Subscribe to Updates
Get the latest creative news from FooBar about art, design and business.
Author: kannadanewsnow09
ಕನಕಪುರ : “ಬೆಂಗಳೂರು ಮಾದರಿಯಲ್ಲಿ ಸಂಗಮದ ಬಳಿ ಕಾವೇರಿ ನೀರನ್ನು ಪಂಪ್ ಮಾಡಿ ಕ್ಷೇತ್ರದ 250 ಕ್ಕೂ ಹೆಚ್ಚು ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರನ್ನು ತಲುಪಿಸುವ ಯೋಜನೆ ರೂಪಿಸಲಾಗುತ್ತಿದೆ. ಜೊತೆಗೆ ಕ್ಷೇತ್ರದ ಕೆರೆಗಳಿಗೂ ನೀರನ್ನು ತುಂಬಿಸುವ ಕೆಲಸಕ್ಕೆ ಚಾಲನೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕನಕಪುರದ ಕೋಡಿಹಳ್ಳಿ ಹೋಬಳಿಯಲ್ಲಿ ಸೋಮವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ನೀರಾವರಿ ಸಚಿವನಾದ ನಾನು ನನ್ನ ಕ್ಷೇತ್ರದ ಕೆರೆಗಳನ್ನು ತುಂಬಿಸುವ ಕೆಲಸ ಮಾಡುತ್ತಿದ್ದೇನೆ. ಶಿಂಷಾದಿಂದ ಸಾತನೂರು ಹೋಬಳಿಗೆ ನೀರು ತರಲಾಗುತ್ತಿದೆ. ಅರ್ಕಾವತಿಯಿಂದ ಕಸಬಾ ಹೋಬಳಿ ಕೆರೆಗಳನ್ನು ತುಂಬಿಸುವ ಕೆಲಸ ಮಾಡಲಾಗುತ್ತಿದೆ. ಹೊಸದುರ್ಗ ಭಾಗದ ಕೆರೆಗಳನ್ನು ಕಾವೇರಿ ನದಿ ನೀರಿನಿಂದ ತುಂಬಿಸಲಾಗುವುದು” ಎಂದು ಹೇಳಿದರು. “ಈ ಅವಧಿಯಲ್ಲೇ ಮೆಡಿಕಲ್ ಕಾಲೇಜಿಗೆ ಮುಕ್ತಿ ನೀಡಲಾಗುವುದು. ಕ್ಷೇತ್ರದಲ್ಲಿ ಎರಡು ಮೆಡಿಕಲ್ ಕಾಲೇಜು ಇರಲಿದೆ. ಕನಕಪುರದಲ್ಲಿ ಇನ್ಫೋಸಿಸ್ ಸಹಾಯದಲ್ಲಿ ತಾಯಿ ಮಗು ಆಸ್ಪತ್ರೆ ತೆರೆಯಲಾಗಿದೆ. ಇಂತಹ ಸರ್ಕಾರಿ ಆಸ್ಪತ್ರೆ ಬೇರೆ ಎಲ್ಲಾದರೂ ಇದೆಯೇ? ನಾವು ಮಾಡುತ್ತಿರುವ…
ಕನಕಪುರ: ಅನಾರೋಗ್ಯದ ನಡುವೆಯೂ ತಮ್ಮ ಕ್ಷೇತ್ರದ ಜನರ ಅಹವಾಲು ಸ್ವೀಕರಿಸುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನರ ಮನ ಗೆದ್ದರು. ಕಳೆದ ಒಂದು ವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿರುವ ಶಿವಕುಮಾರ್ ಅವರು ಕೋಡಿಹಳ್ಳಿ ಹೋಬಳಿಯಲ್ಲಿ ಸೋಮವಾರ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ವಿಧವಾ ಪಿಂಚಣಿ, ಬಗರ್ ಹುಕುಂ ಸಾಗುವಳಿ ಜಮೀನು, ನಿವೇಶನ, ಮನೆ, ಇ-ಖಾತಾ, ಪಡಿತರ ಕಾರ್ಡ್ ಗಾಗಿ ನೂರಾರು ಜನರು ಮನವಿ ಸಲ್ಲಿಸಿದರು. ಜನರ ಅರ್ಜಿಗಳನ್ನು ಸ್ವೀಕರಿಸಿ, ಸೂಕ್ತ ರೀತಿಯಲ್ಲಿ ಸ್ಪಂದಿಸಿ, ಪರಿಹಾರ ನೀಡುವುದಾಗಿ ಡಿಸಿಎಂ ಅವರು ಭರವಸೆ ನೀಡಿದರು. ನೂತನವಾಗಿ ರಚನೆಯಾದ ಕಂದಾಯ ಗ್ರಾಮಗಳ ಹಕ್ಕು ಪತ್ರ ಮತ್ತು ಫಲಾನುಭವಿಗಳಿಗೆ ಇ- ಸ್ವತ್ತು ದಾಖಲೆಗಳನ್ನು ವಿತರಿಸಿದರು. ಫಲಾನುಭವಿಗಳಿಗೆ ಮೀನು ಹಿಡಿಯುವ ಸಲಕರಣೆಗಳ ಕಿಟ್, ವಿವಿಧ ಇಲಾಖೆಗಳ ವತಿಯಿಂದ ಸ್ಥಳೀಯ ಫಲಾನುಭವಿಗಳಿಗೆ ಟ್ಯಾಕ್ಸಿ ಹಾಗೂ ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ ಮಾಡಿದರು. https://kannadanewsnow.com/kannada/pratik-chouhan-has-video-called-and-chatted-with-another-boy-victims-brother-alleges/ https://kannadanewsnow.com/kannada/the-wind-should-not-become-the-windows-for-news-but-should-become-the-windows-to-the-truth-cm-media-advisor-k-v-prabhakar/
ಚಿತ್ರದುರ್ಗ: ಮಾಧ್ಯಮಗಳು ಗಾಳಿ ಸುದ್ದಿಗಳಿಗೆ ಗವಾಕ್ಷಿಗಳಾಗದೆ ಸತ್ಯಕ್ಕೆ ಕಿಟಕಿಗಳಾಗಬೇಕಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಚಿತ್ರದುರ್ಗ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಮೊದಲೆಲ್ಲಾ ಸಮಾಜದಲ್ಲಿ ಗಾಳಿ ಸುದ್ದಿಗಳು ವ್ಯಾಪಿಸಿದಾಗ ಸತ್ಯ ತಿಳಿಯಲು ಜನರು ಮಾಧ್ಯಮಗಳನ್ನು ಗಮನಿಸುತ್ತಿದ್ದರು. ಈಗ ಮಾಧ್ಯಮಗಳೇ ಗಾಳಿ ಸುದ್ದಿಗಳಿಗೆ ಮನಸೋತಿರುವುದರಿಂದ ಜನರಿಗೆ ಸತ್ಯ ಮತ್ತು ಸುಳ್ಳಿನ ನಡುವೆ ವ್ಯತ್ಯಾಸವೇ ಗೊತ್ತಿಲ್ಲದಂತಾಗಿದೆ ಎಂದರು. ಪತ್ರಿಕಾ ವೃತ್ತಿಯ ಆದ್ಯತೆಗಳೇ ಈಗ ತಲೆ ಕೆಳಗಾಗಿದ್ದು, ಅಭಿವೃದ್ಧಿ-ತನಿಖಾ ಪತ್ರಿಕೋದ್ಯಮ ಹೋಗಿ ಹೇಳಿಕೆ ಪತ್ರಿಕೋದ್ಯಮ ಮಾತ್ರ ಉಳಿದಿದೆ ಎಂದರು. ಸುಳ್ಳು ಸುದ್ದಿ ಮತ್ತು ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಅತ್ಯಂತ ಅಪಾಯಕಾರ ಸನ್ನಿವೇಶವನ್ನು ಸೃಷ್ಟಿಸುತ್ತದೆ. ಮೊದಲು ಸುದ್ದಿ ಕೊಡಬೇಕು ಎನ್ನುವ ಧಾವಂತದಲ್ಲಿ ಸತ್ಯವನ್ನು ಮುಲಾಜಿಲ್ಲದೆ ಸಾಯಿಸುವುದು ವೃತ್ತಿಪರತೆಗೆ ಧಕ್ಕೆಯಾಗುತ್ತದೆ ಎಂದರು. ಬ್ರೇಕಿಂಗ್ ಸುದ್ದಿಗಳ ಭರಾಟೆಯಲ್ಲಿ ಸಂಬಂಧಗಳನ್ನು, ಸಮಾಜವನ್ನು ಬ್ರೇಕ್ ಮಾಡಬಾರದು ಎಂದು ಮನವಿ ಮಾಡಿದರು. ಪತ್ರಿಕೋದ್ಯಮದಲ್ಲಿ ಆದಾಯಕ್ಕೆ ಕೊರತೆ ಇದ್ದಾಗಲೂ ಸತ್ಯಕ್ಕೆ ಬಡತನ ಬಂದಿರಲಿಲ್ಲ. ಈಗ ಆದಾಯಕ್ಕೆ ಕೊರತೆ ಇಲ್ಲ, ಸತ್ಯಕ್ಕೆ ಬಡತನ…
ಬೀದರ್: ಮಾಜಿ ಸಚಿವ ಪ್ರಭು ಚೌಹಾಣ್ ಅವರ ಪುತ್ರ ಪ್ರತೀಕ್ ಚೌಹಾಣ್ ಬಹಳಷ್ಟು ಹುಡುಗಿಯ ಜೊತೆಗೆ ವೀಡಿಯೋ ಕಾಲ್, ವಾಟ್ಸ್ ಆಪ್ ಚಾಟ್ ಮಾಡಿರುವುದಾಗಿ ಸಂತ್ರಸ್ತೆಯ ಸಹೋದರ ಗಂಭೀರ ಆರೋಪ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು ನಮ್ಮ ಸಮಸ್ಯೆ ಯಾವುದೂ ಹಿರಿಯರು, ಕುಟುಂಬಸ್ಥರು, ವಕೀಲರ ಸಮ್ಮುಖದಲ್ಲಿ ಇತ್ಯರ್ಥವಾಗಿಲ್ಲ. ಏನು ಮಾತುಕತೆಯಾಗಿದೆ ಎನ್ನುವ ಸಾಕ್ಷಿ ಬೇಕು ಅಂದ್ರೆ ಸಿಡಿ ಆರ್ ತೆಗೆಸಿರಿ ಎಂದರು. ಮದುವೆಗೆ ದಿನಾಂಕ ನಿಗದಿ ಮಾಡಿ ಎಂದು ಕೇಳಲು ಮನೆಗೆ ಹೋಗಿದ್ದೆವು, ಆಗ ನಮ್ಮ ಮೇಲೆ ಅವರು ದಾಳಿ ಮಾಡಿ ಹಲ್ಲೆ ಮಾಡಿದ್ದಾರೆ. ನಾವು ಪೊಲೀಸ್ ಠಾಣೆಗೆ ಹೋಗಿದ್ದಾಗ ಅಲ್ಲಿಯೂ ಅವರು ಹೆದರಿಸಿದ್ರು ಎಂದು ಆರೋಪಿಸಿದ್ದಾರೆ. ಸಂತ್ರಸ್ತೆ ತಾಯಿ ಮಾತನಾಡಿ, ನಮ್ಮ ಬಳಿಯಲ್ಲಿ ಎಲ್ಲಾ ದಾಖಲೆಗಳು ಇದ್ದಾವೆ. ಅವುಗಳನ್ನು ಪೊಲೀಸರಿಗೆ ನೀಡಲಾಗಿದೆ. ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್ ಸುಳ್ಳು ಹೇಳುತ್ತಿದ್ದಾರೆ. ಮದುವೆ ಮಾಡುತ್ತೀರ ಎಂದು ಕೇಳಿದ್ರೆ ನಿರಾಕರಣೆ ಮಾಡಿದ್ದಾರೆ. ನಾವು ಬಹಳಷ್ಟ ದಿನಗಳಿಂದ ಕಾದಿದ್ದೇವೆ.…
