Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ ಕ್ಯಾನ್ಸರ್ ಪೀಡಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರಿ ವಸತಿ ಶಾಲೆ ಆರಂಭಕ್ಕೆ ಸರ್ಕಾರ ನಿರ್ಧರಿಸಿರುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಕ್ಯಾನ್ಸರ್ನಿಂದ ಬಳಲುತ್ತಿರುವ 3,500 ವಿದ್ಯಾರ್ಥಿಗಳನ್ನು ಗುರುತಿಸಲಾಗಿದೆ. ಅವರಿಗೆ ಶಿಕ್ಷಣದೊಂದಿಗೆ ನಿರಂತರವಾಗಿ ಚಿಕಿತ್ಸೆ ಹಾಗೂ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯ ಪರಿಸರದಲ್ಲಿ ವಸತಿಯುತ ಶಾಲೆ (ಕ್ಯಾನ್ಸರ್ ರೆಸಿಡೆನ್ಸಿಯಲ್ ಸ್ಕೂಲ್) ಆರಂಭಿಸಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1934595121150107929 https://kannadanewsnow.com/kannada/kantara-chapter-1-faces-difficulties-again-tahsildar-issues-notice-3-day-deadline-for-response/ https://kannadanewsnow.com/kannada/case-registered-against-three-in-sadanand-murder-case-in-sagar-what-is-in-the-fir/
ಬೆಂಗಳೂರು: ರಾಜ್ಯದ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿಗೆ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ಜುಲೈ 1 ರಿಂದ ಜಾರಿ ಮಾಡಲಾಗುತ್ತಿದೆ. ಇದರಿಂದ ವೈದ್ಯರ ಗೈರಿನ ಬಗ್ಗೆ ಸಾರ್ವಜನಿಕರ ದೂರುಗಳು ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1934594226978738620 ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಪ್ರಸ್ತುತ ಬಳಸಲ್ಪಡುತ್ತಿರುವ ಹಾಜರಾತಿ ನಿರ್ವಹಣಾ ವ್ಯವಸ್ಥೆಯು ಮೀಸಲಾದ ಹಾರ್ಡ್ವೇ ಸಾಧನಗಳ ಮೂಲಕ ಆಧಾರ್ ಆಧಾರಿತ ಬಯೋಮೆಟ್ರಿಕ್ ಪ್ರಮಾಣೀಕರಣವನ್ನು ಅವಲಂಭಿಸಿದೆ. ಹಾರ್ಡ್ ಸಾಧನಗಳಿಗೆ ಆಗಾಗ್ಗೆ ನಿರ್ವಹಣೆ, ದುರಸ್ತಿ ಮತ್ತು ಆವರ್ತಕ ಬದಲಾವಣೆಗಳ ಅಗತ್ಯವಿದ್ದು, ಇದು ಇಲಾಖೆಗೆ ಗಣನೀಯ ಪುನರಾವರ್ತಿತ ವೆಚ್ಚಗಳಿಗೆ ಕಾರಣವಾಗಿದೆ. ಬಯೋಮೆಟ್ರಿಕ್ ಸಾಧನಗಳ ಸ್ಥಿರ ಸ್ವರೂಪದಿಂದಾಗಿ ಹಾಜರಾತಿ ಗುರುತಿಸುವಿಕೆಯನ್ನು ನಿರ್ದಿಷ್ಟ ಸ್ಥಳಗಳಿಗೆ ಸೀಮಿತಗೊಳಿಸಿದೆ. ಕ್ಷೇತ್ರ ಸಿಬ್ಬಂದಿ ಮತ್ತು ದೂರದ ಪ್ರದೇಶಗಳಲ್ಲಿ ಕೆಲಸ ಮಾಡುವವರಿಗೆ ಅಸಮರ್ಥತೆಗಳನ್ನು ಸೃಷ್ಟಿಸುತ್ತದೆ. ಈ ವ್ಯವಸ್ಥೆಯ ಸೀಮಿತ…
