Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ‘ರಾಜ್ಯದಲ್ಲಿ ಇಂಥ ಪೊಲೀಸ್ ಬೇಜವಾಬ್ದಾರಿಯನ್ನು ನಾವು ಯಾವತ್ತೂ ಕಂಡಿಲ್ಲ’ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ. ‘ಶಾಸಕರಾದ ಪೊನ್ನಣ್ಣ, ಮಂಥರ್ ಗೌಡ ಇವರಿಬ್ಬರ ಹೆಸರನ್ನು ಎಫ್ಐಆರ್ನಲ್ಲಿ ಸೇರಿಸಬೇಕು’ ಎಂದು ಆಗ್ರಹಿಸಿದರು. ಇದರ ಹಿಂದೆ ಇರುವರೆನ್ನಲಾದ ಕೊಡಗಿನ ಎಸ್ಪಿಯನ್ನು ಸಸ್ಪೆಂಡ್ ಮಾಡಿ ಎಂದು ಒತ್ತಾಯಿಸಿದರು. ಮಾಧ್ಯಮಗಳ ಜೊತೆ ಇಂದು ಸಂಜೆ ಮಾತನಾಡಿದ ಅವರು, ‘ಮುಖ್ಯಮಂತ್ರಿಗಳೇ ನಮ್ಮ ಕಾರ್ಯಕರ್ತರನ್ನು ಈ ರೀತಿ ಮಾಡುವುದಾದರೆ ನಾವು ನಮ್ಮ ತೀರ್ಮಾನ ಮಾಡಬೇಕಾಗುತ್ತದೆ. ನಾವೂ ಅಧಿಕಾರ ನೋಡಿದ್ದೇವೆ. ಈ ಅಧಿಕಾರ ಕೊಟ್ಟವರು ಅದನ್ನು ಕಿತ್ತುಕೊಳ್ಳುವ ಕಾಲ ಬರುತ್ತದೆ’ ಎಂದು ಎಚ್ಚರಿಸಿದರು. ‘ದೂರಿನಲ್ಲಿ ಇರುವ ಇತರ ಹೆಸರುಗಳನ್ನು ಸೇರಿಸದಿದ್ದರೆ ಶವ ಮೇಲೆತ್ತಲು ಬಿಡುವುದಿಲ್ಲ’ ಎಂದು ತಿಳಿಸಿದರು. ರಾಜ್ಯಾಧ್ಯಕ್ಷ ವಿಜಯೇಂದ್ರ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೂ ಆಸ್ಪತ್ರೆಗೆ ಬರಲಿದ್ದಾರೆ ಎಂದು ಪ್ರಕಟಿಸಿದರು. ‘ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಸಾವಿಗೆ ಕಾರಣವನ್ನು ಅವರು ಡೆತ್ ನೋಟಿನಲ್ಲಿ ಬರೆದಿದ್ದಾರೆ. ನಾವು ಬೆಳಿಗ್ಗೆಯಿಂದ ಕಾಯುತ್ತಿದ್ದೇವೆ. ವಿಪಕ್ಷ ನಾಯಕ…
ಬೆಂಗಳೂರು: ಏಪ್ರಿಲ್ 6ರಂದು ಶ್ರೀರಾಮ ನವಮಿ ಹಬ್ಬ”ದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ. ದಿನಾಂಕ: 06-04-2025 ಭಾನುವಾರದಂದು “ಶ್ರೀರಾಮ ನವಮಿ ಹಬ್ಬ”ದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ರವರು ತಿಳಿಸಿದ್ದಾರೆ. ಹೀಗಾಗಿ ಬೆಂಗಳೂರು ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ವೀಕೆಂಡ್ ನಲ್ಲಿ ನಾನ್ ವೆಜ್ ಪ್ರಿಯರಿಗೆ ಮಟನ್, ಚಿಕನ್ ಸಿಗೋದಿಲ್ಲ. ಏಪ್ರಿಲ್.6ರ ನಂತ್ರ ಬೆಂಗಳೂರಲ್ಲಿ ಮಾಂಸ ಮಾರಾಟವಾಗಲಿದೆ. https://kannadanewsnow.com/kannada/important-information-for-those-who-applied-for-the-post-of-ksrtc-office-assistant/ https://kannadanewsnow.com/kannada/sc-refuses-to-quash-summons-issued-to-rahul-gandhi-for-derogatory-remarks-against-savarkar/
