Author: kannadanewsnow09

ದಾವಣೆಗೆರೆ: ಜಿಲ್ಲೆಯ ಚೆನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಪರವಾಗಿ ಭರ್ಜರಿ ಒಲವು ಮೂಡಿದೆ. ಕ್ಷೇತ್ರದ ಶಿಕ್ಷಕರು ಡಾ.ಕೆ.ಕೆ ಮಂಜುನಾಥ್ ಗೆ ಬೆಂಬಲ ನೀಡೋದಾಗಿ ಘೋಷಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಚೆನ್ನಗಿರಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಭೆ ನಡೆಯಿತು. ಈ ಸಭೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಆಯನೂರು ಮಂಜುನಾಥ್, ಶಿಕ್ಷಕರ ಕ್ಷೇತ್ರದ ಡಾ.ಕೆ.ಕೆ ಮಂಜುನಾಥ್ ಕುಮಾರ್ ಕೂಡ ಭಾಗಿಯಾಗಿದ್ದರು. ಚೆನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿಗಳ ಪರವಾಗಿ ಶಿಕ್ಷಕರು ಭಾರೀ ಒಲವು ತೋರಿದ್ದಾರೆ. ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಗೆ ಶಿಕ್ಷಕರು ಬೆಂಬಲ ಘೋಷಿಸಿರೋದಾಗಿ ತಿಳಿದು ಬಂದಿದೆ. ಚನ್ನಗಿರಿ ವಿಧಾನಸಭಾ ಕ್ಷೇತ್ರ ವಾಪ್ತಿಯ ಮುಖಂಡರ, ಚುನಾಯಿತ ಪ್ರತಿನಿಧಿಗಳ, ಪದವೀಧರ, ಶಿಕ್ಷಕರ ಮತ್ತು ಚಿಂತಕರ ಸಭೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾದ ಡಾ.ಕೆ.ಕೆ ಮಂಜುನಾಥ್ ಕುಮಾರ್ ರವರು ಭಾಗವಹಿಸಿದರು. https://kannadanewsnow.com/kannada/in-which-section-is-there-that-the-video-should-not-go-viral-hdk-hits-back-at-cm-siddaramaiah/ https://kannadanewsnow.com/kannada/gautam-gambhir-interested-in-replacing-rahul-dravid-as-indias-new-head-coach-report/

Read More

ಬೆಂಗಳೂರು: ನೊಂದ ಮಹಿಳೆಯರ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹಂಚುವುದು ಮುಖ್ಯವಲ್ಲ. ಅದು ಅಪರಾಧವೂ ಅಲ್ಲ! ಅಶ್ಲೀಲ ವಿಡಿಯೋಗಳನ್ನು ವೈರಲ್ ಮಾಡಿದ್ದು ದೊಡ್ಡ ಅಪರಾಧ ಎನ್ನುವುದು ಯಾವ ಸೆಕ್ಷನ್‌ನಲ್ಲಿದೆ? ಅದನ್ನು ಯಾವ ಸೆಕ್ಷನ್‌ನಲ್ಲಿ ಉಲ್ಲೇಖಿಸಿದ್ದಾರೆ? ಕುಮಾರಸ್ವಾಮಿ ಪ್ರಕಾರ ಯಾವುದಾದರೂ ಹೊಸ ಸೆಕ್ಷನ್ ಇದ್ದರೆ ಹೇಳಲಿ ಎಂದು ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸೆಕ್ಷನ್ ಗಳ ಸಮೇತ ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು; ಸೆಕ್ಷನ್ ಗಳ ಮಾಹಿತಿಯುಳ್ಳ ಎಸ್ ಐಟಿ ಪತ್ರಿಕಾ ಹೇಳಿಕೆಯನ್ನು ಟ್ಯಾಗ್ ಮಾಡಿ ಸಿಎಂ ಕಾಲೆಳೆದಿದ್ದಾರೆ. ಸಿಎಂ ಕುರ್ಚಿಯಲ್ಲಿ ಊಸರವಳ್ಳಿ!! ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ! ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯ ಮೇಲೆ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ? ನನಗಂತೂ ಅನುಮಾನ!! ಇಷ್ಟು ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ ನಾನು. ಅತೀವ ವಿಷಾದ ಮತ್ತು ನೋವಿನಿಂದಲೇ ಈ ಮಾತು ಹೇಳುತ್ತಿದ್ದೇನೆ ಸಿದ್ದರಾಮಯ್ಯನವರೇ ಎಂದು ಕುಮಾರಸ್ವಾಮಿ ಕೇಳಿದ್ದಾರೆ.…

