Author: kannadanewsnow09

ಬೆಂಗಳೂರು: ಕಳೆದ ಎರಡು ವರ್ಷಗಳಿಂದ ತೀವ್ರ ಭುಜದ ಸಂಧಿವಾತದಿಂದ ಬಳಲುತ್ತಿದ್ದ 68 ವರ್ಷದ ಮಹಿಳೆಗೆ ನಾಗರಭಾವಿಯ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಚಿಕಿತ್ಸೆ ನೀಡಿದ್ದಾರೆ. ಡಾ. ಮಂಜುನಾಥ್ ಕೋಡಿಹಳ್ಳಿ, ಸಲಹೆಗಾರ – ಆರ್ಥೋಪೆಡಿಕ್ಸ್, ಫೋರ್ಟಿಸ್ ಆಸ್ಪತ್ರೆ ನಾಗರಭವಿ ಮತ್ತು ಅವರ ತಂಡದ ತಜ್ಞರ ಆರೈಕೆಯಡಿಯಲ್ಲಿ ಹಿಮ್ಮುಖ ಒಟ್ಟು ಭುಜದ ಬದಲಿ ಶಸ್ತ್ರಚಿಕಿತ್ಸೆಯನ್ನು ನಡೆಸಲಾಯಿತು. ಭುಜದ ಚಲನೆ ಮತ್ತು ಕಾರ್ಯದಲ್ಲಿ ಗಮನಾರ್ಹ ಸುಧಾರಣೆಯೊಂದಿಗೆ ಶಸ್ತ್ರಚಿಕಿತ್ಸೆಯ ನಂತರದ ಒಂದು ದಿನದೊಳಗೆ ರೋಗಿಯನ್ನು ಬಿಡುಗಡೆ ಮಾಡಲಾಯಿತು. ರೋಗಿಯಾದ ಶ್ರೀಮತಿ ಬಸಂತಿ, ನಿವೃತ್ತ ಶಾಲಾ ಶಿಕ್ಷಕರು ಮತ್ತು ಬೆಂಗಳೂರು ನಿವಾಸಿ ಆದ ಇವರು, ನಿರಂತರ ಭುಜದ ನೋವಿನಿಂದ ಬಳಲುತ್ತಿದ್ದರು. ಈ ನೋವು ಹೆಚ್ಚುತ್ತಲೇ ಹೋಯಿತು. ದೈನಂದಿಕ ಚಟುವಟಿಕಗಳಾದ, ಕೂದಲನ್ನು ಬಾಚಿಕೊಳ್ಳುವುದು, ಅಡುಗೆ ಮಾಡುವುದು ಮತ್ತು ಒಂದು ಕಪ್ ಚಹಾವನ್ನು ಎತ್ತಲು ಸಹ ಆಗದ ಸ್ಥಿತಿಗೆ ತಲುಪಿದರು. ನಗರದಾದ್ಯಂತ ಹಲವಾರು ಆಸ್ಪತ್ರೆಗಳಿಗೆ ಭೇಟಿ ನೀಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಅವರ ನಿರಂತರ ನೋವು ನಿದ್ರಿಸಲಿ ಸಹ ಆಗದ ಸ್ಥಿತಿ…

