Author: kannadanewsnow09

ಚಿತ್ರದುರ್ಗ: ಮುರುಘಾ ಶ್ರೀ 1 ಫೋಕ್ಸೋ ಕೇಸ್ ಗೆ ಮತ್ತೊಂದು ತಿರುವು ಪಡೆದಿದೆ. ಸಂತ್ರಸ್ತ ಬಾಲಕಿ ಮೇಲೆ ಒತ್ತಡ ಹಾಕ್ತಿದ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲೇ ಒಂದನೇ ಫೋಕ್ಸ್ ಕೇಸ್ ನ ಸಂತ್ರಸ್ತ ಬಾಲಕಿ ಚಿಕ್ಕಪ್ಪ ವಿರುದ್ದವೇ ಪೊಲೀಸರಿಗೆ ದೂರು ನೀಡಿದ್ದಾಳೆ. ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ಧದ ಒಂದನೇ ಪೋಕ್ಸೋ ಕೇಸ್ ಸಂಬಂಧದ ಸಂತ್ರಸ್ತ ಬಾಲಕಿ ಚಿಕ್ಕಪ್ಪನ ಮನೆಯಿಂದ ನಾಪತ್ತೆಯಾಗಿದ್ದಂತ ಆರೋಪ ಕೇಳಿ ಬಂದಿತ್ತು. ಆದ್ರೇ ಮನೆಯಲ್ಲಿನ ಕಿರುಕುಳ ತಾಳಲಾರದೇ, ಸಂತ್ರಸ್ತ ಬಾಲಕಿ ಮೈಸೂರಿನ ಒಡನಾಡಿ ಸಂಸ್ಥೆಗೆ ತೆರಳಿರೋದಾಗಿ ತಿಳಿದು ಬಂದಿದೆ. ಆದ್ರೇ ಮೇ.22ರಂದು ಚಿತ್ರದುರ್ಗದಲ್ಲಿ ಬಾಲಕಿಯ ಚಿಕ್ಕಪ್ಪ ಮನೆಯಿಂದ ಸಂತ್ರಸ್ತೆ ನಾಪತ್ತೆಯಾಗಿರೋದಾಗಿ ದೂರು ನೀಡಿದ್ದರು. ಹೀಗಾಗಿ ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಕೇಸ್ ಗೆ ಮತ್ತೊಂದು ತಿರುವು ಎನ್ನಲಾಗಿತ್ತು. ಆದ್ರೇ ಇಂದು ಮೈಸೂರಿನ ಒಡನಾಡಿ ಸಂಸ್ಥೆಗೆ ಸಂತ್ರಸ್ತ ಬಾಲಕಿ ತೆರಳಿದ್ದಾಳೆ ಎಂಬುದಾಗಿ ತಿಳಿದು ಬಂದಿದೆ. ಮನೆಯಲ್ಲಿ ದೈಹಿಕ & ಮಾನಸಿಕ ಹಿಂಸೆ ನೀಡುತ್ತಿದ್ದಾರೆಂದು ಹೇಳಿದ್ದಾಳೆ. ಒಡನಾಡಿ ಸಂಸ್ಥೆಯ ಜೊತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮುಂದೆ…

Read More

ಬೆಂಗಳೂರು: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಪೊಲೀಸ್ ಠಾಣೆಗೆ ನುಗ್ಗಿ ಪಿಎಸ್ಐಗೆ ಧಮ್ಕಿ ಹಾಕಿದ ಪ್ರಕರಣ ಸಂಬಂಧ, ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪೊಲೀಸರು 40 ಮಂದಿ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಬೆಳ್ತಂಗಡಿ ಠಾಣೆಗೆ ಅಕ್ರಮವಾಗಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂಬುದಾಗಿ ಆರೋಪಿಸಿ ಪಿಎಸ್ಐಗೆ ಧಮ್ಕಿ ಹಾಕಿದ್ದರು. ಈ ಸಂಬಂಧ ಶಾಸಕ ಹರೀಶ್ ಪೂಂಜಾ ಸೇರಿದಂತೆ 40 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಬೆಳ್ತಂಗಡಿ ಠಾಣೆಯ ಪೊಲೀಸರು 2 ಪ್ರತ್ಯೇಕ ಪ್ರಕರಣ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಶಾಸಕ ಹರೀಶ್ ಪೂಂಜಾ ಸೇರಿದಂತೆ 40 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. https://kannadanewsnow.com/kannada/sit-moves-hc-seeking-cancellation-of-bail-for-hd-revanna/ https://kannadanewsnow.com/kannada/delhi-court-denies-bail-to-umar-khalid-in-delhi-riots-conspiracy-case/

