Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಾಡಿನ ಅದಿ ದೇವತೆ ಚಾಮುಂಡೇಶ್ವರಿ ಚಿತ್ರವನ್ನು ಬಳಸಿಕೊಂಡು ಜಾಹೀರಾತು ನೀಡಿದ್ದು ತಪ್ಪು. ಕರ್ನಾಟಕದಲ್ಲಿ ದುಷ್ಟ ಶಕ್ತಿಗಳು ಯಾರು ಅಂದ್ರೆ ಅದು ಸಿದ್ಧರಾಮಯ್ಯ. ಅವರಿಂದಲೇ ದುಷ್ಟ ಶಕ್ತಿಗಳ ಸಂಹಾರ ಶುರುವಾಗಲಿ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ನಗರದಲ್ಲಿ ಮಾತನಾಡಿದಂತ ಅವರು, ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ, ಗಲಭೆ ಮಾಡಿದವರು ಹಾಗೂ ಕ್ರಿಮಿನಲ್ ಗಳ ಮೇಲೆ ಸರ್ಕಾರ ಪ್ರಕರಣ ದಾಖಲಿಸಿತ್ತು. ಈಗ ಒಂದು ಸಮುದಾಯವನ್ನು ಓಲೈಕೆ ಮಾಡೋ ಕಾರಣದಿಂದಾಗಿ ಎಲ್ಲಾ ಕೇಸ್ ವಾಪಾಸ್ ಪಡೆದಿದ್ದಾರೆ. ಇದು ರಾಜ್ಯ ಸರ್ಕಾರ ಮಾಡಿದಂತ ಅಕ್ಷಮ್ಯ ಅಪರಾಧ ಎಂಬುದಾಗಿ ಗುಡುಗಿದರು. ಶಿವಮೊಗ್ಗ, ಉಡುಪಿ, ಮಂಗಳೂರು ಹಿಂದೂ ಕಾರ್ಯಕರ್ತರ ಮೇಲೆ ಯಾಕೆ ದಾಖಲಿಸಿದ್ದಂತ ಕೇಸ್ ವಾಪಾಸ್ ಪಡೆದಿಲ್ಲ? ಅವರು ಕ್ರಿಮಿನಲ್ ಗಳು, ಇವರು ಕ್ರಿಮಿನಲ್ ಗಳು ಅಲ್ವ? ನೀವು ಜನರನ್ನು ಕೆರಳಿಸುವಂತ ಕೆಲಸ ಮಾಡುತ್ತಿದ್ದೀರಿ. ಕೇಂದ್ರ ಸರ್ಕಾರಕ್ಕೆ ನಿಮ್ಮ ವಿರುದ್ಧ ಕ್ರಮ ಜರುಗಿಸಬೇಕು ಎಂಬುದಾಗಿ ಪತ್ರ…
ಬೆಂಗಳೂರು: ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಸಹಯೋಗದಲ್ಲಿ ಸಂಚಾರಿ ಅಥವಾ ವಲಸೆ ಕುರಿಗಾಹಿಗಳಿಗಾಗಿ ಗುರುತಿನ ಚೀಟಿ ನೀಡುವ ಯೋಜನೆಗಾಗಿ ವಲಸೆ ಕುರಿಗಾಹಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಭರ್ತಿ ಮಾಡಿ ಸೂಕ್ತ ದಾಖಲಾತಿಗಳೊಂದಿಗೆ ಸ್ಥಳೀಯ ಗ್ರಾಮ ಆಡಳಿತಾಧಿಕಾರಿ ಮತ್ತು ಪಶುವೈದ್ಯಾಧಿಕಾರಿಗಳಿಂದ ದೃಢೀಕರಣ ಪ್ರತಿಗಳನ್ನು ಲಗತ್ತಿಸಿ ಅಕ್ಟೋಬರ್ 20, 2024 ರೊಳಗಾಗಿ ಪಶುವೈದ್ಯಕೀಯ ಸಂಸ್ಥೆಗಳಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ದೂರವಾಣಿ ಸಂಖ್ಯೆ 9845171789 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/good-news-for-sslc-fail-students-re-admission-to-class-10/ https://kannadanewsnow.com/kannada/attention-ladies-these-documents-are-mandatory-to-get-free-sewing-machine/ https://kannadanewsnow.com/kannada/8-days-left-to-apply-for-krishi-bhagya-scheme-last-date-to-apply-for-krishi-bhagya-scheme-is-october-20/
ಬೆಂಗಳೂರು: ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ 10 ನೇ ತರಗತಿ ಅನುತ್ತೀರ್ಣ ಆಗುವ ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲೆಗಳಲ್ಲಿ 10 ನೇ ತರಗತಿ ಪುನರಾವರ್ತಿಸುವ ಕುರಿತು ವಿದ್ಯಾರ್ಥಿಗಳನ್ನು ಮರಳಿ ಶಾಲೆಗೆ ಕರೆತಂದು ಶಿಕ್ಷಣವನ್ನು ಮುಂದುವರೆಸುವಂತೆ ಹಾಗೂ ಶಾಲೆ ಬಿಡದಂತೆ ಕ್ರಮವಹಿಸುವ ಬಗ್ಗೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ರೆಗ್ಯುಲರ್ ಶಾಲಾ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಆಯಾ ವರ್ಷದಲ್ಲಿ ಪರೀಕ್ಷೆ-1 ಮತ್ತು ಪರೀಕ್ಷೆ-2 ಇವುಗಳನ್ನು ಬರೆದು ಅಂತಿಮವಾಗಿ ಅನುತ್ತೀರ್ಣರಾದಲ್ಲಿ ಪುನಃ ಮುಂದಿನ ಒಂದು ಶೈಕ್ಷಣಿಕ ವರ್ಷದಲ್ಲಿ ಶಾಲಾ ಅಭ್ಯರ್ಥಿಯಾಗಿ ಸರ್ಕಾರಿ ಪ್ರೌಢಶಾಲೆಗಳಲ್ಲಿ 10ನೇ ತರಗತಿಗೆ ಪ್ರವೇಶ ಪಡೆಯಲು ಇಚ್ಛಿಸಿದಲ್ಲಿ ಮರು ದಾಖಲಾತಿಗೆ ಅವಕಾಶ ನೀಡಲಾಗುತ್ತದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳು ಶಾಲೆಗಳಲ್ಲಿ ಮರು ದಾಖಲಾತಿ ಪಡೆದಲ್ಲಿ ಇತರೆ ವಿದ್ಯಾರ್ಥಿಗಳಂತೆ ಶಾಲೆಯಲ್ಲಿ ಪೂರ್ಣಾವಧಿ ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಮತ್ತು ಎಲ್ಲಾ ವಿಷಯದ ತರಗತಿಗೆ ಪೂರ್ಣಾವಧಿ ಹಾಜರಾಗಬೇಕು. ಈ ರೀತಿ ಪೂರ್ಣಾವಧಿ ಅಧ್ಯಯನ ಮಾಡಿ ಹಿಂದಿನ ವರ್ಷ ಅನುತ್ತೀರ್ಣರಾದ ವಿಷಯಗಳಲ್ಲಿ ಆ ವರ್ಷದ ಪರೀಕ್ಷೆ ಬರೆಯಬೇಕು. ಸರ್ಕಾರಿ ಪ್ರೌಢಶಾಲೆಗಳಲ್ಲಿ 10…
