Author: kannadanewsnow09

ಬೆಂಗಳೂರು: ಮಳೆಗಾಲ ಆರಂಭಗೊಂಡಿದೆ. ಸಾರಿಗೆ ಬಸ್ ಗಳು ಸೋರುತ್ತಿವೆ ಅನ್ನೋ ರೀತಿಯಲ್ಲಿ ಕೊಡೆ ಹಿಡಿದು ಸಾರಿಗೆ ಬಸ್ ಚಾಲನೆ ಮಾಡಿದಂತ ಡ್ರೈವರ್ ವೀಡಿಯೋ ವೈರಲ್ ಆಗಿತ್ತು. ಈ ಸಂಬಂಧ ನಿಮ್ಮ ಕನ್ನಡ ನ್ಯೂಸ್ ನೌ ವೆಬ್ ಸೈಟ್ ನಲ್ಲಿ WATCH VIDEO: ಬಸ್ ಛಾವಣಿ ಸೋರಿಕೆ; ಛತ್ರಿ ಹಿಡಿದೇ ಬಸ್ ಚಲಾಯಿಸಿದ KSRTC ಚಾಲಕ, ವಿಡಿಯೋ ವೈರಲ್‌ ಅಂತ ಸುದ್ದಿ ಪ್ರಕಟಿಸಿತ್ತು. ನಾಟಕೀಯವಾಗಿ ಛತ್ರಿ ಹಿಡಿದು ಸಾರಿಗೆ ಬಸ್ ಅನ್ನು ಡ್ರೈವರ್ ಚಾಲನೆ ಮಾಡಿದ್ದರು. ಇದನ್ನ ನಿರ್ವಾಹಕಿ ವೀಡಿಯೋ ಮಾಡಿದ್ದರು. ಈಗ ಈ ಇಬ್ಬರನ್ನು ಅಮಾನತುಗೊಳಿಸಿ, ಸಾರಿಗೆ ನಿಗಮ ಆದೇಶಿಸಿದೆ. ನಮ್ಮ ಸುದ್ದಿ ಪ್ರಕಟಗೊಳ್ಳುತ್ತಿದ್ದಂತೆ, NWKRTC, ಮಳೆ ಬರುತ್ತಿರುವಾಗ ಸಂಸ್ಥೆಯ ವಾಹನದ ಚಾಲಕರು ಕೊಡೆ ಹಿಡಿದುಕೊಂಡು ವಾಹನ ಚಾಲನೆ ಮಾಡಿದ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಕುರಿತು ಈ ಕೆಳಗಿನಂತೆ ಸ್ಪಷ್ಟೀಕರಣ ಮಾಹಿತಿ ಹಂಚಿಕೊಂಡಿತ್ತು. ಈ ವಿಷಯವಾಗಿ ಧಾರವಾಡ ಗ್ರಾಮಾಂತರ ವಿಭಾಗದ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು. ಅದರನ್ವಯ, ದಿನಾಂಕ: 23-05-2024…

