Author: kannadanewsnow09

ಬೆಂಗಳೂರು: ನಗರದಲ್ಲಿ ಚಾಕುವಿನಿಂದ ಕುತ್ತಿಗೆ ಕೊಯ್ದು ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವಂತ ಘಟನೆ ನಡೆದಿದೆ. ಅಕ್ರಮ ಸಂಬಂಧದ ಕಾರಣದಿಂದಾಗಿ ಪತಿ ಪತ್ನಿಯನ್ನು ಹತ್ಯೆ ಮಾಡಿರೋದಾಗಿ ಹೇಳಲಾಗುತ್ತಿದೆ. ಬೆಂಗಳೂರಿನ ದೊಡ್ಡ ತೋಗೂರು ಬಳಿಯ ಪ್ರಗತಿ ನಗರದಲ್ಲಿ ಇಂದು ಬೆಚ್ಚಿ ಬೀಳಿಸು ಘಟನೆ ನಡೆದಿದೆ. ಪತಿಯೊಬ್ಬ ತನ್ನ ಪತ್ನಿಯ ಕುತ್ತಿಗೆಯನ್ನು ಕೊಯ್ದು ಬರ್ಬರವಾಗಿ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ದೊಡ್ಡ ತೋಗೂರು ಬಳಿಯ ಪ್ರಗತಿ ನಗರದ ಶಾರದಾ(35) ಎಂಬುವರನ್ನು ಪತಿ ಕೃಷ್ಣ ಚಾಕುವಿನಿಂದ ಕುತ್ತಿಗೆ ಕೊಯ್ದು ಹತ್ಯೆ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯ ತೋಗೂರು ಬಳಿಯ ಪ್ರಗತಿ ನಗರದಲ್ಲಿನ ಈ ಹತ್ಯೆ ಕಂಡು ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ನಡು ರಸ್ತೆಯಲ್ಲೇ ಪತ್ನಿ ಶಾರದ(35) ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದು, ಪತಿ ಕೃಷ್ಣ ಸ್ಥಳದಿಂದ ಪರಾರಿಯಾಗಿದ್ದಾನೆ. ಅಕ್ರಮ ಸಂಬಂಧದ ಹಿನ್ನಲೆಯಲ್ಲಿ ಶಾರದಾ ಕೊಲೆ ಮಾಡಿರುವಂತ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/pagal-lover-attacks-woman-who-refused-to-fall-in-love-with-her-by-throwing-chilli-powder/ https://kannadanewsnow.com/kannada/bescom-launches-whatsapp-helpline-to-lodge-complaints-of-power-issues/

