Author: kannadanewsnow09

ನವದೆಹಲಿ : ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ, ಪ್ರಸ್ತುತ ಟೋಲ್ ಸಂಗ್ರಹ ವ್ಯವಸ್ಥೆಯು ಒಂದು ವರ್ಷದೊಳಗೆ ಕೊನೆಗೊಳ್ಳಲಿದೆ ಮತ್ತು ಎಲೆಕ್ಟ್ರಾನಿಕ್ ವ್ಯವಸ್ಥೆಯು ಜಾರಿಗೆ ಬರಲಿದೆ, ಇದು ಹೆದ್ದಾರಿ ಬಳಕೆದಾರರಿಗೆ ಸುಗಮ ಅನುಭವವನ್ನು ಖಚಿತಪಡಿಸುತ್ತದೆ. ಹೊಸ ವ್ಯವಸ್ಥೆಯನ್ನು 10 ಸ್ಥಳಗಳಲ್ಲಿ ಜಾರಿಗೆ ತರಲಾಗಿದ್ದು, ಒಂದು ವರ್ಷದೊಳಗೆ ದೇಶಾದ್ಯಂತ ವಿಸ್ತರಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಹೇಳಿದರು. ಈ ಟೋಲ್ ವ್ಯವಸ್ಥೆ ಕೊನೆಗೊಳ್ಳುತ್ತದೆ. ಟೋಲ್ ಹೆಸರಿನಲ್ಲಿ ನಿಮ್ಮನ್ನು ತಡೆಯಲು ಯಾರೂ ಇರುವುದಿಲ್ಲ. ಒಂದು ವರ್ಷದೊಳಗೆ, ದೇಶಾದ್ಯಂತ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹವನ್ನು ಜಾರಿಗೆ ತರಲಾಗುವುದು ಎಂದು ಅವರು ಹೇಳಿದರು. ದೇಶಾದ್ಯಂತ ಪ್ರಸ್ತುತ 10 ಲಕ್ಷ ಕೋಟಿ ರೂ. ಮೌಲ್ಯದ 4,500 ಹೆದ್ದಾರಿ ಯೋಜನೆಗಳು ನಡೆಯುತ್ತಿವೆ ಎಂದು ಗಡ್ಕರಿ ಹೇಳಿದರು. ಇತ್ತೀಚೆಗೆ ಬಿಡುಗಡೆಯಾದ ಅಧಿಕೃತ ಹೇಳಿಕೆಯ ಪ್ರಕಾರ, ಭಾರತದ ರಾಷ್ಟ್ರೀಯ ಪಾವತಿ ನಿಗಮ (NPCI) ಭಾರತದ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವನ್ನು ಸುಗಮಗೊಳಿಸಲು ಎಲೆಕ್ಟ್ರಾನಿಕ್ ಟೋಲ್ ಪಾವತಿಗಳಿಗಾಗಿ ಏಕೀಕೃತ,…

Read More

ಬೆಂಗಳೂರು: ನ್ಯಾಯಮೂರ್ತಿಗಳು ಶೇ 63 ಭ್ರಷ್ಟಾಚಾರದ ವಿಚಾರ ಪ್ರಕಟಿಸಿ, ರಾಜ್ಯ ಸರಕಾರದ ಮುಖಕ್ಕೆ ಮಂಗಳಾರತಿ ಎತ್ತಿದ್ದು, ನಿಮಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ವಿರುದ್ಧ ಶೇ 40 ಕಮಿಷನ್ ಎಂದು ವಿಶೇಷ ತನಿಖಾ ದಳ (ಎಸ್‍ಐಟಿ) ಮಾಡಿದ್ದೀರಲ್ಲವೇ? ಈಗ ಶೇ 63 ಭ್ರಷ್ಟಾಚಾರ ಸಂಬಂಧ ಯಾವ ಎಸ್‍ಐಟಿ ಮಾಡುತ್ತೀರಿ ಎಂದು ಪ್ರಶ್ನಿಸಿದರು. ನಿಮಗೆ ಧೈರ್ಯ ಇದ್ದರೆ ಸಿಬಿಐ ತನಿಖೆ ಮಾಡಿ ಎಂದು ಅವರು ಒತ್ತಾಯಿಸಿದರು. ಯಾವ ಯಾವ ಇಲಾಖೆಯಲ್ಲಿ ಎಷ್ಟೆಷ್ಟು ಭ್ರಷ್ಟಾಚಾರ ಇದೆ ಎಂಬುದು ಜಗಜ್ಜಾಹೀರಾಗಲಿ ಎಂದು ನುಡಿದರು. ಬೋವಿ ನಿಗಮದ ಅಧ್ಯಕ್ಷರೇ ಎಕರೆಗೆ 25 ಲಕ್ಷ ಕಮಿಷನ್ ಪಡೆಯುತ್ತಿದ್ದರು. ವಾಲ್ಮೀಕಿ ನಿಗಮದಡಿ 187 ಕೋಟಿ ಸುಮಾರು 700 ಖಾತೆಗೆ ವರ್ಗಾಯಿಸಲಾಗಿತ್ತು. ಅದನ್ನು ಬಳ್ಳಾರಿ ಚುನಾವಣೆಗೆ ಬಳಸಿದ್ದು, ತನಿಖೆ ನಡೆಯುತ್ತಿದೆ.…