Read More

ಇಸ್ರೇಲ್: ಗಾಝಾದಲ್ಲಿ ಇಸ್ರೇಲಿ ಮಿಲಿಟರಿ ಆಕ್ರಮಣವನ್ನು ನಿಲ್ಲಿಸಲು ಆದೇಶಿಸುವಂತೆ ದಕ್ಷಿಣ ಆಫ್ರಿಕಾ ಮಾಡಿದ ಮನವಿಯ ಕುರಿತು ವಿಶ್ವಸಂಸ್ಥೆಯ ಉನ್ನತ ನ್ಯಾಯಾಲಯದ ಅಧ್ಯಕ್ಷರು ಶುಕ್ರವಾರ ತೀರ್ಪು ಪ್ರಕಟಿಸಿದ್ದಾರೆ. ದಕ್ಷಿಣ ಆಫ್ರಿಕಾವು ಇಸ್ರೇಲ್ ಅನ್ನು “ನರಮೇಧ” ಎಂದು ಆರೋಪಿಸಿತ್ತು. ದಕ್ಷಿಣ ಪ್ರದೇಶವಾದ ರಾಫಾ ಸೇರಿದಂತೆ ಇಸ್ರೇಲ್ನ ಅಭಿಯಾನವನ್ನು “ತಕ್ಷಣ” ನಿಲ್ಲಿಸಲು ಆದೇಶಿಸುವಂತೆ ಮತ್ತು ಮಾನವೀಯ ನೆರವು ಪಡೆಯಲು ಅನುಕೂಲವಾಗುವಂತೆ ಅಂತರರಾಷ್ಟ್ರೀಯ ನ್ಯಾಯಾಲಯವನ್ನು (ಐಸಿಜೆ) ಒತ್ತಾಯಿಸಿತ್ತು. ಇಸ್ರೇಲ್ ರಫಾದಲ್ಲಿ ಆಕ್ರಮಣವನ್ನು ನಿಲ್ಲಿಸಬೇಕು. ಈ ಆದೇಶದ ದಿನಾಂಕದಿಂದ ಒಂದು ತಿಂಗಳೊಳಗೆ ತೆಗೆದುಕೊಂಡ ಎಲ್ಲಾ ಕ್ರಮಗಳಿಗೆ ಶರಣಾಗಬೇಕು ಎಂದು ಐಸಿಜೆ ಹೇಳಿದೆ. ರಫಾ ಸ್ಥಳಾಂತರ ಮತ್ತು ಇಸ್ರೇಲ್ನ ಇತರ ಕ್ರಮಗಳು ಪ್ಯಾಲೆಸ್ಟೀನಿಯರ ಸಂಕಟವನ್ನು ನಿವಾರಿಸಲು ಸಾಕಾಗುತ್ತವೆ ಎಂದು ತನಗೆ ಮನವರಿಕೆಯಾಗಿಲ್ಲ ಎಂದು ವಿಶ್ವ ನ್ಯಾಯಾಲಯ ಹೇಳಿದೆ. https://kannadanewsnow.com/kannada/message-in-name-of-bbmp-chief-commissioner-fir-lodged/ https://kannadanewsnow.com/kannada/educational-guidebook-for-the-year-2024-25-education-department-issues-important-instructions-to-school-headmasters/

Read More

ನವದೆಹಲಿ: ಲಷ್ಕರ್-ಎ-ತೈಬಾ (ಎಲ್ಇಟಿ) ಭಯೋತ್ಪಾದಕ ಪಿತೂರಿ ಪ್ರಕರಣದ ಮಾಜಿ ಅಪರಾಧಿಯಾಗಿದ್ದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ಬಂಧಿಸಿದೆ. ಶೋಯೆಬ್ ಅಹ್ಮದ್ ಮಿರ್ಜಾ ಅಲಿಯಾಸ್ ಛೋಟು (35) ಕರ್ನಾಟಕದ ಹುಬ್ಬಳ್ಳಿ ನಿವಾಸಿಯಾಗಿದ್ದು, ಈ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಐದನೇ ಆರೋಪಿಯಾಗಿದ್ದಾನೆ. ಈ ಹಿಂದೆ ಎಲ್ಇಟಿ ಬೆಂಗಳೂರು ಪಿತೂರಿ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಸಾನಿಯಾ ಮಿರ್ಜಾ ಜೈಲಿನಿಂದ ಬಿಡುಗಡೆಯಾದ ನಂತರ ಹೊಸ ಪಿತೂರಿಯಲ್ಲಿ ಭಾಗಿಯಾಗಿದ್ದಾನೆ ಎಂದು ಎನ್ಐಎ ತನಿಖೆಯಿಂದ ತಿಳಿದುಬಂದಿದೆ. 2018 ರಲ್ಲಿ, ಅವರು ಅಬ್ದುಲ್ ಮತೀನ್ ತಾಹಾ ಅವರನ್ನು ವಿದೇಶದಲ್ಲಿದ್ದಾರೆ ಎಂದು ಶಂಕಿಸಲಾದ ಆನ್ಲೈನ್ ಹ್ಯಾಂಡ್ಲರ್ಗೆ ಪರಿಚಯಿಸಿದರು ಮತ್ತು ಅವರ ನಡುವಿನ ಎನ್ಕ್ರಿಪ್ಟ್ ಮಾಡಿದ ಸಂವಹನಕ್ಕಾಗಿ ಇಮೇಲ್ ಐಡಿಯನ್ನು ಒದಗಿಸಿದರು. ಈ ಪ್ರಕರಣದಲ್ಲಿ ತಾಹಾ ಅವರನ್ನು ಸಹ ಆರೋಪಿ ಮುಸ್ಸಾವಿರ್ ಹುಸೇನ್ ಶಾಜಿಬ್ ಅವರೊಂದಿಗೆ ಏಪ್ರಿಲ್ 12 ರಂದು ಕೋಲ್ಕತ್ತಾದಲ್ಲಿ ಬಂಧಿಸಲಾಗಿತ್ತು. ಬೆಂಗಳೂರಿನ ಬ್ರೂಕ್ಫೀಲ್ಡ್ನ ಐಟಿಪಿಎಲ್ ರಸ್ತೆಯಲ್ಲಿರುವ ಕೆಫೆಯಲ್ಲಿ ಸುಧಾರಿತ ಸ್ಫೋಟಕ ಸಾಧನದಿಂದ (ಐಇಡಿ) ಸ್ಫೋಟ…

