Subscribe to Updates
Get the latest creative news from FooBar about art, design and business.
Author: kannadanewsnow09
2025 ರ ವಿಶ್ವ ಸುಂದರಿ ತನ್ನ ವಿಜೇತರನ್ನು ಪ್ರಕಟಿಸಲಾಗಿದೆ. ಈ ಪ್ರಶಸ್ತಿಯು ಅಸಾಧಾರಣ ಫೈನಲಿಸ್ಟ್ಗಳಲ್ಲಿ ಒಬ್ಬರಾದ ಮಿಸ್ ಥೈಲ್ಯಾಂಡ್ ಸುಚಾಟಾ ಚುವಾಂಗ್ಸ್ರಿ ಅವರಿಗೆ ಸಲ್ಲುತ್ತದೆ. ಅವರು ಪ್ರತಿಷ್ಠಿತ 72 ನೇ ವಿಶ್ವ ಸುಂದರಿ 2025 ಕಿರೀಟ ಮತ್ತು ಪ್ರಶಸ್ತಿಯನ್ನು ಗೆದ್ದರು. 3 ನೇ ರನ್ನರ್ ಅಪ್ ಮಿಸ್ ಮಾರ್ಟಿನಿಕ್ ಆರೆಲಿ ಜೋಕಿಮ್, 2 ನೇ ರನ್ನರ್ ಅಪ್ ಮಿಸ್ ಪೋಲೆಂಡ್ ಮಜಾ ಕ್ಲಾಜ್ಡಾ ಮತ್ತು 1 ನೇ ರನ್ನರ್ ಅಪ್ ಮಿಸ್ ಇಥಿಯೋಪಿಯಾ ಹ್ಯಾಸೆಟ್ ಡೆರೆಜೆ ಅಡ್ಮಾಸು. ವೇಗದ-ಟ್ರ್ಯಾಕ್ ಈವೆಂಟ್ಗಳಲ್ಲಿ ಮಿಂಚುವುದರಿಂದ ಹಿಡಿದು ನ್ಯಾಯಾಧೀಶರ ಪ್ರಶ್ನೋತ್ತರ ಸುತ್ತಿನಲ್ಲಿ ಪ್ರಬಲ ಉತ್ತರವನ್ನು ನೀಡುವವರೆಗೆ ಮಿಸ್ ಥೈಲ್ಯಾಂಡ್ ಸುಚಾಟಾ ಚುವಾಂಗ್ಸ್ರಿ ಅವರ ಗಮನಾರ್ಹ ಪ್ರಯಾಣವು ಪ್ರಪಂಚದಾದ್ಯಂತ ಹೃದಯಗಳನ್ನು ಸೆರೆಹಿಡಿಯಿತು. ಕೃಪೆ, ಬುದ್ಧಿವಂತಿಕೆ ಮತ್ತು ಸಹಾನುಭೂತಿಯನ್ನು ಪ್ರತಿನಿಧಿಸುವ ಅವರು ಈಗ 72 ನೇ ವಿಶ್ವ ಸುಂದರಿಯಾಗಿ ಜಾಗತಿಕ ವೇದಿಕೆಯನ್ನು ತೆಗೆದುಕೊಳ್ಳುತ್ತಾರೆ. ಅವರ ಗೆಲುವು ಥೈಲ್ಯಾಂಡ್ಗೆ ಹೆಮ್ಮೆಯ ಕ್ಷಣವಾಗಿದೆ ಮತ್ತು ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತದೆ.
ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೋಮು ದಳ್ಳುರಿ ಹೆಚ್ಚಾಗುತ್ತಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಇಬ್ಬರು ಮುಸ್ಲಿಂ ಮುಖಂಡರಿಗೆ ಶಿಸ್ತು ಉಲ್ಲಂಘನೆಯ ನೋಟಿಸ್ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಹಾಗೂ ಜಿಲ್ಲಾ ಉಪಾಧ್ಯಕ್ಷ ಅಶ್ರಫ್ ಗೆ ನೋಟಿಸ್ ಜಾರಿ ಮಾಡಲಾಗಿದೆ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿಕಾಸ್ ಶೆಟ್ಟಿಯಿಂದ ನೋಟಿಸ್ ಜಾರಿಗೊಳಿಸಲಾಗಿದ್ದು, ತಮ್ಮ ವಿರುದ್ಧ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂಬುದಾಗಿ ಎಚ್ಚರಿಸಲಾಗಿದೆ. ಇನ್ನೂ ಶಿಸ್ತು ಉಲ್ಲಂಘನೆಯ ನೋಟಿಸ್ ತಲುಪಿದ 7 ದಿನಗಳೊಳಗೆ ವಿವರಣೆ ನೀಡುವಂತೆ ಸೂಚಿಸಲಾಗಿದೆ. ಅಂದಹಾಗೇ ಶಾಹುಲ್ ಹಮೀದ್ ಅಲ್ಪಸಂಖ್ಯಾತರ ಸಭೆಯನ್ನು ಆಯೋಜಿಸಿದ್ದರು. ಈ ಸಭೆ ನಡೆಸಿ ಅಲ್ಪಸಂಖ್ಯಾತರಿಂದ ರಾಜೀನಾಮೆ ಕೊಡಿಸುವುದಾಗಿ ವರದಿ ಬಂದಿತ್ತು. ಪಕ್ಷಕ್ಕೆ ರಾಜೀನಾಮೆ ಕೊಡಿಸೋದಾಗಿ ಸುದ್ದಿಯಾಗಿತ್ತು. ಈ ಹಿನ್ನಲೆಯಲ್ಲಿ ಶಿಸ್ತು ಉಲ್ಲಂಘನೆ ನೋಟಿಸ್ ನೀಡಲಾಗಿದೆ. https://kannadanewsnow.com/kannada/i-cannot-justify-kamal-haasans-statement-finally-actor-shivanna-breaks-his-silence/ https://kannadanewsnow.com/kannada/big-shock-for-kasap-state-president-mahesh-joshi-state-government-withdraws-state-minister-status/
ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ಬೆಳೆಯುತ್ತಿರುವ ಚಂದ್ರನ ದಿನದಂದು ವಾರಘಿ ದೇವಿಯನ್ನು ಪೂಜಿಸುವ ವಿಧಾನವನ್ನು ನಾವು ನೋಡಲಿದ್ದೇವೆ , ಇದರಿಂದಾಗಿ ಗೋಚರಿಸುವ ಶತ್ರುಗಳಿಂದ ಉಂಟಾಗುವ ತೊಂದರೆಗಳು ಮತ್ತು ಅದೃಶ್ಯ ದ್ರೋಹಿಗಳಿಂದ ಉಂಟಾಗುವ ಅವಮಾನಗಳನ್ನು ಎದುರಿಸುತ್ತಿರುವ ಪ್ರತಿಯೊಬ್ಬ ವ್ಯಕ್ತಿಯು ದ್ರೋಹಿಗಳು ಮತ್ತು ಶತ್ರುಗಳನ್ನು ತೊಡೆದುಹಾಕಬಹುದು ಮತ್ತು ಅವರಿಂದ ಉಂಟಾಗುವ ಅವಮಾನ, ನಿರಾಶೆ, ಕೊಳಕು ಮತ್ತು ದ್ರೋಹವನ್ನು ಹೋಗಲಾಡಿಸಬಹುದು . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ…