Read More

ಬೆಂಗಳೂರು: ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ (ಎಎಂ/ಎನ್ಎಸ್ ಇಂಡಿಯಾ) ಇಂದು ತನ್ನ ಪ್ರೀಮಿಯಂ ಬಣ್ಣ-ಲೇಪಿತ ಉಕ್ಕಿನ ಪೋರ್ಟ್‌ಫೋಲಿಯೊ ಆಪ್ಟಿಗಾಲ್® ನಲ್ಲಿ ಎರಡು ವಿಶ್ವ ದರ್ಜೆಯ ಉನ್ನತ-ಕಾರ್ಯಕ್ಷಮತೆಯ ಉತ್ಪನ್ನಗಳನ್ನು – ಆಪ್ಟಿಗಾಲ್® ಪ್ರೈಂ ಮತ್ತು ಆಪ್ಟಿಗಾಲ್®ಪಿನಾಕಲ್ – ಗಳನ್ನು ಬಿಡುಗಡೆ ಮಾಡಿದೆ. ಈ ಮೂಲಕ ಎಎಂ/ಎನ್ಎಸ್ ಇಂಡಿಯಾ, ಭಾರತದಲ್ಲಿ ಬಣ್ಣ-ಲೇಪಿತ ಉಕ್ಕಿನ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಹೆಚ್ಚಿಸಿಕೊಂಡಿದೆ. ಈ ಕುರಿತು ಮಾತನಾಡಿದ, ಆರ್ಸೆಲರ್‌ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ (ಎಎಂ/ಎನ್ಎಸ್ ಇಂಡಿಯಾ) ದ ಮಾರಾಟ ಮತ್ತು ಮಾರುಕಟ್ಟೆ ವಿಭಾಗದ ನಿರ್ದೇಶಕ ರಂಜನ್ ಧರ್, ಮೊದಲ ಬಾರಿಗೆ ಯುರೋಪಿಯನ್ ಸ್ಟ್ಯಾಂಡ್ ಇನ್ನೂ ಉತ್ತಮವಾದ ತುಕ್ಕು-ನಿರೋಧಕ ಉಕ್ಕನ್ನು ಅತ್ಯಾಧುನಿಕ ವಿಮಾನ ನಿಲ್ದಾಣಗಳು, ರೈಲ್ವೆ ನಿಲ್ದಾಣ, ಹೆದ್ದಾರಿ, ದೊಡ್ಡ ಕಟ್ಟಡ ಯೋಜನೆಗಳು ಇತ್ಯಾದಿಗಳಂತಹ ದೊಡ್ಡ ಉನ್ನತ-ಮಟ್ಟದ ಮೂಲಸೌಕರ್ಯ ಮತ್ತು ನಿರ್ಮಾಣ ಯೋಜನೆಗಳಲ್ಲಿ ಬಳಸಲು ಪರಿಚಯಿಸುತ್ತಿದೆ. ಭಾರತದಲ್ಲಿ ಈ ಹಿಂದೆ ಲಭ್ಯವಿರದಿದ್ದ ಉನ್ನತ-ಗುಣಮಟ್ಟದ ಸಿ4 ವಿಶೇಷ ಉಕ್ಕಿನೊಂದಿಗೆ ನಾವು ಹೊಸ ಮಾರುಕಟ್ಟೆ ವಿಭಾಗವನ್ನು ಪ್ರವರ್ತಿಸುತ್ತಿದ್ದೇವೆ; ಅಲ್ಲಿ ನಾವು ಏಕೈಕ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ನೈರುತ್ಯ ಮುಂಗಾರು ಹಂಗಾಮು, ಈಶಾನ್ಯ ಮುಂಗಾರು ಹಂಗಾಮಿನಲ್ಲಿನ ಅತಿವೃಷ್ಟಿ, ಪ್ರವಾಹದಿಂದ ಹಾನಿಯಾಗುವ ಮನೆಗಳ ಪುನರ್ ನಿರ್ಮಾಣ, ದುರಸ್ಥಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದ್ದು, ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಹಾನಿಗಳಿಗೆ SDRF | NDRF ರಡಿ ನೀಡಬಹುದಾದ ಪರಿಹಾರಗಳ ಕುರಿತು ಭಾರತ ಸರ್ಕಾರದ ಗ್ರಹ ಮಂತ್ರಾಲಯವು ಮೇಲೆ ಓದಲಾದ (1) ರಂತೆ ಹೊರಡಿಸಿರುವ SDRF / NDRF Items and Norms of Assistance ರ ಮಾರ್ಗಸೂಚಿಗಳಲ್ಲಿ ನಿಗದಿಪಡಿಸಿರುವ ಪರಿಹಾರ ಮೊತ್ತದ ಜೊತೆಗೆ, 2024-25 ನೇ ಸಾಲಿನ ನೈಋತ್ಯ ಮುಂಗಾರು ಹಂಗಾಮಿನಲ್ಲಿ (01.06.2025 ರಿಂದ 30.09.2025) ಮತ್ತು ಈಶಾನ್ಯ ಮುಂಗಾರು ಹಂಗಾಮಿನಲ್ಲಿ (01.10.2025 ರಿಂದ 31.12.2025) ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪುವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ…

Read More

ಬೆಂಗಳೂರು: ಕನ್ನಡಕ್ಕೆ ಅವಮಾನ ಮಾಡಿರುವಂತ ನಟ ಕಮಲ್ ಹಾಸನ್ ಕ್ಷಮೆಯಾಚಿಸಬೇಕು. ಅವರು ಕ್ಷಮೆ ಯಾಚಿಸದೇ ಅವರ ಥಗ್ ಲೈಫ್ ಸಿನಿಮಾ ಕರ್ನಾಟಕದಲ್ಲಿ ರಿಲೀಸ್ ಮಾಡಿದ್ರೇ ಸಿನಿಮಾ ಥಿಯೇಟರ್ ಗೆ ಬೆಂಕಿ ಹಚ್ಚುವುದಾಗಿ ಕರವೇ ರಾಜ್ಯಾಧ್ಯಕ್ಷ ನಾರಾಯಾಣಗೌಡ ಎಚ್ಚರಿಕೆ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ಸಿನಿಮಾ ರಿಲೀಸ್ ಆಗಲ್ಲ. ರಾಜ್ಯದಲ್ಲಿ ಅವರ ಸಿನಿಮಾ ರಿಲೀಸ್ ಮಾಡುವುದಕ್ಕೆ ಬಿಡಲ್ಲ. ಒಂದು ವೇಳೆ ಕ್ಷಮೆ ಕೇಳದೇ ಸಿನಿಮಾ ರಿಲೀಸ್ ಮಾಡಿದ್ರೆ ಥಿಯೇಟರ್ ಗೆ ಬೆಂಕಿ ಹಾಕುವುದಾಗಿ ಎಚ್ಚರಿಕೆ ನೀಡಿದರು. ಅಂದಹಾಗೇ ನಟ ಕಮಲ್ ಹಾಸನ್ ಕನ್ನಡ ತಮಿಳಿನಿಂದ ಹುಟ್ಟಿರೋದು ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ವಿರುದ್ಧ ಕನ್ನಡಿಗರು ಆಕ್ರೋಶ ಹೊರಹಾಕಿದ್ದಾರೆ. ಈಗಾಗಲೇ ಫಿಲ್ಮಂ ಚೇಂಬರ್ ಕ್ಷಮೆ ಯಾಚನೆಗೆ ಡೆಡ್ ಲೈನ್ ನೀಡಿದೆ. ಇದರ ನಡುವೆ ನಾನು ಕ್ಷಮೆ ಯಾಚಿಸೋದಿಲ್ಲ ಎಂಬುದಾಗಿ ನಟ ಕಮಲ್ ಹಾಸನ್ ಉದ್ಧಟ ತನವನ್ನು ಮುಂದುವರೆಸಿದ್ದಾರೆ. https://kannadanewsnow.com/kannada/breaking-another-tragedy-due-to-rain-in-mangalore-a-country-boat-capsized-in-the-sea-two-drowned/ https://kannadanewsnow.com/kannada/breaking-illegal-ipl-ticket-selling-racket-case-by-police-two-constables-suspended/

