Author: kannadanewsnow09

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ಹುಟ್ಟಿದ ಹಬ್ಬ ಮುಂಬರುವ ಸೆಪ್ಟೆಂಬರ್.2 ಆಗಿದೆ. ಅವರು ಸೆಪ್ಟೆಂಬರ್.2ರ ಬದಲಾಗಿ ಸೆಪ್ಟೆಂಬರ್.1ರ ಮಧ್ಯರಾತ್ರಿಯೇ ಅಭಿಮಾನಿಗಳ ಜೊತೆಗೆ ಆಚರಿಸಿಕೊಳ್ಳುವುದಾಗಿ ಪತ್ರದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇಂದು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ನಟ ಕಿಚ್ಚ ಸುದೀಪ್, ಪ್ರಿಯ ಸ್ನೇಹಿತರೇ.. ಸೆಪ್ಟೆಂಬರ್ ಎರಡರ ಬೆಳಗಿನಲ್ಲಿ ಅಲ್ಲ ಸೆಪ್ಟೆಂಬರ್ ಒಂದರ ರಾತ್ರಿಯೇ ಸಿಗೋಣವಾ…! ಎಂದಿದ್ದಾರೆ. ಸೆಪ್ಟೆಂಬರ್ ಎರಡರಂದು ನೀವು ನನ್ನನ್ನು ಭೇಟಿಮಾಡುವುದಕ್ಕಾಗಿ ಎಷ್ಟು ಕಾಯುವಿರೋ ಅದಕ್ಕಿಂತ ಹೆಚ್ಚಾಗಿ ನಾನು ನಿಮಗಾಗಿ ಕಾಯುತ್ತೇನೆ. ಆ ದಿನ ನೀವು ಪಡುವ ಸಂಭ್ರಮ, ಆಚರಿಸುವ ವಿಡಿಯೋಗಳನ್ನು ನೋಡಿದಾಗ ಪ್ರತಿಸಲವೂ ನನಗೆ ಮರುಹುಟ್ಟು ಪಡೆದಂತಾಗುತ್ತದೆ. ನಿಸ್ಸಂದೇಹವಾಗಿ ನನ್ನ ಬದುಕಿಗೆ ಮೌಲ್ಯ ತುಂಬಿದವರು ನೀವು. ನಿಮ್ಮೆದರು ನಿಂತು ವಿನೀತನಾಗುವುದಕ್ಕಿಂತ ಖುಷಿ ಏನಿದೆ? ಆದ್ದರಿಂದಲೇ ದಶಕಗಳಿಂದ ನಿಮ್ಮನ್ನು ಮನೆಯ ಹತ್ತಿರ ಭೇಟಿಮಾಡುತ್ತಲೇ ನಾನೂ ಸಂಭ್ರಮಸಿದ್ದೇನೆ. ಆದರೆ ಈ ಸಲ ತುಂಬಾ ಕಷ್ಟವಾಗುತ್ತಿದೆ ಏಕೆಂದರೆ ಅಮ್ಮನಿಲ್ಲದ ಮೊದಲ ವರ್ಷವಿದು, ಅಮ್ಮನಿಲ್ಲದ ಸಂಭ್ರಮವನ್ನು ಊಹಿಸಿಕೊಳ್ಳುವುದೂ ನನಗೆ ಕಷ್ಟವಾಗುತ್ತಿದೆ. ಆದರೆ ನಿಮ್ಮನ್ನು ನಿರಾಸೆಗೊಳಿಸುವುದು ನನಗಿಷ್ಟವಿಲ್ಲ!…