ಪತಿ ಉದ್ಧಾರವಾದಾಗ ಮಾತ್ರ, ಪತ್ನಿ ಮತ್ತು ಮಕ್ಕಳನ್ನು ಚೆನ್ನಾಗಿ ಸಾಕಲು ಸಾಧ್ಯವಾಗುತ್ತದೆ. ಅವರಿಗೆ ಬೇಕಾದ್ದನ್ನು ತೆಗೆದುಕೊಡಲು, ಒಳ್ಳೆಯ ಬಟ್ಟೆ, ಹೊಟ್ಟೆ ತುಂಬ ಊಟ ಹಾಕಲು ಸಾಧ್ಯವಾಗುತ್ತದೆ. ಇನ್ನು ಹಿಂದೂ ಧರ್ಮದ ಪ್ರಕಾರ, ಪತಿ ಉದ್ಧಾರವಾಗಬೇಕು, ಶ್ರೀಮಂತನಾಗಬೇಕು ಅಂದ್ರೆ, ಪತ್ನಿ ಕೆಲ ಕೆಲಸಗಳನ್ನು ಮಾಡಬೇಕಾಗುತ್ತದೆ. ಹಾಗಾದ್ರೆ ಏನು ಆ ಕೆಲಸ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ…
ಬೆಂಗಳೂರು: ಕೆ ಎಸ್ ಆರ್ ಟಿಸಿ ಕಚೇರಿ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ ಎನ್ನುವಂತೆ, ಸಂಭವನೀಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಕರಾರಸಾ ನಿಗಮ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನಿಗಮದ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಬಾಕಿ ಇದ್ದ ಕಛೇರಿ ಸಹಾಯಕ (ತೋಟಗಾರಿಕೆ– IV) ಪರಿಶಿಷ್ಟ ಜಾತಿ ಹಿಂಬಾಕಿ ಹುದ್ದೆಯ ಸಂಭವನೀಯ ಆಯ್ಕೆಪಟ್ಟಿ -2 ನ್ನು ದಿನಾಂಕ 02-04-2025 ರಂದು ನಿಗಮದ ಕೇಂದ್ರ ಕಛೇರಿಯ ಸೂಚನಾ ಫಲಕ ಮತ್ತು ಅಧಿಕೃತ ವೆಬ್-ಸೈಟ್ ksrtcjobs.karnataka.gov.in ನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದೆ. ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಸಂಭವನೀಯ ಆಯ್ಕೆಪಟ್ಟಿ ಪ್ರಕಟಿಸಿದ 15 ದಿನಗಳ ಒಳಗಾಗಿ ಪೂರಕ ದಾಖಲಾತಿಗಳೊಂದಿಗೆ ಆಕ್ಷೇಪಣೆಗಳನ್ನು ಅಧ್ಯಕ್ಷರು, ಆಯ್ಕೆ ಸಮಿತಿ, ಕರಾರಸಾ ನಿಗಮ, ಕೇಂದ್ರ ಕಛೇರಿ, ಕೆ.ಹೆಚ್. ರೋಡ್, ಶಾಂತಿನಗರ, ಬೆಂಗಳೂರು-27 ಇವರಿಗೆ ಸಲ್ಲಿಸುವುದು ಅಂತ ಹೇಳಿದೆ. https://kannadanewsnow.com/kannada/summer-special-trains-to-run-between-belagavi-mau-hubballi-katihar/ https://kannadanewsnow.com/kannada/sc-refuses-to-quash-summons-issued-to-rahul-gandhi-for-derogatory-remarks-against-savarkar/
ಬೆಂಗಳೂರು: ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಬೆಳಗಾವಿ-ಮವೂ ನಡುವೆ 6 ಟ್ರಿಪ್ ಮತ್ತು ಹುಬ್ಬಳ್ಳಿ-ಕಟಿಹಾರ್ ನಡುವೆ 4 ಟ್ರಿಪ್ ಬೇಸಿಗೆ ವಿಶೇಷ ರೈಲುಗಳನ್ನು ಓಡಿಸಲಿದೆ. ಈ ವಿಶೇಷ ರೈಲುಗಳ ಸೇವೆ ಈ ಕೆಳಗಿನಂತಿವೆ: 1. ಬೆಳಗಾವಿ-ಮವೂ ನಡುವೆ 6 ಟ್ರಿಪ್ ವಿಶೇಷ ರೈಲು (07327/07328) ಸಂಚಾರ: ರೈಲು ಸಂಖ್ಯೆ 07327 ಏಪ್ರಿಲ್ 6 ರಿಂದ ಮೇ 11, 2025 ರವರೆಗೆ ಪ್ರತಿ ಭಾನುವಾರ ಬೆಳಗಾವಿಯಿಂದ ಬೆಳಿಗ್ಗೆ 11:30 ಗಂಟೆಗೆ ಹೊರಟು, ಮಂಗಳವಾರ ಬೆಳಿಗ್ಗೆ10:30 ಗಂಟೆಗೆ ಉತ್ತರ ಪ್ರದೇಶದ ಮವೂ ನಿಲ್ದಾಣ ತಲುಪಲಿದೆ. ಇದೇ ರೈಲು (07328) ಏಪ್ರಿಲ್ 9 ರಿಂದ ಮೇ 14, 2025 ರವರೆಗೆ ಪ್ರತಿ ಬುಧವಾರ ಮವೂ ನಿಲ್ದಾಣದಿಂದ ರಾತ್ರಿ 8:00 ಗಂಟೆಗೆ ಹೊರಟು, ಶುಕ್ರವಾರ ಸಾಯಂಕಾಲ 5:00 ಗಂಟೆಗೆ ಬೆಳಗಾವಿ ನಿಲ್ದಾಣಕ್ಕೆ ಆಗಮಿಸಲಿದೆ. ಈ ರೈಲು ಎರಡೂ ಮಾರ್ಗಗಳಲ್ಲಿ ಲೋಂಡಾ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಬದಾಮಿ, ಬಾಗಲಕೋಟ, ಆಲಮಟ್ಟಿ, ವಿಜಯಪುರ, ಸೋಲಾಪುರ, ಕುರ್ದುವಾಡಿ,…
ಬೆಂಗಳೂರು: ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ಏರಿಕೆಯಾಗಿದ್ದು, ಹೆಚ್ಚಿನ ಬಿಸಿಲು ಇರುವ ಕಾರಣ, ಗ್ರಾಮೀಣ ಭಾಗದ ಜೀವನೋಪಾಯದ ಪ್ರಮುಖ ಭಾಗವಾದ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗದ ಕಾರ್ಮಿಕರಿಗೆ ಎಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಶೇ.30 ರಷ್ಟು ಹಾಗೂ ಜೂನ್ ಮಾಹೇಯಲ್ಲಿ ಶೇ.20 ರಷ್ಟು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ಘೋಷಿಸಿರುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೇಸಿಗೆ ದಿನಗಳಲ್ಲಿ ಕೂಲಿ ಕಾರ್ಮಿಕರು