Read More

ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಮೂಲಕ ಶೀಘ್ರವೇ ಜಿಲ್ಲಾ, ತಾಲೂಕು ಪಂಚಾಯ್ತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯನ್ನು ಘೋಷಣೆ ಮಾಡೋ ಸುಳಿವು ನೀಡಿದರು. ಇಂದು ಮೈಸೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಉಚ್ಚ ನ್ಯಾಯಾಲಯಕ್ಕೆ ಹೋಗಲಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಕ್ಷೇತ್ರ ಪುನರ್ವಿಗಂಡನೆಗೆ ಜನವರಿವರೆಗೆ ಗಡುವು ಇದ್ದುದರ ಬಗ್ಗೆ ಮಾತನಾಡಿ ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಅವರು ಕಾನೂನು ಪ್ರಕಾರ ಏನು ಮಾಡಬೇಕೆಂದು ಹೇಳುತ್ತಾರೋ ಹಾಗೆ ಮಾಡುತ್ತೇವೆ. ಪುನರ್ ವಿಂಗಡಣೆಯಾದ ಮೇಲೆ ಮೀಸಲಾತಿ ಮಾಡಲೇಬೇಕು ಎಂದರು. ಹೈಕಮಾಂಡ್ ನಿರ್ಧಾರದ ಬಗ್ಗೆ ತಿಳಿದಿಲ್ಲ ಈ ಬಾರಿ ಡಾ: ಯತೀಂದ್ರ ಅವರನ್ನು ವಿಧಾನ ಪರಿಷತ್ ಸದಸ್ಯ ರನ್ನಾಗಿಸಲು…

Read More

ಬೆಂಗಳೂರು: 402 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆ, 1000 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಕೆಇಎ ಪ್ರಕಟಿಸಿದೆ. ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿದಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, PSI (402 ಹುದ್ದೆ), VAO (1000) ಸೇರಿದಂತೆ ಇತರ ಪರೀಕ್ಷೆಗಳ ತಾತ್ಕಾಲಿಕ ವೇಳಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ದಿನಾಂಕಗಳನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಗಳಿಗೆ ಸಿದ್ಧತೆಗಳನ್ನು ಮಾಡಿಕೊಳ್ಳಬಹುದು ಎಂದು ಕೆಇಎ ಇ.ಡಿ ಹೆಚ್ ಪ್ರಸನ್ನ ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಹಾಯ ಲೆಕ್ಕಿಗ, ಸಹಾಯಕ ಸಂಚಾರ ನಿರೀಕ್ಷಕ, ಕ.ರಾ.ಸಾ ಪೇದೆ, ಕುಶಲಕರ್ಮಿ, ತಾಂತ್ರಿಕ ಸಹಾಯಕರ 36 ಹುದ್ದೆಗಳಿಗೆ ದಿನಾಂಕ 12-07-2024, 13-07-2024 ಮತ್ತು ದಿನಾಂಕ 14-07-2024ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಬಿಎಂಟಿಸಿಯ 1000 ನಿರ್ವಾಹಕ ದರ್ಜೆ-3, ಮೇಲ್ವಿಚಾರಕೇತರ ಹುದ್ದೆಗಳಿಗೆ ದಿನಾಂಕ 01-09-2024ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. 402 ಪಿಎಸ್ಐ ಹುದ್ದೆಗಳಿಗೆ ದಿನಾಂಕ 22-09-2024ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ನಿಗದಿ ಪಡಿಸಿದ್ದರೇ,…