Read More

ಬೆಂಗಳೂರು : ಹದಿನಾಲ್ಕು ಸಾವಿರ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಎಚ್ಎಂಟಿ ಅರಣ್ಯಭೂಮಿಯ ಡಿನೋಟಿಫಿಕೇಷನ್ ಅನುಮತಿ ಕೋರಿ ಸುಪ್ರೀಂಕೋರ್ಟ್ ಗೆ ಐಎ ಹಾಕಿರುವ ಪ್ರಕರಣದಲ್ಲಿ ನಿವೃತ್ತ ಐ.ಎ.ಎಸ್, ಐಎಫ್.ಎಸ್ ಮತ್ತು ಇಬ್ಬರು ಹಾಲಿ ಐ.ಎಫ್.ಎಸ್. ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಎಂ.ಟಿ. ವಶದಲ್ಲಿರುವ ಭೂಮಿ ಅರಣ್ಯೇತರ ಉದ್ದೇಶಕ್ಕೆ ಪರಿವರ್ತನೆ ಆಗಿಲ್ಲ. ಹೀಗಾಗಿ ಸುಪ್ರೀಂಕೋರ್ಟ್ ನೀಡಿರುವ ಹಲವು ತೀರ್ಪು ಮತ್ತು ಅರಣ್ಯ ಸಂರಕ್ಷಣಾ ಕಾಯಿದೆ 1980ರ ಪ್ರಕಾರ ಇಂದಿಗೂ ಇದು ಅರಣ್ಯವೇ ಆಗಿರುತ್ತದೆ. ಆದಾಗ್ಯೂ ಈ ಭೂಮಿ ಪರಭಾರೆ ಆಗಿದೆ, ರಿಯಲ್ ಎಸ್ಟೇಟ್ ಸಂಸ್ಥೆಗಳು ನೂರಾರು ಫ್ಲಾಟ್ ಕಟ್ಟಿದ್ದಾರೆ. ಧಾರಾವಾಹಿ, ಚಲನಚಿತ್ರಗಳ ಚಿತ್ರೀಕರಣ ನಡೆಯುತ್ತಿದೆ. ವಾಣಿಜ್ಯ ಉದ್ದೇಶಕ್ಕೆ ಭೂಮಿ ಬಳಕೆ ಆಗುತ್ತಿದೆ. ಇದಕ್ಕೆ ಹೇಗೆ ಅವಕಾಶ ನೀಡಲಾಗಿದೆ ಎಂಬುದೇ ಪ್ರಶ್ನಾರ್ಥಕವಾಗಿದೆ ಎಂದರು. ಸಚಿವ ಸಂಪುಟದ ಅನುಮತಿ ಇಲ್ಲದೆ,…

Read More

ಬೆಂಗಳೂರು: ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ 60 ವರ್ಷ ಪೂರೈಸಿದ ಮತ್ತು ಮರಣ ಹೊಂದಿದ ಅತಿಥಿ ಉಪನ್ಯಾಸಕರಿಗೆ 5 ಲಕ್ಷ ಇಡುಗಂಟು ನೀಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸುವ ಮೂಲಕ ನುಡಿದಂತೆ ನಡೆದಿದೆ. ಇಡುಗಂಟು ಯೋಜನೆಯು 01-01- 2024 ರಿಂದ ಜಾರಿಗೆ ಬರಲಿದ್ದು ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಅಥವಾ ಮರಣ ಹೊಂದಿರುವ ಎಲ್ಲಾ ಅತಿಥಿ ಉಪನ್ಯಾಸಕರಿಗೂ ಇಡು ಗಂಟು ಯೋಜನೆ ಅನ್ವಯಿಸಲಿದೆ. ಯೋಜನೆ ಅನುಷ್ಠಾನಕ್ಕೆ ಬಂದ ಹಿಂದಿನ ಐದು ವರ್ಷಗಳಲ್ಲಿ ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ 60 ವರ್ಷ ಪೂರ್ಣಗೊಳಿಸಿರುವ ಅತಿಥಿ ಉಪನ್ಯಾಸಕರಿಗೂ ಈ ಯೋಜನೆ ಗೆ ಒಳಪಡಲಿದ್ದಾರೆ .ಈ ಯೋಜನೆಗೆ ಒಟ್ಟಾರೆ 44.15 ಕೋಟಿ ರೂಪಾಯಿಗಳನ್ನು ಸರ್ಕಾರ ಕಾಯ್ದಿರಿಸಿ ಆದೇಶ ಹೊರಡಿಸಿದೆ. https://kannadanewsnow.com/kannada/breaking-illegal-ipl-ticket-selling-racket-case-by-police-two-constables-suspended/ https://kannadanewsnow.com/kannada/breaking-another-tragedy-due-to-rain-in-mangalore-a-country-boat-capsized-in-the-sea-two-drowned/

