Subscribe to Updates
Get the latest creative news from FooBar about art, design and business.
Author: kannadanewsnow09
ಜಮ್ಮು ಮತ್ತು ಕಾಶ್ಮೀರ: ಇಲ್ಲಿನ ಕಿಶ್ತ್ವಾರ್ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಉನ್ನತ ಕಮಾಂಡರ್ ಸೈಫುಲ್ಲಾ ಬಲೂಚ್ ಕಾರ್ಯಾಚರಣೆಯ ಸಮಯದಲ್ಲಿ ಸಿಕ್ಕಿಬಿದ್ದಿದ್ದರು, ಆದರೆ ಅವರು ಕೊಲ್ಲಲ್ಪಟ್ಟವರಲ್ಲಿ ಇದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇಬ್ಬರು ಭಯೋತ್ಪಾದಕರು ಅಲೆಮಾರಿ ಗುಡಿಸಲಿನಲ್ಲಿ ಅಡಗಿಕೊಂಡಿದ್ದರು, ಎನ್ಕೌಂಟರ್ ಸಮಯದಲ್ಲಿ ಅದು ಬೆಂಕಿಗೆ ಆಹುತಿಯಾಯಿತು. ಅವರ ಸುಟ್ಟ ಶವಗಳನ್ನು ನಂತರ ವಶಪಡಿಸಿಕೊಳ್ಳಲಾಯಿತು. ಗುರುತಿನ ಪ್ರಕ್ರಿಯೆಯು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಎರಡರಿಂದ ಮೂರು ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಪಡೆಗಳು ಚತ್ರೂ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಗುಂಡಿನ ಚಕಮಕಿ ಪ್ರಾರಂಭವಾಯಿತು. ಈ ಕಾರ್ಯಾಚರಣೆಯನ್ನು ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು (SOG) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ನಡೆಸುತ್ತಿವೆ. ಹೆಚ್ಚುವರಿ ಪಡೆಗಳನ್ನು ಪ್ರದೇಶಕ್ಕೆ ರವಾನಿಸಲಾಗಿದೆ. ಇಂದು ಬೆಳಿಗ್ಗೆ ಅಡಗಿರುವ ಭಯೋತ್ಪಾದಕರೊಂದಿಗೆ ಸಂಪರ್ಕ ಸಾಧಿಸುವಲ್ಲಿ ಭದ್ರತಾ ಪಡೆಗಳು…
ವಿಜಯಪುರ: ರಾಜ್ಯದ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರ ತಾಯಿ ಗಂಗಾಬಾಯಿ ಸಿದ್ದರಾಮಪ್ಪ ಪಾಟೀಲ್(84) ಅವರು ವಯೋಸಹಜವಾಗಿ ಇಂದು ನಿಧನರಾಗಿದ್ದಾರೆ. ಮೃತ ಗಂಗಾಬಾಯಿ ಸಿದ್ದರಾಮಪ್ಪ ಪಾಟೀಲ್ ಅವರು ಮಕ್ಕಳಾದ ಮಹಾದೇವಿ ಪಾಟೀಲ, ಶಿವಶರಣಗೌಡ ಪಾಟೀಲ್, ಶಿವಾನಂದ ಪಾಟೀಲ್ ಹಾಗೂ ವಿಜುಗೌಡ ಪಾಟೀಲ್ ಸೇರಿದಂತೆ ಮೊಮ್ಮಕ್ಕಳು, ಅವರ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ. ಮೃತ ಸಚಿವ ಶಿವಾನಂದ ಪಾಟೀಲ್ ಅವರ ತಾಯಿ ಗಂಗಾಬಾಯಿ ಅವರನ್ನು ಇಂದು ಸಂಜೆ 4.30ರ ವೇಳೆಗೆ ವಿಜಯಪುರದ ಜಮಖಂಡಿ ರಸ್ತೆಯಲ್ಲಿರುವಂತ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. https://kannadanewsnow.com/kannada/fire-breaks-out-at-perfume-godown-in-bengaluru-flames-spread-to-upper-floors/ https://kannadanewsnow.com/kannada/another-major-fire-accident-in-bengaluru-three-workers-injured-in-a-fire-at-a-perfume-warehouse/
