡಿಪಡಿಸುವುದಿಲ್ಲ. ವ್ಯಕ್ತಿಯ ಸೋಗು ಹಾಗೂ ಫೋರ್ಜರಿಯಂಥ ಗಂಭೀರ ಅಪರಾಧಗಳ ತನಿಖೆಗೆ ಸಿವಿಲ್ ದಾವೆಗಳು ಅಡ್ಡಿಯಾಗುವುದಿಲ್ಲ ಎಂದು ತಿಳಿಸಿ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್, ತನಿಖಾ ಸಂಸ್ಥೆಯು…

Read More

ಬೆಂಗಳೂರು: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ಬೇಡಿಕೆಗೆ ಅನುಗುಣವಾಗಿ ರಸಗೊಪ್ಪರ ಪೂರೈಕೆ ಮಾಡುವುದಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಸದಸ್ಯರೊಬ್ಬರ ಪ್ರಶ್ನೆಗೆ ಉತ್ತರಿಸಿದಂತ ಅವರು, ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ. 2025ರ ಮೇ, ಆಗಸ್ಟ್ ತಿಂಗಳಲ್ಲಿ ಸ್ವಲ್ಪ ಕೊರತೆಯಾಗಿತ್ತು. 2025-26ನೇ ಸಾಲಿನ ಹಿಂಗಾರು / ಬೇಸಿಗೆ ಹಂಗಾಮಿಗೆ 18.21 ಲಕ್ಷ ಮೆಟ್ರಿಕ್ ಟನ್ ವಿವಿಧ ಶ್ರೇಣಿಯ ರಸಗೊಬ್ಬರಗಳ ಬೇಡಿಕೆಯಿರುತ್ತದೆ ಎಂದರು. ಅಕ್ಟೋಬರ್ 2025 ರಿಂದ ಜನವರಿ 2026ರ ವರೆಗೆ 12.46 ಲಕ್ಷ ಮೆಟ್ರಿಕ್ ಟನ್ ಬೇಡಿಕೆಯಿದ್ದು, 2026ರ ಜನವರಿ 27ರ ವರೆಗೆ 21.89 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರಗಳು ಸರಬರಾಜಾಗಿರುತ್ತದೆ. ಇದರಲ್ಲಿ 11.71 ಲಕ್ಷ ಮೆಟ್ರಿಕ್ ಟನ್ ಮಾರಾಟವಾಗಿ, 10.18 ಲಕ್ಷ ಮೆಟ್ರಿಕ್ ಟನ್ ದಾಸ್ತಾನಿನಲ್ಲಿರುತ್ತದೆ. ರಾಜ್ಯದ ಬೇಡಿಕೆಗನುಗುಣವಾಗಿ ಕೇಂದ್ರ ಸರ್ಕಾರದಿಂದ ರಸಗೊಬ್ಬರ ಸರಬರಾಜಾಗುತ್ತಿದೆ ಎಂದು ಅವರು ಹೇಳಿದರು. https://twitter.com/KarnatakaVarthe/status/2017560511576219932

Read More

ಬೆಂಗಳೂರು: ದೇಶೀಯ ಖಾದಿ ಉತ್ಪನ್ನಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಪ್ರತಿ ತಿಂಗಳ ಮೊದಲ ಶನಿವಾರದಂದು ಕಡ್ಡಾಯವಾಗಿ ಖಾದಿ ಬಟ್ಟೆಗಳನ್ನು ಧರಿಸಿ ಕರ್ತವ್ಯಕ್ಕೆ ಹಾಜರಾಗಬೇಕೆಂದು ಆದೇಶ ಹೊರಡಿಸಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದ್ದು, ಏಪ್ರಿಲ್ 24ರಿಂದ ಈ ನಿಯಮ ಜಾರಿಗೆ ಬರಲಿದೆ. ಸರ್ಕಾರಿ ಇಲಾಖೆಗಳು ಮಾತ್ರವಲ್ಲದೆ, ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿಗಳು, ಪ್ರಾಧಿಕಾರಗಳು, ವಿಶ್ವವಿದ್ಯಾಲಯಗಳು ಮತ್ತು ಅನುದಾನಿತ ಸಂಸ್ಥೆಗಳ ನೌಕರರಿಗೂ ಈ ನಿಯಮ ಅನ್ವಯವಾಗಲಿದೆ. ಪ್ರಮುಖ ಅಂಶಗಳು: • ವಸ್ತ್ರ ಸಂಹಿತೆ: ಪುರುಷ ನೌಕರರು ಖಾದಿ ಶರ್ಟ್, ಪ್ಯಾಂಟ್ ಅಥವಾ ಓವರ್ ಕೋಟ್ ಧರಿಸಬಹುದು. ಮಹಿಳಾ ನೌಕರರು ಖಾದಿ ಅಥವಾ ಖಾದಿ ರೇಷ್ಮೆ ಸೀರೆ, ಚೂಡಿದಾರ್ ಧರಿಸಲು ಸೂಚಿಸಲಾಗಿದೆ. • ರಿಯಾಯಿತಿ: ನೌಕರರಿಗೆ ಪ್ರೋತ್ಸಾಹ ನೀಡುವ ಸಲುವಾಗಿ, ಖಾದಿ ಗ್ರಾಮೋದ್ಯೋಗ ಮಂಡಳಿಯ ಮಳಿಗೆಗಳಲ್ಲಿ ಅವರು ಖರೀದಿಸುವ ಬಟ್ಟೆಗಳಿಗೆ ಹಾಲಿ ಇರುವ…

