Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: 2024–25ರ ಸಾಲಿನಲ್ಲಿ ಸುಮಾರು 12,392 ಶಿಕ್ಷಕರಿಗೆ ನೇಮಕಾತಿ ಆದೇಶವನ್ನು ನೀಡಲಾಗಿದೆ. 2025–26ರ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಇತರ ಭಾಗಗಳಲ್ಲಿ ಒಟ್ಟು 10,267 ಶಿಕ್ಷಕರ ನೇಮಕಾತಿ ಮಾಡಲು ಪ್ರಕ್ರಿಯೆ ಆರಂಭಿಸಲಾಗಿದೆ. 2016 ರಿಂದ 2020 ರ ವರೆಗಿನ ಅನುದಾನಿತ ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಶಾಲೆಗಳಲ್ಲಿ ಸುಮಾರು 6,000 ಶಿಕ್ಷಕರನ್ನು ನೇಮಕಾತಿ ಮಾಡಲಾಗುವುದು ಎಂಬುದಾಗಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಹೀಗಿದೆ ಇಂದಿನ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆಯ ಅಂಗವಾಗಿ ಮಾಡಿದ ಭಾಷಣದ ಪ್ರಮುಖ ಹೈಲೈಟ್ಸ್.. ನಮ್ಮ ಇಲಾಖೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಕಾರದಿಂದ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ಅದರಲ್ಲಿ ಗುಣಾತ್ಮಕ ಕಾರ್ಯಕ್ರಮಗಳು ಶಿಕ್ಷಕರ ನೇಮಕಾತಿ 2024–25ರ ಸಾಲಿನಲ್ಲಿ ಸುಮಾರು 12,392 ಶಿಕ್ಷಕರಿಗೆ ನೇಮಕಾತಿ ಆದೇಶವನ್ನು ನೀಡಲಾಗಿದೆ. 2025–26ರ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಇತರ ಭಾಗಗಳಲ್ಲಿ ಒಟ್ಟು 10,267 ಶಿಕ್ಷಕರ ನೇಮಕಾತಿ…
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಜನತೆಗೆ ಮತ್ತಷ್ಟು ಹತ್ತಿರವಾಗುತ್ತಿದ್ದಾರೆ. ಲೈಟರ್ ಕೈಯಲ್ಲಿ ಹಿಡಿದು ತಾಸುಗಟ್ಟಲೆ ಸರದಿ ಸಾಲಿನಲ್ಲೋ, ಜನಸ್ಪಂದನ ಕಾರ್ಯಕ್ರಮದಲ್ಲೋ ನಿಂತು ತಮ್ಮ ಸಮಸ್ಯೆ ಪರಿಹರಿಸಿ ಎನ್ನುವ ವ್ಯವಸ್ಥೆ ಬದಲು ಮಾಡಿದ್ದಾರೆ. ರಾಜ್ಯದ ಸಾರ್ವಜನಿಕರಾದಂತ ನೀವುಗಳು ನಿಮ್ಮ ಸಮಸ್ಯೆಗಳನ್ನು ಸಿಎಂಗೆ ದೂರಿನ ಮೂಲಕ ನೀಡಬೇಕಾದರೇ, ಜಸ್ಟ್ ಒಂದು ಎಕ್ಸ್ ಪೋಸ್ಟ್ ಸಾಕಾಗಿದೆ. ಆ ಪೋಸ್ಟ್ ಗೆ ಪ್ರತ್ಯುತ್ತರ ಬಂದು, ನಿಮ್ಮ ಸಮಸ್ಯೆಗೆ ಪರಿಹಾರ ಖಂಡಿತ ಸಿಗಲಿದೆ ಎಂಬುದು ಸಿಎಂ ಕಚೇರಿಯ ಮಾಹಿತಿ. ಹಾಗಾದ್ರೇ ಸಿಎಂಗೆ ದೂರು ನೀಡೋದು ಹೇಗೆ ಅಂತ ಮುಂದೆ ಓದಿ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯಿಂದ ಪ್ರಾರಂಭವಾಗಿರುವ ಹೊಸ ಉಪಕ್ರಮವಾಗಿದ್ದು, ಯಾವುದೇ ದೊಡ್ಡ ಹಾಗೂ ದೀರ್ಘಕಾಲದಿಂದ ಬಾಕಿ ಇರುವ ಸಮಸ್ಯೆಗಳನ್ನು ಪರಿಹರಿಸಲು ಸಹಕಾರಿಯಾಗಲಿದೆ ಎಂದು ಸರ್ಕಾರ ತಿಳಿಸಿದೆ. ಜನರಿಗೆ ತಮ್ಮ ಕುಂದುಕೊರತೆಗಳನ್ನು ಹೇಳಿಕೊಳ್ಳಲು ಸಹಾಯ ಮಾಡಲು, ಕರ್ನಾಟಕ ಮುಖ್ಯಮಂತ್ರಿಗಳ ಕಚೇರಿ (CMO) ಹೊಸ ಟ್ವಿಟರ್ ಹ್ಯಾಂಡಲ್ ಅನ್ನು ಪ್ರಾರಂಭಿಸಿದ್ದು, ಇದರ ಮೂಲಕ ಹೇಗೆ ದೂರು ನೀಡಬೇಕು? ದೂರು…