Read More

ಬೆಂಗಳೂರು: ಇಂದು ಬೆಂಗಳೂರಿನ ಕೆ ಎಸ್ ಆರ್ ಟಿ ಸಿ ಕೇಂದ್ರ ಕಚೇರಿಗೆ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹೆಚ್ಚುವರಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿತು. ದಿನಾಂಕ 22.05.2024 ಮತ್ತು 23.05.2024 ರಂದು ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ತಂಡವು ಕೆ.ಎಸ್.ಆರ್.ಟಿ.ಸಿ ಯಲ್ಲಿ ಅನುಷ್ಠಾನಗೊಳಿಸಿರುವ ಉಪಕ್ರಮಗಳ ಬಗ್ಗೆ ಅಧ್ಯಯನ ನಡೆಸಲು ಎರಡು ದಿನಗಳ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಮೈಸೂರು ರಸ್ತೆಯ ಸ್ಯಾಟಲೈಟ್‌ ಬಸ್‌ನಿಲ್ದಾಣ ಹಾಗೂ ಕೆಂಪೇಗೌಡ ಬಸ್‌ ನಿಲ್ದಾಣಕ್ಕೆ ಭೇಟಿ ನೀಡಿ ನಿಯಂತ್ರಣ ಕೊಠಡಿಯ ಕಾರ್ಯ ನಿರ್ವಹಣೆ ಹಾಗೂ ಬಸ್ಸುಗಳ ಕಾರ್ಯಾಚರಣೆಯನ್ನು ಪರಿಶೀಲಿಸಿದರು. ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿನ ಇ.ವಿ. ಪವರ್‌ ಚಾರ್ಜಿಂಗ್‌ ಕೇಂದ್ರವನ್ನು ಪರಿಶೀಲಿಸಿ, ವಿದ್ಯುತ್‌ ಚಾಲಿತ ವಾಹನಗಳ ಚಾರ್ಜಿಂಗ್ ಹಾಗೂ ನಿರ್ವಹಣೆ ಕುರಿತು ತಾಂತ್ರಿಕ ಮಾಹಿತಿಯನ್ನು ಪಡೆದರು. ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ತಂಡಕ್ಕೆ ಕೇಂದ್ರ ಕಛೇರಿಯಲ್ಲಿ ಡಾ. ನಂದಿನಿದೇವಿ ಕೆ. ಭಾಆಸೇ., ನಿರ್ದೇಶಕರು…

Read More

ಚಿಕ್ಕಮಗಳೂರು: ಪಾಕಿಸ್ತಾನ ಪರ ಪೋಸ್ಟ್ ಹಾಕಿದ್ದಂತ ಪ್ರಕರಣ ಸಂಬಂಧ ಆರೋಪಿ ಆಸ್ಗರ್ ಗೆ ನ್ಯಾಯಾಲಯವು ಜೂನ್.6ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಈ ಮೂಲಕ ಪಾಕ್ ಪರ ಪೋಸ್ಟ್ ಹಾಕಿದ್ದಂತ ಆರೋಪಿ ಜೈಲುಪಾಲಾಗುವಂತೆ ಮಾಡಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಸ್ಗರ್ ಎಂಬಾತ ಫೇಸ್ ಬುಕ್ ನಲ್ಲಿ ಪಾಕಿಸ್ತಾನ ಪರವಾಗಿ ಪೋಸ್ಟ್ ಹಾಕಿದ್ದನು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧವೂ ಅವಹೇಳನಕಾರಿ ಪೋಸ್ಟ್ ಮಾಡಿದ್ದನು. ಆಸ್ಗರ್ ಹಾಕಿದ್ದಂತ ಪೋಸ್ಟ್ ಬಗ್ಗೆ ವ್ಯಾಪಕ ಆಕ್ರೋಶ, ಟೀಕೆ ವ್ಯಕ್ತವಾಗಿತ್ತು. ಅಲ್ಲದೇ ಕೊಪ್ಪ ಪೊಲೀಸ್ ಠಾಣೆಗೆ ಆಸ್ಗರ್ ವಿರುದ್ಧ ಕಾನೂನು ಕ್ರಮಕ್ಕೂ ದೂರು ನೀಡಲಾಗಿತ್ತು. ಈ ದೂರಿನ ಹಿನ್ನಲೆಯಲ್ಲಿ ಕೊಪ್ಪ ಠಾಣೆ ಪೊಲೀಸರು ಆಸ್ಗರ್ ಬಂಧಿಸಿದ್ದರು. ಎನ್ ಆರ್ ಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಾಲಯವು ಪಾಕಿಸ್ತಾನ ಪರವಾಗಿ ಪೋಸ್ಟ್ ಹಾಕಿದ್ದಂತ ಆರೋಪಿ ಆಸ್ಗರ್ ಗೆ ಜೂನ್.6ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. https://kannadanewsnow.com/kannada/educational-guidebook-for-the-year-2024-25-education-department-issues-important-instructions-to-school-headmasters/ https://kannadanewsnow.com/kannada/message-in-name-of-bbmp-chief-commissioner-fir-lodged/