ಬೆಂಗಳೂರು: ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರಿ ಶಾಲೆಗಳ ಸಬಲೀಕರಣದ ತೀವ್ರ ಅಗತ್ಯತೆ ಕುರಿತು ಒಂದು ದಿನ ಚರ್ಚೆಗೆ ಅವಕಾಶ ಮಾಡಿಕೊಡುವಂತೆ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ ಖಾದರ್ ಅವರಿಗೆ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಪತ್ರದಲ್ಲಿ ಮನವಿ ಮಾಡಿದ್ದಾರೆ. ಇಂದು ಈ ಸಂಬಂಧ ಸ್ಪೀಕರ್ ಗೆ ಪತ್ರ ಬರೆದಿರುವಂತ ಅವರು, ತಮ್ಮಲ್ಲಿ ನನ್ನದೊಂದು ವಿಶೇಷ ಮನವಿ. ಇದು ಸಾಮಾಜಿಕವಾಗಿ ನಮ್ಮನ್ನು ಓಸಲಾಗದ, ಪ್ರಭಾವ ಬೀರಲಾಗದ, ಮುಗ್ಧ ಸಮುದಾಯವಾದ ಸರ್ಕಾರಿ ಶಾಲಾ ಮಕ್ಕಳ ಪರವಾದ ಬಿನ್ನಹವಾಗಿದೆ. ಶಿಕ್ಷಣ ಇಲಾಖೆಯ ?s_ಆಡಳಿತ ಅಡಳಿತ ವ್ಯವಸ್ಥೆಯ ಅಗಾಧತೆ, ವಿದ್ಯಾರ್ಥಿ ಕೇಂದ್ರಿತವಾಗಿರಬೇಕಾದ ವ್ಯವಸ್ಥೆಯನ್ನು ಸಂಪೂರ್ಣವಾಗಿ ವಿರೂಪಗೊಳಿಸಿದೆ. ಮೂಲ ಉದ್ದೇಶವನ್ನೇ ಮಸುಕಾಗಿಸಿದೆ. ನೂರಾರು ಸಮಸ್ಯೆಗಳು-ಎಲ್ಲವೂ ಸಂಕೀರ್ಣ ಸಮಸ್ಯೆಗಳೇ ಆಗಿರುವ-ಕಾರಣ-ಶಿಕ್ಷಣವೆನ್ನುವುದು ಇಲಾಖೆಯ ಮೊದಲ ಆದ್ಯತೆಯಾಗಿಯೇ ಇಲ್ಲ. ಇಲ್ಲಿ ಬಗೆದಷ್ಟೂ ಸಮಸ್ಯೆಗಳು ಹೆಚ್ಚಾಗುತ್ತಿವೆಯೇ ವಿನ: ಸರಿಹೋಗುತ್ತಿಲ್ಲ. ಸಕಾರಾತ್ಮಕ ಆಶಯದಿಂದ ಆರಂಭಿಸುವ ಯೋಜನೆಗಳು ಸರ್ಕಾರಿ ಶಾಲೆಗಳಿಗೆ ಮಾರಕವಾಗುತ್ತಿರುವುದೂ ಒಂದು ಕ್ರೂರ ಅಣಕದಂತೆ ನಮ್ಮನ್ನು ಕಾಡುತ್ತಿದೆ ಎಂದಿದ್ದಾರೆ. ಇಲಾಖೆಯ ಸಮಸ್ಯೆಗಳ ಕುರಿತಂತೆ ಸದನದಲ್ಲಿ ಹೆಚ್ಚಿನ ಚರ್ಚೆಯಾಗಬೇಕಿದೆ. ರಾಜ್ಯ…
ಬೆಂಗಳೂರು: ಧರ್ಮಸ್ಥಳದ ಬಳಿ ಸಾವಿರಾರು ಶವಗಳು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್ಐಟಿ ರಚಿಸಿರುವುದು ಸ್ವಾಗತಾರ್ಹ. ಆದರೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡುವುದು ತಪ್ಪು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಭಾಗದಲ್ಲಿ ಸಾವಿರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿ ಹೇಳಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ. ಈ ಪ್ರಕರಣಗಳಲ್ಲಿ ನಿಷ್ಪಕ್ಷಪಾತವಾದ ತನಿಖೆಯಾಗಲಿ ಎಂದು ಆಗ್ರಹಿಸುತ್ತೇನೆ. ಯಾರನ್ನೂ ಸಿಕ್ಕಿಹಾಕಿಸುವ ಉದ್ದೇಶದಿಂದ ತನಿಖೆ ನಡೆಯಬಾರದು ಎಂದರು. ದಕ್ಷಿಣ ಭಾರತದಲ್ಲಿ ತಿರುಪತಿ ಹಾಗೂ ಧರ್ಮಸ್ಥಳ ಕೋಟ್ಯಂತರ ಹಿಂದೂಗಳ ಶ್ರದ್ಧಾಕೇಂದ್ರವಾಗಿದೆ. ಧರ್ಮಸ್ಥಳದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಯುವಕನೊಬ್ಬ ವೀಡಿಯೋಗಳನ್ನು ಅಪ್ಲೋಡ್ ಮಾಡುತ್ತಿದ್ದಾನೆ. ಈ ನಡುವೆ ಕೇರಳ ಸರ್ಕಾರ ಮಧ್ಯಪ್ರವೇಶ ಮಾಡಿದೆ. ಕೇರಳ ಸರ್ಕಾರ ಅಲ್ಲಿನ ದೇವಸ್ಥಾನಗಳ ವಿಚಾರದಲ್ಲಿ ಹೇಗೆ ನಡೆದುಕೊಳ್ಳುತ್ತಿದೆ, ಶಬರಿಮಲೆ ಅಯ್ಯಪ್ಪ ದೇವಾಲಯದ ವಿಚಾರದಲ್ಲಿ ಹೇಗೆ ನಡೆದುಕೊಂಡಿದೆ ಎಂಬುದು ಜಗಜ್ಜಾಹೀರಾಗಿದೆ. ಯಾವುದೇ ಕೊಲೆಯಾಗಿದ್ದರೆ ಸ್ಥಳೀಯ ಪೊಲೀಸ್ ಠಾಣೆ ತನಿಖೆ…
ಬೆಂಗಳೂರು: ಐಟಿಸಿಯ ಸನ್ಫೀಸ್ಟ್ ಮಾಮ್ಸ್ ಮ್ಯಾಜಿಕ್ ವಿನೂತನ ಉಪಕ್ರಮವನ್ನುವತಿಯಿಂದ, ‘ಭಾರತದಲ್ಲಿ ದತ್ತು ಸ್ವೀಕಾರ’ ಕುರಿತು ಜಾಗೃತಿ ಮೂಡಿಸಲು ಮುಂದಾಗಿದೆ. ಈ ಕುರಿತು ಮಾತನಾಡಿದ ಐಟಿಸಿ ಫುಡ್ಸ್ನ ಮುಖ್ಯ ಡಿಜಿಟಲ್ ಮಾರ್ಕೆಟಿಂಗ್ ಅಧಿಕಾರಿ ಶುವದೀಪ್ ಬ್ಯಾನರ್ಜಿ, ಪ್ರತಿಯೊಂದು ಮಗುವಿಗೂ ತಾಯಿಯ ಪ್ರೀತಿ ಹೆಚ್ಚು ಅವಶ್ಯಕ, ತಾಯಿಯನ್ನು ಕಳೆದುಕೊಂಡ ಮಗುವೂ ಸಹ ತಾಯಿಯ ಪ್ರೀತಿ ಪಡೆಯಲು ಅರ್ಗವಾಗಿದ್ದು, ಅದಕ್ಕಾಗಿ ದತ್ತು ತೆಗೆದುಕೊಳ್ಳುವ ಕ್ರಮ ಹೆಚ್ಚು ಅವಶ್ಯಕ. ಈ ನಿಟ್ಟಿನಲ್ಲಿ ಐಟಿಸಿ ಸನ್ಫೀಸ್ಟ್ ಮಾಮ್ಸ್ ಮ್ಯಾಜಿಕ ಈ ಉಪಕ್ರಮ ತಂದಿದೆ.ಇದನ್ನು ಬೆಂಬಲಿಸುವ ಕಲಿತೆಯನ್ನು ಸಹ ಬಿಡುಗಡೆ ಮಾಡಿದೆ. ಹೆಚ್ಚುತ್ತಿರುವ ಜಾಗೃತಿಯ ಹೊರತಾಗಿಯೂ, ಭಾರತದಲ್ಲಿ ದತ್ತು ಸ್ವೀಕಾರವು ಇನ್ನೂ ಕಳಂಕ ಮತ್ತು ಭಾವನಾತ್ಮಕ ಅಂತರವನ್ನು ಹೊಂದಿದೆ, ವಿಶೇಷವಾಗಿ ದತ್ತು ಪಡೆಯುವ ತಾಯಂದಿರನ್ನು ಸಮಾನರು ಎಂದು ಗುರುತಿಸುವಾಗ. ಅನೇಕರು ಜೀವಶಾಸ್ತ್ರದ ಮಸೂರದ ಮೂಲಕ ತಾಯ್ತನವನ್ನು ನಿರ್ಣಯಿಸುವುದನ್ನು ಮುಂದುವರೆಸಿದ್ದಾರೆ, ಲೆಕ್ಕವಿಲ್ಲದಷ್ಟು ಮಕ್ಕಳು ಮತ್ತು ಮಹಿಳೆಯರು ಈ ತಾಯಿ ಮಗುವಿನ ಪ್ರೀತಿಯಿಂದ ವಂಚಿತರಾಗಿದ್ದಾರೆ. ಪ್ರತಿ ಮಗುವೂ ತಾಯಿಯ ಪ್ರೀತಿಗೆ ಅರ್ಹವಾಗಿದೆ. ಆದ್ದರಿಂದ…