Read More

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ( BMTC) ಸಂಪೂರ್ಣ ಸಮವಸ್ತ್ರ ಹಾಗೂ ಸಮರ್ಪಕವಾದ ಮಾರ್ಗಫಲಕ ಪ್ರದರ್ಶಿಸುವ ಚಾಲಕನಿರ್ವಾಹಕರ ಗೆ ಪ್ರಶಂಸನಾ ಪ್ರೊತ್ಸಾಹಿಸಲಾಗಿದೆ. ಬೆಂ.ಮ.ಸಾ.ಸಂಸ್ಥೆ ಪೂರ್ವ ವಲಯದ ವ್ಯಾಪ್ತಿಯಲ್ಲಿ ಒಟ್ಟು 8 ಘಟಕಗಳು ಕಾರ್ಯಾಚರಣೆಯಲ್ಲಿದ್ದು ದಿನಾಂಕ:25.05.24, ಶನಿವಾರದಂದು ಎಲ್ಲಾ ಘಟಕಗಳ ಅರ್ಹ ಚಾಲಕ ಮತ್ತು ನಿರ್ವಾಹಕರನ್ನು ಗುರುತಿಸಿ, ಪ್ರಶಂಸನಾ ಪತ್ರ ಮತ್ತು ನಗದು ಬಹುಮಾನಗಳನ್ನು ನೀಡಿ ಗೌರವಿಸಲಾಯಿತು. ಸಂಸ್ಥೆಯು ಜನವರಿ’2024 ತಿಂಗಳನ್ನು “ಸಂಪೂರ್ಣ ಸಮವಸ್ತ್ರ ಹಾಗೂ ಸಮರ್ಪಕವಾದ ಮಾರ್ಗಫಲಕ ಪ್ರದರ್ಶಿಸುವ” ಮಾಹೆ” ಯನ್ನಾಗಿ ಆಚರಿಸಿದ್ದು, ವಲಯದ ಸುಮಾರು 3000 ಚಾಲನಾ ಸಿಬ್ಬಂದಿಗಳಲ್ಲಿ ಉತ್ತಮ ಶಿಸ್ತು, ಹಾಜರಾತಿ, ಪ್ರಯಾಣಿಕರೊಂದಿಗೆ ಸೌಜನ್ಯಯುತ ವರ್ತನೆ ಹೊಂದಿ, ಸಂಪೂರ್ಣ ಸಮವಸ್ತ್ರ ಮತ್ತು ನಿಗದಿತ ಮಾರ್ಗಫಲಕಗಳನ್ನು ಪ್ರದರ್ಶಿಸಿ ಕರ್ತವ್ಯ ನಿರ್ವಹಿಸಿದ ಒಟ್ಟು 235 ಸಿಬ್ಬಂದಿಗಳನ್ನು ಆಯ್ಕೆ ಮಾಡಲಾಗಿರುತ್ತದೆ. ಪೂರ್ವ ವಲಯದ ಇಂದಿರಾನಗರ, ಕೋರಮಂಗಲ, ಎಲೆಕ್ಟ್ರಾನಿಕ್ಸ್ ಸಿಟಿ, ಚಂದಾಪುರ, ಹುಸ್ಕೂರು, ಗುಂಜೂರು, ಸರ್ಜಾಪುರ ರಸ್ತೆ ಮತ್ತು ಹೂಡಿ ಘಟಕಗಳಲ್ಲಿ ಸರಳವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರುತ್ತು. ವಲಯದ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಾಥ್, ವಿಭಾಗೀಯ…