ಶಾಖಾಘಾತದಿಂದ, ತಮ್ಮ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಪ್ಪಿಸಲು ಬಿಳಿಯ ಬಣ್ಣದ ಸಡಿಲವಾದ ಖಾದಿ ಬಟ್ಟೆಗಳನ್ನು ಹಾಗೂ ತಲೆಯ ಮೇಲೆ ಬಿಳಿ ಬಣ್ಣದ ರುಮಾಲು ಧರಿಸಿ ಕೆಲಸ ಮಾಡಬೇಕು, ಚಹಾ, ಕಾಫಿ , ತಂಪಾದ ಪಾನೀಯಗಳು, ಮಸಾಲೆ ಮತ್ತು ಎಣ್ಣೆಭರಿತ ಆಹಾರದ ಬದಲಾಗಿ ಹೆಚ್ಚು ತೇವಾಂಶವುಳ್ಳ ತರಕಾರಿ, ಅಂಬಲಿ, ಮಜ್ಜಿಗೆ, ಎಳೆನೀರು ಸೇವನೆ ಮಾಡಬೇಕು ಹಾಗೂ ನೀರನ್ನು ಯಥೇಚ್ಛವಾಗಿ ಕುಡಿಯಬೇಕು…
ಬೆಂಗಳೂರು: ಧರ್ಮದ ವಿಷಯದಲ್ಲಿ ರಾಜಕೀಯ ಮಾಡಬಾರದು. ಆದರೆ ಬಿ.ಜೆ.ಪಿ ಅವರು ಧರ್ಮದ ಹೆಸರಿನಲ್ಲಿಯೇ ರಾಜಕೀಯ ಮಾಡುತ್ತಾ ಬಂದಿದ್ದರೂ ಸಹ, ರಾಜ್ಯದಲ್ಲಿ ಧಾರ್ಮಿಕ ದತ್ತಿ ಇಲಾಖೆಯಡಿಯಲ್ಲಿ ಬರುವ ದೇವಸ್ಥಾನಗಳ ಹಾಗೂ ಅರ್ಚಕರ ಕಲ್ಯಾಣ ಅಭಿವೃದ್ಧಿ ಮಾಡದೇ, ಕಾಂಗ್ರೆಸ್ ಸರ್ಕಾರ ಮಾಡಲು ಯೋಜಿಸಿರುವ ಕಾಯಿದೆಯನ್ನು ಸಹಿಸದೆ ರಾಜ್ಯಪಾಲರಿಗೆ ಒತ್ತಡ ಹೇರಿ ಸಹಿ ಹಾಕಿಸದೇ ಬಿಜೆಪಿಯು ಅರ್ಚಕ ಸಮೂಹಕ್ಕೆ ದ್ರೋಹ ಬಗೆಯುತ್ತಿದೆ ಎಂಬುದಾಗಿ ಅರ್ಚಕರ ಸಮೂಹ ಆಕ್ರೋಶ ವ್ಯಕ್ತ ಪಡಿಸಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಲಾಗಿದ್ದು, ಕಾಂಗ್ರೆಸ್ ಸರ್ಕಾರವು ಅರ್ಚಕರ ಕಲ್ಯಾಣಕ್ಕೆ ಯೋಜನೆ ರೂಪಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿ ವರ್ಷವಾದರೂ ಮಾನ್ಯ ರಾಜ್ಯಪಾಲರು ಸಹಿ ಹಾಕಿಲ್ಲ. ಅರ್ಚಕರ ಕಲ್ಯಾಣ ಯೋಜನೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿರುವುದು ವಿಳಂಬಕ್ಕೆ ಕಾರಣವಾಗಿದೆ ಎಂದಿದೆ. ಅರ್ಚಕರಿಗೆ ಮನೆ ನಿರ್ಮಾಣ, ರೂ. 10 ಲಕ್ಷ ಜೀವ ವಿಮೆ, ಅರ್ಚಕರ ಮಕ್ಕಳಿಗೆ ಪ್ರತಿ ವರ್ಷ ವಿದ್ಯಾರ್ಥಿ ವೇತನ, ಪ್ರತಿ ವರ್ಷ ‘ಸಿ’ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿ ಇತ್ಯಾದಿ ಸೌಲಭ್ಯ ನೀಡಬೇಕೆಂಬ ಉದ್ದೇಶದಿಂದ ರೂಪಿಸಿರುವ ಕಾನೂನು…