ಢಾಕಾ: ಬಾಂಗ್ಲಾದೇಶ ವಾಯುಪಡೆಯ F-7 BGI ತರಬೇತಿ ವಿಮಾನವು ಸೋಮವಾರ ಉತ್ತರ ಢಾಕಾದ ಉತ್ತರದಲ್ಲಿರುವ ಶಾಲಾ ಆವರಣಕ್ಕೆ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪ್ಪಳಿಸಿತು. ಕನಿಷ್ಠ 19 ಜನರು ಸಾವನ್ನಪ್ಪಿದರು ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಈ ದುರಂತದ ಬಗ್ಗೆ ಬಾಂಗ್ಲಾದೇಶ ಸರ್ಕಾರ ಒಂದು ದಿನದ ರಾಜ್ಯ ಶೋಕಾಚರಣೆಯನ್ನು ಘೋಷಿಸಿದೆ. https://twitter.com/defencealerts/status/1947213220059431315 ಬಾಂಗ್ಲಾದೇಶದ ಸುದ್ದಿ ಸಂಸ್ಥೆ ಪ್ರೋಥೋಮ್ ಅಲೋ ಪ್ರಕಾರ, ವಿಮಾನವು ಮಧ್ಯಾಹ್ನ 1:06 ಕ್ಕೆ ಹೊರಟಿತ್ತು ಮತ್ತು ಸ್ವಲ್ಪ ಸಮಯದ ನಂತರ ಉತ್ತರಾದ ವಸತಿ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ. ಅಗ್ನಿಶಾಮಕ ಸೇವೆ ಮತ್ತು ನಾಗರಿಕ ರಕ್ಷಣಾ ಇಲಾಖೆ ನಂತರ ಘಟನೆಯಲ್ಲಿ ಕನಿಷ್ಠ ಒಬ್ಬ ವ್ಯಕ್ತಿಯ ಸಾವನ್ನು ದೃಢಪಡಿಸಿದೆ. ಅಗ್ನಿಶಾಮಕ ಸೇವೆಯ ನಿಯಂತ್ರಣ ಕೊಠಡಿಯ ಕರ್ತವ್ಯ ಅಧಿಕಾರಿ ಲಿಮಾ ಖಾನ್, ಮಧ್ಯಾಹ್ನ 1:30 ರ ಸುಮಾರಿಗೆ ಅಪಘಾತದ ನಂತರ ನಾಲ್ವರು ಗಾಯಗೊಂಡ ವ್ಯಕ್ತಿಗಳನ್ನು ಸಂಯೋಜಿತ ಮಿಲಿಟರಿ ಆಸ್ಪತ್ರೆಗೆ (CMH)…
ತಿರುವನಂತಪುರಂ: ಕಮ್ಯುನಿಸ್ಟ್ ಹಿರಿಯ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದನ್ ಸೋಮವಾರ ಮಧ್ಯಾಹ್ನ ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 101 ವರ್ಷ ವಯಸ್ಸಾಗಿತ್ತು. ಮಂಗಳವಾರ ಆಲಪ್ಪುಳಕ್ಕೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುವುದು ಮತ್ತು ಬುಧವಾರ ಅಂತ್ಯಕ್ರಿಯೆ ನಡೆಯಲಿದೆ. ಜೂನ್ 23 ರಂದು ಹೃದಯಾಘಾತವಾದ ನಂತರ ಅವರನ್ನು ತಿರುವನಂತಪುರಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಂದಿನಿಂದ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜೀವ ಉಳಿಸುವ ಔಷಧಿಗಳ ಬೆಂಬಲದೊಂದಿಗೆ ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿತ್ತು. ಸೋಮವಾರ ಮಧ್ಯಾಹ್ನ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಮತ್ತು ಇತರ ಅನುಭವಿ ನಾಯಕರು ಆಸ್ಪತ್ರೆಗೆ ಭೇಟಿ ನೀಡಿದರು. ವಿಎಸ್ 2019 ರಿಂದ ಸಕ್ರಿಯ ರಾಜಕೀಯದಿಂದ ದೂರವಿದ್ದಾರೆ. ವಿಎಸ್ ಅಚ್ಯುತಾನಂದನ್ ಕೇರಳದ ಅತ್ಯಂತ ಹಿರಿಯ ಮುಖ್ಯಮಂತ್ರಿಯಾಗಿದ್ದರು, ಅವರು ಸುಮಾರು ಐದು ದಶಕಗಳ ಕಾಲ ರಾಜ್ಯದ ಸಾಮಾಜಿಕ-ರಾಜಕೀಯ ಪರಿಸರವನ್ನು ಎದುರಿಸಿದರು. ಅವರು 2006 ರಿಂದ 2011 ರವರೆಗೆ ಕೇರಳ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು ಮತ್ತು ಮೂರು ಬಾರಿ…
ಬೀದರ್: ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನ ವಿರುದ್ಧ ಸಂತ್ರಸ್ತೆಯೊಬ್ಬರು ಅತ್ಯಾಚಾರ ಆರೋಪ ಮಾಡಿದ್ದಾರೆ. ಪ್ರಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್ ಹಲವು ಬಾರಿ ಲೈಂಗಿಕವಾಗಿ ನನ್ನನ್ನು ಬಳಸಿಕೊಂಡಿರೋದಾಗಿ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಸಂತ್ರಸ್ತ ಯುವತಿಯೊಬ್ಬರು, ಬೀದರ್ ಯಾವ ರಾಜಕಾರಣಿಗಳು ದೂರು ಕೊಡಿ ಎಂಬುದಾಗಿ ನನಗೆ ಹೇಳಿಲ್ಲ. ಮಹಿಳಾ ಆಯೋಗದ ಅಧ್ಯಕ್ಷರು ಸಹಾಯ ಮಾಡಿದ್ದಾರೆ. ಬೀದರ್ ಎಸ್ಪಿ ಪ್ರದೀಪ್ ಗುಂಟೆ ಸಹ ನಮಗೆ ಸಹಾಯ ಮಾಡಿದ್ದಾರೆ ಎಂದರು. ಪ್ರತೀದ್ ಚೌಹಾಣ್ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ. ನನ್ನ ಮಗಳಂತೆ ಎಂದು ಹೇಳಿ ಪ್ರಭು ಚೌಹಾಣ್ ರಿಂದ ತೇಜೋವಧೆ ಮಾಡಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಪ್ರತೀಕ್ ನನಗೆ ಪರಿಚಯವಾಗಿದ್ದರು. ಮದುವೆ ಆಗುವುದಾಗಿ ಹೇಳಿದ ಮೇಲೆ ಸಾಕಷ್ಟು ಸಲ ಓಡಾಡಿದ್ದೇವೆ. ಮದುವೆ ಮಾಡಿಕೊಳ್ಳುತ್ತೇನೆಂದು ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದರು. ಬೆಂಗಳೂರಿನ ಲಾಡ್ಜ್ ನಲ್ಲಿ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ. ಆನಂತ್ರ ನಾವಿಬ್ಬರೂ ನಿಶ್ಚಿತಾರ್ಥ ಮಾಡಿಕೊಂಡಿದ್ದೇವೆ. ನಿಶ್ಚಿತಾರ್ಥದ ಬಳಿಕ ಮದುವೆ…