Read More

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ) ವತಿಯಿಂದ ಇತ್ತೀಚೆಗೆ ನಮ್ಮನ್ನು ಅಗಲಿದ ಹಿರಿಯ ಪತ್ರಕರ್ತರಾದ ಟಿ.ಜೆ.ಎಸ್.ಜಾರ್ಜ್ ಮತ್ತು ಅ.ಚ.ಶಿವಣ್ಣ ಅವರುಗಳಿಗೆ ಶ್ರದ್ಧಾಂಜಲಿ ಸಭೆಯನ್ನು ಡಿ.5 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಕೆ.ಜಿ.ರಸ್ತೆ, ಕಂದಾಯ ಭವನದಲ್ಲಿರುವ ಕೆಯುಡಬ್ಲೂಜೆ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಕನ್ನಡ ಪ್ರಭ ಸಂಪಾದಕರಾದ ರವಿ ಹೆಗಡೆ ಮತ್ತು ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕರಾದ ಹುಣಸವಾಡಿ ರಾಜನ್ ಅವರುಗಳು ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡುವರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಘದ ರಾಜ್ಯ ಪದಾಧಿಕಾರಿಗಳು, ವೃತ್ತಿ ಬಾಂಧವರು ಸಭೆಯಲ್ಲಿ ಭಾಗವಹಿಸಲಿದ್ದಾರೆ. https://kannadanewsnow.com/kannada/womens-workers-day-to-be-declared-on-september-13-cm-siddaramaiah-promises/ https://kannadanewsnow.com/kannada/good-news-for-the-states-maize-farmers-government-allows-poultry-feed-producers-to-purchase/

Read More

ಬೆಂಗಳೂರು : ಸರ್ಕಾರದ ಆಡಳಿತ ಯಂತ್ರದಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಮಹಿಳಾ ನೌಕರರನ್ನು ಅಭಿನಂದಿಸಿ, ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆಯಾಗಿ ಘೋಷಣೆ ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದರು. ಅವರು ಇಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಬೆಂಗಳೂರು, ವತಿಯಿಂದ ಮಹಿಳಾ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಹಿಳಾ ನೌಕರರಿಗೆ ಋತುಚಕ್ರ ರಜೆಯನ್ನು ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆಯನ್ನು ಮಂಜೂರು ಮಾಡಲು ಸರ್ಕಾರ ನಿರ್ಧರಿಸಿದೆ. ಸಂಘದ ಕಚೇರಿಯ ಕಾರ್ಯಚಟುವಟಿಕೆಗಳಿಗೆ ಬಾಲಭವನದಲ್ಲಿ ಸ್ಥಳಾವಕಾಶ ನೀಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರೊಂದಿಗೆ ಚರ್ಚಿಸಲಾಗಿದೆ. ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆಯಾಗಿ ಘೋಷಣೆ ಮಾಡಲಾಗುವುದು ಎಂದರು. ಲಿಂಗತಾರತಮ್ಯ ಹೋಗಲಾಡಿಸಲು ಸರ್ಕಾರ ಬದ್ಧ ಸರ್ಕಾರದ ಆಡಳಿತ ಯಂತ್ರದಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಮಹಿಳಾ ನೌಕರರು ಪುರುಷರಿಗೆ ಸರಿಸಮನಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜ್ಯದಲ್ಲಿ ಲಿಂಗತಾರತಮ್ಯ ಹೋಗಲಾಡಿಸಲು ಸರ್ಕಾರ ಬದ್ಧವಾಗಿದೆ.…