Read More

ಉಡುಪಿ: ನಗರದಲ್ಲಿ ರಾಜ್ಯವೇ ಬೆಚ್ಚಿ ಬೀಳಿಸುವಂತ ಗ್ಯಾಂಗ್ ವಾರ್ ನಡೆದಿತ್ತು. ಕಾರು ಹತ್ತಿಸಿ ವ್ಯಕ್ತಿಯೊಬ್ಬನನ್ನು ಹತ್ಯೆಗೂ ಪ್ರಯತ್ನಿಸಲಾಗಿತ್ತು. ಈ ಎಲ್ಲಾ ದೃಶ್ಯಾವಳಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಬೆನ್ನಲ್ಲೆ ಪೊಲೀಸರು ಕಾರ್ಯಪ್ರವೃತ್ತರಾಗಿ ಮೂವರನ್ನು ಬಂಧಿಸಿದ್ದರು. ಈಗ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಉಡುಪಿಯ ಕುಂಜಿಬೆಟ್ಟ ರಸ್ತೆಯಲ್ಲಿ ನಡೆದಿದ್ದಂತ ಗ್ಯಾಂಗ್ ವಾರ್ ಪ್ರಕರಣ ಸಂಬಂಧ ವೀಡಿಯೋ ದೃಶ್ಯಾವಳಿ ಆಧರಿಸಿ, ಉಡುಪಿಯ ನಗರ ಠಾಣೆಯ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ವೈರಲ್ ಆಗಿದ್ದಂತ ಗ್ಯಾಂಗ್ ವಾರ್ ವೀಡಿಯೋ ದೃಶ್ಯಾವಳಿ ಆಧರಿಸಿ ಆರೋಪಿ ಸಕ್ಲೈನ್ ಎಂಬಾತನನ್ನು ಉಡುಪಿಯ ನಗರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಗ್ಯಾಂಗ್ ವಾರ್ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಬಂಧಿಸಿದಂತೆ ಆಗಿದೆ. https://kannadanewsnow.com/kannada/good-news-for-oil-lovers-court-allows-sale-of-liquor-on-counting-day-on-june-4/ https://kannadanewsnow.com/kannada/gautam-gambhir-interested-in-replacing-rahul-dravid-as-indias-new-head-coach-report/

Read More

ನವದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ. ಜೂನ್ 4ರಂದು ಫಲಿತಾಂಶ ಹೊರಬೀಳಲಿದೆ. ಫಲಿತಾಂಶದ ದಿನದಂದು, ಅನೇಕ ರಾಜ್ಯಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಆದಾಗ್ಯೂ, ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಜೂನ್ 4 ರಂದು ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಮುಂಬೈನಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡಿದ ಜಿಲ್ಲಾಧಿಕಾರಿಗಳ ಆದೇಶವನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ಮಾರ್ಪಡಿಸಿದೆ. ಮುಂಬೈ ನಗರದ (ಪ್ರದೇಶ) ಹೋಟೆಲ್ಗಳು, ರೆಸ್ಟೋರೆಂಟ್ಗಳು, ಬಾರ್ಗಳು ಮತ್ತು ಪರವಾನಗಿ ಕೊಠಡಿಗಳಲ್ಲಿ (ಮದ್ಯವನ್ನು ಪೂರೈಸಲು ಅನುಮತಿಸಲಾದ ರೆಸ್ಟೋರೆಂಟ್ಗಳ ಭಾಗಗಳು) ಮದ್ಯ ಮಾರಾಟದ ಮೇಲೆ ನಗರ ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಧಿಸಿರುವ ನಿಷೇಧವು ಚುನಾವಣಾ ಫಲಿತಾಂಶಗಳ ಘೋಷಣೆಯ ನಂತರ ನಿಷ್ಪರಿಣಾಮಕಾರಿಯಾಗುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಎನ್ ಆರ್ ಬೋರ್ಕರ್ ಮತ್ತು ಸೋಮಶೇಖರ್ ಸುಂದರೇಶನ್ ಅವರ ರಜಾಕಾಲದ ನ್ಯಾಯಪೀಠ ಹೇಳಿದೆ. ಜೂನ್ 4 ಅನ್ನು ಒಣ ದಿನವೆಂದು ಘೋಷಿಸುವ ಹಿಂದಿನ ಅಧಿಸೂಚನೆಯನ್ನು ತಿದ್ದುಪಡಿ ಮಾಡಿ ಮುಂಬೈ ಜಿಲ್ಲೆಯ (ಉಪನಗರಗಳು) ಜಿಲ್ಲಾ ಮ್ಯಾಜಿಸ್ಟ್ರೇಟ್ ಈಗಾಗಲೇ ಪತ್ರ…