Read More

ವಿಜಯಪುರ: ಜಿಲ್ಲೆಯ ಸೆಷನ್ಸ್ ಕೋರ್ಟ್ ಜಡ್ಜ್ ಸಚಿನ್ ಮನೆಯಲ್ಲಿ ಕಳ್ಳರು ಕೈಚಳಕ ಮೆರೆದಿದ್ದಾರೆ. ನ್ಯಾಯಮೂರ್ತಿಗಳ ಬಾಡಿಗೆ ಮನೆಗೆ ಕನ್ನ ಹಾಕಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹುಡ್ಕೋ ಕಾಲೋನಿಯಲ್ಲಿ ಸೆಷನ್ಸ್ ನ್ಯಾಯಧೀಶರಾದಂತ ಸಚಿನ್ ಕೌಶಿಕ್ ಬಾಡಿಗೆ ಮನೆಯಲ್ಲಿದ್ದರು. ಅವರು ಊರಿಗೆ ತೆರಳಿದ್ದಂತ ಸಂದರ್ಭದಲ್ಲಿ ಕಳ್ಳತನ ನಡೆಸಲಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ವಿಜಯಪುರ ಹೆಚ್ಚುವರಿ ಎಸ್ಪಿ ರಾಮನಗೌಡ ಹಟ್ಟಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/in-dharmasthala-activities-of-conversion-jihad-are-taking-place-similar-to-love-jihad-r-ashok/ https://kannadanewsnow.com/kannada/big-news-the-investigation-into-the-dharmasthala-case-is-90-complete-nia-cbi-not-needed-minister-ramalinga-reddy/

Read More

ವಿಜಯನಗರ: ಧರ್ಮಸ್ಥಳದಲ್ಲಿ ಇರುವುದು ಬುರುಡೆ ಗ್ಯಾಂಗ್‌ ಎಂದು ವಿಧಾನಸಭೆಯಲ್ಲಿ ಹೇಳಿದಾಗ ಕಾಂಗ್ರೆಸ್‌ ನಾಯಕರು ಅದನ್ನು ವಿರೋಧಿಸಿದ್ದರು. ಲವ್‌ ಜಿಹಾದ್‌ನಂತೆಯೇ ಮತಾಂತರದ ಜಿಹಾದಿ ಕಾರ್ಯ ನಡೆಯುತ್ತಿದೆ ಎಂಬುದಾಗಿ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಇಂದು ತುಂಗಭದ್ರಾ ಜಲಾಶಯ ವೀಕ್ಷಣೆ ಮಾಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಧರ್ಮಸ್ಥಳದಲ್ಲಿ ಇರುವುದು ಬುರುಡೆ ಗ್ಯಾಂಗ್‌ ಎಂದು ವಿಧಾನಸಭೆಯಲ್ಲಿ ಹೇಳಿದಾಗ ಕಾಂಗ್ರೆಸ್‌ ನಾಯಕರು ಅದನ್ನು ವಿರೋಧಿಸಿದ್ದರು. ಲವ್‌ ಜಿಹಾದ್‌ನಂತೆಯೇ ಮತಾಂತರದ ಜಿಹಾದಿ ಕಾರ್ಯ ನಡೆಯುತ್ತಿದೆ. ಅನನ್ಯ ಭಟ್‌ ಇರುವುದೇ ಸುಳ್ಳು ಎಂದು ತಿಳಿದುಬಂದಿದೆ. ಆ ವ್ಯಕ್ತಿಗೆ ಮಾಸ್ಕ್‌ ಹಾಕಿಸಿದ್ದೇ ಸಿಎಂ ಸಿದ್ದರಾಮಯ್ಯನವರ ಸರ್ಕಾರ. ಪ್ರಗತಿಪರರು ಸಿದ್ದರಾಮಯ್ಯನವರ ಕಚೇರಿಗೆ ಹೋಗಿ ನೂರಾರು ಕೊಲೆಯಾಗಿದೆ ಎಂದು ಹೇಳಿದ್ದರು. ಇಂತಹವರ ಮಾತು ಕೇಳಿ ಸಿಎಂ ಸಿದ್ದರಾಮಯ್ಯ 2-3 ಕೋಟಿ ರೂ. ಖರ್ಚು ಮಾಡಿದ್ದಾರೆ. ಯಾವನೋ ದಾರಿಹೋಕ ಬಂದು ಎಸ್‌ಐಟಿಗೆ ಆಗ್ರಹ ಮಾಡಿದರೆ, ಅದಕ್ಕಾಗಿ ಎಸ್‌ಐಟಿ ರಚಿಸಿದ್ದಾರೆ. ಧರ್ಮಸ್ಥಳ ಕ್ಷೇತ್ರವನ್ನು ಮುಜರಾಯಿ ಇಲಾಖೆಗೆ ಸೇರಿಸಲು ಇಷ್ಟೆಲ್ಲ ಮಾಡಲಾಗಿದೆ ಎಂದು ದೂರಿದರು. ಮಸೀದಿ, ಚರ್ಚ್‌…