Read More

ಬೆಂಗಳೂರು: ಮೈಸೂರಿನ ಕೆ ಆರ್ ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣಗೆ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈಗ ಈ ಜಾಮೀನು ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಎಸ್ಐಟಿ ಅರ್ಜಿ ಸಲ್ಲಿಸಿದೆ. ಹೀಗಾಗಿ ಶಾಸಕ ಹೆಚ್.ಡಿ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾದಂತೆ ಆಗಿದೆ. ಮಹಿಳೆ ಅಪಹರಣ ಪ್ರಕರಣದಲ್ಲಿ ಜಾಮೀನು ಸೆಷನ್ಸ್ ಕೋರ್ಟ್ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನು ರದ್ದುಗೊಳಿಸುವಂತೆ ಎಸ್ಐಟಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಎಸ್ಐಟಿ ಶಾಸಕ ಹೆಚ್.ಡಿ ರೇವಣ್ಣ ಜಾಮೀನು ಅರ್ಜಿ ರದ್ದುಕೋರಿ ಸಲ್ಲಿಸಿರುವಂತ ಅರ್ಜಿಯನ್ನು ಹೈಕೋರ್ಟ್ ಮೇ.31ರಂದು ವಿಚಾರಣೆ ನಡೆಸೋ ಸಾಧ್ಯತೆ ಇದೆ. ಅಂದಹಾಗೇ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಬಂಧನಕ್ಕೆ ಒಳಗಾಗಿ, ಜೈಲು ಪಾಲಾಗಿದ್ದರು. ಈ ಬಳಿಕ ಅವರಿಗೆ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇದೀಗ ಜಾಮೀನು ರದ್ದು ಕೋರಿ ಹೈಕೋರ್ಟ್ ಗೆ ಎಸ್ಐಟಿ ಅರ್ಜಿ ಸಲ್ಲಿಸಿದೆ. https://kannadanewsnow.com/kannada/delhi-court-denies-bail-to-umar-khalid-in-delhi-riots-conspiracy-case/ https://kannadanewsnow.com/kannada/breaking-three-arrested-for-smearing-ink-on-veer-savarkar-flyover-signboard/

Read More

ಮಡಿಕೇರಿ: ಅಪ್ರಾಪ್ತ ಬಾಲಕಿಯ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇಂತಹ ಘಟನೆಗಳನ್ನು ನಾನು ಖಂಡಿಸುತ್ತೇನೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದರು. ಅಂದಹಾಗೇ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು.  ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿಯ ಮೇಲೆ ಕಳೆದ ಕೆಲ ತಿಂಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಇದೀಗ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ. ಈ ಪ್ರಕರದಲ್ಲಿ ಆರೋಪಿ ಶಿಕ್ಷಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಾಗಿ ಮಧು ಬಂಗಾರಪ್ಪ ಹೇಳಿದ್ದಾರೆ. https://kannadanewsnow.com/kannada/delhi-court-denies-bail-to-umar-khalid-in-delhi-riots-conspiracy-case/ https://kannadanewsnow.com/kannada/breaking-three-arrested-for-smearing-ink-on-veer-savarkar-flyover-signboard/