ಬೆಂಗಳೂರು: 2024-25 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪಸೆಟ್ (ಗರಿಷ್ಠ 10 ಎಚ್ಪಿ), ಲಘು ನೀರಾವರಿ ಹಾಗೂ ತಂತಿ ಬೇಲಿ ಘಟಕಗಳನ್ನು ಅಳವಡಿಸಿಕೊಳ್ಳಲು ಇಚ್ಛಿಸುವ ಅರ್ಹ ರೈತರಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸೂಕ್ತ ದಾಖಲಾತಿಗಳೊಂದಿಗೆ ಅಕ್ಟೋಬರ್ 20, 2024 ರೊಳಗಾಗಿ ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/job-fair-to-be-held-in-bengaluru-on-october-20/ https://kannadanewsnow.com/kannada/good-news-for-ration-card-holders-distribution-of-foodgrains-for-october-begins/
ಧಾರವಾಡ : ಅಕ್ಟೋಬರ್ 2024 ರ ಮಾಹೆಗೆ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿದಾರರಿಗೆ ಪಡಿತರ ಆಹಾರಧಾನ್ಯವನ್ನು ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2024 ರ ಮಾಹೆಯ ಪಡಿತರ ವಿತರಣೆಯಲ್ಲಿ ಅಂತ್ಯೋದಯ (ಎಎವೈ) ಪಡಿತರ ಚೀಟಿದಾರರಿಗೆ ಪ್ರತಿ ಪಡಿತರ ಚೀಟಿಗೆ ಅಕ್ಕಿ 21 ಕೆಜಿ, ಜೋಳ 14 ಕೆಜಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪಿಎಚ್ಎಚ್ (ಬಿಪಿಎಲ್) ಪಡಿತರ ಚೀಟಿದಾರರಿಗೆ ಪ್ರತಿ ಸದಸ್ಯರಿಗೆ ಅಕ್ಕಿ 3 ಕೆಜಿ, ಜೋಳ 2 ಕೆಜಿ ಉಚಿತವಾಗಿ ವಿತರಿಸಲಾಗುತ್ತದೆ. ಅಂತರರಾಜ್ಯ ಪೋರ್ಟೆಬಿಲಿಟಿ ಮೂಲಕ ಪಡಿತರ ಪಡೆಯುವವರಿಗೆ ಕೇಂದ್ರ ಸರ್ಕಾರದಿಂದ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಉಚಿತವಾಗಿ ನೀಡಲಾಗುತ್ತದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪಡಿತರ ಚೀಟಿದಾರರು ತಮ್ಮ ಜಾತಿ ಪ್ರಮಾಣ ಪತ್ರವನ್ನು (ಆರ್ಡಿ ಸಂಖ್ಯೆ ಹೊಂದಿರುವ) ತೆಗೆದುಕೊಂಡು ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯ ಮಾಡಲಾಗಿದೆ. ಜಿಲ್ಲೆಯಲ್ಲಿ 29,430 ಅಂತ್ಯೋದಯ ಹಾಗೂ 3,55,200 ಬಿಪಿಎಲ್ ಒಟ್ಟು…