Read More

ಮೈಸೂರು: ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರ ಮಹೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್.1, 2ರಂದು ಭಾಗಿಯಾಗಲಿದ್ದಾರೆ. ಅಲ್ಲದೇ ಮೈಸೂರು ಅರಮನೆಗೂ ಭೇಟಿ ನೀಡಲಿದ್ದಾರೆ. ಈ ಹಿನ್ನಲೆಯಲ್ಲಿ ಸೆಪ್ಟೆಂಬರ್.1 ಮತ್ತು 2ರಂದು ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಈ ಕುರಿತಂತೆ ಅರಮನೆ ಆಡಳಿತ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು ಅರಮನೆಗೆ ಸೆಪ್ಟೆಂಬರ್.1ರಂದು ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರ ಪ್ರವೇಶವನ್ನು ಅರಮನೆಗೆ ಸಂಪೂರ್ಣ ನಿಷೇಧಿಸಲಾಗಿದೆ. ಸೆಪ್ಟೆಂಬರ್.2ರ ಮಧ್ಯಾಹ್ನದವರೆಗೆ ಪ್ರವೇಶ ನಿಷೇಧ ಮುಂದುವರೆಯಲಿದೆ ಎಂದು ತಿಳಿಸಿದೆ. ರಾಷ್ಟ್ರಪತಿ ಮುರ್ಮು ಭೇಟಿ ಹಿನ್ನಲೆಯಲ್ಲಿ ಮೈಸೂರು ಅರಮನೆಗೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತದಿಂದ ಎಲ್ಲಾ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಪ್ರವಾಸಿಗರು ಸೆಪ್ಟೆಂಬರ್.1, 2ರಂದು ಮೈಸೂರು ಅರಮನೆ ವೀಕ್ಷಣೆಗೆ ಪ್ಲಾನ್ ಮಾಡಿದ್ದರೇ ಕೈಬಿಡುವುದು ಒಳಿತು. https://kannadanewsnow.com/kannada/on-the-27th-in-the-context-of-ganesh-chaturthi-animal-slaughter-and-meat-sale-ban-in-bangalore/ https://kannadanewsnow.com/kannada/the-auspicious-time-for-the-renowned-marikamba-jatra-mahotsav-has-been-fixed/

Read More

ಧಾರವಾಡ: ಇಲ್ಲಿನ ಐಐಟಿ ಇಂಜಿನಿಯರ್ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಧಾರವಾಡದ ಐಐಟಿಯಲ್ಲಿ ಬಿಹಾರ ಮೂಲದ ವಿದ್ಯಾರ್ಥಿ ಆಸ್ತಿತ್ವ ಗುಪ್ತಾ(23) ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮೃತ ಬಿಹಾರ ಮೂಲದ ವಿದ್ಯಾರ್ಥಿ ಆಸ್ತಿತ್ವ ಗುಪ್ತಾ ಧಾರವಾಡದ ಐಐಟಿಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದರು. 2 ದಿನಗಳ ಹಿಂದೆ ನಡೆದಿದ್ದಂತ ಎನ್ ಸಿ ಸಿ ಸೆಲೆಕ್ಷನ್ ವೇಳೆ ಓಡುತ್ತಿದ್ದಾಗ ಕುಸಿದು ಬಿದ್ದಿದ್ದರು. ಕ್ಯಾಂಪಸ್ ನಲ್ಲೇಯ ಚಿಕಿತ್ಸೆ ನೀಡಿ ಖಾಸಗಿ ಆಸ್ಪತ್ರೆಗೆ ವಿದ್ಯಾರ್ಥಿ ಆಸ್ತಿತ್ವ ಗುಪ್ತಾ ರವಾನಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/the-auspicious-time-for-the-renowned-marikamba-jatra-mahotsav-has-been-fixed/ https://kannadanewsnow.com/kannada/during-the-timarodi-detention-an-obstruction-to-the-polices-duty-notice-issued-to-the-activist-jayant-by-the-police/ https://kannadanewsnow.com/kannada/big-news-the-investigation-into-the-dharmasthala-case-is-90-complete-nia-cbi-not-needed-minister-ramalinga-reddy/

Read More

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸೋದಕ್ಕೆ ತೆರಳಿದ್ದಂತ ಸಂದರ್ಭದಲ್ಲಿ ಪೊಲೀಸರ ಕರ್ತವ್ಯಕ್ಕೆ ಹೋರಾಟಗಾರ ಜಯಂತ್ ಅಡ್ಡಿ ಪಡಿಸಿದ್ದಂತ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಹೋರಾಟಗಾರ ಜಯಂತ್ ಗೆ ಪೊಲೀಸರಿಂದ ನೋಟಿಸ್ ನೀಡಲಾಗಿದೆ. ಬೆಳ್ತಂಗಡಿಯಲ್ಲಿರುವಂತ ಎಸ್ಐಟಿ ಕಚೇರಿಗೆ ತೆರಳಿದಂತ ಹೋರಾಟಗಾರ ಜಯಂತ್ ಅವರು ಪೊಲೀಸರಿಂದ ನೋಟಿಸ್ ಪಡೆದಿದ್ದಾರೆ. ಆ ಬಳಿಕ ಪೊಲೀಸರ ನೋಟಿಸ್ ಹಿನ್ನಲೆಯಲ್ಲಿ ವಿಚಾರಣೆಗೂ ಹಾಜರಾಗುವ ಸಾಧ್ಯತೆ ಇದೆ. https://kannadanewsnow.com/kannada/commissioner-warns-of-legal-action-if-chanda-collection-is-forcibly-conducted-for-ganesh-festival-in-bangalore/ https://kannadanewsnow.com/kannada/big-news-the-investigation-into-the-dharmasthala-case-is-90-complete-nia-cbi-not-needed-minister-ramalinga-reddy/

Read More

ಬೆಂಗಳೂರು: ನಗರದಲ್ಲಿ ಗಣೇಶ ವಿಸರ್ಜನೆ ವೇಳೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಕ್ರಮ ಕೈಗೊಳ್ಳಲು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಗಣೇಶೋತ್ಸವಕ್ಕೆ ಬಲವಂತವಾಗಿ ಚಂದಾ ವಸೂಲಿ ಮಾಡಿದ್ರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಕಮೀಷನರ್ ಎಚ್ಚರಿಕೆ ನೀಡಿದ್ದಾರೆ. ಇಂದು ಬೆಂಗಳೂರಲ್ಲಿ ಗಣೇಶ ವಿಸರ್ಜನೆ ವೇಳೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಕ್ರಮ ವಹಿಸಲು ಡಿಸಿಪಿ, ಎಸಿಪಿಗಳ ಜೊತೆ ಸಭೆ ನಡೆಸಿದರು. ಈ ಬಳಿಕ ಮಾತನಾಡಿದಂತ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಅವರು, ಎಲ್ಲಾ ವಿಭಾಗದ ಡಿಸಿಪಿಗಳು, ಎಸಿಪಿಗಳ ಜೊತೆಗೆ ಸಭಎ ಮಾಡಿದ್ದೇನೆ. ನಿಯಮ ಉಲ್ಲಂಘನೆಯಾದರೇ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು. ಬಲವಂತವಾಗಿ ಯಾರೂ ಸಹ ಚಂದಾ ವಸೂಲಿ ಮಾಡುವಂತಿಲ್ಲ. ಬಲವಂತವಾಗಿ ವಸೂಲಿ ಮಾಡಿದ್ರೆ ಪ್ರಕರಣ ದಾಖಲಿಸಲಾಗುತ್ತದೆ. ಇದುವರೆಗೂ ಆ ರೀತಿಯ ಯಾವುದೇ ದೂರುಗಳು ಬಂದಿಲ್ಲ. ಭದ್ರತೆ ವಿಚಾರದಲ್ಲಿ ಎಲ್ಲಾ ಸಿಬ್ಬಂದಿಗೂ ಕ್ರಮಕ್ಕೆ ಸೂಚಿಸಲಾಗಿದೆ ಎಂಬುದಾಗಿ ಬೆಂಗಳೂರು ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ತಿಳಿಸಿದರು. https://kannadanewsnow.com/kannada/mla-c-p-yogeshwar-passes-away-in-a-road-accident/ https://kannadanewsnow.com/kannada/big-news-the-investigation-into-the-dharmasthala-case-is-90-complete-nia-cbi-not-needed-minister-ramalinga-reddy/

