Author: kannadanewsnow09

ಮಡಿಕೇರಿ: ಮೂರ್ನಾಡು ಗ್ರಾಮದ 33/11 ಕೆ.ವಿ ವಿದ್ಯುತ್ ಉಪ ಕೇಂದ್ರ ಹೊರಹೊಮ್ಮುವ ನಾಪೋಕ್ಲು ಮತ್ತು ಎಫ್5 ಹೊದ್ದೂರು ಫೀಡರ್‍ನಲ್ಲಿ ಅಕ್ಟೋಬರ್, 15 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ನಾಪೋಕ್ಲು, ಕುಂಜಿಲ, ಕಕ್ಕಬೆ, ನಾಲಡಿ, ಯವಕಪಾಡಿ, ಕೊಟ್ಟಮುಡಿ, ಬೇತು, ಪಾಲೂರು, ಹೊದ್ದೂರು, ಹಳೆತಾಲೂಕು, ಎಮ್ಮೆಮಾಡು. ಬಲ್ಲಮಾವಟಿ, ಕೊಳಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. https://kannadanewsnow.com/kannada/important-information-for-parents-of-girl-children-about-bhagya-lakshmi-sukanya-samriddhi-yojana/ https://kannadanewsnow.com/kannada/minister-laxmi-hebbalkar-clarifies-that-money-will-be-credited-to-the-accounts-of-grihalakshmi-beneficiaries-for-one-month/

Read More

ನವದೆಹಲಿ: ಭಾರತ ಹಾಗೂ ಕೆನಡಾ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿದೆ. ಈ ಕಾರಣಕ್ಕಾಗಿಯೇ ಕೆನಡಾದಿಂದ ಹೈಕಮೀಷನರ್ ಅನ್ನು ಭಾರತವು ವಾಪಾಸ್ಸು ಪಡೆದಿದೆ. ಇಂದು ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿರುವಂತ ಕೇಂದ್ರ ಗೃಹ ಇಲಾಖೆಯು, ಉಗ್ರವಾದ ಮತ್ತು ಹಿಂಸಾಚಾರದ ವಾತಾವರಣದಲ್ಲಿ, ಟ್ರುಡೊ ಸರ್ಕಾರದ ಕ್ರಮಗಳು ಅವರ ಸುರಕ್ಷತೆಗೆ ಅಪಾಯವನ್ನುಂಟುಮಾಡುತ್ತವೆ ಎಂದು ಒತ್ತಿಹೇಳಲಾಯಿತು. ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಪ್ರಸ್ತುತ ಕೆನಡಾ ಸರ್ಕಾರದ ಬದ್ಧತೆಯಲ್ಲಿ ನಮಗೆ ನಂಬಿಕೆ ಇಲ್ಲ. ಆದ್ದರಿಂದ, ಹೈಕಮಿಷನರ್ ಮತ್ತು ಇತರ ಉದ್ದೇಶಿತ ರಾಜತಾಂತ್ರಿಕರು ಮತ್ತು ಅಧಿಕಾರಿಗಳನ್ನು ಹಿಂತೆಗೆದುಕೊಳ್ಳಲು ಭಾರತ ಸರ್ಕಾರ ನಿರ್ಧರಿಸಿದೆ ಎಂದಿದೆ. https://twitter.com/ANI/status/1845825994621628674 https://kannadanewsnow.com/kannada/breaking-i-am-ndas-candidate-in-channapatna-by-election-union-minister-hd-kumaraswamy/ https://kannadanewsnow.com/kannada/important-information-for-parents-of-girl-children-about-bhagya-lakshmi-sukanya-samriddhi-yojana/