Read More

ಬೆಂಗಳೂರು: ರಾಜ್ಯಾಧ್ಯಂತ ಸರ್ಕಾರಿ ಕಚೇರಿ, ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಯ ನೀರಿನ ಬಳಕೆ ಕಟ್ಟು ನಿಟ್ಟಾಗಿ ನಿಷೇಧಿಸಿ ಸರ್ಕಾರ ಮತ್ತೊಮ್ಮೆ ಆದೇಶ ಹೊರಡಿಸಿದೆ. ಈ ಹಿಂದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದಿನಾಂಕ 28-10-2025ರಂದು ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಯ ನೀರು ಬಳಕೆ ನಿಷೇಧಿಸಿ, ನಂದಿನಿ ತಿನಿಸುಗಳನ್ನು ಬಳಕೆ ಮಾಡುವಂತೆ ಟಿಪ್ಪಣಿ ಹೊರಡಿಸಿದ್ದರು. ಹೀಗಿದ್ದರೂ ಈ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿರಲಿಲ್ಲ. ಈ ಎಲ್ಲಾ ಕಾರಣದಿಂದಾಗಿ ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿರಾಜ್ಯಾದ್ಯಂತ ಸರ್ಕಾರಿ ಕಛೇರಿಗಳಲ್ಲಿ ಪರಿಸರ ಸ್ನೇಹಿ ಕ್ರಮಗಳನ್ನು ಅಳವಡಿಸಿಕೊಳ್ಳುವ ದೃಷ್ಟಿಯಿಂದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಸುವಂತೆ ಹಾಗೂ ಕರ್ನಾಟಕ ಸರ್ಕಾರದ ಎಲ್ಲಾ ಕಾರ್ಯಕ್ರಮ / ಕಚೇರಿಗಳ ಸಭೆಗಳಲ್ಲಿ ಕರ್ನಾಟಕ ಮಿಲ್‌, ಫೆಡರೇಶನ್ (KMF) ನ ‘ನಂದಿನಿ’ ತಿನಿಸುಗಳನ್ನು…