Read More

ಸಾಮಾನ್ಯ ಜನರಿಗೆ ಹತ್ತು ಬಾರಿ ಪ್ರಯತ್ನಿಸಿದರೆ ಒಮ್ಮೆ ಯಶಸ್ಸು ಸಿಗುತ್ತದೆ. ಜೀವನದಲ್ಲಿ ಬಹಳ ಬೇಗ ಪ್ರಗತಿ ಹೊಂದಲು. ಜೀವನದಲ್ಲಿ ಸೋಲು ಇರಬಾರದು. ಖ್ಯಾತಿಯ ಉತ್ತುಂಗಕ್ಕೆ ಹೋಗಲು. ಫೇಮಸ್ ಆಗಬೇಕು ಎನ್ನುವವರು ಹತ್ತು ಬಾರಿ ಪ್ರಯತ್ನಿಸಿದರೆ ಎಂಟು ಬಾರಿಯಾದರೂ ಯಶಸ್ವಿಯಾಗಬೇಕು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ…

Read More

ಚಿತ್ರದುರ್ಗ: ಜಿಲ್ಲೆಯ ಮುರುಘಾ ಮಠದ ಡಾ.ಶಿವಮೂರ್ತಿ ಶಿವಾಚಾರ್ಯರ ವಿರುದ್ಧದ ಪೋಕ್ಸೋ ಕೇಸ್ ಸಂಬಂಧ, ಸಂತ್ರಸ್ತೆಯಾಗಿದ್ದಂತ ಬಾಲಕಿ, ಇದೀಗ ಮನೆಯಿಂದ ನಾಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಮುರುಘಾ ಶ್ರೀ ಪೋಕ್ಸೋ ಕೇಸ್ ಪ್ರಕರಣದ ಸಂತ್ರಸ್ತ ಬಾಲಕಿ ಚಿಕ್ಕಪ್ಪನ ಮನೆಯಿಂದ ನಾಪತ್ತೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಮಹಿಳಾ ಠಾಣೆಗೆ ಸಂತ್ರಸ್ತೆ ಬಾಲಕಿಯ ಚಿಕ್ಕಪ್ಪ ದೂರು ನೀಡಿದ್ದಾರೆ. ಮೇ.24ರಂದು ಠಾಣೆಯಲ್ಲಿ ನಾಪತ್ತೆ ಕೇಸ್ ಅನ್ನು ಅವರ ಚಿಕ್ಕಪ್ಪ ದಾಖಲಿಸಿದ್ದಾರೆ. ಮೈಸೂರಿನ ಒಡನಾಡಿ ಸಂಸ್ಥೆಯಿಂದ ಸಂತ್ರಸ್ತೆ ಚಿಕ್ಕಪ್ಪ ಮುರುಘಾ ಶ್ರೀಗಳ ಬೆಂಬಲಿಗರಿಂದ ಒತ್ತಡಕ್ಕೆ ಒಳಗಾಗಿದ್ದಾರೆ. ಸಂತ್ರಸ್ತ ಬಾಲಕಿಗೆ ಒತ್ತಡ ಹೇರಲಾಗಿದೆ. ಈ ಬಗ್ಗೆ ಪೋಲೀಸರು, ಸಿಡಬ್ಲ್ಯೂಸಿ ಎದುರು ಬಾಲಕಿ ಅಳಲು ತೋಡಿಕೊಂಡಿದ್ದಾರೆ. ಬಾಲಕಿ ಅಳಲು ತೋಡಿಕೊಂಡಿದ್ದಾರೆಂದು ಒಡನಾಡಿ ಸಂಸ್ಥೆಯವರು ಮಾಹಿತಿ ಇದೆ ಎಂದಿದ್ದಾರೆ ಎನ್ನಲಾಗಿದೆ. https://kannadanewsnow.com/kannada/bbmp-cancels-contract-for-recruitment-of-school-college-teachers-state-govt/ https://kannadanewsnow.com/kannada/delhi-court-denies-bail-to-umar-khalid-in-delhi-riots-conspiracy-case/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಬಿಎಂಪಿ ಶಾಲಾ, ಕಾಲೇಜು ಶಿಕ್ಷಕರ ನೇಮಕಾತಿ ಗುತ್ತಿಗೆಯನ್ನು ರದ್ದುಗೊಳಿಸಿ ಆದೇಶಿಸಿದೆ. ಈ ಮೂಲಕ ತೀವ್ರ ಮುಜುಗರಕ್ಕೆ ಕಾರಣವಾಗಿದ್ದಂತ ಬಿಬಿಎಂಪಿ ಶಿಕ್ಷಕರ ನೇಮಕಾತಿ ಟೆಂಡರ್ ರದ್ದುಗೊಳಿಸಿ ಆದೇಶಿಸಿದೆ. ಮಾಜಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಈ ಹಿಂದೆಯೂ ಈ ವಿಚಾರವನ್ನು ರಾಜ್ಯದ ಉಪಮುಖ್ಯಮಂತ್ರಿಗಳ ಗಮನಕ್ಕೆ ಹಾಗೂ ಬಿಬಿಎಂಪಿಯ ಮುಖ್ಯ ಆಯುಕ್ತರ ಗಮನಕ್ಕೆ ತಂದಿದ್ದೆ. ಆಗ ಅದನ್ನು ಪರಿಶೀಲಿಸುವುದಾಗಿ ಹೇಳಿ ಪ್ರಕ್ರಿಯೆಯನ್ನು ಸ್ಥಗಿತ ಸ್ಥಗಿತಗೊಳಿಸಲಾಯಿತು ಎಂದಿದ್ದರು. ಇದೀಗ ಮತ್ತೆ ಅದೇ ಹುಚ್ಚು ಅಥವಾ ಹಾಸ್ಯಾಸ್ಪದ ಪ್ರಯತ್ನ. * ಬಿಬಿಎಂಪಿ ಹೊರ ಗುತ್ತಿಗೆ ಶಿಕ್ಷಕರ ಸೇವಾ ಪೂರೈಕೆ ಮಾಡಲು 3 ಸೆಕ್ಯೂರಿಟಿ ಏಜೆನ್ಸಿ ಪರವಾನಗಿ. * ಶಿಕ್ಷಕರ ನೇಮಕಾತಿ ಮತ್ತು ಸೇವಾ ಪೂರೈಕೆ ಮಾಡಲು ಸೆಕ್ಯೂರಿಟಿ ಏಜೆನ್ಸಿ ಗುತ್ತಿಗೆ, ಎಂತಹ ಸ್ಥಿತಿ ತಲುಪಿತು ಶಿಕ್ಷಣ ಕ್ಷೇತ್ರ. * ಬಿಬಿಎಂಪಿ ಹೊರಗುತ್ತಿಗೆ ಶಿಕ್ಷಕರ ಸೇವಾ ಪೂರೈಕೆ ಮಾಡಲು ಮೂರು ಸೆಕ್ಯೂರಿಟಿ ಏಜೆನ್ಸಿ ಗುತ್ತಿಗೆ ನೀಡಿದೆ. *…