Read More

ಬೆಂಗಳೂರು ದಕ್ಷಿಣ: ಬೈಕಿನಲ್ಲಿ ತೆರಳುತ್ತಿದ್ದಂತ ಶಾಸಕ ಸಿ.ಪಿ ಯೋಗೇಶ್ವರ್ ಅವರ ಭಾವಗೆ ಟಾಟಾ ಏಸ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ತಿಪ್ಪಮಾರನಹಳ್ಳಿ ಬಳಿಯಲ್ಲಿ ಶಾಸಕ ಸಿ.ಪಿ ಯೋಗೇಶ್ವರ್ ಅವರ ಭಾವ ಶಿವಲಿಂಗಯ್ಯ(57) ತೆರಳುತ್ತಿದ್ದರು. ಅವರಿಗೆ ತಿಟ್ಟಮಾರನಹಳ್ಳಿ ಬಳಿ ತಗಚಗೆರೆ ಗ್ರಾಮದಲ್ಲಿ ಟಾಟಾ ಏಸ್ ಡಿಕ್ಕಿಯಾಗಿ ಸಾವನ್ನಪ್ಪಿದ್ದಾರೆ. ಮೃತ ಶಿವಲಿಂಗಯ್ಯ ಅವರು ಶಾಸಕ ಸಿ.ಪಿ ಯೋಗೇಶ್ವರ್ ದೊಡ್ಡಪ್ಪನ ಮಗಳ ಪತಿಯಾಗಿದ್ದರು. ಬೈಕ್ ಸವಾರ ಶಿವಲಿಂಗಯ್ಯ ತಲೆ, ಕಾಲಿಗೆ ಗಂಭೀರವಾಗಿ ಗಾಯವಾಗಿತ್ತು. ತೀವ್ರ ರಕ್ತಸ್ತ್ರಾವವಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದಂತ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/ramalinga-reddy-and-saumyareddy-take-significant-steps-for-an-eco-friendly-ganesh-festival-free-distribution-of-clay-ganesh-idols/ https://kannadanewsnow.com/kannada/the-auspicious-time-for-the-renowned-marikamba-jatra-mahotsav-has-been-fixed/

Read More

ಬೆಂಗಳೂರು: ಪರಿಸರ ಸ್ನೇಹಿ ಗಣಪತಿ ಆಚರಣೆಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಮಹತ್ವದ ಹೆಜ್ಜೆ ಇರಿಸಿದ್ದಾರೆ. ಇದರ ಭಾಗವಾಗಿ ಆಗಸ್ಟ್.26ರ ನಾಳೆ ಬೆಂಗಳೂರಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಮಣ್ಣಿನ ಗಣಪತಿಯನ್ನು ವಿತರಣೆ ಮಾಡಲಿದ್ದಾರೆ. ಕಳೆದ 10 ರಿಂದ 15 ವರ್ಷಗಳಿಂದ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮತ್ತು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯರೆಡ್ಡಿ ಅವರು ಸಾರ್ವಜನಿಕರಿಗೆ ಉಚಿತವಾಗಿ ಮಣ್ಣಿನ ಗಣೇಶ ಮೂರ್ತಿಗಳನ್ನು ವಿತರಣೆ ಮಾಡುತ್ತಾ ಬಂದಿದ್ದಾರೆ. POP ಗಣಪಗಳ ವಿಸರ್ಜನೆಯಿಂದ ಮಾಲಿನ್ಯಕ್ಕೆ‌ ಅದರಲ್ಲೂ ಜಲ ಮಾಲಿನ್ಯವಾಗುತ್ತದೆ. ಪರಿಸರ ಮಾಲಿನ್ಯ ತಡೆಗಟ್ಟುವುದು ಮತ್ತು ಅಂತರ್ಜಲದ ಗುಣಮಟ್ಟಕ್ಕೆ ಯಾವುದೇ ಹಾನಿಕಾರಕವಾಗದಂತೆ, ನೈಸರ್ಗಿಕ ಸಮತೋಲನ ಕಾಪಾಡುವಲ್ಲಿ ಸಹಕಾರಿಯಾಗುವ ಈ‌ ಮಣ್ಣಿನ ಗಣಪತಿ ಸ್ಥಾಪನೆ ಮತ್ತು‌ ವಿಸರ್ಜನೆಯ ಉಪಕ್ರಮವು, ಪರಿಸರ ಸ್ನೇಹಿಯಾಗಿದೆ. ನಾಳೆ ಈ ಕೆಳಕಂಡ ಸ್ಥಳದಲ್ಲಿ ರಾಮಲಿಂಗಾರೆಡ್ಡಿ, ಸೌಮ್ಯಾ ರೆಡ್ಡಿ ಅವರು ಮಣ್ಣಿನ ಗಣಪತಿಯನ್ನು ಉಚಿತವಾಗಿ ವಿತರಣೆ 1. ದಿನಾಂಕ: 26.08.2025 ರಂದು ಬೆಳಿಗ್ಗೆ 8.30…