Read More

ಬೆಂಗಳೂರು: ನಿಮ್ಮ ಕನ್ನಡ ನ್ಯೂಸ್ ನೌ ವೆಬ್ ಸೈಟ್ ನಲ್ಲಿ ಇಂದು ಬೆಳಿಗ್ಗೆ WATCH VIDEO: ಬಸ್ ಛಾವಣಿ ಸೋರಿಕೆ; ಛತ್ರಿ ಹಿಡಿದೇ ಬಸ್ ಚಲಾಯಿಸಿದ KSRTC ಚಾಲಕ, ವಿಡಿಯೋ ವೈರಲ್‌ ಎಂಬ ಸುದ್ದಿಯನ್ನು ಪ್ರಕಟಿಸಲಾಗಿತ್ತು. ಈ ಸುದ್ದಿ ವೈರಲ್ ಆಗಿ, ಸಾರಿಗೆ ಇಲಾಖೆಯ ಅಧಿಕಾರಿಗಳ ಬಗ್ಗೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದರು. ಈ ಸುದ್ದಿಯ ಬೆನ್ನಲ್ಲೇ ಕನ್ನಡ ನ್ಯೂಸ್ ನೌ ಫಲಶೃತಿ ಎನ್ನುವಂತೆ NWKRTC ಈ ಕೆಳಗಿನಂತೆ ಸ್ಪಷ್ಟನೆ ನೀಡಿದೆ. ಮಳೆ ಬರುತ್ತಿರುವಾಗ ಸಂಸ್ಥೆಯ ವಾಹನದ ಚಾಲಕರು ಕೊಡೆ ಹಿಡಿದುಕೊಂಡು ವಾಹನ ಚಾಲನೆ ಮಾಡಿದ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಕುರಿತು ಈ ಕೆಳಗಿನಂತೆ ಸ್ಪಷ್ಟೀಕರಣ ಮಾಹಿತಿ ಹಂಚಿಕೊಂಡಿದೆ. ಈ ವಿಷಯವಾಗಿ ಧಾರವಾಡ ಗ್ರಾಮಾಂತರ ವಿಭಾಗದ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು. ಅದರನ್ವಯ, ದಿನಾಂಕ: 23-05-2024 ರಂದು ಧಾರವಾಡ ಘಟಕದ ವಾಹನ ಸಂಖ್ಯೆ ಕೆಎ-25 ಎಫ್-1336 ಬೇಟಗೇರಿ-ಧಾರವಾಡ ಮಾರ್ಗದಲ್ಲಿ ಕಾರ್ಯಾಚರಿಸುತ್ತಿರುವಾಗ ವಾಹನದಲ್ಲಿ ಚಾಲಕರಾಗಿ ಹನುಮಂತಪ್ಪ ಅ ಕಿಲ್ಲೇದಾರ, ಬಿ.ಸಂ-1203…