ಬಳ್ಳಾರಿ : ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಪಿಂಚಣಿದಾರರ ಕುಂದು ಕೊರತೆ ಆಲಿಸಿ, ಪರಿಹರಿಸಲು ಏ.15 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಕೆ.ವೆಂಕಟ ಸುಬ್ಬಯ್ಯ ಅವರು ತಿಳಿಸಿದ್ದಾರೆ. ಬಳ್ಳಾರಿ, ವಿಜಯನಗರ, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಕುಂದುಕೊರತೆಗಳಿದ್ದಲ್ಲಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಪತ್ರ ಅಥವಾ ಇ-ಮೇಲ್ ಮೂಲಕ ಪಿ.ಪಿ.ಒ ಸಂಖ್ಯೆ, ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ ಮತ್ತು ಕುಂದು ಕೊರತೆಯ ಸ್ವರೂಪವ ಹಾಗೂ ಇತ್ಯಾದಿಗಳನ್ನು ಏ.11 ರೊಳಗಾಗಿ ತಿಳಿಸಬಹುದು. ಪತ್ರ ಲಕೋಟೆ ಮೇಲೆ ಪಿಂಚಣಿ ಅದಾಲತ್ ಎಂದು ಬರೆಯಬೇಕು. ಹೆಚ್ಚಿನ ಮಾಹಿತಿಗಾಗಿ ದೂ.08392-268943 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/bbmp-allows-tanker-registration-to-supply-quality-water-in-bengaluru/ https://kannadanewsnow.com/kannada/sc-refuses-to-quash-summons-issued-to-rahul-gandhi-for-derogatory-remarks-against-savarkar/
ಬೆಂಗಳೂರು: ನಗರದಲ್ಲಿ ಗುಣಮಟ್ಟದ ನೀರು ಪೂರೈಕೆ ಮಾಡಲು ಟ್ಯಾಂಕರ್ ಮಾಲೀಕರಿಂದ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಖಾಸಗಿ ಟ್ಯಾಂಕರ್ ಮಾಲೀಕರು ಜಲಮಂಡಳಿಗೆ ಬಾಡಿಗೆ ಆಧಾರದಲ್ಲಿ ಟ್ಯಾಂಕರ್ ನೀಡಲು ನೋಂದಣಿ ಮಾಡಿಕೊಳ್ಳಬಹುದಾಗಿದೆ. ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಖಾಸಗಿ ಟ್ಯಾಂಕರ್ಗಳು ದರ ಏರಿಕೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳಾಗಿವೆ. ಜಲಮಂಡಳಿಯ ಬಳಿ ಸಾಕಷ್ಟು ಪ್ರಮಾಣದಲ್ಲಿ ನೀರು ಲಭ್ಯವಿದೆ. 110 ಹಳ್ಳಿಗಳ ವ್ಯಾಪ್ತಿಯಲ್ಲಿ ಟ್ಯಾಂಕರ್ ನೀರನ್ನು ಅವಲಂಬಿಸಿರುವವರಿಗೆ ಗುಣಮಟ್ಟದ ನೀರನ್ನು ಒದಗಿಸುವುದು ನಮ್ಮ ಮುಖ್ಯ ಗುರಿಯಾಗಿದೆ. ಈ ನಿಟ್ಟಿನಲ್ಲಿ ಖಾಸಗಿ ಟ್ಯಾಂಕರ್ಗಳ ಮಾಲೀಕರು https://bwssb.karnataka.gov.in ನಲ್ಲಿ ಏಪ್ರಿಲ್ 10ರ ಒಳಗಾಗಿ ನೋಂದಣಿ ಮಾಡಿಕೊಳ್ಳಬಹುದು ಎಂದು ಜಲಮಂಡಳಿ ಅಧ್ಯಕ್ಷರಾದ ರಾಮ್ಪ್ರಸಾತ್ ಮನೋಹರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9901888338 ಸಂಪರ್ಕಿಸಬಹುದು. https://twitter.com/KarnatakaVarthe/status/1908115331010486485 https://kannadanewsnow.com/kannada/women-should-not-ignore-the-pain-near-the-shoulder-it-is-a-symptom-of-heart-disease/ https://kannadanewsnow.com/kannada/sc-refuses-to-quash-summons-issued-to-rahul-gandhi-for-derogatory-remarks-against-savarkar/
ಕೆಎನ್ಎನ್ ಡಿಜಿಟಲ್ ಡೆಸ್ಕ್: ಮಹಿಳೆಯರು ಹೆಚ್ಚಾಗಿ ಹೃದ್ರೋಗಗಳ ಲಕ್ಷಣಗಳನ್ನು ನಿರ್ಲಕ್ಷಿಸುತ್ತಾರೆ. ಇದು ತುಂಬಾ ಗಂಭೀರ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಮಹಿಳೆಯರಲ್ಲಿ ಕಂಡುಬರುವ ಹೃದ್ರೋಗಗಳ ಆರಂಭಿಕ ಚಿಹ್ನೆಗಳ ಬಗ್ಗೆ ನಾವು ನಿಮಗೆ ತಿಳಿಸುತ್ತೇವೆ. ಮಹಿಳೆಯರಲ್ಲಿ ಹೃದಯದ ಸ್ಥಿತಿಗಳು ಮಹಿಳೆಯರಲ್ಲಿ ಹೃದ್ರೋಗಗಳ ಅಪಾಯ ಹೆಚ್ಚುತ್ತಿದೆ. ಮಹಿಳೆಯರಲ್ಲಿ ಹೃದ್ರೋಗಗಳ ಆರಂಭಿಕ ರೋಗಲಕ್ಷಣಗಳನ್ನು ನಿರ್ಲಕ್ಷಿಸುವುದು ಹೆಚ್ಚಾಗಿ ಕಂಡುಬಂದಿದೆ. ಇದರಿಂದಾಗಿ ಚಿಕಿತ್ಸೆ ವಿಳಂಬವಾಗಬಹುದು. ರಾಜು ವ್ಯಾಸ್ (ಹೃದ್ರೋಗ ತಜ್ಞ, ಫೋರ್ಟಿಸ್ ಹೆಲ್ತ್ಕೇರ್ ನಿರ್ದೇಶಕ) ಮಾತನಾಡಿ, ಮಹಿಳೆಯರಲ್ಲಿ ಕಂಡುಬರುವ ಈ ರೋಗಲಕ್ಷಣಗಳನ್ನು ಯಾವಾಗಲೂ ಕಡಿಮೆ ಗಂಭೀರವಾದ ಕಾಯಿಲೆಗಳೆಂದು ಪರಿಗಣಿಸಲಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಮಹಿಳೆಯರಲ್ಲಿ ಹೃದ್ರೋಗಗಳ ಲಕ್ಷಣಗಳನ್ನು ಗುರುತಿಸುವುದು ಬಹಳ ಮುಖ್ಯ, ಇದರಿಂದ ಜನರನ್ನು ಸಮಯಕ್ಕೆ ಉಳಿಸಬಹುದು. ದಣಿವು ಒಳ್ಳೆಯ ವಿಶ್ರಾಂತಿ ಪಡೆದ ನಂತರವೂ ನೀವು ಯಾವಾಗಲೂ ದಣಿದಿದ್ದರೆ, ಅದು ಹೃದಯದ ಸಮಸ್ಯೆಯಿಂದಾಗಿರಬಹುದು. ಮತ್ತೊಂದೆಡೆ, ನೀವು ದೈನಂದಿನ ಕೆಲಸಗಳಿಂದ ಬೇಗನೆ ದಣಿದಿದ್ದರೆ ಮತ್ತು ದೇಹದಲ್ಲಿ ಶಕ್ತಿಯ ಕೊರತೆಯನ್ನು ಅನುಭವಿಸಿದರೆ, ನೀವು ಅಂತಹ ಲಕ್ಷಣಗಳನ್ನು ನಿರ್ಲಕ್ಷಿಸಬಾರದು. ಉಸಿರಾಟದ ತೊಂದರೆ ಹೃದಯ ಸಮಸ್ಯೆ ಇದ್ದಾಗ,…