Read More

ಬೆಂಗಳೂರು: ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದಂತ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ನಗರದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಹೀಗೆ ಪ್ರತಿಭಟಿಸಿದ್ದವರು ಪ್ರತಿಭಟನೆ ಅನುಮತಿ ಪಡೆದಿದ್ದ ಕಾರಣ, ಅಂತವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಬೆಂಗಳೂರಿನ ಬಸವೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ನಮ್ಮ ಕರುನಾಡ ಯುವ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದರು. ಆದರೇ ಪ್ರತಿಭಟನೆ ನಡೆಸೋದಕ್ಕೆ ಪೊಲೀಸರಿಂದ ಅನುಮತಿ ಪಡೆಯಬೇಕಿದ್ದಂತ ಪ್ರತಿಭಟನಾಕಾರರು ಆ ಕೆಲಸವನ್ನೇ ಮಾಡಿರಲಿಲ್ಲ. ಈ ಹಿನ್ನಲೆಯಲ್ಲಿ ನಟ ಕಮಲ್ ಹಾಸನ್ ಕನ್ನಡದ ಬಗ್ಗೆ ವಿವಾದಾತ್ಮಕವಾಗಿ ನೀಡಿದಂತ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದಂತ ನಮ್ಮ ಕರುನಾಡು ಯುವ ಸೇನೆಯ ಕಾರ್ಯಕರ್ತರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. https://kannadanewsnow.com/kannada/breaking-illegal-ipl-ticket-selling-racket-case-by-police-two-constables-suspended/ https://kannadanewsnow.com/kannada/breaking-another-tragedy-due-to-rain-in-mangalore-a-country-boat-capsized-in-the-sea-two-drowned/

Read More

ಬೆಂಗಳೂರು: ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು ಬೀಳುತ್ತಿದೆ. ಇದರಿಂದ ನಷ್ಟವಾಗುತ್ತಿರುವುದು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯಕ್ಕೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧ ಆವರಣ ಹಾಗೂ ಅರಮನೆ ಮೈದಾನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. “ನಾವು ಎಲ್ಲಾ ಸಮಾಜ ರಕ್ಷಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಪಕ್ಷದ ವತಿಯಿಂದ ಒಂದು ತಂಡ ಕಳುಹಿಸಿ ವರದಿ ನೀಡಲು ಹೇಳಿದ್ದೇವೆ. ಅಧಿಕಾರಿಗಳು ನೀಡುವ ವರದಿ ಬೇರೆ, ಸಾರ್ವಜನಿಕರ ಜತೆ ಚರ್ಚೆ ಮಾಡಿ ವರದಿ ನೀಡಲು ನಮ್ಮ ಪಕ್ಷದವರಿಗೆ ತಿಳಿಸಿದ್ದೇನೆ. ಕರಾವಳಿ ಭಾಗದಲ್ಲಿ ಶಾಂತಿ ನೆಲೆಸಬೇಕು. ಇದು ಒಂದು ಸಾವು, ಎರಡು ಸಾವಿನ ವಿಚಾರ ಮಾತ್ರವಲ್ಲ. ಇದು ಇಡೀ ಕರಾವಳಿ ಭಾಗಕ್ಕೆ ಬಿದ್ದಿರುವ ಕೊಡಲಿಪೆಟ್ಟು. ಜನರು ಆಂತಕಕ್ಕೆ ಒಳಗಾಗುವುದು, ಬಂಡವಾಳ ಹೂಡಿಕೆದಾರರು ಅಲ್ಲಿ ಹೂಡಿಕೆ ಮಾಡಲು ಹಿಂಜರಿಯುತ್ತಿರುವುದನ್ನು ಎಲ್ಲರೂ ಅರಿತುಕೊಳ್ಳಬೇಕು. ಈ ಪರಿಸ್ಥಿತಿಯನ್ನು ಅರಿತುಕೊಳ್ಳಬೇಕು ಎಂದು ಬಿಜೆಪಿ ಸ್ನೇಹಿತರು ಹಾಗೂ ಬೇರೆ ಬೇರೆ ಸಂಘಟನೆಗಳಿಗೆ ಮನವಿ ಮಾಡುತ್ತೇನೆ”…