Read More

ಬೆಂಗಳೂರು: ರಾಜ್ಯದ ಮೆಕ್ಕೆ ಜೋಳ ಬೆಳೆಗಾರ ರೈತರಿಂದ ಕುಕ್ಕುಟ ಆಹಾರ ಉತ್ಪಾದಕರು ಖರೀದಿಸಲು ಸರ್ಕಾರ ಅನುಮತಿಸಿ ಆದೇಶಿಸಿದೆ. ಈ ಮೂಲಕ ರಾಜ್ಯದ ಮಕ್ಕೆ ಜೋಳ ಬೆಳೆಗಾರರಿಗೆ ಗುಡ್ ನ್ಯೂಸ್ ಅನ್ನು ನೀಡಿದೆ. ಈ ಕುರಿತಂತೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕುಕ್ಕುಟ ಆಹಾರ ಉತ್ಪಾದಕರು ಎಂಎಸ್ಪಿ ಗುಣಮಟ್ಟದ ಪ್ರಕಾರ ನಿಗಧಿಪಡಿಸಿರುವ ಬೆಲೆಯಲ್ಲಿ ಮೆಕ್ಕೆ ಜೋಳವನ್ನು ನೇರವಾಗಿ ರೈತರಿಂದ ಖರೀದಿಸಲು ಸರ್ಕಾರ ಅನುಮತಿ ನೀಡಿ ಆದೇಶಿಸಿದ್ದಾರೆ. ಅಂದಹಾಗೇ ದಿನಾಂಕ 01-12-2025ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ಕುಕ್ಕುಟ ಮತ್ತು ಪಶು ಆಹಾರ ಉತ್ಪಾದಕರ ಸಭೆ ನಡೆಸಲಾಯಿತು. ಈ ವೇಳೆಯಲ್ಲಿ ರೈತರ ಹಿತದೃಷ್ಟಿಯಿಂದ ರೈತರಿಂದ ನೇರವಾಗಿ ಅಂದಾಜು 5 ಲಕ್ಷ ಟನ್ ಮೆಕ್ಕೆ ಜೋಳವನ್ನು ಖರೀದಿಸಲು ಉದ್ಯಮಿದಾರರನ್ನು ಕೋರಿದ್ದರು. ಈ ವೇಳೆ ಅಗತ್ಯಕ್ಕೆ ತಕ್ಕಂತೆ ಮೆಕ್ಕೆಜೋಳವನ್ನು ನೇರವಾಗಿ ರೈತರಿಂದ ಖರೀದಿಸಲು ಸಹಮತ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಮೆಕ್ಕೆ ಜೋಳವನ್ನು ಎಂ ಎಸ್…

Read More

ಬೆಂಗಳೂರು: ರಾಜ್ಯದಲ್ಲಿ ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆ ಹಾಗೂ ವಿನ್ಯಾಸ ಕ್ಷೇತ್ರದ ವಿಸ್ತರಣೆಯನ್ನು ಗುರಿಯಾಗಿ ಇಟ್ಟುಕೊಂಡು 150 ಬಿಲಿಯನ್ ಡಾಲರ್ ಹೂಡಿಕೆ ಸಾಧ್ಯವಾಗುವಂತೆ ವಿಷನ್ ಡಾಕ್ಯುಮೆಂಟ್ ತಯಾರಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಗುರುವಾರ ವಿಧಾನಸೌಧದ ಕಚೇರಿಯಲ್ಲಿ ತಮ್ಮನ್ನು ಭೇಟಿಯಾದ ಇಂಡಿಯನ್ ಸೆಲ್ಯುಲರ್ ಮತ್ತು ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್ (ಐಸಿಇಎ) ಅಧ್ಯಕ್ಷ ಪಂಕಜ್ ಮಹೀಂದ್ರೂ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜತೆ ವಿಸ್ತೃತ ಮಾತುಕತೆ ನಡೆಸಿದರು. ಬಳಿಕ ಮಾತನಾಡಿದ ಅವರು, ಕೇಂದ್ರ ಸರಕಾರದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳ ತಯಾರಿಕೆ ಯೋಜನೆಯನ್ನು ಘೋಷಿಸಿದೆ. ಇದಕ್ಕೆ ಸಮಾನಾಂತರವಾಗಿ ರಾಜ್ಯ ಸರಕಾರವು ಕೂಡ ಒಂದು ಯೋಜನೆಯನ್ನು ರೂಪಿಸಲು ಚಿಂತಿಸುತ್ತಿದ್ದು, ಇದರ ಕಾರ್ಯಸಾಧ್ಯತೆಯನ್ನು ಕುರಿತು ಅಧ್ಯಯನ ಮಾಡುತ್ತಿದೆ. ಇದು ಕರಡು ಹಂತದಲ್ಲಿದ್ದು, ಇದಕ್ಕೆ ಐಸಿಇಎ ನೀಡುವ ಸಲಹೆಗಳನ್ನು ಸ್ವಾಗತಿಸಲಾಗುವುದು’ ಎಂದಿದ್ದಾರೆ. ಮೊಬೈಲ್ ಫೋನ್ ಬಿಡಿಭಾಗಗಳು ಮಾತ್ರವಲ್ಲದೆ…