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿ ಕೋರಿ ಅರ್ಜಿ ಸಲ್ಲಿಸುವವರಿಗೆ ಜುಲೈ 1 ರಿಂದ ಇ-ಖಾತಾ ಕಡ್ಡಾಯವಾಗಿರುತ್ತದೆ. ಸೂಕ್ತ ದಾಖಲೆಗಳೊಂದಿಗೆ ಆನ್ಲೈನ್ https://bbmp.karnataka.gov.in/newkhata/ ಮೂಲಕ ಅರ್ಜಿ ಸಲ್ಲಿಸಿ ಇ – ಖಾತಾ ಪಡೆದುಕೊಳ್ಳಬಹುದು. https://twitter.com/KarnatakaVarthe/status/1934588801411633657 ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ ಇಒಡಿಬಿ-ಒಬಿಪಿಎಸ್ (EoDB-OBPS) ತಂತ್ರಾಂಶದ ಮೂಲಕ ಕಟ್ಟಡ ನಕ್ಷೆ ಮಂಜೂರಾತಿಯನ್ನು ಆನ್ಲೈನ್ ನಲ್ಲಿ ನೀಡಲಾಗುತ್ತಿರುತ್ತದೆ. ಪಾಲಿಕೆಯ ಕಂದಾಯ ವಿಭಾಗದಿಂದ ಇ-ಆಸ್ತಿ ತಂತ್ರಾಂಶವನ್ನು ಜಾರಿ ಮಾಡಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಈಗಾಗಲೇ ಇ-ಖಾತಾ ನೀಡಲಾಗುತ್ತಿರುತ್ತದೆ. ಇಂತಹ ಸ್ವತ್ತುಗಳ ದತ್ತಾಂಶವು ಇ-ಆಸ್ತಿ ತಂತ್ರಾಂಶದಲ್ಲಿ ಲಭ್ಯವಿರುತ್ತದೆ. ಪಾಲಿಕೆಯ ನಗರ ಯೋಜನಾ ವಿಭಾಗದಿಂದ ನಕ್ಷೆ ಮಂಜೂರಾತಿ ನೀಡುತ್ತಿರುವ ಇಒಡಿಬಿ-ಒಬಿಪಿಎಸ್ ಆನ್ ಲೈನ್ ತಂತ್ರಾಂಶವನ್ನು ಪಾಲಿಕೆಯ ಕಂದಾಯ ವಿಭಾಗದಿಂದ ಇ-ಖಾತಾ ನೀಡುತ್ತಿರುವ ಇ-ಆಸ್ತಿ ತಂತ್ರಾಂಶದೊಂದಿಗೆ ಏಕೀಕರಣಗೊಳಿಸಲು ಕ್ರಮ ಜರುಗಿಸಲಾಗಿದೆ. ನಿವೇಶನ /ಸ್ವತ್ತಿನ ಕಂದಾಯ ದಾಖಲಾತಿಗಳ ಪರಿಶೀಲನಾ ತಂತ್ರಾಂಶದಲ್ಲಿ ಸ್ವಯಂಚಾಲಿತವಾಗಿ ಕೈಗೊಳ್ಳಲು ದಿನಾಂಕ: 01-07-2025 ರಿಂದ ಸ್ವತ್ತಿನ ಇ-ಖಾತಾ/ಇಪಿಐಡಿ ಸಂಖ್ಯೆಯನ್ನು ಆನ್ಲೈನ್ ತಂತ್ರಾಂಶದಲ್ಲಿ ನಮೂದಿಸುವುದು ಹಾಗೂ ಇ-ಖಾತಾ ಸಲ್ಲಿಸುವುದು ಅವಶ್ಯವಿರುತ್ತದೆ.…
ಬೆಂಗಳೂರು: ರಾಜ್ಯ ಸರ್ಕಾರದಿಂದ ಪಿಎಸ್ಐ ನೇಮಕಾತಿ ಹಗರಣದಲ್ಲಿ ಕರ್ತವ್ಯಲೋಪವೆಸಗಿರುವ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಇದೀಗ ಅಮಾನತನ್ನು ಸರ್ಕಾರ ತೆರವುಗೊಳಿಸಿ ಆದೇಶಿಸಿದೆ. ಈ ಸಂಬಂಧ ಡೈರೆಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಪರವಾಗಿ ಡಿಐಜಿಪಿ(ಆಡಳಿತದ ಕಾರ್ತಿಕ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಕೆಎಸ್ ಪಿ (ಡಿಪಿ) ನಿಯಮಗಳು 1965/89ರ ನಿಯಮ-5ರನ್ವಯ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಸೇವೆಯಿಂದ ಅಮಾನತ್ತಿನಲ್ಲಿರಿಸಿರುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ತೆರವುಗೊಳಿಸಿರುವುದಾಗಿ ಹೇಳಿದ್ದಾರೆ. ಇನ್ನೂ ಅಮಾನತುಗೊಂಡಿದ್ದಂತ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ, ಸಶಸ್ತ್ರ ವಿಭಾಗದ ಡಿವೈಎಸ್ಪಿ ಶಾಂತಕುಮಾರ್, ಸಹಾಯಕ ಕಮಾಂಡೆಂಟ್ ವೈಜ್ಯನಾಥ್ ಕಲ್ಯಾಣಿ ರೇವೂರ ಹಾಗೂ ಪಿಐ ಆನಂದ ಮೇತ್ರಿ ಎಂಬುವರನ್ನು ಕಾರ್ಯಕಾರ್ಯೇತರ ಹುದ್ದೆಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದ್ದಾರೆ. ಅಂದಹಾಗೇ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಅವರನ್ನು ಬೆಂಗಳೂರಿನ ಐಎಸ್ ಡಿಗೆ ಸ್ಥಳ ನಿಯುಕ್ತಿಗೊಳಿಸಿದ್ದರೇ, ಶಾಂತಕುಮಾರ್ ಅವರನ್ನು ಹಾಸನದ ಪಿಟಿಎಸ್ ಗೆ, ವೈಜ್ಯನಾಥ್ ಕಲ್ಯಾಣಿ ರೇವೂರ ಅವರನ್ನು ಮಂಗಳೂರಿನ ಕೆ ಎಸ್ ಆರ್ ಪಿ ಯ 7ನೇ ಪಡೆಗೆ ಹಾಗೂ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ಈ ಕಾರಣದಿಂದಾಗಿ ಅಲ್ಲಲ್ಲಿ ಮಳೆಹಾನಿ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನಲೆಯಲ್ಲಿ ಸಾಗರ ತಾಲ್ಲೂಕಿನ ಅಧಿಕಾರಿಗಳು, ಸಿಬ್ಬಂದಿಗಳು ಕರ್ತವ್ಯಕ್ಕೆ ರಜೆ ಹಾಕದೆ ನೆರೆ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಮೂರ್ತಿ ಸೂಚಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಪ್ರವಾಸಿ ಮಂದಿರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಅನುಪಸ್ಥಿತಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಳೆಹಾನಿ ಕುರಿತು ಮಾಹಿತಿ ಪಡೆದರು. ಈ ವೇಳೆ ಅಧಿಕಾರಿಗಳಿಗೆ ಮಳೆಗಾಲದಲ್ಲಿ ಸಾಂಕ್ರಾಮಿಕ ಕಾಯಿಲೆಗಳು ಹರಡುವ ಸಾಧ್ಯತೆ ಇರುವುದರಿಂದ ಆರೋಗ್ಯ ಇಲಾಖೆ ಹೆಚ್ಚು ಜಾಗೃತೆ ವಹಿಸಬೇಕು. ಡೆಂಗ್ಯೂ ಪ್ರಕರಣಗಳು ಸಾಗರ ತಾಲ್ಲೂಕಿನಲ್ಲಿ ಹೆಚ್ಚಳವಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲು ಸೂಚಿಸಿದರು. ಸಾಗರ ತಾಲ್ಲೂಕಿನಲ್ಲಿ ಶಿಥಿಲಗೊಂಡಿರುವ ಶಾಲೆಗಳ ಬಗ್ಗೆ ಹೆಚ್ಚು ಗಮನ ಹರಿಸಿ, ಕೆಲವು ಪ್ರದೇಶಗಳಲ್ಲಿ ಮಕ್ಕಳು ಕಾಲುಸಂಕ ದಾಟಿಕೊಂಡು ಶಾಲೆಗೆ ಹೋಗುತ್ತಾರೆ. ಅಂತಹ ಸ್ಥಳಗಳ ಬಗ್ಗೆ ಹೆಚ್ಚಿನ ಗಮನ…