Read More

ಬೆಳಗಾವಿ: ಜಿಲ್ಲೆಯಲ್ಲಿ ವಿವಾಹಿತ ಮಹಿಳೆಯೊಬ್ಬರು ಪ್ರೀತಿಸಲು ನಿರಾಕರಿಸಿದ ಕಾರಣಕ್ಕೆ ಆಕೆಯ ಮೇಲೆ ಖಾರದಪುಡಿ ಎರಡಿ, ಕೊಡಲಿಯಿಂದ ಪಾಗಲ್ ಪ್ರೇಮಿಯೊಬ್ಬ ಹಲ್ಲೆ ನಡೆಸಿದಂತ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ಇದ್ದಲಹೊಂಡ ಗ್ರಾಮದ ಲಗಮಪ್ಪ ಪೂಜಾರಿ ಎಂಬಾತ ಅದೇ ಗ್ರಾಮದ ವಿವಾಹಿತ ಮಹಿಳೆ ಕಾಜಲ್ ಪೂಜಾರಿಯನ್ನು ಪ್ರೀತಿಸುವಂತೆ ಹಿಂದೆ ಬಿದ್ದಿದ್ದನು. ಈ ಪ್ರೀತಿಯನ್ನು ಮಹಿಳೆ ನಿರಾಕರಿಸಿದ್ದರು. ಇದೇ ಸಿಟ್ಟಿನಲ್ಲಿ ಇಂದು ಗಂಡ ಇಲ್ಲದ ಸಂದರ್ಭದಲ್ಲಿ ಮನೆಗೆ ನುಗ್ಗಿದಂತ ಪಾಗಲ್ ಪ್ರೇಮಿ ಲಗಮಪ್ಪ ಪೂಜಾರಿ, ವಿವಾಹಿತ ಮಹಿಳೆ ಕಾಜಲ್ ಪೂಜಾರಿಯನ್ನು ಪ್ರೀತಿಸುವಂತೆ ಒತ್ತಾಯಿಸಿದ್ದಾನೆ. 10 ಲಕ್ಷ ರೂಪಾಯಿ ಕೊಡುತ್ತೇನೆ. ಓಡಿ ಹೋಗೋಣ ಬಾ ಅಂತ ಕರೆದಿದ್ದಾನೆ. ಲಗಮಪ್ಪನ ಈ ಕರೆಗೆ ಕಾಜಲ್ ಒಪ್ಪಿಕೊಂಡಿಲ್ಲ. ಇದರಿಂದ ಸಿಟ್ಟಾದಂತ ಲಗಮಪ್ಪ ಆಕೆಯ ಮೇಲೆ ಖಾರದಪುಡಿ ಎರೆಚಿ ಕೊಡಲಿಯಿಂದ ಹಲ್ಲೆ ಮಾಡಿದ್ದಾನೆ. ಈ ಜಗಳ ಕೇಳಿ ಅಕ್ಕಪಕ್ಕದ ಮನೆಯವರಾದಂತ ಮಲ್ಲೇಶ ಪೂಜಾರಿ ಹಾಗೂ ಯಲ್ಲಪ್ಪ ಕರಿಕಟ್ಟಿ ಎಂಬುವರು ಹಲ್ಲೆ ತಡೆಯೋದಕ್ಕೆ ಯತ್ನಿಸಿದ್ದಾರೆ. ಹಲ್ಲೆ ತಡೆಯಲು ಯತ್ನಿಸಿದಂತ…

Read More

ಬೀದರ್: ಜಿಲ್ಲೆಯಲ್ಲಿ ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಗ್ರಾಮ ಪಂಚಾಯ್ತಿ ಸದಸ್ಯ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೀದರ್ ನ ಎಸ್ ಕೆ ಡಾಬಾದಲ್ಲಿ ಊಟ ಮಾಡಲು ಕುಳಿತಿದ್ದಂತ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಗ್ರಾಮ ಪಂಚಾಯ್ತಿ ಸದಸ್ಯ ವೈಜಿನಾಥ ದತ್ತಾತ್ರೇಯ ಕೆಲಬಾ(49) ಎಂಬಾತನ ಮೇಲೆ ಇಬ್ಬರು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮಚ್ಚಿನಿಂದ ಕೊಚ್ಚಿ ಕೊಲೆಗೆ ಯತ್ನಿಸಿದ್ದಾರೆ. ದುಷ್ಕರ್ಮಿಗಳಿಂದ ತಪ್ಪಿಸಿಕೊಳ್ಳೋದಕ್ಕೆ ಡಾಬಾದಿಂದ ಹೊರ ಬಂದರೂ ನಡು ರಸ್ತೆಯಲ್ಲೂ ಬಿಡದೇ ಇಬ್ಬರು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈ ಸಂಬಂಧ ಬೀದರ್ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂದಹಾಗೇ ಮೃತ ಗ್ರಾಮ ಪಂಚಾಯ್ತಿ ಸದಸ್ಯ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ವೈಜಿನಾಥ್ ದತ್ತಾತ್ರೇಯ ಕೆಲಬಾ ಅವರು ಬೀದರ್ ತಾಲ್ಲೂಕಿನ ಹೊನ್ನಿಕೇರಿ ಗ್ರಾಮದ ನಿವಾಸಿಯಾಗಿದ್ದಾರೆ. https://kannadanewsnow.com/kannada/karnataka-sslc-exam-1-2025-subject-wise-answer-key-released/ https://kannadanewsnow.com/kannada/bescom-launches-whatsapp-helpline-to-lodge-complaints-of-power-issues/