Read More

ಬೆಂಗಳೂರು: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬೆಂಗಳೂರು ನಗರ ಜಿಲ್ಲಾ ಶಾಖೆಯಲ್ಲಿ ಗೌರವಧನ ಆಧಾರದ ಮೇಲೆ ಕಾರ್ಯನಿರ್ವಹಿಸಲು ಟೈಪಿಸ್ಟ್ ಕಾಮ್ ಸಂಯೋಜಕರು ಹುದ್ದೆ ಹಾಗೂ ದೀರ್ಘಾವಧಿ ಇಂಟರ್ನ್ ಶಿಪ್ ಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ಸ್ವವಿವರಗಳೊಂದಿಗೆ ಗೌರವ ಕಾರ್ಯದರ್ಶಿ, IRCS ಬೆಂಗಳೂರು ನಗರ ಜಿಲ್ಲೆ ಅಥವಾ ಇ-ಮೇಲ್ cdmvm14@gmail.com ಇಲ್ಲಿಗೆ ಪತ್ರಿಕಾ ಪ್ರಕಟಣೆಗೊಂಡ 07 ದಿನಗಳ ಒಳಗೆ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-2214243, 2211292 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಶಾಖೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) 5 ಮತ್ತು 8ನೇ ಸೆಮಿಸ್ಟರ್ ಬಿ.ಇ ಮತ್ತು ಬಿ.ಟೆಕ್ ವಿದ್ಯಾರ್ಥಿಗಳಿಗೆ ಪರೀಕ್ಷಾ ಅರ್ಜಿಗಳನ್ನು ಭರ್ತಿ ಮಾಡಲು ನಿಗದಿ ಪಡಿಸಿದ್ದ ದಿನಾಂಕವನ್ನು ವಿಸ್ತರಿಸಿದೆ. ಕಾಲೇಜುಗಳು ಪರೀಕ್ಷಾ ಅರ್ಜಿಗಳನ್ನು ಭರ್ತಿ ಮಾಡಲು ಡಿಸೆಂಬರ್ 6 ಮತ್ತು ದಂಡ ಶುಲ್ಕ 500 ರೂ.ಗಳೊಂದಿಗೆ ಭರ್ತಿ ಮಾಡಲು ಡಿಸೆಂಬರ್ 8 ಕೊನೆಯ ದಿನವಾಗಿದೆ. ಪ್ರವೇಶ ಪತ್ರಗಳು ಡಿಸೆಂಬರ್ 10 ರಂದು ಬಿಡುಗಡೆ ಮಾಡಲಿದೆ. ಹೆಚ್ಚಿನ ಮಾಹಿತಿಗೆ https://prexam.vtu.ac.in/ ಸಂಪರ್ಕಿಸಬಹುದಾಗಿದೆ ಎಂದು ವಿಟಿಯು ಕುಲಸಚಿವ(ಮೌಲ್ಯಮಾಪನ) ಡಾ.ಯು.ಜೆ.ಉಜ್ವಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೀಗಿದೆ ಪರಿಷ್ಕೃತ ವೇಳಾಪಟ್ಟಿ ಬಿ.ಇ. ಮತ್ತು ಬಿ.ಟೆಕ್ ಕೋರ್ಸ್ ಗಳ ಅಂತಿಮ ಪರೀಕ್ಷೆಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಡಿಸೆಂಬರ್‌ನಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಪರೀಕ್ಷೆಗಳನ್ನು 2026 ಜನವರಿಯಲ್ಲಿ ನಡೆಸಲು ನಿರ್ಧರಿಸಿದೆ. ವಿಷಯವಾರು ವೇಳಾಪಟ್ಟಿಯನ್ನು ವಿಟಿಯು ವೆಬ್‌ಸೈಟ್ https://vtu.ac.in/ ಮೂಲಕ ನೋಡಬಹುದಾಗಿದೆ ಎಂದು ವಿಟಿಯು ತಿಳಿಸಿದೆ. https://kannadanewsnow.com/kannada/breaking-today-at-4-pm-at-vidhana-soudha-state-cabinet-meeting-scheduled-under-the-leadership-of-cm-siddaramaiah/ https://kannadanewsnow.com/kannada/dharmasthala-case-even-though-bail-was-granted-mask-man-chinnayya-is-not-lucky-to-get-released/