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಹತ್ತಿರ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಜನರ ಭದ್ರತೆಗೆ ಪ್ರಥಮ ಆದ್ಯತೆ ನೀಡಬೇಕಾದ ರಾಜ್ಯ ಸರ್ಕಾರ, ತನ್ನ ಜನವಿರೋಧಿ ನಿರ್ಲಕ್ಷ್ಯ ನೀತಿಯನ್ನೇ ಕಾಯಕವಾಗಿ ಮಾಡಿಕೊಂಡ ಪರಿಣಾಮವಾಗಿ ಈ ದುರ್ಘಟನೆ ನಡೆದಿದೆ. ಅಧಿಕಾರದ ಕುರ್ಚಿಗೆ ಅಂಟಿಕೊಂಡಿರುವ ಈ ಸರ್ಕಾರ, ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಇತರರ ಮೇಲೆ ತನ್ನ ತಪ್ಪನ್ನು ಹೊರಿಸಲು ಪ್ರಯತ್ನಿಸಿದೆ. ಆದರೆ ಸತ್ಯವನ್ನು ಮರೆಮಾಚಲು ಸಾಧ್ಯವಿಲ್ಲ ಎಂದಿದ್ದಾರೆ. ಈ ಭೀಕರ ಘಟನೆಯ ಹಿನ್ನೆಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಹಾಗೂ ಮಾನ್ಯ ಗೃಹಸಚಿವರಾದ ಡಾ. ಜಿ. ಪರಮೇಶ್ವರ ಅವರು ಘಟನೆಯ ನೈತಿಕ ಹೊಣೆ ಹೊತ್ತು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ. https://TWITTER.com/NswamyChalavadi/status/1934638737570599300
ಬಳ್ಳಾರಿ : ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕೃತಿ ಮತ್ತು ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ ಅರ್ಹ ಮಕ್ಕಳಿಂದ ಪ್ರಸ್ತಕ ಸಾಲಿನ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಆರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅನ್ಲೈನ್ ಮೂಲಕ https://awards.gov.in ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. 2025 ನೇ ಜುಲೈ 31 ಕ್ಕೆ ಅನ್ವಯವಾಗುವಂತೆ 05 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿರುವ ಸಾಧನೆ ಮಾಡಿರುವ ಎಲ್ಲಾ ಮಕ್ಕಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್ಮೆಂಟ್ನ ಶಾಂತಿಧಾಮ ಆವರಣದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಚೇರಿ ಅಥವಾ ದೂ.08392-241373 ಗೆ ಸಂಪರ್ಕಿಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪ್ರಕಟಣೆಯಲ್ಲಿ…