Read More

ನವದೆಹಲಿ: ಹಿರಿಯ ಬ್ಯಾಂಕರ್ ರಾಜೀವ್ ಆನಂದ್ ಅವರು ಇಂಡಸ್ಇಂಡ್ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ಬ್ಯಾಂಕ್ ಸೋಮವಾರ ವಿನಿಮಯ ಕೇಂದ್ರಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಿದೆ. ಈ ತಿಂಗಳ ಆರಂಭದಲ್ಲಿ ನೇಮಕಾತಿ ಘೋಷಿಸಲಾದ ಆನಂದ್, ಈ ಹಿಂದೆ ಖಾಸಗಿ ಸಾಲದಾತ ಆಕ್ಸಿಸ್ ಬ್ಯಾಂಕಿನಲ್ಲಿ ಉಪ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು ಮತ್ತು ಪ್ರಮುಖ ಜಾಗತಿಕ ಹಣಕಾಸು ಸಂಸ್ಥೆಗಳಲ್ಲಿ ಪ್ರಮುಖ ನಿರ್ವಹಣಾ ಹುದ್ದೆಗಳನ್ನು ಅಲಂಕರಿಸಿದ್ದರು. ಇಂಡಸ್ಇಂಡ್ ಬ್ಯಾಂಕ್ ಮಾರ್ಚ್ 31 ಕ್ಕೆ ಕೊನೆಗೊಂಡ ವರ್ಷದಲ್ಲಿ $230 ಮಿಲಿಯನ್ ನಷ್ಟವನ್ನು ಅನುಭವಿಸಿತು, ಇದರಿಂದಾಗಿ ಏಪ್ರಿಲ್‌ನಲ್ಲಿ ಆಂತರಿಕ ಉತ್ಪನ್ನ ವಹಿವಾಟುಗಳ ತಪ್ಪು ಲೆಕ್ಕಪತ್ರ ನಿರ್ವಹಣೆಯಿಂದಾಗಿ ಸಿಇಒ ಸುಮಂತ್ ಕಠ್ಪಾಲಿಯಾ ಮತ್ತು ಉಪ ಅರುಣ್ ಖುರಾನಾ ರಾಜೀನಾಮೆ ನೀಡಿದರು. ಇದು ಒಂದು ಬ್ರೇಕಿಂಗ್ ಸ್ಟೋರಿ. ಶೀಘ್ರದಲ್ಲೇ ಹೆಚ್ಚಿನ ಮಾಹಿತಿಯನ್ನು ಸೇರಿಸಲಾಗುವುದು… https://kannadanewsnow.com/kannada/israeli-airstrike-on-gaza-hospital-kills-atleast-19-including-4-journalists/ https://kannadanewsnow.com/kannada/big-news-the-investigation-into-the-dharmasthala-case-is-90-complete-nia-cbi-not-needed-minister-ramalinga-reddy/

Read More