Read More

ನವದೆಹಲಿ: 58 ಲೋಕಸಭಾ ಕ್ಷೇತ್ರಗಳಿಗೆ ನಡೆದ ಆರನೇ ಹಂತದ ಚುನಾವಣೆಯಲ್ಲಿ ಮಧ್ಯಾಹ್ನ 1 ಗಂಟೆ ವೇಳೆಗೆ ಶೇ.39.13 ರಷ್ಟು ಮತದಾನವಾಗಿತ್ತು. ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಾದ ದೆಹಲಿ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಮತದಾನ ನಡೆಯುತ್ತಿದೆ. ಬೆಳಗ್ಗೆ 9 ಗಂಟೆ ವೇಳೆಗೆ ಶೇ.10.82ರಷ್ಟು ಮತದಾನವಾಗಿತ್ತು. ಉತ್ತರ ಪ್ರದೇಶದ 14, ಹರಿಯಾಣದ ಎಲ್ಲಾ 10, ದೆಹಲಿಯ 7, ಬಿಹಾರ ಮತ್ತು ಪಶ್ಚಿಮ ಬಂಗಾಳದ ತಲಾ 8, ಒಡಿಶಾದ 6, ಜಾರ್ಖಂಡ್ನ 4 ಮತ್ತು ಜಮ್ಮು ಮತ್ತು ಕಾಶ್ಮೀರದ 1 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಒಡಿಶಾದ 42 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನದ ಪ್ರಮಾಣ ಮಧ್ಯಾಹ್ನ 1 ಗಂಟೆ ವೇಳೆಗೆ ದೆಹಲಿಯಲ್ಲಿ ಶೇ.34.37, ಉತ್ತರ ಪ್ರದೇಶದಲ್ಲಿ ಶೇ.37.23, ಬಿಹಾರದಲ್ಲಿ ಶೇ.36.48, ಪಶ್ಚಿಮ ಬಂಗಾಳದಲ್ಲಿ ಶೇ.54.80, ಒಡಿಶಾದಲ್ಲಿ ಶೇ.35.69, ಜಾರ್ಖಂಡ್ನಲ್ಲಿ ಶೇ.42.54 ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಶೇ.35.22ರಷ್ಟು ಮತದಾನವಾಗಿದೆ. ಬೆಳಿಗ್ಗೆ 11 ಗಂಟೆ ವೇಳೆಗೆ ದೆಹಲಿಯಲ್ಲಿ…