ಬೆಂಗಳೂರು: : ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಅಧೀನದಲ್ಲಿ ಬರುವ ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾದ ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ ಯು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಷನಲ್ ಕೆರಿಯರ್ ಸರ್ವಿಸ್, ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಸಹಕಾರದೊಂದಿಗೆ ಬೆಂಗಳೂರು ನಗರ ಜಿಲ್ಲೆಯ ಕೆಎಲ್ಇ. ಸಂಸ್ಥೆಯ ಎಸ್ ನಿಜಲಿಂಗಪ್ಪ ಮಹಾವಿದ್ಯಾಲಯ, #1040, 28ನೇ ಕ್ರಾಸ್ ರಸ್ತೆ, 2ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು-10, ಇಲ್ಲಿ ಅಕ್ಟೋಬರ್, 20 ರಂದು “ಉದ್ಯೋಗ ಮೇಳ” ನಡೆಯಲಿದೆ. ಜಿಲ್ಲೆಯಲ್ಲಿನ ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಂಕ್ಷಿಗಳು ಹಾಗೂ ಖಾಸಗಿ ಕಂಪನಿ/ ಪ್ರತಿಷ್ಠಿತ ಬೃಹತ್, ಮಧ್ಯಮ, ಸಣ್ಣ ಉದ್ಯೋಗದಾತರು ಬೃಹತ್ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಉದ್ಯೋಗಾಕಾಂಕ್ಷಿಗಳು, ಉದ್ಯೋಗದಾತರು https://jobfair.calicut.nielit.in/ ಗೆ ಭೇಟಿ ನೀಡಿ ತಮ್ಮ ಸ್ವ-ವಿವರವನ್ನು ನೋಂದಣಿ ಮಾಡುವ ಮೂಲಕ ಉದ್ಯೋಗಮೇಳಕ್ಕೆ ನೋಂದಾಯಿಸಿಕೊಳ್ಳುವಂತೆ ಕೊಡಗು ಜಿಲ್ಲಾ…
ಬೆಂಗಳೂರು : “ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯಿಂದ ಬೆಂಗಳೂರಿನ 50 ಲಕ್ಷ ಜನರಿಗೆ ಅನುಕೂಲವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶನಿವಾರ ಈ ವಿಚಾರ ತಿಳಿಸಿದರು. “ಅಕ್ಟೊಬರ್ 16ರಂದು ಬೆಂಗಳೂರಿಗೆ ಬಹಳ ವಿಶೇಷವಾದ ದಿನ. ಕಾವೇರಿ ಕುಡಿಯುವ ನೀರಿನ ಐದನೇ ಹಂತದ ಯೋಜನೆ ಜಾರಿಯಾಗುತ್ತಿದೆ. ಇಷ್ಟು ದಿನ ಬೆಂಗಳೂರಿಗೆ ನಾಲ್ಕು ಹಂತಗಳ ಯೋಜನೆಯಲ್ಲಿ ಕುಡಿಯುವ ನೀರನ್ನು ಪೂರೈಸಲಾಗುತ್ತಿತ್ತು. ಈ ಯೋಜನೆ ಜಾರಿಗೆ ಇದ್ದ ಅಡಚಣೆ ನಿವಾರಿಸಿಕೊಂಡು ಬಂದಿದ್ದು, ಕಾಮಗಾರಿಯ ವೀಕ್ಷಣೆ ಮಾಡಿಕೊಂಡು ಬಂದಿದ್ದೇನೆ. ಇದೇ 16 ರಂದು ತೊರೆಕಾಡನಹಳ್ಳಿಯಲ್ಲಿ ಯೋಜನೆಗೆ ಚಾಲನೆ ನೀಡಲಾಗುವುದು. ನಂತರ ಬೆಂಗಳೂರಿನ ಮನೆ ಮನೆಗೆ ಕಾವೇರಿ ಪೂರೈಸಲಾಗುವುದು” ಎಂದು ತಿಳಿಸಿದರು. ಕೇಂದ್ರದ ಅನ್ಯಾಯದ ವಿರುದ್ಧ ಹೋರಾಟ: ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ಬಗ್ಗೆ ಕೇಳಿದಾಗ, “ತೆರಿಗೆ ಪಾಲು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಬಹಳ ಅನ್ಯಾಯ ಮಾಡಲಾಗುತ್ತಿದೆ. ಉತ್ತರ ಪ್ರದೇಶ, ಉತ್ತರ ಭಾರತದ ರಾಜ್ಯಗಳು ಹಾಗೂ ಆಂಧ್ರಪ್ರದೇಶಕ್ಕಿಂತ ನಮಗೆ…
ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಗೆ ಚಾಲನೆ ನೀಡಿದರು. ಈ ಮೂಲಕ ನಾಡಿನ ಅದಿ ದೇವತೆ ಚಾಮುಂಡೇಶ್ವರಿಯನ್ನು ಚಿನ್ನದ ಅಂಬಾರಿಯಲ್ಲಿ ಹೊತ್ತು ಸಾಗಲು ಆರಂಭಿಸಿದೆ. ಇದಕ್ಕೂ ಮುನ್ನಾ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಮಧ್ಯಾಹ್ನ 1:55ರ ಸುಮಾರಿಗೆ ನಡೆದ ನಂದಿ ಧ್ವಜ ಪೂಜೆಯನ್ನು ನಂದಿ ಧ್ವಜಕ್ಕೆ ಪೂಜೆಯನ್ನು ಸಿಎಂ ಸಿದ್ದರಾಮಯ್ಯ ಸಲ್ಲಿಸಿದರು. ಹೀಗೆ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಸಿಎಂ ಸಿದ್ದರಾಮಯ್ಯಗೆ ಸಾತ್ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಮಹದೇವಪ್ಪ, ಶಿವರಾಜ ತಂಗಡಗಿ, ಲಕ್ಷ್ಮಿ ಹೆಬ್ಬಾಳ್ಕರ್ ಹಾಗು ಕೆಲ ಶಾಸಕರು. ಪೂಜೆ ಸಲ್ಲಿಸಿದ ಬಳಿಕ ಮಾತನಾಡಿ ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ಶುಭಕೋರಿದರು. ಗಜಪಡೆಯ ಪ್ರಮುಖ ಆಕರ್ಷಕಣೆ ಕ್ಯಾಪ್ಟನ್ ಅಭಿಮನ್ಯು ದಸರಾದ ಪ್ರಮುಖ ಆಕರ್ಷಣೆ ಜಂಬೂ ಜಂಬೂಸವಾರಿ. ಈಗ ಆರಂಭಗೊಂಡಿದ್ದು, ಗಜಪಡೆಯ ಪ್ರಮುಖ ಆಕರ್ಷಕಣೆ ಕ್ಯಾಪ್ಟನ್ ಅಭಿಮನ್ಯು ಆಗಿದ್ದಾನೆ. ಸತತ 5ನೇ…
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಆರಂಭಗೊಂಡಿದೆ. ಅರಮನೆಯ ಆವರಣದಲ್ಲಿ ನಾಡಿನ ಅಧಿ ದೇವತೆ ತಾಯಿ ಚಾಮುಂಡೇಶ್ವರಿಯನ್ನು ಚಿನ್ನದ ಅಂಬಾರಿಯಲ್ಲಿ ಹೊತ್ತಂತ ಕ್ಯಾಪ್ಟನ್ ಅಭಿಮನ್ಯು ಹೆಜ್ಜೆ ಹಾಕೋದಕ್ಕೆ ಆರಂಭಸಿದ್ದಾನೆ. ಇಂದು ಮಧ್ಯಾಹ್ನ 1.41ರಿಂದ 2.10ರ ನಡುವೆ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಪೂಜೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನೆರವೇರಿಸಿದರು. ಆ ಬಳಿಕ ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿಯ ಜಂಬೂ ಸವಾರಿಗೆ ಕ್ಷಣಗಣನೆ ಆರಂಭಗೊಂಡಿತ್ತು. ನಾಡಿನ ಅಧಿದೇವತೆಯನ್ನು ಚಿನ್ನದ ಅಂಬಾರಿಯಲ್ಲಿ ಹೊತ್ತು ಬಂದಾಗ ಸಿಎಂ ಸಿದ್ಧರಾಮಯ್ಯ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆಯನ್ನು ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆಯನ್ನು ನೀಡಿದರು. ಗಜಪಡೆಯ ಪ್ರಮುಖ ಆಕರ್ಷಕಣೆ ಕ್ಯಾಪ್ಟನ್ ಅಭಿಮನ್ಯು ದಸರಾದ ಪ್ರಮುಖ ಆಕರ್ಷಣೆ ಜಂಬೂ ಜಂಬೂಸವಾರಿ. ಈಗ ಆರಂಭಗೊಂಡಿದ್ದು, ಗಜಪಡೆಯ ಪ್ರಮುಖ ಆಕರ್ಷಕಣೆ ಕ್ಯಾಪ್ಟನ್ ಅಭಿಮನ್ಯು ಆಗಿದ್ದಾನೆ. ಸತತ 5ನೇ ಬಾರಿ ಅಂಬಾರಿಯನ್ನು ಹೊತ್ತು ಅಭಿಮನ್ಯು ಸಾಗುತ್ತಿದ್ದಾನೆ. ಚಿನ್ನದ ಅಂಬಾರಿ ಹೊತ್ತು ನಾಡದೇವಿಯನ್ನು ಅಭಿಮನ್ಯು ಮೆರೆಸುತ್ತಿದ್ದಾನೆ. ಸತತ…
ನವದೆಹಲಿ : ಭಾರತೀಯ ಜೀವ ವಿಮಾ ನಿಗಮವು ಪ್ರತಿಯೊಂದು ವರ್ಗಕ್ಕೂ ಪಾಲಿಸಿಗಳನ್ನ ನೀಡುತ್ತದೆ. ಎಲ್ಐಸಿ ಯೋಜನೆಗಳು ಮಕ್ಕಳಿಂದ ವೃದ್ಧರವರೆಗೆ ಲಭ್ಯವಿದೆ. ಈ ಪಾಲಿಸಿಗಳು ನಿಮಗೆ ಸುರಕ್ಷತೆ ಮತ್ತು ಆದಾಯವನ್ನ ಖಾತರಿಪಡಿಸುತ್ತವೆ. ಅಲ್ಲದೆ, ಇವುಗಳಲ್ಲಿ ಅನೇಕವುಗಳಲ್ಲಿ, ನೀವು ಸ್ವಲ್ಪ ಹೂಡಿಕೆ ಮಾಡುವ ಮೂಲಕ ದೊಡ್ಡ ಹಣವನ್ನ ಸಂಗ್ರಹಿಸಬಹುದು. ಅಂತಹ ಒಂದು ಯೋಜನೆ ಎಲ್ಐಸಿಯ ಜೀವನ್ ಆನಂದ್ ಪಾಲಿಸಿಯಾಗಿದ್ದು, ಇದರಲ್ಲಿ ನೀವು ದಿನಕ್ಕೆ ಕೇವಲ 45 ರೂ.ಗಳನ್ನ ಉಳಿಸುವ ಮೂಲಕ 25 ಲಕ್ಷ ರೂ.ಗಳನ್ನ ಪಡೆಯಬಹುದು. ನೀವು ಕಡಿಮೆ ಪ್ರೀಮಿಯಂನಲ್ಲಿ ದೊಡ್ಡ ಲಾಭವನ್ನ ಗಳಿಸಲು ಬಯಸಿದ್ರೆ, ಜೀವನ್ ಆನಂದ್ ಪಾಲಿಸಿ (LIC Jeevan Anand) ಉತ್ತಮ ಆಯ್ಕೆಯಾಗಿದೆ. ಒಂದು ರೀತಿಯಲ್ಲಿ, ಇದನ್ನು ಟರ್ಮ್ ಪಾಲಿಸಿ ಎಂದೂ ಕರೆಯಬಹುದು. ಪಾಲಿಸಿ ಪೂರ್ಣಗೊಳ್ಳುವವರೆಗೆ ನೀವು ಈ ಯೋಜನೆಯಲ್ಲಿ ಪ್ರೀಮಿಯಂ ಪಾವತಿಸಬಹುದು. ಅಲ್ಲದೆ, ಈ ಪಾಲಿಸಿಯಲ್ಲಿ, ನೀವು ಒಂದೇ ಯೋಜನೆಯಡಿ ಅನೇಕ ಮೆಚ್ಯೂರಿಟಿ ಪ್ರಯೋಜನಗಳನ್ನ ಪಡೆಯಬಹುದು. ಅದೇ ಸಮಯದಲ್ಲಿ, ಜೀವನ್ ಆನಂದ್ ಪಾಲಿಸಿಯಲ್ಲಿ ಒಂದು ಲಕ್ಷ ರೂಪಾಯಿಗಳ ವಿಮಾ…