ಬೆಳಗಾವಿ: ಜಿಲ್ಲೆಯಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ರಾಜ್ಯೋತ್ಸವ ಮೆರವಣಿಗೆ ಸಂದರ್ಭದಲ್ಲಿ ಐವರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ. ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆ ವೇಳೆಯಲ್ಲಿ ಐವರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಲಾಗಿದೆ. ಬೆಳಗಾವಿಯ ಸದಾಶಿವನಗರದ ಚೆನ್ನಮ್ಮ ವೃತ್ತದ ಬಳಿಯಲ್ಲಿ ಈ ಕೃತ್ಯವೆಸಗಲಾಗಿದೆ. ಚಾಕು ಇರಿತಕ್ಕೆ ಒಳಗಾದಂತ ಮೂವರನ್ನು ಬಿಮ್ಸ್ ಗೆ ದಾಖಲಿಸಲಿದ್ದರೇ, ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ರೂಪಕಗಳ ಮೆರವಣಿಗೆ ವೇಳೆಯಲ್ಲಿ ಈ ಕೃತ್ಯವೆಸಗಲಾಗಿದೆ. ವಿಷಯ ತಿಳಿದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಕಮೀಷನರ್ ಭೂಷಣ್ ಬೊರಸೆ ಭೇಟಿ ನೀಡಿ, ಮಾಹಿತಿ ಪಡೆದರು. https://kannadanewsnow.com/kannada/tomorrow-a-new-idol-of-lord-basavanna-will-be-installed-at-karjikoppa-in-sorabada-nadi-the-temple-will-be-dedicated-to-the-public/ https://kannadanewsnow.com/kannada/haveri-26th-annual-festival-of-goddess-tulja-bhavani-to-be-held-on-november-3/
ಶಿವಮೊಗ್ಗ: ನಾಳೆ, ನಾಡಿದ್ದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಪತ್ರೆಸಾಲು, ಕಾನಹಳ್ಳಿ ಅಂದರೆ ಗಡೇಗದ್ದೆ ಗ್ರಾಮದಲ್ಲಿ ಮಂಡ್ಲಿಮನೆ ಶ್ರೀ ಬಸವಣ್ಣ ದೇವರ ನೂತನ ವಿಗ್ರಹ ಪ್ರತಿಷ್ಠಾಪನೆ ಮತ್ತು ನೂತನ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಮಂಡ್ಲಿಮನೆ ಶ್ರೀ ಬಸವಣ್ಣ ಸೇವಾ ಸಮಿತಿ ಮತ್ತು ಕರ್ಜಿಕೊಪ್ಪ ಗ್ರಾಮಸ್ಥರು ಕನ್ನಡ ನ್ಯೂಸ್ ನೌಗೆ ಮಾಹಿತಿ ನೀಡಿದ್ದು, ದಿನಾಂಕ 02-11-2025ರ ನಾಳೆಯ ಭಾನುವಾರ ಮತ್ತು ದಿನಾಂಕ 03-11-2025ರ ನಾಡಿದ್ದು ಸೋಮವಾರದಂದು ಶ್ರೀ ಬಸವಣ್ಣ ದೇವರ ನೂತನ ವಿಗ್ರಹ ಪ್ರತಿಷ್ಠಾಪನಾ ಮತ್ತು ನೂತನ ದೇವಾಲಯ ಲೋಕಾರ್ಪಣಾ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ತಿಳಿಸಿದ್ದಾರೆ. ದಿನಾಂಕ 02-11-2025ರಂದು ಬೆಳಗ್ಗೆ 7 ಗಂಟೆಗೆ ವಿವಿಧ ಪೂಜಾ ಕೈಂಕರ್ಯಗಳು, ಹೋಮ-ಹವನಗಳು ನೆರವೇರಲಿವೆ. ಸಂಜೆ 4 ಗಂಟೆಗೆ ಮಂಗಳ ವಾದ್ಯ ಮತ್ತು ಪೂರ್ಣಕುಂಭ ಸಮೇತ ನೂತನ ಬಸವಣ್ಣ ದೇವರ ವಿಗ್ರಹದ ಮೆರವಣಿಗೆ ನಡೆಯಲಿದೆ. ಸಂಜೆ 6.30ಕ್ಕೆ ಏಕಾದಶ ರುದ್ರದ ಮೂಲಕ ಪೂಜೆ ಆರಂಭಗೊಂಡು, ಕಂಕಣ ಧಾರಣೆ ನೆರವೇರಲಿದೆ ಎಂದು ತಿಳಿಸಿದ್ದಾರೆ. ದಿನಾಂಕ 03-11-2025ರ…