Read More

ಬೆಂಗಳೂರು: ರಾಜ್ಯ ಸರ್ಕಾರದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸಿಕೊಳ್ಳುವಂತೆ ಅಧಿಕೃತವಾಗಿ ಸರ್ಕಾರ ಗೆಜೆಟ್ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಮೂಲಕ ಹೊರಗುತ್ತಿಗೆಯಲ್ಲಿ ಮೀಸಲಾತಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯಪತ್ರಿಕೆಯನ್ನು ಹೊರಡಿಸಲಾಗಿದೆ. ಅದರಲ್ಲಿ ರಾಜ್ಯ ಸರ್ಕಾರದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುವ ಕುರಿತ ದಿನಾಂಕ:20.05.2024ರ ಸುತ್ತೋಲೆಯಲ್ಲಿ ಕ್ರಮ ಸಂಖ್ಯೆ 60 ಬದಲಾಗಿ ಈ ಕೆಳಕಂಡಂತೆ ಓದಿಕೊಳ್ಳತಕ್ಕದ್ದು ಎಂದಿದೆ. ಕ್ರಮ ಸಂಖ್ಯೆ -06ರಲ್ಲಿ ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ನೀತಿಯನ್ನು ಜಾರಿಗೊಳಿಸತಕ್ಕದ್ದು ಎಂಬುದಾಗಿ ತಿಳಿಸಲಾಗಿತ್ತು. ಪರಿಷ್ಕೃತ ಕಂಡಿಕೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ಅಧಿನಿಯಮ 2024ರ ಸೆಕ್ಷನ್ 4ರ ಸಬ್ ಸೆಕ್ಷನ್ (5) ರಾಜ್ಯ ಸಿವಿಲ್ ಸೇವೆಗಳ ವೃಂದದಲ್ಲಿನ ಅಥವಾ ಸರ್ಕಾರಿ ವಲಯದ ಸಂಸ್ಥೆಗಳಲ್ಲಿನ…

Read More

ನವದೆಹಲಿ: ಶುಕ್ರವಾರ ಸಂಜೆ ನೇಪಾಳದಲ್ಲಿ 5.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಉತ್ತರ ಭಾರತದ ಕೆಲವು ಭಾಗಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ ಎಂದು ANI ವರದಿ ಮಾಡಿದೆ. ಮ್ಯಾನ್ಮಾರ್ ಮತ್ತು ಥೈಲ್ಯಾಂಡ್‌ನಲ್ಲಿ ಸಂಭವಿಸಿದ ಪ್ರಮುಖ ಭೂಕಂಪದ ಕೆಲವೇ ದಿನಗಳ ನಂತರ, ಶುಕ್ರವಾರ ನೇಪಾಳದಲ್ಲಿ 5.0 ತೀವ್ರತೆಯ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ( National Centre for Seismology ) ಪ್ರಕಾರ, ನೇಪಾಳ ಭೂಕಂಪದ ಕಂಪನವು ದೆಹಲಿ-ಎನ್‌ಸಿಆರ್ ಸೇರಿದಂತೆ ಉತ್ತರ ಭಾರತದಾಧ್ಯಂತ ಸಹ ಕಂಪನದ ಅನುಭವವನ್ನು ಉಂಟು ಮಾಡಿದೆ ಎಂದಿದೆ. ಭೂಕಂಪನವು ಸಂಜೆ 7:52 ಕ್ಕೆ (ಸ್ಥಳೀಯ ಸಮಯ) ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ವರದಿ ಮಾಡಿದೆ. ಇದರ ಕೇಂದ್ರಬಿಂದು 20 ಕಿಲೋಮೀಟರ್ ಆಳದಲ್ಲಿದೆ. https://TWITTER.com/ANI/status/1908167249556332613 https://kannadanewsnow.com/kannada/bescom-launches-whatsapp-helpline-to-lodge-complaints-of-power-issues/ https://kannadanewsnow.com/kannada/govt-to-give-another-good-news-to-state-government-employees-soon/

Read More

ಶಿವಮೊಗ್ಗ: ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಕುಡಿಯುವ ಉದ್ದೇಶಕ್ಕಾಗಿ ನೀರನ್ನು ಏಪ್ರಿಲ್ 5ರಿಂದ 8ರವರೆಗೆ ಬಿಡುಗಡೆ ಮಾಡಲಾಗುತ್ತಿದೆ. ಈ ಸಂಬಂಧ ಸದಸ್ಯ ಕಾರ್ಯದರ್ಶಿಗಳು, ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ, ಹಾಗೂ ಅಧೀಕ್ಷಕ ಅಭಿಯಂತರರು, ಕ.ನೀ.ನಿ.ನಿ., ಭದ್ರಾ ಯೋಜನಾ ವೃತ್ತ, ಬಿ.ಆರ್.ಪ್ರಾಜೆಕ್ಟ್ ಆದೇಶ ಹೊರಡಿಸಿದ್ದು, ಹಾವೇರಿ ಜಿಲ್ಲಾ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಹಾವೇರಿ, ರಾಣೇಬೆನ್ನೂರು, ಬ್ಯಾಡಗಿ, ಮತ್ತು ಹಿರೇಕೆರೂರು ಪಟ್ಟಣಗಳಿಗೆ ಅಲ್ಲದೇ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಹಾಗೂ ಗದಗ ಜಿಲ್ಲೆಗೆ ಬರುವ ಗದಗ, ಲಕ್ಷ್ಮೀಶ್ವರ, ಮುಂಡರಗಿ ಮತ್ತು ಶಿರಹಟ್ಟಿ ತಾಲ್ಲೂಕುಗಳ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ಉದ್ದೇಶಕ್ಕಾಗಿ ದಿನಾಂಕ 05-04-2025 ರಿಂದ 08-04-2025 ರವರೆಗೆ ಪ್ರತಿ ನಿತ್ಯ 2000 ಕ್ಯೂಸೆಕ್ಸ್‌ ನಂತೆ ಒಟ್ಟು 4 ದಿನಗಳು 8000 ಕ್ಯೂಸೆಕ್ಸ್ ನೀರನ್ನು ತುಂಗಭದ್ರಾ ನದಿಗೆ ಹರಿಸಲಾಗುವುದು ಎಂದಿದ್ದಾರೆ. ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲಿ, ರೈತರುಗಳು ಜಾನುವಾರು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ಮಾಡುವುನ್ನು ನಿಷೇಧಿಸಲಾಗಿದೆ. ನದಿಯಿಂದ ಅನಧಿಕೃತವಾಗಿ ವಿದ್ಯುತ್ ಪಂಪ್/ಡೀಸೆಲ್…

Read More

ನವದೆಹಲಿ: ಮ್ಯಾನ್ಮಾರ್, ಬ್ಯಾಂಕಾಕ್ ಬಳಿಕ ನೇಪಾಳದಲ್ಲಿ 5.0 ತೀವ್ರತೆಯಲ್ಲಿ ಭೂಕಂಪನ ಉಂಟಾಗಿದೆ. ಈ ಕಾರಣದಿಂದ ಭಾರತದ ದೆಹಲಿ-ಎನ್ ಸಿ ಆರ್ ವ್ಯಾಪ್ತಿಯಲ್ಲೂ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದೆ. ನೇಪಾಳದಲ್ಲಿ ಶುಕ್ರವಾರ ಸಂಜೆ 5.0 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ದೆಹಲಿ-ಎನ್‌ಸಿಆರ್‌ನಲ್ಲಿ ಕಂಪನದ ಅನುಭವವಾಗಿದೆ. ಇದರಿಂದಾಗಿ ಬೆಚ್ಚಿ ಬಿದ್ದಿರುವಂತ ಜನರು, ಮನೆಯಿಂದ ಹೊರ ಓಡಿ ಬಂದು ಕೆಲ ಕಾಲ ರಸ್ತೆಯಲ್ಲೇ ಕಾಲ ಕಳೆಯುವಂತೆ ಆಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಭಾರತೀಯ ಪ್ರಕೃತಿ ವಿಕೋಪನ ಇಲಾಖೆಯು, ನೇಪಾಳದಲ್ಲಿ ರಿಕ್ಟರ್ ಮಾಪಕದಲ್ಲಿ 5.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಉತ್ತರ ಭಾರತದಲ್ಲಿ ಲಘು ಭೂಕಂಪನದ ಅನುಭವವಾಗಿದೆ ಎಂದಿದೆ. https://twitter.com/ANI/status/1908167249556332613 https://kannadanewsnow.com/kannada/bjp-worker-vinays-suicide-case-r-ashoka-demands-inclusion-of-mlas-name-in-fir/ https://kannadanewsnow.com/kannada/sc-refuses-to-quash-summons-issued-to-rahul-gandhi-for-derogatory-remarks-against-savarkar/

Read More

ಬೆಂಗಳೂರು: ‘ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಡೆತ್‍ನೋಟಿನಲ್ಲಿ ಇರುವ ಎಲ್ಲರ ಹೆಸರನ್ನೂ ಎಫ್‍ಐಆರ್‍ನಲ್ಲಿ ಸೇರಿಸಬೇಕು’ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ಆಗ್ರಹಿಸಿದ್ದಾರೆ. ‘ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಕೊಡಗಿಗೆ ಭೇಟಿ ಕೊಡಲಿದ್ದು, ನಾಳೆ ಅಲ್ಲಿ ಧರಣಿ ಮುಂದುವರೆಸಲಿದ್ದೇವೆ’ ಎಂದು ಪ್ರಕಟಿಸಿದ್ದಾರೆ. ಅವರು ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ಎಫ್‍ಐಆರ್‍ನಲ್ಲಿ ಒಂದೇ ಒಂದು ಹೆಸರನ್ನು ಬರೆದಿದ್ದಾರೆ. ಇನ್ನೂ ಎರಡು ಹೆಸರು ಸೇರಿಸಲು ಒತ್ತಾಯಿಸಿದ್ದೇವೆ ಎಂದು ತಿಳಿಸಿದರು. ನ್ಯಾಯ ಸಿಗುವವರೆಗೆ ಹೋರಾಟ ಮುಂದುವರೆಯಲಿದೆ ಎಂದರು. ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ‘ಉದ್ದೇಶಪೂರ್ವಕವಾಗಿ ಶಾಸಕರಾದ ಪೊನ್ನಣ್ಣ, ಮಂಥರ್ ಗೌಡ ಇವರಿಬ್ಬರ ಹೆಸರನ್ನು ಎಫ್‍ಐಆರ್‍ನಲ್ಲಿ ಸೇರಿಸಿಲ್ಲ’ ಎಂದು ಆಕ್ಷೇಪಿಸಿದರು. ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಪಕ್ಷದ ಮುಖಂಡರು ಹಾಜರಿದ್ದರು. ನಾಳೆ ರಾಜ್ಯಾಧ್ಯಕ್ಷರು ಕೊಡಗಿನಲ್ಲಿ ಅಂತ್ಯಸಂಸ್ಕಾರದಲ್ಲಿ ಹಾಗೂ ಹೋರಾಟದಲ್ಲಿ ಪಾಲ್ಗೊಳ್ಳುವರು ಎಂದು ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ತಿಳಿಸಿದರು. https://kannadanewsnow.com/kannada/ishwar-khandre-meets-union-minister-bhupendra-yadav-seeks-funds-for-various-development-projects/ https://kannadanewsnow.com/kannada/sc-refuses-to-quash-summons-issued-to-rahul-gandhi-for-derogatory-remarks-against-savarkar/ https://kannadanewsnow.com/kannada/home-minister-g-parameshwara-says-action-will-be-taken-after-taking-information-on-mla-shivaraj-patils-location-track-allegations/