ಬೆಂಗಳೂರು: ನಟ ಕಮಲ್ ಹಾಸನ್ ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರ ಬಗ್ಗೆ ಕೊನೆಗೂ ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಮೌನ ಮುರಿದಿದ್ದಾರೆ. ನಾನು ಕಮಲ್ ಹಾಸನ್ ಹೇಳಿಕೆ ಸಮರ್ಥಿಸಿಕೊಳ್ಳಿಲ್ಲ ಎಂಬುದಾಗಿ ಸ್ಪಷ್ಟ ಪಿಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವಂತ ಅವರು ಕಮಲ್ ಹಾಸನ್ ಹೇಳಿಕೆ ಮಾತನ್ನ ನಾನೇನು ಸಮರ್ಥನೆ ಮಾಡಿಕೊಂಡಿಲ್ಲ. ಭಾಷೆ ಬಗ್ಗೆ ಮಾತನಾಡ್ತಿದ್ದಾಗ ನಾನು ಕೈ ತಟ್ಟಿದ್ದು ನಿಜ. ಆ ಸಂದರ್ಭದಲ್ಲಿ ಏನ್ ಮಾತನಾಡ್ತಿದ್ದಾರೆ ಅಂತ ಗೊತ್ತಾಗಲಿಲ್ಲ ಎಂಬುದಾಗಿ ಹೇಳಿದ್ದಾರೆ. ಎಲ್ಲರೂ ಕನ್ನಡಾಭಿಮಾನದ ಬಗ್ಗೆ ಮಾತನಾಡ್ತಾರೆ. ಕನ್ನಡ ಅಭಿಮಾನ ಏನು ಎಂಬುದು ನಮಗೂ ಗೊತ್ತಿದೆ. ನಾನು ಕೂಡ ಕನ್ನಡಾಭಿಮಾನಿನೇ. ಅಣ್ಣಾವ್ರ ಕನ್ನಡ ಅಭಿಮಾನ ನಿಮಗೆಲ್ಲರಿಗೂ ಗೊತ್ತೇ ಇದೆ ಎಂದರು. ಆ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ ಮಾತನಾಡಿದ್ದು ಗೊತ್ತಾಗಲಿಲ್ಲ. ನನಗೆ ಏನು ಮಾತಾಡ್ತಿದ್ದಾರೆ ಎಂದು ಗಮನಿಸಲಿಲ್ಲ. ಹೀಗಾಗಿ ಚಪ್ಪಾಳೆ ತಟ್ಟಿದೆ. ಕಲಾವಿದನಾಗಿ ಭಾಷೆ ಬಗ್ಗೆ ಮಾತಾಡಿದಾಗ ಚಪ್ಪಾಳೆ ತಟ್ಟಿದ್ದೆ ಎಂಬುದಾಗಿ ಹೇಳಿದ್ದಾರೆ. https://kannadanewsnow.com/kannada/from-april-1-to-may-31-there-were-71-deaths-due-to-rain-in-the-state-and-15378-32-hectares-of-crop-damage/ https://kannadanewsnow.com/kannada/big-shock-for-kasap-state-president-mahesh-joshi-state-government-withdraws-state-minister-status/
ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್.1ರಿಂದ ಮೇ.31ರವರೆಗೆ ಸುರಿದಂತ ಪೂರ್ವ ಮುಂಗಾರು ಮಳೆಯಿಂದಾಗಿ 71 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 15378.32 ಹೆಕ್ಟೇರ್ ಬೆಳೆಹಾನಿಯಾಗಿದೆ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಅವರು ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಪೂರ್ವ ಮುಂಗಾರು ಹಂಗಾಮು 1901 ರಿಂದ ಇಲ್ಲಿಯವರೆಗಿನ ಮಳೆ ಅಂಕಿಅಂಶಗಳನ್ನು ಗಮನಿಸಿದಾಗ 2025ರ ಪೂರ್ವ ಮುಂಗಾರು ಅವಧಿಯಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದ್ದು, ಕಳೆದ 125 ವರ್ಷಗಳಲ್ಲೇ ಪೂರ್ವ ಮುಂಗಾರು ಮತ್ತು ಮೇ ಮಾಹೆಯಲ್ಲಿ ಕಂಡುಬಂದ ಗರಿಷ್ಟ ಪ್ರಮಾಣದ ಮಳೆಯಾಗಿದೆ ಎಂದಿದ್ದಾರೆ. ಪ್ರಮುಖವಾಗಿ ರಾಜ್ಯದಲ್ಲಿ 2025ರ ಮೇ ಮಾಹೆಗೆ ವಾಡಿಕೆಯಾಗಿ 74 ಮಿ.