ಹೊನ್ನಾವರ: ಇಲ್ಲಿನ ಗೇರುಸೊಪ್ಪ ಸಮೀಪದ ಸುಳಿಮುರ್ಕಿ ಕ್ರಾಸ್ ನಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿಯಾಗಿದ್ದು, ಓರ್ವ ಯುವಕ ಸಾವನ್ನಪ್ಪಿದ್ದಾನೆ ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ಈ ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿರುವುದಾಗಿ ಹೇಳಲಾಗುತ್ತಿದೆ. ಬೆಂಗಳೂರಿನಿಂದ ಭಟ್ಕಳಕ್ಕೆ ತೆರಳುತ್ತಿದ್ದಂತ ಕೆ ಎಸ್ ಆರ್ ಟಿ ಸಿ ಬಸ್ ಹೊನ್ನಾವರದ ಗೇರುಸೊಪ್ಪ ಬಳಿಯಲ್ಲಿ ಪಲ್ಟಿಯಾಗಿದೆ. ಈ ಬಸ್ಸಿನಲ್ಲಿ 40 ಪ್ರಯಾಣಿಕರಿದ್ದರು ಎನ್ನಲಾಗುತ್ತಿದೆ. ಬಸ್ ಪಲ್ಟಿಯಾಗಿದ್ದರಿಂದ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಇನ್ನೂ ಬಸ್ ಪಲ್ಟಿಯಿಂದಾಗಿ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, ಅವರಿಗೆ ಹೊನ್ನಾವರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ್ ವೈದ್ಯ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ. https://kannadanewsnow.com/kannada/should-you-complain-to-chief-minister-siddaramaiah-just-do-this-your-problem-will-be-cleared/ https://kannadanewsnow.com/kannada/haveri-26th-annual-festival-of-goddess-tulja-bhavani-to-be-held-on-november-3/
ಹಾವೇರಿ: ಜಿಲ್ಲೆಯಲ್ಲಿ ಪ್ರಸಿದ್ಧ ಜಾತ್ರೆಗಳಲ್ಲಿ ಒಂದು ಅಕ್ಕಿ ಆಲೂರಿನ ಶ್ರೀ ತುಳಜಾಭವಾನಿ ದೇವಿಯದ್ದು. ನವೆಂಬರ್.3, 2025ರಂದು 26ನೇ ವರ್ಷದ ಜಾತ್ರಾ ಮಹೋತ್ಸವವನ್ನು ನಡೆಸಲು ನಿಗದಿ ಪಡಿಸಲಾಗಿದೆ. ಈ ಕುರಿತಂತೆ ಶ್ರೀ ತುಳಜಾಭವನಾನಿ ದೇವಸ್ಥಾನದ ಆಡಳಿತ ಮಂಡಳಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಅಕ್ಕಿಆಲೂರು ಗ್ರಾಮದ ಡೊಳ್ಳೇಶ್ವರ ಕ್ರಾಸ್ ಹತ್ತಿರದಲ್ಲಿರುವಂತ ಶ್ರೀ ತುಳಜಾಭವಾನಿ ದೇವಿಯ 26ನೇ ಜಾತ್ರಾ ಮಹೋತ್ಸವವನ್ನು ನವೆಂಬರ್.3ರಂದು ನಡೆಸಲಾಗುತ್ತಿದೆ ಎಂಬುದಾಗಿ ತಿಳಿಸಿದೆ. ನವೆಂಬರ್.3ರ ಸೋಮವಾರದಂದು ಬೆಳಗ್ಗೆ 5 ಗಂಟೆಗೆ ಶ್ರೀ ತುಳಜಾಭವಾನಿ ದೇವಿಗೆ ಸಕಲ ಮಂಗಲ ದ್ರವ್ಯಗಳ ಅಭಿಷೇಕದೊಂದಿಗೆ ಪೂಜೆ ಪ್ರಾರಂಭವಾಗಲಿದೆ. ಬೆಳಗ್ಗೆ 6 ಗಂಟೆಗೆ ಕುಂಭಗಳೊಂದಿಗೆ ದೇವಿಯ ಉತ್ಸವ ಮೂರ್ತಿಯ ಭವ್ಯ ಮೆರವಣಿಗೆ ಸಕಲ ವಾದ್ಯ ವೃಂದಗಳೊಂದಿಗೆ ಅಕ್ಕಿ ಆಲೂರು ನಗರ ಪ್ರದಕ್ಷಿಣೆ ಬಳಿಕ ದೇವಸ್ಥಾನಕ್ಕೆ ಆಗಮಿಸಲಿದೆ ಎಂದಿದೆ. ಇನ್ನೂ ಮಧ್ಯಾಹ್ನ 1 ಗಂಟೆಗೆ ಶ್ರೀ ತುಳಜಾಭವಾನಿ ದೇವಿಯ ಮಹಾಮಂಗಳಾರತಿಯು ಜರುಗಲಿದೆ. ಹಾನಗಲ್ ತಾಲ್ಲೂಕಿನ ಅಕ್ಕಿ-ಆಲೂರು ಡೊಳ್ಳೇಶ್ವರ ಕ್ರಾಸ್ ಹತ್ತಿರ ಪ್ರತಿಷ್ಠಾಪಿಸಿರುವಂತ ಶ್ರೀ…