Read More

ಬೆಂಗಳೂರು: 2026ನೇ ಸಾಲಿನ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನಕ್ಕೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದ ಅಧಿಕಾರಿ/ನೌಕರರಿಗೆ “ಸರ್ವೋತ್ತಮ ಸೇವಾ ಪ್ರಶಸ್ತಿ ನೀಡುವ ಯೋಜನೆಯನ್ನು 2012 ರಿಂದ ಜಾರಿಗೆ ತರಲಾಗಿದೆ. ಪ್ರಸ್ತುತ 2026 ನೇ ಸಾಲಿನಲ್ಲಿ ರಾಜ್ಯ ಮಟ್ಟ ಹಾಗೂ ಜಿಲ್ಲಾ ಮಟ್ಟದ “ಸರ್ವೋತ್ತಮ ಸೇವಾ ಪ್ರಶಸ್ತಿ” ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿ/ನೌಕರರು ತಮ್ಮ ನಾಮನಿರ್ದೇಶನಗಳನ್ನು ಆನ್ ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. “ಸರ್ವೋತ್ತಮ ಸೇವಾ ಪ್ರಶಸ್ತಿ”ಯ ಎರಡು ಹಂತದ ಪ್ರಶಸ್ತಿಗಳಿಗೂ ಅರ್ಜಿ ಸಲ್ಲಿಸಬಯಸುವವರು, ಪ್ರತಿ ಹಂತಕ್ಕೂ ಪ್ರತ್ಯೇಕವಾಗಿ ತಮ್ಮ ನಾಮ ನಿರ್ದೇಶನವನ್ನು ಸಲ್ಲಿಸತಕ್ಕದ್ದು. ನಾಮನಿರ್ದೇಶನವನ್ನು ಸಲ್ಲಿಸಬಯಸುವವರು ಜಾಲತಾಣ https://dparar.karnataka.gov.in/ ಅಥವಾ https://sarvothamaawards.karnataka.gov.in ದ ಮೂಲಕ ದಿನಾಂಕ: 03-02-2026 ರಿಂದ 25-02-2026 ರೊಳಗಾಗಿ ಸಲ್ಲಿಸುವುದು. ಉಲ್ಲೇಖಿತ ಆದೇಶದ ಪ್ರತಿಗಳನ್ನು ಜಾಲತಾಣ https://dparar.karnataka.gov.in/ ರ ಸರ್ಕಾರದ ಆದೇಶಗಳು-ತರಬೇತಿ ಇಲ್ಲಿ ಅವಲೋಕಿಸಬಹುದಾಗಿದೆ. ರಾಜ್ಯ / ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯ ನಾಮನಿರ್ದೇಶನವನ್ನು ಕನ್ನಡ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಎಲ್ಲಾ ಬಿ-ಖಾತಾಗಳಿಗೆ ಎ-ಖಾತಾ ಭಾಗ್ಯ ಕರುಣಿಸುವಂತ ನಿರ್ಧಾರವನ್ನು ಕೈಗೊಂಡಿದೆ. ಆ ಮೂಲಕ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ ನೀಡಲಾಗಿತ್ತು. ಹಾಗಾದ್ರೇ ಬಿ-ಖಾತಾ ಹೊಂದಿರುವ ಆಸ್ತಿಗಳಿಗೆ ಎ-ಖಾತಾ ಭಾಗ್ಯದ ಬಗ್ಗೆ ಜನರು ತಿಳಿಯಲೇಬೇಕಾದಂತ ವಿಚಾರಗಳೇನು ಅಂತ ಮುಂದೆ ಓದಿ.. ಜೊತೆಗೆ ವೀಡಿಯೋದಲ್ಲಿ ವಿವರವಾದ ಮಾಹಿತಿ ಇದೆ ನೋಡಿ. ನಿಮ್ಮ ಪ್ರಾಪರ್ಟಿ ಇನ್ನೂ ಬಿ-ಖಾತಾದಲ್ಲಿದೆ ಎಂಬ ಆತಂಕ ಕಾಡುತ್ತಿದೆಯೇ? ಚಿಂತೆ ಬಿಡಿ, ಕಷ್ಟಪಟ್ಟು ದುಡಿದು ಗಳಿಸಿದ ಆಸ್ತಿಗೆ ಸಂಬಂಧಿಸಿದ ಆತಂಕಗಳನ್ನು ಹೋಗಲಾಡಿಸಲು ರಾಜ್ಯ ಸರ್ಕಾರ ಹೊಸ ಆದೇಶವನ್ನು ಹೊರಡಿಸಿದ್ದು, ಸೂಕ್ತ ದಾಖಲೆಗಳನ್ನು ಹೊಂದಿದ್ದರೆ ಬಿ-ಖಾತಾವನ್ನು ಎ-ಖಾತಾಗೆ ಪರಿವರ್ತಿಸಿಕೊಳ್ಳಬಹುದಾಗಿದೆ. ಬಿ-ಖಾತಾದಿಂದ ಎ-ಖಾತಾ ಪಡೆಯಲು ಇವುಗಳು ಕಡ್ಡಾಯ ಬಿ-ಖಾತಾದಿಂದ ಎ-ಖಾತಾ ಪಡೆಯಲು ಸಾರ್ವಜನಿಕ ರಸ್ತೆ ಸಂಪರ್ಕ ಕಡ್ಡಾಯಲಾಗಿದೆ. ನಿವೇಶನ, ಮನೆಯಿರುವ ಜಾಗಕ್ಕೆ ಸಾರ್ವಜನಿಕ ರಸ್ತೆಯಿರಬೇಕು. ಒಂದು ವೇಳೆ ಓಡಾಡುವ ರಸ್ತೆ ಖಾಸಗಿಯಾಗಿದ್ದರೇ, ಅದನ್ನು ಮೊದಲು ಸಾರ್ವಜನಿಕ ರಸ್ತೆಯಂದು ಘೋಷಿಸಿಕೊಳ್ಳಬೇಕಾಗಿದೆ. ಎ-ಖಾತಾ ಪಡೆಯಲು ಭೂಪರಿವರ್ತನೆ ಅತ್ಯಗತ್ಯವಾಗಿದೆ. ಕರ್ನಾಟಕ ಭೂಕಂದಾಯ ಕಾಯ್ದೆ 1964ರ ಕಲಂ 95ರ…