ಬೆಂಗಳೂರು: ಉತ್ತರ ಜಿಲ್ಲೆಯ ನೆಲಮಂಗಲ ಬಳಿಯಲ್ಲಿ ಪರ್ಪ್ಯೂಮ್ ಗೋದಾಮಿಗೆ ಬೆಂಕಿ ಬಿದ್ದು, ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಜ್ವಾಲೆಯು ಧಗಧಗಿಸಿ ಹೊತ್ತಿ ಉರಿಯುತ್ತಿರುವುದು ಕಂಡು ಬಂದಿದೆ. ಬೆಂಗಳೂರಿನ ನೆಲಮಂಗಲ ರಸ್ತೆಯ ಮಾಕಳಿ ಬಳಿಯಲ್ಲಿನ ಪರ್ಪ್ಯೂಮ್ ಗೋದಾಮು ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ ವ್ಯಾಪಿಸಿದ್ದು, ಭಯಾನಕ ಶಬ್ದ ಕೂಡ ಕೇಳಿ ಬರುತ್ತಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದ್ದು, ಅಗ್ನಿಯನ್ನು ಹತೋಟಿಗೆ ತರೋದಕ್ಕೆ ಹರಸಾಹಸ ಪಡುತ್ತಿದ್ದಾರೆ. ಅಗ್ನಿ ಅವಘಡದ ವೇಳೆಯಲ್ಲಿ 40ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಅವರೆಲ್ಲರೂ ಬೆಂಕಿ ಅವಘಡದ ವೇಳೆಯಲ್ಲಿ ಅಲ್ಲಿಂದ ಓಡಿ ಪಾರಾಗಿದ್ದಾರೆ. ಆದರೇ ಮೂವರು ಕಾರ್ಮಿಕರಿಗೆ ಸುಟ್ಟ ಗಾಯವಾಗಿದ್ದು, ಅವರನ್ನು ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. https://kannadanewsnow.com/kannada/a-private-medical-college-student-commits-suicide-by-giving-a-harmful-injection/ https://kannadanewsnow.com/kannada/another-major-fire-accident-in-bengaluru-three-workers-injured-in-a-fire-at-a-perfume-warehouse/
ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಮಾಕಲಿ ಬಳಿಯಲ್ಲಿನ ಪರ್ಪ್ಯೂಂ ಗೋದಾಮಿಗೆ ಬೆಂಕಿ ಬಿದ್ದು ಈ ಅಪಘಡ ಸಂಭವಿಸಿದ್ದು, ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ. ಬೆಂಗಳೂರಿನ ಮಾಕಳಿಯಲ್ಲಿರುವಂತ ಸುಗಂಧ ದ್ರವ್ಯ ಕಾರ್ಖಾನೆಯ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ಮೂವರು ಕಾರ್ಮಿಕರಿಗೆ ಸುಟ್ಟ ಗಾಯವಾಗಿದ್ದು ಅವರಿಗೆ ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ಸೆಕ್ಷನ್ ನಲ್ಲಿ ಚಿಕತ್ಸೆ ಕೊಡಿಸಲಾಗುತ್ತಿದೆ. https://kannadanewsnow.com/kannada/past-present-and-future-the-top-leaders-of-the-jds-party-will-be-from-the-gowda-family-cm-siddaramaiah-predicts/ https://kannadanewsnow.com/kannada/a-private-medical-college-student-commits-suicide-by-giving-a-harmful-injection/