ಬೆಂಗಳೂರು: ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ಕನ್ನಡದ ನೆಲ, ಕರ್ನಾಟಕದ ಭಾಗ. ಇದನ್ನು ಅಲ್ಲಗಳೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ಬೆಳಗಾವಿ ಕರ್ನಾಟಕ ಒಂದು ಭಾಗ, ಯಾವುದೇ ಕಾರಣಕ್ಕೂ ಮಹಾರಾಷ್ಟ್ರಕ್ಕೆ ಸೇರಲು ಬಿಡುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು. ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು ಎಂದು ಕರೆ ನೀಡಿದರು. ಕನ್ನಡ ನೆಲದಲ್ಲಿ ಬದುಕು ಕಟ್ಟಿಕೊಂಡ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಗೌರವಿಸುತ್ತಾರೆ. ಕನ್ನಡ ನೆಲದಲ್ಲಿ ನಾವು ಕನ್ನಡದಲ್ಲೇ ಮಾತಾಡುತ್ತೇವೆ ಎನ್ನುವ ಶಪಥ ಮಾಡೋಣ ಎಂದು ಕರೆ ನೀಡಿದರು. ನಮ್ಮ ಭೂಮಿ, ನಮ್ಮ ನೆಲ, ನಮ್ಮ ಜಲ,…
ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿ ಆಯ್ಕೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ “70ನೇ ಕರ್ನಾಟಕ ರಾಜ್ಯೋತ್ಸವವನ್ನು ಉದ್ಘಾಟಿಸಿ 70 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿ ಮಾತನಾಡಿದರು. ಕರ್ನಾಟಕ ಉದಯವಾಗಿ 70 ವರ್ಷಗಳಾಗಿರುವುದನ್ನು ಪರಿಗಣಿಸಿ 70 ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದರು. ಅರ್ಜಿ ಹಾಕಿದವರನ್ನು ಪರಿಗಣಿಸದೇ ಆಯಾ ಕ್ಷೇತ್ರದ ಪರಿಣಿತರನ್ನೇ ಗುರುತಿಸಿ ಆಯ್ಕೆ ಮಾಡಬೇಕು ಎನ್ನುವುದು ನಮ್ಮ ತೀರ್ಮಾನವಾಗಿತ್ತು. ಪುರಸ್ಕೃತರೆಲ್ಲರೂ ಶತಾಯುಶಿಗಳಾಗಿ ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಇನ್ನಷ್ಟು ಸಾಧನೆ ಮಾಡಿ ನಿಮ್ಮದೆಲ್ಲಾ ಸಾರ್ಥಕ ಬದುಕು ಆಗಲಿ ಎಂದು ಹಾರೈಸಿದರು. ಒಂದೇ ವಿಭಾಗದಲ್ಲಿ ಒಬ್ಬರಿಗಿಂತ ಹೆಚ್ಚು ಸಾಧಕರ ಹೆಸರು ಇದ್ದ ಸಂದರ್ಭದಲ್ಲಿ ಮಾತ್ರ ಪ್ರಾದೇಶಿಕ ನ್ಯಾಯ, ಸಾಮಾಜಿಕ ನ್ಯಾಯದ ಕಾರಣಕ್ಕಾಗಿ ಆ ಅರ್ಹರಲ್ಲೇ ಒಬ್ಬರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದರು. ಮಾಧ್ಯಮಗಳು ಯಾರ…