Read More

ನವದೆಹಲಿ : ಮಾನವ-ಆನೆ ಸಂಘರ್ಷ ತಡೆಗೆ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲು, ಸ್ವಯಂ ಪ್ರೇರಿತವಾಗಿ ಮುಂದೆ ಬರುವ ಅರಣ್ಯವಾಸಿಗಳ ಸ್ಥಳಾಂತರಕ್ಕೆ ಕಾಂಪಾ ನಿಧಿಯಿಂದ 800 ಕೋಟಿ ರೂ. ಮಂಜೂರು ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕೇಂದ್ರಕ್ಕೆ ಬೇಡಿಕೆ ಸಲ್ಲಿಸಿದ್ದಾರೆ. ದೆಹಲಿಯಲ್ಲಿಂದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಖಂಡ್ರೆ, ಪರಿಹಾರಾತ್ಮಕ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕಾಂಪಾ)ದಡಿ ರಾಜ್ಯಕ್ಕೆ ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಮನವಿ ಪತ್ರ ಸಲ್ಲಿಸಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ರಾಜ್ಯದಲ್ಲಿ 6395 ಆನೆಗಳಿದ್ದು, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಕಾಫಿ ತೋಟಗಳಲ್ಲಿ ನೂರಾರು ಆನೆಗಳಿವೆ. ಇವುಗಳ ದಾಳಿಯಿಂದ ಸಾವು ನೋವು ಸಂಭವಿಸುತ್ತಿದೆ. ಹೀಗಾಗಿ ಕಾಡಿನಿಂದ ನಾಡಿಗೆ ಆನೆಗಳು ಬಾರದಂತೆ ನಿಯಂತ್ರಿಸಲು ಈಗಾಗಲೇ .393 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಿದ್ದು, ಪ್ರಸ್ತುತ 200 ಕೋಟಿ…

Read More

ಬೆಂಗಳೂರು: ‘ರಾಜ್ಯದಲ್ಲಿ ಇಂಥ ಪೊಲೀಸ್ ಬೇಜವಾಬ್ದಾರಿಯನ್ನು ನಾವು ಯಾವತ್ತೂ ಕಂಡಿಲ್ಲ’ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ. ‘ಶಾಸಕರಾದ ಪೊನ್ನಣ್ಣ, ಮಂಥರ್ ಗೌಡ ಇವರಿಬ್ಬರ ಹೆಸರನ್ನು ಎಫ್‍ಐಆರ್‍ನಲ್ಲಿ ಸೇರಿಸಬೇಕು’ ಎಂದು ಆಗ್ರಹಿಸಿದರು. ಇದರ ಹಿಂದೆ ಇರುವರೆನ್ನಲಾದ ಕೊಡಗಿನ ಎಸ್ಪಿಯನ್ನು ಸಸ್ಪೆಂಡ್ ಮಾಡಿ ಎಂದು ಒತ್ತಾಯಿಸಿದರು. ಮಾಧ್ಯಮಗಳ ಜೊತೆ ಇಂದು ಸಂಜೆ ಮಾತನಾಡಿದ ಅವರು, ‘ಮುಖ್ಯಮಂತ್ರಿಗಳೇ ನಮ್ಮ ಕಾರ್ಯಕರ್ತರನ್ನು ಈ ರೀತಿ ಮಾಡುವುದಾದರೆ ನಾವು ನಮ್ಮ ತೀರ್ಮಾನ ಮಾಡಬೇಕಾಗುತ್ತದೆ. ನಾವೂ ಅಧಿಕಾರ ನೋಡಿದ್ದೇವೆ. ಈ ಅಧಿಕಾರ ಕೊಟ್ಟವರು ಅದನ್ನು ಕಿತ್ತುಕೊಳ್ಳುವ ಕಾಲ ಬರುತ್ತದೆ’ ಎಂದು ಎಚ್ಚರಿಸಿದರು. ‘ದೂರಿನಲ್ಲಿ ಇರುವ ಇತರ ಹೆಸರುಗಳನ್ನು ಸೇರಿಸದಿದ್ದರೆ ಶವ ಮೇಲೆತ್ತಲು ಬಿಡುವುದಿಲ್ಲ’ ಎಂದು ತಿಳಿಸಿದರು. ರಾಜ್ಯಾಧ್ಯಕ್ಷ ವಿಜಯೇಂದ್ರ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೂ ಆಸ್ಪತ್ರೆಗೆ ಬರಲಿದ್ದಾರೆ ಎಂದು ಪ್ರಕಟಿಸಿದರು. ‘ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಸಾವಿಗೆ ಕಾರಣವನ್ನು ಅವರು ಡೆತ್ ನೋಟಿನಲ್ಲಿ ಬರೆದಿದ್ದಾರೆ. ನಾವು ಬೆಳಿಗ್ಗೆಯಿಂದ ಕಾಯುತ್ತಿದ್ದೇವೆ. ವಿಪಕ್ಷ ನಾಯಕ…

Read More