ದಾವಣಗೆರೆ: ಜಿಲ್ಲೆಯಲ್ಲಿ ಹಾನಿಕಾರಕ ಇಂಜೆಕ್ಷನ್ ಚುಚ್ಚಿಕೊಂಡು ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ದಾವಣಗೆರೆಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿ ಸಿದ್ಧಾರ್ಥ್ ತ್ರಯಂಬಕೆ(30) ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಖಾಸಗಿ ವೈದ್ಯಕೀಯ ಕಾಲೇಜಿನ ಇಂಟರ್ ನ್ಯಾಷನಲ್ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದೆ. ಹಾನಿಕಾರಕ ಇಂಜೆಕ್ಷನ್ ಹಾಕಿಕೊಂಡು ಸಿದ್ಧಾರ್ಥ್ ತ್ರಯಂಬಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾರಾಷ್ಟ್ರದ ಸತಾರ್ ಜಿಲ್ಲೆಯ ಕರಾಡ್ ನಿವಾಸಿಯಾಗಿರುವಂತ ಸಿದ್ಧಾರ್ಥ್ ತ್ರಯಂಬಕೆ. ಡರ್ಮಾಟಾಲಜಿ ವಿಭಾಗದಲ್ಲಿ ವೈದ್ಯಕೀಯ ವ್ಯಾಸಂಗವನ್ನು ಸಿದ್ಧಾರ್ಥ್ ಮಾಡುತ್ತಿದ್ದರು. ನಿನ್ನೆ ಮಧ್ಯಾಹ್ನದಿಂದ ರೂಮ್ ಲಾಕ್ ಆಗಿದ್ದ ಹಿನ್ನಲೆಯಲ್ಲಿ ಅನುಮಾನಗೊಂಡು ಬಾಗಿಲು ಹೊಡೆದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ದಾವಣಗೆರೆ ನಗರ ಬಡಾವಣೆಯ ಪೊಲೀಸರು ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/past-present-and-future-the-top-leaders-of-the-jds-party-will-be-from-the-gowda-family-cm-siddaramaiah-predicts/ https://kannadanewsnow.com/kannada/do-you-know-what-dcm-d-k-shivakumar-said-about-his-repeated-trips-to-delhi/
ಬೆಂಗಳೂರು : “ನಾನು ದೆಹಲಿಗೆ ಹೋಗುವುದು ಬರುವುದು ಇದ್ದೇ ಇರುತ್ತದೆ. ನಾನು ಹೋಗದೆ ಮತ್ಯಾರು ಹೋಗುತ್ತಾರೆ? ಅವರು ಯಾವಾಗ ಕರೆಯುತ್ತಾರೋ ಆಗೆಲ್ಲಾ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಭಾನುವಾರ ಮಾತನಾಡಿಸಿ, ‘ಮುಂದಿನ ವಾರ ದೆಹಲಿಗೆ ಹೋಗುತ್ತೀರಾ’ ಎಂದು ಕೇಳಿದಾಗ ಶಿವಕುಮಾರ್ ಅವರು ಈ ರೀತಿ ಪ್ರತಿಕ್ರಿಯಿಸಿದರು. ಅಸ್ಸಾಂಗೆ ತೆರಳಿದ್ದಾಗ ಪ್ರಿಯಾಂಕ ಗಾಂಧಿ ಅವರ ಜೊತೆ ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ಮಾಡಿದಿರಾ ಎಂದು ಕೇಳಿದಾಗ, “ನಾನು ರಾಜ್ಯ ರಾಜಕೀಯದ ಬಗ್ಗೆ ಹಂಗೆಲ್ಲ, ಎಲ್ಲೆಂದರಲ್ಲಿ ಚರ್ಚೆ ಮಾಡುವುದಿಲ್ಲ. ಅದು ಸಾರ್ವಜನಿಕವಾಗಿ ಚರ್ಚಿಸುವ ವಿಚಾರವೂ ಅಲ್ಲ” ಎಂದರು. ದೇಶದ ಹಿತಕ್ಕಾಗಿ ರಾಹುಲ್ ಗಾಂಧಿ ಧ್ವನಿ ರಾಹುಲ್ ಗಾಂಧಿ ಅವರು ಅಮೆರಿಕ ವಿಧಿಸಿರುವ ತೆರಿಗೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಟೀಕೆ ಮಾಡಿರುವ ಬಗ್ಗೆ ಕೇಳಿದಾಗ, “ರಾಹುಲ್ ಗಾಂಧಿ ಅವರು ದೇಶದ ಹಿತಕ್ಕಾಗಿ ಏನು ಬೇಕೋ ಅದನ್ನು ಮಾಡುತ್ತಾರೆ, ಮಾತಾಡುತ್ತಾರೆ. ಅಮೆರಿಕದ ಜತೆಗಿನ ತೆರಿಗೆ…
ಬೆಂಗಳೂರು: ಕುಮಾರಸ್ವಾಮಿಯವರು ಮತ್ತು ಅವರ ಪೂಜ್ಯ ತಂದೆಯವರಾದ ಹೆಚ್.ಡಿ.ದೇವೇಗೌಡರು ಖಂಡಿತಾ ಜಾತಿವಾದಿಗಳಲ್ಲ, ಅವರು ಸ್ವಜಾತಿ ವಿರೋಧಿಗಳು. ಅದಕ್ಕಿಂತಲೂ ಮುಖ್ಯವಾಗ ಕುಟುಂಬವಾದಿಗಳು. ಇವರಿಗೆ ತಮ್ಮ ಜಾತಿ ಒಂದು ಓಟ್ ಬ್ಯಾಂಕ್ ಅಷ್ಟೆ. ತಂದೆ ಮತ್ತು ಮಕ್ಕಳು ತಮ್ಮ ಕುಟುಂಬದ ಸ್ವಾರ್ಥಕ್ಕಾಗಿ ರಾಜಕೀಯ ಕ್ಷೇತ್ರದಲ್ಲಿ ಉಳಿದವರನ್ನು ಬಿಟ್ಟುಬಿಡಿ, ಸ್ವಜಾತಿ ನಾಯಕರು ಕೂಡಾ ಬೆಳೆಯದಂತೆ ಒಬ್ಬೊಬ್ಬರನ್ನೇ ಮುಗಿಸುತ್ತಾ ಬಂದವರು. “ಹಿಂದೆ, ಇಂದು ಮತ್ತು ಮುಂದೆ ಜಾತ್ಯತೀತ ಜನತಾದಳದ ತುತ್ತತುದಿಯ ನಾಯಕರು ಗೌಡರ ಕುಟುಂಬದವರೇ ಆಗಿರುತ್ತಾರೆ” ಎನ್ನುವುದು ಸತ್ಯ ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಭವಿಷ್ಯ ನುಡಿದಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಸಿಎಂ ಸಿದ್ಧರಾಮಯ್ಯನವರು, ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ. ನೀರು ನಿಂತಲ್ಲಿಯೇ ನಿಂತು ಮಡುಗಟ್ಟಿಹೋದರೆ ಕೆಸರಾಗುತ್ತದೆ, ಹರಿಯುತ್ತಿದ್ದರೆ ಅದು ತಿಳಿಯಾಗುತ್ತಾ ಹೋಗುತ್ತದೆ. ಸಾಮಾಜಿಕ ವ್ಯವಸ್ಥೆ ಕೂಡಾ ಹಾಗೆಯೇ ಪಟ್ಟಭದ್ರವಾಗಿ ಉಳಿಯದೆ ಚಲನಶೀಲತೆ ಪಡೆದುಕೊಂಡರೆ ಅದು ಜನಪರವಾಗಿ ಪರಿವರ್ತನೆಯಾಗುತ್ತದೆ. ಈ ದೃಷ್ಟಿಯಿಂದ…
ಮೈಸೂರು: ನಟೇಶ್ ರವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ಕ್ಷಮೆ ಕೋರಿರುವುದಿಲ್ಲ, ಕೇವಲ ಈ ಸಂದರ್ಭದಲ್ಲಿ ಶ್ರೀಮತಿ ಶಾಲಿನಿ ರಜನೀಶ್ ಹೆಸರನ್ನು ಉಲ್ಲೇಖ ಮಾಡಿದ ಬಗ್ಗೆ ಕ್ಷಮೆ ಕೇಳಿದ್ದೇನೆ ಎಂಬುದಾಗಿ ಸಾಮಾಜಿಕ ಕಾರ್ಯಕರ್ತ, ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಪೋಸ್ಟ್ ಮಾಡಿರುವಂತ ಅವರು, ನಟೇಶ್ ರವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ಕ್ಷಮೆ ಕೋರಿರುವುದಿಲ್ಲ, ಕೇವಲ ಈ ಸಂದರ್ಭದಲ್ಲಿ ಶ್ರೀಮತಿ ಶಾಲಿನಿ ರಜನೀಶ್ ಹೆಸರನ್ನು