Read More

ಮಡಿಕೇರಿ : ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಬಿಪಿಎಲ್ ಕುಟುಂಬದ 2 ಹೆಣ್ಣು ಮಕ್ಕಳಿಗೆ, ಪ್ರತಿ ಮಗುವಿನ ಹೆಸರಿನಲ್ಲಿ ವಾರ್ಷಿಕ ರೂ.3000 ದಂತೆ 15 ವರ್ಷಗಳವರೆಗೆ ಒಟ್ಟು ರೂ.45,000 ಗಳನ್ನು ಅಂಚೆ ಇಲಾಖೆಯಲ್ಲಿ ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಠೇವಣಿ ಹೂಡಲಾಗುತ್ತದೆ. ಮಗುವಿಗೆ 21 ವರ್ಷ ಪೂರ್ಣಗೊಂಡ ನಂತರ ಪರಿಪಕ್ವ ಮೊತ್ತ ಅಂದಾಜು ರೂ.1.27 ಲಕ್ಷ ನೀಡಲಾಗುತ್ತದೆ. ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗೆ ಹತ್ತಿರದ ಅಂಗನವಾಡಿ ಕೇಂದ್ರ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು. ಮಗುವನ್ನು ನೋಂದಾಯಿಸಲು ಅವಶ್ಯಕ ದಾಖಲೆಗಳು; ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಯೋಜನೆ ಅರ್ಜಿ ನಮೂನೆ, ಪೋಷಕರೊಂದಿಗೆ ಮಗುವಿನ ಭಾವಚಿತ್ರ, ಮಗುವಿನ ಮೂಲ ಜನನ ಪ್ರಮಾಣ ಪತ್ರ, ಆದ್ಯತಾ ಕುಟುಂಬ ಪಡಿತರ ಚೀಟಿಯ ಪ್ರತಿ(ಪಡಿತರ ಚೀಟಿಯಲ್ಲಿ ತಂದೆಯ ಹೆಸರು ಇರಬೇಕು). ಪೋಷಕರ ಆಧಾರ್ ಕಾರ್ಡ್, ಮಗುವಿನ ಆಧಾರ್ ಕಾರ್ಡ್ ಪ್ರತಿ, ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ್ದಲ್ಲಿ ಜಾತಿ ಪ್ರಮಾಣ ಪತ್ರ, ಪೋಷಕರ ಸ್ವಯಂ ಘೋಷಣಾ ವಿವಾಹ ದೃಢೀಕರಣ…

Read More

ಬಳ್ಳಾರಿ : ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯಾಗುತ್ತಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯ ಅನುದಾನದ ಕೊರತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಸಂಡೂರು ಪಟ್ಟಣದ ಅಗ್ನಿಶಾಮಕದಳ ಮುಂಭಾಗದ ವಿಶ್ವಾಸ್ ಯು.ಲಾಡ್ ಮೈದಾನದ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಸಂಡೂರು ತಾಲ್ಲೂಕಿನ ಸಾಧನಾ ಸಮಾವೇಶ, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳಿಗೆ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಸಂಡೂರು ಭಾಗದಲ್ಲಿ 280 ಕೋಟಿ ರೂ. ವೆಚ್ಚದಲ್ಲಿ ವಿವಿಧ ಯೋಜನೆಗಳ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. 2004 ರಿಂದ 2024 ರವರೆಗೆ 1,216 ಕೋಟಿ ರೂ. ಅನುದಾನ ನೀಡಲಾಗಿದೆ. ರೂ.160.00 ಕೋಟಿ ವೆಚ್ಚದಲ್ಲಿ ನಿಡುಗುರ್ತಿ ಸೇರಿದಂತೆ 58 ಹಳ್ಳಿಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು. 2013 ರ ನಮ್ಮ ಸರಕಾರದ ಅವಧಿಯಲ್ಲಿ ರಾಜ್ಯದಲ್ಲಿ ಸುಮಾರು 15 ಲಕ್ಷ ಮನೆಗಳನ್ನು ಕಟ್ಟಲು ಗುರಿ ಹೊಂದಲಾಗಿತ್ತು. ಸಂಡೂರು ಭಾಗದಲ್ಲಿಯೇ 12,000 ಮನೆಗಳನ್ನು ನೀಡಲಾಗಿತ್ತು.…

Read More

ಬೆಂಗಳೂರು: ಅಕ್ಟೋಬರ್.25ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಸಭೆಯಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ, ಹಣಕಾಸು ಒದಗಿಸುವ ಕೆಲಸ ಮಾಡಲಾಗುತ್ತಿದೆ. ಈ ಬಗ್ಗೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಅವರು ಮಾಹಿತಿ ನೀಡಿದ್ದು ದಿನಾಂಕ 25-10-2024ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 22ನೇ ಸಭೆಯನ್ನು ವಿಧಾನಸೌಧದದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ. ಸಿಎಂ ಸಿದ್ಧರಾಮಯ್ಯ ಅವರು ಜಾತಿ ಗಣತಿ ವರದಿಯನ್ನು ಪ್ರಣಾಣಿಕೆಯಲ್ಲಿ ಘೋಷಿಸಿದಂತೆ ಜಾರಿಗೊಳಿಸುವುದಾಗಿ ಈ ಹಿಂದೆ ತಿಳಿಸಿದ್ದರು. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದರು. ಅ.25ರಂದು ನಡೆಯಲಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ನಿರ್ಧಾರ ಪ್ರಕಟಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. https://kannadanewsnow.com/kannada/will-the-bjp-sangh-parivar-also-return-the-land-mla-manjunath-bhandari/ https://kannadanewsnow.com/kannada/minister-laxmi-hebbalkar-clarifies-that-money-will-be-credited-to-the-accounts-of-grihalakshmi-beneficiaries-for-one-month/