Read More

ನವದೆಹಲಿ: ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿ ಭೇಟಿ ನೀಡಿದ್ದು ನೆರೆ ಮತ್ತು ಮಳೆ ಅನಾಹುತ ವೀಕ್ಷಿಸಲಿಕ್ಕಾ ಅಥವಾ ರಾಜಕಾಲುವೆ ಒತ್ತುವರಿದಾರನ್ನು ರಕ್ಷಣೆ ಮಾಡಲಿಕ್ಕಾ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು; ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ಕೊಟ್ಟು ಮಳೆ, ನೆರೆ ಪರಿಸ್ಥಿತಿ ವೀಕ್ಷಣೆ ಮಾಡಿರುವುದೇನೋ ಸರಿ. ಆದರೆ, ಅವರ ಭೇಟಿ ಪ್ರವಾಹ ವೀಕ್ಷಣೆಗೋ ಅಥವಾ ರಾಜಕಾಲುವೆ ರಕ್ಕಸರ ರಕ್ಷಣೆಗೋ..? ಈ ಬಗ್ಗೆ ಬೆಂಗಳೂರು ಮಹಾಜನತೆಗೆ ಬೆಂಗಳೂರು ಉಸ್ತುವಾರಿ ಸಚಿವರು ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ. ಡಿಸಿಎಂ ಅವರು ಪಾದಸ್ಪರ್ಶ ಮಾಡಿದ್ದ ರಾಜಕಾಲುವೆ ಪುನೀತವಾಗಿರಬೇಕು!! ಪಾಪ.. ಅದೇ ರಾಜಕಾಲುವೆ ಮೇಲೆ ಬೃಹದಾಕಾರವಾಗಿ ಎದ್ದು ನಿಂತಿರುವ ‘ಭಾರೀ ಆಸಾಮಿ’ಯೊಬ್ಬರ ಕಟ್ಟಡ ಅವರ ಕಣ್ಣಿಗೆ ಕಾಣಲಿಲ್ಲವೆ? ರಾಜಾರೋಷವಾಗಿ ರಾಜಕಾಲುವೆಯನ್ನು ಮುಕ್ಕಿ ತಿಂದಿರುವ ಆಸಾಮಿಯ ಬಗ್ಗೆ ಅವರು ಚಕಾರವನ್ನೇ ಎತ್ತಲಿಲ್ಲ!! ಕೊನೆಪಕ್ಷ ಅವರ…

Read More

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ AC, DC, ತಹಶೀಲ್ದಾರ್ ಕೋರ್ಟ್ ಗಳಲ್ಲಿ ಬಾಕಿ ಕೇಸುಗಳು ಶೀರ್ಘ ವಿಲೇವಾರಿ ಆಗುತ್ತಿರುವುದಕ್ಕೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿಗಳು ಬೆಂಗಳೂರು ಗ್ರಾಮಾಂತರ ಮತ್ತು ಎರಡು ಜಿಲ್ಲೆಗಳಲ್ಲಿ ಮಾತ್ರ AC ಮತ್ತು DC ಕೋರ್ಟ್ ಗಳಲ್ಲಿ ಐದು ವರ್ಷಕ್ಕೂ ಹಳೆಯದಾದ ಪ್ರಕರಣಗಳು ಬಾಕಿ ಇರುವುದಕ್ಕೆ ಅಸಮಾಧಾನಗೊಂಡ ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಂಡರು. Justice delayed is justice denied ಎನ್ನುವ ಮಾತನ್ನು ನೆನಪಿಡಿ. ಇದನ್ನು ಸಹಿಸಲು ಸಾಧ್ಯವಿಲ್ಲ. ಉಳಿದ ಜಿಲ್ಲೆಗಳಲ್ಲಿ ಪ್ರಗತಿ ಕಾಣುವಾಗ ಕೆಲವು ಮಾತ್ರ ಆಗುತ್ತಿಲ್ಲ‌ ಎಂದರೆ ಸಹಿಸಲು ಸಾಧ್ಯವಿಲ್ಲ ಎಂದರು. ಈ ಬಗ್ಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚಿಸಿದರು. ಅಗತ್ಯವಿದ್ದರೆ ಹೇಳಿ ಹಚ್ಚುವರಿ AC, DC ಗಳನ್ನು ಕೊಡಬಹುದು ಎಂದರು.

Read More