Read More

ಶಿವಮೊಗ್ಗ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೂ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಬಿಡುಗಡೆ ಭಾಗ್ಯವಿಲ್ಲ. ಕಾರಣವೇನು ಅಂತ ಮುಂದೆ ಓದಿ. ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು. ಕೋರ್ಟ್ ಜಾಮೀನು ನೀಡಿ 9 ದಿನಗಳೇ ಕಳೆದರೂ ಶ್ಯೂರಿಟಿ ನೀಡಲು ಯಾರೂ ಮುಂದೆ ಬಾರದ ಕಾರಣ ಶಿವಮೊಗ್ಗ ಜಿಲ್ಲಾ ಕಾರಾಗೃಹದಲ್ಲೇ ಮಾಸ್ಕ್ ಮ್ಯಾನ್ ಚಿನ್ನಯ್ಯ ದಿನ ಕಳೆಯುವಂತೆ ಆಗಿದೆ. ಅಂದಹಾಗೇ ಮಂಗಳೂರು ಜಿಲ್ಲಾ ನ್ಯಾಯಾಲಯವು ಧರ್ಮಸ್ಥಳ ಬುರುಡೆ ಕೇಸಲ್ಲಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಜಾಮೀನು ವೇಳೆ 1 ಲಕ್ಷ ರೂಪಾಯಿ ಬಾಂಡ್, ಇಬ್ಬರ ಶ್ಯೂರಿಟಿಯೊಂದಿಗೆ 12 ಷರತ್ತುಗಳನ್ನು ವಿಧಿಸಿತ್ತು. ಈ ಹಿನ್ನಲೆಯಲ್ಲಿ ಶ್ಯೂರಿಟಿಗೆ ಯಾರೂ ಮುಂದೆ ಬಾರದ ಕಾರಣ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಜೈಲಿನಿಂದ ಬಿಡುಗಡೆ ಭಾಗ್ಯ ದೊರೆತಿಲ್ಲ.

Read More

ಬೆಂಗಳೂರು :“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ ಸಂಘವಾಗಿರಬೇಕು. ಇದು ನಾನು ನಿಮಗೆ ನೀಡುತ್ತಿರುವ ಸಲಹೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ನಡೆದ ಸರ್ಕಾರಿ ಮಹಿಳಾ ನೌಕರರ ಸಮ್ಮೇಳನ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ನಾನು ಬಂಗಾರಪ್ಪನವರ ಸರ್ಕಾರದಲ್ಲಿ ಸಚಿವನಾಗಿದ್ದಾಗಿನಿಂದ. ಅಂದರೆ 40 ವರ್ಷಗಳಿಂದ ಈ ಸಂಘವನ್ನು ಗಮನಿಸಿಕೊಂಡು ಬಂದಿದ್ದೇನೆ. ನಿಮ್ಮ ಒಗ್ಗಟ್ಟು ಬಿಡಬೇಡಿ. ಲಿಂಗಾಯತರ, ಹಿಂದುಳಿದ ವರ್ಗಗಳ, ಒಕ್ಕಲಿಗರ, ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಸಂಘ ಎಂದು ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ. ಈ ಆಲೋಚನೆಯನ್ನು ನಿಮ್ಮ ತಲೆಯಿಂದ ತೆಗೆದುಹಾಕಿ” ಎಂದು ಕಿವಿಮಾತು ಹೇಳಿದರು. ಮಹಿಳೆಯರು ಕರುಣೆಯ ಕಡಲು, ಮಮತೆಯ ಮುಗಿಲು “ಸಂಘಟನೆ ಬಹಳ ಮುಖ್ಯ. ಶಿಕ್ಷಣ…

Read More