Read More

ಬೆಂಗಳೂರು: ಹಾಸನ ಅಶ್ಲೀಲ ವೀಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಜಾಮೀನಿಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಪೀಠವು ಮೇ.28ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ. ಮೇ.8ರಂದು ಹಾಸನದ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಹಾಸನ ಅಶ್ಲೀಲ ವೀಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿತು. ಆರೋಪಿಗಳಾದಂತ ನವೀನ್ ಗೌಡ, ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್, ಕಾಂಗ್ರೆಸ್ ಮುಖಂಡ ಪುಟ್ಟರಾಜು ಹಾಗೂ ಚೇತನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನಲೆಯಲ್ಲಿ ಇಂದು ಜಾಮೀನು ಕೋರಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪುರಸ್ಕರಿಸಿ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು, ತಕರಾರು ಅರ್ಜಿ ಸಲ್ಲಿಸಲು ಪೊಲೀಸರಿಗೆ ಸೂಚನೆ ನೀಡಿ, ವಿಚಾರಣೆಯನ್ನು ಮೇ.28ಕ್ಕೆ ಮುಂದೂಡಿಕೆ ಮಾಡಿದೆ. ಅಂದಹಾಗೇ ಹಾಸನ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಎಸ್ಐಟಿ ಪೊಲೀಸರಿಂದ ಬಂಧನಕ್ಕೆ ಒಳಗಾಗೋ ಭೀತಿಯಲ್ಲಿರುವಂತ ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.…

Read More

ಬೆಂಗಳೂರು: ಕರ್ನಾಟಕದಲ್ಲಿ ದಿನೇ ದಿನೇ ಕೊಲೆ, ಹತ್ಯೆಗಳು ಹೆಚ್ಚಾಗುತ್ತಿವೆ. ಶಾಂತಿ, ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ರೌಡಿ ರಾಜ್ಯವಾಗಿ ಮಾರ್ಪಟ್ಟಿದೆ ಅಂತ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕಾಂಗ್ರೆಸ್ ಕೈಗೆ ಅಧಿಕಾರ ಕೊಟ್ಟರೆ. ರೌಡಿಗಳ ಕೈಯಲ್ಲಿ ಮಚ್ಚು ಲಾಂಗು. ಉಗ್ರರ ಕೈಯಲ್ಲಿ ಬಾಂಬು ಕೊಟ್ಟಂಗೆ ಅಂತ ವಾಗ್ಧಾಳಿ ನಡೆಸಿದ್ದಾರೆ. ಶಾಂತಿ, ಸುವ್ಯವಸ್ಥೆ, ಕಾನೂನು ಪರಿಪಾಲನೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ ಕಾಂಗ್ರೆಸ್ ಆಡಳಿತದಲ್ಲಿ ಅಕ್ಷರಶಃ ರೌಡಿ ರಾಜ್ಯವಾಗಿ ಮಾರ್ಪಟ್ಟಿದೆ. ಕಾಂಗ್ರೆಸ್ ಸರ್ಕಾರ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿದ್ದೇ ತಡ, ಭಯೋತ್ಪಾದಕರು, ರೌಡಿ ಶೀಟರ್ ಗಳು, ಕೊಲೆಗಡುಕರು, ಬಾಂಬು, ಮಚ್ಚು, ಲಾಂಗು ಹಿಡಿದು ರಾಜ್ಯದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸಿದ್ದಾರೆ ಅಂತ ಕಿಡಿಕಾರಿದ್ದಾರೆ. ಚನ್ನಗಿರಿಯಲ್ಲಿ ಪೊಲೀಸ್ ಠಾಣೆ ಧ್ವಂಸ ಮಾಡಿರುವ ಘಟನೆ, ಉಡುಪಿಯಲ್ಲಿ ನಡುರಸ್ತೆಯಲ್ಲೇ ಗ್ಯಾಂಗ್ ವಾರ್ ನಡೆದಿರುವ ಘಟನೆ ಇವನ್ನೆಲ್ಲ ನೋಡುತ್ತಿದ್ದರೆ ರಾಜ್ಯದಲ್ಲಿ ಕಾನೂನಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಹೇಳಿದ್ದಾರೆ. ಸಿಎಂ…