Read More

ಬೆಂಗಳೂರು: ಬೇಸಿಗೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮುಜಾಫರ್ಪುರ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಎರಡು ಹೆಚ್ಚುವರಿ ಟ್ರಿಪ್ ಗಳನ್ನು  ಓಡಿಸಲು  ಪೂರ್ವ ಮಧ್ಯ ರೈಲ್ವೆಯು ಸೂಚಿಸಿದೆ. ಅವುಗಳ ವಿವರ ಈ ಕೆಳಗಿನಂತಿವೆ: ರೈಲು ಸಂಖ್ಯೆ 05271/05272 ಮುಜಾಫರ್ಪುರ-ಯಶವಂತಪುರ-ಮುಜಾಫರ್ಪುರ ಬೇಸಿಗೆ ವಿಶೇಷ ರೈಲು ರೈಲು ಸಂಖ್ಯೆ 05271 ಮೇ 24 ಮತ್ತು 31, 2024 ರಂದು 15:30 ಗಂಟೆಗೆ ಮುಜಾಫರ್ಪುರದಿಂದ ಹೊರಟು ಭಾನುವಾರ 19:00 ಗಂಟೆಗೆ ಯಶವಂತಪುರಕ್ಕೆ ಆಗಮಿಸಲಿದೆ. ರೈಲು ಸಂಖ್ಯೆ 05272 ಯಶವಂತಪುರದಿಂದ ಮೇ 27 ಮತ್ತು ಜೂನ್ 3, 2024 ರಂದು 07:30 ಗಂಟೆಗೆ ಹೊರಟು ಬುಧವಾರ 12:00 ಗಂಟೆಗೆ ಮುಜಾಫರ್ಪುರ ನಿಲ್ದಾಣವನ್ನು ತಲುಪಲಿದೆ. ಈ ರೈಲು ಎರಡು ಮಾರ್ಗಗಳಲ್ಲಿ ಹಾಜಿಪುರ , ಪಾಟಲಿಪುತ್ರ, ಅರಾ, ಬಕ್ಸಾರ್, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ, ಪ್ರಯಾಗ್ರಾಜ್ ಚಿಯೋಕಿ, ಮಾಣಿಕ್ಪುರ, ಸತ್ನಾ, ಕಟ್ನಿ, ಜಬಲ್ಪುರ್, ನರಸಿಂಗಪುರ, ಪಿಪರಿಯಾ, ಇಟಾರ್ಸಿ, ನಾಗ್ಪುರ, ಬಲ್ಹಾರ್ಷಾ, ಸಿರ್ಪುರ್ ಕಾಖಜನಗರ್, ರಾಮಗುಂಡಂ, ಕಾಜಿಪೇಟ್, ಜಂಗಾಂವ್, ಕಾಚಿಗುಡ, ಶಾದ್ನಗರ್, ಜಡ್…

Read More

ಬೆಂಗಳೂರು: ನಗರದಲ್ಲಿ 11 ವರ್ಷಗಳ ಹಿಂದೆ ನಡೆದಿದ್ದಂತ ರೇಪ್ ಅಂಡ್ ಮರ್ಡರ್ ಪ್ರಕರಣವನ್ನು ಸಿಐಡಿ ಪೊಲೀಸರು ಬೇಧಿಸಿದ್ದಾರೆ. ಈ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫೆಬ್ರವರಿ 15, 2013ರಲ್ಲಿ ವಿಜಯಾ ಎಂಬುವರನ್ನು ರೇಪ್ ಅಂಡ್ ಮರ್ಡರ್ ಮಾಡಲಾಗಿತ್ತು. ಬ್ಯಾಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದಂತ ವಿಜಯಾ ಅವರ ಮೃತದೇಹ ರೇಪ್ ಅಂಡ ಮರ್ಡರ್ ಆಗಿರುವಂತ ಸ್ಥಿತಿಯಲ್ಲಿ ಚಿಕ್ಕಜಾಲ ಬಳಿಯ ನೀಲಗಿರಿ ತೋಪಿನಲ್ಲಿ ಪತ್ತೆಯಾಗಿತ್ತು. ಈ ಪ್ರಕರಣ ಸಂಬಂಧ ಅಂದೇ ಪೊಲೀಸರು ವಿಜಯಾ ಜೊತೆಗೆ ಅದೇ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದಂತ ಪತಿ ಬಾಲಕೃಷ್ಣ ಪೈ ಅವರನ್ನು ಬಂಧಿಸಿ, ವಿಚಾರಣೆ ನಡೆಸಿದ್ದರು. ಆಗ ಈ ರೇಪ್ ಅಂಡ್ ಮರ್ಡರ್ ಕೇಸಲ್ಲಿ ಪತಿಯ ಪಾತ್ರವಿಲ್ಲ ಅಂತ ತಿಳಿದು ಬಂದಿತ್ತು. ಹೀಗಾಗಿ ಪೊಲೀಸರು ಕೋರ್ಟ್ ಗೆ ಸಿ-ರಿಪೋರ್ಟ್ ಸಲ್ಲಿಸಿದ್ದರು. ಆದ್ರೇ ಪೊಲೀಸರ ವರದಿಯನ್ನು ಪ್ರಶ್ನಿಸಿ ಹೈಕೋರ್ಟ್ ಗೆ ವಿಜಯಾ ಪತಿ ಬಾಲಕೃಷ್ಣ ಪೈ ಮೇಲ್ಮನವಿ ಸಲ್ಲಿಸಿದ್ದರು. ಈ ಕೇಸ್…

Read More