Read More

ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತದೆ. ಈ ಹುದ್ದೆಗಳ ಭರ್ತಿಗೆ ಸರ್ಕಾರ ಕರಡು ಪ್ರಸ್ತಾವನೆ ಸಿದ್ಧಗೊಂಡಿದೆ ಎಂಬುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡು ವರ್ಷ ತುಂಬಿದ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಅವರು, ಅರಣ್ಯಇಲಾಖೆಯಲ್ಲಿ ಸುಮಾರು 6 ಸಾವಿರ ಹುದ್ದೆಗಳು ಖಾಲಿ ಇದ್ದು, ಇವುಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಅರಣ್ಯ ವೀಕ್ಷಕರ 310 ಹುದ್ದೆಗಳ ನೇಮಕಾತಿಗೆ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ಪೂರ್ಣವಾಗಿದ್ದು, ನೀತಿ ಸಂಹಿತೆ ತೆರವಾದ ಬಳಿಕ ನೇಮಕಾತಿ ಪತ್ರಗಳನ್ನು ವಿತರಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು. ಇದರ ಜೊತೆಗೆ 540 ಅರಣ್ಯ ರಕ್ಷಕರ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಜೊತೆಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆಯ ಪೂರ್ವಾನುಮತಿಯ ಅವಶ್ಯಕತೆ ಇಲ. ಹೀಗಾಗಿ…