Read More

ಬೆಂಗಳೂರು: ಅಂತರ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಕೆ ಎಸ್ ಆರ್ ಟಿ ಸಿ ನೌಕರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಮತ್ತೆ ಅಂತರ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಿಸಲಾಗಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದರ್ಜ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2026ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ದಿನಾಂಕ 01-01-2026ರ ಬೆಳಗ್ಗೆ 11 ಗಂಟೆಯಿಂದ ಪ್ರಾರಂಭವಾಗಿದೆ ಎಂದಿದೆ. ದಿನಾಂಕ 31-01-2026ರ ಸಂಜೆ 5.30ರವರೆಗೆ ಅಂತರ ನಿಗಮ ವರ್ಗಾವಣೆಗೆ ಅವಕಾಶ ನೀಡಲಾಗಿತ್ತು. ಆದರೇ ಅನೇಕರು ವರ್ಗಾವಣೆ ದಿನಾಂಕ ವಿಸ್ತರಣೆಗೆ ಕೋರಿದ್ದರ ಹಿನ್ನಲೆಯಲ್ಲಿ ಅಂತರ ನಿಗಮ ಸಾಮಾನ್ಯ ಮತ್ತು ಪರಸ್ಪರ ವರ್ಗಾವಣೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 28-02-2026ರ ಸಂಜೆ 5.30ರವರೆಗೆ ಅವಧಿಯನ್ನು ವಿಸ್ತರಿಸಿರುವುದಾಗಿ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಮೆಟ್ರೋ ರೈಲುಗಳಲ್ಲಿ ಪ್ರಯಾಣಿಕರ ಜವಾಬ್ದಾರಿಯುತ ವರ್ತನೆ ಹಾಗೂ ಪ್ರಯಾಣದಲ್ಲಿ ಪಾಲಿಸಬೇಕಾದ ನಿಯಮಗಳನ್ನು ಬಲಪಡಿಸುವ ಉದ್ದೇಶದಿಂದ ವಿಶೇಷ ಜಾಗೃತಿ ಅಭಿಯಾನವನ್ನು ಕೈಗೊಂಡಿದೆ. ಮೆಟ್ರೋ ರೈಲುಗಳು ಸಾರ್ವಜನಿಕರ ಸಂಚಾರಕ್ಕಿದ್ದು, ಸುರಕ್ಷಿತ, ಆರಾಮದಾಯಕ ಮತ್ತು ಸುಖಕರ ಪ್ರಯಾಣಕ್ಕಾಗಿ ಎಲ್ಲಾ ಪ್ರಯಾಣಿಕರ ಸಹಭಾಗಿತ್ವ ಅಗತ್ಯವಿದೆ. ಮೆಟ್ರೋ ರೈಲುಗಳಲ್ಲಿ ಹೆಡ್ ಫೋನ್ ಇಲ್ಲದೆ ಸಂಗೀತ ಕೇಳುವುದು, ಆಹಾರ ಸೇವಿಸುವುದು ಅಥವಾ ತಂಬಾಕು ಸೇವನೆ ಮಾಡುವುದು ಸಹ ಪ್ರಯಾಣಿಕರಿಗೆ ತೊಂದರೆಯನ್ನು ಉಂಟುಮಾಡುತ್ತದೆ. ಅದೇ ರೀತಿ, ಹಿರಿಯ ನಾಗರಿಕರಿಗೆ, ಗರ್ಭಿಣಿ ಮಹಿಳೆಯರಿಗೆ, ಅಂಗವಿಕಲರಿಗೆ ಮತ್ತು ಅಗತ್ಯವಿರುವವರಿಗೆ ಮೀಸಲು ಆಸನಗಳನ್ನು ಬಿಟ್ಟುಕೊಡುವುದು ಎಲ್ಲರ ಕರ್ತವ್ಯವಾಗಿದೆ. ಈ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು, ಬಿಎಂಆರ್‌ಸಿಎಲ್ ವಿಶೇಷ ಜಾಗೃತಿ ಅಭಿಯಾನವನ್ನು, ಇಬ್ಬರು ಗೃಹ ರಕ್ಷಕರನ್ನೊಳಗೊಂಡ (ಹೋಮ್ ಗಾರ್ಡ್‌ಗಳು) ವಿಶೇಷ ತಂಡಗಳನ್ನು ಮೆಟ್ರೋ ರೈಲುಗಳಲ್ಲಿ ನಿಯೋಜಿಸಿ, ಪ್ರಯಾಣಿಕರಿಗೆ ತಿಳುವಳಿಕೆ ನೀಡುವ ಹಾಗೂ ಜಾಗೃತಿ ಮೂಡಿಸುವ ಕಾರ್ಯ ನಡೆಸಲಾಗಿದೆ. ಒಂದು ವರ್ಷದ ಈ ಅಭಿಯಾನದ ವಿಶ್ಲೇಷಣೆಯಲ್ಲಿ ಕೆಳಕಂಡ ಅಂಶಗಳು ಕಂಡುಬಂದಿವೆ: 57,538 ಪ್ರಯಾಣಿಕರು,…

Read More