ಸ್ವೀಡನ್ : ಕರ್ನಾಟಕವನ್ನು ಶುದ್ಧ ಇಂಧನ ಸಂಚಾರ (ಕ್ಲೀನ್ ಮೊಬಿಲಿಟಿ) ಮತ್ತು ವಿದ್ಯುತ್ಚಾಲಿತ ವಾಹನ (ಇವಿ) ತಯಾರಿಕೆಯ ನಾವೀನ್ಯತೆಯ ಜಾಗತಿಕ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಹೂಡಿಕೆದಾರರ ಗಮನ ಸೆಳೆಯಲು ಸ್ವೀಡನ್ನ ಗೋಥೆನ್ಬರ್ಗ್ನಲ್ಲಿ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರ ನೇತೃತ್ವದಲ್ಲಿನ ಕರ್ನಾಟಕದ ಉನ್ನತ ಮಟ್ಟದ ನಿಯೋಗವು ರೋಡ್ಷೋ ನಡೆಸಿತು. ಇದೇ ವರ್ಷದ ಫೆಬ್ರುವರಿಯಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ʼಇನ್ವೆಸ್ಟ್ ಕರ್ನಾಟಕ 2025ʼರಲ್ಲಿ ಆಗಿರುವ ಹೂಡಿಕೆ ಒಪ್ಪಂದಗಳನ್ನು ತ್ವರಿತವಾಗಿ ಜಾರಿಗೊಳಿಸಲು ಹಾಗೂ ಜಾಗತಿಕ ಹೂಡಿಕೆದಾರರನ್ನು ಆಕರ್ಷಿಸಲು ನಡೆಯಲಿರುವ 10 ದಿನಗಳ ಅಂತರರಾಷ್ಟ್ರೀಯ ರೋಡ್ಷೋಗಳಲ್ಲಿ ಸಚಿವ ಪಾಟೀಲ ಅವರು ಭಾಗವಹಿಸಲಿದ್ದಾರೆ. ಸ್ವೀಡನ್ ನಂತರ ಕರ್ನಾಟಕದ ನಿಯೋಗವು ಸಚಿವ ಪಾಟೀಲ ಅವರ ನೇತೃತ್ವದಲ್ಲಿ ಡೆನ್ಮಾರ್ಕ್ನಲ್ಲಿಯೂ ರೋಡ್ಷೋ ನಡೆಸಲಿದೆ. ಇಲ್ಲಿ ನಡೆಯುತ್ತಿರುವ ಇವಿಎಸ್38 ಶೃಂಗಸಭೆಯು ವಿದ್ಯುತ್ ಚಾಲಿತ ವಾಹನಗಳ ತಯಾರಿಕೆ, ಬಳಕೆ ಹೆಚ್ಚಳ ಮತ್ತು ಅತ್ಯಾಧುನಿಕ ವಾಹನ ತಯಾರಿಕೆಯ ತಂತ್ರಜ್ಞಾನಗಳ ಮೇಲೆ ಗಮನ ಕೇಂದ್ರೀಕರಿಸಿದ ಪ್ರಮುಖ ಜಾಗತಿಕ ಸಮ್ಮೇಳನವಾಗಿದೆ. ಶೃಂಗಸಭೆಯ ಸಂದರ್ಭದಲ್ಲಿ ನಡೆದ…
ಮೈಸೂರು: ಪ್ರತಿಷ್ಠಿತ ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನ(ನೋಂ)ಕ್ಕೆ ಅಧ್ಯಕ್ಷರಾಗಿ ರಾಜಶೇಖರ ಕದಂಬ, ಕಾರ್ಯದರ್ಶಿಯಾಗಿ ಮಹದೇವಶೆಟ್ಟಿ, ಸಂಚಾಲಕರಾಗಿ ರುದ್ರಣ್ಣ ಹರ್ತಿಕೋಟೆ ಮರು ಆಯ್ಕೆಯಾಗಿದ್ದಾರೆ. ಪ್ರತಿಷ್ಠಿತ ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನ(ನೋಂ)ಕ್ಕೆ ಅಧ್ಯಕ್ಷರಾಗಿ ರಾಜಶೇಖರ ಕದಂಬ, ಕಾರ್ಯದರ್ಶಿಯಾಗಿ ಕೆ.ಸಿ.