Read More

ಮಂಗಳೂರು : ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಬಂಧನಕ್ಕೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಕಾನೂನು ಎಲ್ಲರಿಗೂ ಒಂದೇ. ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಅದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲುವಾಸದ ಶಿಕ್ಷೆ ನೀಡುವ ಅವಕಾಶವಿದೆ. ಆದರೆ ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವೇ ಎಂದರು. ಹರೀಶ್ ಪೂಂಜಾ ಅವರಿಗೆ ಸ್ಟೇಷನ್ ಬೇಲ್ ದೊರಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಅವರ ಮೇಲೆ…

Read More

ಕೆಎನ್ಎನ್ ಸಿನಿಮಾ ಡೆಸ್ಕ್: ಖ್ಯಾತ ಚಲನಚಿತ್ರ ನಿರ್ದೇಶಕ ಸಿಕಂದರ್ ಭಾರತಿ ಮೇ 24 ರಂದು ಮುಂಬೈನಲ್ಲಿ ತಮ್ಮ 60 ನೇ ವಯಸ್ಸಿನಲ್ಲಿ ನಿಧನರಾದರು. ಮುಂಬೈನ ಜೋಗೇಶ್ವರಿ ಪಶ್ಚಿಮದಲ್ಲಿರುವ ಓಶಿವಾರಾ ಚಿತಾಗಾರದಲ್ಲಿ ಮೇ 25 ರಂದು ಬೆಳಿಗ್ಗೆ 11 ಗಂಟೆಗೆ ಅಂತಿಮ ವಿಧಿಗಳನ್ನು ನಡೆಸಲಾಯಿತು. ‘ಘರ್ ಕಾ ಚಿರಾಗ್’, ‘ಜಾಲಿಮ್’, ‘ರುಪಾಯೆ ದಸ್ ಕರೋಡ್’, ‘ಭಾಯ್ ಭಾಯ್’, ‘ಸೈನಿಕ್’, ‘ಸರ್ ಉಥಾ ಕೆ ಜಿಯೋ’, ‘ದಂಡ್-ನಾಯಕ್’, ‘ರಂಗೀಲಾ ರಾಜಾ’, ‘ಪೊಲೀಸ್ ವಾಲಾ’ ಮತ್ತು ‘ದೋ ಫಂಟೂಶ್’ ನಂತಹ ಗಮನಾರ್ಹ ಚಿತ್ರಗಳನ್ನು ನಿರ್ದೇಶಿಸಿದ್ದಕ್ಕಾಗಿ ಸಿಕಂದರ್ ಭಾರತಿ ಪ್ರಸಿದ್ಧರಾಗಿದ್ದರು. ಚಲನಚಿತ್ರೋದ್ಯಮಕ್ಕೆ ಅವರ ಕೊಡುಗೆಗಳು ಗಮನಾರ್ಹವಾಗಿವೆ, ಮತ್ತು ಅವರ ಕೆಲಸವು ಪ್ರೇಕ್ಷಕರು ಮತ್ತು ಸಹೋದ್ಯೋಗಿಗಳ ಮೇಲೆ ಶಾಶ್ವತ ಪರಿಣಾಮ ಬೀರಿತು. ಮೃತರು ಪತ್ನಿ ಪಿಂಕಿ, ಮಕ್ಕಳಾದ ಸಿಪಿಕಾ, ಯುವಿಕಾ ಮತ್ತು ಸುಕ್ರತ್ ಅವರನ್ನು ಅಗಲಿದ್ದಾರೆ. ಚಲನಚಿತ್ರ ಸಮುದಾಯ ಮತ್ತು ಅವರ ಅಭಿಮಾನಿಗಳು ಪ್ರತಿಭಾವಂತ ನಿರ್ದೇಶಕರನ್ನು ಕಳೆದುಕೊಂಡು ಶೋಕಿಸುತ್ತಿದ್ದಾರೆ. ಆದರೇ ಇಂದು ನಿಧನರಾಗಿರುವಂತ ಸಿಕಂದರ್ ಭಾರತಿ, ಅವರ ನಿರ್ದೇಶನದ…

Read More