ಮೀ ಮಳೆಯಾಗಬೇಕಿದ್ದು, ವಾಸ್ತವಿಕ 219 ಮಿ.ಮೀ ಮಳೆಯಾಗಿದ್ದು ಸರಾಸರಿ ವಾಡಿಕೆ ಮಳೆಗೆ ಹೋಲಿಸಿದಾಗ ಶೇ.197ರಷ್ಟು ಅತ್ಯಧಿಕ ಮಳೆಯಾಗಿದೆ. 2025ರ ಪೂರ್ವ ಮುಂಗಾರು (1ನೇ ಮಾರ್ಚ್ ರಿಂದ 31ನೇ ಮೇ) ಅವಧಿಯಲ್ಲಿ ವಾಡಿಕೆಯಾಗಿ 115ಮಿ.ಮೀ ಮಳೆಯಾಗಬೇಕಿದ್ದು, ವಾಸ್ತವಿಕ 286 ಮಿ.ಮೀ ಮಳೆಯಾಗಿದ್ದು, ಸರಾಸರಿ ವಾಡಿಕೆ ಮಳೆಗೆ ಹೋಲಿಸಿದಾಗ ಶೇ.149ರಷ್ಟು ಅತ್ಯಧಿಕ ಮಳೆಯಾಗಿದೆ. ಒಟ್ಟಾರೆ, 2025ರ ಪೂರ್ವ ಮುಂಗಾರು (1ನೇ…
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಜೊತೆಗೆ ರಾಜ್ಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಈ ಸಭೆಯ ಪ್ರಮುಖ ಮುಖ್ಯಾಂಶಗಳನ್ನು ಮುಂದೆ ಓದಿ. 1. ಜಿಲ್ಲೆಗಳಲ್ಲಿ DC, CEO ಮತ್ತು SP ಈ ಮೂರು ಹುದ್ದೆಗಳು ಅತ್ಯಂತ ಮುಖ್ಯವಾದ ಹುದ್ದೆಗಳು. ಈ ಅಧಿಕಾರಿಗಳು ತಮ್ಮ ಇಗೊ (Ego) ಬಿಟ್ಟು ಸರ್ಕಾರ ಮತ್ತು ಜನರ ನಡುವೆ ಸೇತುವೆಯಂತೆ ಕೆಲಸ ಮಾಡಬೇಕು. ಈ ಮೂವರ ನಡುವೆ ಸಮನ್ವಯತೆ ಇದ್ದರೆ ಮಾತ್ರ ಜಿಲ್ಲೆಯ ಅಭಿವೃದ್ಧಿ ಸಾಧ್ಯ. 2. ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಬಡವರು, ಶೋಷಿತರು, ರೈತರು, ಮಹಿಳೆಯರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಬರುತ್ತಾರೆ. ಇಂತಹ ದುರ್ಬಲ ವರ್ಗದವರ ಬಗ್ಗೆ ಡಿಸಿ, ಸಿಇಒಗಳು ಸಹಾನುಭೂತಿಯಿಂದ ಅವರ ಸಮಸ್ಯೆಗಳನ್ನು ಆಲಿಸಿ ಅದನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲು ಸೂಚನೆ ನೀಡಿದ್ದೇನೆ. 3. ಕಾನೂನು ಸುವ್ಯವಸ್ಥೆಗೂ, ಅಭಿವೃದ್ಧಿಗೂ ನೇರ ಸಂಬಂಧವಿದೆ. ಎಲ್ಲಾ ಜಿಲ್ಲೆಗಳಲ್ಲಿಯೂ ಕಾನೂನು, ವ್ಯವಸ್ಥೆ ಸರಿಯಾಗಿರಬೇಕು. ಸಂವಿಧಾನದ…
ಬೆಂಗಳೂರು: ಪಕ್ಷದ ಸಂಘಟನೆ ದೃಷ್ಟಿಯಿಂದ ಶನಿವಾರ ಬೆಂಗಳೂರಿನಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಮುಖಂಡರ ಸಭೆಯನ್ನು ನಡೆಸಲಾಯಿತು. ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ರಾಜ್ಯದ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಹೋರಾಟಗಳನ್ನು ಹಮ್ಮಿಕೊಳ್ಳುವುದು ಹಾಗೂ ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುವ ಬಗ್ಗೆ ಚರ್ಚೆ ನಡೆಸಲಾಯಿತು. ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ನಿರ್ದೇಶನದಂತೆ ಸದಸ್ಯತ್ವ ನೋಂದಣಿ ಅಭಿಯಾನ ಕೈಗೊಳ್ಳಲಾಗಿದೆ. ಅದರ ಮುಂದುವರೆದ ಭಾಗವಾಗಿ ಮತಗಟ್ಟೆ, ಬಡಾವಣೆ ಹಂತದಲ್ಲಿ ಪಕ್ಷದ ಸಂಘಟನೆಯನ್ನು ಬಲಗೊಳಿಸಬೇಕು. ಅಸಂಖ್ಯಾತ ಮುಖಂಡರು, ಕಾರ್ಯಕರ್ತರು ಹೆಚ್ಚು ಸಕ್ರಿಯವಾಗಿ ಕೆಲಸ ಮಾಡಬೇಕು ಎಂದು ರಮೇಶ್ ಗೌಡರು ಹೇಳಿದರು. ಸಭೆಯಲ್ಲಿ ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ಮುಸ್ಲಿಂ ಅಲ್ಪಸಂಖ್ಯಾತರ ವಿಭಾಗದ ಮುಖಂಡರು, ಪದಾಧಿಕಾರಿಗಳು, ವಿಧಾನಸಭಾ ಕ್ಷೇತ್ರ ಅಧ್ಯಕ್ಷರು, ವಾರ್ಡ್ ಅಧ್ಯಕ್ಷರು ಹಾಗೂ ಪ್ರಮುಖರು ಭಾಗವಹಿಸಿದ್ದರು. ಬೆಂಗಳೂರು ನಗರ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಅಪ್ರೋಜ್…
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 58 ಜನರಿಗೆ ಕೋವಿಡ್ ಪಾಸಿಟಿವ್ ಅಂತ ವರದಿಯಲ್ಲಿ ತಿಳಿದು ಬಂದಿದೆ. ಅಲ್ಲದೇ ಸೋಂಕಿನಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಆರೋಗ್ಯ ಇಲಾಖೆಯಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಆರ್ ಟಿ ಪಿ ಸಿ ಆರ್ ಮೂಲಕ 354, ರಾಟ್ ಮೂಲಕ 66 ಸೇರಿದಂತೆ 420 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 58 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದಿದೆ. ಇಂದು 53 ಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿ ಸಕ್ರೀಯ ಪ್ರಕರಣಗಳ ಸಂಖ್ಯೆ 238ಕ್ಕೆ ತಲುಪಿದೆ. ಹೋಂ ಐಸೋಲೇಷನ್ ನಲ್ಲಿ 225 ಸೋಂಕಿತರಿದ್ದರೇ, 6 ಮಂದಿ ಖಾಸಗಿ, 6 ಮಂದಿ ಸರ್ಕಾರಿ ಆಸ್ಪತ್ರೆಯಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದೆ. ಕೊರೋನಾ ಸೋಂಕಿಗೆ ಒಳಗಾಗಿದ್ದಂತ ಬೆಂಗಳೂರಿನ 63 ವರ್ಷದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂಬುದಾಗಿ ಹೇಳಿದೆ. https://kannadanewsnow.com/kannada/hindu-activists-arrested-with-the-help-of-congress-leaders-bjp-state-president-b-y-vijayendra-lashes-out/…
ಕಾಂಗ್ರೆಸ್ ಪುಢಾರಿಗಳ ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತರ ಬಂಧನ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ
ಮಂಡ್ಯ : ಇತ್ತಿಚೆಗೆ ಮಂಗಳೂರಿನಲ್ಲಿ ಮುಸ್ಲಿಂ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ರಾಜ್ಯ ಸರ್ಕಾರ, ಕಾಂಗ್ರೆಸ್ ಪುಢಾರಿಗಳ ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತರ ಬಂಧನವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು. ಮದ್ದೂರು ಬಿಜೆಪಿ ಮಂಡಲ ಕಛೇರಿಗೆ ಶನಿವಾರ ಭೇಟಿ ನೀಡಿದ ಅವರು ಮನ್ ಮುಲ್ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಮತ್ತು ಬಿಜೆಪಿ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮಂಗಳೂರಿನಲ್ಲಿ ನಡೆಯುತ್ತಿರುವ ಕೋಮುಗಲಭೆಯ ವಿಷಯದಲ್ಲಿ ಕಾಂಗ್ರೆಸ್ ಪಕ್ಷವೇ ಅದನ್ನು ಹತ್ತಿಕ್ಕುವ ಬದಲು ಬೆಂಕಿ ಹಚ್ಚುವ ಕೆಲಸವನ್ನು ಮಾಡುವ ಮೂಲಕ ಅದನ್ನು ಹೆಚ್ಚೆಚ್ಚು ಮಾಡಲು ಪಿತೂರಿ ಮಾಡುತ್ತಿದೆ ಹಾಗೂ ರಾಜ್ಯದ ಹಲವೆಡೆ ಕೋಮುಗಲಭೆಗಳಿಗೆ ಪ್ರಚೋದನೆ ನೀಡಿ ಕುಮ್ಮಕ್ಕು ನೀಡುತ್ತಿದ್ದಾರೆ ಅದು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಚೆನ್ನಾಗಿ ಗೊತ್ತಿದೆ ಎಂದು ಆರೋಪಿಸಿದರು. ಮಂಗಳೂರಿನಲ್ಲಿ ಮುಸ್ಲಿಂ ಹತ್ಯೆ ಆಗಿದೆ, ಇವರ ಇಂಟಲಿಜೆನ್ಸ್ ಎಲ್ಲಿ ಹೋಗಿತ್ತು. ಸುಹಾಸ್ ಶೆಟ್ಟಿ ಹತ್ಯೆಯಾದ ಸಂದರ್ಭದಲ್ಲಿ ಯಾವ ರೀತಿ ಮಹಿಳೆಯರು…
ಮಂಡ್ಯ : ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ನಡೆದಿರುವ ದಲಿತ ಯುವಕನ ಸಾವಿಗೆ ಪೋಲೀಸರ ವೈಫಲ್ಯವೇ ಕಾರಣವಾಗಿದೆ ಎಂದು ಆರೋಪಿಸಿ ಮದ್ದೂರು ತಾಲೂಕು ಕಛೇರಿ ಎದುರು ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಿದರು. ಮದ್ದೂರು ಪಟ್ಟಣದ ಪುರಸಭೆ ಮುಂಭಾಗವಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ತಾಲೂಕು ಕಛೇರಿ ಎದುರು ಜಮಾಯಿಸಿದ ದಲಿತ ಮುಖಂಡರು ಜಿಲ್ಲಾ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಸೋಮನಹಳ್ಳಿ ಅಂದಾನಿ ಮಾತನಾಡಿ, ಕತ್ತರಘಟ್ಟ ಗ್ರಾಮದ ಯುವಕ ಜಯಕುಮಾರ್ ಸಾವು ವಿದ್ರಾವಕ ಘಟನೆಯಾಗಿದ್ದು, ಜಮೀನಿನ ವಿಚಾರವಾಗಿ ಗಲಾಟೆಯಾಗಿತ್ತು. ಜಯಕುಮಾರ್ ಸಾಯುವ ಮುನ್ನಾ ದಿನ ಪೋಲೀಸರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ವಹಿಸಲಿಲ್ಲ ಹೀಗಾಗಿ ಈ ಕೃತ್ಯಕ್ಕೆ ಪೋಲಿಸರೇ ನೇರ ಕಾರಣರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು. ಸಂಬಂಧ ಪುಟ್ಟ ಪೋಲೀಸ್…