Read More

ಬೆಂಗಳೂರು : ಕರ್ನಾಟಕ ಅರಣ್ಯ ಇಲಾಖೆ ತನಗೆ ನೀಡಲಾದ ವಾರ್ಷಿಕ ಅನುದಾನವನ್ನು ಸಮರ್ಥವಾಗಿ ಬಳಸಿಕೊಂಡಿರುವುದೇ ಅಲ್ಲದೆ, ರಾಜ್ಯದ ಅರಣ್ಯ ವಲಯ ವ್ಯಾಪ್ತಿಯ ಜೊತೆಗೆ ತನ್ನ ಆದಾಯವನ್ನೂ ಹೆಚ್ಚಿಸಿಕೊಂಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡು ವರ್ಷ ತುಂಬಿದ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಅವರು, 2019-20ರ ಸಾಲಿನಲ್ಲಿದ್ದ ಅರಣ್ಯ ಇಲಾಖೆಯ ರಾಜಸ್ವ ಸಂಗ್ರಹಣೆ 263.41 ಕೋಟಿಯಿಂದ 2023-24ರ ಸಾಲಿನಲ್ಲಿ 417.84 ಕೋಟಿ ರೂ.ಗೆ ಹೆಚ್ಚಳವಾಗಿದೆ. 2023-24ನೇ ಸಾಲಿನಲ್ಲಿ ಅಧಿಸೂಚಿತ ಕಾಯ್ದಿಟ್ಟ ಅರಣ್ಯ (ಸೆಕ್ಷನ್ 17) ವ್ಯಾಪ್ತಿ 3395.73 ಹೆಕ್ಟೇರ್ ಅಂದರೆ ಸುಮಾರು 8300 ಎಕರೆಯಷ್ಟು ಹೆಚ್ಚಳವಾಗಿದ್ದರೆ, ರಕ್ಷಿತ ಅರಣ್ಯ ಪ್ರದೇಶ (ಸೆಕ್ಷನ್ 33) 184.52 ಹೆಕ್ಟೇರ್ ಅಂದರೆ 456 ಎಕರೆ ಹೆಚ್ಚಳವಾಗಿದೆ ಎಂದರು. 2600 ಎಕರೆ ಅರಣ್ಯ ಒತ್ತುವರಿ ತೆರವು ರಾಜ್ಯದಲ್ಲಿ ಸುಮಾರು 2 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, 3 ಎಕರೆಗಿಂತಲೂ…

Read More

ಶಿವಮೊಗ್ಗ : ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ ಸಿಪೆಟ್ ಸಂಸ್ಥೆಯು ದೇಶದ ಪಾಲಿಮರ್/ಪೆಟ್ರೋಕೆಮಿಕಲ್ಸ್/ ಪ್ಲಾಸ್ಟಿಕ್ಸ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದ್ದು, 2024-25ನೇ ಸಾಲಿನ ಡಿಪ್ಲೋಮಾ ಇನ್ ಪ್ಲಾಸ್ಟಿಕ್ ಟೆಕ್ನಾಲಿಜಿ, ಡಿಪ್ಲೋಮಾ ಇನ್ ಪ್ಲಾಸ್ಟಿಕ್ ಮೌಲ್ಡ್ ಟೆಕ್ನಾಲಿಜಿ 3 ವರ್ಷ ಕೋರ್ಸ್‍ಗಳ ಪ್ರವೇಶಕ್ಕೆ ಆನ್ ಲೈನ್ /ಆಫ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ತೇರ್ಗಡಿಯಾದವರು ವೆಬ್‍ಸೈಟ್ www.cipet.gov.in ರಲ್ಲಿ ಮೇ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸಿಪೆಟ್ ಸಂಸ್ಥೆಯ ನಿರ್ದೇಶಕ ಆರ್.ಟಿ. ನಾಗರಳ್ಳಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0821-2510618/9480253024/9791431827/ 9466585669 ಗಳನ್ನು ಸಂಪರ್ಕಿಸುವುದು. https://kannadanewsnow.com/kannada/delhi-court-denies-bail-to-umar-khalid-in-delhi-riots-conspiracy-case/ https://kannadanewsnow.com/kannada/breaking-three-arrested-for-smearing-ink-on-veer-savarkar-flyover-signboard/

Read More