ಉಲ್ಲೇಖ ಮಾಡಿದ ಬಗ್ಗೆ ಕ್ಷಮೆ ಕೇಳಿದ್ದೇನೆ, ಏಕೆಂದರೆ ನಾನು ಆರೋಪ ಮಾಡಿರುವ ಎಲ್ಲಾ ವಿಚಾರವನ್ನು ಒಪ್ಪಿಕೊಂಡು, ಅದಕ್ಕೆ ಪೂರಕವಾಗಿ ಎಲ್ಲಾ ಮಾಹಿತಿ, ಸಾಕ್ಷ್ಯಾಧಾರಗಳನ್ನು ನೀಡಿದ ವಿನೋದ್ ಈ ಒಂದು ವಿಚಾರದಲ್ಲಿ ಉಲ್ಟಾ ಹೊಡೆದಿದ್ದಾನೆ ಎಂದಿದ್ದಾರೆ. ನಟೇಶ್ ರವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಪ್ರಭಾವಿಗೆ ಲಂಚ ಕೊಟ್ಟಿರುವುದು ನಿಜ ಎಂದು ಒಪ್ಪಿಕೊಂಡಿದ್ದಾನೆ, ಅದಕ್ಕೆ ಪೂರಕವಾಗಿ ಕೆಲವು ಸಾಕ್ಷ್ಯಾಧಾರಗಳನ್ನು…
ಬೆಂಗಳೂರು: ಗುತ್ತಿಗೆದಾರನಿಂದ 5 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಂತ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ. ಹೀಗಾಗಿ ಮಾರ್ಚ್.2ರವರೆಗೆ ಬಿಜೆಪಿ ಶಾಸಕ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ನಿನ್ನೆ ಗದಗದ ಬಾಲಾಜಿ ಆಸ್ಪತ್ರೆಯಲ್ಲಿ ಗುತ್ತಿಗೆದಾರನಿಂದ 5 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬಿಜೆಪಿ ಶಾಸಕ ಚಂದ್ರು ಲಮಾಣಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಹಣ ಸಹಿತ ರೆಡ್ ಹ್ಯಾಂಡ್ ಬಿಜೆಪಿ ಶಾಸಕ ಚಂದ್ರು ಲಮಾಣಿ ಹಾಗೂ ಇಬ್ಬರು ಪಿಎಗಳು ಬಲಗೆ ಬಿದ್ದಿದ್ದರು. ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಲೋಕಾಯುಕ್ತ ಪೊಲೀಸರು ಹಾಜರುಪಡಿಸಿದ್ದರು. ಇಂತಹ ಅವರಿಗೆ ಮಾರ್ಚ್.2ರವರೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಹೀಗಾಗಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರು ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.
ಬೆಂಗಳೂರು : ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಯವರು ಲಂಚದ ಆರೋಪದ ಮೇಲೆ ಲೋಕಾಯುಕ್ತರ ಬಳಿ ಸಿಲುಕಿರುವ ಬಗ್ಗೆ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡುತ್ತಾ, ಬಿಜೆಪಿಯವರು ಬೇರೆ ಪಕ್ಷದವರ ಮೇಲೆ ಲಂಚದ ಆರೋಪವನ್ನು ಸುಲಭವಾಗಿ ಮಾಡುತ್ತಿದ್ದರು. ಆದರೆ ಈಗ ಬಿಜೆಪಿ ಶಾಸಕರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ. ಲೋಕಾಯುಕ್ತರ ತನಿಖೆ ನಡೆಯಲಿ ಎಂದು ತಿಳಿಸಿದರು. https://kannadanewsnow.com/kannada/cm-siddaramaiahs-good-news-for-the-states-theater-teachers/