ಮಹದೇವಶೆಟ್ಟಿ, ಸಂಚಾಲಕರಾಗಿ ರುದ್ರಣ್ಣ ಹರ್ತಿಕೋಟೆ ಮರು ಆಯ್ಕೆಗೊಂಡಿದ್ದಾರೆ. ದಿನಾಂಕ 15-06-2025 ರಂದು ನಡೆದ ಸಭೆಯಲ್ಲಿ ಸರ್ವಾನುಮತದಿಂದ ಇವರನ್ನು ಆಯ್ಕೆ ಮಾಡಲಾಯಿತು. ಇನ್ನುಳಿದಂತೆ ಗೌರವಾಧ್ಯಕ್ಷರಾಗಿ ಪ್ರೊ.ಎಚ್.ಎಂ.ಪರಮೇಶ್ವರಯ್ಯ, ಉಪಾಧ್ಯಕ್ಷರಾಗಿ ಡಾ.ಮಾನಸ, ಸಹಕಾರ್ಯದರ್ಶಿಯಾಗಿ ಸಿ.ಚಿಕ್ಕಣ್ಣ. ಖಜಾಂಚಿಯಾಗಿ ಆರ್.ಚಂದ್ರಶೇಖರಯ್ಯ, ನಿರ್ದೇಶಕರುಗಳಾಗಿ ಪ್ರೊ.ಎಸ್.ಜಿ.ಸಿದ್ಧರಾಮಯ್ಯ, ಕಾ.ತ.ಚಿಕ್ಕಣ್ಣ, ಡಾ.ಬಿ.ಕೆ.ರವಿ, ಎಸ್.ನಾಗಣ್ಣ, ಬಾಬುರಾವ್, ಡಾ.ಮೈಲಹಳ್ಳಿ ರೇವಣ್ಣ, ಡಾ.ಪರಶುರಾಂ.ಸಿ.ಡಿ. ಡಾ.ವಾಣಿಶ್ರೀ ಅರುಣ್. ಸೌಜನ್ಯ ಪರಮೇಶ್, ಶಂಕ ಹರ್ತಿಕೋಟೆ ಹಾಗೂ ಹೆಚ್.ಆರ್.ದಿನೇಶ್ ಆಯ್ಕೆಯಾಗಿದ್ದಾರೆ. https://kannadanewsnow.com/kannada/in-the-state-a-total-of-208-people-tested-positive-for-corona/ https://kannadanewsnow.com/kannada/case-registered-against-three-in-sadanand-murder-case-in-sagar-what-is-in-the-fir/
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದೆ. ಇಂದು ಬರೋಬ್ಬರಿ 208 ಜನರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತು ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 386 ಜನರನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 208 ಜನರಿಗೆ ಪಾಸಿಟಿವ್ ಬಂದಿದೆ ಎಂದಿದೆ. ಇಂದು 208 ಜನರಿಗೆ ಕೋವಿಡ್ ಪಾಸಿಟಿವ್ ಬಂದ ಕಾರಣ ಸಕ್ರೀಯ ಸೋಂಕಿತರ ಸಂಖ್ಯೆ 696ಕ್ಕೆ ಏರಿಕೆಯಾಗಿದೆ. ಇವರಲ್ಲಿ 692 ಮಂದಿ ಹೋಂ ಐಸೋಲೇಷನ್, ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 103 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದೆ. https://kannadanewsnow.com/kannada/lokayukta-police-blackmail-case-against-government-official-accused-ningappa-remanded-in-14-day-judicial-custody/ https://kannadanewsnow.com/kannada/case-registered-against-three-in-sadanand-murder-case-in-sagar-what-is-in-the-fir/