Read More

ಬೆಂಗಳೂರು: ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ನಿಯಮಾನುಸಾರ ಹಂಚಿಕೆಯಾಗಿದ್ದ 5 ಎಕರೆ ಜಮೀನನ್ನು ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರು ಇತರರಿಗೆ ಆದರ್ಶರಾಗಿದ್ದಾರೆ. ಈಗ ಬಿಜೆಪಿ ಮತ್ತು ಆರ್ ಎಸ್ ಎಸ್ ನವರು ತಮಗೆ ಹಂಚಿಕೆಯಾಗಿದ್ದ ಜಮೀನು ಮತ್ತು ನಿವೇಶನಗಳನ್ನು ಹಿಂದುರುಗಿಸುವ ಮೂಲಕ ಆದರ್ಶರಾಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, 5 ದಶಕಗಳಿಗೂ ಅಧಿಕ ಕಾಲ ಪರಿಶುದ್ಧ ರಾಜಕೀಯ ಜೀವನ ನಡೆಸಿಕೊಂಡು ಬಂದಿರುವ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ವಿರುದ್ಧ ಇಲ್ಲಸಲ್ಲದ ಆರೋಪ ಕೇಳಿಬರುತ್ತಿದ್ದಂತೆ ರಾಹುಲ್ ಖರ್ಗೆ ಅವರು, ನ್ಯಾಯಬದ್ಧವಾಗಿ ಲಭ್ಯವಾಗಿರುವ ಜಮೀನನ್ನು ಹಿಂದಿರುಗಿಸಿ ಮೇಲ್ಪಂಕ್ತಿ ಹಾಕಿದ್ದಾರೆ. ಹೀಗಾಗಿ ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸವನ್ನು ಮಾಡಬಾರದು. ಅಲ್ಲದೆ ಉದ್ದೇಶ ಪೂರ್ವಕವಾಗಿ ವಿವಾದಕ್ಕೆ ಸಿಲುಕಿಸುವ ಪ್ರಯತ್ನವನ್ನು ಮಾಡುತ್ತಿರುವ ಪ್ರತಿಪಕ್ಷಗಳು ಇನ್ನು ಮುಂದಾದರೂ ಇಂಥ ಕೃತ್ಯದಿಂದ ಹಿಂದೆ ಸರಿಯಬೇಕು. ವಿಧಾನಪರಿಷತ್ ನ ವಿರೋಧ ಪಕ್ಷದ ನಾಯಕರಾದ ಛಲವಾದಿ…

Read More

ನಾವು ಎಲ್ಲಾ ಒಳ್ಳೆಯ ವಿಷಯಗಳಿಗೆ ಅಯಸ್ಕಾಂತವಾಗಬೇಕಾದರೆ, ನಾವು ನಮ್ಮ ಬದ್ಧ ಸ್ವಭಾವವನ್ನು ಹೆಚ್ಚಿಸಿಕೊಳ್ಳಬೇಕು. ಒಳ್ಳೆಯದನ್ನು ಆಕರ್ಷಿಸುವ ವಸ್ತು ವಶಂ ಎಂದು ಅವರು ಹೇಳುತ್ತಾರೆ. ಒಳ್ಳೆಯ ಜನರನ್ನು ನಮ್ಮೆಡೆಗೆ ಆಕರ್ಷಿಸಲು, ಒಳ್ಳೆಯದನ್ನು ನಮ್ಮೆಡೆಗೆ ಆಕರ್ಷಿಸಲು, ಭೌತಿಕ ಸಂತೋಷಗಳನ್ನು ನಮಗೆ ಆಕರ್ಷಿಸಲು, ಹಣವನ್ನು ಆಕರ್ಷಿಸಲು, ನಮಗೆ ಏನು ಬೇಕು? ರೆಸಿಡೆನ್ಸಿ ಅಗತ್ಯವಿದೆ. ಈ ಪೋಸ್ಟ್ ಮೂಲಕ, ನಾವು ಎಲ್ಲವನ್ನೂ ನಮ್ಮ ಕಡೆಗೆ ಆಕರ್ಷಿಸಲು ಸರಳ ಪರಿಹಾರ ಮತ್ತು ಮಂತ್ರ ಜಪವನ್ನು ತಿಳಿಯಲಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ…