ಬೆಂಗಳೂರು: ನಗರದಲ್ಲಿ ಕೊಳೆತ ಸ್ಥಿತಿಯಲ್ಲಿ ಎಂಬಿಎ ವಿದ್ಯಾರ್ಥಿನಿಯೊಬ್ಬಳ ಶವ ಪತ್ತೆಯಾಗಿದೆ. ಆ ಮೂಲಕ ಹಲವು ಅನುಮಾನಗಳಿಗೆ ಕಾರಣವಾಗಿದೆ. ಬೆಂಗಳೂರಿನ ಗಾಯತ್ರಿನಗರದ ರೈಲ್ವೆ ಪ್ಯಾರಲರ್ ರಸ್ತೆಯ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಎಂಬಿಎ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ದಾವಣಗೆರೆ ಮೂಲದ ಸುಪ್ರಿಯಾ(25) ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದಂತ ಎಂಬಿಎ ವಿದ್ಯಾರ್ಥಿನಿಯಾಗಿದ್ದಾಳೆ. ಬೈಕ್ ರೈಡಿಂಗ್ ತರಬೇತಿ ಪಡೆಯುತ್ತಿದ್ದಂತ ಸುಪ್ರಿಯಾ ಈಗ ಶವವಾಗಿ ಪತ್ತೆಯಾಗಿದ್ದಾಳೆ. ಸುಪ್ರಿಯಾ ವಾಸವಾಗಿದ್ದ ಕೊಠಡಿ 2 ದಿನದಿಂದ ಲಾಕ್ ಆಗಿತ್ತು. ಪೋಷಕರು ಕರೆ ಮಾಡಿದರೂ ಸ್ವೀಕರಿಸುತ್ತಿರಲಿಲ್ಲ. ಈ ಹಿನ್ನಲೆಯಲ್ಲಿ ಮನೆ ಮಾಲೀಕರಿಗೆ ಕರೆ ಮಾಡಿ ಪೋಷಕರು ವಿಷಯ ತಿಳಿಸಿದ್ದಾರೆ. ಕೊಠಡಿಗೆ ಭೇಟಿ ನೀಡಿ, ಭಾಗಿಲು ಹೊಡೆದು ನೋಡಿದಾಗ ಸುಪ್ರಿಯಾ ಶವ ಪತ್ತೆಯಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯನಗರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/there-is-no-question-of-giving-up-even-an-inch-of-land-in-kannada-nadu-to-other-states-mla-gopalakrishna-belur/ https://kannadanewsnow.com/kannada/withdrawal-of-cases-against-kannada-activists-cm-siddaramaiah-announces/
ಮಂಗಳೂರು: ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂಪಾಯಿ ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಹಣ ವಂಚಕರ ಪಾಲಾಗದಂತೆ ತಡೆದ ಪೊಲೀಸರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಅಭಿನಂದಿಸಿದರು. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಡಿಸಿಪಿಗಳಾದ ಮಿಥುನ್ ಹಾಗೂ ರವಿಶಂಕರ್ ಅವರನ್ನು ಸಚಿವರು ಅಭಿನಂದಿಸಿದರು. ಬಳಿಕ ಪ್ರಕರಣದ ಬಗ್ಗೆ ಮಾಹಿತಿ ಪಡೆದ ಸಚಿವರು, ಹಿರಿಯ ನಾಗರಿಕರಿಗೆ ವಂಚನೆ ಆಗುವುದು ತಪ್ಪಿತು. ಉತ್ತಮ ಕೆಲಸ ಮಾಡಿದ ನಿಮ್ಮ ಸೇವೆ ಹೀಗೆ ಮುಂದುವರಿಯಲಿ ಎಂದು ಹೇಳಿದರು. ಈ ವೇಳೆ ಯುವ ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ ಉಪಸ್ಥಿತರಿದ್ದರು. https://kannadanewsnow.com/kannada/big-news-priority-given-to-teaching-kannada-in-karnatakas-madrasas-cms-announcement/ https://kannadanewsnow.com/kannada/there-is-no-question-of-giving-up-even-an-inch-of-land-in-kannada-nadu-to-other-states-mla-gopalakrishna-belur/