Read More

ಬೆಂಗಳೂರು:  ಪ್ರಯಾಗ್ರಾಜ್ ವಿಭಾಗದ ಪ್ರಯಾಗ್ರಾಜ್ ನಿಲ್ದಾಣದಲ್ಲಿ ಯಾರ್ಡ್ ಮರುನಿರ್ಮಾಣ ಕಾರ್ಯ ಮತ್ತು ಆರ್ಆರ್ಐ (ರೂಟ್ ರಿಲೇ ಇಂಟರ್ಲಾಕಿಂಗ್) ಅನ್ನು ಇಐ (ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್) ಆಗಿ ಪರಿವರ್ತಿಸುವುದರಿಂದ ಈ ಕೆಳಗಿನ ರೈಲುಗಳನ್ನು ಬೇರೆಡೆಗೆ ತಿರುಗಿಸಲು ಉತ್ತರ ಮಧ್ಯ ರೈಲ್ವೆ ಅಧಿಸೂಚನೆ ಹೊರಡಿಸಿದೆ. ಈ ಕೆಳಗಿನ ರೈಲುಗಳನ್ನು ನಿಗದಿತ ದಿನಾಂಕಗಳಲ್ಲಿ ತಿರುಗಿಸಲಾಗುವುದಾಗಿ ನೈರುತ್ಯ ರೈಲ್ವೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. 1. ರೈಲು ಸಂಖ್ಯೆ 12539 ಯಶವಂತಪುರ-ಲಕ್ನೋ ಸಾಪ್ತಾಹಿಕ ಎಕ್ಸ್ಪ್ರೆಸ್ ಅಕ್ಟೋಬರ್ 16, 2024 ರಂದು ಪ್ರಾರಂಭವಾಗುವ ಪ್ರಯಾಣವನ್ನು ಲಕ್ನೋ, ಕಾನ್ಪುರ ಸೆಂಟ್ರಲ್, ಭೀಮಸೇನ್, ಓಹಾನ್ ಕ್ಯಾಬಿನ್ ಮತ್ತು ಕಟ್ನಿ ನಿಲ್ದಾಣಗಳ ಮೂಲಕ ತಿರುಗಿಸಲಾಗಿದೆ. 2. ರೈಲು ಸಂಖ್ಯೆ 12540 ಲಕ್ನೋ-ಯಶವಂತಪುರ ಸಾಪ್ತಾಹಿಕ ಎಕ್ಸ್ಪ್ರೆಸ್ ಅಕ್ಟೋಬರ್ 18, 2024 ರಂದು ಪ್ರಾರಂಭವಾಗುವ ಪ್ರಯಾಣವನ್ನು ಕಟ್ನಿ, ಓಹಾನ್ ಕ್ಯಾಬಿನ್, ಭೀಮಸೇನ್, ಕಾನ್ಪುರ ಸೆಂಟ್ರಲ್ ಜಂಕ್ಷನ್ ಮತ್ತು ಲಕ್ನೋ ನಿಲ್ದಾಣಗಳ ಮೂಲಕ ತಿರುಗಿಸಲಾಗಿದೆ. ಬಿ) ರಂಗಿಯಾ ವಿಭಾಗದ ಮೇಲೆ ನಲ್ಬಾರಿ ಮತ್ತು ಬೈಹಟಾ ನಿಲ್ದಾಣಗಳ ನಡುವೆ ಜೋಡಿ ಮಾರ್ಗವನ್ನು…

Read More

ಬೆಂಗಳೂರು: ವಿಪಕ್ಷ ನಾಯಕರಾದ ಆರ್ ಅಶೋಕ್ ಅವರ ಇತ್ತೀಚಿನ ಪತ್ರಿಕಾ ಹೇಳಿಕೆ ಓದಿ ನಿಜಕ್ಕೂ ಆಘಾತವಾಯಿತು. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಹಾಗೂ ಈ ಹಿಂದೆ ಕಂದಾಯ ಇಲಾಖೆಯ ಸಚಿವರಾಗಿಯೂ ಇದ್ದವರಿಗೆ ಜಿಎಸ್ಟಿ ಕಮಿಟಿ ಹಾಗೂ ಹಣಕಾಸು ಆಯೋಗದ ನಡುವಿನ ವ್ಯತ್ಯಾಸವೂ ತಿಳಿಯದಿರುವುದು ಅಚ್ಚರಿಯ ವಿಚಾರ. ಸಿಎಂ ಸಿದ್ದರಾಮಯ್ಯನವರನ್ನು ಟೀಕಿಸುವ ಬರದಲ್ಲಿ ನನ್ನ ವಿರುದ್ಧವೂ ಕೀಳುಮಟ್ಟದ ಹೇಳಿಕೆ ನೀಡಿರುವುದು ಅವರ ಘನತೆಗೆ ತಕ್ಕುದಾದ ನಡೆ ಅಲ್ಲ ಎಂಬುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ವಾಗ್ಧಾಳಿ ನಡೆಸಿದ್ದಾರೆ. ಇಂದು ಪತ್ರಿಕಾ ಹೇಳಿಕೆಯಲ್ಲಿ “ಜಿಎಸ್ಟಿ ಸಭೆಗೆ ಹೋಗುವ ಪ್ರತಿನಿಧಿ ಕಡಲೆಕಾಯಿ ತಿನ್ನುತ್ತಾರಾ?” ಎಂದು ಪ್ರಶ್ನಿಸಿರುವ ಆರ್. ಅಶೋಕ್ ಅವರೇ ಜಿಎಸ್ಟಿ ಕಮಿಟಿ ಹಾಗೂ ಹಣಕಾಸು ಆಯೋಗ ಇವೆರಡೂ ಬೇರೆ ಬೇರೆ ಎಂಬ ಕುರಿತು ಕಡಲೆಕಾಯಿ ಬೆಳೆಯುವ ನಮ್ಮ ನಾಡಿನ ಸಾಮಾನ್ಯ ರೈತನಿಗೆ ಇರುವಷ್ಟೂ ಕನಿಷ್ಠ ಜ್ಞಾನ ವಿಪಕ್ಷ ನಾಯಕನಾದ ತಮಗೆ ಇಲ್ಲದಿರುವುದು ಈ ನಾಡಿನ ದೌರ್ಭಾಗ್ಯ ಎಂದಿದ್ದಾರೆ. ಮೊದಲು ತಾವು ಜಿಎಸ್ಟಿ ಎಂದರೆ ಏನು..? ಜಿಎಸ್ಟಿ ಸಭೆಯಲ್ಲಿ ಚರ್ಚೆಯಾಗುವ ವಿಚಾರಗಳೇನು ಎಂಬ…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಂದು ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಕೆಲ ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅಲ್ಲದೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯವು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೆಲ ಆರೋಪಿಗಳ ಜಾಮೀನು ಅರ್ಜಿಯ ಕುರಿತಂತೆ ವಾದವನ್ನು ಆಲಿಸಿತು. ಆ ಬಳಿಕ ಪ್ರಕರಣದಲ್ಲಿನ ಇತರೆ ಆರೋಪಿಗಳ ಕಾಯ್ದಿರಿಸಿದ್ದಂತ ಜಾಮೀನು ಆದೇಶವನ್ನು ಪ್ರಕಟಿಸಿದೆ. ಎ.1 ಆರೋಪಿ ಪವಿತ್ರಾ ಗೌಡ, ಎ.2 ಆರೋಪಿ ನಟ ದರ್ಶನ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಎ.8 ಆರೋಪಿ ರವಿಶಂಕರ್ ಹಾಗೂ ಎ.13  ಆರೋಪಿ ದೀಪಕ್ ಪರ ವಕೀಲರ ವಾದವನ್ನು ಆಲಿಸಿಜದ್ದಂತ ನ್ಯಾಯಾಲಯವು ಅವರಿಗೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ಮಂಜೂರು ಮಾಡಿದೆ. ಅಂದಹಾಗೇ ಎ8 ಆರೋಪಿ ರವಿಶಂಕರ್ ತುಮಕೂರು ಜೈಲಿನಲ್ಲಿದ್ದಾರೆ. ಅವರನ್ನು ನಾಳೆ ಜಾಮೀನು ಹಿನ್ನಲೆಯಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. https://kannadanewsnow.com/kannada/hc-stays-appointment-of-administrator-for-state-government-employees-association/ https://kannadanewsnow.com/kannada/minister-laxmi-hebbalkar-clarifies-that-money-will-be-credited-to-the-accounts-of-grihalakshmi-beneficiaries-for-one-month/ https://kannadanewsnow.com/kannada/breaking-i-am-ndas-candidate-in-channapatna-by-election-union-minister-hd-kumaraswamy/

Read More